Homeಕರ್ನಾಟಕಉತ್ತರ ಕನ್ನಡ; ಸ್ಥಳಿಯಾಡಳಿತ ಸಂಸ್ಥೆಗಳ ಕ್ಷೇತ್ರದ MLC ಟಿಕೆಟ್ ತಂತ್ರಗಾರಿಕೆ

ಉತ್ತರ ಕನ್ನಡ; ಸ್ಥಳಿಯಾಡಳಿತ ಸಂಸ್ಥೆಗಳ ಕ್ಷೇತ್ರದ MLC ಟಿಕೆಟ್ ತಂತ್ರಗಾರಿಕೆ

- Advertisement -
- Advertisement -

ಸ್ಥಳಿಯಾಡಳಿತ ಸಂಸ್ಥೆಗಳ ಕ್ಷೇತ್ರದ ವಿಧಾನ ಪರಿಷತ್ ಚುನಾವಣೆ ಘೋಷಣೆಯಾಗತ್ತಿದ್ದಂತೆಯೆ ಉತ್ತರ ಕನ್ನಡದ ರಾಜಕೀಯ ಪಡಸಾಲೆಯ ರಂಗೇರಹತ್ತಿದೆ. ಪ್ರಮುಖ ಎದುರಾಳಿ ಪಕ್ಷಗಳಾದ ಕಾಂಗ್ರೆಸ್ ಮತ್ತು ಬಿಜೆಪಿಯಲ್ಲಿ ಟಿಕೆಟ್ ತಳಮಳ ಶುರುವಾಗಿದೆ. ಗಾಡ್ ಫಾದರ್‌ಗಳ ಹಿಡಿದು ಟಿಕೆಟ್ ತರಲು ಎಮ್‌ಎಲ್‌ಸಿಗಿರಿ ಕನಸಿಗರು ಕಸರತ್ತು ನಡೆಸುತ್ತಿದ್ದಾರೆ. ಮತ್ತೊಂದೆಡೆ ಯಾರಿಗೆ ಯಾವ ಪಕ್ಷದಲ್ಲಿ ಟಿಕೆಟ್ ತರುವ ತಾಕತ್ತಿದೆ, ಟಿಕೆಟ್ ಹಂಚಿಕೆಯಲ್ಲಿ ಪ್ರಭಾವ ಬೀರಬಲ್ಲ ಸ್ಥಳಿಯ ನಾಯಕರ ಇಷ್ಟಾನಿಷ್ಟ ಏನಿರಬಹುದೆಂಬ ಕುತೂಹಲಕರ ಚರ್ಚೆ ನಡೆಯುತ್ತಿದೆ.

ಸ್ಥಳಿಯಾಡಳಿತ ಸಂಸ್ಥೆಗಳ ಕ್ಷೇತ್ರದ ಹಾಲಿ ಎಮ್‌ಎಲ್‌ಸಿ ಶ್ರೀಕಾಂತ ಘೋಟನೇಕರ್‌ಗೆ ಮೂರನೆ ಬಾರಿ ಕಾಂಗ್ರೇಸ್‌ನಿಂದ ಸ್ಪರ್ಧಿಸುವ ಧೈರ್ಯವಿಲ್ಲ. ಜಿಲ್ಲಾ ಕಾಂಗ್ರೆಸ್ ಹೈಕಮಾಂಡ್ ಆರ್.ವಿ. ದೇಶಪಾಂಡೆ ತನ್ನ ಹಳಿಯಾಳ ಕೇತ್ರದ ಬಹುದೊಡ್ಡ ಮರಾಠ ಸಮುದಾಯದ ಘೋಟನೇಕರ್‌ಅನ್ನು ಸತತ ಎರಡು ಬಾರಿ ಎಮ್ಮೆಲ್ಸಿಯಾಗಿಸಿದ್ದರು. ಈಗ ಈ ಗುರು-ಶಿಷ್ಯ ಸಂಬಂಧ ಹಳಸಿದೆ. ಸ್ಥಳಿಯಾಡಳಿತ ಸಂಸ್ಥೆಗಳಲ್ಲಿ ಕಾಂಗ್ರೆಸ್‌ಗಿಂತ ಬಿಜೆಪಿ ಸದಸ್ಯರ ಬಲ ಹೆಚ್ಚಿರುವುದರಿಂದ ಘೋಟನೇಕರ್‌ಗೆ ಬಿಜೆಪಿ ಟಿಕೆಟ್ ಮೇಲೆಯೇ ಆಸೆ ಜಾಸ್ತಿಯೆನ್ನಲಾಗಿದೆ. ದೇಶಪಾಂಡೆ ಮೂರು ದಶಕದಿಂದ ಶಾಸಕನಾಗಿದ್ದು ಸಾಕು ಈ ಸಲ ನನಗೆ ಅಸೆಂಬ್ಲಿಗೆ ಸ್ಪರ್ಧಿಸಲು ಅವಕಾಶ ಬೇಕೆಂದು ಘೋಟನೇಕರ್ ಬಹಿರಂಗವಾಗಿಯೇ ಹೇಳಿಕೆ ನೀಡುತ್ತಿದ್ದಾರೆ.

ಘೋಟನೇಕರ್ ನಡೆ-ನುಡಿ ಹಿಂದೆ ಬಿಜೆಪಿ ಟಿಕೆಟ್ ಗಿಟ್ಟಿಸುವ ಲೆಕ್ಕಾಚಾರವಿದೆಯೆಂದು ಜಿಲ್ಲೆಯ ರಾಜಕೀಯ ವಿಶ್ಲೇಷಕರು ವ್ಯಾಖ್ಯಾನಿಸುತ್ತಿದ್ದಾರೆ. ಈಗ ಬಿಜೆಪಿ ಮಂತ್ರಿಯಾಗಿರುವ ಶಿವರಾಮ ಹೆಬ್ಬಾರ್ ಕಾಂಗ್ರೆಸ್‌ನಲ್ಲಿದ್ದಾಗ ಅಂದಿನ ಕಾಂಗ್ರೆಸ್ ಶಾಸಕರಾದ ಮಂಕಾಳ್ ವೈದ್ಯ, ಸತೀಶ್ ಸೈಲ್ ಮತ್ತು ಘೋಟನೇಕರ್‌ರ ಜತೆಗಿಟ್ಟುಕೊಂಡು ಹಳೆ ಹುಲಿ ದೇಶಪಾಂಡೆ ವಿರುದ್ಧ ಕಾರ್ಯಾಚರಣೆಗಿಳಿದಿದ್ದರು. ಘೋಟನೇಕರ್ ಮತ್ತು ಹೆಬ್ಬಾರ್‌ರ ದೋಸ್ತಿ ಇಂದಿಗೂ ಅಷ್ಟೆ ಅಖಂಡವಾಗಿ ಮುಂದುವರಿದಿದೆ. ಬಿಜೆಪಿ ವಿಧಾನ ಪರಿಷತ್ ಅಥವಾ ವಿಧಾನ ಸಭೆ ಹಳಿಯಾಳ ಟಿಕೆಟ್‌ನಲ್ಲಿ ಯಾವುದು ಕೊಟ್ಟರೂ ಘೋಟನೇಕರ್ ಪಕ್ಷಾಂತರ ಮಾಡಲು ಮಾನಸಿಕವಾಗಿ ಸಿದ್ದವಾಗಿದ್ದಾರೆಂದು ಅವರ ಆಪ್ತರೆ ಹೇಳುತ್ತಿದ್ದಾರೆ. ಗೆಳೆಯನನ್ನು ಬಿಜೆಪಿಗೆ ತರಲು ಹೆಬ್ಬಾರ್ ಕೈಲಾದದ್ದೆಲ್ಲ ಮಾಡುತ್ತಿರುವುದು ರಹಸ್ಯವಾಗುಳಿದಿಲ್ಲ.

ಘೋಟನೇಕರ್‌ರಂತೆಯೆ ಗುರು ದೇಶಪಾಂಡೆಗೆ ಸೆಡ್ಡು ಹೊಡೆದು ಜೆಡಿಎಸ್-ಬಿಜೆಪಿಯೆಂದು ಸುತ್ತು ಹೊಡೆಯುತ್ತಿರುವ ಮಾಜಿ ಶಾಸಕ ಸುನಿಲ್ ಹೆಗಡೆಗೆ ಬಿಜೆಪಿಯಲ್ಲಿನ ರಾಜಕೀಯ ಒಳಸುಳಿ ಅದ್ಯಾಕೋ ತನ್ನ ಅಸಿತ್ವಕ್ಕೆ ಸಂಚಕಾರ ತರತ್ತಿದೆಯೆಂಬ ಚಡಪಡಿಕೆ ಮೂಡಿಸಿದೆ. ಅಸೆಂಬ್ಲಿ ಇಲೆಕ್ಷನ್‌ನಲ್ಲಿ ಬಿಜೆಪಿ ಕ್ಯಾಂಡಿಡೇಟ್ ಆಗಲು ಸಕಲ ಸಿದ್ದತೆ ಮಾಡಿಕೊಳ್ಳುತ್ತಿರುವ, ಕಳೆದ ಬಾರಿ ದೇಶಪಾಂಡೆ ಎದುರು ಕೇವಲ ಐದು ಸಾವಿರ ಮತದಂತರದಿಂದ ಸೋತಿರುವ ಸುನಿಲ್ ಹೆಗಡೆಗೆ ಸಹಜವಾಗೆ ಘೋಟನೇಕರ್ ಬಿಜೆಪಿಗೆ ಬರುವುದು ಬೇಡವಾಗಿದೆ. ಸುನಿಲ್‌ಗೆ ದೇಶಪಾಂಡೆಗಿಂತ ಘೋಟನೇಕರ್ ಮೇಲೆಯೆ ಹೆಚ್ಚು ಸಿಟ್ಟಿದೆ. ಸುನಿಲ್‌ಗೆ ಸ್ಥಳಿಯವಾಗಿ ಹೆಜ್ಜೆ-ಹೆಜ್ಜೆಗೆ ಸವಾಲಾಗಿರುವುದು ಘೋಟನೇಕರ್.

ಬಿಜೆಪಿ ಸೂತ್ರಧಾರರಿಗೆ ತೀರಾ ಕಡಿಮೆ ಜನಸಂಖ್ಯೆಯ ಜಾತಿ (ಕೊಂಕಣಿ ಬ್ರಾಹ್ಮಣ)ಯ ಸುನಿಲ್‌ಗಿಂತ ಬಹುಸಂಖ್ಯಾತ ಮರಾಠ ಸಮುದಾಯದ ಘೋಟನೇಕರ್ ಅಸೆಂಬ್ಲಿ ಚುನಾವಣಾ ದೃಷ್ಟಿಯಿಂದ ಅನುಕೂಲಕರವಾಗಿ ಕಾಣಿಸುತ್ತಿದ್ದಾರೆ. ಹಾಗಾಗಿ ಸುನಿಲ್ ಹೆಗಡೆಗೆ ಎಮ್ಮೆಲ್ಸಿ ಚುನಾಣೆಗೆ ಇಳಿಸುವ ಬಗ್ಗೆ ಯೋಚನೆ ನಡೆಯುತ್ತಿದೆಯೆಂದು ಬಿಜೆಪಿಯವರೆ ಮಾತಾಡಿಕೊಳ್ಳುತ್ತಿದ್ದಾರೆ. ಮತ್ತೊಂದು ಕಡೆಯಲ್ಲಿ ಬಿಜೆಪಿಯ ಮಾಜಿ ಜಿಲ್ಲಾಧ್ಯಕ್ಷ ಕೆ.ಜಿ.ನಾಯ್ಕ್ -ತನಗೆ ವಿಧಾನಸಭೆಯಿಂದ ಪರಿಷತ್ತಿಗೆ ಕಳಿಸುವುದಾಗಿ ಹೇಳಿ ಮೋಸ ಮಾಡಲಾಗಿದೆ; ಈಗಲಾದರೂ ಟಿಕೆಟ್ ಕೊಡಿಯೆಂದು ಬಹಿರಂಗ ಬೇಡಿಕೆ ಇಟ್ಟಿದ್ದಾರೆ. ಆದರೆ ಸ್ಥಳಿಯ ಶಾಸಕ-ಸ್ಪೀಕರ್ ಕಾಗೇರಿ ಮತ್ತು ಕೆ.ಜಿ.ನಾಯ್ಕ್ ಸಂಬಂಧ ಅಷ್ಟಕ್ಕಷ್ಟೆ.

ಸೋಲುವ ಹೊತ್ತಲ್ಲಿ ತನ್ನನ್ನು ಎಮ್ಮೆಲ್ಸಿ ಚುನಾವಣೆಗೆ ಬಲವಂತದಿಂದ ನಿಲ್ಲಿಸಲಾಗಿತ್ತು. ಕಳೆದ ವಿಧಾನ ಸಭಾ ಚನಾವಣೆಯಲ್ಲೂ ವಂಚಿಲಾಯಿತು; ಈಗಲಾದರೂ ಅವಕಾಶ ಕೊಡಿಯೆಂದು ಕಾರವಾರದ ಮೀನುಗಾರ ಸಮಾಜದ ಗಣಪತಿ ದುಮ್ಮಾ ಉಳ್ವೇಕರ್ ಹಕ್ಕು ಮಂಡಿಸಿದ್ದಾರೆ. ಕಳೆದ ಬಾರಿಯ ಅಸೆಂಬ್ಲಿ ಎಲೆಕ್ಷನ್ ಸಂದರ್ಭದಲ್ಲಿ ನಿಗೂಢವಾಗಿ ಸಾವಿಗೀಡಾದ ಹೊನ್ನಾವರದ ಮೀನುಗಾರರ ಹುಡುಗ ಪರೇಶ್ ಮೇಸ್ತನ ಹೆಸರಲ್ಲಿ ಕರಾವಳಿಯ ಅಷ್ಟೂ ಬಿಜೆಪಿ ಅಭ್ಯರ್ಥಿಗಳು ಮಿನುಗಾರರ ಸಾರಾಸಗಟು ಮತ ಪಡೆದು ಗೆದಿದ್ದಾರೆಂಬುದನ್ನು ಬಿಜೆಪಿ ಹೈಕಮಾಂಡ್ ಮರೆಯಬಾರದೆಂದು ಗಣಪತಿ ಉಳ್ವೇಕರ್ ಪರವಿರುವವರ ವಾದ. ಬಿಜೆಪಿ ದೊಡ್ಡವರ ಗಮನ ಸೆಳೆಯಲು ಹಿಂದುತ್ವ ಉಗ್ರವಾಗಿ ಪ್ರತಿಪಾದಿಸುತ್ತಿರುವ ಜಿಲ್ಲಾ ಬಿಜೆಪಿ ವಕ್ತಾರ ನಾಗರಾಜ ನಾಯಕ ಸಂಘಪರಿವಾರದ ಬೆಂಬಲದ ಸುಬ್ರಾಯ ವಾಳ್ಕೆ ಟಿಕೆಟ್ ಲಾಬಿ ನಡೆಸಿದ್ದಾರೆನ್ನಲಾಗಿದೆ. ಅರಣ್ಯ ಅಧಿಕಾರಿಯಾಗಿದ್ದಾಗ ಅಕ್ಕಿ ಅವ್ಯವಹಾರದಲ್ಲಿ ಅಮಾನತ್ತಾಗಿದ್ದ ನಾಗರಾಜ ನಾಯಕ್ ತೊರ್ಕೆ ಸಹ ಬಿಜೆಪಿ ಟಿಕೆಟ್‌ ಪಡೆವ ಪ್ರಯತ್ನದಲ್ಲಿದ್ದಾರೆ.

ಕಾಂಗ್ರೆಸ್‌ನಲ್ಲಿ ಎಮ್ಮೆಲ್ಸಿ ಸ್ಥಾನಕ್ಕೆ ಅಂಥ ಪೈಪೋಟಿಯೇನಿಲ್ಲ. ಆದರೆ ಜಿಲ್ಲೆಯ ರಾಜಕಾಣದ ನಾಡಿ ಮಿಡಿತ ಗೊತ್ತಿರುವ ದೇಶಪಾಂಡೆ ಕಾಯಾ-ವಾಚಾ-ಮನಸಾ ಪ್ರಯತ್ನಿದರೆ ಕಾಂಗ್ರೆಸ್ ಗೆಲ್ಲಿಸುವುದು ಅವರಿಗೆ ಕಷ್ಟವೇನಲ್ಲವೆಂಬುದು ಕಾಂಗ್ರೆಸ್-ಬಿಜೆಪಿ ಎರಡೂ ಪಕ್ಷದವರಿಗೆ ಗೊತ್ತಿದೆ. ಬಿಜೆಪಿ ಮತ್ತು ಕಾಂಗ್ರೆಸ್ ಬಲಾಬಲದ ಅಂತರವು ತೀರಾ ಸಣ್ಣದಿರುವುದರಿಂದ ದೇಶಪಾಂಡೆ ಮನಸ್ಸು ಮಾಡಿದರೆ ಕಾಂಗ್ರೆಸ್ ಯೋಗ ಖುಲಾಯಿಸಬಹುದೆಂಬ ವಿಶ್ಲೇಷಣೆ ನಡೆದಿದೆ.

ಮಗನನ್ನು ಯಲ್ಲಾಪುರದಲ್ಲಿ ಚುನಾವಣೆಗೆ ನಿಲ್ಲಿಸುವ ಯೋಚನೆಯಲ್ಲಿರುವ ದೇಶಪಾಂಡೆ ಹಳೆ ಶತ್ರು ಮಾರ್ಗರೇಟ್ ಆಳ್ವರ ಜತೆ ರಾಜಿ ಮಾಡಿಕೊಂಡಿದ್ದಾರೆ. ಹೀಗಾಗಿ ತನ್ನನ್ನು ದೇಶಪಾಂಡೆ ಈ ಸಲ ಬೆಂಬಲಿಸಬಹುದೆಂದು ಭಾವಿಸಿದ್ದರು ಮ್ಯಾಗಿ ಮಗ ನಿವೇದಿತ್ ಆಳ್ವ.. ಆದರೆ ಆಶಿರ್ವಾದ ಪಡೆಯಲು ಹೋಗಿದ್ದ ನಿವೇದಿತ್ ಗೆ ನೀನು ಸ್ಪರ್ಧಿಸುವುದು ಬೇಡ…. ವಾತಾವರಣ ಸರಿಯಿಲ್ಲ… ಎಂದೇಳಿ ನಿರಾಶೆ ಮೂಡಿಸಿದ್ದಾರೆನ್ನಲಾಗಿದೆ. ದೇಶಪಾಂಡೆ ಅರಣ್ಯ ಭೂಮಿ ಅತಿಕ್ರಮಣದಾರರ ಸಂಘಟನೆಯ ಜಿಲ್ಲೆಯಾದ್ಯಂತ ಜನ ಸಂಪರ್ಕವಿರುವ ರವೀಂದ್ರ ನಾಯ್ಕ್‌ಗೆ ನಿಲ್ಲಿಸಿದರೆ ಗೆಲ್ಲಿಸಿಕೊಂಡು ಬರುವುದು ಕಷ್ಟವಾಗಲಿಕ್ಕಿಲ್ಲವೆಂಬ ಅಭಿಪ್ರಾಯ ಕಾಂಗ್ರೆಸ್‌ನಲ್ಲಿದೆ. ಅದರೆ ದೇಶಪಾಂಡೆ ತಲೆಯಲ್ಲಿರುವುದು ಡಿಸಿಸಿ ಅಧ್ಯಕ್ಷ ಭೀಮಣ್ಣ ನಾಯ್ಕ್ ಎಂದು ಕಾಂಗ್ರೆಸಿಗರು ಅಂದಾಜಿಸಿದ್ದಾರೆ.


ಇದನ್ನೂ ಓದಿ: ಉತ್ತರ ಕನ್ನಡದಲ್ಲಿ ಕ್ಯಾಸಿನೋ ಜೂಜಾಟ ಶುರುಮಾಡುವ ಸಚಿವ ಹೆಬ್ಬಾರ್ ಹೇಳಿಕೆಗೆ ವಿರೋಧ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...