Homeಕರ್ನಾಟಕವಿಧಾನ ಪರಿಷತ್‌ಗೆ ಟಿಕೆಟ್ ಪೈಪೋಟಿ; ಉತ್ತರ ಕನ್ನಡ ಬಿಜೆಪಿಯಲ್ಲಿ ಬೆಂಕಿ!!

ವಿಧಾನ ಪರಿಷತ್‌ಗೆ ಟಿಕೆಟ್ ಪೈಪೋಟಿ; ಉತ್ತರ ಕನ್ನಡ ಬಿಜೆಪಿಯಲ್ಲಿ ಬೆಂಕಿ!!

- Advertisement -
- Advertisement -

ಉತ್ತರ ಕನ್ನಡದಲ್ಲಿ ವಿಧಾನ ಪರಿಷತ್ತಿಗೆ ಸ್ಥಳಿಯಾಡಳಿತ ಸಂಸ್ಥೆಗಳ ಕ್ಷೇತ್ರದಿಂದ ನಡೆಯಲಿರುವ ಚುನಾವಣೆ ಆಖಾಡಕ್ಕೀಗ ರಂಗೇರಿದೆ! ಆಡಳಿತಾರೂಢ ಬಿಜೆಪಿಯಲ್ಲಿ ತಿಂಗಳಾನುಗಟ್ಟಳೆ ನಡೆದ ಟಿಕೆಟ್‌ಗೆ ಪೈಪೋಟಿಗೆ ಬ್ರೇಕ್ ಬಿದ್ದಿದ್ದು, ಕಾರವಾರದ ಮೀನುಗಾರ ಸಮುದಾಯದ ಗಣಪತಿ ದುಮ್ಮಾ ಉಳ್ವೇಕರ್‌ರನ್ನು ಅಭ್ಯರ್ಥಿಯೆಂದು ಘೋಷಿಸಲಾಗಿದೆ. ಅಭ್ಯರ್ಥಿ ಹೆಸರು ಪ್ರಕಟವಾಗುತ್ತಿದ್ದಂತೆ ಜಿಲ್ಲಾ ಬಿಜೆಪಿಯಲ್ಲಿ ಬೆಂಕಿಬಿದ್ದಂತಾಗಿದ್ದು, ಕೆಲ ಕಾರ್ಯಕರ್ತರು ಸಾಮಾಜಿಕ ಜಾಲತಾಣದಲ್ಲಿ ಅಸಮಾಧಾನ ಹೊರಹಾಕುತ್ತಿದ್ದಾರೆ.

ಬಿಜೆಪಿ ತನ್ನ ಭಾರಕ್ಕೆ ತಾನೆ ಕುಸಿಯುತ್ತಿದೆ; ಹಾದಿ-ಬೀದಿಯಲ್ಲಿ ಹೋಗುವವರನ್ನೆಲ್ಲ ಕಾಂಗ್ರೆಸ್ಸಿಂದ ಬಂದವರೆಂದು ಹೇಳಿ ತಂದು ತುಂಬಿಕೊಂಡಿದ್ದರ ಫಲವಿದು ಎಂದು ಎರಡ್ಮೂರು ದಶಕದಿಂದ ಪಕ್ಷಕ್ಕಾಗಿ ಬೆವರಿಳಿಸಿದ ಹಿರಿಯರು ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ. ಬಿಜೆಪಿಯ ಕಷ್ಟದ ದಿನಗಳಿಂದಲೂ ಆ ಪಾರ್ಟಿಯಲ್ಲಿದ್ದವರೂ ಸೇರಿದಂತೆ ಸುಮಾರು ಒಂದೂ ಮುಕ್ಕಾಲು ಡಜನ್ ಮಂದಿ ಟಿಕೆಟ್‌ಗಾಗಿ ಲಾಭಿ ನಡೆಸಿದ್ದರು. ಸ್ಪೀಕರ್ ವಿಶ್ವೇಶ್ವರ ಹೆಗಡೆ ಕಾಗೇರಿ, ಮಂತ್ರಿ ಹೆಬ್ಬಾರ್, ಸಂಸದ ಅನಂತಕುಮಾರ್ ಹೆಗಡೆ ಮತ್ತು ಶಾಸಕಿ ರೂಪಾಲಿ ನಾಯ್ಕ್ ಒಂದಾಗಿ ಉಳ್ವೇಕರ್ ಕ್ಯಾಂಡಿಡೇಟ್ ಮಾಡಿದ್ದಾರೆನ್ನಲಾಗಿದೆ.

ಗೋವಿಂದ ನಾಯ್ಕ್‌

ಕಳೆದ ಬಾರಿ ಸೋಲುತ್ತಾರೆಂದು ಗೊತ್ತಿದ್ದೂ ಉಳ್ವೇಕರ್‌ರನ್ನು ನಿಲ್ಲಿಸಲಾಗಿತ್ತು. ಈಗ ಗೆಲ್ಲುವ ಅವಕಾಶವಿರುವಾಗ ಅಂದು ಪಟ್ಟ ಕಷ್ಟಕ್ಕೆ ಇನಾಮು ಕೊಡಬೇಕಾದುದು ಧರ್ಮವೆಂದು ಪಕ್ಷದ ಹಿರಿಯರು ಹೇಳುತ್ತಿದ್ದಾರಾದರೂ, ಇದೆಲ್ಲ ಮುನಿಸಿಕೊಂಡಿರುವ ಮೀನುಗಾರ ಸಮುದಾಯವನ್ನು ಸಮಾಧಾನಿಸುವ ನಾಟಕವೆಂದು ಟಿಕೆಟ್ ವಂಚಿತರ ಬೆಂಬಲಿಗರ ಅಭಿಪ್ರಾಯವಾಗಿದೆ. ಉಳ್ವೇಕರ್ ನಿಷ್ಟಾವಂತ ಬಿಜೆಪಿಗರಲ್ಲ; ಅವರು ಆನಂದ ಅಸ್ನೋಟಿಕರ್ ಮತ್ತವರ ತಂದೆಯ ಹಿಂಬಾಲಕರಾಗಿದ್ದರು. ಆನಂದ ಬಿಜೆಪಿಗೆ ಬಂದಾಗ ಅವರೊಂದಿಗೆ ಉಳ್ವೇಕರ್ ಬಂದಿದ್ದರು. ಆದರೆ ಆನಂದ್ ಜತೆಗಿನ ಬಂದರು ವ್ಯವಹಾರದ ವೈಮನಸ್ಸಿನಿಂದ ಉಳ್ವೇಕರ್ ಬಿಜೆಪಿಯಲ್ಲೆ ಉಳಿದರೆಂಬುದು ಕಟ್ಟರ್ ಬಿಜೆಪಿಗರು ಹೇಳುತ್ತಾರೆ.

ಕಳೆದ ವಿಧಾನ ಸಭಾ ಚುನಾವಣೆ ಹೊತ್ತಲ್ಲಿ ನಿಗೂಢವಾಗಿ ಸಾವಗೀಡಾಗಿದ್ದ ಮೀನುಗಾರರ ಹುಡುಗ ಪರೇಶ್ ಮೇಸ್ತನ ಹೆಸರಲ್ಲಿ ಇಡೀ ಕರಾವಳಿಯ ಮೀನುಗಾರರ ಮತ ಪಡೆದಿದ್ದ ಬಿಜೆಪಿಯವರು ಆ ಬಳಿಕ ಉದಾಸೀನ ಮಾಡಿದ್ದರೆಂಬ ಬೇಸರ ಬೆಸ್ತರಲ್ಲಿತ್ತು. ಅಲ್ಲದೆ ಕಾರವಾರದ ವಾಣಿಜ್ಯ ಬಂದರು ವಿಸ್ತರಣೆಯಿಂದ ತೊಂದರೆಗೀಡಾಗುವ ಮೀನುಗಾರರು ಬಿಜೆಪಿ ಮೇಲೆ ಸಿಟ್ಟಾಗಿದ್ದಾರೆ. ಇದೆಲ್ಲ ಸರಿ ತೂಗಿಸಲು ಮೀನುಗಾರ ಪಂಗಡದ ಉಳ್ವೇಕರ್‌ಗೆ ಟಿಕೆಟ್ ಕೊಟ್ಟು ಅರ್ಹರಿಗೆ ಮೋಸ ಮಾಡಲಾಗಿದೆ ಎಂದು ಬಿಜೆಪಿ ಬಂಡಯಗಾರರು ಹೇಳುತ್ತಿದ್ದಾರೆ.

ಭಟ್ಕಳದ ಬಿಜೆಪಿ ಕಾರ್ಯರ್ಕರು ಸಾಮಾಜಿಕ ಜಾಲತಾಣದಲ್ಲಿ ”ನಿಷ್ಟಾವಂತರಾಗಿ, ಪ್ರಾಮಾಣಿಕರಾಗಿ ದುಡಿದವರಿಗೆ ಬಿಜೆಪಿಯಲ್ಲಿ ಅಧಿಕಾರ ಪಡೆಯಲು ಅವಕಾಶವಿಲ್ಲ. ಪೊಲೀಸ್ ಕೇಸ್ ಹಾಕಿಸಿಕೊಳ್ಳಲು, ಜೈಲಿಗೆ ಹೋಗಲು ಮಾತ್ರ ನಿಷ್ಟಾವಂತರು ಬೇಕೆ?” ಎಂಬ ಅಭಿಯಾನ ಶುರು ಹಚ್ಚಿಕೊಂಡಿದ್ದಾರೆ. ಬಹುಸಂಖ್ಯಾತ ನಾಮಧಾರಿ ಜಾತಿಯ ಭಟ್ಕಳದ ಗೋವಿಂದ ನಾಯ್ಕ್‌ಗೆ ಟಿಕೆಟ್ ಕೊಡುವಂತೆ ಒತ್ತಾಯಿಸಲಾಗಿತ್ತು. ಕೊನೆ ದಿನದವರೆಗೂ ಹಿಂದೂ ಸಂಘಟನೆಯ ಗೋವಿಂದ ನಾಯ್ಕರಿಗೆ ಟಿಕೆಟ್ ಎಂಬ ವಾತಾವರಣವೂ ಇತ್ತು. ಅಂತಿಮವಾಗಿ ಗೋವಿಂದ ನಾಯ್ಕರಿಗೆ ಟಿಕೆಟ್ ಕೊಡದಿರುವುದು ಹಿಂದುತ್ವ ಕಾರ್ಯಕರ್ತರನ್ನು ಕೆರಳಿಸಿದೆ.

ಕೆ.ಜಿ.ನಾಯ್ಕ್

ಸಾಮಾಜಿಕ ಜಾಲ ತಾಣದಲ್ಲಿ ದೀವರು[ನಾಮಧಾರಿ]ಸಮುದಾಯಕ್ಕೆ ಅನ್ಯಾಯ ಮಾಡಲಾಗುತ್ತಿದೆ ಎಂಬ ಚರ್ಚೆ ಜೋರಾಗಿದೆ. 32 ವರ್ಷದಿಂದ ನಾನು ಬಿಜೆಪಿಯ ವಿವಿಧ ಸಂಘಟನೆಯಲ್ಲಿ ಸಕ್ರಿಯನಾಗಿದ್ದೇನೆ. ಜಿಲ್ಲಾಧ್ಯಕ್ಷನಾಗಿಯೂ ಕೆಲಸ ಮಾಡಿದ್ದೇನೆ. ಟಿಕೆಟ್ ಕೇಳಿದವರಲ್ಲಿ ನಾನೇ ಹಿರಿಯ. ಒಮ್ಮೆ ಅವಕಾಶ ಕೊಡದಿದ್ದರೆ ಪಕ್ಷದ ಸಂಘಟನೆಯಲ್ಲಿ ಮುಂದುವರಿಯಲಾರೆ. ಕಳೆದ ಮೂರು ಬಾರಿ ಕರಾವಳಿ ಕಡೆಯವರಿಗೆ ಅವಕಾಶ ಕೊಟ್ಟರೂ ಗೆಲ್ಲಲಾಗಲಿಲ್ಲ. ಈ ಬಾರಿ ಘಟ್ಟದ ಮೇಲಿನ ನನಗೆ ಟಿಕೆಟ್ ಕೊಡಿಯೆಂದು ಸಿದ್ದಾಪುರದ ಕೆ.ಜಿ.ನಾಯ್ಕ್ ಬೇಡಿಕೆ ಇಟ್ಟಿದ್ದರು. ಅವರೀಗ ಒಳಗೊಳಗೆ ಬುಸುಗುಡುತ್ತಿದ್ದಾರೆಂಬ ಮಾತು ಬಿಜೆಪಿ ವಲಯಲ್ಲಿ ಕೇಳಿಬರುತ್ತಿದೆ. ಜಿಲ್ಲಾ ಬಿಜೆಪಿ ಮಾಧ್ಯಮ ವಕ್ತಾರ ನಾಗರಾಜ ನಾಯ್ಕ್, ಗೋಕರ್ಣದ ನಾಗರಾಜ್ ನಾಯ್ಕ್ ತೊರ್ಕೆ ಹತಾಶೆಲ್ಲಿದ್ದಾರೆ.

ಈ ಗೊಣಗಾಟದ ನಡುವೆಯೇ ಅಂಕೋಲಾದ ಪಕ್ಕಾ ಸಂಘಪರಿವಾರಿ-ಮಾಜಿ ಪಟ್ಟಣ ಪಂಚಾಯತ್ ಅಧ್ಯಕ್ಷ ಭಾಸ್ಕರ್ ನಾರ್ವೇಕರ್ ಮತ್ತು ಭಟ್ಕಳ ಮೂಲದ ಹೈಕೋರ್ಟ್ ವಕೀಲ ದತ್ತಾತ್ರೇಯ ನಾಯ್ಕ್ ಬಂಡಾಯ ಅಭ್ಯರ್ಥಿಗಳಾಗಿ ಕಣಕ್ಕಿಳಿಯಲು ಸಿದ್ದರಾಗಿದ್ದಾರೆ.. .ಹಣವಿರುವವರಿಗೆ ಟಿಕೆಟ್ ಎಂತಾದರೆ ಹೋರಾಟದಲ್ಲಿ, ಸಂಘಟನೆಯಲ್ಲಿ ಕೇಸ್ ಹಾಕಿಸಿಕೊಳ್ಳುವ ನಿಷ್ಟಾವಂತರ ಪಾಡೇನು? ಎಂದು ನಾಯ್ಕ್ ಪ್ರಶ್ನಿಸುತ್ತಾರೆ. ಸಂಘ ಮೂಲದಿಂದ ಬಂದು 33 ವರ್ಷದಿಂದ ಪಾರ್ಟಿ ಕೆಲಸ ಮಾಡುತ್ತಿರವ ನನಗೆ ಟಿಕೆಟ್ ಕೊಡಿಸಿಯೆಂದು ಕಾಗೇರಿ, ಹೆಬ್ಬಾರ್, ಅನಂತ್ ಹೆಗಡೆ ಮನೆ ಬಾಗಿಲಿಗೆ ಅಲೆದಿದ್ದೇನೆ.. ಅವರ‍್ಯಾರೂ ಪ್ರಯತ್ನ ಮಾಡಿಲ್ಲ. ನಿಷ್ಟಾವಂತರಿಗೆ ನೋವಾಗಿದೆ. ಅದಕ್ಕಾಗಿ ಬಂಡಾಯ ಸ್ಪರ್ಧೆಯೆಂದು ನಾರ್ವೇಕರ್ ಸಂದಾನಕ್ಕೆ ಬಂದಿದ್ದ ಜಿಲ್ಲಾಧ್ಯಕ್ಷ ಮತ್ತು ಪ್ರಧಾನ ಕಾರ್ಯದರ್ಶಿಗೆ ಹೇಳಿಕಳಿಸಿದ್ದರೆ ಎನ್ನಲಾಗಿದೆ.

ಒಟ್ಟಿನಲ್ಲಿ ಈ ಬಂಡಾಯದಿಂದ ಬಿಜೆಪಿ ಕೈಗೆ ಬಂದ ತುತ್ತು ಬಾಯಿಗೆ ಬರುವುದು ಕಷ್ಟವಾಗಿದೆಯೆಂಬ ಚರ್ಚೆ ಜಿಲ್ಲೆಯಲ್ಲಿ ನಡೆದಿದೆ.


ಇದನ್ನೂ ಓದಿ: ಉತ್ತರ ಕನ್ನಡ; ಸ್ಥಳಿಯಾಡಳಿತ ಸಂಸ್ಥೆಗಳ ಕ್ಷೇತ್ರದ MLC ಟಿಕೆಟ್ ತಂತ್ರಗಾರಿಕೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಉಪಚುನಾವಣೆ : ಬಿಹಾರದ ಬಂಕಿಪುರದಲ್ಲಿ ಪ್ರಶಾಂತ್ ಕಿಶೋರ್‌ಗೆ ಐತಿಹಾಸಿಕ ಗೆಲುವು; ಇನ್ನೆರಡು ಕ್ಷೇತ್ರಗಳು ಕಾಂಗ್ರೆಸ್-ಬಿಜೆಪಿ ಪಾಲು

ಬಿಹಾರದ ಬಂಕಿಪುರ, ಗುಜರಾತ್‌ನ ಮಂಜಲ್‌ಪುರ ಮತ್ತು ಮಧ್ಯಪ್ರದೇಶದ ದಾಟಿಯಾ ವಿಧಾನಸಭಾ ಕ್ಷೇತ್ರಗಳಿಗೆ ಜುಲೈ 30ರಂದು ನಡೆದ ಉಪಚುನಾವಣೆಯ ಫಲಿತಾಂಶ ಸೋಮವಾರ (ಆ.3) ಹೊರಬಿದ್ದಿದ್ದಿದೆ. ಬಿಜೆಪಿಯ ಭದ್ರಕೋಟೆ ಎನಿಸಿಕೊಂಡಿದ್ದ, ಕಳೆದ 31 ವರ್ಷಗಳಿಂದ ಬಿಜೆಪಿಯೇ...

‘ಪಂಕ್ಚರ್-ತಲಾ ಬನಾನೆ ವಾಲೆಗಳೇ ಹೆಚ್ಚು’: ನೀಟ್ ಅಕ್ರಮಗಳ ವಿರುದ್ಧ ಪ್ರತಿಭಟಿಸಿದವರ ವಿರುದ್ಧ ನಾಲಿಗೆ ಹರಿಬಿಟ್ಟ ಬಿಜೆಪಿ ನಾಯಕ ರಮೇಶ್ ಬಿಧು

ದೆಹಲಿಯ ಜಂತರ್ ಮಂತರ್‌ನಲ್ಲಿ ‘ನೀಟ್’ (NEET) ಪರೀಕ್ಷೆಯ ಅಕ್ರಮಗಳ ವಿರುದ್ಧ ಧ್ವನಿಯೆತ್ತಿದ ಯುವಜನತೆ ಮತ್ತು ವಿದ್ಯಾರ್ಥಿಗಳ ಹೋರಾಟವನ್ನು ದಮನ ಮಾಡಲು ಯತ್ನಿಸುತ್ತಿರುವ ಬಿಜೆಪಿ, ಈಗ ಅವರ ವಿರುದ್ಧವೇ ಅತ್ಯಂತ ಕೀಳುಮಟ್ಟದ ಇಸ್ಲಾಮೋಫೋಬಿಕ್ ಮತ್ತು...

ಲೈಂಗಿಕ ಕಿರುಕುಳ ಪ್ರಕರಣದಲ್ಲಿ ಖುಲಾಸೆ : ಇಡೀ ವ್ಯವಸ್ಥೆಯೇ ಬ್ರಿಜ್ ಭೂಷಣ್‌ರನ್ನು ರಕ್ಷಿಸಿತು ಎಂದ ವಿನೇಶ್ ಫೋಗಟ್; ಮೇಲ್ಮನವಿ ಸಲ್ಲಿಸಲು ಮಹಿಳಾ ಕುಸ್ತಿಪಟುಗಳ ನಿರ್ಧಾರ

ಮಹಿಳಾ ಕುಸ್ತಿಪಟುಗಳಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪ ಎದುರಿಸುತ್ತಿದ್ದ ಭಾರತೀಯ ಕುಸ್ತಿ ಫೆಡರೇಶನ್ (WFI) ಮಾಜಿ ಅಧ್ಯಕ್ಷ ಹಾಗೂ ಬಿಜೆಪಿ ಮಾಜಿ ಸಂಸದ ಬ್ರಿಜ್ ಭೂಷಣ್ ಶರಣ್ ಸಿಂಗ್ ಅವರನ್ನು ದೆಹಲಿಯ ರೋಸ್...

ಕರ್ನಾಟಕದಲ್ಲಿ SIR ಬಿಹಾರ-ಬಂಗಾಳಕ್ಕಿಂತ ಭೀಕರ: ಆಗಸ್ಟ್ 4 ರಂದು ಜನಪರ ಸಂಘಟನೆಗಳಿಂದ ಮಹತ್ವದ ಮಾಧ್ಯಮಗೋಷ್ಠಿ

ಬೆಂಗಳೂರು: ಕರ್ನಾಟಕದಲ್ಲಿ ನಡೆಯುತ್ತಿರುವ ಎಸ್‌ಐಆರ್ (SIR) ಪ್ರಕ್ರಿಯೆಯು ಬಿಹಾರ ಮತ್ತು ಪಶ್ಚಿಮ ಬಂಗಾಳ ರಾಜ್ಯಗಳಿಗಿಂತಲೂ ಅತ್ಯಂತ ಭೀಕರ ರೂಪ ಪಡೆದುಕೊಳ್ಳುತ್ತಿದೆ ಎಂದು 'SIR ವಿರೋಧಿ ಜಾತ್ಯತೀತ ಪಕ್ಷಗಳು ಮತ್ತು ಜನಪರ ಸಂಘಟನೆಗಳ ಒಕ್ಕೂಟ'...

“ನೈರ್ಮಲ್ಯ ಕಾರ್ಮಿಕರು ಕೆಲಸ ಬಿಡಲು ಸಾಧ್ಯವಿಲ್ಲ”: ದೇಶಾದ್ಯಂತ ಪ್ರತಿಭಟನೆಗೆ DASAM ಬೆಂಬಲ, ಉದ್ಯೋಗ ಖಾಯಂಗೊಳಿಸಲು ತೀವ್ರ ಒತ್ತಾಯ

ನವದೆಹಲಿ: ಉದ್ಯೋಗ ಕ್ರಮಬದ್ಧಗೊಳಿಸುವಿಕೆ (ಖಾಯಂಗೊಳಿಸುವುದು), ನ್ಯಾಯಯುತ ವೇತನ, ಸಾಮಾಜಿಕ ಭದ್ರತೆ, ಸುರಕ್ಷಿತ ಕೆಲಸದ ವಾತಾವರಣ ಮತ್ತು ಕೆಲಸದ ಸ್ಥಳದಲ್ಲಿ ಮಾನವ ಘನತೆಯನ್ನು ಎತ್ತಿಹಿಡಿಯುವಂತೆ ಒತ್ತಾಯಿಸಿ ದೇಶದ ನಾನಾ ಭಾಗಗಳಲ್ಲಿ ನೈರ್ಮಲ್ಯ ಕಾರ್ಮಿಕರು ನಡೆಸುತ್ತಿರುವ...

ದ್ವೇಷ ಭಾಷಣ ಪ್ರಕರಣ: ಬಿಜೆಪಿ ನಾಯಕರಾದ ಅನುರಾಗ್‌ ಠಾಕೂರ್‌, ಪರ್ವೇಶ್‌ ವರ್ಮಾಗೆ ಕ್ಲೀನ್ ಚೀಟ್: ಪುನರ್ ಪರಿಶೀಲನಾ ಅರ್ಜಿ ವಜಾಗೊಳಿಸಿದ ಸುಪ್ರೀಂ

ನವದೆಹಲಿ: 2020ರ ದೆಹಲಿಯಲ್ಲಿ ನಡೆದ ಪೌರತ್ವ ತಿದ್ದುಪಡಿ ಕಾಯ್ದೆ (ಸಿಎಎ) ವಿರೋಧಿ ಪ್ರತಿಭಟನೆಗಳ ಸಂದರ್ಭದಲ್ಲಿ ಉದ್ರೇಕಕಾರಿ ಹಾಗೂ ದ್ವೇಷಪೂರಿತ ಭಾಷಣ ಮಾಡಿದ ಆರೋಪ ಹೊತ್ತಿದ್ದ ಬಿಜೆಪಿ ನಾಯಕರಾದ ಅನುರಾಗ್ ಠಾಕೂರ್ ಮತ್ತು ಪರ್ವೇಶ್‌...

ಕರ್ನಾಟಕ ಸಚಿವ ಸಂಪುಟ ವಿಸ್ತರಣೆ: ನೂತನ ಸಚಿವರ ಪಟ್ಟಿಗೆ ವರಿಷ್ಠರ ಅನುಮೋದನೆ: ಇಂದು ಸಂಜೆ 4:05 ಕ್ಕೆ ಪ್ರಮಾಣ ವಚನ

ಬಹುನಿರೀಕ್ಷಿತ ಕರ್ನಾಟಕ ರಾಜ್ಯ ಸಚಿವ ಸಂಪುಟ ವಿಸ್ತರಣೆಗೆ ಕೊನೆಗೂ ಮುಹೂರ್ತ ನಿಗದಿಯಾಗಿದ್ದು, ಕಾಂಗ್ರೆಸ್ ಹೈಕಮಾಂಡ್ ನೂತನ ಸಚಿವರ ಪಟ್ಟಿಗೆ ಅಧಿಕೃತ ಅನುಮೋದನೆ ನೀಡಿದೆ. ಇದರೊಂದಿಗೆ ಕಳೆದ ಕೆಲವು ದಿನಗಳಿಂದ ರಾಜ್ಯ ರಾಜಕಾರಣದಲ್ಲಿ ತೀವ್ರ...

ಮಹಿಳಾ ಕುಸ್ತಿಪಟುಗಳಿಗೆ ಲೈಂಗಿಕ ಕಿರುಕುಳ ಪ್ರಕರಣ : WFI ಮಾಜಿ ಅಧ್ಯಕ್ಷ ಬ್ರಿಜ್ ಭೂಷಣ್‌ ಸಿಂಗ್‌ ಖುಲಾಸೆ

ದೆಹಲಿ ನ್ಯಾಯಾಲಯವು ಸೋಮವಾರ (ಆ.3) ಭಾರತೀಯ ಕುಸ್ತಿ ಫೆಡರೇಶನ್ (WFI) ಮಾಜಿ ಅಧ್ಯಕ್ಷ ಮತ್ತು ಬಿಜೆಪಿ ನಾಯಕ ಬ್ರಿಜ್ ಭೂಷಣ್ ಸಿಂಗ್ ಅವರನ್ನು ಮಹಿಳಾ ಕುಸ್ತಿಪಟುಗಳಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದ ಪ್ರಕರಣದಿಂದ...

ಪ್ರಶ್ನೆ ಪತ್ರಿಕೆ ಸೋರಿಕೆ : ಫಾಸ್ಟ್‌ ಟ್ರ್ಯಾಕ್ ಕೋರ್ಟ್ ನ್ಯಾಯಾಧೀಶೆ ಒಂದೇ ವಾರದಲ್ಲಿ ವರ್ಗಾವಣೆ

ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣಗಳ ವಿಚಾರಣೆಗಾಗಿ ಸ್ಥಾಪಿಸಲಾದ ತ್ವರಿತಗತಿ (ಫಾಸ್ಟ್‌ ಟ್ರ್ಯಾಕ್) ನ್ಯಾಯಾಲಯದ ನೇತೃತ್ವ ವಹಿಸಲು ನೇಮಕಗೊಂಡ ಕೇವಲ ಒಂದು ವಾರದ ನಂತರ, ದೆಹಲಿ ಹೈಕೋರ್ಟ್ ಶನಿವಾರ (ಆಗಸ್ಟ್ 1) ವಿಶೇಷ ನ್ಯಾಯಾಧೀಶರಾದ...

ಶ್ರೀಲಂಕಾ | 2019ರ ಈಸ್ಟರ್ ಬಾಂಬ್ ಸ್ಫೋಟ ಪ್ರಕರಣ: ಇಬ್ಬರು ಮಾಜಿ ಅಧಿಕಾರಿಗಳಿಗೆ ಮರಣದಂಡನೆ ವಿಧಿಸಿದ ಕೋರ್ಟ್

ಬರೋಬ್ಬರಿ 260ಕ್ಕೂ ಹೆಚ್ಚು ಜನರ ಸಾವಿಗೆ ಕಾರಣವಾಗಿದ್ದ 2019ರ ಶ್ರೀಲಂಕಾದ 'ಈಸ್ಟರ್ ಸಂಡೇ' ಬಾಂಬ್ ಸ್ಫೋಟ ಪ್ರಕರಣದಲ್ಲಿ ಕ್ರಿಮಿನಲ್ ನಿರ್ಲಕ್ಷ್ಯ ಆರೋಪ ಸಾಬೀತಾದ ಹಿನ್ನೆಲೆ, ಪೊಲೀಸ್ ಮಾಜಿ ಮುಖ್ಯಸ್ಥ ಮತ್ತು ರಕ್ಷಣಾ ಸಚಿವಾಲಯದ...