Homeಮುಖಪುಟಯುಪಿ: ಪ್ರತಿಭಟನಾಕಾರರ ಮನೆ ಮೇಲೆ 2ನೇ ದಿನವೂ ಮುಂದುವರೆದ ಬುಲ್ಡೋಜರ್‌ ದಾಳಿ

ಯುಪಿ: ಪ್ರತಿಭಟನಾಕಾರರ ಮನೆ ಮೇಲೆ 2ನೇ ದಿನವೂ ಮುಂದುವರೆದ ಬುಲ್ಡೋಜರ್‌ ದಾಳಿ

- Advertisement -
- Advertisement -

ಪ್ರವಾದಿ ಮುಹಮ್ಮದ್ ಬಗ್ಗೆ ಬಿಜೆಪಿಯ ಮಾಜಿ ವಕ್ತಾರರ ಇತ್ತೀಚಿನ ಹೇಳಿಕೆಗಳನ್ನು ವಿರೋಧಿಸಿ ನಡೆದ ಪ್ರತಿಭಟನೆ ಹಿಂಸಾಚಾರಕ್ಕೆ ತಿರುಗಿದ ನಂತರ ಉತ್ತರ ಪ್ರದೇಶ ಸರ್ಕಾರ ಪ್ರತಿಭಟನಾಕಾರರ ಮನೆಗಳ ಮೇಲೆ ಬುಲ್ಡೋಜರ್‌ ದಾಳಿ ನಡೆಸುತ್ತಿದೆ. ಇದು ಎರಡನೇ ದಿನವೂ ಮುಂದುವರೆದಿದೆ.

ಪ್ರತಿಭಟನೆಯಲ್ಲಿ ನಡೆದ ಹಿಂಸಾಚಾರದಲ್ಲಿ ತೊಡಗಿದ್ದರು ಎನ್ನಲಾದ ಇಬ್ಬರು ಆರೋಪಿಗಳ ಮನೆಗಳನ್ನು ಸಹರಾನ್‌ಪುರದಲ್ಲಿ ಧ್ವಂಸಗೊಳಿಸಿದ ನಂತರ, ಇಂದು ಭಾರೀ ಪೊಲೀಸ್ ಉಪಸ್ಥಿತಿಯಲ್ಲಿ ಪ್ರಯಾಗ್‌ರಾಜ್‌ನಲ್ಲಿ ಆರೋಪಿ ರಾಜಕಾರಣಿಯ ಮನೆಯನ್ನು ಬುಲ್ಡೋಜರ್‌ಗಳು ನೆಲಸಮ ಮಾಡಿವೆ.

ಶುಕ್ರವಾರ ನಡೆದ ಹಿಂಸಾಚಾರದ ಹಿಂದಿನ “ಮಾಸ್ಟರ್‌ಮೈಂಡ್‌ಗಳಲ್ಲಿ” ಒಬ್ಬರು ಎಂದು ಪೊಲೀಸರು ಹೇಳಿಕೊಂಡಿರುವ ಪ್ರಯಾಗರಾಜ್ ಮೂಲದ ರಾಜಕಾರಣಿ, ಆರೋಪಿ ಜಾವೇದ್ ಮೊಹಮ್ಮದ್ ಅವರ ಮನೆಯ ಗೇಟ್‌ಗಳು ಮತ್ತು ಹೊರಗಿನ ಗೋಡೆಗಳನ್ನು ಬುಲ್ಡೋಜರ್‌ಗಳು ಧ್ವಂಸಗೊಳಿಸಿವೆ.

ಇದನ್ನೂ ಓದಿ: ತೆಲಂಗಾಣ: ಅವಹೇಳನಕಾರಿ ಪೋಸ್ಟ್‌ ವಿರುದ್ಧ ಭಾರೀ ಪ್ರತಿಭಟನೆ; ಲಾಠಿಚಾರ್ಜ್‌

ಪ್ರಯಾಗರಾಜ್ ಮೂಲದ ರಾಜಕಾರಣಿ, ಆರೋಪಿ ಜಾವೇದ್ ಅವರ ನಿವಾಸದ ಹೊರಗಿನ ಮನೆಯ ನೆಲ ಮತ್ತು ಮೊದಲ ಮಹಡಿಗಳಲ್ಲಿ ಅಕ್ರಮ ನಿರ್ಮಾಣದ ಕುರಿತು ಸೂಚನೆ ನೀಡಿದ ಕೆಲವೇ ಗಂಟೆಗಳ ಒಳಗೆ ಪುರಸಭೆಯ ಅಧಿಕಾರಿಗಳು ಕಟ್ಟಡ ಕೆಡವಲಾಗಿದೆ.

ನಿನ್ನೆ ತಡರಾತ್ರಿ ರಾಜಕಾರಣಿಯ ಮನೆಯ ಹೊರಗೆ ಹಾಕಲಾದ ನೋಟಿಸ್‌ನಲ್ಲಿ ಜಾವೇದ್ ಅವರು ಈ ವರ್ಷದ ಮೇ ತಿಂಗಳಲ್ಲಿ ನೀಡಲಾಗಿದ್ದ ನೋಟಿಸ್‌ಗೆ ಉತ್ತರಿಸಲು ವಿಫಲರಾಗಿದ್ದಾರೆ ಎಂದು ಹೇಳಲಾಗಿದೆ. ಆ ನೋಟಿಸ್ ಪ್ರಕಾರ, ಜೂನ್ 9 ರೊಳಗೆ ಅಕ್ರಮ ನಿರ್ಮಾಣವನ್ನು ನೆಲಸಮಗೊಳಿಸುವಂತೆ ಜಾವೇದ್‌ಗೆ ತಿಳಿಸಲಾಯಿತು, ವಿಫಲವಾದರೆ ಜೂನ್ 12 ರಂದು ಬೆಳಿಗ್ಗೆ 11 ಗಂಟೆಯೊಳಗೆ ಮನೆಯನ್ನು ಖಾಲಿ ಮಾಡುವಂತೆ ಅಂತಿಮ ಸೂಚನೆಯನ್ನು ಕಳುಹಿಸಲಾಗಿದೆ.

ಶನಿವಾರ ಆರೋಪಿ ಮುಝಮ್ಮಿಲ್ ಮತ್ತು ಅಬ್ದುಲ್ ವಾಕಿರ್ ಅವರ ನಿವಾಸಗಳಲ್ಲಿ ಪೊಲೀಸರು ಮತ್ತು ಮುನ್ಸಿಪಲ್ ತಂಡಗಳು ಕಾಣಿಸಿಕೊಂಡು, ಅವರ ಮನೆಗಳ ಗೇಟ್‌ಗಳು ಮತ್ತು ಹೊರಗಿನ ಗೋಡೆಗಳನ್ನು ಅಕ್ರಮ ನಿರ್ಮಾಣಗಳು ಎಂದು ಹೇಳಿ ಮನೆಗಳ ಭಾಗಗಳನ್ನು ಕೆಡವಿದ್ದರು.


ಇದನ್ನೂ ಓದಿ: ಪ್ರವಾದಿ ನಿಂದನೆ: ಪ್ರತಿಭಟನಾಕಾರರ ಮೇಲೆ ’ಬುಲ್ಡೋಜರ್’ ಪ್ರಭಾವ ತೋರಿದ ಯೋಗಿ ಸರ್ಕಾರ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ಕಟ್ಡಡಗಳನ್ನು ಹೊಡೆದುಹಾಕುವುದರಿಂದ ಅಪಾರ ಸೊತ್ತು ಹಾಳಾಗುತ್ತದೆ. ಇಂತ ಕಟ್ಟಡಗಳನ್ನು ಆಳ್ವಿಕೆ ತನ್ನ ತೆಕ್ಕೆಗೆ ಪಡೆಯಬಹುದಾದ ಬಗೆಗೆ ಹೆಜ್ಜೆಇಡಲಿ.

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...