Homeಕರ್ನಾಟಕಉತ್ತರ ಕನ್ನಡ| ವೈದ್ಯರ ನಿರ್ಲಕ್ಷ್ಯದಿಂದ ಹಾವು ಕಚ್ಚಿದ್ದ ಐದು ವರ್ಷದ ಬಾಲಕಿ ಸಾವು

ಉತ್ತರ ಕನ್ನಡ| ವೈದ್ಯರ ನಿರ್ಲಕ್ಷ್ಯದಿಂದ ಹಾವು ಕಚ್ಚಿದ್ದ ಐದು ವರ್ಷದ ಬಾಲಕಿ ಸಾವು

- Advertisement -
- Advertisement -

ಹೊಸ ವರ್ಷಕ್ಕೆ ಒಂದು ದಿನ ಮೊದಲು (2024 ಡಿಸೆಂಬರ್ 31) ಉತ್ತರ ಕನ್ನಡ ಜಿಲ್ಲೆಯಲ್ಲಿ ಐದು ವರ್ಷದ ಬಾಲಕಿಯೊಬ್ಬಳು ವೈದ್ಯಕೀಯ ನಿರ್ಲಕ್ಷ್ಯದಿಂದ ದುರಂತವಾಗಿ ಸಾವನ್ನಪ್ಪಿದ್ದಾಳೆ. ಮುಂಡಗೋಡ ಪಟ್ಟಣದ ನಿವಾಸಿ ಮಯೂರಿ ಸುರೇಶ್ ಎಂಬುವವರಿಗೆ ಹಾವು ಕಚ್ಚಿದ್ದು, ಸ್ಥಳೀಯ ಸರ್ಕಾರಿ ಆಸ್ಪತ್ರೆಯವರು ಸಕಾಲದಲ್ಲಿ ಚಿಕಿತ್ಸೆ ನೀಡಲು ನಿರಾಕರಿಸಿದ್ದರಿಂದ ಆಕೆಯನ್ನು ಹುಬ್ಬಳ್ಳಿಯ ಆಸ್ಪತ್ರೆಗೆ ಸಾಗಿಸುವಂತೆ ಒತ್ತಾಯಿಸಿದರು. ಮಾರ್ಗಮಧ್ಯೆ ಮಯೂರಿ ಮೃತಪಟ್ಟಿದ್ದು, ಆಕೆಯ ಕುಟುಂಬವು ತಾಲೂಕು ಆಸ್ಪತ್ರೆಯ ವಿರುದ್ಧ ಪೊಲೀಸ್ ದೂರು ದಾಖಲಿಸಲು ಮುಂದಾಗಿದ್ದಾರೆ, ಇದು ಸಂಪೂರ್ಣ ನಿರ್ಲಕ್ಷ್ಯ ಎಂದು ಆರೋಪಿಸಿದೆ.

ವಿವರಗಳ ಪ್ರಕಾರ, ಸ್ಥಳೀಯ ಅಂಗನವಾಡಿಯಲ್ಲಿದ್ದ ಮಯೂರಿ ಬೆಳಗ್ಗೆ 10 ಗಂಟೆ ಸುಮಾರಿಗೆ ಬಯಲಿನಲ್ಲಿ ಮೂತ್ರ ವಿಸರ್ಜನೆಗೆ ಹೋದಾಗ ಹಾವು ಕಚ್ಚಿದೆ. ಅಂಗನವಾಡಿಯಿಂದ ಸುಮಾರು 1.5 ಕಿ.ಮೀ ದೂರದಲ್ಲಿರುವ ಮುಂಡಗೋಡಿನ ತಾಲೂಕು ಆಸ್ಪತ್ರೆಗೆ ಕರೆದೊಯ್ದರೂ ವೈದ್ಯರು ನಿರ್ಲಕ್ಷ್ಯ ತೋರಿದ್ದಾರೆ ಎಂದು ಪೋಷಕರು ಆರೋಪಿಸಿದ್ದಾರೆ.

ಆಸ್ಪತ್ರೆಗೆ ತೆರಳಿದ ಬಳಿಕ ಸುಮಾರು ಅರ್ಧ ಗಂಟೆ ಕಾಲ ವೈದ್ಯರು ಮಯೂರಿಗೆ ಚಿಕಿತ್ಸೆ ಆರಂಭಿಸಲಿಲ್ಲ. ನಂತರ, ಅವರು ಹುಬ್ಬಳ್ಳಿಯ ಕರ್ನಾಟಕ ವೈದ್ಯಕೀಯ ಕಾಲೇಜು ಮತ್ತು ಸಂಶೋಧನಾ ಸಂಸ್ಥೆಗೆ (ಕೆಎಂಸಿಆರ್‌ಐ) ಕರೆದೊಯ್ಯಬೇಕೆಂದು ಹೇಳಿದ್ದಾರೆ. ಅಂದರೆ ರಸ್ತೆ ಮೂಲಕ ಒಂದೂವರೆ ಗಂಟೆ ಪ್ರಯಾಣ ಮಾಡಲು ಸೂಚಿಸಿದ್ದಾರೆ.

ಸಾವಿಗೆ ಆಕ್ರೋಶ ವ್ಯಕ್ತಪಡಿಸಿದ ಪಟ್ಟಣದ ಸುಮಾರು ನೂರು ಕಾರ್ಯಕರ್ತರು ಹಾಗೂ ನಿವಾಸಿಗಳು, ತಹಶೀಲ್ದಾರ್ ಕಚೇರಿ ಎದುರು ಪ್ರತಿಭಟನೆ ನಡೆಸಿದರು. ತಾಲೂಕು ಆಸ್ಪತ್ರೆಯಲ್ಲಿ ಹಾವು ಕಚ್ಚಿದಾಗ ಬಳಸುವ ಔಷದ ಏಕೆ ಇರಲಿಲ್ಲ? ಆಕೆಯನ್ನು ಅಲ್ಲಿ ಇಷ್ಟು ಹೊತ್ತು ಕಾಯುವಂತೆ ಮಾಡಿದ್ದು ಯಾಕೆ? ಹುಬ್ಬಳ್ಳಿಗೆ ತೆರಳುವ ಮಾರ್ಗ ಮಧ್ಯೆ ಆಕೆ ಸಾವನ್ನಪ್ಪಿದ್ದಾಳೆ. ಬೇರೆ ಯಾವ ಮಗುವಿಗೆ ಹೀಗಾಗಬಾರದು” ಎಂದು ಸ್ಥಳೀಯರಾಧ ಮಹಾಲಕ್ಷ್ಮಿ ಹೇಳಿದರು ಎಂದು ‘ನ್ಯೂಸ್ ಮಿನಿಟ್’ ವರದಿ ಮಾಡಿದೆ.

ಶೌಚಾಲಯವನ್ನು ಬಳಸಲು ಅವಕಾಶ ನೀಡದ ಅಂಗನವಾಡಿ ಸಿಬ್ಬಂದಿಯನ್ನು ಸಹ ಹೊಣೆಗಾರರನ್ನಾಗಿ ಮಾಡಬೇಕು ಎಂದು ಪ್ರತಿಭಟನಾಕಾರರು ತಹಶೀಲ್ದಾರ್‌ಗೆ ಸಲ್ಲಿಸಿದ ಮನವಿಯಲ್ಲಿ ತಿಳಿಸಿದ್ದಾರೆ.

ಮಾರ್ಚ್ 2024 ರಲ್ಲಿ, ಹಾವು ಕಡಿತವನ್ನು ಅಧಿಸೂಚಿತ ಕಾಯಿಲೆಯನ್ನಾಗಿ ಮಾಡುವ ನಿರ್ಧಾರದ ನಂತರ ರಾಜ್ಯ ಸರ್ಕಾರವು ಎಲ್ಲಾ ತಾಲೂಕು ಮತ್ತು ಜಿಲ್ಲಾ ಆಸ್ಪತ್ರೆಗಳನ್ನು ಹಾವು ಕಡಿತ ಚಿಕಿತ್ಸಾ ಕೇಂದ್ರಗಳಾಗಿ ಗುರುತಿಸಿದೆ.

ಈ ಮಧ್ಯೆ, ಮುಂಡಗೋಡ ಆಸ್ಪತ್ರೆಯ ಮೇಲಿನ ಆರೋಪಗಳ ಬಗ್ಗೆ ಪ್ರಾಥಮಿಕ ತನಿಖೆಯ ಕುರಿತು ಜಿಲ್ಲಾ ಆರೋಗ್ಯಾಧಿಕಾರಿಗಳಿಗೆ ಪತ್ರ ಬರೆದಿರುವುದಾಗಿ ಮುಂಡಗೋಡ ಪೊಲೀಸರು ತಿಳಿಸಿದ್ದಾರೆ.

ಇದನ್ನೂ ಓದಿ; ಧಾರವಾಡ | 186 ಯುವಕರಿಗೆ ಬಂದೂಕು ತರಬೇತಿ ಕೊಟ್ಟ ಶ್ರೀರಾಮಸೇನೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇವಲ ಪ್ರತಿಭಟಿಸಿದ್ದಕ್ಕೆ ವಿದ್ಯಾರ್ಥಿಗಳು ಜೈಲುಪಾಲು; ಗಂಗೆಯ ದೋಣಿಯಲ್ಲಿ ಬಿರಿಯಾನಿ ತಿಂದವರಿಗೂ ಸಿಗುತ್ತಿಲ್ಲ ಜಾಮೀನು : ನ್ಯಾಯಮೂರ್ತಿ ಉಜ್ಜಲ್ ಭುಯಾನ್ ಕಳವಳ

ಭಾರತದಲ್ಲಿ ಭಿನ್ನಾಭಿಪ್ರಾಯಗಳನ್ನು ಗೌರವಿಸುವ ಮತ್ತು ಅವುಗಳಿಗೆ ಅವಕಾಶ ನೀಡುವ ಸಾರ್ವಜನಿಕ ಸ್ಥಳಗಳು ಎಷ್ಟು ಕಡಿಮೆಯಾಗುತ್ತಿವೆ ಎಂದರೆ, ತಮ್ಮ ಹಕ್ಕುಗಳಿಗಾಗಿ ಪ್ರತಿಭಟಿಸುವ ವಿದ್ಯಾರ್ಥಿಗಳನ್ನು ಬಂಧಿಸಿ ಅವರಿಗೆ ಜಾಮೀನು ನಿರಾಕರಿಸಲಾಗುತ್ತಿದೆ ಎಂದು ಸುಪ್ರೀಂ ಕೋರ್ಟ್‌ನ ನ್ಯಾಯಮೂರ್ತಿ...

ಪ.ಬಂಗಾಳ: ನೂತನ ‘ಗೂಂಡಾ ಕಾಯ್ದೆ’ ಅಡಿ NEET ಪ್ರತಿಭಟನೆಯಲ್ಲಿ ಭಾಗಿಯಾದ 10 ಮುಸ್ಲಿಂ ಯುವಕರು ಸೇರಿದಂತೆ 11 ಜನರ ಬಂಧನ 

ಕೋಲ್ಕತ್ತಾ: ಕೇಂದ್ರದ ನರೇಂದ್ರ ಮೋದಿ ಸರ್ಕಾರದ ಶಿಕ್ಷಣ ಕ್ಷೇತ್ರದ ವೈಫಲ್ಯಗಳು ಹಾಗೂ ನೀಟ್-ಯುಜಿ (NEET-UG) ಪ್ರಶ್ನೆ ಪತ್ರಿಕೆ ಸೋರಿಕೆ ಹಗರಣವನ್ನು ಖಂಡಿಸಿ ಶುಕ್ರವಾರ ಕೋಲ್ಕತ್ತಾದಲ್ಲಿ ನಡೆದ ಬೃಹತ್ ವಿದ್ಯಾರ್ಥಿ ಪ್ರತಿಭಟನೆಯು ತೀವ್ರ ರಾಜಕೀಯ...

ಪೊಲೀಸರ ಅನುಮತಿ ಪಡೆದಿದ್ದರೂ ನೀಟ್ ಪ್ರತಿಭಟನೆಗೆ ವಾಟ್ಸಾಪ್ ಗ್ರೂಪ್ ರಚಿಸಿದ್ದಕ್ಕಾಗಿ ಅಸ್ಸಾಂನಲ್ಲಿ ಮೂವರು ಮುಸ್ಲಿಂ ವಿದ್ಯಾರ್ಥಿಗಳ ಬಂಧನ

ಅಸ್ಸಾಂನಲ್ಲಿ ಬಿಜೆಪಿ ಸರ್ಕಾರದ ಕೋಮುವಾದಿ ಧೋರಣೆ ಮತ್ತು ಪ್ರಜಾಸತ್ತಾತ್ಮಕ ಹಕ್ಕುಗಳ ದಮನದ ದಾರುಣ ಚಿತ್ರಣವೊಂದು ಮತ್ತೆ ಮುನ್ನೆಲೆಗೆ ಬಂದಿದೆ. ದೇಶಾದ್ಯಂತ ಸದ್ದು ಮಾಡಿದ್ದ 'ನೀಟ್' (NEET) ಅಕ್ರಮಗಳ ವಿರುದ್ಧ ಧ್ವನಿ ಎತ್ತಲು ಮತ್ತು...

‘ವಿದ್ಯಾರ್ಥಿಗಳ ಮೇಲಿನ ವಿಕೃತ ದಾಳಿಗೆ ನಿಮ್ಮ ಸಮ್ಮತಿ ಇತ್ತೇ?’: ಪತ್ರದ ಮೂಲಕ ಅಮಿತ್ ಶಾಗೆ ರಾಹುಲ್ ಗಾಂಧಿ ಪ್ರಶ್ನೆ

ನವದೆಹಲಿ: ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಕಾರಣವಾದ ದೇಶವ್ಯಾಪಿ ವಿದ್ಯಾರ್ಥಿ ಆಂದೋಲನದ ವೇಳೆ ದೆಹಲಿ ಪೊಲೀಸರು ನಡೆಸಿದ ಭೀಕರ ದೌರ್ಜನ್ಯ ಮತ್ತು ಮಿತಿಮೀರಿದ ಬಲಪ್ರಯೋಗದ ವಿರುದ್ಧ ಲೋಕಸಭೆಯ ವಿರೋಧ...

‘ಮಗ ಬೇಗನೆ ಮನೆಗೆ ಬರಲಿ..’; ಭಾವುಕರಾದ ಅಭಿಜೀತ್ ದಿಪ್ಕೆ ಅವರ ಪೋಷಕರು

ಸಿಜೆಪಿ ಸಂಸ್ಥಾಪಕ ಅಭಿಜೀತ್ ದಿಪ್ಕೆ ನೇತೃತ್ವದಲ್ಲಿ ನಡೆದ ಅಸಾಧಾರಣ ಹೋರಾಟವು ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜಿನಾಮೆಯಲ್ಲಿ ಅಂತಿಮವಾಗಿದೆ. ಈ ಕುರಿತು ಮಾಧ್ಯಮಗಳಿಗೆ ಪ್ರತಿಕ್ರಿಯಿಸಿರುವ ಅವರ ಪೋಷಕರು ಭಾವುಕರಾಗಿದ್ದಾರೆ. "ಮಗ ಬೇಗನೆ ಮನೆಗೆ...

ಧರ್ಮೇಂದ್ರ ಪ್ರಧಾನ್ ರಾಜೀನಾಮೆ: ಕಾಕ್ರೋಚ್‌ಗಳಿಗೆ ಅಭಿನಂದಿಸಿದ ಸೋನಮ್ ವಾಂಗ್‌ಚುಕ್ – ಪ್ರಕಾಶ್‌ ರಾಜ್

ದೇಶದ ಯುವಜನರ ಹಲವು ದಿನಗಳ ಹೋರಾಟದ ಬಳಿಕ ಮೋದಿ ನೇತೃತ್ವದ ಕೇಂದ್ರ ಸರ್ಕಾರ ವಿದ್ಯಾರ್ಥಿಗಳ ಮುಂದೆ ಮಂಡಿಯೂರಿದೆ; ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡಿದ್ದಾರೆ. ಈ ಗೆಲುವಿಗೆ ಕಾಕ್ರೋಚ್ ಜನತಾ ಪಕ್ಷದ...

ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಜಿರಳೆಗಳ ಹರ್ಷೋದ್ಗಾರ: ದೆಹಲಿ ಪೊಲೀಸರಿಂದ ಸಾರ್ವಜನಿಕ ಕ್ಷಮೆಯಾಚನೆಗೆ ಆಗ್ರಹ

ದೇಶಾದ್ಯಂತ ನಡೆಯುತ್ತಿರುವ ಸಿಜೆಪಿ ಪ್ರತಿಭಟನೆಗಳ ನಡುವೆ ನೀಟ್ ಪತ್ರಿಕೆ ಸೋರಿಕೆಗೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ರಾಜೀನಾಮೆ ನೀಡಿದ್ದು, ದೆಹಲಿಯ ಜಂತರ್‌ ಮಂತರ್‌ನಲ್ಲಿ ಪ್ರತಿಭಟನೆ ನಡೆಸುತ್ತಿರುವ ಕಾಕ್ರೋಚ್‌ ಜನತಾ...

ಕಾಕ್ರೋಚ್‌ಗಳಿಗೆ ಮಣಿದ ಮೋದಿ ಸರ್ಕಾರ; ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್‌ ರಾಜೀನಾಮೆ

ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ನೇತೃತ್ವದಲ್ಲಿ ದೇಶಾದ್ಯಂತ ನಡೆಯುತ್ತಿರುವ ಪ್ರತಿಭಟನೆಗಳ ಮಧ್ಯೆ, ನೀಟ್ ಅಕ್ರಮಗಳಿಗೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ಇಂದು (ಜುಲೈ 25) ಪ್ರಧಾನ ಮಂತ್ರಿಗಳಿಗೆ ತಮ್ಮ...

ಅಭಿಜೀತ್ ದಿಪ್ಕೆಗೆ ಟೈಫಾಯ್ಡ್; ಪ್ರತಿಭಟನೆ ಮುಂದುವರಿಯಲಿದೆ ಎಂದ ಸಿಜೆಪಿ ಸಂಸ್ಥಾಪಕ

ತನಗೆ ಟೈಫಾಯ್ಡ್ ಇರುವುದು ಪತ್ತೆಯಾಗಿದೆ ಎಂದು ಕಾಕ್ರೋಚ್‌ ಜನತಾ ಪಕ್ಷದ (ಸಿಜೆಪಿ) ಸಂಸ್ಥಾಪಕ ಅಭಿಜೀತ್ ದಿಪ್ಕೆ ಅವರು ಇಂದು ಹೇಳಿದ್ದಾರೆ. "ನನ್ನ ಅನಾರೋಗ್ಯವು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ...

ಮುಸ್ಲಿಮರ ಬಗ್ಗೆ ನಿಂದನಾತ್ಮಕ, ಪ್ರಚೋದನಕಾರಿ ಹೇಳಿಕೆ : ಸಿ.ಟಿ ರವಿ ವಿರುದ್ಧ FIR

ಮುಸ್ಲಿಮರ ವಿರುದ್ಧ ನಿಂದನಾತ್ಮಕ ಹಾಗೂ ಪ್ರಚೋದನಕಾರಿ ಹೇಳಿಕೆ ನೀಡಿದ ವಿಧಾನಪರಿಷತ್ ಸದಸ್ಯ ಸಿ.ಟಿ ರವಿ ವಿರುದ್ಧ ಚಿಕ್ಕಮಗಳೂರು ನಗರ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ. ನಗರದ ಜಾಮಿಯಾ ಮಸೀದಿಯ ಅಧ್ಯಕ್ಷ ಮುದಸ್ಸಿರ್ ಪಾಷಾ ಅವರು...