Homeಕರ್ನಾಟಕವಿಧಾನ ಪರಿಷತ್‌ಗೆ ಟಿಕೆಟ್ ಪೈಪೋಟಿ; ಉತ್ತರ ಕನ್ನಡ ಬಿಜೆಪಿಯಲ್ಲಿ ಬೆಂಕಿ!!

ವಿಧಾನ ಪರಿಷತ್‌ಗೆ ಟಿಕೆಟ್ ಪೈಪೋಟಿ; ಉತ್ತರ ಕನ್ನಡ ಬಿಜೆಪಿಯಲ್ಲಿ ಬೆಂಕಿ!!

- Advertisement -
- Advertisement -

ಉತ್ತರ ಕನ್ನಡದಲ್ಲಿ ವಿಧಾನ ಪರಿಷತ್ತಿಗೆ ಸ್ಥಳಿಯಾಡಳಿತ ಸಂಸ್ಥೆಗಳ ಕ್ಷೇತ್ರದಿಂದ ನಡೆಯಲಿರುವ ಚುನಾವಣೆ ಆಖಾಡಕ್ಕೀಗ ರಂಗೇರಿದೆ! ಆಡಳಿತಾರೂಢ ಬಿಜೆಪಿಯಲ್ಲಿ ತಿಂಗಳಾನುಗಟ್ಟಳೆ ನಡೆದ ಟಿಕೆಟ್‌ಗೆ ಪೈಪೋಟಿಗೆ ಬ್ರೇಕ್ ಬಿದ್ದಿದ್ದು, ಕಾರವಾರದ ಮೀನುಗಾರ ಸಮುದಾಯದ ಗಣಪತಿ ದುಮ್ಮಾ ಉಳ್ವೇಕರ್‌ರನ್ನು ಅಭ್ಯರ್ಥಿಯೆಂದು ಘೋಷಿಸಲಾಗಿದೆ. ಅಭ್ಯರ್ಥಿ ಹೆಸರು ಪ್ರಕಟವಾಗುತ್ತಿದ್ದಂತೆ ಜಿಲ್ಲಾ ಬಿಜೆಪಿಯಲ್ಲಿ ಬೆಂಕಿಬಿದ್ದಂತಾಗಿದ್ದು, ಕೆಲ ಕಾರ್ಯಕರ್ತರು ಸಾಮಾಜಿಕ ಜಾಲತಾಣದಲ್ಲಿ ಅಸಮಾಧಾನ ಹೊರಹಾಕುತ್ತಿದ್ದಾರೆ.

ಬಿಜೆಪಿ ತನ್ನ ಭಾರಕ್ಕೆ ತಾನೆ ಕುಸಿಯುತ್ತಿದೆ; ಹಾದಿ-ಬೀದಿಯಲ್ಲಿ ಹೋಗುವವರನ್ನೆಲ್ಲ ಕಾಂಗ್ರೆಸ್ಸಿಂದ ಬಂದವರೆಂದು ಹೇಳಿ ತಂದು ತುಂಬಿಕೊಂಡಿದ್ದರ ಫಲವಿದು ಎಂದು ಎರಡ್ಮೂರು ದಶಕದಿಂದ ಪಕ್ಷಕ್ಕಾಗಿ ಬೆವರಿಳಿಸಿದ ಹಿರಿಯರು ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ. ಬಿಜೆಪಿಯ ಕಷ್ಟದ ದಿನಗಳಿಂದಲೂ ಆ ಪಾರ್ಟಿಯಲ್ಲಿದ್ದವರೂ ಸೇರಿದಂತೆ ಸುಮಾರು ಒಂದೂ ಮುಕ್ಕಾಲು ಡಜನ್ ಮಂದಿ ಟಿಕೆಟ್‌ಗಾಗಿ ಲಾಭಿ ನಡೆಸಿದ್ದರು. ಸ್ಪೀಕರ್ ವಿಶ್ವೇಶ್ವರ ಹೆಗಡೆ ಕಾಗೇರಿ, ಮಂತ್ರಿ ಹೆಬ್ಬಾರ್, ಸಂಸದ ಅನಂತಕುಮಾರ್ ಹೆಗಡೆ ಮತ್ತು ಶಾಸಕಿ ರೂಪಾಲಿ ನಾಯ್ಕ್ ಒಂದಾಗಿ ಉಳ್ವೇಕರ್ ಕ್ಯಾಂಡಿಡೇಟ್ ಮಾಡಿದ್ದಾರೆನ್ನಲಾಗಿದೆ.

ಗೋವಿಂದ ನಾಯ್ಕ್‌

ಕಳೆದ ಬಾರಿ ಸೋಲುತ್ತಾರೆಂದು ಗೊತ್ತಿದ್ದೂ ಉಳ್ವೇಕರ್‌ರನ್ನು ನಿಲ್ಲಿಸಲಾಗಿತ್ತು. ಈಗ ಗೆಲ್ಲುವ ಅವಕಾಶವಿರುವಾಗ ಅಂದು ಪಟ್ಟ ಕಷ್ಟಕ್ಕೆ ಇನಾಮು ಕೊಡಬೇಕಾದುದು ಧರ್ಮವೆಂದು ಪಕ್ಷದ ಹಿರಿಯರು ಹೇಳುತ್ತಿದ್ದಾರಾದರೂ, ಇದೆಲ್ಲ ಮುನಿಸಿಕೊಂಡಿರುವ ಮೀನುಗಾರ ಸಮುದಾಯವನ್ನು ಸಮಾಧಾನಿಸುವ ನಾಟಕವೆಂದು ಟಿಕೆಟ್ ವಂಚಿತರ ಬೆಂಬಲಿಗರ ಅಭಿಪ್ರಾಯವಾಗಿದೆ. ಉಳ್ವೇಕರ್ ನಿಷ್ಟಾವಂತ ಬಿಜೆಪಿಗರಲ್ಲ; ಅವರು ಆನಂದ ಅಸ್ನೋಟಿಕರ್ ಮತ್ತವರ ತಂದೆಯ ಹಿಂಬಾಲಕರಾಗಿದ್ದರು. ಆನಂದ ಬಿಜೆಪಿಗೆ ಬಂದಾಗ ಅವರೊಂದಿಗೆ ಉಳ್ವೇಕರ್ ಬಂದಿದ್ದರು. ಆದರೆ ಆನಂದ್ ಜತೆಗಿನ ಬಂದರು ವ್ಯವಹಾರದ ವೈಮನಸ್ಸಿನಿಂದ ಉಳ್ವೇಕರ್ ಬಿಜೆಪಿಯಲ್ಲೆ ಉಳಿದರೆಂಬುದು ಕಟ್ಟರ್ ಬಿಜೆಪಿಗರು ಹೇಳುತ್ತಾರೆ.

ಕಳೆದ ವಿಧಾನ ಸಭಾ ಚುನಾವಣೆ ಹೊತ್ತಲ್ಲಿ ನಿಗೂಢವಾಗಿ ಸಾವಗೀಡಾಗಿದ್ದ ಮೀನುಗಾರರ ಹುಡುಗ ಪರೇಶ್ ಮೇಸ್ತನ ಹೆಸರಲ್ಲಿ ಇಡೀ ಕರಾವಳಿಯ ಮೀನುಗಾರರ ಮತ ಪಡೆದಿದ್ದ ಬಿಜೆಪಿಯವರು ಆ ಬಳಿಕ ಉದಾಸೀನ ಮಾಡಿದ್ದರೆಂಬ ಬೇಸರ ಬೆಸ್ತರಲ್ಲಿತ್ತು. ಅಲ್ಲದೆ ಕಾರವಾರದ ವಾಣಿಜ್ಯ ಬಂದರು ವಿಸ್ತರಣೆಯಿಂದ ತೊಂದರೆಗೀಡಾಗುವ ಮೀನುಗಾರರು ಬಿಜೆಪಿ ಮೇಲೆ ಸಿಟ್ಟಾಗಿದ್ದಾರೆ. ಇದೆಲ್ಲ ಸರಿ ತೂಗಿಸಲು ಮೀನುಗಾರ ಪಂಗಡದ ಉಳ್ವೇಕರ್‌ಗೆ ಟಿಕೆಟ್ ಕೊಟ್ಟು ಅರ್ಹರಿಗೆ ಮೋಸ ಮಾಡಲಾಗಿದೆ ಎಂದು ಬಿಜೆಪಿ ಬಂಡಯಗಾರರು ಹೇಳುತ್ತಿದ್ದಾರೆ.

ಭಟ್ಕಳದ ಬಿಜೆಪಿ ಕಾರ್ಯರ್ಕರು ಸಾಮಾಜಿಕ ಜಾಲತಾಣದಲ್ಲಿ ”ನಿಷ್ಟಾವಂತರಾಗಿ, ಪ್ರಾಮಾಣಿಕರಾಗಿ ದುಡಿದವರಿಗೆ ಬಿಜೆಪಿಯಲ್ಲಿ ಅಧಿಕಾರ ಪಡೆಯಲು ಅವಕಾಶವಿಲ್ಲ. ಪೊಲೀಸ್ ಕೇಸ್ ಹಾಕಿಸಿಕೊಳ್ಳಲು, ಜೈಲಿಗೆ ಹೋಗಲು ಮಾತ್ರ ನಿಷ್ಟಾವಂತರು ಬೇಕೆ?” ಎಂಬ ಅಭಿಯಾನ ಶುರು ಹಚ್ಚಿಕೊಂಡಿದ್ದಾರೆ. ಬಹುಸಂಖ್ಯಾತ ನಾಮಧಾರಿ ಜಾತಿಯ ಭಟ್ಕಳದ ಗೋವಿಂದ ನಾಯ್ಕ್‌ಗೆ ಟಿಕೆಟ್ ಕೊಡುವಂತೆ ಒತ್ತಾಯಿಸಲಾಗಿತ್ತು. ಕೊನೆ ದಿನದವರೆಗೂ ಹಿಂದೂ ಸಂಘಟನೆಯ ಗೋವಿಂದ ನಾಯ್ಕರಿಗೆ ಟಿಕೆಟ್ ಎಂಬ ವಾತಾವರಣವೂ ಇತ್ತು. ಅಂತಿಮವಾಗಿ ಗೋವಿಂದ ನಾಯ್ಕರಿಗೆ ಟಿಕೆಟ್ ಕೊಡದಿರುವುದು ಹಿಂದುತ್ವ ಕಾರ್ಯಕರ್ತರನ್ನು ಕೆರಳಿಸಿದೆ.

ಕೆ.ಜಿ.ನಾಯ್ಕ್

ಸಾಮಾಜಿಕ ಜಾಲ ತಾಣದಲ್ಲಿ ದೀವರು[ನಾಮಧಾರಿ]ಸಮುದಾಯಕ್ಕೆ ಅನ್ಯಾಯ ಮಾಡಲಾಗುತ್ತಿದೆ ಎಂಬ ಚರ್ಚೆ ಜೋರಾಗಿದೆ. 32 ವರ್ಷದಿಂದ ನಾನು ಬಿಜೆಪಿಯ ವಿವಿಧ ಸಂಘಟನೆಯಲ್ಲಿ ಸಕ್ರಿಯನಾಗಿದ್ದೇನೆ. ಜಿಲ್ಲಾಧ್ಯಕ್ಷನಾಗಿಯೂ ಕೆಲಸ ಮಾಡಿದ್ದೇನೆ. ಟಿಕೆಟ್ ಕೇಳಿದವರಲ್ಲಿ ನಾನೇ ಹಿರಿಯ. ಒಮ್ಮೆ ಅವಕಾಶ ಕೊಡದಿದ್ದರೆ ಪಕ್ಷದ ಸಂಘಟನೆಯಲ್ಲಿ ಮುಂದುವರಿಯಲಾರೆ. ಕಳೆದ ಮೂರು ಬಾರಿ ಕರಾವಳಿ ಕಡೆಯವರಿಗೆ ಅವಕಾಶ ಕೊಟ್ಟರೂ ಗೆಲ್ಲಲಾಗಲಿಲ್ಲ. ಈ ಬಾರಿ ಘಟ್ಟದ ಮೇಲಿನ ನನಗೆ ಟಿಕೆಟ್ ಕೊಡಿಯೆಂದು ಸಿದ್ದಾಪುರದ ಕೆ.ಜಿ.ನಾಯ್ಕ್ ಬೇಡಿಕೆ ಇಟ್ಟಿದ್ದರು. ಅವರೀಗ ಒಳಗೊಳಗೆ ಬುಸುಗುಡುತ್ತಿದ್ದಾರೆಂಬ ಮಾತು ಬಿಜೆಪಿ ವಲಯಲ್ಲಿ ಕೇಳಿಬರುತ್ತಿದೆ. ಜಿಲ್ಲಾ ಬಿಜೆಪಿ ಮಾಧ್ಯಮ ವಕ್ತಾರ ನಾಗರಾಜ ನಾಯ್ಕ್, ಗೋಕರ್ಣದ ನಾಗರಾಜ್ ನಾಯ್ಕ್ ತೊರ್ಕೆ ಹತಾಶೆಲ್ಲಿದ್ದಾರೆ.

ಈ ಗೊಣಗಾಟದ ನಡುವೆಯೇ ಅಂಕೋಲಾದ ಪಕ್ಕಾ ಸಂಘಪರಿವಾರಿ-ಮಾಜಿ ಪಟ್ಟಣ ಪಂಚಾಯತ್ ಅಧ್ಯಕ್ಷ ಭಾಸ್ಕರ್ ನಾರ್ವೇಕರ್ ಮತ್ತು ಭಟ್ಕಳ ಮೂಲದ ಹೈಕೋರ್ಟ್ ವಕೀಲ ದತ್ತಾತ್ರೇಯ ನಾಯ್ಕ್ ಬಂಡಾಯ ಅಭ್ಯರ್ಥಿಗಳಾಗಿ ಕಣಕ್ಕಿಳಿಯಲು ಸಿದ್ದರಾಗಿದ್ದಾರೆ.. .ಹಣವಿರುವವರಿಗೆ ಟಿಕೆಟ್ ಎಂತಾದರೆ ಹೋರಾಟದಲ್ಲಿ, ಸಂಘಟನೆಯಲ್ಲಿ ಕೇಸ್ ಹಾಕಿಸಿಕೊಳ್ಳುವ ನಿಷ್ಟಾವಂತರ ಪಾಡೇನು? ಎಂದು ನಾಯ್ಕ್ ಪ್ರಶ್ನಿಸುತ್ತಾರೆ. ಸಂಘ ಮೂಲದಿಂದ ಬಂದು 33 ವರ್ಷದಿಂದ ಪಾರ್ಟಿ ಕೆಲಸ ಮಾಡುತ್ತಿರವ ನನಗೆ ಟಿಕೆಟ್ ಕೊಡಿಸಿಯೆಂದು ಕಾಗೇರಿ, ಹೆಬ್ಬಾರ್, ಅನಂತ್ ಹೆಗಡೆ ಮನೆ ಬಾಗಿಲಿಗೆ ಅಲೆದಿದ್ದೇನೆ.. ಅವರ‍್ಯಾರೂ ಪ್ರಯತ್ನ ಮಾಡಿಲ್ಲ. ನಿಷ್ಟಾವಂತರಿಗೆ ನೋವಾಗಿದೆ. ಅದಕ್ಕಾಗಿ ಬಂಡಾಯ ಸ್ಪರ್ಧೆಯೆಂದು ನಾರ್ವೇಕರ್ ಸಂದಾನಕ್ಕೆ ಬಂದಿದ್ದ ಜಿಲ್ಲಾಧ್ಯಕ್ಷ ಮತ್ತು ಪ್ರಧಾನ ಕಾರ್ಯದರ್ಶಿಗೆ ಹೇಳಿಕಳಿಸಿದ್ದರೆ ಎನ್ನಲಾಗಿದೆ.

ಒಟ್ಟಿನಲ್ಲಿ ಈ ಬಂಡಾಯದಿಂದ ಬಿಜೆಪಿ ಕೈಗೆ ಬಂದ ತುತ್ತು ಬಾಯಿಗೆ ಬರುವುದು ಕಷ್ಟವಾಗಿದೆಯೆಂಬ ಚರ್ಚೆ ಜಿಲ್ಲೆಯಲ್ಲಿ ನಡೆದಿದೆ.


ಇದನ್ನೂ ಓದಿ: ಉತ್ತರ ಕನ್ನಡ; ಸ್ಥಳಿಯಾಡಳಿತ ಸಂಸ್ಥೆಗಳ ಕ್ಷೇತ್ರದ MLC ಟಿಕೆಟ್ ತಂತ್ರಗಾರಿಕೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಚುನಾವಣಾ ಸಮಯದಲ್ಲಿ ಉಚಿತ ಕೊಡುಗೆಗಳ ಪ್ರವೃತ್ತಿ ಪ್ರಶ್ನಿಸಿದ ಸುಪ್ರೀಂ ಕೋರ್ಟ್

ರಾಜಕೀಯ ಪಕ್ಷಗಳು ಮತ್ತು ರಾಜ್ಯ ಸರ್ಕಾರಗಳು ಚುನಾವಣೆಗೆ ಮುನ್ನ "ಉಚಿತ ಕೊಡುಗೆಗಳ" ಜಾಹೀರಾತು ನೀಡುವ ಅಭ್ಯಾಸ ಹೆಚ್ಚುತ್ತಿರುವ ಬಗ್ಗೆ ಸುಪ್ರೀಂ ಕೋರ್ಟ್ ಗುರುವಾರ ಬಲವಾದ ಮೌಖಿಕ ಅವಲೋಕನಗಳನ್ನು ನೀಡಿದೆ. ವಿದ್ಯುತ್ (ತಿದ್ದುಪಡಿ) ನಿಯಮಗಳು, 2024...

ರಾಹುಲ್ ಗಾಂಧಿಗೆ ಕರ್ಣಿ ಸೇನೆಯಿಂದ ಜೀವ ಬೆದರಿಕೆ: ಬಿಜೆಪಿ-ಆರ್‌ಎಸ್‌ಎಸ್ ಜಾಲವೇ ‘ಗೋಡ್ಸೆ ಕಾರ್ಖಾನೆ’ ಎಂದ ಕಾಂಗ್ರೆಸ್

ನವದೆಹಲಿ: ಲೋಕಸಭಾ ಸ್ಪೀಕರ್ ಓಂ ಬಿರ್ಲಾ ವಿರುದ್ಧ ನಡೆದ ಪ್ರತಿಭಟನೆಗೆ ಸಂಬಂಧಿಸಿದಂತೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರಿಗೆ ಕರ್ಣಿ ಸೇನೆ ಜೀವ ಬೆದರಿಕೆ ಹಾಕಿದ್ದು, ಇದು "ಏಕಾಂಗಿ ಸ್ಫೋಟವಲ್ಲ"...

ಬಿಹಾರ| ವಿಧಾನಸಭೆಯಲ್ಲಿ ‘ತಂಬಾಕು’ ತಿಂದ ಉಪಮುಖ್ಯಮಂತ್ರಿ ಸಾಮ್ರಾಟ್ ಚೌಧರಿ

ಬಿಹಾರ ವಿಧಾನಸಭೆಯ ಬಜೆಟ್ ಅಧಿವೇಶನದ ವಿಡಿಯೋ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆದ ಬಳಿಕ ರಾಜಕೀಯ ವಿವಾದಕ್ಕೆ ಕಾರಣವಾಗಿದೆ. ವಿಡಿಯೋದಲ್ಲಿ, ಉಪಮುಖ್ಯಮಂತ್ರಿ ಹಾಗೂ ಹಿರಿಯ ಬಿಜೆಪಿ ನಾಯಕ ಸಾಮ್ರಾಟ್ ಚೌಧರಿ ಕಲಾಪದ ಸಮಯದಲ್ಲಿ ವಸ್ತುವೊಂದನ್ನು...

‘ಬೆದರಿಕೆ, ಚಿತ್ರಹಿಂಸೆ, ಅತ್ಯಾಚಾರ ‘: ಇಸ್ರೇಲ್‌ ಜೈಲಿನ ದೌರ್ಜನ್ಯ ಬಿಚ್ಚಿಟ್ಟ ಪ್ಯಾಲೆಸ್ತೀನ್ ಪತ್ರಕರ್ತರು

ಇಸ್ರೇಲ್ ಜೈಲುಗಳಲ್ಲಿ ಬಂಧಿತರಾಗಿರುವ ಪ್ಯಾಲೆಸ್ತೀನ್ ಪತ್ರಕರ್ತರು ತೀವ್ರವಾದ ದೌರ್ಜನ್ಯಗಳನ್ನು ಎದುರಿಸುತ್ತಿದ್ದಾರೆ ಎಂದು ಅಂತಾರಾಷ್ಟ್ರೀಯ ಪತ್ರಕರ್ತರ ರಕ್ಷಣಾ ಸಮಿತಿ (ಸಿಪಿಜೆ) ಹೇಳಿದೆ. ಬಂಧನದಿಂದ ಬಿಡುಗಡೆಯಾಗಿರುವ ಪತ್ರಕರ್ತರನ್ನು ಸಂದರ್ಶಿಸಿರುವ ಸಿಪಿಜೆ, ಜೈಲಿನಲ್ಲಿರುವ ಪತ್ರಕರ್ತರು ನಿರಂತರವಾಗಿ ದೈಹಿಕ...

ಪಾಕಿಸ್ತಾನದ ಕರಾಚಿಯಲ್ಲಿ ಶಂಕಿತ ಅನಿಲ ಸೋರಿಕೆ: ಮಕ್ಕಳು ಸೇರಿದಂತೆ 16 ಮಂದಿ ಸಾವು

ಕರಾಚಿ: ಪಾಕಿಸ್ತಾನದ ಕರಾಚಿಯಲ್ಲಿ ಗುರುವಾರ ಬೆಳಿಗ್ಗೆ ವಸತಿ ಕಟ್ಟಡವೊಂದರಲ್ಲಿ ಶಂಕಿತ ಅನಿಲ ಸೋರಿಕೆಯಿಂದಾಗಿ ಸ್ಫೋಟ ಸಂಭವಿಸಿ, ಮಕ್ಕಳು ಸೇರಿದಂತೆ ಕನಿಷ್ಠ 16 ಜನರು ಸಾವನ್ನಪ್ಪಿದ್ದು, 14 ಜನರು ಗಾಯಗೊಂಡಿದ್ದಾರೆ. "ಓಲ್ಡ್ ಸೋಲ್ಜರ್ ಬಜಾರ್...

ಮಹಾರಾಷ್ಟ್ರ| 10 ದಿನಗಳ ಮಗುವಿನೊಂದಿಗೆ 12 ನೇ ತರಗತಿ ಪರೀಕ್ಷೆ ಬರೆದ ಮಹಿಳೆ

ಮಹಾರಾಷ್ಟ್ರದ ನಾಂದೇಡ್ ನಗರದಲ್ಲಿ 12 ನೇ ತರಗತಿಯ ಮಹಾರಾಷ್ಟ್ರ ಬೋರ್ಡ್ ಪರೀಕ್ಷೆಗೆ ಹಾಜರಾದ ಮಹಿಳೆಯೊಬ್ಬರು ತನ್ನ 10 ದಿನಗಳ ಮಗುವನ್ನು ಪರೀಕ್ಷಾ ಕೇಂದ್ರಕ್ಕೆ ಕರೆತಂದಿದ್ದಾರೆ. ಮಹಿಳೆ ಪರೀಕ್ಷೆ ಬರೆಯುವ ಕಾರಣಕ್ಕೆ ಕೇಂದ್ರದ ವಿಶೇಷ...

ಒಡಿಶಾ| ದಲಿತರು ವಾಸಿಸುವ ಪ್ರದೇಶಕ್ಕೆ ಕುಡಿಯುವ ನೀರು-ವಿದ್ಯುತ್ ಸಂಪರ್ಕ ಕಡಿತ

ಒಡಿಶಾದ ಬಲಂಗೀರ್ ಜಿಲ್ಲೆಯಲ್ಲಿ ಜಾತಿ ಆಧಾರಿತ ತಾರತಮ್ಯವಿದೆ ಎಂದು ಸ್ಥಳೀಯ ನಿವಾಸಿಗಳು ಆರೋಪಿಸಿದ್ದಾರೆ. ಆದರೆ, ಗ್ರಾಮದ ಅಧಿಕಾರಿಯೊಬ್ಬರು ಈ ಅಡಚಣೆಗೆ ಸ್ಥಳೀಯ ಕಲಹ ಕಾರಣ ಎಂದು ಆರೋಪಿಸಿದ್ದಾರೆ. ಜಿಲ್ಲೆಯ ತುರೆಕೆಲಾ ಬ್ಲಾಕ್‌ನ ಡುಮೆರ್ಚುವಾನ್ ಗ್ರಾಮದಲ್ಲಿ...

ತಮಿಳುನಾಡು ವಿಧಾನಸಭಾ ಚುನಾವಣೆ: ಡಿಎಂಕೆ ನೇತೃತ್ವದ ಮೈತ್ರಿಕೂಟಕ್ಕೆ ಡಿಎಂಡಿಕೆ ಸೇರ್ಪಡೆ

ಚೆನ್ನೈ: ದಿವಂಗತ ನಟ ವಿಜಯಕಾಂತ್ ಅವರ ದೇಶೀಯ ಮುರ್ಪೋಕ್ಕು ದ್ರಾವಿಡ ಕಳಗಂ (ಡಿಎಂಡಿಕೆ) ಗುರುವಾರ ದ್ರಾವಿಡ ಮುನ್ನೇತ್ರ ಕಳಗಂ ನೇತೃತ್ವದ ಜಾತ್ಯತೀತ ಪ್ರಗತಿಪರ ಒಕ್ಕೂಟ (ಎಸ್‌ಪಿಎ)ವನ್ನು 21ವರ್ಷಗಳ ಅಸ್ತಿತ್ವದ ನಂತರ ಮೊದಲ ಬಾರಿಗೆ...

ಟ್ರಕ್ ಚಾಲಕ ರಸ್ತೆಯಲ್ಲಿ ನಮಾಝ್ ಮಾಡಿದ್ದರಿಂದ ಟ್ರಾಫಿಕ್ ಜಾಮ್ ಎಂದು ಸುಳ್ಳು ಸುದ್ದಿ ಪ್ರಸಾರ : ಝೀ ನ್ಯೂಸ್‌ಗೆ 1 ಲಕ್ಷ ರೂ. ದಂಡ

ಮುಸ್ಲಿಂ ವ್ಯಕ್ತಿಯೊಬ್ಬರು ನಮಾಝ್ ಮಾಡಲು ಹೆದ್ದಾರಿ ಮಧ್ಯೆ ಟ್ರಕ್‌ ನಿಲ್ಲಿಸಿದ್ದರಿಂದ ಟ್ರಾಫಿಕ್ ಜಾಮ್‌ ಉಂಟಾಗಿದೆ ಎಂದು ಸುಳ್ಳು ಸುದ್ದಿ ಹಬ್ಬಿದ ಝೀ ನ್ಯೂಸ್‌ ಚಾನೆಲ್‌ಗೆ ಸುದ್ದಿ ಪ್ರಸಾರಕರು ಮತ್ತು ಡಿಜಿಟಲ್ ಮಾನದಂಡಗಳ ಪ್ರಾಧಿಕಾರ(ಎನ್‌ಬಿಡಿಎಸ್‌ಎ)...

ಗುಜರಾತ್‌| ಜಾತಿ ಆಧಾರಿತ ಜಗಳದಲ್ಲಿ ದಲಿತ ಯುವಕನ ಮೇಲೆ ಚಾಕುವಿನಿಂದ ದಾಳಿ

ಶನಿವಾರ ತಡರಾತ್ರಿ ರಾಣಿಪ್‌ನಲ್ಲಿ ನಡೆದ ಸಣ್ಣ ಭಿನ್ನಾಭಿಪ್ರಾಯವೊಂದು ಹಿಂಸಾಚಾರಕ್ಕೆ ತಿರುಗಿದ್ದು, 25 ವರ್ಷದ ದಲಿತ ಯುವಕ ಸಾಹಿಲ್ ವಘೇಲಾ ಮೇಲೆ ಚಾಕುವಿನಿಂದ ಹಲ್ಲೆ ನಡೆಸಲಾಗಿದೆ. ಯುವಕ ಗಂಭೀರವಾಗಿ ಗಾಯಗೊಂಡಿದ್ದು, ಘಟನೆಯು ಈ ಪ್ರದೇಶದಲ್ಲಿ...