Homeಕರ್ನಾಟಕಉತ್ತರ ಕನ್ನಡ; ಸ್ಥಳಿಯಾಡಳಿತ ಸಂಸ್ಥೆಗಳ ಕ್ಷೇತ್ರದ MLC ಟಿಕೆಟ್ ತಂತ್ರಗಾರಿಕೆ

ಉತ್ತರ ಕನ್ನಡ; ಸ್ಥಳಿಯಾಡಳಿತ ಸಂಸ್ಥೆಗಳ ಕ್ಷೇತ್ರದ MLC ಟಿಕೆಟ್ ತಂತ್ರಗಾರಿಕೆ

- Advertisement -
- Advertisement -

ಸ್ಥಳಿಯಾಡಳಿತ ಸಂಸ್ಥೆಗಳ ಕ್ಷೇತ್ರದ ವಿಧಾನ ಪರಿಷತ್ ಚುನಾವಣೆ ಘೋಷಣೆಯಾಗತ್ತಿದ್ದಂತೆಯೆ ಉತ್ತರ ಕನ್ನಡದ ರಾಜಕೀಯ ಪಡಸಾಲೆಯ ರಂಗೇರಹತ್ತಿದೆ. ಪ್ರಮುಖ ಎದುರಾಳಿ ಪಕ್ಷಗಳಾದ ಕಾಂಗ್ರೆಸ್ ಮತ್ತು ಬಿಜೆಪಿಯಲ್ಲಿ ಟಿಕೆಟ್ ತಳಮಳ ಶುರುವಾಗಿದೆ. ಗಾಡ್ ಫಾದರ್‌ಗಳ ಹಿಡಿದು ಟಿಕೆಟ್ ತರಲು ಎಮ್‌ಎಲ್‌ಸಿಗಿರಿ ಕನಸಿಗರು ಕಸರತ್ತು ನಡೆಸುತ್ತಿದ್ದಾರೆ. ಮತ್ತೊಂದೆಡೆ ಯಾರಿಗೆ ಯಾವ ಪಕ್ಷದಲ್ಲಿ ಟಿಕೆಟ್ ತರುವ ತಾಕತ್ತಿದೆ, ಟಿಕೆಟ್ ಹಂಚಿಕೆಯಲ್ಲಿ ಪ್ರಭಾವ ಬೀರಬಲ್ಲ ಸ್ಥಳಿಯ ನಾಯಕರ ಇಷ್ಟಾನಿಷ್ಟ ಏನಿರಬಹುದೆಂಬ ಕುತೂಹಲಕರ ಚರ್ಚೆ ನಡೆಯುತ್ತಿದೆ.

ಸ್ಥಳಿಯಾಡಳಿತ ಸಂಸ್ಥೆಗಳ ಕ್ಷೇತ್ರದ ಹಾಲಿ ಎಮ್‌ಎಲ್‌ಸಿ ಶ್ರೀಕಾಂತ ಘೋಟನೇಕರ್‌ಗೆ ಮೂರನೆ ಬಾರಿ ಕಾಂಗ್ರೇಸ್‌ನಿಂದ ಸ್ಪರ್ಧಿಸುವ ಧೈರ್ಯವಿಲ್ಲ. ಜಿಲ್ಲಾ ಕಾಂಗ್ರೆಸ್ ಹೈಕಮಾಂಡ್ ಆರ್.ವಿ. ದೇಶಪಾಂಡೆ ತನ್ನ ಹಳಿಯಾಳ ಕೇತ್ರದ ಬಹುದೊಡ್ಡ ಮರಾಠ ಸಮುದಾಯದ ಘೋಟನೇಕರ್‌ಅನ್ನು ಸತತ ಎರಡು ಬಾರಿ ಎಮ್ಮೆಲ್ಸಿಯಾಗಿಸಿದ್ದರು. ಈಗ ಈ ಗುರು-ಶಿಷ್ಯ ಸಂಬಂಧ ಹಳಸಿದೆ. ಸ್ಥಳಿಯಾಡಳಿತ ಸಂಸ್ಥೆಗಳಲ್ಲಿ ಕಾಂಗ್ರೆಸ್‌ಗಿಂತ ಬಿಜೆಪಿ ಸದಸ್ಯರ ಬಲ ಹೆಚ್ಚಿರುವುದರಿಂದ ಘೋಟನೇಕರ್‌ಗೆ ಬಿಜೆಪಿ ಟಿಕೆಟ್ ಮೇಲೆಯೇ ಆಸೆ ಜಾಸ್ತಿಯೆನ್ನಲಾಗಿದೆ. ದೇಶಪಾಂಡೆ ಮೂರು ದಶಕದಿಂದ ಶಾಸಕನಾಗಿದ್ದು ಸಾಕು ಈ ಸಲ ನನಗೆ ಅಸೆಂಬ್ಲಿಗೆ ಸ್ಪರ್ಧಿಸಲು ಅವಕಾಶ ಬೇಕೆಂದು ಘೋಟನೇಕರ್ ಬಹಿರಂಗವಾಗಿಯೇ ಹೇಳಿಕೆ ನೀಡುತ್ತಿದ್ದಾರೆ.

ಘೋಟನೇಕರ್ ನಡೆ-ನುಡಿ ಹಿಂದೆ ಬಿಜೆಪಿ ಟಿಕೆಟ್ ಗಿಟ್ಟಿಸುವ ಲೆಕ್ಕಾಚಾರವಿದೆಯೆಂದು ಜಿಲ್ಲೆಯ ರಾಜಕೀಯ ವಿಶ್ಲೇಷಕರು ವ್ಯಾಖ್ಯಾನಿಸುತ್ತಿದ್ದಾರೆ. ಈಗ ಬಿಜೆಪಿ ಮಂತ್ರಿಯಾಗಿರುವ ಶಿವರಾಮ ಹೆಬ್ಬಾರ್ ಕಾಂಗ್ರೆಸ್‌ನಲ್ಲಿದ್ದಾಗ ಅಂದಿನ ಕಾಂಗ್ರೆಸ್ ಶಾಸಕರಾದ ಮಂಕಾಳ್ ವೈದ್ಯ, ಸತೀಶ್ ಸೈಲ್ ಮತ್ತು ಘೋಟನೇಕರ್‌ರ ಜತೆಗಿಟ್ಟುಕೊಂಡು ಹಳೆ ಹುಲಿ ದೇಶಪಾಂಡೆ ವಿರುದ್ಧ ಕಾರ್ಯಾಚರಣೆಗಿಳಿದಿದ್ದರು. ಘೋಟನೇಕರ್ ಮತ್ತು ಹೆಬ್ಬಾರ್‌ರ ದೋಸ್ತಿ ಇಂದಿಗೂ ಅಷ್ಟೆ ಅಖಂಡವಾಗಿ ಮುಂದುವರಿದಿದೆ. ಬಿಜೆಪಿ ವಿಧಾನ ಪರಿಷತ್ ಅಥವಾ ವಿಧಾನ ಸಭೆ ಹಳಿಯಾಳ ಟಿಕೆಟ್‌ನಲ್ಲಿ ಯಾವುದು ಕೊಟ್ಟರೂ ಘೋಟನೇಕರ್ ಪಕ್ಷಾಂತರ ಮಾಡಲು ಮಾನಸಿಕವಾಗಿ ಸಿದ್ದವಾಗಿದ್ದಾರೆಂದು ಅವರ ಆಪ್ತರೆ ಹೇಳುತ್ತಿದ್ದಾರೆ. ಗೆಳೆಯನನ್ನು ಬಿಜೆಪಿಗೆ ತರಲು ಹೆಬ್ಬಾರ್ ಕೈಲಾದದ್ದೆಲ್ಲ ಮಾಡುತ್ತಿರುವುದು ರಹಸ್ಯವಾಗುಳಿದಿಲ್ಲ.

ಘೋಟನೇಕರ್‌ರಂತೆಯೆ ಗುರು ದೇಶಪಾಂಡೆಗೆ ಸೆಡ್ಡು ಹೊಡೆದು ಜೆಡಿಎಸ್-ಬಿಜೆಪಿಯೆಂದು ಸುತ್ತು ಹೊಡೆಯುತ್ತಿರುವ ಮಾಜಿ ಶಾಸಕ ಸುನಿಲ್ ಹೆಗಡೆಗೆ ಬಿಜೆಪಿಯಲ್ಲಿನ ರಾಜಕೀಯ ಒಳಸುಳಿ ಅದ್ಯಾಕೋ ತನ್ನ ಅಸಿತ್ವಕ್ಕೆ ಸಂಚಕಾರ ತರತ್ತಿದೆಯೆಂಬ ಚಡಪಡಿಕೆ ಮೂಡಿಸಿದೆ. ಅಸೆಂಬ್ಲಿ ಇಲೆಕ್ಷನ್‌ನಲ್ಲಿ ಬಿಜೆಪಿ ಕ್ಯಾಂಡಿಡೇಟ್ ಆಗಲು ಸಕಲ ಸಿದ್ದತೆ ಮಾಡಿಕೊಳ್ಳುತ್ತಿರುವ, ಕಳೆದ ಬಾರಿ ದೇಶಪಾಂಡೆ ಎದುರು ಕೇವಲ ಐದು ಸಾವಿರ ಮತದಂತರದಿಂದ ಸೋತಿರುವ ಸುನಿಲ್ ಹೆಗಡೆಗೆ ಸಹಜವಾಗೆ ಘೋಟನೇಕರ್ ಬಿಜೆಪಿಗೆ ಬರುವುದು ಬೇಡವಾಗಿದೆ. ಸುನಿಲ್‌ಗೆ ದೇಶಪಾಂಡೆಗಿಂತ ಘೋಟನೇಕರ್ ಮೇಲೆಯೆ ಹೆಚ್ಚು ಸಿಟ್ಟಿದೆ. ಸುನಿಲ್‌ಗೆ ಸ್ಥಳಿಯವಾಗಿ ಹೆಜ್ಜೆ-ಹೆಜ್ಜೆಗೆ ಸವಾಲಾಗಿರುವುದು ಘೋಟನೇಕರ್.

ಬಿಜೆಪಿ ಸೂತ್ರಧಾರರಿಗೆ ತೀರಾ ಕಡಿಮೆ ಜನಸಂಖ್ಯೆಯ ಜಾತಿ (ಕೊಂಕಣಿ ಬ್ರಾಹ್ಮಣ)ಯ ಸುನಿಲ್‌ಗಿಂತ ಬಹುಸಂಖ್ಯಾತ ಮರಾಠ ಸಮುದಾಯದ ಘೋಟನೇಕರ್ ಅಸೆಂಬ್ಲಿ ಚುನಾವಣಾ ದೃಷ್ಟಿಯಿಂದ ಅನುಕೂಲಕರವಾಗಿ ಕಾಣಿಸುತ್ತಿದ್ದಾರೆ. ಹಾಗಾಗಿ ಸುನಿಲ್ ಹೆಗಡೆಗೆ ಎಮ್ಮೆಲ್ಸಿ ಚುನಾಣೆಗೆ ಇಳಿಸುವ ಬಗ್ಗೆ ಯೋಚನೆ ನಡೆಯುತ್ತಿದೆಯೆಂದು ಬಿಜೆಪಿಯವರೆ ಮಾತಾಡಿಕೊಳ್ಳುತ್ತಿದ್ದಾರೆ. ಮತ್ತೊಂದು ಕಡೆಯಲ್ಲಿ ಬಿಜೆಪಿಯ ಮಾಜಿ ಜಿಲ್ಲಾಧ್ಯಕ್ಷ ಕೆ.ಜಿ.ನಾಯ್ಕ್ -ತನಗೆ ವಿಧಾನಸಭೆಯಿಂದ ಪರಿಷತ್ತಿಗೆ ಕಳಿಸುವುದಾಗಿ ಹೇಳಿ ಮೋಸ ಮಾಡಲಾಗಿದೆ; ಈಗಲಾದರೂ ಟಿಕೆಟ್ ಕೊಡಿಯೆಂದು ಬಹಿರಂಗ ಬೇಡಿಕೆ ಇಟ್ಟಿದ್ದಾರೆ. ಆದರೆ ಸ್ಥಳಿಯ ಶಾಸಕ-ಸ್ಪೀಕರ್ ಕಾಗೇರಿ ಮತ್ತು ಕೆ.ಜಿ.ನಾಯ್ಕ್ ಸಂಬಂಧ ಅಷ್ಟಕ್ಕಷ್ಟೆ.

ಸೋಲುವ ಹೊತ್ತಲ್ಲಿ ತನ್ನನ್ನು ಎಮ್ಮೆಲ್ಸಿ ಚುನಾವಣೆಗೆ ಬಲವಂತದಿಂದ ನಿಲ್ಲಿಸಲಾಗಿತ್ತು. ಕಳೆದ ವಿಧಾನ ಸಭಾ ಚನಾವಣೆಯಲ್ಲೂ ವಂಚಿಲಾಯಿತು; ಈಗಲಾದರೂ ಅವಕಾಶ ಕೊಡಿಯೆಂದು ಕಾರವಾರದ ಮೀನುಗಾರ ಸಮಾಜದ ಗಣಪತಿ ದುಮ್ಮಾ ಉಳ್ವೇಕರ್ ಹಕ್ಕು ಮಂಡಿಸಿದ್ದಾರೆ. ಕಳೆದ ಬಾರಿಯ ಅಸೆಂಬ್ಲಿ ಎಲೆಕ್ಷನ್ ಸಂದರ್ಭದಲ್ಲಿ ನಿಗೂಢವಾಗಿ ಸಾವಿಗೀಡಾದ ಹೊನ್ನಾವರದ ಮೀನುಗಾರರ ಹುಡುಗ ಪರೇಶ್ ಮೇಸ್ತನ ಹೆಸರಲ್ಲಿ ಕರಾವಳಿಯ ಅಷ್ಟೂ ಬಿಜೆಪಿ ಅಭ್ಯರ್ಥಿಗಳು ಮಿನುಗಾರರ ಸಾರಾಸಗಟು ಮತ ಪಡೆದು ಗೆದಿದ್ದಾರೆಂಬುದನ್ನು ಬಿಜೆಪಿ ಹೈಕಮಾಂಡ್ ಮರೆಯಬಾರದೆಂದು ಗಣಪತಿ ಉಳ್ವೇಕರ್ ಪರವಿರುವವರ ವಾದ. ಬಿಜೆಪಿ ದೊಡ್ಡವರ ಗಮನ ಸೆಳೆಯಲು ಹಿಂದುತ್ವ ಉಗ್ರವಾಗಿ ಪ್ರತಿಪಾದಿಸುತ್ತಿರುವ ಜಿಲ್ಲಾ ಬಿಜೆಪಿ ವಕ್ತಾರ ನಾಗರಾಜ ನಾಯಕ ಸಂಘಪರಿವಾರದ ಬೆಂಬಲದ ಸುಬ್ರಾಯ ವಾಳ್ಕೆ ಟಿಕೆಟ್ ಲಾಬಿ ನಡೆಸಿದ್ದಾರೆನ್ನಲಾಗಿದೆ. ಅರಣ್ಯ ಅಧಿಕಾರಿಯಾಗಿದ್ದಾಗ ಅಕ್ಕಿ ಅವ್ಯವಹಾರದಲ್ಲಿ ಅಮಾನತ್ತಾಗಿದ್ದ ನಾಗರಾಜ ನಾಯಕ್ ತೊರ್ಕೆ ಸಹ ಬಿಜೆಪಿ ಟಿಕೆಟ್‌ ಪಡೆವ ಪ್ರಯತ್ನದಲ್ಲಿದ್ದಾರೆ.

ಕಾಂಗ್ರೆಸ್‌ನಲ್ಲಿ ಎಮ್ಮೆಲ್ಸಿ ಸ್ಥಾನಕ್ಕೆ ಅಂಥ ಪೈಪೋಟಿಯೇನಿಲ್ಲ. ಆದರೆ ಜಿಲ್ಲೆಯ ರಾಜಕಾಣದ ನಾಡಿ ಮಿಡಿತ ಗೊತ್ತಿರುವ ದೇಶಪಾಂಡೆ ಕಾಯಾ-ವಾಚಾ-ಮನಸಾ ಪ್ರಯತ್ನಿದರೆ ಕಾಂಗ್ರೆಸ್ ಗೆಲ್ಲಿಸುವುದು ಅವರಿಗೆ ಕಷ್ಟವೇನಲ್ಲವೆಂಬುದು ಕಾಂಗ್ರೆಸ್-ಬಿಜೆಪಿ ಎರಡೂ ಪಕ್ಷದವರಿಗೆ ಗೊತ್ತಿದೆ. ಬಿಜೆಪಿ ಮತ್ತು ಕಾಂಗ್ರೆಸ್ ಬಲಾಬಲದ ಅಂತರವು ತೀರಾ ಸಣ್ಣದಿರುವುದರಿಂದ ದೇಶಪಾಂಡೆ ಮನಸ್ಸು ಮಾಡಿದರೆ ಕಾಂಗ್ರೆಸ್ ಯೋಗ ಖುಲಾಯಿಸಬಹುದೆಂಬ ವಿಶ್ಲೇಷಣೆ ನಡೆದಿದೆ.

ಮಗನನ್ನು ಯಲ್ಲಾಪುರದಲ್ಲಿ ಚುನಾವಣೆಗೆ ನಿಲ್ಲಿಸುವ ಯೋಚನೆಯಲ್ಲಿರುವ ದೇಶಪಾಂಡೆ ಹಳೆ ಶತ್ರು ಮಾರ್ಗರೇಟ್ ಆಳ್ವರ ಜತೆ ರಾಜಿ ಮಾಡಿಕೊಂಡಿದ್ದಾರೆ. ಹೀಗಾಗಿ ತನ್ನನ್ನು ದೇಶಪಾಂಡೆ ಈ ಸಲ ಬೆಂಬಲಿಸಬಹುದೆಂದು ಭಾವಿಸಿದ್ದರು ಮ್ಯಾಗಿ ಮಗ ನಿವೇದಿತ್ ಆಳ್ವ.. ಆದರೆ ಆಶಿರ್ವಾದ ಪಡೆಯಲು ಹೋಗಿದ್ದ ನಿವೇದಿತ್ ಗೆ ನೀನು ಸ್ಪರ್ಧಿಸುವುದು ಬೇಡ…. ವಾತಾವರಣ ಸರಿಯಿಲ್ಲ… ಎಂದೇಳಿ ನಿರಾಶೆ ಮೂಡಿಸಿದ್ದಾರೆನ್ನಲಾಗಿದೆ. ದೇಶಪಾಂಡೆ ಅರಣ್ಯ ಭೂಮಿ ಅತಿಕ್ರಮಣದಾರರ ಸಂಘಟನೆಯ ಜಿಲ್ಲೆಯಾದ್ಯಂತ ಜನ ಸಂಪರ್ಕವಿರುವ ರವೀಂದ್ರ ನಾಯ್ಕ್‌ಗೆ ನಿಲ್ಲಿಸಿದರೆ ಗೆಲ್ಲಿಸಿಕೊಂಡು ಬರುವುದು ಕಷ್ಟವಾಗಲಿಕ್ಕಿಲ್ಲವೆಂಬ ಅಭಿಪ್ರಾಯ ಕಾಂಗ್ರೆಸ್‌ನಲ್ಲಿದೆ. ಅದರೆ ದೇಶಪಾಂಡೆ ತಲೆಯಲ್ಲಿರುವುದು ಡಿಸಿಸಿ ಅಧ್ಯಕ್ಷ ಭೀಮಣ್ಣ ನಾಯ್ಕ್ ಎಂದು ಕಾಂಗ್ರೆಸಿಗರು ಅಂದಾಜಿಸಿದ್ದಾರೆ.


ಇದನ್ನೂ ಓದಿ: ಉತ್ತರ ಕನ್ನಡದಲ್ಲಿ ಕ್ಯಾಸಿನೋ ಜೂಜಾಟ ಶುರುಮಾಡುವ ಸಚಿವ ಹೆಬ್ಬಾರ್ ಹೇಳಿಕೆಗೆ ವಿರೋಧ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...

ಫ್ಯಾಕ್ಟ್‌ಚೆಕ್ : ಅತ್ಯಾಚಾರ ಅಪರಾಧಿ ಪರ ವಕೀಲೆಗೆ ಟಿಎಂಸಿಯಿಂದ ರಾಜ್ಯಸಭೆ ಸೀಟ್; ಬಿಜೆಪಿ ಆರೋಪದ ಸತ್ಯಾಸತ್ಯತೆ ಏನು?

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಪಾಣಿಹತಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಆರ್‌ಜಿ ಕರ್‌ ಸಂತ್ರಸ್ತೆಯ ತಾಯಿ ಮತ್ತು ವಕೀಲೆ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ಸದಸ್ಯೆ ಮೇನಕಾ ಗುರುಸ್ವಾಮಿ ಅವರ ಎಐ-ರಚಿತ...

ತಾರತಮ್ಯ ಮುಕ್ತ ಕ್ಯಾಂಪಸ್ ನಿರ್ಮಾಣದತ್ತ ಮಹತ್ವದ ಹೆಜ್ಜೆ; ‘ರೋಹಿತ್ ವೇಮುಲ ಮಸೂದೆ’ಗೆ ಸಚಿವ ಸಂಪುಟ ಅನುಮೋದನೆ

ಕರ್ನಾಟಕ ಸರ್ಕಾರದ ಸಚಿವ ಸಂಪುಟ ಗುರುವಾರ (ಏ.16) ದಂದು ಕರ್ನಾಟಕ ರೋಹಿತ್ ವೇಮುಲ (ಹೊರಗಿಡುವಿಕೆ ಅಥವಾ ಅನ್ಯಾಯ ತಡೆಗಟ್ಟುವಿಕೆ) (ಶಿಕ್ಷಣ ಮತ್ತು ಘನತೆಯ ಹಕ್ಕು) ಮಸೂದೆ’ಗೆ ಅನುಮೋದನೆ ನೀಡಿದೆ. ಹೈದರಾಬಾದ್‌ನ ಕೆಂದ್ರೀಯ ವಿಶ್ವವಿದ್ಯಾಲಯದಲ್ಲಿ...