Homeಕರ್ನಾಟಕಉತ್ತರ ಕನ್ನಡ : ಕನ್ನಡ ಕಟ್ಟಿದ ಕೊಂಕಣಿಗರು

ಉತ್ತರ ಕನ್ನಡ : ಕನ್ನಡ ಕಟ್ಟಿದ ಕೊಂಕಣಿಗರು

- Advertisement -
- Advertisement -

ಹರಿಗೆ ಎಂದು ಗುಡಿಯನೊಂದು
ಕಟ್ಟುತ್ತಿರುವೆಯಾ?
ದೀನಗಿಂತ ದೇವ ಬಡವನೆಂದು ಬಗೆದೆಯಾ?

ಎಂದು ಹಾಡಿದ ಅಂಕೋಲೆಯ “ಚುಟುಕು ಬ್ರಹ್ಮ” ದಿನಕರ ದೇಸಾಯಿಯವರ ಮಾತೃಭಾಷೆ ಕೊಂಕಣಿ! ರೈತ-ಕಾರ್ಮಿಕ ಹೋರಾಟ ಕಟ್ಟಿದ ದೇಸಾಯಿ ಕನ್ನಡ ಕಟ್ಟುವ ಕೈಂಕರ್ಯದಲ್ಲೂ ಹಿಂದಿರಲಿಲ್ಲ. ವಿಭಿನ್ನ ಜನ-ಜಾತಿ ಮತ್ತು ವಿವಿಧ ಭಾಷೆಯ ಉತ್ತರ ಕನ್ನಡದ ಮಣ್ಣಿನ ಸೊಗಡು-ಕಸುವುಗಳೇ ಅಂಥದ್ದು. ವಿಭಿನ್ನ ಭಾಷೆ-ಸಂಸ್ಕೃತಿಗಳಿದ್ದರೂ ಕನ್ನಡ ನಾಡು, ನುಡಿಯ ಜೊತೆಗೆ ಬಾಂಧವ್ಯ ಉಳಿಸಿಕೊಂಡೇ ಬಂದಿದೆ ಉತ್ತರ ಕನ್ನಡ.

ಮಲೆನಾಡು, ಕರಾವಳಿ, ಅರೆಬಯಲುಸೀಮೆಯಂಥ ವಿಶಿಷ್ಟ ಭೌಗೋಳಿಕ ಪರಿಸರದ ಈ ಜಿಲ್ಲೆಯ ಹಲವು ಕೊಂಕಣಿ ಮತ್ತು ಮರಾಠಿಗರು ಕನ್ನಡ ಸಾಹಿತ್ಯ, ಸಂಗೀತ, ಸಿನಿಮಾ, ರಂಗಭೂಮಿ, ರಾಜಕೀಯ, ಸಾಮಾಜಿಕ, ಮಾಹಿತಿ ತಂತ್ರಜ್ಞಾನ ಮುಂತಾದ ಕ್ಷೇತ್ರಗಳಿಗೆ ಎಂದೆಂದೂ ಅಳಿಸಲಾಗದ ದೊಡ್ಡ ಕೊಡುಗೆಗಳನ್ನೇ ಕೊಟ್ಟಿದ್ದಾರೆ. ಜಿಲ್ಲೆಗೊಂದು ನಿಜ ನಾಯಕತ್ವ ನೀಡಿದ್ದ ದಿನಕರ ದೇಸಾಯಿ ಲೋಕಸಭಾ ಸದಸ್ಯರೂ ಆಗಿದ್ದರು. ತ್ರಿಭಾಷಾ ಸಾಹಿತಿಯಾಗಿದ್ದ ಈ ಗೇಣಿದಾರರ-ಕೂಲಿಕಾರರ ಗೆಣೆಗಾರ ಲಲಿತ ಸಾಹಿತ್ಯ ಮತ್ತು ವೈಚಾರಿಕ ಬರಹಗಳಿಂದ ಪ್ರಸಿದ್ಧಿ ಪಡೆದಿದ್ದರು. ಜನರಲ್ಲಿ ತಿಳಿವು ಅರಿವು ಮೂಡಿಸಲೆಂದು “ಜನಸೇವಕ” ಎಂಬ ಪತ್ರಿಕೆ ಹೊರತರುತ್ತಿದ್ದ ದೇಸಾಯಿ ಹತ್ತಾರು ಹೈಸ್ಕೂಲು, ಕಾಲೇಜು ತೆರೆದು ಹಳ್ಳಿಗಾಡಿನಲ್ಲಿ ವಿದ್ಯಾಪ್ರಸಾರದ ಅಭೂತಪೂರ್ವ ಸಾಹಸ-ಸಾಧನೆ ಮಾಡಿದ್ದರು.

ಕನ್ನಡ, ಮರಾಠಿ, ಕೊಂಕಣಿ ಮತ್ತು ಇಂಗ್ಲಿಷ್‌ನಲ್ಲಿ ಸಾಹಿತ್ಯ ರಚಿಸಿರುವ ಗೋಕರ್ಣದ ಡಾ. ಗೌರೀಶ್ ಕಾಯ್ಕಿಣಿ ವೃತ್ತಿಯಲ್ಲಿ ಶಿಕ್ಷಕರಾಗಿದ್ದರು. ಮೂರ್ತಿಭಂಜಕ ಪ್ರವೃತ್ತಿಯ ಕೊಂಕಣಿ ಮನೆಮಾತಾಗಿರುವ ಕಾಯ್ಕಿಣಿ ಅವರು ಮುಂದಿನ ತತ್ವಜ್ಞಾನವೆಂದರೆ ವಿಜ್ಞಾನ ಎನ್ನುತ್ತಿದ್ದರು. ಹರಿತ ವೈಚಾರಿಕ ಸಾಹಿತ್ಯದಿಂದ ಖ್ಯಾತಿ ಪಡೆದಿದ್ದ ಕಾಯ್ಕಿಣಿ ಪತ್ರಿಕೋದ್ಯಮಿಯೂ ಆಗಿದ್ದರು. ಮೆದು ಮಾತು-ಮೆಲುದನಿಯ ಕಥೆಗಾರ ಜಯಂತ್ ಕಾಯ್ಕಿಣಿ ಗೌರೀಶ್ ಕಾಯ್ಕಿಣಿಯವರ ಪುತ್ರ. ಕನ್ನಡಿಗರ ಅಚ್ಚುಮೆಚ್ಚಿನ ಸಾಹಿತಿ ಜಯಂತ್ 2006ರ ಬಳಿಕ ಸಿನಿಮಾ ಸಾಹಿತ್ಯದ ಮೂಲಕ ತಮ್ಮ ಪ್ರತಿಭೆಯ ಮತ್ತೊಂದು ಆಯಾಮವನ್ನು ತೆರೆದಿಟ್ಟಿದ್ದಾರೆ.

ಕಾಯ್ಕಿಣಿಗಳಂತೆ ಗೋಕರ್ಣ ಹತ್ತಿರದ ಹನೇಹಳ್ಳಿಯ ಖ್ಯಾತ ಕಥೆಗಾರ, ಕಾದಂಬರಿಕಾರ ಯಶವಂತ ಚಿತ್ತಾಲರೂ ಕೊಂಕಣಿ ಆಡುಮಾತಿನವರು. ‘ಶಿಕಾರಿ’ ಕಾದಂಬರಿಯಿಂದ ಕನ್ನಡ ಸಾರಸ್ವತ ಲೋಕದಲ್ಲಿ ಅಚ್ಚಳಿಯದ ಛಾಪು ಮೂಡಿಸಿರುವ ಚಿತ್ತಾಲರ ಅಣ್ಣ ಗಂಗಾಧರ ಚಿತ್ತಾಲರು ಕವಿಯಾಗಿ ಗುರುತಿಸಿಕೊಂಡವರು. ಗೋಕರ್ಣಕ್ಕೆ ಹತ್ತಿರವೇ ಇರುವ ಬಂಕಿಕೊಡ್ಲದ ಅರವಿಂದ ನಾಡಕರ್ಣಿ ಮತ್ತು ಸುಂದರ ನಾಡಕರ್ಣಿ ಸೋದರರು ಹಲವು ಕನ್ನಡಕವನ ಸಂಕಲನ ಪ್ರಕಟಿಸಿದ್ದಾರೆ. ಇವರೂ ಕೊಂಕಣಿ ಭಾಷೆಯ ಸಾರಸ್ವತ ಕುಟುಂಬದ ರೇ.ದಾಮೋದರ ಚಿತ್ತಾಲರೂ ಕನ್ನಡ ಸಾಹಿತ್ಯ ಕ್ಷೇತ್ರದ ಗಮನ ಸೆಳೆದ ಬರಹಗಾರರು.

ಕನ್ನಡ ಕಾದಂಬರಿ ಲೋಕಕ್ಕೆ ನವ್ಯಮಾರ್ಗ ತಂದ ಶಾಂತಿನಾಥ ದೇಸಾಯಿ ಹಳಿಯಾಳದವರು. ಸಣ್ಣಕತೆ, ಪ್ರಬಂಧ, ವಿಮರ್ಶೆ…ಮುಂತಾದ ಪ್ರಕಾರಗಳಲ್ಲಿ ಪ್ರಯೋಗಶೀಲತೆ ಅಳವಡಿಸಿ ನಾಲ್ಕು ದಶಕಗಳ ಕಾಲ ಕನ್ನಡ ಸಾಹಿತ್ಯ ಕ್ಷೇತ್ರದಲ್ಲಿ ಪ್ರಮುಖ ಬರಹಗಾರನೆಂದು ಖ್ಯಾತರಾಗಿದ್ದ ದೇಸಾಯಿ ಕೊಂಕಣಿಗರು. ಕೊಂಕಣಿ ಮಾತಾಡುವ ಕುಟುಂಬದ ಉತ್ತರಕನ್ನಡಿಗ ವಿವೇಕ್ ಶಾನ್‍ಭಾಗ್ ಕನ್ನಡದ ಪ್ರಮುಖ ಕತೆಗಾರ, ಕಾದಂಬರಿಕಾರ ಮತ್ತು ನಾಟಕಕಾರರಲ್ಲಿ ಒಬ್ಬರು.

1950-60ರ ದಶಕದಲ್ಲಿ ಕನ್ನಡ ಸಿನಿಮಾರಂಗದಲ್ಲಿ ಮನೋಜ್ಞ ಅಭಿನಯದಿಂದ ಪ್ರಖ್ಯಾತರಾಗಿದ್ದ ಅಭಿನೇತ್ರಿಯರಾದ ಮೈನಾವತಿ ಮತ್ತು ಪಂಡರಿಬಾಯಿ ಮೂಲ ಭಟ್ಕಳ. ಕೊಂಕಣಿ ಮನೆಮಾತಿನ ಈ ಸಹೋದರಿಯರ ತಂದೆ ರಂಗರಾವ್ ಹರಿಕಥೆ, ಸಂಗೀತ, ಸಾಹಿತ್ಯ, ಅಭಿನಯದಲ್ಲಿ ಪರಿಣಿತರಾಗಿದ್ದರು. ಮೈನಾವತಿ ಸರಿಸುಮಾರು ನೂರು ಚಿತ್ರಗಳಲ್ಲಿ ನಟಿಸಿದ್ದರೆ, ಪಂಡರಿಬಾಯಿ ಕನ್ನಡ ಸಿನಿಮಾಗಳ ಮೊದಲ ಯಶಸ್ವೀ ತಾರೆ. ಡಾ. ರಾಜ್‍ಕುಮಾರ್ ಅವರಿಗೆ ನಾಯಕಿಯಾಗಿ ಮಿಂಚಿದ ಪಂಡರಿಬಾಯಿ ಆನಂತರ ಕನ್ನಡ ಚಿತ್ರರಂಗದ “ಅಮ್ಮ”ನೆಂದೇ ಹೆಸರಾಗಿದ್ದರು.

ಕುಮಟಾದ ಮಲ್ಲಾಪುರ ಗ್ರಾಮದ ಸಾರಸ್ವತ ಕೊಂಕಣಿ ಕುಟುಂಬದ ಅನಂತ್‍ನಾಗ್ ಮತ್ತು ಶಂಕರ್‌ನಾಗ್ ಇವತ್ತಿಗೂ ಕನ್ನಡ ಸಿನಿಮಾ ಲೋಕದಲ್ಲಿ ಮಾಂತ್ರಿಕ ಹೆಸರು. ಅನನ್ಯ ಪ್ರತಿಭೆಯ ಈ ಸಹೋದರರ ನಟನಾಕೌಶಲ್ಯ ಕನ್ನಡ ಸಿನಿಮಾರಂಗದಲ್ಲಿ ಸರ್ವಕಾಲಿಕ ದಾಖಲೆ! ಸಿನಿಮಾ ನಟಿ ರಾಧಿಕಾಪಂಡಿತ್ ಭಟ್ಕಳದ ಚಿತ್ರಾಪುರ ಮೂಲದ ಸಾರಸ್ವತ ಕೊಂಕಣಿ. ಉತ್ತರ ಕನ್ನಡದ ಯು.ಎಸ್. ಕೃಷ್ಣರಾವ್ ಮತ್ತವರ ಮಡದಿ ಚಂದ್ರಭಾಗಾದೇವಿ ಶಾಸ್ತ್ರೀಯ ನೃತ್ಯದ ಮೂಲಕ ಹೆಸರು ಮಾಡಿದ್ದಾರೆ. ಕೊಳಲುವಾದಕ ನಿತ್ಯಾನಂದ ಹಳದಿಪುರ್, ಸಂಗೀತಗಾರ ಮೋಹನ್‍ಚಿತ್ರಮನೆ, ತಬಲಾ ವಾದಕ ಆದಿತ್ಯ ಕಲ್ಯಾಣ್‍ಪುರ್, ಸಂಗೀತಗಾರ ಭರತ್ ಬಳವಳ್ಳಿ, ನಟ ವೆಂಕಟರಾವ್ ತಲಗೇರಿ, ಅನುಪಮಾ (ಕಾಯ್ಕಿಣಿ), ದೇಶಪಾಂಡೆ(ಸಂಗೀತ), ಆರ್.ಡಿ ಕಾಮತ್ (ರಂಗಭೂಮಿ) ಲೀನಾ ಚಂದಾವರ್ಕರ್ (ಪ್ರಸಿದ್ಧ ಗಾಯಕಿ), ಅನುರಾಧಾ ಪೋಡ್ವಾಲ್, ಅನುರಾಧಾ ಧಾರೇಶ್ವರ್ (ಹಾಡುಗಾರ್ತಿ) ಕೊಂಕಣಿಗರಾದರೂ ಕನ್ನಡ ಪ್ರತಿಭೆಗಳೆಂದೇ ಗುರುತಿಸಲ್ಪಡುವವರು!

ಸುಮಾರು ಮೂರೂಮುಕ್ಕಾಲು ದಶಕದಿಂದ ಕರ್ನಾಟಕದ ರಾಜಕಾರಣದಲ್ಲಿ ಪ್ರಮುಖ ರಾಜಕಾರಣಿಯಾಗಿರುವ ಹಳಿಯಾಳದ ರಘುನಾಥ್ ವಿಶ್ವನಾಥ್‍ರಾವ್ ದೇಶಪಾಂಡೆ ಕೊಂಕಣಿ ಮನೆ ಮಾತಿನವರು. ಅಧಿಕಾರ ರಾಜಕಾರಣದ ಹಲವು ಆಯಕಟ್ಟಿನ ಸ್ಥಾನದಲ್ಲಿದ್ದ ದೇಶಪಾಂಡೆ ಒಂದು ಸಂದರ್ಭದಲ್ಲಿ ಸಿಎಂ ಮಟೇರಿಯಲ್ ಅನಿಸಿಕೊಂಡವರು! ಸಮಾಜವಾದಿ ದಿನಕರ ದೇಸಾಯಿ ಒಡನಾಡಿ ಅಂಕೋಲೆಯ ದಯಾನಂದ ನಾಡಕರ್ಣಿ ಶಾಸಕರೂ ಆಗಿದ್ದರು. ಕುಮಟೆಯಲ್ಲಿ ವಸಂತಲತಾ ಮಿರ್ಜಾನ್‍ಕರ್ ಶಾಸಕಿಯಾಗಿದ್ದರು. ಇವರಿಬ್ಬರೂ ಸಾರಸ್ವತ ಕೊಂಕಣಿಗರು. ದಟ್ಟ ಕೊಂಕಣಿ ಪ್ರಭಾವದ ಕಾರವಾರದ ಬಿ.ಪಿ. ಕದಮ್ ವಿಧಾನಸಭೆಯ ಉಪಾಧ್ಯಕ್ಷರಾಗಿ, ಸಂಸದರಾಗಿದ್ದ ಕೊಂಕಣಿ ಭಾಷಿಕ. ವಿಧಾನಪರಿಷತ್‍ನ ಸಭಾಪತಿಯಾಗಿದ್ದ ಇದೇ ಕಾರವಾರದ ಎಸ್.ಡಿ. ಗಾಂವ್ಕರ್ ಕೂಡ ಕೊಂಕಣಿ ಮನೆ ಮಾತಿನವರಾಗಿದ್ದರು. ಭಾರತದ ಮಾಹಿತಿ ತಂತ್ರಜ್ಞಾನ ಕ್ಷೇತ್ರದ ದಿಗ್ಗಜರಲ್ಲೊಬ್ಬರಾಗಿರುವ ನಂದನ್ ನೀಲೇಕಣಿ ಶಿರಸಿ ಮೂಲದ ಸಾರಸ್ವತ ಕೊಂಕಣಿಗರು. ಕಾರಾವಾರದ ಶಾಸಕಿ ರೂಪಾಲಿ ನಾಯ್ಕ್ ಮನೆಮಾತು ಕೊಂಕಣಿ.

ಕನ್ನಡದ ಗಂಧಗಾಳಿಯೇ ಇಲ್ಲದ ಹಲವು ಪ್ರದೇಶವಿರುವ ಉತ್ತರಕನ್ನಡದ ಎರಡನೇ ಪ್ರಮುಖ ವ್ಯಾವಹಾರಿಕ ಭಾಷೆ ಕೊಂಕಣಿ. ಕನ್ನಡಾಂಬೆಯ ತೇರು ಎಳೆಯುವಾಗ ಎಲ್ಲರೂ ಒಂದೇ. ಇದೇ ಉತ್ತರ ಕನ್ನಡದ ಭಾಷಾ ಸಹಿಷ್ಣುತೆ, ಸಾಮರಸ್ಯದ ವೈಶಿಷ್ಟ್ಯ!


ಇದನ್ನೂ ಓದಿ: ತಾತ್ಸಾರ ತೊರೆದು ಸ್ವಾಯತ್ತತೆಗಾಗಿ – ಕರ್ನಾಟಕದ ಹಕ್ಕುಗಳಿಗಾಗಿ ಹೋರಾಟವೇ ರಾಜ್ಯೋತ್ಸವ
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜ್ಯಸಭಾ ಚುನಾವಣೆ: ಕರ್ನಾಟದಿಂದ ಆಯ್ಕೆಯಾದ ಪ್ರತಿನಿಧಿಗಳಿಂದ ರಾಜ್ಯಕ್ಕೆ ಲಾಭವಾಗಿದೆಯೇ?

ರಾಜ್ಯಸಭೆಗೆ ಪ್ರತಿಬಾರಿ ಚುನಾವಣೆ ನಡೆಯುವಾಗಲೂ ಈ ಚರ್ಚೆಗಳು ಸಾಮಾನ್ಯ. ಕನ್ನಡೇತರರು ಇಲ್ಲಿಂದ ಆಯ್ಕೆಯಾಗಿ ಇಲ್ಲಿಯ ಸಮಸ್ಯೆಗಳ ಬಗ್ಗೆ ಮಾತನಾಡುವುದಿಲ್ಲ ಎಂಬ ವಾಸ್ತವದ ಜೊತೆಜೊತೆಗೆ, ರಾಜ್ಯಸಭೆಗೆ ಆಯ್ಕೆಯಾಗುವ ಕನ್ನಡವರಾದರೂ ಮಾತನಾಡುತ್ತಾರಾ? ಎಂದರೆ ಅದಕ್ಕೂ ನಮ್ಮಲ್ಲಿ...

ಬಂಗಾಳದಲ್ಲಿ ಬಿಜೆಪಿ ಬೆಂಬಲಿಗರ ಕ್ರೌರ್ಯ: ಅಭಿಷೇಕ್ ಬಳಿಕ ಕಲ್ಯಾಣ್‌ ಬ್ಯಾನರ್ಜಿ ಮೇಲೆ ಮಾರಣಾಂತಿಕ ದಾಳಿ

ಪಶ್ಚಿಮ ಬಂಗಾಳದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಕಲ್ಯಾಣ್ ಬ್ಯಾನರ್ಜಿ ಅವರು ಭಾನುವಾರ (ಮೇ 31), ಹೂಗ್ಲಿ ಜಿಲ್ಲೆಯಲ್ಲಿ ನಡೆದಿದ್ದ ಚುನಾವಣೋತ್ತರ ಹಿಂಸಾಚಾರದಲ್ಲಿ ಕಾರ್ಯಕರ್ತರ ಬಂಧನದ ವಿರುದ್ಧ ಮನವಿ ಪತ್ರ ಸಲ್ಲಿಸಲು ಭೇಟಿ...

ಬಸ್ತಾರ್‌: ಬುಡಕಟ್ಟು ಕ್ರಿಶ್ಚಿಯನ್ ಕುಟುಂಬಗಳಿಗೆ ಬೆದರಿಕೆ, ಥಳಿತ, ಹಿಂದೂ ಧರ್ಮ ಸ್ವೀಕರಿಸಲು ಬಲವಂತ: ಘನತೆಯ ಬದುಕಿಗಾಗಿ ಆದಿವಾಸಿಗಳ ಹೋರಾಟ

ಛತ್ತೀಸ್‌ಗಢದ ದಟ್ಟ ಅರಣ್ಯಗಳು ಮತ್ತು ಕಡಿದಾದ ಬೆಟ್ಟಗಳಿಂದ ಆವೃತವಾಗಿರುವ ಬಸ್ತಾರ್ ಕಣಿವೆಯು ತನ್ನ ವಿಶಿಷ್ಟ ಬುಡಕಟ್ಟು ಸಂಸ್ಕೃತಿ ಮತ್ತು ಪ್ರಾಕೃತಿಕ ಸಂಪತ್ತಿಗೆ ಹೆಸರುವಾಸಿ. ಆದರೆ ಇತ್ತೀಚಿನ ವರ್ಷಗಳಲ್ಲಿ, ಈ ಪ್ರಶಾಂತ ಭೂಭಾಗವು ತೀವ್ರಗಾಮಿ...

ಗಾಝಾದಲ್ಲಿ ರಕ್ತಸಿಕ್ತ ಈದ್: ಇಸ್ರೇಲ್ ಭೀಕರ ದಾಳಿಗೆ 26 ಪ್ಯಾಲೆಸ್ಟೀನಿಯನ್ನರು ಬಲಿ, ವಿಶ್ವಸಂಸ್ಥೆ ತೀವ್ರ ಆತಂಕ

ಗಾಝಾ: ಇಸ್ಲಾಂ ಧರ್ಮದ ಅತ್ಯಂತ ಪವಿತ್ರ ದಿನಗಳಲ್ಲಿ ಒಂದಾದ ‘ಈದ್ ಅಲ್-ಅಧಾ’ ಹಬ್ಬದ ಸಂದರ್ಭದಲ್ಲೂ ಗಾಝಾ ಪಟ್ಟಿಯಲ್ಲಿ ರಕ್ತಪಾತ ಮುಂದುವರಿದಿದ್ದು, ಹಬ್ಬದ ಮುನ್ನಾದಿನದಿಂದ ಆರಂಭಿಸಿ ಇಸ್ರೇಲ್ ಪಡೆಗಳು ನಡೆಸಿದ ಸರಣಿ ದಾಳಿಗಳಲ್ಲಿ ಕನಿಷ್ಠ...

ಜನರಿಗೆ ಇಂಧನ ಉಳಿಸುವ ಪಾಠ, ಪ್ರಧಾನಿಗೆ ರೋಡ್‌ಶೋಗಳ ಆಟ

ಮೇ 10 ರಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಸಾರ್ವಜನಿಕರಲ್ಲಿ ಮಿತವ್ಯಯದ ಅಪೀಲು ಮಾಡಿದ್ದು, ಇಂಧನ ಬಳಕೆಯನ್ನು ಕನಿಷ್ಠ ಮಟ್ಟಕ್ಕೆ ಇಳಿಸುವಂತೆ ಕೋರಿದ್ದರು. ಜನರು ಖಾಸಗಿ ವಾಹನಗಳ ಬಳಕೆಯನ್ನು ಬಿಟ್ಟು ಸಾರ್ವಜನಿಕ ಸಾರಿಗೆಯನ್ನು...

ಏಷ್ಯನ್ ಗೇಮ್ಸ್‌ ಟ್ರಯಲ್ಸ್‌ನಲ್ಲಿ ಸ್ಪರ್ಧಿಸಲು ವಿನೇಶ್ ಫೋಗಟ್‌ಗೆ ಅನುಮತಿಸಿದ ಭಾರತೀಯ ಕುಸ್ತಿ ಒಕ್ಕೂಟ

ಮಾಜಿ ವಿಶ್ವ ಚಾಂಪಿಯನ್‌ಶಿಪ್ ಪದಕ ವಿಜೇತೆ ವಿನೇಶ್ ಫೋಗಟ್ ಅವರು (ಮೇ 30) ಏಷ್ಯನ್ ಗೇಮ್ಸ್ ಆಯ್ಕೆ ಟ್ರಯಲ್ಸ್‌ನಲ್ಲಿ ಮಹಿಳೆಯರ 53 ಕೆಜಿ ವಿಭಾಗದಲ್ಲಿ ಸ್ಪರ್ಧಿಸಲು ಅವಕಾಶ ಪಡೆದಿದ್ದಾರೆ. ಭಾರತೀಯ ಕುಸ್ತಿ ಒಕ್ಕೂಟ...

Uttarakhand | ಬಜರಂಗದಳದ ಕಾರ್ಯಕರ್ತರು ಈಗ ದ್ವೇಷ ಬಿತ್ತುವ ವೃತ್ತಿಪರ ಇನ್‌ಫ್ಲ್ಯುಯೆನ್ಸರ್ಸ್!

ಈ ವರ್ಷದ ಆರಂಭದಲ್ಲಿ ಉತ್ತರಾಖಂಡದ ಕೋಟದ್ವಾರದಲ್ಲಿ ಹಿಂದುತ್ವ ಗುಂಪೊಂದು ವೃದ್ಧ ಮುಸ್ಲಿಂ ವ್ಯಕ್ತಿಯೊಬ್ಬರ ಅಂಗಡಿಗೆ ನುಗ್ಗಿ, ಅಂಗಡಿಯ ಹೆಸರಾದ ‘ಬಾಬಾ’ ಎಂಬುವುದನ್ನು ಬದಲಾಯಿಸುವಂತೆ ಒತ್ತಾಯಿಸಿತ್ತು. ‘ಬಾಬಾ’ ಎಂಬುವುದು ‘ಹಿಂದೂ’ ಹೆಸರಾಗಿದೆ ಎಂದು ಆ...

​ನಿಗಿ ನಿಗಿ ಕೆಂಡದಂತಾಗಿರುವ ಬಿಡದಿ, ಡಿಕೆಶಿಗೆ ಬಿಸಿ ತುಪ್ಪದಂತಾದ ರೈತರು

​ಬದಲಾದ ರಾಜಕೀಯ ಸಂದರ್ಭದಲ್ಲಿ ಕರ್ನಾಟಕದ ಮುಂದಿನ ಮುಖ್ಯಮಂತ್ರಿ ಎಂದೇ ಬಿಂಬಿತವಾಗಿರುವ ಡಿ.ಕೆ. ಶಿವಕುಮಾರ್ ಪ್ರತಿಷ್ಠೆಯಾಗಿ ತೆಗೆದುಕೊಂಡಿರುವ ಬಿಡದಿಯ ಟೌನ್‌ಶಿಪ್ ಯೋಜನೆಯ ವಿರುದ್ಧ ನಡೆಯುತ್ತಿರುವ ರೈತರ ಹೋರಾಟ ದಿನದಿಂದ ದಿನಕ್ಕೆ ಉಗ್ರ ರೂಪ ಪಡೆಯುತ್ತಿದೆ. ​ಭೂಸ್ವಾಧೀನದ...

ಪ್ರಜಾಪ್ರಭುತ್ವವನ್ನು ಹತ್ತಿಕ್ಕಲು ‘SIR’ ಅನ್ನೇ ಅಸ್ತ್ರವನ್ನಾಗಿಸಿಕೊಂಡ ನರೇಂದ್ರ ಮೋದಿ!

ಪಶ್ಚಿಮ ಬಂಗಾಳದ ವಿಧಾನಸಭಾ ಚುನಾವಣೆಯ ಫಲಿತಾಂಶ ಪ್ರಕಟವಾದ ತಕ್ಷಣ (ಮೇ 4 ರಂದು), ಕಾಳೀಘಾಟ್‌ನಲ್ಲಿರುವ ತಮ್ಮ ನಿವಾಸದಲ್ಲಿ ಸುದ್ದಿಗೋಷ್ಠಿ ನಡೆಸಿದ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅತ್ಯಂತ ಆಕ್ರೋಶದಿಂದ ಮಾತನಾಡಿದ್ದರು. ಅಷ್ಟೇ ಅಲ್ಲದೆ,...

ಕೇರಳದಲ್ಲಿ ಶಾಲಾ ಬಾಲಕಿಯರಿಗೆ ಮೂರು ದಿನ ಮುಟ್ಟಿನ ರಜೆ, ಅಸಂಘಟಿತ ವಲಯದ ಮಹಿಳೆಯರಿಗೆ ಆರು ತಿಂಗಳ ಹೆರಿಗೆ ರಜೆ ಘೋಷಣೆ 

ತಿರುವನಂತಪುರಂ: ಕೇರಳದ ವಿ.ಡಿ. ಸತೀಶನ್ ನೇತೃತ್ವದ ಕಾಂಗ್ರೆಸ್ ಸರ್ಕಾರವು ಮಹಿಳೆಯರಿಗೆ ಹಲವಾರು ಕಲ್ಯಾಣ ಕ್ರಮಗಳನ್ನು ಘೋಷಿಸಿದೆ, ಇದರಲ್ಲಿ ಶಾಲಾ ವಿದ್ಯಾರ್ಥಿಗಳಿಗೆ ಮೂರು ದಿನಗಳ ಮಾಸಿಕ ಮುಟ್ಟಿನ ರಜೆ, ಕೆಲಸದ ಸ್ಥಳಗಳಲ್ಲಿ ಮಹಿಳೆಯರಿಗೆ ಸಮಾನ...