Homeಮುಖಪುಟಉತ್ತರ ಪ್ರದೇಶ: ಉಪ ಮುಖ್ಯಮಂತ್ರಿಗೆ ಘೇರಾವ್ ಹಾಕಿ, ಸ್ವ ಕ್ಷೇತ್ರದಿಂದ ವಾಪಸ್ ಕಳುಹಿಸಿದ ಮಹಿಳೆಯರು

ಉತ್ತರ ಪ್ರದೇಶ: ಉಪ ಮುಖ್ಯಮಂತ್ರಿಗೆ ಘೇರಾವ್ ಹಾಕಿ, ಸ್ವ ಕ್ಷೇತ್ರದಿಂದ ವಾಪಸ್ ಕಳುಹಿಸಿದ ಮಹಿಳೆಯರು

- Advertisement -
- Advertisement -

ಇತ್ತೀಚೆಗೆ ಉತ್ತರ ಪ್ರದೇಶದ ಬಿಜೆಪಿ ಶಾಸಕ ಮತ್ತು ಮುಜಾಫರ್‌ನಗರದ ಖತೌಲಿ ವಿಧಾನಸಭಾ ಕ್ಷೇತ್ರದ ಅಭ್ಯರ್ಥಿ ವಿಕ್ರಮ್ ಸೈನಿ ವಿರುದ್ಧ ಅಸಮಾಧಾನ ಹೊರ ಹಾಕಿದ ಗ್ರಾಮಸ್ಥರು, ಶಾಸಕರನ್ನು ಇಲ್ಲಿಂದ ಹೊರಟು ಹೋಗುವಂತೆ ಬೆನ್ನಟ್ಟಿ ಓಡಿಸಿದ್ದ ಘಟನೆ ನಡೆದಿತ್ತು. ಈಗ ಉಪ ಮುಖ್ಯಮಂತ್ರಿ ಕೇಶವ್ ಪ್ರಸಾದ್ ಮೌರ್ಯ ಅವರನ್ನು ಮಹಿಳೆಯರು ಘೇರಾವ್ ಹಾಕಿ ಪ್ರತಿಭಟನೆ ನಡೆಸಿರುವ ಘಟನೆ ನಡೆದಿದೆ.

ಉತ್ತರ ಪ್ರದೇಶದ ಉಪಮುಖ್ಯಮಂತ್ರಿ ಕೇಶವ್ ಪ್ರಸಾದ್ ಮೌರ್ಯ ತಮ್ಮ ವಿಧಾನಸಭಾ ಕ್ಷೇತ್ರವಾದ ಸಿರಥುದಲ್ಲಿ ಪ್ರಚಾರಕ್ಕೆ ಹೋದಾಗ ಸ್ಥಳೀಯರಿಂದ ವಿರೋಧ ಎದುರಿಸಿದ್ದಾರೆ. ಶನಿವಾರ ನಡೆದ ಈ ಘಟನೆಯ ವಿಡಿಯೋ ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್ ಆಗಿದೆ.

ವಿಡಿಯೋದಲ್ಲಿ ಉಪಮುಖ್ಯಮಂತ್ರಿ ಕೇಶವ್ ಪ್ರಸಾದ್ ಮೌರ್ಯ ವಿರುದ್ಧ ಘೋಷಣೆಗಳನ್ನು ಕೂಗಲಾಗುತ್ತಿದೆ. ಮಹಿಳೆಯರು ಹೆಚ್ಚಾಇ ವಿರೋಧ ವ್ಯಕ್ತಪಡಿಸುತ್ತಿದ್ದಾರೆ . ಈ ವೇಳೆ ಕೇಶವ್ ಪ್ರಸಾದ್ ಮೌರ್ಯ ಮಹಿಳೆಯರಿಗೆ ಮೌನವಾಗಿರುವಂತೆ ಬೆರಳು ಬಾಯಿಗಿಡಿದು ಸನ್ನೆ ಮಾಡಿ ಕೇಳುತ್ತಿದ್ದಾರೆ. ಆದರೂ ಕೂಡ ಜನರು ಅವರ ವಿರುದ್ಧ ಘೋಷಣೆ ಕೂಗಿ ಸ್ಥಳದಿಂದ ವಾಪಸ್ ಕಳುಹಿಸಿದ್ದಾರೆ.

ಇದನ್ನೂ ಓದಿ: ‘ನಮ್ಮ ಮೈತ್ರಿಕೂಟ ಅಧಿಕಾರಕ್ಕೆ ಬಂದರೆ 2 ಸಿಎಂ, 3 ಡಿಸಿಎಂ’: ಅಸಾದುದ್ದೀನ್ ಓವೈಸಿ

ಸ್ಥಳೀಯ ಸುದ್ದಿ ಮಾಧ್ಯಮಗಳ ವರದಿಗಳ ಪ್ರಕಾರ, ಕೇಶವ್ ಪ್ರಸಾದ್ ಮೌರ್ಯ ಸಿರಥು ಕ್ಷೇತ್ರದಿಂದ ಅಭ್ಯರ್ಥಿಯಾಗಿ ಘೋಷಿಸಲ್ಪಟ್ಟ ನಂತರ ಮೊದಲ ಬಾರಿಗೆ ತಮ್ಮ ಕ್ಷೇತ್ರಕ್ಕೆ ಭೇಟಿ ನೀಡಿದ್ದರು. ಸಿರಥು ವಿಧಾನಸಭಾ ಕ್ಷೇತ್ರದ ಗುಲಾಮಿಪುರ ಗ್ರಾಮದಲ್ಲಿ ಮಹಿಳೆಯರಿಂದ ಪ್ರತಿಭಟನೆ ಎದುರಿಸಿದ್ದಾರೆ. ಸಿರಥುವಿನಲ್ಲಿ ಜಿಲ್ಲಾ ಪಂಚಾಯತ್ ಸದಸ್ಯೆಯ ಪತಿ, ಕೇಶವ್ ಪ್ರಸಾದ್ ಮೌರ್ಯ ಅವರ ಆಪ್ತ ರಾಜೀವ್ ಮೌರ್ಯ ನಾಪತ್ತೆಯಾಗಿದ್ದು, ಈ ವಿಚಾರದಲ್ಲಿ ಪೊಲೀಸರ ನಿರ್ಲಕ್ಷ್ಯದಿಂದ ಮಹಿಳೆಯರು ಕೋಪಗೊಂಡಿದ್ದಾರೆ ಎನ್ನಲಾಗಿದೆ.

ರಾಜೀವ್ ಮೌರ್ಯ ಕಳೆದ ವಾರದಿಂದ ನಾಪತ್ತೆಯಾಗಿದ್ದಾರೆ. ರಾಜೀವ್ ಪತ್ತೆಗೆ ವಿಶೇಷ ತಂಡವನ್ನು ರಚಿಸುವಂತೆ ಉಪಮುಖ್ಯಮಂತ್ರಿ ಪೊಲೀಸರಿಗೆ ಸೂಚನೆ ನೀಡಿದ್ದಾರೆ.

ಪ್ರತಿಭಟನೆಯು “ಕೇಶವ್ ಪ್ರಸಾದ್ ಮೌರ್ಯ ಮತ್ತು ಉತ್ತರ ಪ್ರದೇಶ ಸರ್ಕಾರದ ಕೆಲಸದ ಬಗ್ಗೆ ಜನರ ಅಸಮಾಧಾನದ ಅಭಿವ್ಯಕ್ತಿ” ಎಂದು ಪ್ರತಿಪಕ್ಷಗಳು ಹೇಳಿದ್ದು, ಸಮಾಜವಾದಿ ಪಕ್ಷ ಮತ್ತು ಕಾಂಗ್ರೆಸ್ ನಾಯಕರು ವಿಡಿಯೋ ಶೇರ್‌ ಮಾಡಿದ್ದಾರೆ. ಬಿಜೆಪಿ ಇದನ್ನು ಪ್ರತಿಪಕ್ಷಗಳ ಪ್ರಚಾರ ಎಂದು ಕರೆದಿದೆ.


ಇದನ್ನೂ ಓದಿ: ಉತ್ತರ ಪ್ರದೇಶ ಚುನಾವಣೆ: ಬಿಜೆಪಿ ಶಾಸಕರನ್ನು ಬೆನ್ನಟ್ಟಿ ಸ್ವಕ್ಷೇತ್ರದಿಂದ ಓಡಿಸಿದ ಜನತೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...