Homeಕರ್ನಾಟಕವಿಧಾನ ಪರಿಷತ್‌ಗೆ ಟಿಕೆಟ್ ಪೈಪೋಟಿ; ಉತ್ತರ ಕನ್ನಡ ಬಿಜೆಪಿಯಲ್ಲಿ ಬೆಂಕಿ!!

ವಿಧಾನ ಪರಿಷತ್‌ಗೆ ಟಿಕೆಟ್ ಪೈಪೋಟಿ; ಉತ್ತರ ಕನ್ನಡ ಬಿಜೆಪಿಯಲ್ಲಿ ಬೆಂಕಿ!!

- Advertisement -
- Advertisement -

ಉತ್ತರ ಕನ್ನಡದಲ್ಲಿ ವಿಧಾನ ಪರಿಷತ್ತಿಗೆ ಸ್ಥಳಿಯಾಡಳಿತ ಸಂಸ್ಥೆಗಳ ಕ್ಷೇತ್ರದಿಂದ ನಡೆಯಲಿರುವ ಚುನಾವಣೆ ಆಖಾಡಕ್ಕೀಗ ರಂಗೇರಿದೆ! ಆಡಳಿತಾರೂಢ ಬಿಜೆಪಿಯಲ್ಲಿ ತಿಂಗಳಾನುಗಟ್ಟಳೆ ನಡೆದ ಟಿಕೆಟ್‌ಗೆ ಪೈಪೋಟಿಗೆ ಬ್ರೇಕ್ ಬಿದ್ದಿದ್ದು, ಕಾರವಾರದ ಮೀನುಗಾರ ಸಮುದಾಯದ ಗಣಪತಿ ದುಮ್ಮಾ ಉಳ್ವೇಕರ್‌ರನ್ನು ಅಭ್ಯರ್ಥಿಯೆಂದು ಘೋಷಿಸಲಾಗಿದೆ. ಅಭ್ಯರ್ಥಿ ಹೆಸರು ಪ್ರಕಟವಾಗುತ್ತಿದ್ದಂತೆ ಜಿಲ್ಲಾ ಬಿಜೆಪಿಯಲ್ಲಿ ಬೆಂಕಿಬಿದ್ದಂತಾಗಿದ್ದು, ಕೆಲ ಕಾರ್ಯಕರ್ತರು ಸಾಮಾಜಿಕ ಜಾಲತಾಣದಲ್ಲಿ ಅಸಮಾಧಾನ ಹೊರಹಾಕುತ್ತಿದ್ದಾರೆ.

ಬಿಜೆಪಿ ತನ್ನ ಭಾರಕ್ಕೆ ತಾನೆ ಕುಸಿಯುತ್ತಿದೆ; ಹಾದಿ-ಬೀದಿಯಲ್ಲಿ ಹೋಗುವವರನ್ನೆಲ್ಲ ಕಾಂಗ್ರೆಸ್ಸಿಂದ ಬಂದವರೆಂದು ಹೇಳಿ ತಂದು ತುಂಬಿಕೊಂಡಿದ್ದರ ಫಲವಿದು ಎಂದು ಎರಡ್ಮೂರು ದಶಕದಿಂದ ಪಕ್ಷಕ್ಕಾಗಿ ಬೆವರಿಳಿಸಿದ ಹಿರಿಯರು ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ. ಬಿಜೆಪಿಯ ಕಷ್ಟದ ದಿನಗಳಿಂದಲೂ ಆ ಪಾರ್ಟಿಯಲ್ಲಿದ್ದವರೂ ಸೇರಿದಂತೆ ಸುಮಾರು ಒಂದೂ ಮುಕ್ಕಾಲು ಡಜನ್ ಮಂದಿ ಟಿಕೆಟ್‌ಗಾಗಿ ಲಾಭಿ ನಡೆಸಿದ್ದರು. ಸ್ಪೀಕರ್ ವಿಶ್ವೇಶ್ವರ ಹೆಗಡೆ ಕಾಗೇರಿ, ಮಂತ್ರಿ ಹೆಬ್ಬಾರ್, ಸಂಸದ ಅನಂತಕುಮಾರ್ ಹೆಗಡೆ ಮತ್ತು ಶಾಸಕಿ ರೂಪಾಲಿ ನಾಯ್ಕ್ ಒಂದಾಗಿ ಉಳ್ವೇಕರ್ ಕ್ಯಾಂಡಿಡೇಟ್ ಮಾಡಿದ್ದಾರೆನ್ನಲಾಗಿದೆ.

ಗೋವಿಂದ ನಾಯ್ಕ್‌

ಕಳೆದ ಬಾರಿ ಸೋಲುತ್ತಾರೆಂದು ಗೊತ್ತಿದ್ದೂ ಉಳ್ವೇಕರ್‌ರನ್ನು ನಿಲ್ಲಿಸಲಾಗಿತ್ತು. ಈಗ ಗೆಲ್ಲುವ ಅವಕಾಶವಿರುವಾಗ ಅಂದು ಪಟ್ಟ ಕಷ್ಟಕ್ಕೆ ಇನಾಮು ಕೊಡಬೇಕಾದುದು ಧರ್ಮವೆಂದು ಪಕ್ಷದ ಹಿರಿಯರು ಹೇಳುತ್ತಿದ್ದಾರಾದರೂ, ಇದೆಲ್ಲ ಮುನಿಸಿಕೊಂಡಿರುವ ಮೀನುಗಾರ ಸಮುದಾಯವನ್ನು ಸಮಾಧಾನಿಸುವ ನಾಟಕವೆಂದು ಟಿಕೆಟ್ ವಂಚಿತರ ಬೆಂಬಲಿಗರ ಅಭಿಪ್ರಾಯವಾಗಿದೆ. ಉಳ್ವೇಕರ್ ನಿಷ್ಟಾವಂತ ಬಿಜೆಪಿಗರಲ್ಲ; ಅವರು ಆನಂದ ಅಸ್ನೋಟಿಕರ್ ಮತ್ತವರ ತಂದೆಯ ಹಿಂಬಾಲಕರಾಗಿದ್ದರು. ಆನಂದ ಬಿಜೆಪಿಗೆ ಬಂದಾಗ ಅವರೊಂದಿಗೆ ಉಳ್ವೇಕರ್ ಬಂದಿದ್ದರು. ಆದರೆ ಆನಂದ್ ಜತೆಗಿನ ಬಂದರು ವ್ಯವಹಾರದ ವೈಮನಸ್ಸಿನಿಂದ ಉಳ್ವೇಕರ್ ಬಿಜೆಪಿಯಲ್ಲೆ ಉಳಿದರೆಂಬುದು ಕಟ್ಟರ್ ಬಿಜೆಪಿಗರು ಹೇಳುತ್ತಾರೆ.

ಕಳೆದ ವಿಧಾನ ಸಭಾ ಚುನಾವಣೆ ಹೊತ್ತಲ್ಲಿ ನಿಗೂಢವಾಗಿ ಸಾವಗೀಡಾಗಿದ್ದ ಮೀನುಗಾರರ ಹುಡುಗ ಪರೇಶ್ ಮೇಸ್ತನ ಹೆಸರಲ್ಲಿ ಇಡೀ ಕರಾವಳಿಯ ಮೀನುಗಾರರ ಮತ ಪಡೆದಿದ್ದ ಬಿಜೆಪಿಯವರು ಆ ಬಳಿಕ ಉದಾಸೀನ ಮಾಡಿದ್ದರೆಂಬ ಬೇಸರ ಬೆಸ್ತರಲ್ಲಿತ್ತು. ಅಲ್ಲದೆ ಕಾರವಾರದ ವಾಣಿಜ್ಯ ಬಂದರು ವಿಸ್ತರಣೆಯಿಂದ ತೊಂದರೆಗೀಡಾಗುವ ಮೀನುಗಾರರು ಬಿಜೆಪಿ ಮೇಲೆ ಸಿಟ್ಟಾಗಿದ್ದಾರೆ. ಇದೆಲ್ಲ ಸರಿ ತೂಗಿಸಲು ಮೀನುಗಾರ ಪಂಗಡದ ಉಳ್ವೇಕರ್‌ಗೆ ಟಿಕೆಟ್ ಕೊಟ್ಟು ಅರ್ಹರಿಗೆ ಮೋಸ ಮಾಡಲಾಗಿದೆ ಎಂದು ಬಿಜೆಪಿ ಬಂಡಯಗಾರರು ಹೇಳುತ್ತಿದ್ದಾರೆ.

ಭಟ್ಕಳದ ಬಿಜೆಪಿ ಕಾರ್ಯರ್ಕರು ಸಾಮಾಜಿಕ ಜಾಲತಾಣದಲ್ಲಿ ”ನಿಷ್ಟಾವಂತರಾಗಿ, ಪ್ರಾಮಾಣಿಕರಾಗಿ ದುಡಿದವರಿಗೆ ಬಿಜೆಪಿಯಲ್ಲಿ ಅಧಿಕಾರ ಪಡೆಯಲು ಅವಕಾಶವಿಲ್ಲ. ಪೊಲೀಸ್ ಕೇಸ್ ಹಾಕಿಸಿಕೊಳ್ಳಲು, ಜೈಲಿಗೆ ಹೋಗಲು ಮಾತ್ರ ನಿಷ್ಟಾವಂತರು ಬೇಕೆ?” ಎಂಬ ಅಭಿಯಾನ ಶುರು ಹಚ್ಚಿಕೊಂಡಿದ್ದಾರೆ. ಬಹುಸಂಖ್ಯಾತ ನಾಮಧಾರಿ ಜಾತಿಯ ಭಟ್ಕಳದ ಗೋವಿಂದ ನಾಯ್ಕ್‌ಗೆ ಟಿಕೆಟ್ ಕೊಡುವಂತೆ ಒತ್ತಾಯಿಸಲಾಗಿತ್ತು. ಕೊನೆ ದಿನದವರೆಗೂ ಹಿಂದೂ ಸಂಘಟನೆಯ ಗೋವಿಂದ ನಾಯ್ಕರಿಗೆ ಟಿಕೆಟ್ ಎಂಬ ವಾತಾವರಣವೂ ಇತ್ತು. ಅಂತಿಮವಾಗಿ ಗೋವಿಂದ ನಾಯ್ಕರಿಗೆ ಟಿಕೆಟ್ ಕೊಡದಿರುವುದು ಹಿಂದುತ್ವ ಕಾರ್ಯಕರ್ತರನ್ನು ಕೆರಳಿಸಿದೆ.

ಕೆ.ಜಿ.ನಾಯ್ಕ್

ಸಾಮಾಜಿಕ ಜಾಲ ತಾಣದಲ್ಲಿ ದೀವರು[ನಾಮಧಾರಿ]ಸಮುದಾಯಕ್ಕೆ ಅನ್ಯಾಯ ಮಾಡಲಾಗುತ್ತಿದೆ ಎಂಬ ಚರ್ಚೆ ಜೋರಾಗಿದೆ. 32 ವರ್ಷದಿಂದ ನಾನು ಬಿಜೆಪಿಯ ವಿವಿಧ ಸಂಘಟನೆಯಲ್ಲಿ ಸಕ್ರಿಯನಾಗಿದ್ದೇನೆ. ಜಿಲ್ಲಾಧ್ಯಕ್ಷನಾಗಿಯೂ ಕೆಲಸ ಮಾಡಿದ್ದೇನೆ. ಟಿಕೆಟ್ ಕೇಳಿದವರಲ್ಲಿ ನಾನೇ ಹಿರಿಯ. ಒಮ್ಮೆ ಅವಕಾಶ ಕೊಡದಿದ್ದರೆ ಪಕ್ಷದ ಸಂಘಟನೆಯಲ್ಲಿ ಮುಂದುವರಿಯಲಾರೆ. ಕಳೆದ ಮೂರು ಬಾರಿ ಕರಾವಳಿ ಕಡೆಯವರಿಗೆ ಅವಕಾಶ ಕೊಟ್ಟರೂ ಗೆಲ್ಲಲಾಗಲಿಲ್ಲ. ಈ ಬಾರಿ ಘಟ್ಟದ ಮೇಲಿನ ನನಗೆ ಟಿಕೆಟ್ ಕೊಡಿಯೆಂದು ಸಿದ್ದಾಪುರದ ಕೆ.ಜಿ.ನಾಯ್ಕ್ ಬೇಡಿಕೆ ಇಟ್ಟಿದ್ದರು. ಅವರೀಗ ಒಳಗೊಳಗೆ ಬುಸುಗುಡುತ್ತಿದ್ದಾರೆಂಬ ಮಾತು ಬಿಜೆಪಿ ವಲಯಲ್ಲಿ ಕೇಳಿಬರುತ್ತಿದೆ. ಜಿಲ್ಲಾ ಬಿಜೆಪಿ ಮಾಧ್ಯಮ ವಕ್ತಾರ ನಾಗರಾಜ ನಾಯ್ಕ್, ಗೋಕರ್ಣದ ನಾಗರಾಜ್ ನಾಯ್ಕ್ ತೊರ್ಕೆ ಹತಾಶೆಲ್ಲಿದ್ದಾರೆ.

ಈ ಗೊಣಗಾಟದ ನಡುವೆಯೇ ಅಂಕೋಲಾದ ಪಕ್ಕಾ ಸಂಘಪರಿವಾರಿ-ಮಾಜಿ ಪಟ್ಟಣ ಪಂಚಾಯತ್ ಅಧ್ಯಕ್ಷ ಭಾಸ್ಕರ್ ನಾರ್ವೇಕರ್ ಮತ್ತು ಭಟ್ಕಳ ಮೂಲದ ಹೈಕೋರ್ಟ್ ವಕೀಲ ದತ್ತಾತ್ರೇಯ ನಾಯ್ಕ್ ಬಂಡಾಯ ಅಭ್ಯರ್ಥಿಗಳಾಗಿ ಕಣಕ್ಕಿಳಿಯಲು ಸಿದ್ದರಾಗಿದ್ದಾರೆ.. .ಹಣವಿರುವವರಿಗೆ ಟಿಕೆಟ್ ಎಂತಾದರೆ ಹೋರಾಟದಲ್ಲಿ, ಸಂಘಟನೆಯಲ್ಲಿ ಕೇಸ್ ಹಾಕಿಸಿಕೊಳ್ಳುವ ನಿಷ್ಟಾವಂತರ ಪಾಡೇನು? ಎಂದು ನಾಯ್ಕ್ ಪ್ರಶ್ನಿಸುತ್ತಾರೆ. ಸಂಘ ಮೂಲದಿಂದ ಬಂದು 33 ವರ್ಷದಿಂದ ಪಾರ್ಟಿ ಕೆಲಸ ಮಾಡುತ್ತಿರವ ನನಗೆ ಟಿಕೆಟ್ ಕೊಡಿಸಿಯೆಂದು ಕಾಗೇರಿ, ಹೆಬ್ಬಾರ್, ಅನಂತ್ ಹೆಗಡೆ ಮನೆ ಬಾಗಿಲಿಗೆ ಅಲೆದಿದ್ದೇನೆ.. ಅವರ‍್ಯಾರೂ ಪ್ರಯತ್ನ ಮಾಡಿಲ್ಲ. ನಿಷ್ಟಾವಂತರಿಗೆ ನೋವಾಗಿದೆ. ಅದಕ್ಕಾಗಿ ಬಂಡಾಯ ಸ್ಪರ್ಧೆಯೆಂದು ನಾರ್ವೇಕರ್ ಸಂದಾನಕ್ಕೆ ಬಂದಿದ್ದ ಜಿಲ್ಲಾಧ್ಯಕ್ಷ ಮತ್ತು ಪ್ರಧಾನ ಕಾರ್ಯದರ್ಶಿಗೆ ಹೇಳಿಕಳಿಸಿದ್ದರೆ ಎನ್ನಲಾಗಿದೆ.

ಒಟ್ಟಿನಲ್ಲಿ ಈ ಬಂಡಾಯದಿಂದ ಬಿಜೆಪಿ ಕೈಗೆ ಬಂದ ತುತ್ತು ಬಾಯಿಗೆ ಬರುವುದು ಕಷ್ಟವಾಗಿದೆಯೆಂಬ ಚರ್ಚೆ ಜಿಲ್ಲೆಯಲ್ಲಿ ನಡೆದಿದೆ.


ಇದನ್ನೂ ಓದಿ: ಉತ್ತರ ಕನ್ನಡ; ಸ್ಥಳಿಯಾಡಳಿತ ಸಂಸ್ಥೆಗಳ ಕ್ಷೇತ್ರದ MLC ಟಿಕೆಟ್ ತಂತ್ರಗಾರಿಕೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...

ಕಾರ್‌ ಚಲಾಯಿಸುವಾಗ ಫೋನ್‌ನಲ್ಲಿ ಮಾತನಾಡದಂತೆ ಹೇಳಿದ್ದಕ್ಕೆ ಪತ್ರಕರ್ತನ ಮೇಲೆ ರಾಡ್‌ನಿಂದ ಹಲ್ಲೆ

ಆ್ಯಪ್ ಆಧಾರಿತ ಟ್ಯಾಕ್ಸಿ ಬುಕಿಂಗ್‌ ಮಾಡುವ ಪ್ರಯಾಣಿಕರ ಸುರಕ್ಷತೆ ಮತ್ತು ಚಾಲಕರ ನಡವಳಿಕೆಯ ಕುರಿತ ಕಳವಳವಳಕಾರಿ ಘಟನೆಯೊಂದು ಹರಿಯಾಣದ ಫರಿದಾಬಾದ್‌ನಲ್ಲಿ ಬೆಳಕಿಗೆ ಬಂದಿದೆ. ರ್ಯಾಪಿಡೋ ಟ್ಯಾಕ್ಸಿ ಚಾಲಕನೊಬ್ಬ ಪ್ರಯಾಣಿಕನ ಮೇಲೆ ಕಬ್ಬಿಣದ ರಾಡ್‌ನಿಂದ...

ರಾಜಸ್ಥಾನ| ಎಥೆನಾಲ್ ಸ್ಥಾವರದ ವಿರುದ್ಧ ಪ್ರತಿಭಟನೆ: 40 ಜನರ ಬಂಧನ

ರಾಜಸ್ಥಾನದ ಹನುಮಾನ್‌ಗಢ ಜಿಲ್ಲೆಯ ರೈತರು, ಪ್ರಸ್ತಾವಿತ ಎಥೆನಾಲ್ ಕಾರ್ಖಾನೆಯ ವಿರುದ್ಧ ಎರಡನೇ ದಿನವೂ ಪ್ರತಿಭಟನೆ ಮುಂದುವರೆಸಿದ್ದಾರೆ, ಈ ಪ್ರದೇಶದಲ್ಲಿ ಹೆಚ್ಚಿನ ಭದ್ರತೆ ಮತ್ತು ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಗುರುವಾರ ಮುಂಜಾನೆ ಟಿಬ್ಬಿ ಬಳಿಯ ಗುರುದ್ವಾರದಲ್ಲಿ...

ವಿಧಾನಸಭೆಯಲ್ಲಿ ‘ಗೃಹಲಕ್ಷ್ಮಿ’ ಗದ್ದಲ : ಬಿಜೆಪಿ ಸದಸ್ಯರಿಂದ ಸಭಾತ್ಯಾಗ, ಕ್ಷಮೆ ಕೋರಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ಗೃಹಲಕ್ಷಿ ಯೋಜನೆಯ ಹಣ ಬಿಡುಗಡೆ ಸಂಬಂಧ ಸಚಿವರು ಸದನಕ್ಕೆ ತಪ್ಪು ಮಾಹಿತಿ ನೀಡಿದ್ದಾರೆ ಎಂಬ ವಿಚಾರ ಇಂದು (ಡಿ.17 ಬುಧವಾರ) ವಿಧಾನಸಭೆಯಲ್ಲಿ ದೊಡ್ಡ ಮಟ್ಟದ ವಾಗ್ವಾದ, ಆರೋಪ-ಪ್ರತ್ಯಾರೋಪ, ಗದ್ದಲ, ಪ್ರತಿಭಟನೆ, ಸಭಾತ್ಯಾಗ ಮತ್ತು...

ತಂಪು ಪಾನೀಯದಲ್ಲಿ ಮತ್ತು ಬರುವ ಔಷಧ ಬೆರೆಸಿ ಅಪ್ರಾಪ್ತ ಬಾಲಕಿಯರ ಮೇಲೆ ಅತ್ಯಾಚಾರ: ಆರೋಪಿ ಬಂಧನ

ಮುಂಬೈ ನಗರವನ್ನೇ ಬೆಚ್ಚಿಬೀಳಿಸಿದ ಆಘಾತಕಾರಿ ಘಟನೆಯಲ್ಲಿ, ವಕ್ತಿಯೋರ್ವ ಮತ್ತು ಬರುವ ತಂಪು ಪಾನೀಯ ನೀಡಿ ಅಪ್ರಾಪ್ತ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ಅಪರಾಧದ ಅಶ್ಲೀಲ ವೀಡಿಯೊಗಳನ್ನು ರೆಕಾರ್ಡ್ ಮಾಡಿ, ನಂತರ ವೀಡಿಯೊಗಳನ್ನು...

ಮನರೇಗಾ ಬದಲು ವಿಬಿ-ಜಿ ರಾಮ್ ಜಿ : ಲೋಕಸಭೆಯಲ್ಲಿ ಮಸೂದೆ ಅಂಗೀಕಾರದ ವೇಳೆ ಸಭಾತ್ಯಾಗಕ್ಕೆ ನಿರ್ಧರಿಸಿದ ವಿಪಕ್ಷಗಳು

ನರೇಗಾ ಬದಲು ತಂದಿರುವ ವಿಕಸಿತ್ ಭಾರತ್-ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕಾ ಮಿಷನ್ (ಗ್ರಾಮೀಣ್) ಮಸೂದೆ, 2025 (ವಿಬಿ–ಜಿ ರಾಮ್ ಜಿ ಮಸೂದೆ) ಲೋಕಸಭೆಯಲ್ಲಿ ಅಂಗೀಕಾರದ ವೇಳೆ ಸಹಕರಿಸದಿರಲು ವಿರೋಧ ಪಕ್ಷಗಳ ಸಂಸದರು...

ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ಆರೋಪ: ಮ್ಯೂಸಿಕ್ ಮೈಲಾರಿ ಮೇಲೆ ಪೋಕ್ಸೋ ಪ್ರಕರಣ ದಾಖಲು 

ಬೆಂಗಳೂರು: ಉತ್ತರ ಕರ್ನಾಟಕದ ಜನಪದ ಗಾಯಕ ಹಾಗೂ ಯೂಟ್ಯೂಬ್ ಸ್ಟಾರ್ ಎಂದೇ ಖ್ಯಾತಿ ಪಡೆದಿದ್ದ ‘ಮ್ಯೂಸಿಕ್ ಮೈಲಾರಿ’ಎಂಬಾತನನ್ನು ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಡಿ ಮಹಾಲಿಂಗಪುರ ಪೊಲೀಸರು ಬಂಧಿಸಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮೈಲಾರಿ...

ಇಂಧನ ಖರೀದಿಗೆ ‘ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ’ ಕಡ್ಡಾಯಗೊಳಿಸಿದ ದೆಹಲಿ ಸರ್ಕಾರ

ರಾಷ್ಟ್ರ ರಾಜಧಾನಿ ದೆಹಲಿಯ ವಾಹನ ಮಾಲೀಕರು ಕಟ್ಟುನಿಟ್ಟಾದ ಆದೇಶ ಎದುರಿಸುತ್ತಾರೆ. ಡಿಸೆಂಬರ್ 18 ರಿಂದ ನಗರದಾದ್ಯಂತದ ಪೆಟ್ರೋಲ್ ಬಂಕ್‌ಗಳಲ್ಲಿ ಇಂಧನ ಖರೀದಿಗೆ ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ (ಪಿಯುಸಿ) ಕಡ್ಡಾಯಗೊಳಿಸಲಾಗಿದೆ. ದೆಹಲಿ ಪರಿಸರ ಸಚಿವ ಮಂಜಿಂದರ್...

ವೈದ್ಯೆಯ ಹಿಜಾಬ್ ಎಳೆದ ಬಿಹಾರ ಸಿಎಂ, ಅವಹೇಳನ ಮಾಡಿದ ಯುಪಿ ಸಚಿವನ ವಿರುದ್ದ ದೂರು ದಾಖಲು

ವೈದ್ಯೆಯ ಹಿಜಾಬ್ ಎಳೆದ ಬಿಹಾರದ ಮುಖ್ಯಮಂತ್ರಿ ನಿತೀಶ್ ಕುಮಾರ್ ಮತ್ತು ಈ ಘಟನೆಯ ಕುರಿತು ಮಾತನಾಡುವಾಗ ಮಹಿಳೆಯನ್ನು ಅವಮಾನಿಸಿದ ಉತ್ತರ ಪ್ರದೇಶದ ಸಂಪುಟ ಸಚಿವ ಸಂಜಯ್ ನಿಶಾದ್ ವಿರುದ್ದ ಲಕ್ನೋದ ಕೈಸರ್‌ಬಾಗ್ ಪೊಲೀಸ್...

1 ಲಕ್ಷ ರೂಪಾಯಿ ಸಾಲ 74 ಲಕ್ಷ ರೂಪಾಯಿಗೆ ಏರಿಕೆ, ಸಾಲ ತೀರಿಸಲು ಕಿಡ್ನಿ ಮಾರಿದ ರೈತ 

ಅಕ್ರಮವಾಗಿ ಸಾಲ ನೀಡುವವರಿಂದ 1 ಲಕ್ಷ ಸಾಲ ಪಡೆದಿದ್ದು, ಅದಕ್ಕೆ ಹೆಚ್ಚಿನ ದಿನದ ಬಡ್ಡಿ ಸೇರಿ 75 ಲಕ್ಷ ಸಾಲ ಏರಿಕೆಯಾದ ಕಾರಣ ವ್ಯಕ್ತಿಯೊಬ್ಬ ತನ್ನ ಕಿಡ್ನಿಯನ್ನೇ ಮಾರಾಟ ಮಾಡಿರುವ ಘಟನೆ ಮಹಾರಾಷ್ಟ್ರದಲ್ಲಿ...