Homeಕರ್ನಾಟಕಉತ್ತರ ಕನ್ನಡ| ವೈದ್ಯರ ನಿರ್ಲಕ್ಷ್ಯದಿಂದ ಹಾವು ಕಚ್ಚಿದ್ದ ಐದು ವರ್ಷದ ಬಾಲಕಿ ಸಾವು

ಉತ್ತರ ಕನ್ನಡ| ವೈದ್ಯರ ನಿರ್ಲಕ್ಷ್ಯದಿಂದ ಹಾವು ಕಚ್ಚಿದ್ದ ಐದು ವರ್ಷದ ಬಾಲಕಿ ಸಾವು

- Advertisement -
- Advertisement -

ಹೊಸ ವರ್ಷಕ್ಕೆ ಒಂದು ದಿನ ಮೊದಲು (2024 ಡಿಸೆಂಬರ್ 31) ಉತ್ತರ ಕನ್ನಡ ಜಿಲ್ಲೆಯಲ್ಲಿ ಐದು ವರ್ಷದ ಬಾಲಕಿಯೊಬ್ಬಳು ವೈದ್ಯಕೀಯ ನಿರ್ಲಕ್ಷ್ಯದಿಂದ ದುರಂತವಾಗಿ ಸಾವನ್ನಪ್ಪಿದ್ದಾಳೆ. ಮುಂಡಗೋಡ ಪಟ್ಟಣದ ನಿವಾಸಿ ಮಯೂರಿ ಸುರೇಶ್ ಎಂಬುವವರಿಗೆ ಹಾವು ಕಚ್ಚಿದ್ದು, ಸ್ಥಳೀಯ ಸರ್ಕಾರಿ ಆಸ್ಪತ್ರೆಯವರು ಸಕಾಲದಲ್ಲಿ ಚಿಕಿತ್ಸೆ ನೀಡಲು ನಿರಾಕರಿಸಿದ್ದರಿಂದ ಆಕೆಯನ್ನು ಹುಬ್ಬಳ್ಳಿಯ ಆಸ್ಪತ್ರೆಗೆ ಸಾಗಿಸುವಂತೆ ಒತ್ತಾಯಿಸಿದರು. ಮಾರ್ಗಮಧ್ಯೆ ಮಯೂರಿ ಮೃತಪಟ್ಟಿದ್ದು, ಆಕೆಯ ಕುಟುಂಬವು ತಾಲೂಕು ಆಸ್ಪತ್ರೆಯ ವಿರುದ್ಧ ಪೊಲೀಸ್ ದೂರು ದಾಖಲಿಸಲು ಮುಂದಾಗಿದ್ದಾರೆ, ಇದು ಸಂಪೂರ್ಣ ನಿರ್ಲಕ್ಷ್ಯ ಎಂದು ಆರೋಪಿಸಿದೆ.

ವಿವರಗಳ ಪ್ರಕಾರ, ಸ್ಥಳೀಯ ಅಂಗನವಾಡಿಯಲ್ಲಿದ್ದ ಮಯೂರಿ ಬೆಳಗ್ಗೆ 10 ಗಂಟೆ ಸುಮಾರಿಗೆ ಬಯಲಿನಲ್ಲಿ ಮೂತ್ರ ವಿಸರ್ಜನೆಗೆ ಹೋದಾಗ ಹಾವು ಕಚ್ಚಿದೆ. ಅಂಗನವಾಡಿಯಿಂದ ಸುಮಾರು 1.5 ಕಿ.ಮೀ ದೂರದಲ್ಲಿರುವ ಮುಂಡಗೋಡಿನ ತಾಲೂಕು ಆಸ್ಪತ್ರೆಗೆ ಕರೆದೊಯ್ದರೂ ವೈದ್ಯರು ನಿರ್ಲಕ್ಷ್ಯ ತೋರಿದ್ದಾರೆ ಎಂದು ಪೋಷಕರು ಆರೋಪಿಸಿದ್ದಾರೆ.

ಆಸ್ಪತ್ರೆಗೆ ತೆರಳಿದ ಬಳಿಕ ಸುಮಾರು ಅರ್ಧ ಗಂಟೆ ಕಾಲ ವೈದ್ಯರು ಮಯೂರಿಗೆ ಚಿಕಿತ್ಸೆ ಆರಂಭಿಸಲಿಲ್ಲ. ನಂತರ, ಅವರು ಹುಬ್ಬಳ್ಳಿಯ ಕರ್ನಾಟಕ ವೈದ್ಯಕೀಯ ಕಾಲೇಜು ಮತ್ತು ಸಂಶೋಧನಾ ಸಂಸ್ಥೆಗೆ (ಕೆಎಂಸಿಆರ್‌ಐ) ಕರೆದೊಯ್ಯಬೇಕೆಂದು ಹೇಳಿದ್ದಾರೆ. ಅಂದರೆ ರಸ್ತೆ ಮೂಲಕ ಒಂದೂವರೆ ಗಂಟೆ ಪ್ರಯಾಣ ಮಾಡಲು ಸೂಚಿಸಿದ್ದಾರೆ.

ಸಾವಿಗೆ ಆಕ್ರೋಶ ವ್ಯಕ್ತಪಡಿಸಿದ ಪಟ್ಟಣದ ಸುಮಾರು ನೂರು ಕಾರ್ಯಕರ್ತರು ಹಾಗೂ ನಿವಾಸಿಗಳು, ತಹಶೀಲ್ದಾರ್ ಕಚೇರಿ ಎದುರು ಪ್ರತಿಭಟನೆ ನಡೆಸಿದರು. ತಾಲೂಕು ಆಸ್ಪತ್ರೆಯಲ್ಲಿ ಹಾವು ಕಚ್ಚಿದಾಗ ಬಳಸುವ ಔಷದ ಏಕೆ ಇರಲಿಲ್ಲ? ಆಕೆಯನ್ನು ಅಲ್ಲಿ ಇಷ್ಟು ಹೊತ್ತು ಕಾಯುವಂತೆ ಮಾಡಿದ್ದು ಯಾಕೆ? ಹುಬ್ಬಳ್ಳಿಗೆ ತೆರಳುವ ಮಾರ್ಗ ಮಧ್ಯೆ ಆಕೆ ಸಾವನ್ನಪ್ಪಿದ್ದಾಳೆ. ಬೇರೆ ಯಾವ ಮಗುವಿಗೆ ಹೀಗಾಗಬಾರದು” ಎಂದು ಸ್ಥಳೀಯರಾಧ ಮಹಾಲಕ್ಷ್ಮಿ ಹೇಳಿದರು ಎಂದು ‘ನ್ಯೂಸ್ ಮಿನಿಟ್’ ವರದಿ ಮಾಡಿದೆ.

ಶೌಚಾಲಯವನ್ನು ಬಳಸಲು ಅವಕಾಶ ನೀಡದ ಅಂಗನವಾಡಿ ಸಿಬ್ಬಂದಿಯನ್ನು ಸಹ ಹೊಣೆಗಾರರನ್ನಾಗಿ ಮಾಡಬೇಕು ಎಂದು ಪ್ರತಿಭಟನಾಕಾರರು ತಹಶೀಲ್ದಾರ್‌ಗೆ ಸಲ್ಲಿಸಿದ ಮನವಿಯಲ್ಲಿ ತಿಳಿಸಿದ್ದಾರೆ.

ಮಾರ್ಚ್ 2024 ರಲ್ಲಿ, ಹಾವು ಕಡಿತವನ್ನು ಅಧಿಸೂಚಿತ ಕಾಯಿಲೆಯನ್ನಾಗಿ ಮಾಡುವ ನಿರ್ಧಾರದ ನಂತರ ರಾಜ್ಯ ಸರ್ಕಾರವು ಎಲ್ಲಾ ತಾಲೂಕು ಮತ್ತು ಜಿಲ್ಲಾ ಆಸ್ಪತ್ರೆಗಳನ್ನು ಹಾವು ಕಡಿತ ಚಿಕಿತ್ಸಾ ಕೇಂದ್ರಗಳಾಗಿ ಗುರುತಿಸಿದೆ.

ಈ ಮಧ್ಯೆ, ಮುಂಡಗೋಡ ಆಸ್ಪತ್ರೆಯ ಮೇಲಿನ ಆರೋಪಗಳ ಬಗ್ಗೆ ಪ್ರಾಥಮಿಕ ತನಿಖೆಯ ಕುರಿತು ಜಿಲ್ಲಾ ಆರೋಗ್ಯಾಧಿಕಾರಿಗಳಿಗೆ ಪತ್ರ ಬರೆದಿರುವುದಾಗಿ ಮುಂಡಗೋಡ ಪೊಲೀಸರು ತಿಳಿಸಿದ್ದಾರೆ.

ಇದನ್ನೂ ಓದಿ; ಧಾರವಾಡ | 186 ಯುವಕರಿಗೆ ಬಂದೂಕು ತರಬೇತಿ ಕೊಟ್ಟ ಶ್ರೀರಾಮಸೇನೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

SIR ಬಳಿಕ ಒಡಿಶಾದ ಕರಡು ಮತದಾರರ ಪಟ್ಟಿ ಪ್ರಕಟ : 20 ಲಕ್ಷ ಹೆಸರುಗಳು ಡಿಲೀಟ್

ವಿಶೇಷ ತೀವ್ರ ಪರಿಷ್ಕರಣೆಯ (ಎಸ್‌ಐಆರ್) ಗಣತಿ ಹಂತದ ಬಳಿಕ ಚುನಾವಣಾ ಆಯೋಗ ಭಾನುವಾರ (ಜು.5) ಒಡಿಶಾದ ಕರಡು ಮತದಾರರ ಪಟ್ಟಿಯನ್ನು ಪ್ರಕಟಿಸಿದ್ದು, ಇದರಲ್ಲಿ 20 ಲಕ್ಷಕ್ಕೂ ಹೆಚ್ಚು ಜನರ ಹೆಸರುಗಳನ್ನು ಮತದಾರರ ಪಟ್ಟಿಯಿಂದ...

SIR: ಟಾರ್ಗೆಟ್ ಮತ್ತು ಒತ್ತಡದ ಕೆಲಸದಿಂದ ಮೂವರು ಸಿಬ್ಬಂದಿ ಸಾವು

ಕರ್ನಾಟಕದಲ್ಲಿ ನಡೆಯುತ್ತಿರುವ ಸಮಗ್ರ ಮತದಾರರ ಪಟ್ಟಿ ಪರಿಷ್ಕರಣೆ (SIR) ಪ್ರಕ್ರಿಯೆಯು ಕೆಳಹಂತದ ನೌಕರರ ಪಾಲಿಗೆ ಮರಣಶಾಸನವಾಗುತ್ತಿದೆಯೇ ಎಂಬ ಗಂಭೀರ ಪ್ರಶ್ನೆಯೊಂದು ಎದ್ದಿದೆ. ಅಧಿಕಾರಿಗಳು ನೀಡುತ್ತಿರುವ ಅತಿಯಾದ ಒತ್ತಡ ಮತ್ತು ಟಾರ್ಗೆಟ್ ಬೆನ್ನತ್ತುವ ಧಾವಂತದಿಂದಾಗಿ...

ಖಮೇನಿ ಅಂತ್ಯಕ್ರಿಯೆ ವೇಳೆ ಟ್ರಂಪ್ ಉದ್ಧಟತನದ ಹೇಳಿಕೆ: “ಇತಿಹಾಸ, ಗೌರವವಿಲ್ಲದ ದೇಶ ಅಮೆರಿಕ” ಎಂದು ಇರಾನ್ ತೀಕ್ಷ್ಣ ತಿರುಗೇಟು

ಟೆಹ್ರಾನ್: ಇರಾನ್‌ನ ಮಾಜಿ ಸುಪ್ರೀಂ ನಾಯಕ ಅಯತೊಲ್ಲಾ ಅಲಿ ಖಮೇನಿ ಅವರ ನಿಧನದ ನಂತರ ಜಾಗತಿಕ ರಾಜತಾಂತ್ರಿಕ ವಲಯದಲ್ಲಿ ಭಾರೀ ವಾಕ್ಸಮರ ಉಂಟಾಗಿದೆ. ಖಮೇನಿ ಅವರ ಅಂತ್ಯಕ್ರಿಯೆಯ ಸಂದರ್ಭದಲ್ಲಿ ಒಟ್ಟುಗೂಡಿರುವ ಇರಾನ್‌ನ ಇಡೀ...

ಮ್ಯಾಚ್ ಮಧ್ಯೆ ಕಾಂಡೊಮ್ ಜಾಹೀರಾತು: ಬಿಸಿಸಿಐ ವಿರುದ್ಧ ಕಿಡಿಕಾರಿದ ಮಾಜಿ ಕ್ರಿಕೆಟಿಗ, TMC ಸಂಸದ ಕೀರ್ತಿ ಆಜಾದ್

ಮ್ಯಾಂಚೆಸ್ಟರ್‌ನ ಓಲ್ಡ್ ಟ್ರಾಫರ್ಡ್‌ನಲ್ಲಿ ನಡೆದ ಭಾರತ ಮತ್ತು ಇಂಗ್ಲೆಂಡ್ ನಡುವಿನ ಟಿ20 ಅಂತರರಾಷ್ಟ್ರೀಯ ಪಂದ್ಯದ ನೇರ ಪ್ರಸಾರದ ವೇಳೆ ಕಾಂಡೊಮ್ ಜಾಹೀರಾತುಗಳನ್ನು ಪ್ರಸಾರ ಮಾಡಿದ್ದನ್ನು ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಮತ್ತು ಮಾಜಿ...

ಒಂದೇ ಒಂದು ಇಟ್ಟಿಗೆ ಇಟ್ಟಿಲ್ಲ : ಕಳೆದ ಆರು ವರ್ಷಗಳಿಂದ ಕಾಗದದ ಮೇಲೆಯೇ ಕಾರ್ಯ ನಿರ್ವಹಿಸುತ್ತಿರುವ 100 ಹಾಸಿಗೆಗಳ ಆಸ್ಪತ್ರೆ!

ಮಧ್ಯ ಪ್ರದೇಶದ ಇಂದೋರ್‌ನ ಖಜರಾನಾದಲ್ಲಿ ಮಂಜೂರಾದ 100 ಹಾಸಿಗೆಗಳ ಸಿವಿಲ್ ಆಸ್ಪತ್ರೆಯು ಕಳೆದ 6 ವರ್ಷಗಳಿಂದ ಕೇವಲ ಕಾಗದದ ಮೇಲಷ್ಟೇ (ದಾಖಲೆಗಳಲ್ಲಿ) ಅಸ್ತಿತ್ವದಲ್ಲಿರುವುದು ವರದಿಯಾಗಿದೆ. ಈ ವಿಲಕ್ಷಣ ಮತ್ತು ಆಘಾತಕಾರಿ ಆಡಳಿತಾತ್ಮಕ ವೈಫಲ್ಯದ ಪ್ರಕರಣವು...

ವೋಟ್‌ಯಿಂದ ಹಿಡಿದು ಮಂದಿರದ ಚಂದಾದವರೆಗೆ ಬಿಜೆಪಿಯದ್ದು ಬರೀ ‘ಚೋರಿ’ ಎಂದ ಕಾಂಗ್ರೆಸ್

ಅಯೋಧ್ಯೆಯ ರಾಮ ಮಂದಿರದಲ್ಲಿ ನಡೆದಿದೆ ಎನ್ನಲಾದ ದೇಣಿಗೆ ದುರುಪಯೋಗದ ವಿಚಾರವಾಗಿ ಭಾನುವಾರ ಕಾಂಗ್ರೆಸ್ ಪಕ್ಷವು ಬಿಜೆಪಿ-ಆರ್‌ಎಸ್‌ಎಸ್ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದೆ. ಇದು ಅವರದೇ ಆದ ಇಕೋ ಸಿಸ್ಟಮ್‌ನ ದೊಡ್ಡ "ಹಗರಣ"ವಾಗಿದ್ದು, ಈ...

ಮುಸ್ಲಿಮರನ್ನು ಮಾದಕ ದ್ರವ್ಯ, ಭಯೋತ್ಪಾದನೆಗೆ ಲಿಂಕ್ ಮಾಡಿ ಪೋಸ್ಟ್: ಕೇರಳ ಹಿಂದೂ ಐಕ್ಯ ವೇದಿಕೆ ಮುಖ್ಯಸ್ಥ ಆರ್‌ವಿ ಬಾಬು ವಿರುದ್ಧ ಪ್ರಕರಣ ದಾಖಲು

ಕೊಚ್ಚಿ: ಮುಸ್ಲಿಂ ಸಮುದಾಯ ಮತ್ತು ಅದರ ಧಾರ್ಮಿಕ ಮುಖಂಡರನ್ನು ಗುರಿಯಾಗಿಸಿಕೊಂಡು ಸಾಮಾಜಿಕ ಮಾಧ್ಯಮದಲ್ಲಿ ಆಕ್ಷೇಪಾರ್ಹ ಹಾಗೂ ಕೋಮು ಪ್ರಚೋದನಾತ್ಮಕ ಪೋಸ್ಟ್ ಹಂಚಿಕೊಂಡಿದ್ದಕ್ಕಾಗಿ ಕೇರಳದ ಹಿಂದೂ ಐಕ್ಯ ವೇದಿಕೆಯ ರಾಜ್ಯ ಅಧ್ಯಕ್ಷ ಆರ್.ವಿ. ಬಾಬು...

ಇರಾನ್ ಜನರು ಅವರನ್ನು ದ್ವೇಷಿಸುತ್ತಾರೆ ಅಂದುಕೊಂಡಿದ್ದೆ: ಖಮೇನಿ ಅಂತ್ಯಕ್ರಿಯೆಯ ಜನಸಾಗರ ನೋಡಿ ಶಾಕ್ ಆದ ಟ್ರಂಪ್

ಇರಾನ್‌ನ ಮಾಜಿ ಸರ್ವೋಚ್ಚ ನಾಯಕ ಅಯತೊಲ್ಲಾ ಅಲಿ ಖಮೇನಿ ಅವರ ಅಂತ್ಯಕ್ರಿಯೆಯಲ್ಲಿ ಲಕ್ಷಾಂತರ ಜನರು ಭಾಗವಹಿಸಿ ಕಣ್ಣೀರು ಹಾಕುತ್ತಿರುವುದನ್ನು ನೋಡಿ ತಮಗೆ ತೀವ್ರ ಆಘಾತವಾಗಿದೆ ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹೇಳಿದ್ದಾರೆ....

‘ನಿಮ್ಮ ಮೌನ ಯುವಜನರನ್ನು ಕೇವಲ ಕೀಟಗಳಂತೆ ನೋಡುತ್ತೀರಿ ಎಂಬುದಕ್ಕೆ ಒಪ್ಪಿಗೆಯಾಗಿದೆ’: ಮೋದಿಗೆ ಬಹಿರಂಗ ಪತ್ರ ಬರೆದ ಸಿಜೆಪಿ

"ಈ ದೇಶದ ಯುವಜನರನ್ನು ನೀವು ಕೇವಲ ನಿರ್ಲಕ್ಷಿಸಬೇಕಾದ ಕೀಟಗಳಂತೆ ನೋಡುತ್ತಿದ್ದೀರಾ?" ಎಂದು ಪ್ರಶ್ನಿಸಿ ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ಪ್ರಧಾನಿ ನರೇಂದ್ರ ಮೋದಿ ಅವರಿಗೆ ಶನಿವಾರ (ಜುಲೈ 4) ಬಹಿರಂಗ ಪತ್ರ ಬರೆದಿದೆ. ದೇಶದ...

ಮಮತಾ ಬ್ಯಾನರ್ಜಿಗೆ ಬಿಗ್ ಶಾಕ್: ನೇಮಕಗೊಂಡ ತಿಂಗಳಲ್ಲೇ ಟಿಎಂಸಿ ರಾಜ್ಯಾಧ್ಯಕ್ಷೆ ಚಂದ್ರಿಮಾ ಭಟ್ಟಾಚಾರ್ಯ ರಾಜೀನಾಮೆ

ಪಶ್ಚಿಮ ಬಂಗಾಳದ ವಿಧಾನಸಭಾ ಚುನಾವಣೆಯ ಹೀನಾಯ ಸೋಲಿನ ಹಿನ್ನೆಲೆಯಲ್ಲಿ, ಅತ್ಯಂತ ನಿರ್ಣಾಯಕವಾದ ಸಾಂಸ್ಥಿಕ ಜವಾಬ್ದಾರಿಗೆ ನೇಮಕಗೊಂಡ ಕೇವಲ ಒಂದು ತಿಂಗಳ ಒಳಗಾಗಿಯೇ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ರಾಜ್ಯ ಘಟಕದ ಅಧ್ಯಕ್ಷೆ ಚಂದ್ರಿಮಾ...