Homeಕರ್ನಾಟಕಉತ್ತರ ಕನ್ನಡ : ಕನ್ನಡ ಕಟ್ಟಿದ ಕೊಂಕಣಿಗರು

ಉತ್ತರ ಕನ್ನಡ : ಕನ್ನಡ ಕಟ್ಟಿದ ಕೊಂಕಣಿಗರು

- Advertisement -
- Advertisement -

ಹರಿಗೆ ಎಂದು ಗುಡಿಯನೊಂದು
ಕಟ್ಟುತ್ತಿರುವೆಯಾ?
ದೀನಗಿಂತ ದೇವ ಬಡವನೆಂದು ಬಗೆದೆಯಾ?

ಎಂದು ಹಾಡಿದ ಅಂಕೋಲೆಯ “ಚುಟುಕು ಬ್ರಹ್ಮ” ದಿನಕರ ದೇಸಾಯಿಯವರ ಮಾತೃಭಾಷೆ ಕೊಂಕಣಿ! ರೈತ-ಕಾರ್ಮಿಕ ಹೋರಾಟ ಕಟ್ಟಿದ ದೇಸಾಯಿ ಕನ್ನಡ ಕಟ್ಟುವ ಕೈಂಕರ್ಯದಲ್ಲೂ ಹಿಂದಿರಲಿಲ್ಲ. ವಿಭಿನ್ನ ಜನ-ಜಾತಿ ಮತ್ತು ವಿವಿಧ ಭಾಷೆಯ ಉತ್ತರ ಕನ್ನಡದ ಮಣ್ಣಿನ ಸೊಗಡು-ಕಸುವುಗಳೇ ಅಂಥದ್ದು. ವಿಭಿನ್ನ ಭಾಷೆ-ಸಂಸ್ಕೃತಿಗಳಿದ್ದರೂ ಕನ್ನಡ ನಾಡು, ನುಡಿಯ ಜೊತೆಗೆ ಬಾಂಧವ್ಯ ಉಳಿಸಿಕೊಂಡೇ ಬಂದಿದೆ ಉತ್ತರ ಕನ್ನಡ.

ಮಲೆನಾಡು, ಕರಾವಳಿ, ಅರೆಬಯಲುಸೀಮೆಯಂಥ ವಿಶಿಷ್ಟ ಭೌಗೋಳಿಕ ಪರಿಸರದ ಈ ಜಿಲ್ಲೆಯ ಹಲವು ಕೊಂಕಣಿ ಮತ್ತು ಮರಾಠಿಗರು ಕನ್ನಡ ಸಾಹಿತ್ಯ, ಸಂಗೀತ, ಸಿನಿಮಾ, ರಂಗಭೂಮಿ, ರಾಜಕೀಯ, ಸಾಮಾಜಿಕ, ಮಾಹಿತಿ ತಂತ್ರಜ್ಞಾನ ಮುಂತಾದ ಕ್ಷೇತ್ರಗಳಿಗೆ ಎಂದೆಂದೂ ಅಳಿಸಲಾಗದ ದೊಡ್ಡ ಕೊಡುಗೆಗಳನ್ನೇ ಕೊಟ್ಟಿದ್ದಾರೆ. ಜಿಲ್ಲೆಗೊಂದು ನಿಜ ನಾಯಕತ್ವ ನೀಡಿದ್ದ ದಿನಕರ ದೇಸಾಯಿ ಲೋಕಸಭಾ ಸದಸ್ಯರೂ ಆಗಿದ್ದರು. ತ್ರಿಭಾಷಾ ಸಾಹಿತಿಯಾಗಿದ್ದ ಈ ಗೇಣಿದಾರರ-ಕೂಲಿಕಾರರ ಗೆಣೆಗಾರ ಲಲಿತ ಸಾಹಿತ್ಯ ಮತ್ತು ವೈಚಾರಿಕ ಬರಹಗಳಿಂದ ಪ್ರಸಿದ್ಧಿ ಪಡೆದಿದ್ದರು. ಜನರಲ್ಲಿ ತಿಳಿವು ಅರಿವು ಮೂಡಿಸಲೆಂದು “ಜನಸೇವಕ” ಎಂಬ ಪತ್ರಿಕೆ ಹೊರತರುತ್ತಿದ್ದ ದೇಸಾಯಿ ಹತ್ತಾರು ಹೈಸ್ಕೂಲು, ಕಾಲೇಜು ತೆರೆದು ಹಳ್ಳಿಗಾಡಿನಲ್ಲಿ ವಿದ್ಯಾಪ್ರಸಾರದ ಅಭೂತಪೂರ್ವ ಸಾಹಸ-ಸಾಧನೆ ಮಾಡಿದ್ದರು.

ಕನ್ನಡ, ಮರಾಠಿ, ಕೊಂಕಣಿ ಮತ್ತು ಇಂಗ್ಲಿಷ್‌ನಲ್ಲಿ ಸಾಹಿತ್ಯ ರಚಿಸಿರುವ ಗೋಕರ್ಣದ ಡಾ. ಗೌರೀಶ್ ಕಾಯ್ಕಿಣಿ ವೃತ್ತಿಯಲ್ಲಿ ಶಿಕ್ಷಕರಾಗಿದ್ದರು. ಮೂರ್ತಿಭಂಜಕ ಪ್ರವೃತ್ತಿಯ ಕೊಂಕಣಿ ಮನೆಮಾತಾಗಿರುವ ಕಾಯ್ಕಿಣಿ ಅವರು ಮುಂದಿನ ತತ್ವಜ್ಞಾನವೆಂದರೆ ವಿಜ್ಞಾನ ಎನ್ನುತ್ತಿದ್ದರು. ಹರಿತ ವೈಚಾರಿಕ ಸಾಹಿತ್ಯದಿಂದ ಖ್ಯಾತಿ ಪಡೆದಿದ್ದ ಕಾಯ್ಕಿಣಿ ಪತ್ರಿಕೋದ್ಯಮಿಯೂ ಆಗಿದ್ದರು. ಮೆದು ಮಾತು-ಮೆಲುದನಿಯ ಕಥೆಗಾರ ಜಯಂತ್ ಕಾಯ್ಕಿಣಿ ಗೌರೀಶ್ ಕಾಯ್ಕಿಣಿಯವರ ಪುತ್ರ. ಕನ್ನಡಿಗರ ಅಚ್ಚುಮೆಚ್ಚಿನ ಸಾಹಿತಿ ಜಯಂತ್ 2006ರ ಬಳಿಕ ಸಿನಿಮಾ ಸಾಹಿತ್ಯದ ಮೂಲಕ ತಮ್ಮ ಪ್ರತಿಭೆಯ ಮತ್ತೊಂದು ಆಯಾಮವನ್ನು ತೆರೆದಿಟ್ಟಿದ್ದಾರೆ.

ಕಾಯ್ಕಿಣಿಗಳಂತೆ ಗೋಕರ್ಣ ಹತ್ತಿರದ ಹನೇಹಳ್ಳಿಯ ಖ್ಯಾತ ಕಥೆಗಾರ, ಕಾದಂಬರಿಕಾರ ಯಶವಂತ ಚಿತ್ತಾಲರೂ ಕೊಂಕಣಿ ಆಡುಮಾತಿನವರು. ‘ಶಿಕಾರಿ’ ಕಾದಂಬರಿಯಿಂದ ಕನ್ನಡ ಸಾರಸ್ವತ ಲೋಕದಲ್ಲಿ ಅಚ್ಚಳಿಯದ ಛಾಪು ಮೂಡಿಸಿರುವ ಚಿತ್ತಾಲರ ಅಣ್ಣ ಗಂಗಾಧರ ಚಿತ್ತಾಲರು ಕವಿಯಾಗಿ ಗುರುತಿಸಿಕೊಂಡವರು. ಗೋಕರ್ಣಕ್ಕೆ ಹತ್ತಿರವೇ ಇರುವ ಬಂಕಿಕೊಡ್ಲದ ಅರವಿಂದ ನಾಡಕರ್ಣಿ ಮತ್ತು ಸುಂದರ ನಾಡಕರ್ಣಿ ಸೋದರರು ಹಲವು ಕನ್ನಡಕವನ ಸಂಕಲನ ಪ್ರಕಟಿಸಿದ್ದಾರೆ. ಇವರೂ ಕೊಂಕಣಿ ಭಾಷೆಯ ಸಾರಸ್ವತ ಕುಟುಂಬದ ರೇ.ದಾಮೋದರ ಚಿತ್ತಾಲರೂ ಕನ್ನಡ ಸಾಹಿತ್ಯ ಕ್ಷೇತ್ರದ ಗಮನ ಸೆಳೆದ ಬರಹಗಾರರು.

ಕನ್ನಡ ಕಾದಂಬರಿ ಲೋಕಕ್ಕೆ ನವ್ಯಮಾರ್ಗ ತಂದ ಶಾಂತಿನಾಥ ದೇಸಾಯಿ ಹಳಿಯಾಳದವರು. ಸಣ್ಣಕತೆ, ಪ್ರಬಂಧ, ವಿಮರ್ಶೆ…ಮುಂತಾದ ಪ್ರಕಾರಗಳಲ್ಲಿ ಪ್ರಯೋಗಶೀಲತೆ ಅಳವಡಿಸಿ ನಾಲ್ಕು ದಶಕಗಳ ಕಾಲ ಕನ್ನಡ ಸಾಹಿತ್ಯ ಕ್ಷೇತ್ರದಲ್ಲಿ ಪ್ರಮುಖ ಬರಹಗಾರನೆಂದು ಖ್ಯಾತರಾಗಿದ್ದ ದೇಸಾಯಿ ಕೊಂಕಣಿಗರು. ಕೊಂಕಣಿ ಮಾತಾಡುವ ಕುಟುಂಬದ ಉತ್ತರಕನ್ನಡಿಗ ವಿವೇಕ್ ಶಾನ್‍ಭಾಗ್ ಕನ್ನಡದ ಪ್ರಮುಖ ಕತೆಗಾರ, ಕಾದಂಬರಿಕಾರ ಮತ್ತು ನಾಟಕಕಾರರಲ್ಲಿ ಒಬ್ಬರು.

1950-60ರ ದಶಕದಲ್ಲಿ ಕನ್ನಡ ಸಿನಿಮಾರಂಗದಲ್ಲಿ ಮನೋಜ್ಞ ಅಭಿನಯದಿಂದ ಪ್ರಖ್ಯಾತರಾಗಿದ್ದ ಅಭಿನೇತ್ರಿಯರಾದ ಮೈನಾವತಿ ಮತ್ತು ಪಂಡರಿಬಾಯಿ ಮೂಲ ಭಟ್ಕಳ. ಕೊಂಕಣಿ ಮನೆಮಾತಿನ ಈ ಸಹೋದರಿಯರ ತಂದೆ ರಂಗರಾವ್ ಹರಿಕಥೆ, ಸಂಗೀತ, ಸಾಹಿತ್ಯ, ಅಭಿನಯದಲ್ಲಿ ಪರಿಣಿತರಾಗಿದ್ದರು. ಮೈನಾವತಿ ಸರಿಸುಮಾರು ನೂರು ಚಿತ್ರಗಳಲ್ಲಿ ನಟಿಸಿದ್ದರೆ, ಪಂಡರಿಬಾಯಿ ಕನ್ನಡ ಸಿನಿಮಾಗಳ ಮೊದಲ ಯಶಸ್ವೀ ತಾರೆ. ಡಾ. ರಾಜ್‍ಕುಮಾರ್ ಅವರಿಗೆ ನಾಯಕಿಯಾಗಿ ಮಿಂಚಿದ ಪಂಡರಿಬಾಯಿ ಆನಂತರ ಕನ್ನಡ ಚಿತ್ರರಂಗದ “ಅಮ್ಮ”ನೆಂದೇ ಹೆಸರಾಗಿದ್ದರು.

ಕುಮಟಾದ ಮಲ್ಲಾಪುರ ಗ್ರಾಮದ ಸಾರಸ್ವತ ಕೊಂಕಣಿ ಕುಟುಂಬದ ಅನಂತ್‍ನಾಗ್ ಮತ್ತು ಶಂಕರ್‌ನಾಗ್ ಇವತ್ತಿಗೂ ಕನ್ನಡ ಸಿನಿಮಾ ಲೋಕದಲ್ಲಿ ಮಾಂತ್ರಿಕ ಹೆಸರು. ಅನನ್ಯ ಪ್ರತಿಭೆಯ ಈ ಸಹೋದರರ ನಟನಾಕೌಶಲ್ಯ ಕನ್ನಡ ಸಿನಿಮಾರಂಗದಲ್ಲಿ ಸರ್ವಕಾಲಿಕ ದಾಖಲೆ! ಸಿನಿಮಾ ನಟಿ ರಾಧಿಕಾಪಂಡಿತ್ ಭಟ್ಕಳದ ಚಿತ್ರಾಪುರ ಮೂಲದ ಸಾರಸ್ವತ ಕೊಂಕಣಿ. ಉತ್ತರ ಕನ್ನಡದ ಯು.ಎಸ್. ಕೃಷ್ಣರಾವ್ ಮತ್ತವರ ಮಡದಿ ಚಂದ್ರಭಾಗಾದೇವಿ ಶಾಸ್ತ್ರೀಯ ನೃತ್ಯದ ಮೂಲಕ ಹೆಸರು ಮಾಡಿದ್ದಾರೆ. ಕೊಳಲುವಾದಕ ನಿತ್ಯಾನಂದ ಹಳದಿಪುರ್, ಸಂಗೀತಗಾರ ಮೋಹನ್‍ಚಿತ್ರಮನೆ, ತಬಲಾ ವಾದಕ ಆದಿತ್ಯ ಕಲ್ಯಾಣ್‍ಪುರ್, ಸಂಗೀತಗಾರ ಭರತ್ ಬಳವಳ್ಳಿ, ನಟ ವೆಂಕಟರಾವ್ ತಲಗೇರಿ, ಅನುಪಮಾ (ಕಾಯ್ಕಿಣಿ), ದೇಶಪಾಂಡೆ(ಸಂಗೀತ), ಆರ್.ಡಿ ಕಾಮತ್ (ರಂಗಭೂಮಿ) ಲೀನಾ ಚಂದಾವರ್ಕರ್ (ಪ್ರಸಿದ್ಧ ಗಾಯಕಿ), ಅನುರಾಧಾ ಪೋಡ್ವಾಲ್, ಅನುರಾಧಾ ಧಾರೇಶ್ವರ್ (ಹಾಡುಗಾರ್ತಿ) ಕೊಂಕಣಿಗರಾದರೂ ಕನ್ನಡ ಪ್ರತಿಭೆಗಳೆಂದೇ ಗುರುತಿಸಲ್ಪಡುವವರು!

ಸುಮಾರು ಮೂರೂಮುಕ್ಕಾಲು ದಶಕದಿಂದ ಕರ್ನಾಟಕದ ರಾಜಕಾರಣದಲ್ಲಿ ಪ್ರಮುಖ ರಾಜಕಾರಣಿಯಾಗಿರುವ ಹಳಿಯಾಳದ ರಘುನಾಥ್ ವಿಶ್ವನಾಥ್‍ರಾವ್ ದೇಶಪಾಂಡೆ ಕೊಂಕಣಿ ಮನೆ ಮಾತಿನವರು. ಅಧಿಕಾರ ರಾಜಕಾರಣದ ಹಲವು ಆಯಕಟ್ಟಿನ ಸ್ಥಾನದಲ್ಲಿದ್ದ ದೇಶಪಾಂಡೆ ಒಂದು ಸಂದರ್ಭದಲ್ಲಿ ಸಿಎಂ ಮಟೇರಿಯಲ್ ಅನಿಸಿಕೊಂಡವರು! ಸಮಾಜವಾದಿ ದಿನಕರ ದೇಸಾಯಿ ಒಡನಾಡಿ ಅಂಕೋಲೆಯ ದಯಾನಂದ ನಾಡಕರ್ಣಿ ಶಾಸಕರೂ ಆಗಿದ್ದರು. ಕುಮಟೆಯಲ್ಲಿ ವಸಂತಲತಾ ಮಿರ್ಜಾನ್‍ಕರ್ ಶಾಸಕಿಯಾಗಿದ್ದರು. ಇವರಿಬ್ಬರೂ ಸಾರಸ್ವತ ಕೊಂಕಣಿಗರು. ದಟ್ಟ ಕೊಂಕಣಿ ಪ್ರಭಾವದ ಕಾರವಾರದ ಬಿ.ಪಿ. ಕದಮ್ ವಿಧಾನಸಭೆಯ ಉಪಾಧ್ಯಕ್ಷರಾಗಿ, ಸಂಸದರಾಗಿದ್ದ ಕೊಂಕಣಿ ಭಾಷಿಕ. ವಿಧಾನಪರಿಷತ್‍ನ ಸಭಾಪತಿಯಾಗಿದ್ದ ಇದೇ ಕಾರವಾರದ ಎಸ್.ಡಿ. ಗಾಂವ್ಕರ್ ಕೂಡ ಕೊಂಕಣಿ ಮನೆ ಮಾತಿನವರಾಗಿದ್ದರು. ಭಾರತದ ಮಾಹಿತಿ ತಂತ್ರಜ್ಞಾನ ಕ್ಷೇತ್ರದ ದಿಗ್ಗಜರಲ್ಲೊಬ್ಬರಾಗಿರುವ ನಂದನ್ ನೀಲೇಕಣಿ ಶಿರಸಿ ಮೂಲದ ಸಾರಸ್ವತ ಕೊಂಕಣಿಗರು. ಕಾರಾವಾರದ ಶಾಸಕಿ ರೂಪಾಲಿ ನಾಯ್ಕ್ ಮನೆಮಾತು ಕೊಂಕಣಿ.

ಕನ್ನಡದ ಗಂಧಗಾಳಿಯೇ ಇಲ್ಲದ ಹಲವು ಪ್ರದೇಶವಿರುವ ಉತ್ತರಕನ್ನಡದ ಎರಡನೇ ಪ್ರಮುಖ ವ್ಯಾವಹಾರಿಕ ಭಾಷೆ ಕೊಂಕಣಿ. ಕನ್ನಡಾಂಬೆಯ ತೇರು ಎಳೆಯುವಾಗ ಎಲ್ಲರೂ ಒಂದೇ. ಇದೇ ಉತ್ತರ ಕನ್ನಡದ ಭಾಷಾ ಸಹಿಷ್ಣುತೆ, ಸಾಮರಸ್ಯದ ವೈಶಿಷ್ಟ್ಯ!


ಇದನ್ನೂ ಓದಿ: ತಾತ್ಸಾರ ತೊರೆದು ಸ್ವಾಯತ್ತತೆಗಾಗಿ – ಕರ್ನಾಟಕದ ಹಕ್ಕುಗಳಿಗಾಗಿ ಹೋರಾಟವೇ ರಾಜ್ಯೋತ್ಸವ
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಚುನಾವಣಾ ಸಮಯದಲ್ಲಿ ಉಚಿತ ಕೊಡುಗೆಗಳ ಪ್ರವೃತ್ತಿ ಪ್ರಶ್ನಿಸಿದ ಸುಪ್ರೀಂ ಕೋರ್ಟ್

ರಾಜಕೀಯ ಪಕ್ಷಗಳು ಮತ್ತು ರಾಜ್ಯ ಸರ್ಕಾರಗಳು ಚುನಾವಣೆಗೆ ಮುನ್ನ "ಉಚಿತ ಕೊಡುಗೆಗಳ" ಜಾಹೀರಾತು ನೀಡುವ ಅಭ್ಯಾಸ ಹೆಚ್ಚುತ್ತಿರುವ ಬಗ್ಗೆ ಸುಪ್ರೀಂ ಕೋರ್ಟ್ ಗುರುವಾರ ಬಲವಾದ ಮೌಖಿಕ ಅವಲೋಕನಗಳನ್ನು ನೀಡಿದೆ. ವಿದ್ಯುತ್ (ತಿದ್ದುಪಡಿ) ನಿಯಮಗಳು, 2024...

ರಾಹುಲ್ ಗಾಂಧಿಗೆ ಕರ್ಣಿ ಸೇನೆಯಿಂದ ಜೀವ ಬೆದರಿಕೆ: ಬಿಜೆಪಿ-ಆರ್‌ಎಸ್‌ಎಸ್ ಜಾಲವೇ ‘ಗೋಡ್ಸೆ ಕಾರ್ಖಾನೆ’ ಎಂದ ಕಾಂಗ್ರೆಸ್

ನವದೆಹಲಿ: ಲೋಕಸಭಾ ಸ್ಪೀಕರ್ ಓಂ ಬಿರ್ಲಾ ವಿರುದ್ಧ ನಡೆದ ಪ್ರತಿಭಟನೆಗೆ ಸಂಬಂಧಿಸಿದಂತೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರಿಗೆ ಕರ್ಣಿ ಸೇನೆ ಜೀವ ಬೆದರಿಕೆ ಹಾಕಿದ್ದು, ಇದು "ಏಕಾಂಗಿ ಸ್ಫೋಟವಲ್ಲ"...

ಬಿಹಾರ| ವಿಧಾನಸಭೆಯಲ್ಲಿ ‘ತಂಬಾಕು’ ತಿಂದ ಉಪಮುಖ್ಯಮಂತ್ರಿ ಸಾಮ್ರಾಟ್ ಚೌಧರಿ

ಬಿಹಾರ ವಿಧಾನಸಭೆಯ ಬಜೆಟ್ ಅಧಿವೇಶನದ ವಿಡಿಯೋ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆದ ಬಳಿಕ ರಾಜಕೀಯ ವಿವಾದಕ್ಕೆ ಕಾರಣವಾಗಿದೆ. ವಿಡಿಯೋದಲ್ಲಿ, ಉಪಮುಖ್ಯಮಂತ್ರಿ ಹಾಗೂ ಹಿರಿಯ ಬಿಜೆಪಿ ನಾಯಕ ಸಾಮ್ರಾಟ್ ಚೌಧರಿ ಕಲಾಪದ ಸಮಯದಲ್ಲಿ ವಸ್ತುವೊಂದನ್ನು...

‘ಬೆದರಿಕೆ, ಚಿತ್ರಹಿಂಸೆ, ಅತ್ಯಾಚಾರ ‘: ಇಸ್ರೇಲ್‌ ಜೈಲಿನ ದೌರ್ಜನ್ಯ ಬಿಚ್ಚಿಟ್ಟ ಪ್ಯಾಲೆಸ್ತೀನ್ ಪತ್ರಕರ್ತರು

ಇಸ್ರೇಲ್ ಜೈಲುಗಳಲ್ಲಿ ಬಂಧಿತರಾಗಿರುವ ಪ್ಯಾಲೆಸ್ತೀನ್ ಪತ್ರಕರ್ತರು ತೀವ್ರವಾದ ದೌರ್ಜನ್ಯಗಳನ್ನು ಎದುರಿಸುತ್ತಿದ್ದಾರೆ ಎಂದು ಅಂತಾರಾಷ್ಟ್ರೀಯ ಪತ್ರಕರ್ತರ ರಕ್ಷಣಾ ಸಮಿತಿ (ಸಿಪಿಜೆ) ಹೇಳಿದೆ. ಬಂಧನದಿಂದ ಬಿಡುಗಡೆಯಾಗಿರುವ ಪತ್ರಕರ್ತರನ್ನು ಸಂದರ್ಶಿಸಿರುವ ಸಿಪಿಜೆ, ಜೈಲಿನಲ್ಲಿರುವ ಪತ್ರಕರ್ತರು ನಿರಂತರವಾಗಿ ದೈಹಿಕ...

ಪಾಕಿಸ್ತಾನದ ಕರಾಚಿಯಲ್ಲಿ ಶಂಕಿತ ಅನಿಲ ಸೋರಿಕೆ: ಮಕ್ಕಳು ಸೇರಿದಂತೆ 16 ಮಂದಿ ಸಾವು

ಕರಾಚಿ: ಪಾಕಿಸ್ತಾನದ ಕರಾಚಿಯಲ್ಲಿ ಗುರುವಾರ ಬೆಳಿಗ್ಗೆ ವಸತಿ ಕಟ್ಟಡವೊಂದರಲ್ಲಿ ಶಂಕಿತ ಅನಿಲ ಸೋರಿಕೆಯಿಂದಾಗಿ ಸ್ಫೋಟ ಸಂಭವಿಸಿ, ಮಕ್ಕಳು ಸೇರಿದಂತೆ ಕನಿಷ್ಠ 16 ಜನರು ಸಾವನ್ನಪ್ಪಿದ್ದು, 14 ಜನರು ಗಾಯಗೊಂಡಿದ್ದಾರೆ. "ಓಲ್ಡ್ ಸೋಲ್ಜರ್ ಬಜಾರ್...

ಮಹಾರಾಷ್ಟ್ರ| 10 ದಿನಗಳ ಮಗುವಿನೊಂದಿಗೆ 12 ನೇ ತರಗತಿ ಪರೀಕ್ಷೆ ಬರೆದ ಮಹಿಳೆ

ಮಹಾರಾಷ್ಟ್ರದ ನಾಂದೇಡ್ ನಗರದಲ್ಲಿ 12 ನೇ ತರಗತಿಯ ಮಹಾರಾಷ್ಟ್ರ ಬೋರ್ಡ್ ಪರೀಕ್ಷೆಗೆ ಹಾಜರಾದ ಮಹಿಳೆಯೊಬ್ಬರು ತನ್ನ 10 ದಿನಗಳ ಮಗುವನ್ನು ಪರೀಕ್ಷಾ ಕೇಂದ್ರಕ್ಕೆ ಕರೆತಂದಿದ್ದಾರೆ. ಮಹಿಳೆ ಪರೀಕ್ಷೆ ಬರೆಯುವ ಕಾರಣಕ್ಕೆ ಕೇಂದ್ರದ ವಿಶೇಷ...

ಒಡಿಶಾ| ದಲಿತರು ವಾಸಿಸುವ ಪ್ರದೇಶಕ್ಕೆ ಕುಡಿಯುವ ನೀರು-ವಿದ್ಯುತ್ ಸಂಪರ್ಕ ಕಡಿತ

ಒಡಿಶಾದ ಬಲಂಗೀರ್ ಜಿಲ್ಲೆಯಲ್ಲಿ ಜಾತಿ ಆಧಾರಿತ ತಾರತಮ್ಯವಿದೆ ಎಂದು ಸ್ಥಳೀಯ ನಿವಾಸಿಗಳು ಆರೋಪಿಸಿದ್ದಾರೆ. ಆದರೆ, ಗ್ರಾಮದ ಅಧಿಕಾರಿಯೊಬ್ಬರು ಈ ಅಡಚಣೆಗೆ ಸ್ಥಳೀಯ ಕಲಹ ಕಾರಣ ಎಂದು ಆರೋಪಿಸಿದ್ದಾರೆ. ಜಿಲ್ಲೆಯ ತುರೆಕೆಲಾ ಬ್ಲಾಕ್‌ನ ಡುಮೆರ್ಚುವಾನ್ ಗ್ರಾಮದಲ್ಲಿ...

ತಮಿಳುನಾಡು ವಿಧಾನಸಭಾ ಚುನಾವಣೆ: ಡಿಎಂಕೆ ನೇತೃತ್ವದ ಮೈತ್ರಿಕೂಟಕ್ಕೆ ಡಿಎಂಡಿಕೆ ಸೇರ್ಪಡೆ

ಚೆನ್ನೈ: ದಿವಂಗತ ನಟ ವಿಜಯಕಾಂತ್ ಅವರ ದೇಶೀಯ ಮುರ್ಪೋಕ್ಕು ದ್ರಾವಿಡ ಕಳಗಂ (ಡಿಎಂಡಿಕೆ) ಗುರುವಾರ ದ್ರಾವಿಡ ಮುನ್ನೇತ್ರ ಕಳಗಂ ನೇತೃತ್ವದ ಜಾತ್ಯತೀತ ಪ್ರಗತಿಪರ ಒಕ್ಕೂಟ (ಎಸ್‌ಪಿಎ)ವನ್ನು 21ವರ್ಷಗಳ ಅಸ್ತಿತ್ವದ ನಂತರ ಮೊದಲ ಬಾರಿಗೆ...

ಟ್ರಕ್ ಚಾಲಕ ರಸ್ತೆಯಲ್ಲಿ ನಮಾಝ್ ಮಾಡಿದ್ದರಿಂದ ಟ್ರಾಫಿಕ್ ಜಾಮ್ ಎಂದು ಸುಳ್ಳು ಸುದ್ದಿ ಪ್ರಸಾರ : ಝೀ ನ್ಯೂಸ್‌ಗೆ 1 ಲಕ್ಷ ರೂ. ದಂಡ

ಮುಸ್ಲಿಂ ವ್ಯಕ್ತಿಯೊಬ್ಬರು ನಮಾಝ್ ಮಾಡಲು ಹೆದ್ದಾರಿ ಮಧ್ಯೆ ಟ್ರಕ್‌ ನಿಲ್ಲಿಸಿದ್ದರಿಂದ ಟ್ರಾಫಿಕ್ ಜಾಮ್‌ ಉಂಟಾಗಿದೆ ಎಂದು ಸುಳ್ಳು ಸುದ್ದಿ ಹಬ್ಬಿದ ಝೀ ನ್ಯೂಸ್‌ ಚಾನೆಲ್‌ಗೆ ಸುದ್ದಿ ಪ್ರಸಾರಕರು ಮತ್ತು ಡಿಜಿಟಲ್ ಮಾನದಂಡಗಳ ಪ್ರಾಧಿಕಾರ(ಎನ್‌ಬಿಡಿಎಸ್‌ಎ)...

ಗುಜರಾತ್‌| ಜಾತಿ ಆಧಾರಿತ ಜಗಳದಲ್ಲಿ ದಲಿತ ಯುವಕನ ಮೇಲೆ ಚಾಕುವಿನಿಂದ ದಾಳಿ

ಶನಿವಾರ ತಡರಾತ್ರಿ ರಾಣಿಪ್‌ನಲ್ಲಿ ನಡೆದ ಸಣ್ಣ ಭಿನ್ನಾಭಿಪ್ರಾಯವೊಂದು ಹಿಂಸಾಚಾರಕ್ಕೆ ತಿರುಗಿದ್ದು, 25 ವರ್ಷದ ದಲಿತ ಯುವಕ ಸಾಹಿಲ್ ವಘೇಲಾ ಮೇಲೆ ಚಾಕುವಿನಿಂದ ಹಲ್ಲೆ ನಡೆಸಲಾಗಿದೆ. ಯುವಕ ಗಂಭೀರವಾಗಿ ಗಾಯಗೊಂಡಿದ್ದು, ಘಟನೆಯು ಈ ಪ್ರದೇಶದಲ್ಲಿ...