Homeಕರ್ನಾಟಕವಿಧಾನ ಪರಿಷತ್‌ಗೆ ಟಿಕೆಟ್ ಪೈಪೋಟಿ; ಉತ್ತರ ಕನ್ನಡ ಬಿಜೆಪಿಯಲ್ಲಿ ಬೆಂಕಿ!!

ವಿಧಾನ ಪರಿಷತ್‌ಗೆ ಟಿಕೆಟ್ ಪೈಪೋಟಿ; ಉತ್ತರ ಕನ್ನಡ ಬಿಜೆಪಿಯಲ್ಲಿ ಬೆಂಕಿ!!

- Advertisement -
- Advertisement -

ಉತ್ತರ ಕನ್ನಡದಲ್ಲಿ ವಿಧಾನ ಪರಿಷತ್ತಿಗೆ ಸ್ಥಳಿಯಾಡಳಿತ ಸಂಸ್ಥೆಗಳ ಕ್ಷೇತ್ರದಿಂದ ನಡೆಯಲಿರುವ ಚುನಾವಣೆ ಆಖಾಡಕ್ಕೀಗ ರಂಗೇರಿದೆ! ಆಡಳಿತಾರೂಢ ಬಿಜೆಪಿಯಲ್ಲಿ ತಿಂಗಳಾನುಗಟ್ಟಳೆ ನಡೆದ ಟಿಕೆಟ್‌ಗೆ ಪೈಪೋಟಿಗೆ ಬ್ರೇಕ್ ಬಿದ್ದಿದ್ದು, ಕಾರವಾರದ ಮೀನುಗಾರ ಸಮುದಾಯದ ಗಣಪತಿ ದುಮ್ಮಾ ಉಳ್ವೇಕರ್‌ರನ್ನು ಅಭ್ಯರ್ಥಿಯೆಂದು ಘೋಷಿಸಲಾಗಿದೆ. ಅಭ್ಯರ್ಥಿ ಹೆಸರು ಪ್ರಕಟವಾಗುತ್ತಿದ್ದಂತೆ ಜಿಲ್ಲಾ ಬಿಜೆಪಿಯಲ್ಲಿ ಬೆಂಕಿಬಿದ್ದಂತಾಗಿದ್ದು, ಕೆಲ ಕಾರ್ಯಕರ್ತರು ಸಾಮಾಜಿಕ ಜಾಲತಾಣದಲ್ಲಿ ಅಸಮಾಧಾನ ಹೊರಹಾಕುತ್ತಿದ್ದಾರೆ.

ಬಿಜೆಪಿ ತನ್ನ ಭಾರಕ್ಕೆ ತಾನೆ ಕುಸಿಯುತ್ತಿದೆ; ಹಾದಿ-ಬೀದಿಯಲ್ಲಿ ಹೋಗುವವರನ್ನೆಲ್ಲ ಕಾಂಗ್ರೆಸ್ಸಿಂದ ಬಂದವರೆಂದು ಹೇಳಿ ತಂದು ತುಂಬಿಕೊಂಡಿದ್ದರ ಫಲವಿದು ಎಂದು ಎರಡ್ಮೂರು ದಶಕದಿಂದ ಪಕ್ಷಕ್ಕಾಗಿ ಬೆವರಿಳಿಸಿದ ಹಿರಿಯರು ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ. ಬಿಜೆಪಿಯ ಕಷ್ಟದ ದಿನಗಳಿಂದಲೂ ಆ ಪಾರ್ಟಿಯಲ್ಲಿದ್ದವರೂ ಸೇರಿದಂತೆ ಸುಮಾರು ಒಂದೂ ಮುಕ್ಕಾಲು ಡಜನ್ ಮಂದಿ ಟಿಕೆಟ್‌ಗಾಗಿ ಲಾಭಿ ನಡೆಸಿದ್ದರು. ಸ್ಪೀಕರ್ ವಿಶ್ವೇಶ್ವರ ಹೆಗಡೆ ಕಾಗೇರಿ, ಮಂತ್ರಿ ಹೆಬ್ಬಾರ್, ಸಂಸದ ಅನಂತಕುಮಾರ್ ಹೆಗಡೆ ಮತ್ತು ಶಾಸಕಿ ರೂಪಾಲಿ ನಾಯ್ಕ್ ಒಂದಾಗಿ ಉಳ್ವೇಕರ್ ಕ್ಯಾಂಡಿಡೇಟ್ ಮಾಡಿದ್ದಾರೆನ್ನಲಾಗಿದೆ.

ಗೋವಿಂದ ನಾಯ್ಕ್‌

ಕಳೆದ ಬಾರಿ ಸೋಲುತ್ತಾರೆಂದು ಗೊತ್ತಿದ್ದೂ ಉಳ್ವೇಕರ್‌ರನ್ನು ನಿಲ್ಲಿಸಲಾಗಿತ್ತು. ಈಗ ಗೆಲ್ಲುವ ಅವಕಾಶವಿರುವಾಗ ಅಂದು ಪಟ್ಟ ಕಷ್ಟಕ್ಕೆ ಇನಾಮು ಕೊಡಬೇಕಾದುದು ಧರ್ಮವೆಂದು ಪಕ್ಷದ ಹಿರಿಯರು ಹೇಳುತ್ತಿದ್ದಾರಾದರೂ, ಇದೆಲ್ಲ ಮುನಿಸಿಕೊಂಡಿರುವ ಮೀನುಗಾರ ಸಮುದಾಯವನ್ನು ಸಮಾಧಾನಿಸುವ ನಾಟಕವೆಂದು ಟಿಕೆಟ್ ವಂಚಿತರ ಬೆಂಬಲಿಗರ ಅಭಿಪ್ರಾಯವಾಗಿದೆ. ಉಳ್ವೇಕರ್ ನಿಷ್ಟಾವಂತ ಬಿಜೆಪಿಗರಲ್ಲ; ಅವರು ಆನಂದ ಅಸ್ನೋಟಿಕರ್ ಮತ್ತವರ ತಂದೆಯ ಹಿಂಬಾಲಕರಾಗಿದ್ದರು. ಆನಂದ ಬಿಜೆಪಿಗೆ ಬಂದಾಗ ಅವರೊಂದಿಗೆ ಉಳ್ವೇಕರ್ ಬಂದಿದ್ದರು. ಆದರೆ ಆನಂದ್ ಜತೆಗಿನ ಬಂದರು ವ್ಯವಹಾರದ ವೈಮನಸ್ಸಿನಿಂದ ಉಳ್ವೇಕರ್ ಬಿಜೆಪಿಯಲ್ಲೆ ಉಳಿದರೆಂಬುದು ಕಟ್ಟರ್ ಬಿಜೆಪಿಗರು ಹೇಳುತ್ತಾರೆ.

ಕಳೆದ ವಿಧಾನ ಸಭಾ ಚುನಾವಣೆ ಹೊತ್ತಲ್ಲಿ ನಿಗೂಢವಾಗಿ ಸಾವಗೀಡಾಗಿದ್ದ ಮೀನುಗಾರರ ಹುಡುಗ ಪರೇಶ್ ಮೇಸ್ತನ ಹೆಸರಲ್ಲಿ ಇಡೀ ಕರಾವಳಿಯ ಮೀನುಗಾರರ ಮತ ಪಡೆದಿದ್ದ ಬಿಜೆಪಿಯವರು ಆ ಬಳಿಕ ಉದಾಸೀನ ಮಾಡಿದ್ದರೆಂಬ ಬೇಸರ ಬೆಸ್ತರಲ್ಲಿತ್ತು. ಅಲ್ಲದೆ ಕಾರವಾರದ ವಾಣಿಜ್ಯ ಬಂದರು ವಿಸ್ತರಣೆಯಿಂದ ತೊಂದರೆಗೀಡಾಗುವ ಮೀನುಗಾರರು ಬಿಜೆಪಿ ಮೇಲೆ ಸಿಟ್ಟಾಗಿದ್ದಾರೆ. ಇದೆಲ್ಲ ಸರಿ ತೂಗಿಸಲು ಮೀನುಗಾರ ಪಂಗಡದ ಉಳ್ವೇಕರ್‌ಗೆ ಟಿಕೆಟ್ ಕೊಟ್ಟು ಅರ್ಹರಿಗೆ ಮೋಸ ಮಾಡಲಾಗಿದೆ ಎಂದು ಬಿಜೆಪಿ ಬಂಡಯಗಾರರು ಹೇಳುತ್ತಿದ್ದಾರೆ.

ಭಟ್ಕಳದ ಬಿಜೆಪಿ ಕಾರ್ಯರ್ಕರು ಸಾಮಾಜಿಕ ಜಾಲತಾಣದಲ್ಲಿ ”ನಿಷ್ಟಾವಂತರಾಗಿ, ಪ್ರಾಮಾಣಿಕರಾಗಿ ದುಡಿದವರಿಗೆ ಬಿಜೆಪಿಯಲ್ಲಿ ಅಧಿಕಾರ ಪಡೆಯಲು ಅವಕಾಶವಿಲ್ಲ. ಪೊಲೀಸ್ ಕೇಸ್ ಹಾಕಿಸಿಕೊಳ್ಳಲು, ಜೈಲಿಗೆ ಹೋಗಲು ಮಾತ್ರ ನಿಷ್ಟಾವಂತರು ಬೇಕೆ?” ಎಂಬ ಅಭಿಯಾನ ಶುರು ಹಚ್ಚಿಕೊಂಡಿದ್ದಾರೆ. ಬಹುಸಂಖ್ಯಾತ ನಾಮಧಾರಿ ಜಾತಿಯ ಭಟ್ಕಳದ ಗೋವಿಂದ ನಾಯ್ಕ್‌ಗೆ ಟಿಕೆಟ್ ಕೊಡುವಂತೆ ಒತ್ತಾಯಿಸಲಾಗಿತ್ತು. ಕೊನೆ ದಿನದವರೆಗೂ ಹಿಂದೂ ಸಂಘಟನೆಯ ಗೋವಿಂದ ನಾಯ್ಕರಿಗೆ ಟಿಕೆಟ್ ಎಂಬ ವಾತಾವರಣವೂ ಇತ್ತು. ಅಂತಿಮವಾಗಿ ಗೋವಿಂದ ನಾಯ್ಕರಿಗೆ ಟಿಕೆಟ್ ಕೊಡದಿರುವುದು ಹಿಂದುತ್ವ ಕಾರ್ಯಕರ್ತರನ್ನು ಕೆರಳಿಸಿದೆ.

ಕೆ.ಜಿ.ನಾಯ್ಕ್

ಸಾಮಾಜಿಕ ಜಾಲ ತಾಣದಲ್ಲಿ ದೀವರು[ನಾಮಧಾರಿ]ಸಮುದಾಯಕ್ಕೆ ಅನ್ಯಾಯ ಮಾಡಲಾಗುತ್ತಿದೆ ಎಂಬ ಚರ್ಚೆ ಜೋರಾಗಿದೆ. 32 ವರ್ಷದಿಂದ ನಾನು ಬಿಜೆಪಿಯ ವಿವಿಧ ಸಂಘಟನೆಯಲ್ಲಿ ಸಕ್ರಿಯನಾಗಿದ್ದೇನೆ. ಜಿಲ್ಲಾಧ್ಯಕ್ಷನಾಗಿಯೂ ಕೆಲಸ ಮಾಡಿದ್ದೇನೆ. ಟಿಕೆಟ್ ಕೇಳಿದವರಲ್ಲಿ ನಾನೇ ಹಿರಿಯ. ಒಮ್ಮೆ ಅವಕಾಶ ಕೊಡದಿದ್ದರೆ ಪಕ್ಷದ ಸಂಘಟನೆಯಲ್ಲಿ ಮುಂದುವರಿಯಲಾರೆ. ಕಳೆದ ಮೂರು ಬಾರಿ ಕರಾವಳಿ ಕಡೆಯವರಿಗೆ ಅವಕಾಶ ಕೊಟ್ಟರೂ ಗೆಲ್ಲಲಾಗಲಿಲ್ಲ. ಈ ಬಾರಿ ಘಟ್ಟದ ಮೇಲಿನ ನನಗೆ ಟಿಕೆಟ್ ಕೊಡಿಯೆಂದು ಸಿದ್ದಾಪುರದ ಕೆ.ಜಿ.ನಾಯ್ಕ್ ಬೇಡಿಕೆ ಇಟ್ಟಿದ್ದರು. ಅವರೀಗ ಒಳಗೊಳಗೆ ಬುಸುಗುಡುತ್ತಿದ್ದಾರೆಂಬ ಮಾತು ಬಿಜೆಪಿ ವಲಯಲ್ಲಿ ಕೇಳಿಬರುತ್ತಿದೆ. ಜಿಲ್ಲಾ ಬಿಜೆಪಿ ಮಾಧ್ಯಮ ವಕ್ತಾರ ನಾಗರಾಜ ನಾಯ್ಕ್, ಗೋಕರ್ಣದ ನಾಗರಾಜ್ ನಾಯ್ಕ್ ತೊರ್ಕೆ ಹತಾಶೆಲ್ಲಿದ್ದಾರೆ.

ಈ ಗೊಣಗಾಟದ ನಡುವೆಯೇ ಅಂಕೋಲಾದ ಪಕ್ಕಾ ಸಂಘಪರಿವಾರಿ-ಮಾಜಿ ಪಟ್ಟಣ ಪಂಚಾಯತ್ ಅಧ್ಯಕ್ಷ ಭಾಸ್ಕರ್ ನಾರ್ವೇಕರ್ ಮತ್ತು ಭಟ್ಕಳ ಮೂಲದ ಹೈಕೋರ್ಟ್ ವಕೀಲ ದತ್ತಾತ್ರೇಯ ನಾಯ್ಕ್ ಬಂಡಾಯ ಅಭ್ಯರ್ಥಿಗಳಾಗಿ ಕಣಕ್ಕಿಳಿಯಲು ಸಿದ್ದರಾಗಿದ್ದಾರೆ.. .ಹಣವಿರುವವರಿಗೆ ಟಿಕೆಟ್ ಎಂತಾದರೆ ಹೋರಾಟದಲ್ಲಿ, ಸಂಘಟನೆಯಲ್ಲಿ ಕೇಸ್ ಹಾಕಿಸಿಕೊಳ್ಳುವ ನಿಷ್ಟಾವಂತರ ಪಾಡೇನು? ಎಂದು ನಾಯ್ಕ್ ಪ್ರಶ್ನಿಸುತ್ತಾರೆ. ಸಂಘ ಮೂಲದಿಂದ ಬಂದು 33 ವರ್ಷದಿಂದ ಪಾರ್ಟಿ ಕೆಲಸ ಮಾಡುತ್ತಿರವ ನನಗೆ ಟಿಕೆಟ್ ಕೊಡಿಸಿಯೆಂದು ಕಾಗೇರಿ, ಹೆಬ್ಬಾರ್, ಅನಂತ್ ಹೆಗಡೆ ಮನೆ ಬಾಗಿಲಿಗೆ ಅಲೆದಿದ್ದೇನೆ.. ಅವರ‍್ಯಾರೂ ಪ್ರಯತ್ನ ಮಾಡಿಲ್ಲ. ನಿಷ್ಟಾವಂತರಿಗೆ ನೋವಾಗಿದೆ. ಅದಕ್ಕಾಗಿ ಬಂಡಾಯ ಸ್ಪರ್ಧೆಯೆಂದು ನಾರ್ವೇಕರ್ ಸಂದಾನಕ್ಕೆ ಬಂದಿದ್ದ ಜಿಲ್ಲಾಧ್ಯಕ್ಷ ಮತ್ತು ಪ್ರಧಾನ ಕಾರ್ಯದರ್ಶಿಗೆ ಹೇಳಿಕಳಿಸಿದ್ದರೆ ಎನ್ನಲಾಗಿದೆ.

ಒಟ್ಟಿನಲ್ಲಿ ಈ ಬಂಡಾಯದಿಂದ ಬಿಜೆಪಿ ಕೈಗೆ ಬಂದ ತುತ್ತು ಬಾಯಿಗೆ ಬರುವುದು ಕಷ್ಟವಾಗಿದೆಯೆಂಬ ಚರ್ಚೆ ಜಿಲ್ಲೆಯಲ್ಲಿ ನಡೆದಿದೆ.


ಇದನ್ನೂ ಓದಿ: ಉತ್ತರ ಕನ್ನಡ; ಸ್ಥಳಿಯಾಡಳಿತ ಸಂಸ್ಥೆಗಳ ಕ್ಷೇತ್ರದ MLC ಟಿಕೆಟ್ ತಂತ್ರಗಾರಿಕೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕಿರಣ್ ರಿಜಿಜು ‘ಸೇಫ್‌’ವಾದ ಅಲ್ಲಗಳೆದ ಸರಣಿ ಮುಸ್ಲಿಂ ವಿರೋಧಿ ಹಿಂಸಾಚಾರಾಗಳು

ಜೂನ್ 15, 2026ರಂದು ಪ್ರಕಟಗೊಂಡ ಇಂಡಿಯನ್ ಎಕ್ಸ್‌ಪ್ರೆಸ್‌ನ 'ಐಡಿಯಾ ಎಕ್ಸ್‌ಚೇಂಜ್' ಕಾರ್ಯಕ್ರಮದ ಸಂದರ್ಶನವೊಂದರಲ್ಲಿ ಕೇಂದ್ರ ಅಲ್ಪಸಂಖ್ಯಾತ ವ್ಯವಹಾರಗಳ ಸಚಿವ ಕಿರಣ್ ರಿಜಿಜು ಅವರು, “ಭಾರತದಲ್ಲಿ ಮುಸ್ಲಿಮರು ಸುರಕ್ಷಿತವಾಗಿಲ್ಲ ಎಂದು ಹೇಳುವ ಮೂಲಕ ನೀವು ದೇಶದ ಚಾರಿತ್ರ್ಯಕ್ಕೆ...

ರಾಮ ಮಂದಿರ ದೇಣಿಗೆ ದುರುಪಯೋಗ ವಿವಾದ; ಪ್ರಾಥಮಿಕ ವರದಿ ಸಲ್ಲಿಸಿದ ಎಸ್‌ಐಟಿ

ಅಯೋಧ್ಯೆಯ ರಾಮ ಮಂದಿರದಲ್ಲಿ ಸ್ವೀಕರಿಸಿದ ದೇಣಿಗೆಯ ದುರುಪಯೋಗದ ಆರೋಪದ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ) ಜೂನ್ 23 ಮಂಗಳವಾರ ಉತ್ತರ ಪ್ರದೇಶ ಸರ್ಕಾರಕ್ಕೆ ತನ್ನ ಪ್ರಾಥಮಿಕ ತನಿಖಾ ವರದಿಯನ್ನು ಸಲ್ಲಿಸಿದೆ...

ಮುಖ್ಯಮಂತ್ರಿ ಸುವೇಂದು ಅಧಿಕಾರಿಗೆ ನೋಟಿಸ್ ಜಾರಿ ಮಾಡಿದ ಕಲ್ಕತ್ತಾ ಹೈಕೋರ್ಟ್

ಭವಾನಿಪುರ ವಿಧಾನಸಭಾ ಕ್ಷೇತ್ರದ ಇತ್ತೀಚಿನ ಚುನಾವಣೆಯಲ್ಲಿ ಸುವೇಂದು ಅಧಿಕಾರಿ ಅವರ ಆಯ್ಕೆಯನ್ನು ಪ್ರಶ್ನಿಸಿ ಮಾಜಿ ಮುಖ್ಯಮಂತ್ರಿ ಹಾಗೂ ಟಿಎಂಸಿ (TMC) ನಾಯಕಿ ಮಮತಾ ಬ್ಯಾನರ್ಜಿ ಸಲ್ಲಿಕೆ ಮಾಡಿರುವ ಚುನಾವಣಾ ಅರ್ಜಿಗೆ ಸಂಬಂಧಿಸಿದಂತೆ ಕಲ್ಕತ್ತಾ...

TMC ಅಧ್ಯಕ್ಷ ಸ್ಥಾನದಿಂದ ಮಮತಾ ಬ್ಯಾನರ್ಜಿಯನ್ನು ಉಚ್ಚಾಟಿಸಿದ ತೃಣಮೂಲ ಬಂಡಾಯ ಶಾಸಕರು

ಪಶ್ಚಿಮ ಬಂಗಾಳದ ವಿಧಾನಸಭಾ ಚುನಾವಣಾ ಸೋಲಿನ ಬೆನ್ನಲ್ಲೇ ತೃಣಮೂಲ ಕಾಂಗ್ರೆಸ್ ಪಕ್ಷವು ಇತಿಹಾಸದಲ್ಲೇ ಕಾಣದ ಅತ್ಯಂತ ದೊಡ್ಡ ಬಂಡಾಯಕ್ಕೆ ಸಾಕ್ಷಿಯಾಗಿದೆ. ಬಂಡಾಯ ಶಾಸಕರ ನೇತೃತ್ವ ವಹಿಸಿರುವ ಋತಬ್ರತಾ ಬ್ಯಾನರ್ಜಿ ಸೋಮವಾರ ಮಮತಾ ಬ್ಯಾನರ್ಜಿ...

ಯುಪಿ: ಮೊಹರಂ ಮೆರವಣಿಗೆಯಲ್ಲಿ ಪಿತೂರಿ: ಪಾಕ್ ಪರ ಘೋಷಣೆಯ ಸುಳ್ಳು ವಿಡಿಯೋ ಹರಿಬಿಟ್ಟ ಇಬ್ಬರು ಹಿಂದುತ್ವವಾದಿಗಳ ಬಂಧನ 

ಬರೇಲಿ (ಉತ್ತರ ಪ್ರದೇಶ): ಮೊಹರಂ ಮೆರವಣಿಗೆಯೊಂದರಲ್ಲಿ "ಪಾಕಿಸ್ತಾನ್ ಜಿಂದಾಬಾದ್" ಎಂದು ದೇಶವಿರೋಧಿ ಘೋಷಣೆ ಕೂಗಲಾಗಿದೆ ಎಂಬ ನಕಲಿ ವೀಡಿಯೋ ಸೃಷ್ಟಿಸಿ, ಮುಸ್ಲಿಂ ಸಮುದಾಯದ ಮೇಲೆ ಸುಳ್ಳು ಆರೋಪ ಹೊರಿಸಲು ಯತ್ನಿಸಿದ ಇಬ್ಬರು ಹಿಂದುತ್ವವಾದಿ...

ಮಕ್ಕಳಿಗೆ ಆರ್‌ಎಸ್‌ಎಸ್‌ ತರಬೇತಿ ನೀಡುವುದನ್ನು ಟೀಕಿಸಿ ವಿಡಿಯೋ ಹಂಚಿಕೆ : ಯುವಕನನ್ನು ವಶಕ್ಕೆ ಪಡೆದ ಪೊಲೀಸರು!

ರಾಜಸ್ಥಾನದ ಜುಂಜುನು ಜಿಲ್ಲೆಯ ನವೀನ್ ಚೌಧರಿ ಎಂಬ 25 ವರ್ಷದ ಯುವಕ, ರಾಷ್ಟ್ರೀಯ ಸ್ವಯಂಸೇವಕ ಸಂಘ (ಆರ್‌ಎಸ್‌ಎಸ್‌) ಕುರಿತು ಸಾಮಾಜಿಕ ಜಾಲತಾಣ ಇನ್‌ಸ್ಟಾಗ್ರಾಮ್‌ನಲ್ಲಿ ವಿಡಿಯೋವೊಂದನ್ನು ಹಂಚಿಕೊಂಡಿದ್ದರು. 'ಜುಂಜುನು ಎಕ್ಸ್‌ಪ್ರೆಸ್' ಎಂಬ ಇನ್‌ಸ್ಟಾಗ್ರಾಮ್ ಪೇಜ್‌ನಲ್ಲಿ...

ಮುಂಗಾರು ಮಳೆ ಕೊರತೆ: ಇಡೀ ದೇಶದಲ್ಲಿ ಆತಂಕದ ಕಾರ್ಮೋಡ

ಭಾರತದ ಆಕಾಶದಲ್ಲಿ ಸದ್ಯ ಮೂಡುತ್ತಿರುವ ಉಪಗ್ರಹ ಚಿತ್ರಗಳು ಮತ್ತು ಹವಾಮಾನ ಇಲಾಖೆಯ ದತ್ತಾಂಶಗಳು ದೇಶಕ್ಕೆ ದೊಡ್ಡ ಗಂಡಾಂತರದ ಮುನ್ಸೂಚನೆ ನೀಡುತ್ತಿವೆ. ಕೃಷಿ ಚಟುವಟಿಕೆಗಳ ಅತ್ಯಂತ ನಿರ್ಣಾಯಕ ಅವಧಿಯಾದ ಜೂನ್ ತಿಂಗಳಲ್ಲೇ ಮುಂಗಾರು ಮಳೆ...

ನೀಟ್ ಪರೀಕ್ಷೆ ಪದೇ ಪದೇ ಬರೆಯುವಂತೆ ಮಾಡಿದ್ದು ಯಾರು? : ಬಿ.ಕೆ ಹರಿಪ್ರಸಾದ್

ನೀಟ್ ಪರೀಕ್ಷೆ ಪದೇ ಪದೇ ಬರೆಯುವಂತೆ ಮಾಡಿದ್ದು ಯಾರು? ಬಿಜೆಪಿ ನಾಯಕರ ಆರೋಪಗಳನ್ನು ನೋಡಿದರೆ, ತಪ್ಪು ಮಾಡಿದವರೇ ಉಪದೇಶ ಮಾಡುವ ಸ್ಥಿತಿಗೆ ಬಂದಂತಿದೆ ಎಂದು ಕೆಪಿಸಿಸಿ ನೂತನ ಅಧ್ಯಕ್ಷ ಬಿ.ಕೆ ಹರಿಪ್ರಸಾದ್ ಹೇಳಿದರು....

ಎಸ್‌ಐಆರ್‌ನಲ್ಲಿ ಕೈಬಿಟ್ಟ ವ್ಯಕ್ತಿ ಕುರಿತು ಮಹತ್ವದ ಹೇಳಿಕೆ ನೀಡಿದ ಸುಪ್ರೀಂ ಕೋರ್ಟ್

ವಿಶೇಷ ತೀವ್ರ ಪರಿಷ್ಕರಣೆಯ (Special Intensive Revision) ಸಂದರ್ಭದಲ್ಲಿ ಮತದಾರರ ಪಟ್ಟಿಯಿಂದ ಹೆಸರು ಕೈಬಿಟ್ಟಿರುವ ಅಥವಾ ಹೊರಗಿಟ್ಟಿರುವ ಬಂಗಾಳದ ಮುರ್ಷಿದಾಬಾದ್‌ನ 75 ವರ್ಷದ ವಕೀಲರೊಬ್ಬರು "ಪಶ್ಚಿಮ ಬಂಗಾಳದ ನಿಜವಾದ ಮತ್ತು ವಿಶ್ವಾಸಾರ್ಹ ನಾಗರಿಕ" ನಂತೆ...

ನೀಟ್ ಅಕ್ರಮ, ವ್ಯವಸ್ಥೆಯ ವೈಫಲ್ಯಕ್ಕೆ ಮತ್ತೊಂದು ಬಲಿ: ಮರು ಪರೀಕ್ಷೆ ಹಿಂದಿನ ದಿನವೇ ಆತ್ಮಹತ್ಯೆಗೆ ಶರಣಾದ ಪ್ರತಿಭಾವಂತ ವಿದ್ಯಾರ್ಥಿನಿ 

ಹೈದರಾಬಾದ್: ದೇಶದಲ್ಲಿ ವೈದ್ಯಕೀಯ ಶಿಕ್ಷಣದ ಪ್ರವೇಶಾತಿಗಾಗಿ ನಡೆಯುವ ರಾಷ್ಟ್ರೀಯ ಅರ್ಹತಾ ಮತ್ತು ಪ್ರವೇಶ ಪರೀಕ್ಷೆಯ (NEET) ಸುತ್ತ ಹಬ್ಬಿರುವ ಅಕ್ರಮಗಳ ಜಾಲ ಮತ್ತು ವ್ಯವಸ್ಥೆಯ ನಿರಂತರ ಗೊಂದಲಗಳು ಮತ್ತೊಂದು ಯುವ ಜೀವವನ್ನು ಬಲಿಪಡೆದಿವೆ.  ಜೂನ್...