ಹಣ ಕಳ್ಳತನ ಮಾಡಿದ್ದಾರೆ ಎನ್ನುವ ಶಂಕೆಯ ಮೇಲೆ ಇಬ್ಬರು ಅಪ್ರಾಪ್ತ ಬಾಲಕರಿಗೆ ಬಲವಂತವಾಗಿ ಮೂತ್ರ ಕುಡಿಸಿ, ಅವರ ಗುದದ್ವಾರಕ್ಕೆ ಹಸಿರು ಮೆಣಸಿನಕಾಯಿಯನ್ನು ತುರುಕಿ ಚಿತ್ರಹಿಂಸೆ ನೀಡಿರುವ ಘಟನೆ ಉತ್ತರ ಪ್ರದೇಶದ ಸಿದ್ಧಾರ್ಥನಗರ ಜಿಲ್ಲೆಯಲ್ಲಿ ಶುಕ್ರವಾರ ನಡೆದಿದೆ ಎಂದು ಎನ್ಡಿಟಿವಿ ವರದಿ ಮಾಡಿದೆ.
10 ಮತ್ತು 15 ವರ್ಷ ವಯಸ್ಸಿನ ಸಂತ್ರಸ್ತರ ಮೇಲೆ ಪತ್ರಾ ಬಜಾರ್ ಪೊಲೀಸ್ ಠಾಣಾ ವ್ಯಾಪ್ತಿಯ ಕೊಂಕಟಿ ಚೌರಾಹಾ ಬಳಿಯ ಕೋಳಿ ಅಂಗಡಿಯಲ್ಲಿ ಪುರುಷರ ಗುಂಪೊಂದು ಹಲ್ಲೆ ನಡೆಸಿದೆ. ಬಾಲಕರಿಗೆ ಕೆಲವು ಚುಚ್ಚುಮದ್ದುಗಳನ್ನು ಸಹ ನೀಡಲಾಗಿದೆ ಎಂದು ವರದಿಯಾಗಿದೆ.
ಘಟನೆಯ ವೀಡಿಯೊದಲ್ಲಿ ಕೆಲವು ಪುರುಷರು ಅಪ್ರಾಪ್ತರನ್ನು ನಿಂದಿಸುವುದು ಮತ್ತು ತಮ್ಮ ಆದೇಶ ಪಾಲಿಸುವಂತೆ ಬೆದರಿಕೆ ಹಾಕುವುದನ್ನು ನೋಡಬಹುದು.
ಸಧ್ಯ ಈ ಘಟನೆಯ ವೀಡಿಯೊಗಳನ್ನು ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿದ್ದು, ವೈರಲ್ ಆದ ಬೆನ್ನಲ್ಲೇ ಆರು ಜನರನ್ನು ಬಂಧಿಸಲಾಗಿದೆ ಎಂದು ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಸಿದ್ಧಾರ್ಥ ಎಎನ್ಐಗೆ ತಿಳಿಸಿದ್ದಾರೆ.
ಹಿಮಾಚಲ ಪ್ರದೇಶ: ಚಿಪ್ಸ್ ಪ್ಯಾಕೆಟ್ ಕಳ್ಳತನ ಶಂಕೆ; ಅಪ್ರಾಪ್ತ ಬಾಲಕನನ್ನು ಥಳಿಸಿ ಬೆತ್ತಲೆ ಮೆರವಣಿಗೆ
ಮತ್ತೊಂದು ಘಟನೆ: ಹಿಮಾಚಲ ಪ್ರದೇಶದ ಶಿಮ್ಲಾದಲ್ಲಿ ಅಂಗಡಿಯೊಂದರಿಂದ ಚಿಪ್ಸ್ ಪ್ಯಾಕೆಟ್ ಅನ್ನು ಕದ್ದ ಶಂಕೆಯ ಮೇಲೆ 15 ವರ್ಷದ ಬಾಲಕನನ್ನು ಥಳಿಸಿ ಬೆತ್ತಲೆಯಾಗಿ ಮೆರವಣಿಗೆ ಮಾಡಲಾಗಿದೆ ಎಂದು ಪಿಟಿಐ ವರದಿ ಮಾಡಿದೆ.
ಜುಲೈ 31ರಂದು ನಡೆದ ಘಟನೆಗೆ ಸಂಬಂಧಿಸಿದಂತೆ ಏಳು ಜನರನ್ನು ಬಂಧಿಸಲಾಗಿದೆ ಎಂದು ಪೊಲೀಸರು ಭಾನುವಾರ ತಿಳಿಸಿದ್ದಾರೆ.
10 ರೂಪಾಯಿ ಬೆಲೆಯ ಚಿಪ್ಸ್ ಪ್ಯಾಕೆಟ್ ಕಂದಿದ್ದಾನೆ ಎಂದು ಶಂಕಿಸಿ ಅಂಗಡಿಯ ಮಾಲೀಕರು ತಮ್ಮ ಮಗನ ಕಣ್ಣಿಗೆ ಮೆಣಸಿನ ಪುಡಿ ಹಚ್ಚಿದ್ದಾರೆ ಎಂದು ಬಾಲಕನ ತಂದೆ ಹೇಳಿಕೊಂಡಿದ್ದಾರೆ ಎಂದು ಎಎನ್ಐ ವರದಿ ಮಾಡಿದೆ.
ತಂದೆಯ ದೂರಿನ ಮೇರೆಗೆ. ಆರೋಪಿಗಳ ವಿರುದ್ಧ ಐಪಿಸಿ ಸೆಕ್ಷನ್ 341 (ತಪ್ಪು ಶಿಕ್ಷೆಗೆ ಶಿಕ್ಷೆ), 342 ಮತ್ತು 323 (ಸ್ವಯಂಪ್ರೇರಿತವಾಗಿ ನೋವುಂಟುಮಾಡುವುದು) ಮತ್ತು ಸೆಕ್ಷನ್ 14 ರ ಅಡಿಯಲ್ಲಿ ಮಕ್ಕಳ ಲೈಂಗಿಕ ಅಪರಾಧಗಳಿಂದ ರಕ್ಷಿಸುವ ಕಾಯಿದೆ ಹಾಗೂ ಬಾಲಾಪರಾಧಿ ಕಾಯಿದೆಯ ಸೆಕ್ಷನ್ 75 ರ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ.
ಇದನ್ನೂ ಓದಿ: ವೀರೇಂದ್ರ ಹೆಗಡೆ ಬೆಂಬಲಿಗರಿಂದ ಸೌಜನ್ಯ ತಾಯಿ ಮೇಲೆ ಹಲ್ಲೆಗೆ ಯತ್ನ: ದೂರು ದಾಖಲು