Homeಕರ್ನಾಟಕವಿಧಾನ ಪರಿಷತ್‌ಗೆ ಟಿಕೆಟ್ ಪೈಪೋಟಿ; ಉತ್ತರ ಕನ್ನಡ ಬಿಜೆಪಿಯಲ್ಲಿ ಬೆಂಕಿ!!

ವಿಧಾನ ಪರಿಷತ್‌ಗೆ ಟಿಕೆಟ್ ಪೈಪೋಟಿ; ಉತ್ತರ ಕನ್ನಡ ಬಿಜೆಪಿಯಲ್ಲಿ ಬೆಂಕಿ!!

- Advertisement -
- Advertisement -

ಉತ್ತರ ಕನ್ನಡದಲ್ಲಿ ವಿಧಾನ ಪರಿಷತ್ತಿಗೆ ಸ್ಥಳಿಯಾಡಳಿತ ಸಂಸ್ಥೆಗಳ ಕ್ಷೇತ್ರದಿಂದ ನಡೆಯಲಿರುವ ಚುನಾವಣೆ ಆಖಾಡಕ್ಕೀಗ ರಂಗೇರಿದೆ! ಆಡಳಿತಾರೂಢ ಬಿಜೆಪಿಯಲ್ಲಿ ತಿಂಗಳಾನುಗಟ್ಟಳೆ ನಡೆದ ಟಿಕೆಟ್‌ಗೆ ಪೈಪೋಟಿಗೆ ಬ್ರೇಕ್ ಬಿದ್ದಿದ್ದು, ಕಾರವಾರದ ಮೀನುಗಾರ ಸಮುದಾಯದ ಗಣಪತಿ ದುಮ್ಮಾ ಉಳ್ವೇಕರ್‌ರನ್ನು ಅಭ್ಯರ್ಥಿಯೆಂದು ಘೋಷಿಸಲಾಗಿದೆ. ಅಭ್ಯರ್ಥಿ ಹೆಸರು ಪ್ರಕಟವಾಗುತ್ತಿದ್ದಂತೆ ಜಿಲ್ಲಾ ಬಿಜೆಪಿಯಲ್ಲಿ ಬೆಂಕಿಬಿದ್ದಂತಾಗಿದ್ದು, ಕೆಲ ಕಾರ್ಯಕರ್ತರು ಸಾಮಾಜಿಕ ಜಾಲತಾಣದಲ್ಲಿ ಅಸಮಾಧಾನ ಹೊರಹಾಕುತ್ತಿದ್ದಾರೆ.

ಬಿಜೆಪಿ ತನ್ನ ಭಾರಕ್ಕೆ ತಾನೆ ಕುಸಿಯುತ್ತಿದೆ; ಹಾದಿ-ಬೀದಿಯಲ್ಲಿ ಹೋಗುವವರನ್ನೆಲ್ಲ ಕಾಂಗ್ರೆಸ್ಸಿಂದ ಬಂದವರೆಂದು ಹೇಳಿ ತಂದು ತುಂಬಿಕೊಂಡಿದ್ದರ ಫಲವಿದು ಎಂದು ಎರಡ್ಮೂರು ದಶಕದಿಂದ ಪಕ್ಷಕ್ಕಾಗಿ ಬೆವರಿಳಿಸಿದ ಹಿರಿಯರು ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ. ಬಿಜೆಪಿಯ ಕಷ್ಟದ ದಿನಗಳಿಂದಲೂ ಆ ಪಾರ್ಟಿಯಲ್ಲಿದ್ದವರೂ ಸೇರಿದಂತೆ ಸುಮಾರು ಒಂದೂ ಮುಕ್ಕಾಲು ಡಜನ್ ಮಂದಿ ಟಿಕೆಟ್‌ಗಾಗಿ ಲಾಭಿ ನಡೆಸಿದ್ದರು. ಸ್ಪೀಕರ್ ವಿಶ್ವೇಶ್ವರ ಹೆಗಡೆ ಕಾಗೇರಿ, ಮಂತ್ರಿ ಹೆಬ್ಬಾರ್, ಸಂಸದ ಅನಂತಕುಮಾರ್ ಹೆಗಡೆ ಮತ್ತು ಶಾಸಕಿ ರೂಪಾಲಿ ನಾಯ್ಕ್ ಒಂದಾಗಿ ಉಳ್ವೇಕರ್ ಕ್ಯಾಂಡಿಡೇಟ್ ಮಾಡಿದ್ದಾರೆನ್ನಲಾಗಿದೆ.

ಗೋವಿಂದ ನಾಯ್ಕ್‌

ಕಳೆದ ಬಾರಿ ಸೋಲುತ್ತಾರೆಂದು ಗೊತ್ತಿದ್ದೂ ಉಳ್ವೇಕರ್‌ರನ್ನು ನಿಲ್ಲಿಸಲಾಗಿತ್ತು. ಈಗ ಗೆಲ್ಲುವ ಅವಕಾಶವಿರುವಾಗ ಅಂದು ಪಟ್ಟ ಕಷ್ಟಕ್ಕೆ ಇನಾಮು ಕೊಡಬೇಕಾದುದು ಧರ್ಮವೆಂದು ಪಕ್ಷದ ಹಿರಿಯರು ಹೇಳುತ್ತಿದ್ದಾರಾದರೂ, ಇದೆಲ್ಲ ಮುನಿಸಿಕೊಂಡಿರುವ ಮೀನುಗಾರ ಸಮುದಾಯವನ್ನು ಸಮಾಧಾನಿಸುವ ನಾಟಕವೆಂದು ಟಿಕೆಟ್ ವಂಚಿತರ ಬೆಂಬಲಿಗರ ಅಭಿಪ್ರಾಯವಾಗಿದೆ. ಉಳ್ವೇಕರ್ ನಿಷ್ಟಾವಂತ ಬಿಜೆಪಿಗರಲ್ಲ; ಅವರು ಆನಂದ ಅಸ್ನೋಟಿಕರ್ ಮತ್ತವರ ತಂದೆಯ ಹಿಂಬಾಲಕರಾಗಿದ್ದರು. ಆನಂದ ಬಿಜೆಪಿಗೆ ಬಂದಾಗ ಅವರೊಂದಿಗೆ ಉಳ್ವೇಕರ್ ಬಂದಿದ್ದರು. ಆದರೆ ಆನಂದ್ ಜತೆಗಿನ ಬಂದರು ವ್ಯವಹಾರದ ವೈಮನಸ್ಸಿನಿಂದ ಉಳ್ವೇಕರ್ ಬಿಜೆಪಿಯಲ್ಲೆ ಉಳಿದರೆಂಬುದು ಕಟ್ಟರ್ ಬಿಜೆಪಿಗರು ಹೇಳುತ್ತಾರೆ.

ಕಳೆದ ವಿಧಾನ ಸಭಾ ಚುನಾವಣೆ ಹೊತ್ತಲ್ಲಿ ನಿಗೂಢವಾಗಿ ಸಾವಗೀಡಾಗಿದ್ದ ಮೀನುಗಾರರ ಹುಡುಗ ಪರೇಶ್ ಮೇಸ್ತನ ಹೆಸರಲ್ಲಿ ಇಡೀ ಕರಾವಳಿಯ ಮೀನುಗಾರರ ಮತ ಪಡೆದಿದ್ದ ಬಿಜೆಪಿಯವರು ಆ ಬಳಿಕ ಉದಾಸೀನ ಮಾಡಿದ್ದರೆಂಬ ಬೇಸರ ಬೆಸ್ತರಲ್ಲಿತ್ತು. ಅಲ್ಲದೆ ಕಾರವಾರದ ವಾಣಿಜ್ಯ ಬಂದರು ವಿಸ್ತರಣೆಯಿಂದ ತೊಂದರೆಗೀಡಾಗುವ ಮೀನುಗಾರರು ಬಿಜೆಪಿ ಮೇಲೆ ಸಿಟ್ಟಾಗಿದ್ದಾರೆ. ಇದೆಲ್ಲ ಸರಿ ತೂಗಿಸಲು ಮೀನುಗಾರ ಪಂಗಡದ ಉಳ್ವೇಕರ್‌ಗೆ ಟಿಕೆಟ್ ಕೊಟ್ಟು ಅರ್ಹರಿಗೆ ಮೋಸ ಮಾಡಲಾಗಿದೆ ಎಂದು ಬಿಜೆಪಿ ಬಂಡಯಗಾರರು ಹೇಳುತ್ತಿದ್ದಾರೆ.

ಭಟ್ಕಳದ ಬಿಜೆಪಿ ಕಾರ್ಯರ್ಕರು ಸಾಮಾಜಿಕ ಜಾಲತಾಣದಲ್ಲಿ ”ನಿಷ್ಟಾವಂತರಾಗಿ, ಪ್ರಾಮಾಣಿಕರಾಗಿ ದುಡಿದವರಿಗೆ ಬಿಜೆಪಿಯಲ್ಲಿ ಅಧಿಕಾರ ಪಡೆಯಲು ಅವಕಾಶವಿಲ್ಲ. ಪೊಲೀಸ್ ಕೇಸ್ ಹಾಕಿಸಿಕೊಳ್ಳಲು, ಜೈಲಿಗೆ ಹೋಗಲು ಮಾತ್ರ ನಿಷ್ಟಾವಂತರು ಬೇಕೆ?” ಎಂಬ ಅಭಿಯಾನ ಶುರು ಹಚ್ಚಿಕೊಂಡಿದ್ದಾರೆ. ಬಹುಸಂಖ್ಯಾತ ನಾಮಧಾರಿ ಜಾತಿಯ ಭಟ್ಕಳದ ಗೋವಿಂದ ನಾಯ್ಕ್‌ಗೆ ಟಿಕೆಟ್ ಕೊಡುವಂತೆ ಒತ್ತಾಯಿಸಲಾಗಿತ್ತು. ಕೊನೆ ದಿನದವರೆಗೂ ಹಿಂದೂ ಸಂಘಟನೆಯ ಗೋವಿಂದ ನಾಯ್ಕರಿಗೆ ಟಿಕೆಟ್ ಎಂಬ ವಾತಾವರಣವೂ ಇತ್ತು. ಅಂತಿಮವಾಗಿ ಗೋವಿಂದ ನಾಯ್ಕರಿಗೆ ಟಿಕೆಟ್ ಕೊಡದಿರುವುದು ಹಿಂದುತ್ವ ಕಾರ್ಯಕರ್ತರನ್ನು ಕೆರಳಿಸಿದೆ.

ಕೆ.ಜಿ.ನಾಯ್ಕ್

ಸಾಮಾಜಿಕ ಜಾಲ ತಾಣದಲ್ಲಿ ದೀವರು[ನಾಮಧಾರಿ]ಸಮುದಾಯಕ್ಕೆ ಅನ್ಯಾಯ ಮಾಡಲಾಗುತ್ತಿದೆ ಎಂಬ ಚರ್ಚೆ ಜೋರಾಗಿದೆ. 32 ವರ್ಷದಿಂದ ನಾನು ಬಿಜೆಪಿಯ ವಿವಿಧ ಸಂಘಟನೆಯಲ್ಲಿ ಸಕ್ರಿಯನಾಗಿದ್ದೇನೆ. ಜಿಲ್ಲಾಧ್ಯಕ್ಷನಾಗಿಯೂ ಕೆಲಸ ಮಾಡಿದ್ದೇನೆ. ಟಿಕೆಟ್ ಕೇಳಿದವರಲ್ಲಿ ನಾನೇ ಹಿರಿಯ. ಒಮ್ಮೆ ಅವಕಾಶ ಕೊಡದಿದ್ದರೆ ಪಕ್ಷದ ಸಂಘಟನೆಯಲ್ಲಿ ಮುಂದುವರಿಯಲಾರೆ. ಕಳೆದ ಮೂರು ಬಾರಿ ಕರಾವಳಿ ಕಡೆಯವರಿಗೆ ಅವಕಾಶ ಕೊಟ್ಟರೂ ಗೆಲ್ಲಲಾಗಲಿಲ್ಲ. ಈ ಬಾರಿ ಘಟ್ಟದ ಮೇಲಿನ ನನಗೆ ಟಿಕೆಟ್ ಕೊಡಿಯೆಂದು ಸಿದ್ದಾಪುರದ ಕೆ.ಜಿ.ನಾಯ್ಕ್ ಬೇಡಿಕೆ ಇಟ್ಟಿದ್ದರು. ಅವರೀಗ ಒಳಗೊಳಗೆ ಬುಸುಗುಡುತ್ತಿದ್ದಾರೆಂಬ ಮಾತು ಬಿಜೆಪಿ ವಲಯಲ್ಲಿ ಕೇಳಿಬರುತ್ತಿದೆ. ಜಿಲ್ಲಾ ಬಿಜೆಪಿ ಮಾಧ್ಯಮ ವಕ್ತಾರ ನಾಗರಾಜ ನಾಯ್ಕ್, ಗೋಕರ್ಣದ ನಾಗರಾಜ್ ನಾಯ್ಕ್ ತೊರ್ಕೆ ಹತಾಶೆಲ್ಲಿದ್ದಾರೆ.

ಈ ಗೊಣಗಾಟದ ನಡುವೆಯೇ ಅಂಕೋಲಾದ ಪಕ್ಕಾ ಸಂಘಪರಿವಾರಿ-ಮಾಜಿ ಪಟ್ಟಣ ಪಂಚಾಯತ್ ಅಧ್ಯಕ್ಷ ಭಾಸ್ಕರ್ ನಾರ್ವೇಕರ್ ಮತ್ತು ಭಟ್ಕಳ ಮೂಲದ ಹೈಕೋರ್ಟ್ ವಕೀಲ ದತ್ತಾತ್ರೇಯ ನಾಯ್ಕ್ ಬಂಡಾಯ ಅಭ್ಯರ್ಥಿಗಳಾಗಿ ಕಣಕ್ಕಿಳಿಯಲು ಸಿದ್ದರಾಗಿದ್ದಾರೆ.. .ಹಣವಿರುವವರಿಗೆ ಟಿಕೆಟ್ ಎಂತಾದರೆ ಹೋರಾಟದಲ್ಲಿ, ಸಂಘಟನೆಯಲ್ಲಿ ಕೇಸ್ ಹಾಕಿಸಿಕೊಳ್ಳುವ ನಿಷ್ಟಾವಂತರ ಪಾಡೇನು? ಎಂದು ನಾಯ್ಕ್ ಪ್ರಶ್ನಿಸುತ್ತಾರೆ. ಸಂಘ ಮೂಲದಿಂದ ಬಂದು 33 ವರ್ಷದಿಂದ ಪಾರ್ಟಿ ಕೆಲಸ ಮಾಡುತ್ತಿರವ ನನಗೆ ಟಿಕೆಟ್ ಕೊಡಿಸಿಯೆಂದು ಕಾಗೇರಿ, ಹೆಬ್ಬಾರ್, ಅನಂತ್ ಹೆಗಡೆ ಮನೆ ಬಾಗಿಲಿಗೆ ಅಲೆದಿದ್ದೇನೆ.. ಅವರ‍್ಯಾರೂ ಪ್ರಯತ್ನ ಮಾಡಿಲ್ಲ. ನಿಷ್ಟಾವಂತರಿಗೆ ನೋವಾಗಿದೆ. ಅದಕ್ಕಾಗಿ ಬಂಡಾಯ ಸ್ಪರ್ಧೆಯೆಂದು ನಾರ್ವೇಕರ್ ಸಂದಾನಕ್ಕೆ ಬಂದಿದ್ದ ಜಿಲ್ಲಾಧ್ಯಕ್ಷ ಮತ್ತು ಪ್ರಧಾನ ಕಾರ್ಯದರ್ಶಿಗೆ ಹೇಳಿಕಳಿಸಿದ್ದರೆ ಎನ್ನಲಾಗಿದೆ.

ಒಟ್ಟಿನಲ್ಲಿ ಈ ಬಂಡಾಯದಿಂದ ಬಿಜೆಪಿ ಕೈಗೆ ಬಂದ ತುತ್ತು ಬಾಯಿಗೆ ಬರುವುದು ಕಷ್ಟವಾಗಿದೆಯೆಂಬ ಚರ್ಚೆ ಜಿಲ್ಲೆಯಲ್ಲಿ ನಡೆದಿದೆ.


ಇದನ್ನೂ ಓದಿ: ಉತ್ತರ ಕನ್ನಡ; ಸ್ಥಳಿಯಾಡಳಿತ ಸಂಸ್ಥೆಗಳ ಕ್ಷೇತ್ರದ MLC ಟಿಕೆಟ್ ತಂತ್ರಗಾರಿಕೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಐ-ಪ್ಯಾಕ್ ಮೇಲೆ ದಾಳಿ ಪ್ರಕರಣ: ಮಮತಾ ಬ್ಯಾನರ್ಜಿ ದೂರಿನ ಬೆನ್ನಲ್ಲೇ ಜಾರಿ ನಿರ್ದೇಶನಾಲಯದ ವಿರುದ್ಧ ಎಫ್‌ಐಆರ್

ಕೋಲ್ಕತ್ತಾ: ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ನಿವಾಸದ ಮೇಲೆ ಜಾರಿ ನಿರ್ದೇಶನಾಲಯ ನಡೆಸಿದ ದಾಳಿಗೆ ಸಂಬಂಧಿಸಿದಂತೆ ಟಿಎಂಸಿ ಅಧ್ಯಕ್ಷೆ ಮಮತಾ ಬ್ಯಾನರ್ಜಿ...

‘ಭ್ರಷ್ಟ ಜನತಾ ಪಾರ್ಟಿ’: ಬಿಜೆಪಿ ಡಬಲ್ ಎಂಜಿನ್ ಆಡಳಿತದ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ

ನವದೆಹಲಿ: ವಿವಿಧ ರಾಜ್ಯಗಳಲ್ಲಿ ಬಿಜೆಪಿಯ ಡಬಲ್ ಎಂಜಿನ್ ಸರ್ಕಾರಗಳ ವಿರುದ್ಧ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಾಗ್ದಾಳಿ ನಡೆಸಿದ್ದಾರೆ.  ತಮ್ಮ ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ರಾಹುಲ್, ಉತ್ತರಾಖಂಡದಲ್ಲಿ ಅಂಕಿತ...

ಇಂದೋರ್‌ನಲ್ಲಿ ಕಲುಷಿತ ನೀರಿಗೆ 8 ಮಂದಿ ಬಲಿ: ಆರ್‌ಎಸ್‌ಎಸ್ ಕಚೇರಿಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್: ಭುಗಿಲೆದ್ದ ವಿವಾದ

ಇಂದೋರ್: ಆರ್‌ಎಸ್‌ಎಸ್ ಕಚೇರಿಯಲ್ಲಿ ಬುಧವಾರ ತಡರಾತ್ರಿ ನಡೆದ ಸಭೆಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್ ಭಾಗವಹಿಸಿದ್ದು ಕಂಡುಬಂದ ನಂತರ ಗುರುವಾರ ಇಂದೋರ್‌ನಲ್ಲಿ ರಾಜಕೀಯ ವಿವಾದ ಭುಗಿಲೆದ್ದಿದೆ.  ಕನಿಷ್ಠ ಎಂಟು ಮಂದಿ ಜೀವಗಳನ್ನು ಬಲಿ ಪಡೆದಿರುವ ಕಲುಷಿತ...

ಐ-ಪ್ಯಾಕ್ ಮೇಲೆ ಇಡಿ ದಾಳಿ: ಕೋಲ್ಕತ್ತಾದಲ್ಲಿ ಮಮತಾ ಪ್ರತಿಭಟನೆ: ಅಮಿತ್ ಶಾ ಕಚೇರಿಯ ಹೊರಗೆ ಪ್ರತಿಭಟಿಸುತ್ತಿದ್ದ ಟಿಎಂಸಿ ಶಾಸಕರ ಬಂಧನ

ಗುರುವಾರ (ಜ.8) ಬೆಳಿಗ್ಗೆ ಕೋಲ್ಕತ್ತಾದ ಸಾಲ್ಟ್ ಲೇಕ್‌ನಲ್ಲಿರುವ ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ನಡೆಸಿದ...

ಮಹಾರಾಷ್ಟ್ರ ಜಲ್ನಾ ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಪ್ರಕರಣದ ಪ್ರಮುಖ ಆರೋಪಿ ಸ್ಪರ್ಧೆ!

ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆಯ ಆರೋಪಿ ಶ್ರೀಕಾಂತ್ ಪಂಗಾರ್ಕರ್ ಮುಂಬರುವ ಜಲ್ನಾ ಮುನ್ಸಿಪಲ್ ಕಾರ್ಪೊರೇಷನ್ ಚುನಾವಣೆಯಲ್ಲಿ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತಿದ್ದಾರೆ ಎಂಬ ಸುದ್ದಿ  ಹಲವು ರಾಷ್ಟ್ರೀಯ ಮಾಧ್ಯಮಗಳಲ್ಲಿ ವರದಿಯಾಗಿದೆ.  ಗೌರಿ ಲಂಕೇಶ್ ಹತ್ಯೆ ಸೇರಿದಂತೆ...

‘ಮೋದಿ ಟ್ರಂಪ್‌ಗೆ ಕರೆ ಮಾಡದ ಕಾರಣ ಭಾರತ-ಯುಎಸ್ ವ್ಯಾಪಾರ ಒಪ್ಪಂದ ನಡೆಯಲಿಲ್ಲ’: ಹೊವಾರ್ಡ್ ಲುಟ್ನಿಕ್ 

ಪ್ರಧಾನಿ ನರೇಂದ್ರ ಮೋದಿ ಅವರು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರಿಗೆ ಸರಿಯಾದ ಸಮಯಕ್ಕೆ ಕರೆ ಮಾಡದ ಕಾರಣ ಭಾರತದೊಂದಿಗಿನ ವ್ಯಾಪಾರ ಒಪ್ಪಂದ ನಡೆಯಲಿಲ್ಲ ಎಂದು ಅಮೆರಿಕದ ವಾಣಿಜ್ಯ ಕಾರ್ಯದರ್ಶಿ ಹೊವಾರ್ಡ್ ಲುಟ್ನಿಕ್...

‘ರೈಲ್ವೆ ಸಚಿವಾಲಯವನ್ನು ವೈಯಕ್ತಿಕ ಆಸ್ತಿಯಾಗಿ ಬಳಸಿಕೊಳ್ಳಲಾಗಿದೆ’: ಲಾಲು ಮತ್ತು ಕುಟುಂಬದ ವಿರುದ್ಧ ದೆಹಲಿ ನ್ಯಾಯಾಲಯ ಆರೋಪ

ನವದೆಹಲಿ: ಉದ್ಯೋಗಕ್ಕಾಗಿ ಭೂಮಿ ಹಗರಣದಲ್ಲಿ ಆರ್‌ಜೆಡಿ ಮುಖ್ಯಸ್ಥ ಮತ್ತು ಮಾಜಿ ರೈಲ್ವೆ ಸಚಿವ ಲಾಲು ಪ್ರಸಾದ್ ಯಾದವ್, ಅವರ ಕುಟುಂಬದ ಸದಸ್ಯರು ಮತ್ತು ಇತರರ ವಿರುದ್ಧ ದೆಹಲಿ ನ್ಯಾಯಾಲಯ ಗಂಭೀರ ಆರೋಪಗಳನ್ನು ಮಾಡಿದೆ.  ಯಾದವ್...

‘ಕೇರಳದ ಮಲಯಾಳಂ ಮಸೂದೆಯನ್ನು ವಿರೋಧಿಸಲು ಸಾಧ್ಯವಿರುವ ಎಲ್ಲವನ್ನೂ ಮಾಡುತ್ತೇವೆ’: ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಕನ್ನಡ ಮಾಧ್ಯಮ ಶಾಲೆಗಳಲ್ಲಿಯೂ ಮಲಯಾಳಂ ಅನ್ನು ಪ್ರಥಮ ಭಾಷೆಯನ್ನಾಗಿ ಮಾಡುವ ಕೇರಳದ ಪ್ರಸ್ತಾವಿತ ಕಾನೂನನ್ನು ವಿರೋಧಿಸಲು ಕರ್ನಾಟಕ "ಸಾಧ್ಯವಾದಷ್ಟು ಪ್ರಯತ್ನಿಸುತ್ತದೆ" ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.   ಪ್ರಸ್ತಾವಿತ ಮಲಯಾಳಂ ಭಾಷಾ ಮಸೂದೆಯು "ಕೇರಳದ...

ಜಾರ್ಖಂಡ್‌ನಲ್ಲಿ ಮತ್ತೊಂದು ಗುಂಪುಹತ್ಯೆ: ದನ ಕಳ್ಳತನದ ಶಂಕೆಯಲ್ಲಿ ಮುಸ್ಲಿಂ ವ್ಯಕ್ತಿಯನ್ನು ಥಳಿಸಿ ಕೊಂದ ಗುಂಪು

ಜಾರ್ಖಂಡ್‌ನ ಗೊಡ್ಡಾ ಜಿಲ್ಲೆಯಲ್ಲಿ ಬುಧವಾರ ದನಗಳನ್ನು ಕದ್ದಿದ್ದಾನೆ ಎಂಬ ಶಂಕೆಯಲ್ಲಿ 45 ವರ್ಷದ ಮುಸ್ಲಿಂ ವ್ಯಕ್ತಿಯನ್ನು ಅಪರಿಚಿತ ಜನರ ಗುಂಪೊಂದು ಹೊಡೆದು ಕೊಂದಿದೆ ಎಂದು ಪಿಟಿಐ ವರದಿ ಮಾಡಿದೆ. ಪೊಲೀಸ್ ಅಧಿಕಾರಿಗಳನ್ನು ಉಲ್ಲೇಖಿಸಿ ವರದಿ...

ನ್ಯಾಷನಲ್ ಹೆರಾಲ್ಡ್ ಜಾಹೀರಾತು ವಿವಾದ: ಹಣಕಾಸಿನ ದಾಖಲೆ ಕೇಳಿ ಡಿಕೆ ಸಹೋದರರಿಗೆ ನೋಟಿಸ್  

ಕಾಂಗ್ರೆಸ್ ನೇತೃತ್ವದ ಕರ್ನಾಟಕ ಸರ್ಕಾರದಿಂದ ನ್ಯಾಷನಲ್ ಹೆರಾಲ್ಡ್ ಪತ್ರಿಕೆಗೆ ಬೇರೆ ಯಾವುದೇ ರಾಷ್ಟ್ರೀಯ ದಿನಪತ್ರಿಕೆಗಿಂತ ಹೆಚ್ಚಿನ ಜಾಹೀರಾತು ನಿಧಿ ದೊರೆತಿದೆ ಎಂದು ವರದಿಯಾಗಿದೆ, ಇದು ಸಾರ್ವಜನಿಕ ಹಣದ ಬಳಕೆಯ ಬಗ್ಗೆ ಪ್ರಶ್ನೆಗಳನ್ನು ಹುಟ್ಟುಹಾಕಿದೆ....