Homeಕರ್ನಾಟಕವಿಧಾನ ಪರಿಷತ್‌ಗೆ ಟಿಕೆಟ್ ಪೈಪೋಟಿ; ಉತ್ತರ ಕನ್ನಡ ಬಿಜೆಪಿಯಲ್ಲಿ ಬೆಂಕಿ!!

ವಿಧಾನ ಪರಿಷತ್‌ಗೆ ಟಿಕೆಟ್ ಪೈಪೋಟಿ; ಉತ್ತರ ಕನ್ನಡ ಬಿಜೆಪಿಯಲ್ಲಿ ಬೆಂಕಿ!!

- Advertisement -
- Advertisement -

ಉತ್ತರ ಕನ್ನಡದಲ್ಲಿ ವಿಧಾನ ಪರಿಷತ್ತಿಗೆ ಸ್ಥಳಿಯಾಡಳಿತ ಸಂಸ್ಥೆಗಳ ಕ್ಷೇತ್ರದಿಂದ ನಡೆಯಲಿರುವ ಚುನಾವಣೆ ಆಖಾಡಕ್ಕೀಗ ರಂಗೇರಿದೆ! ಆಡಳಿತಾರೂಢ ಬಿಜೆಪಿಯಲ್ಲಿ ತಿಂಗಳಾನುಗಟ್ಟಳೆ ನಡೆದ ಟಿಕೆಟ್‌ಗೆ ಪೈಪೋಟಿಗೆ ಬ್ರೇಕ್ ಬಿದ್ದಿದ್ದು, ಕಾರವಾರದ ಮೀನುಗಾರ ಸಮುದಾಯದ ಗಣಪತಿ ದುಮ್ಮಾ ಉಳ್ವೇಕರ್‌ರನ್ನು ಅಭ್ಯರ್ಥಿಯೆಂದು ಘೋಷಿಸಲಾಗಿದೆ. ಅಭ್ಯರ್ಥಿ ಹೆಸರು ಪ್ರಕಟವಾಗುತ್ತಿದ್ದಂತೆ ಜಿಲ್ಲಾ ಬಿಜೆಪಿಯಲ್ಲಿ ಬೆಂಕಿಬಿದ್ದಂತಾಗಿದ್ದು, ಕೆಲ ಕಾರ್ಯಕರ್ತರು ಸಾಮಾಜಿಕ ಜಾಲತಾಣದಲ್ಲಿ ಅಸಮಾಧಾನ ಹೊರಹಾಕುತ್ತಿದ್ದಾರೆ.

ಬಿಜೆಪಿ ತನ್ನ ಭಾರಕ್ಕೆ ತಾನೆ ಕುಸಿಯುತ್ತಿದೆ; ಹಾದಿ-ಬೀದಿಯಲ್ಲಿ ಹೋಗುವವರನ್ನೆಲ್ಲ ಕಾಂಗ್ರೆಸ್ಸಿಂದ ಬಂದವರೆಂದು ಹೇಳಿ ತಂದು ತುಂಬಿಕೊಂಡಿದ್ದರ ಫಲವಿದು ಎಂದು ಎರಡ್ಮೂರು ದಶಕದಿಂದ ಪಕ್ಷಕ್ಕಾಗಿ ಬೆವರಿಳಿಸಿದ ಹಿರಿಯರು ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ. ಬಿಜೆಪಿಯ ಕಷ್ಟದ ದಿನಗಳಿಂದಲೂ ಆ ಪಾರ್ಟಿಯಲ್ಲಿದ್ದವರೂ ಸೇರಿದಂತೆ ಸುಮಾರು ಒಂದೂ ಮುಕ್ಕಾಲು ಡಜನ್ ಮಂದಿ ಟಿಕೆಟ್‌ಗಾಗಿ ಲಾಭಿ ನಡೆಸಿದ್ದರು. ಸ್ಪೀಕರ್ ವಿಶ್ವೇಶ್ವರ ಹೆಗಡೆ ಕಾಗೇರಿ, ಮಂತ್ರಿ ಹೆಬ್ಬಾರ್, ಸಂಸದ ಅನಂತಕುಮಾರ್ ಹೆಗಡೆ ಮತ್ತು ಶಾಸಕಿ ರೂಪಾಲಿ ನಾಯ್ಕ್ ಒಂದಾಗಿ ಉಳ್ವೇಕರ್ ಕ್ಯಾಂಡಿಡೇಟ್ ಮಾಡಿದ್ದಾರೆನ್ನಲಾಗಿದೆ.

ಗೋವಿಂದ ನಾಯ್ಕ್‌

ಕಳೆದ ಬಾರಿ ಸೋಲುತ್ತಾರೆಂದು ಗೊತ್ತಿದ್ದೂ ಉಳ್ವೇಕರ್‌ರನ್ನು ನಿಲ್ಲಿಸಲಾಗಿತ್ತು. ಈಗ ಗೆಲ್ಲುವ ಅವಕಾಶವಿರುವಾಗ ಅಂದು ಪಟ್ಟ ಕಷ್ಟಕ್ಕೆ ಇನಾಮು ಕೊಡಬೇಕಾದುದು ಧರ್ಮವೆಂದು ಪಕ್ಷದ ಹಿರಿಯರು ಹೇಳುತ್ತಿದ್ದಾರಾದರೂ, ಇದೆಲ್ಲ ಮುನಿಸಿಕೊಂಡಿರುವ ಮೀನುಗಾರ ಸಮುದಾಯವನ್ನು ಸಮಾಧಾನಿಸುವ ನಾಟಕವೆಂದು ಟಿಕೆಟ್ ವಂಚಿತರ ಬೆಂಬಲಿಗರ ಅಭಿಪ್ರಾಯವಾಗಿದೆ. ಉಳ್ವೇಕರ್ ನಿಷ್ಟಾವಂತ ಬಿಜೆಪಿಗರಲ್ಲ; ಅವರು ಆನಂದ ಅಸ್ನೋಟಿಕರ್ ಮತ್ತವರ ತಂದೆಯ ಹಿಂಬಾಲಕರಾಗಿದ್ದರು. ಆನಂದ ಬಿಜೆಪಿಗೆ ಬಂದಾಗ ಅವರೊಂದಿಗೆ ಉಳ್ವೇಕರ್ ಬಂದಿದ್ದರು. ಆದರೆ ಆನಂದ್ ಜತೆಗಿನ ಬಂದರು ವ್ಯವಹಾರದ ವೈಮನಸ್ಸಿನಿಂದ ಉಳ್ವೇಕರ್ ಬಿಜೆಪಿಯಲ್ಲೆ ಉಳಿದರೆಂಬುದು ಕಟ್ಟರ್ ಬಿಜೆಪಿಗರು ಹೇಳುತ್ತಾರೆ.

ಕಳೆದ ವಿಧಾನ ಸಭಾ ಚುನಾವಣೆ ಹೊತ್ತಲ್ಲಿ ನಿಗೂಢವಾಗಿ ಸಾವಗೀಡಾಗಿದ್ದ ಮೀನುಗಾರರ ಹುಡುಗ ಪರೇಶ್ ಮೇಸ್ತನ ಹೆಸರಲ್ಲಿ ಇಡೀ ಕರಾವಳಿಯ ಮೀನುಗಾರರ ಮತ ಪಡೆದಿದ್ದ ಬಿಜೆಪಿಯವರು ಆ ಬಳಿಕ ಉದಾಸೀನ ಮಾಡಿದ್ದರೆಂಬ ಬೇಸರ ಬೆಸ್ತರಲ್ಲಿತ್ತು. ಅಲ್ಲದೆ ಕಾರವಾರದ ವಾಣಿಜ್ಯ ಬಂದರು ವಿಸ್ತರಣೆಯಿಂದ ತೊಂದರೆಗೀಡಾಗುವ ಮೀನುಗಾರರು ಬಿಜೆಪಿ ಮೇಲೆ ಸಿಟ್ಟಾಗಿದ್ದಾರೆ. ಇದೆಲ್ಲ ಸರಿ ತೂಗಿಸಲು ಮೀನುಗಾರ ಪಂಗಡದ ಉಳ್ವೇಕರ್‌ಗೆ ಟಿಕೆಟ್ ಕೊಟ್ಟು ಅರ್ಹರಿಗೆ ಮೋಸ ಮಾಡಲಾಗಿದೆ ಎಂದು ಬಿಜೆಪಿ ಬಂಡಯಗಾರರು ಹೇಳುತ್ತಿದ್ದಾರೆ.

ಭಟ್ಕಳದ ಬಿಜೆಪಿ ಕಾರ್ಯರ್ಕರು ಸಾಮಾಜಿಕ ಜಾಲತಾಣದಲ್ಲಿ ”ನಿಷ್ಟಾವಂತರಾಗಿ, ಪ್ರಾಮಾಣಿಕರಾಗಿ ದುಡಿದವರಿಗೆ ಬಿಜೆಪಿಯಲ್ಲಿ ಅಧಿಕಾರ ಪಡೆಯಲು ಅವಕಾಶವಿಲ್ಲ. ಪೊಲೀಸ್ ಕೇಸ್ ಹಾಕಿಸಿಕೊಳ್ಳಲು, ಜೈಲಿಗೆ ಹೋಗಲು ಮಾತ್ರ ನಿಷ್ಟಾವಂತರು ಬೇಕೆ?” ಎಂಬ ಅಭಿಯಾನ ಶುರು ಹಚ್ಚಿಕೊಂಡಿದ್ದಾರೆ. ಬಹುಸಂಖ್ಯಾತ ನಾಮಧಾರಿ ಜಾತಿಯ ಭಟ್ಕಳದ ಗೋವಿಂದ ನಾಯ್ಕ್‌ಗೆ ಟಿಕೆಟ್ ಕೊಡುವಂತೆ ಒತ್ತಾಯಿಸಲಾಗಿತ್ತು. ಕೊನೆ ದಿನದವರೆಗೂ ಹಿಂದೂ ಸಂಘಟನೆಯ ಗೋವಿಂದ ನಾಯ್ಕರಿಗೆ ಟಿಕೆಟ್ ಎಂಬ ವಾತಾವರಣವೂ ಇತ್ತು. ಅಂತಿಮವಾಗಿ ಗೋವಿಂದ ನಾಯ್ಕರಿಗೆ ಟಿಕೆಟ್ ಕೊಡದಿರುವುದು ಹಿಂದುತ್ವ ಕಾರ್ಯಕರ್ತರನ್ನು ಕೆರಳಿಸಿದೆ.

ಕೆ.ಜಿ.ನಾಯ್ಕ್

ಸಾಮಾಜಿಕ ಜಾಲ ತಾಣದಲ್ಲಿ ದೀವರು[ನಾಮಧಾರಿ]ಸಮುದಾಯಕ್ಕೆ ಅನ್ಯಾಯ ಮಾಡಲಾಗುತ್ತಿದೆ ಎಂಬ ಚರ್ಚೆ ಜೋರಾಗಿದೆ. 32 ವರ್ಷದಿಂದ ನಾನು ಬಿಜೆಪಿಯ ವಿವಿಧ ಸಂಘಟನೆಯಲ್ಲಿ ಸಕ್ರಿಯನಾಗಿದ್ದೇನೆ. ಜಿಲ್ಲಾಧ್ಯಕ್ಷನಾಗಿಯೂ ಕೆಲಸ ಮಾಡಿದ್ದೇನೆ. ಟಿಕೆಟ್ ಕೇಳಿದವರಲ್ಲಿ ನಾನೇ ಹಿರಿಯ. ಒಮ್ಮೆ ಅವಕಾಶ ಕೊಡದಿದ್ದರೆ ಪಕ್ಷದ ಸಂಘಟನೆಯಲ್ಲಿ ಮುಂದುವರಿಯಲಾರೆ. ಕಳೆದ ಮೂರು ಬಾರಿ ಕರಾವಳಿ ಕಡೆಯವರಿಗೆ ಅವಕಾಶ ಕೊಟ್ಟರೂ ಗೆಲ್ಲಲಾಗಲಿಲ್ಲ. ಈ ಬಾರಿ ಘಟ್ಟದ ಮೇಲಿನ ನನಗೆ ಟಿಕೆಟ್ ಕೊಡಿಯೆಂದು ಸಿದ್ದಾಪುರದ ಕೆ.ಜಿ.ನಾಯ್ಕ್ ಬೇಡಿಕೆ ಇಟ್ಟಿದ್ದರು. ಅವರೀಗ ಒಳಗೊಳಗೆ ಬುಸುಗುಡುತ್ತಿದ್ದಾರೆಂಬ ಮಾತು ಬಿಜೆಪಿ ವಲಯಲ್ಲಿ ಕೇಳಿಬರುತ್ತಿದೆ. ಜಿಲ್ಲಾ ಬಿಜೆಪಿ ಮಾಧ್ಯಮ ವಕ್ತಾರ ನಾಗರಾಜ ನಾಯ್ಕ್, ಗೋಕರ್ಣದ ನಾಗರಾಜ್ ನಾಯ್ಕ್ ತೊರ್ಕೆ ಹತಾಶೆಲ್ಲಿದ್ದಾರೆ.

ಈ ಗೊಣಗಾಟದ ನಡುವೆಯೇ ಅಂಕೋಲಾದ ಪಕ್ಕಾ ಸಂಘಪರಿವಾರಿ-ಮಾಜಿ ಪಟ್ಟಣ ಪಂಚಾಯತ್ ಅಧ್ಯಕ್ಷ ಭಾಸ್ಕರ್ ನಾರ್ವೇಕರ್ ಮತ್ತು ಭಟ್ಕಳ ಮೂಲದ ಹೈಕೋರ್ಟ್ ವಕೀಲ ದತ್ತಾತ್ರೇಯ ನಾಯ್ಕ್ ಬಂಡಾಯ ಅಭ್ಯರ್ಥಿಗಳಾಗಿ ಕಣಕ್ಕಿಳಿಯಲು ಸಿದ್ದರಾಗಿದ್ದಾರೆ.. .ಹಣವಿರುವವರಿಗೆ ಟಿಕೆಟ್ ಎಂತಾದರೆ ಹೋರಾಟದಲ್ಲಿ, ಸಂಘಟನೆಯಲ್ಲಿ ಕೇಸ್ ಹಾಕಿಸಿಕೊಳ್ಳುವ ನಿಷ್ಟಾವಂತರ ಪಾಡೇನು? ಎಂದು ನಾಯ್ಕ್ ಪ್ರಶ್ನಿಸುತ್ತಾರೆ. ಸಂಘ ಮೂಲದಿಂದ ಬಂದು 33 ವರ್ಷದಿಂದ ಪಾರ್ಟಿ ಕೆಲಸ ಮಾಡುತ್ತಿರವ ನನಗೆ ಟಿಕೆಟ್ ಕೊಡಿಸಿಯೆಂದು ಕಾಗೇರಿ, ಹೆಬ್ಬಾರ್, ಅನಂತ್ ಹೆಗಡೆ ಮನೆ ಬಾಗಿಲಿಗೆ ಅಲೆದಿದ್ದೇನೆ.. ಅವರ‍್ಯಾರೂ ಪ್ರಯತ್ನ ಮಾಡಿಲ್ಲ. ನಿಷ್ಟಾವಂತರಿಗೆ ನೋವಾಗಿದೆ. ಅದಕ್ಕಾಗಿ ಬಂಡಾಯ ಸ್ಪರ್ಧೆಯೆಂದು ನಾರ್ವೇಕರ್ ಸಂದಾನಕ್ಕೆ ಬಂದಿದ್ದ ಜಿಲ್ಲಾಧ್ಯಕ್ಷ ಮತ್ತು ಪ್ರಧಾನ ಕಾರ್ಯದರ್ಶಿಗೆ ಹೇಳಿಕಳಿಸಿದ್ದರೆ ಎನ್ನಲಾಗಿದೆ.

ಒಟ್ಟಿನಲ್ಲಿ ಈ ಬಂಡಾಯದಿಂದ ಬಿಜೆಪಿ ಕೈಗೆ ಬಂದ ತುತ್ತು ಬಾಯಿಗೆ ಬರುವುದು ಕಷ್ಟವಾಗಿದೆಯೆಂಬ ಚರ್ಚೆ ಜಿಲ್ಲೆಯಲ್ಲಿ ನಡೆದಿದೆ.


ಇದನ್ನೂ ಓದಿ: ಉತ್ತರ ಕನ್ನಡ; ಸ್ಥಳಿಯಾಡಳಿತ ಸಂಸ್ಥೆಗಳ ಕ್ಷೇತ್ರದ MLC ಟಿಕೆಟ್ ತಂತ್ರಗಾರಿಕೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಉತ್ತರ ಪ್ರದೇಶ| ರಸ್ತೆ ಗುಂಡಿಗೆ ಇಳಿದ ಆಂಬ್ಯುಲೆನ್ಸ್; ಮರುಜೀವ ಪಡೆದ ಮೆದುಳು ನಿಷ್ಕ್ರಿಯಗೊಂಡಿದ್ದ ಮಹಿಳೆ!

ಉತ್ತರ ಪ್ರದೇಶದ ಬರೇಲಿಯ ಖಾಸಗಿ ಆಸ್ಪತ್ರೆಯೊಂದರ ವೈದ್ಯರು ಮೆದುಳು ನಿಷ್ಕ್ರಿಯ ಎಂದು ಘೋಷಿಸಿದ್ದು, ಮಹಿಳೆಯೊಬ್ಬರ ಮೃತದೇಹವನ್ನು ಅಂತ್ಯಕ್ರಿಯೆಗಾಗಿ ಮನೆಗೆ ಸಾಗಿಸುತ್ತಿದ್ದಾಗ ಆಂಬ್ಯುಲೆನ್ಸ್ ರಸ್ತೆಯ ಗುಂಡಿಗೆ ಇಳಿದ ನಂತರ ಆಕೆ ಜೀವಂತವಾಗಿರುವ ಲಕ್ಷಣಗಳು ಕಂಡುಬಂದು...

ಪಶ್ಚಿಮ ಏಷ್ಯಾ ಸಂಘರ್ಷ: ದುಬೈ ವಿಮಾನ ನಿಲ್ದಾಣದ ಮೇಲೆ ಇರಾನ್​ ಡ್ರೋನ್​ ದಾಳಿ; ಭಾರತೀಯ ಪ್ರಜೆ ಸೇರಿ ನಾಲ್ವರಿಗೆ ಗಾಯ

ದುಬೈ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಬಳಿ ಇರಾನಿನ ಎರಡು ಡ್ರೋಣಗಳಿಂದ ದಾಳಿ ನಡೆದಿದೆ. ಈ ದಾಳಿಯಲ್ಲಿ ಓರ್ವ ಭಾರತೀಯ ಸೇರಿದಂತೆ ನಾಲ್ವರು ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಅಲ್ಲಿನ ಸರ್ಕಾರದ ಪರವಾಗಿ ಪ್ರಕಟಣೆ ಹೊರಡಿಸಿರುವ...

ಜಾರ್ಖಂಡ್| ಆಂಬ್ಯುಲೆನ್ಸ್ ನಿರಾಕರಿಸಿದ ಆಸ್ಪತ್ರೆ ಸಿಬ್ಬಂದಿ; ಕಾರ್ಡ್‌ಬೋರ್ಡ್‌ನಲ್ಲಿ ಮಗುವಿನ ಶವ ಸಾಗಿಸಿದ ತಂದೆ

ಆಸ್ಪತ್ರೆ ಸಿಬ್ಬಂದಿ ಆಂಬ್ಯುಲೆನ್ಸ್ ನಿರಾಕರಿಸಿದ್ದರಿಂದ ಕೂಲಿಕಾರ ತಂದೆಯೊಬ್ಬ ಕಾರ್ಡ್‌ಬೋರ್ಡ್‌ನಲ್ಲಿ ಮಗುವಿನ ಶವ ಸಾಗಿಸಿರುವ ಹೃದಯವಿದ್ರಾವಕ ಘಟನೆಯೊಂದು ಜಾರ್ಖಂಡ್‌ನ ಪಶ್ಚಿಮ ಸಿಂಗ್ಭೂಮ್ ಜಿಲ್ಲೆಯಲ್ಲಿ ಬೆಳಕಿಗೆ ಬಂದಿದೆ. ಕಳೆದ ಶನಿವಾರ ನಡೆದಿದೆ ಎನ್ನಲಾದ...

ಮಧುರಾಂತಕಂ ಬಳಿ 14 ವರ್ಷದ ಬಾಲಕಿಯ ಮೇಲೆ ಸಾಮೂಹಿಕ ಅತ್ಯಾಚಾರ: ಪೋಕ್ಸೋ ಪ್ರಕರಣದಡಿ ಓರ್ವ ರೌಡಿ ಶೀಟರ್ ಬಂಧನ

ಚೆನ್ನೈ (ಚೆಂಗಲ್ಪಟ್ಟು): ಸೋಮವಾರ ರಾತ್ರಿ ಮಧುರಾಂಟಕಂ ಬಳಿಯ ಜಲಮೂಲದ ದಡದಲ್ಲಿ 14 ವರ್ಷದ ಬಾಲಕಿಯ ಮೇಲೆ ರೌಡಿ ಶೀಟರ್ ಮತ್ತು ಆತನ ಸಹಚರರು ಸಾಮೂಹಿಕ ಅತ್ಯಾಚಾರ ಎಸಗಿದ್ದಾರೆ ಎಂದು ವರದಿಯಾಗಿದೆ. ಪ್ರಕರಣ ಸಂಬಂಧ ಪೋಕ್ಸೋ...

ಮುಸ್ಲಿಂ ಮಹಿಳೆಯರ ವಿರುದ್ಧದ ಷರಿಯಾ ಕಾನೂನಿಗೆ ಏಕರೂಪ ನಾಗರಿಕ ಸಂಹಿತೆ ಪರಿಹಾರ: ಸುಪ್ರೀಂ ಕೋರ್ಟ್

"ಮುಸ್ಲಿಂ ವೈಯಕ್ತಿಕ ಕಾನೂನಿನಡಿಯಲ್ಲಿ ತಾರತಮ್ಯದ ಆನುವಂಶಿಕ ನಿಬಂಧನೆಗಳನ್ನು ಪರಿಹರಿಸಲು ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಅತ್ಯಂತ ಪರಿಣಾಮಕಾರಿ ಪರಿಹಾರ ಎಂದು ಸುಪ್ರೀಂ ಕೋರ್ಟ್ ಮಂಗಳವಾರ (ಮಾ.20) ಹೇಳಿದೆ. ಮುಖ್ಯ ನ್ಯಾಯಮೂರ್ತಿ ಸೂರ್ಯ...

ಮುಂಬೈ: ಬಜೆಟ್ ಅಧಿವೇಶನದ ನಡುವೆ ವಿಧಾನ ಭವನದ ಬಳಿ ವ್ಯಕ್ತಿಯೊಬ್ಬನಿಂದ ಆತ್ಮಹತ್ಯೆಗೆ ಯತ್ನ: ವಶಕ್ಕೆ ಪಡೆದ ಪೊಲೀಸರು

ಮುಂಬೈ: ಮಾರ್ಚ್ 11, ಬುಧವಾರ ಮಹಾರಾಷ್ಟ್ರ ವಿಧಾನ ಭವನದ ಹೊರಗೆ ವ್ಯಕ್ತಿಯೊಬ್ಬರು ಆತ್ಮಾಹುತಿ ಮಾಡಿಕೊಳ್ಳಲು ಯತ್ನಿಸಿರುವುದಾಗಿ ವರದಿಯಾಗಿದೆ. ತಕ್ಷಣವೇ ಮುಂಬೈ ಪೊಲೀಸರು ಆತನನ್ನು ಬಂಧಿಸಿದ್ದಾರೆ.  2026 ರ ಮಹಾರಾಷ್ಟ್ರ ಬಜೆಟ್ ಅಧಿವೇಶನ ವಿಧಾನ ಭವನದಲ್ಲಿ...

ಕೋವಿಡ್ ಲಸಿಕೆ ಕೆಲ ಸಾವುಗಳಿಗೆ ಕಾರಣವಾಗಿದೆ ಎಂದು ಅಧಿಕೃತ ದತ್ತಾಂಶ ತೋರಿಸಿದೆ, ಸರ್ಕಾರ ಜವಾಬ್ದಾರಿಯಿಂದ ನುಣುಚಿಕೊಳ್ಳಲು ಸಾಧ್ಯವಿಲ್ಲ : ಸುಪ್ರೀಂ ಕೋರ್ಟ್

ಸರ್ಕಾರದ ಅಧೀನದ ಸಾರ್ವಜನಿಕ ಆರೋಗ್ಯ ವ್ಯವಸ್ಥೆಯ ಮೂಲಕ ಕೋವಿಡ್ ಲಸಿಕೆಯನ್ನು ವಿತರಿಸಲಾಗಿದೆ. ಕೋವಿಡ್ ಲಸಿಕೆ ಪಡೆದ ಬಳಿಕ ಕೆಲ ಸಾವುಗಳು ಸಂಭವಿಸಿರುವುದನ್ನು ಅಧಿಕೃತ ದತ್ತಾಂಶಗಳೇ ದೃಢಪಡಿಸಿವೆ. ಹೀಗಿರುವಾಗ, ಲಸಿಕೆ ಹಾಕಿಸಿಕೊಂಡ ನಂತರ ಸಾವು...

ತಮಿಳುನಾಡು| ಪೊಲೀಸ್ ದೌರ್ಜನ್ಯದಿಂದ ಎರಡು ತಿಂಗಳಲ್ಲಿ ನಾಲ್ವರು ದಲಿತರು ಸಾವು

ವಿಧಾನಸಭೆ ಚುನಾವಣೆ ಹೊಸ್ತಿಲಲ್ಲಿರುವ ತಮಿಳುನಾಡಿನಲ್ಲಿ ಕಾನೂನು ಸುವ್ಯವಸ್ಥೆ ಹದಗೆಡುತ್ತಿರುವುದನ್ನು ಪ್ರತಿಬಿಂಬಿಸುವ ಆತಂಕಕಾರಿ ವಿಚಾರವೊಂದು ಮುನ್ನಲೆಗೆ ಬಂದಿದ್ದು, ಪೊಲೀಸ್ ಹಿಂಸಾಚಾರದಿಂದಾಗಿ ಎರಡು ತಿಂಗಳ ಅವಧಿಯಲ್ಲಿ ನಾಲ್ವರು ದಲಿತರು ಸಾವನ್ನಪ್ಪಿದ್ದಾರೆ. ಈ ಸಾವುಗಳಲ್ಲಿ, ಎರಡು ಪ್ರಕರಣಗಳನ್ನು...

ಪಶ್ಚಿಮ ಏಷ್ಯಾ ಸಂಘರ್ಷ| ಹಾರ್ಮುಜ್ ಜಲಸಂಧಿಯಲ್ಲಿ ಇರಾನಿನ 16 ಹಡಗುಗಳನ್ನು ನಾಶಪಡಿಸಿದ್ದಾಗಿ ವಿಡಿಯೋ ಹಂಚಿಕೊಂಡ ಅಮೆರಿಕ ಸೇನೆ

ಪಶ್ಚಿಮ ಏಷ್ಯಾದಿಂದ ತೈಲ ರಫ್ತನ್ನು ತಡೆಯಲು ಇರಾನ್ ಪ್ರಯತ್ನಿಸುತ್ತಿರುವುದರಿಂದ ಹಾರ್ಮುಜ್ ಜಲಸಂಧಿಯಲ್ಲಿ ಇರಾನಿನ 16 ಹಡಗುಗಳನ್ನು ನಾಶಪಡಿಸಿರುವುದಾಗಿ ಅಮೆರಿಕ ಸೇನೆ ಹೇಳಿಕೊಂಡಿದೆ.  ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಈ ಹಿಂದೆ ಇರಾನ್ ಜಲಸಂಧಿಯಲ್ಲಿ ಗಣಿಗಳನ್ನು...

13 ವರ್ಷಗಳಿಂದ ಕೋಮಾದಲ್ಲಿರುವ ಯುವಕನ ದಯಾಮರಣಕ್ಕೆ ಸುಪ್ರೀಂ ಕೋರ್ಟ್ ಅನುಮತಿ

ಕಳೆದ 13 ವರ್ಷಗಳಿಂದ ಕೋಮಾದಲ್ಲಿರುವ 32 ವರ್ಷದ ಹರೀಶ್ ರಾಣಾ ಎಂಬ ಯುವಕನ ಪರೋಕ್ಷ (ನಿಷ್ಕ್ರಿಯ) ದಯಾಮರಣಕ್ಕೆ ಸುಪ್ರೀಂ ಕೋರ್ಟ್ ಬುಧವಾರ (ಮಾ.11) ಅನುಮತಿ ನೀಡಿದೆ ಎಂದು livelaw.in ವರದಿ ಮಾಡಿದೆ. ದೆಹಲಿ ಮೂಲದ ಹರೀಶ್...