Homeಮುಖಪುಟಉತ್ತರ ಪ್ರದೇಶ: 17 ವರ್ಷದ ಬಾಲಕನ ಮೇಲೆ ಪೊಲೀಸ್ ದೌರ್ಜನ್ಯ ಆರೋಪ, ಬಾಲಕ ಸಾವು

ಉತ್ತರ ಪ್ರದೇಶ: 17 ವರ್ಷದ ಬಾಲಕನ ಮೇಲೆ ಪೊಲೀಸ್ ದೌರ್ಜನ್ಯ ಆರೋಪ, ಬಾಲಕ ಸಾವು

- Advertisement -
- Advertisement -

ಉತ್ತರ ಪ್ರದೇಶದ ಲಖಿಂಪುರ್‌ ಖೇರಿಯಲ್ಲಿ ಮೊಬೈಲ್ ಕಳ್ಳತನದ ಶಂಕೆಯಲ್ಲಿ 17 ವರ್ಷದ ಬಾಲಕನನ್ನು ಆತನ ಚಿಕ್ಕಪ್ಪ ಮತ್ತು ಮೂವರು ಪೊಲೀಸರು ಪೊಲೀಸ್ ಚೌಕಿಯೊಳಗೆ ನಿರ್ದಯವಾಗಿ ಥಳಿಸಿದ್ದು, ಹಲ್ಲೆಗೊಳಗಾದ ನಾಲ್ಕು ದಿನಗಳ ನಂತರ ಬಾಲಕ ಆಸ್ಪತ್ರೆಯಲ್ಲಿ ಸಾವನ್ನಪ್ಪಿದ್ದಾರೆ.

ಪೊಲೀಸರು ಹಲ್ಲೆಯಲ್ಲಿ ನೇರವಾಗಿ ಭಾಗಿಯಾಗಿದ್ದಾರೆ ಎಂದು ಬಾಲಕನ ಕುಟುಂಬ ಆರೋಪಿಸಿದೆ. ಸದ್ಯ ಪೊಲೀಸ್ ಚೌಕಿಯ ಉಸ್ತುವಾರಿ  ಸೇರಿದಂತೆ ಮೂವರು ಪೊಲೀಸರನ್ನು ಅಮಾನತುಗೊಳಿಸಲಾಗಿದೆ. ಒಬ್ಬರು ಸಬ್ ಇನ್ಸ್‌ಪೆಕ್ಟರ್ ಮತ್ತು ಇಬ್ಬರು ಕಾನ್‌ಸ್ಟೆಬಲ್‌ಗಳು ಅಮಾನತಾಗಿದ್ದಾರೆ.

ಲಖಿಂಪುರ್‌ ಖೇರಿ ಎಸ್‌ಎಸ್‌ಪಿ ಸಂಜೀವ್ ಸುಮನ್, “ನಾವು ಪೊಲೀಸರ ವಿರುದ್ಧ ನೀಡಲಾಗಿರುವ ದೂರಿನ ಬಗ್ಗೆ ತನಿಖೆ ನಡೆಸುತ್ತಿದ್ದೇವೆ. ತಪ್ಪಿತಸ್ಥರೆಂದು ಕಂಡುಬಂದರೆ ಯಾರನ್ನೂ ಬಿಡುವುದಿಲ್ಲ” ಎಂದು ಹೇಳಿದ್ದಾರೆ.

ಇದನ್ನೂ ಓದಿ: ರೈಲಿನಲ್ಲಿ ಪ್ರಯಾಣಿಕನನ್ನು ಥಳಿಸಿದ ಪೊಲೀಸ್‌!

ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿರುವ ವಿಡಿಯೋದಲ್ಲಿ ಬಾಲಕನ ಕುಟುಂಬದವರು ಹಿರಿಯ ಪೊಲೀಸರಿಗೆ ಮೃತನ ದೇಹದ ಮೇಲಿನ ಬಾಹ್ಯ ಗಾಯಗಳನ್ನು ತೋರಿಸಿದ್ದಾರೆ.

ಇತ್ತ, ಕುಟುಂಬ ಸದಸ್ಯರ ಸಮ್ಮುಖದಲ್ಲಿ ಬಾಲಕನ ವಿಚಾರಣೆ ನಡೆಯಿತು. ನಂತರ ಆತನನ್ನು ಬಿಡಲಾಯಿತು. ಬಾಲಕನ ಕುಟುಂಬವು ಮೊದಲು ಹಲ್ಲೆಗೆ ಆತನ ಚಿಕ್ಕಪ್ಪನನ್ನು ದೂಷಿಸಿದೆ. ಆದರೆ ನಂತರ ತಮ್ಮ ಹೇಳಿಕೆಯನ್ನು ಬದಲಾಯಿಸಿದೆ ಎಂದು ಲಖಿಂಪುರ್‌ ಪೊಲೀಸ್ ಮುಖ್ಯಸ್ಥರು ಹೇಳಿದ್ದಾರೆ.

‘‘ಈ ತಿಂಗಳ 17ರಂದು ಬಾಲಕನ ಚಿಕ್ಕಪ್ಪ ಬಾಲಕನ ಮೇಲೆ ಫೋನ್ ಕದ್ದಿದ್ದಾನೆ ಎಂದು ಆರೋಪಿಸಿದ್ದರು. ದೂರಿನ ಮೇರೆಗೆ 19 ರಂದು ಎರಡೂ ಕಡೆಯಿಂದ ಬಾಲಕನ ಕುಟುಂಬದವರು ಹಾಗೂ ಗ್ರಾಮದ ಮುಖಂಡರನ್ನು ಠಾಣೆಗೆ ಕರೆಸಿ ವಿಚಾರಣೆ ನಡೆಸಲಾಯಿತು. ನಂತರ ಅವರು ರಾಜಿ ಮಾಡಿಕೊಂಡರು. ಬಳಿಕ ಪೊಲೀಸ್ ಠಾಣೆಯಿಂದ ಮಧ್ಯಾಹ್ನ 3 ಗಂಟೆಯ ಸುಮಾರಿಗೆ ಹಿಂತಿರುಗಿದರು. ಜನವರಿ 23 ರ ಬೆಳಗ್ಗೆ ಹುಡುಗನ ತಾಯಿ 5 ರಿಂದ 6 ಜನರೊಂದಿಗೆ ಪೊಲೀಸ್ ಠಾಣೆಗೆ ಬಂದು, ಜ.20 ರಂದು ರಾತ್ರಿ ಬಾಲಕನ ಚಿಕ್ಕಪ್ಪ ಮತ್ತು ಇತರ ಕೆಲವರು ಆತನನನ್ನು ಥಳಿಸಿದ್ದಾರೆ ಎಂದು ಹೇಳಿದ್ದರು. ಅದೇ ರಾತ್ರಿ ಬಾಲಕ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಫಲಕಾರಿಯಾಗದೆ ಇಂದು ಬೆಳಗ್ಗೆ ಮೃತಪಟ್ಟಿದ್ದಾರೆ. ಪೊಲೀಸರು ಥಳಿಸಿ ಸಾವನ್ನಪ್ಪಿದ್ದಾರೆ ಎಂದು ಸಂಬಂಧಿಕರು ಆರೋಪಿಸಿದ್ದಾರೆ. ಈ ಆರೋಪದ ಬಗ್ಗೆ ತನಿಖೆ ನಡೆಸುತ್ತೇವೆ. ಪೊಲೀಸರೇ ಹೊಣೆಗಾರರಾಗಿದ್ದರೆ ಕ್ರಮ ಎದುರಿಸಬೇಕಾಗುತ್ತದೆ” ಎಂದು ಪೊಲೀಸ್ ಮುಖ್ಯಸ್ಥ ಸಂಜೀವ್ ಸುಮನ್ ಹೇಳಿದ್ದಾರೆ.

“ಬಾಲಕನ ಕುಟುಂಬವು ಎರಡು ದೂರುಗಳನ್ನು ದಾಖಲಿಸಿದೆ. ಆತನ ಚಿಕ್ಕಪ್ಪ ರಾಮ್ ಬಹದ್ದೂರ್ ಮತ್ತು ನೆರೆಹೊರೆಯವರಾದ ರಾಜವೀರ್ ಸಿಂಗ್ ವಿರುದ್ಧ ಐಪಿಸಿಯ ಸೆಕ್ಷನ್ 304 ಅಡಿಯಲ್ಲಿ ಎಫ್ಐಆರ್ ದಾಖಲಿಸಿದ್ದೇವೆ. ಎರಡನೇ ದೂರು ಸಬ್ ಇನ್ಸ್‌ಪೆಕ್ಟರ್‌ ಮತ್ತು ಇಬ್ಬರು ಕಾನ್‌ಸ್ಟೆಬಲ್‌ಗಳ ವಿರುದ್ಧವಾಗಿದೆ. ನಾವು ಪ್ರಕರಣವನ್ನು ವಿವರವಾಗಿ ತನಿಖೆ ಮಾಡುತ್ತಿದ್ದೇವೆ ಮತ್ತು ಅದರಂತೆ ಸಂಬಂಧಪಟ್ಟ ಪೊಲೀಸರ ವಿರುದ್ಧ ಕ್ರಮ ಕೈಗೊಳ್ಳುತ್ತೇವೆ” ಎಂದಿದ್ದಾರೆ.

ಮಾಧ್ಯಮದವರೊಂದಿಗೆ ಮಾತನಾಡಿರುವ ಬಾಲಕನ ಅಕ್ಕ “ಪೊಲೀಸರು ನನ್ನ ತಮ್ಮನನ್ನು ವಿಚಾರಣೆ ನಡೆಸುವಾಗ ನನ್ನ ತಾಯಿಯನ್ನು ವಾಪಸ್ ಕಳುಹಿಸಿದ್ದರು. ಬಳಿಕ ಆತನನ್ನು ಬೆಲ್ಟ್‌ಗಳಿಂದ ನಿರ್ದಯವಾಗಿ ಥಳಿಸಿದ್ದಾರೆ. ಕೆಲವು ಗಂಟೆಗಳ ನಂತರ, ನನ್ನ ಸಹೋದರನನ್ನು ಕರೆದೊಯ್ಯಲು ನಮಗೆ ಕರೆ ಬಂದಿತು. ಆದರೆ ನನ್ನ ಪೋಷಕರು ಅಲ್ಲಿಗೆ ತಲುಪಿದಾಗ, ಪೊಲೀಸರು ಮತ್ತು ನನ್ನ ಚಿಕ್ಕಪ್ಪ ತೀವ್ರವಾಗಿ ಥಳಿಸಿದ್ದಾರೆ ಎಂದು ನನ್ನ ತಮ್ಮ ತಿಳಿಸಿದ್ದಾನೆ. ಆತನನ್ನು ಮನೆಗ ಎಕರೆತಂದಿದ್ದೇವು ಆದರೆ, ಅವನ ಸ್ಥಿತಿ ತೀರಾ ಹದಗೆಟ್ಟಾಗ ಪಾಲಿಯಾ ಪಟ್ಟಣದ ಆಸ್ಪತ್ರೆಗೆ ದಾಖಲಿಸಲಾಯಿತು. ಚಿಕಿತ್ಸೆ ವೇಳೆ ಮೃತಪಟ್ಟಿದ್ದಾರೆ” ಎಂದು ತಿಳಿಸಿದ್ದಾರೆ.


ಇದನ್ನೂ ಓದಿ: ಆಂಧ್ರ ಪ್ರದೇಶ: ಠಾಣೆಯಲ್ಲಿ ದಲಿತ ಮಹಿಳೆಯನ್ನು ತೀವ್ರವಾಗಿ ಥಳಿಸಿದ ಪೊಲೀಸರು-ಆರೋಪ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮಗಳ ವಿಚ್ಛೇದನ: ಸಿಹಿ ಹಂಚಿ, ಮೆರವಣಿಗೆಯಲ್ಲಿ ಆಕೆಯನ್ನು ಮನೆಗೆ ಕರೆತಂದ ನೀವೃತ್ತ ನ್ಯಾಯಾದೀಶ ಮತ್ತು ಕುಟುಂಬ

ಮೀರತ್: ಕೌಟುಂಬಿಕ ನ್ಯಾಯಾಲಯದಲ್ಲಿ ಮಗಳ ವಿಚ್ಛೇದನ ಅಂತಿಮವಾದ ನಂತರ ಆಕೆಯನ್ನು ಡೋಲು, ನೃತ್ಯಗಳ ಮೆರವಣಿಗೆಯಲ್ಲಿ ಸಂಭ್ರಮದಿಂದ ತಂದೆ ಮನೆಗೆ ಕರೆತಂದ ಘಟನೆ ಮೀರನ್ ನಲ್ಲಿ ನಡೆದಿದೆ.  ಪೋಷಕರ ಬೆಂಬಲದ ಅಪರೂಪದ ಮತ್ತು ಹೃದಯಸ್ಪರ್ಶಿ ಪ್ರದರ್ಶನದಲ್ಲಿ,...

“ನೀನು ನಿಜವಾಗಿಯೂ ಅಂಬೇಡ್ಕರ್ ಮಗಳಾ ಎಂದು ತಿಳಿಯಲು ನಾವು ನಿನ್ನ ಡಿಎನ್‌ಎ ಟೆಸ್ಟ್ ಮಾಡುತ್ತೇವೆ” ದೆಹಲಿ ಸಭೆಯಲ್ಲಿ ದಲಿತ ಟ್ರಾನ್ಸ್ ಹೋರಾಟಗಾರ್ತಿ ಗ್ರೇಸ್ ಬಾನುಗೆ ಜಾತಿ ನಿಂದನೆ ಆರೋಪ

ಕೇಂದ್ರ ಸರ್ಕಾರದ ವಿವಾದಾತ್ಮಕ ಟ್ರಾನ್ಸ್‌ಜೆಂಡರ್ ವ್ಯಕ್ತಿಗಳ (ಹಕ್ಕುಗಳ ರಕ್ಷಣೆ) ತಿದ್ದುಪಡಿ ಕಾಯ್ದೆ, 2026ರ ವಿರುದ್ಧ ಕಳೆದ ಕೆಲ ವಾರಗಳಿಂದ ಇಡೀ ಟ್ರಾನ್ಸ್‌ಜೆಂಡರ್ ಮತ್ತು ಪ್ರಗತಿಪರ ಸಮುದಾಯ ಪ್ರತಿಭಟನೆ ನಡೆಸುತ್ತಿದೆ. ಈ ನಡುವೆ ಶುಕ್ರವಾರ...

‘ಮೋದಿ ಕ್ರಿಶ್ಚಿಯನ್ ಸಂಸ್ಥೆಗಳಲ್ಲಿ ಭಯ ಹುಟ್ಟಿಸಲು ಪ್ರಯತ್ನಿಸುತ್ತಿದ್ದಾರೆ’: ಎಫ್‌ಸಿಆರ್‌ಎ ತಿದ್ದುಪಡಿ ಕುರಿತು ಮಲ್ಲಿಕಾರ್ಜುನ ಖರ್ಗೆ

ಇಡುಕ್ಕಿ (ಕೇರಳ): ಸಾರ್ವಜನಿಕ ಮತ್ತು ಸಾಮಾಜಿಕ ಕಲ್ಯಾಣ ಕ್ಷೇತ್ರದಲ್ಲಿ ಕೆಲಸ ಮಾಡುವ ಕ್ರಿಶ್ಚಿಯನ್ ಸಂಸ್ಥೆಗಳು, ಎನ್‌ಜಿಒಗಳು ಮತ್ತು ನಾಗರಿಕ ಸಮಾಜದ ಮೇಲೆ ದಾಳಿ ಮಾಡಲು ಪ್ರಧಾನಿ ನರೇಂದ್ರ ಮೋದಿ ಎಫ್‌ಸಿಆರ್‌ಎ (ವಿದೇಶಿ ದೇಣಿಗೆ...

ವೈದ್ಯಕೀಯ, ತಾಂತ್ರಿಕ ಶಿಕ್ಷಣದಲ್ಲಿ ಎಸ್‌ಸಿ/ಎಸ್‌ಟಿ ಮೀಸಲಾತಿ ಹೆಚ್ಚಿಸಿದ ಒಡಿಶಾ ಸರ್ಕಾರ, ಒಬಿಸಿ ವಿದ್ಯಾರ್ಥಿಗಳಿಗೆ ಹೊಸ ಕೋಟಾ

ಮಹತ್ವದ ನಿರ್ಧಾರ ಕೈಗೊಂಡಿರುವ ಒಡಿಶಾ ಸರ್ಕಾರ, ವೈದ್ಯಕೀಯ, ಇಂಜಿನಿಯರಿಂಗ್ ಮತ್ತು ಇತರ ತಾಂತ್ರಿಕ ಹಾಗೂ ವೃತ್ತಿಪರ ಶಿಕ್ಷಣ ಕೋರ್ಸ್‌ಗಳಲ್ಲಿ ಪರಿಶಿಷ್ಟ ಪಂಗಡ (ಎಸ್‌ಟಿ), ಪರಿಶಿಷ್ಟ ಜಾತಿ (ಎಸ್‌ಸಿ) ಅಭ್ಯರ್ಥಿಗಳಿಗೆ ಮೀಸಲಾತಿಯನ್ನು ಗಣನೀಯವಾಗಿ ಹೆಚ್ಚಿಸಿದೆ....

ಶಾಲಾ ವಾರ್ಷಿಕೋತ್ಸವದಲ್ಲಿ ಲವಲವಿಕೆಯಿಂದ ಭಾಗವಹಿಸಿದ್ದ 6 ಮಕ್ಕಳು, ತಡರಾತ್ರಿ ಹೊತ್ತಿಗೆ ಶವವಾದರು : ಮಹಾರಾಷ್ಟ್ರದಲ್ಲೊಂದು ಹೃದಯ ವಿದ್ರಾವಕ ಘಟನೆ

ಶಾಲಾ ವಾರ್ಷಿಕೋತ್ಸವದಲ್ಲಿ ಬಹಳ ಉತ್ಸಾಹದಿಂದ ಭಾಗವಹಿಸಿದ್ದ ಆರು ಮಂದಿ ಮಕ್ಕಳು, ತಡ ರಾತ್ರಿ ಹೊತ್ತಿಗೆ ಶವವಾದ ಹೃದಯ ವಿದ್ರಾವಕ ಘಟನೆಯೊಂದು ಮಹಾರಾಷ್ಟ್ರದ ದಿಂಡೋರಿಯಲ್ಲಿ ಶುಕ್ರವಾರ (ಏ.3) ನಡೆದಿದೆ. ನಾಸಿಕ್‌ ನಗರದಿಂದ 20 ಕಿಲೋ...

ಕೇರಳ: ಕೊಲ್ಲಂನಲ್ಲಿ ಟಿವಿ ಚಾನೆಲ್ ಕಚೇರಿ ಮೇಲೆ ಸ್ಫೋಟಕ ವಸ್ತು ಎಸೆತ

ಕೊಲ್ಲಂ: ಇಲ್ಲಿನ ಟಿವಿ ಚಾನೆಲ್ ಒಂದರ ಕಚೇರಿಯ ಮೇಲೆ ಭಾನುವಾರ ಬೆಳಿಗ್ಗೆ ಸ್ಫೋಟಕ ವಸ್ತು ಎಸೆಯಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಪೊಲೀಸರ ಪ್ರಕಾರ, ಆ ಪ್ರದೇಶ ಮತ್ತು ಚಾನೆಲ್ ಕಚೇರಿಯ ಸಿಸಿಟಿವಿ ದೃಶ್ಯಗಳಲ್ಲಿ ಇಬ್ಬರು...

ಹತ್ಯೆಯಾದ ಇರಾನ್ ಕಮಾಂಡರ್ ಖಾಸಿಮ್ ಸುಲೈಮಾನಿ ಅವರ ಸೊಸೆ, ಮೊಮ್ಮಗಳನ್ನು ಬಂಧಿಸಿದ ಅಮೆರಿಕ

ನವದೆಹಲಿ: ಅಮೆರಿಕದ ವಿದೇಶಾಂಗ ಕಾರ್ಯದರ್ಶಿ ಮಾರ್ಕೊ ರೂಬಿಯೊ ಶುಕ್ರವಾರ ತಮ್ಮ ಶಾಶ್ವತ ನಿವಾಸಿ ಸ್ಥಾನಮಾನವನ್ನು ರದ್ದುಗೊಳಿಸಿದ ನಂತರ ಇಸ್ಲಾಮಿಕ್ ರೆವಲ್ಯೂಷನರಿ ಗಾರ್ಡ್ ಕಾರ್ಪ್ಸ್ (ಐಆರ್‌ಜಿಸಿ) ನ ದಿವಂಗತ ನಾಯಕ ಖಾಸಿಮ್ ಸೊಲೈಮಾನಿ ಅವರ...

ಇರಾನ್ ಮೇಲೆ ಬೃಹತ್ ದಾಳಿ: ಹಲವು ಉನ್ನತ ನಾಯಕರನ್ನು ಕೊಲ್ಲಲಾಗಿದೆ ಎಂದು ವಿಡಿಯೋ ಹಂಚಿಕೊಂಡ ಟ್ರಂಪ್

ಟೆಹ್ರಾನ್ ಮೇಲೆ ನಡೆದ ದಾಳಿಯ ವೀಡಿಯೊವನ್ನು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹಂಚಿಕೊಂಡಿದ್ದು, ಹಲವಾರು ಇರಾನ್ ಮಿಲಿಟರಿ ನಾಯಕರ ಸಾವಿಗೆ ಅದು ಕಾರಣ ಎಂದು ಹೇಳಿಕೊಂಡಿದ್ದಾರೆ. "ಟೆಹ್ರಾನ್‌ನಲ್ಲಿ ನಡೆದ ಈ ಬೃಹತ್ ದಾಳಿಯೊಂದಿಗೆ, ಇರಾನ್‌ನ...

ಅಸ್ಸಾಂ ಚುನಾವಣೆ : ನುಸುಳುಕೋರರಿಂದ ಯುವ ಕಲ್ಯಾಣಕ್ಕೆ ವರಸೆ ಬದಲಿಸಿದ ಬಿಜೆಪಿ

ಅಸ್ಸಾಂ ವಿಧಾನಸಭಾ ಚುನಾವಣೆಗೆ ನಾಲ್ಕು ದಿನಗಳು ಬಾಕಿ ಇರುವಾಗ ಬಿಜೆಪಿ ತನ್ನ ಪ್ರಚಾರದ ವರಸೆಯನ್ನು ಬದಲಿಸಿಕೊಂಡಿದೆ. ನುಸುಳುಕೋರರನ್ನು ಹೊರಹಾಕುತ್ತೇವೆ, ಅಕ್ರಮ ವಲಸೆಗೆ ಕಡಿವಾಣ ಹಾಕುತ್ತೇವೆಂದು ಅಬ್ಬರಿಸುತ್ತಿದ್ದ ಬಿಜೆಪಿಗರು, ಈಗ ನುಸುಳಕೋರರ ವಿಷಯವನ್ನು ಬದಿಗೊತ್ತಿದ್ದಾರೆ....

ಕುಡಿದ ಮತ್ತಿನಲ್ಲಿ ಕಾರು ಚಾಲನೆ: ಬೈಕ್ ಗೆ ಡಿಕ್ಕಿ ಹೊಡೆದ ಪರಿಣಾಮ 19ವರ್ಷದ ಯುವಕ ಸಾವು 

ಬೆಂಗಳೂರು: ಕುಡಿದ ಮತ್ತಿನಲ್ಲಿ ಹದಿಹರೆಯದ ಯುವಕನೊಬ್ಬ ಚಲಾಯಿಸುತ್ತಿದ್ದ ಕಾರು, 19 ವರ್ಷದ ಯುವಕನ ಮೋಟಾರ್ ಸೈಕಲ್‌ಗೆ ಡಿಕ್ಕಿ ಹೊಡೆದ ಪರಿಣಾಮ ಆತ ಸಾವನ್ನಪ್ಪಿದ್ದಾನೆ. ಮಲ್ಲೇಶಪಾಳ್ಯದ ಮಾರುತಿನಗರದ 10 ನೇ ಮುಖ್ಯ ರಸ್ತೆಯಲ್ಲಿ ಶುಕ್ರವಾರ ತಡರಾತ್ರಿ...