Homeಎಕಾನಮಿಬಡ ಕಾರ್ಮಿಕರ ಪಿಎಫ್‌ ಹಣವನ್ನು ದಾವೂದ್ ಇಬ್ರಾಹಿಂ ಸಹಚರ ಇಕ್ಬಾಲ್ ಮಿರ್ಚಿಗೆ ಕೊಟ್ಟ ಯೋಗಿ ಸರ್ಕಾರ...

ಬಡ ಕಾರ್ಮಿಕರ ಪಿಎಫ್‌ ಹಣವನ್ನು ದಾವೂದ್ ಇಬ್ರಾಹಿಂ ಸಹಚರ ಇಕ್ಬಾಲ್ ಮಿರ್ಚಿಗೆ ಕೊಟ್ಟ ಯೋಗಿ ಸರ್ಕಾರ…

ಉತ್ತರಪ್ರದೇಶದ ಯುಪಿಪಿಸಿಎಲ್ ಕಾರ್ಮಿಕರಿಗೆ ಸೇರಿದ ಒಟ್ಟು 2,600 ಕೋಟಿ ರೂ.ಗಳನ್ನು ದೇಶದ್ರೋಹಿ ದಾವೂದ್ ಇಬ್ರಾಹಿಂ ಅವರ ಸಹಚರ ಇಕ್ಬಾಲ್ ಮಿರ್ಚಿ ಒಡೆತನದ ಡಿಎಚ್‍ಎಫ್‍ಎಲ್‍ನಲ್ಲಿ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಹೂಡಿದ್ದಾರೆ.

- Advertisement -
- Advertisement -

ಕಳೆದ 70 ವರ್ಷದಿಂದ ಅಧಿಕಾರದಲ್ಲಿದ್ದ ಕಾಂಗ್ರೆಸ್ ಸರ್ಕಾರ ಜನಸಾಮಾನ್ಯರ ದುಡ್ಡಿನ ಮೇಲೆ ಮೋಜು-ಮಸ್ತಿ ನಡೆಸಿದೆ ಎಂದು ಆರೋಪಿಸುವ ಪ್ರಧಾನಿ ಮೋದಿ, ಇಲ್ಲಿಯ ಜನಸಾಮಾನ್ಯರು ಎದುರಿಸುತ್ತಿರುವ ದುಃಖ ದುಮ್ಮಾನಗಳ ನಿವಾರಣೆಗೆ ನಿಮ್ಮ ಯೋಜನೆಗಳೇನು ಎಂದು ಕೇಳುವವರಿಗೆ ದೇಶದ್ರೋಹದ ಪಟ್ಟ ಕಟ್ಟುವುದು ಬಹಿರಂಗವಾಗಿ ನಡೆದಿದೆ.

ಮತ್ತೊಂದೆಡೆ, ದೇಶದ್ರೋಹಿಗಳ ನಿಕಟ ಒಡನಾಡಿಯಾದ ವ್ಯಕ್ತಿ-ಸಂಸ್ಥೆಗಳ ವಹಿವಾಟು ಅಭಿವೃದ್ಧಿಗಾಗಿ ಕಾರ್ಮಿಕರ ಭವಿಷ್ಯನಿಧಿಯನ್ನೇ ಒತ್ತೆ ಇಟ್ಟು ದೇಶಾಭಿಮಾನ ಮೆರೆಯುತ್ತಿದೆ. ಭಾರತೀಯ ಸಂತ-ಸಂಸ್ಕೃತಿಯ ನೈಜ ವಾರಸುದಾರ ಎಂಬ ಖ್ಯಾತಿಯ ಯೋಗಿ ಆದಿತ್ಯನಾಥ್ ನೇತೃತ್ವದ ಉತ್ತರಪ್ರದೇಶ ಸರ್ಕಾರದಲ್ಲಿ ನಡೆದಿದೆ. ಕಾರ್ಮಿಕರ ಭವಿಷ್ಯನಿಧಿಯನ್ನು ದೇಶದ್ರೋಹಿ ಒಡನಾಡಿಯ ಅಭಿವೃದ್ಧಿಗೆ ಉದಾರವಾಗಿ ನೀಡಿ, ತಮ್ಮ ದೇಶಾಭಿಮಾನದ ನೈಜ ಸ್ವರೂಪ ತೋರಿದ್ದಾರೆ.

ಉತ್ತರಪ್ರದೇಶದ ವಿದ್ಯುತ್ ನಿಗಮ ನಿಯಮಿತದ (ಯುಪಿಪಿಸಿಎಲ್) ಕಾರ್ಮಿಕರಿಗೆ ಸೇರಿದ ಒಟ್ಟು 2,600 ಕೋಟಿ ರೂ.ಗಳನ್ನು ದೇಶದ್ರೋಹಿ ದಾವೂದ್ ಇಬ್ರಾಹಿಂ ಸಹಚರ ಇಕ್ಬಾಲ್ ಮಿರ್ಚಿ ಪಾಲುದಾರಿಕೆಯ ಡಿಎಚ್‍ಎಫ್‍ಎಲ್‍ನಲ್ಲಿ (ಮಾರ್ಚ್ -2017 ಹಾಗೂ ಡಿಸೆಂಬರ್-2018ರ ಅವಧಿ) ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಹೂಡಿದ್ದಾರೆ.

ಮುಂಬೈ ಮೂಲದ ಈ ವಿವಾದಿತ ಕಂಪನಿಯಲ್ಲಿ ಬಂಡವಾಳ ಹೂಡಲು ಕಾರ್ಮಿಕರ ಭವಿಷ್ಯ ನಿದಿಯೇ ಬೇಕಿತ್ತೆ? ಅದೂ, ದೇಶದ್ರೋಹಿ ದಾವೂದ್ ಇಬ್ರಾಹಿಂ ಸಹಚರನಾಗಿದ್ದ ಇಕ್ಬಾಲ್ ಮಿರ್ಚಿ ಒಡೆತನದ ಸಂಸ್ಥೆಗೆ ಎಂಬುದೀಗ ಚರ್ಚೆಯ ವಸ್ತುವಾಗುತ್ತಿದೆ.

ಆರ್ಥಿಕ ದುರುಪಯೋಗದ ಗಂಭೀರ ಪ್ರಕರಣವಲ್ಲವೆ?
ಉತ್ತರಪ್ರದೇಶ ವಿದ್ಯುತ್ ನಿಗಮ ನಿಯಮಿತದ ಕಾರ್ಮಿಕರ 2,600 ಕೋಟಿ ರೂ.ಗಳಷ್ಟು ಭವಿಷ್ಯ ನಿಧಿಯನ್ನು ಬೇರೆ ಉದ್ದೆಶಗಳಿಗಾಗಿ ಬಳಸುವುದು ಅಪರಾಧ. ಯೋಗಿ ಆದಿತ್ಯನಾಥ ಸರ್ಕಾರದ ಕಾರ್ಮಿಕರಿಗೆ ಸೇರಿದ ಹಾಗೂ ಪ್ರಧಾನಿ ಮೋದಿ ನೇತೃತ್ವದ ಕೇಂದ್ರ ಸರ್ಕಾರ ಸ್ವಾಮ್ಯದ ಭವಿಷ್ಯ ನಿದಿ-ಇಷ್ಟೊಂದು ಭಾರಿ ಮೊತ್ತದ ಹಣವನ್ನು ವಿವಾದಿತ ಕಂಪನಿಯೊಂದರಲ್ಲಿ ಹೂಡಿರುವುದು ಹತ್ತು ಹಲವು ಸಂಶಯಗಳಿಗೆ ಕಾರಣವಾಗುತ್ತಿದೆ.

ದೇಶಾಭಿಮಾನಿ ಮುಖ್ಯಮಂತ್ರಿ ಹಾಗೂ ದೇಶದ್ರೋಹಿಯ ಒಡನಾಡಿಯೊಬ್ಬರ ಒಡೆತನದ ಕಂಪನಿಯೊಂದಿಗಿರುವ ಸಂಬಂಧವೂ ಈಗ ಪ್ರಶ್ನಾರ್ಹವಾಗುತ್ತಿದೆ.

ತನಿಖೆ ಆರಂಭವೇ ಭ್ರಷ್ಟಾಚಾರಕ್ಕೆ ಸಾಕ್ಷಿ
ಓತಿಕಾಟಕ್ಕೆ ಬೇಲಿ ಸಾಕ್ಷಿ ಎಂಬಂತೆ, ಉತ್ತರಪ್ರದೇಶ ಸರಕಾರದ (ಇಂಧನ) ಪ್ರಧಾನ ಕಾರ್ಯದರ್ಶಿ ಅಲೋಕಕುಮಾರ್, ಪ್ರಕರಣದ ವಿರುದ್ಧ ತನಿಖೆಗೆ ಆದೇಶಿಸಿದ್ದಾರೆ. ಯೋಗಿ ಆದಿತ್ಯನಾಥ್ ಸರ್ಕಾರದಲ್ಲಿ ಭ್ರಷ್ಟಾಚಾರ ನಡೆದಿದೆ ಎಂಬುದಕ್ಕೆ ಸಾಕ್ಷಿ ನುಡಿಯುತ್ತಿದೆ.

ಈಗಾಗಲೇ, ವಿದ್ಯುತ್ ವಲಯ ಕಾರ್ಮಿಕರ ಟ್ರಸ್ಟ್ ಪ್ರಧಾನ ವ್ಯವಸ್ಥಾಪಕ ಪಿ.ಕೆ.ಗುಪ್ತಾ ಅವರನ್ನು ಅಮಾನತುಗೊಳಿಸಿದ್ದು, ಪ್ರಕರಣದ ವಿರುದ್ಧ ಕಾನೂನು ಕ್ರಮ ಜರುಗಿಸಲು ಇಂಧನ ವಿಭಾಗ ನಿರ್ದೇಶಕ ಸುಧೀರ್ ಆರ್ಯ ಅವರಿಗೆ ಸೂಚಿಸಿದ್ದಾರೆ.

ಹೂಡಿಕೆ ವಾಪಸಾತಿಗೆ ಹೆಚ್ಚಿದ ಒತ್ತಡ
ಮತ್ತೊಂದು ಕಂಪನಿಯ ನೆರಳಲ್ಲಿ ಬೆಳೆಯುವ ಕಂಪನಿಯೊಂದಕ್ಕೆ ಪೂರ್ವಾಪರ ತಿಳಿಯದೇ ಕಾರ್ಮಿಕರ ಸಾವಿರಾರು ಕೋಟಿ ರೂ.ಗಳ ಭವಿಷ್ಯ ನಿಧಿ ಹೂಡಿದ್ದನ್ನು ಪ್ರಶ್ನಿಸಿದ್ದು ಮಾತ್ರವಲ್ಲ; ಬಂಡವಾಳ ಹೂಡಿಕೆಯನ್ನು ವಾಪಸ್ ಪಡೆಯಲು ಉತ್ತರಪ್ರದೇಶ ರಾಜ್ಯ ವಿದ್ಯುತ್ ಮಂಡಳಿಯ ಎಂಜಿನಿಯರರ ಸಂಸ್ಥೆಯು (ಯುಪಿಎಸ್‍ಇಬಿಇಎ) ಮುಖ್ಯಮಂತ್ರಿ ಯೋಗಿ ಆದಿತ್ಯನಾಥ ಅವರಿಗೆ ಪತ್ರ ಬರೆದು ಆಗ್ರಹಿಸಿದೆ.

ಸುಮಾರು 2600 ಕೋಟಿ ರೂ.ಗಳಿಗೂ ಅಧಿಕ ಹಣ ಡಿ.ಎಚ್.ಎಫ್.ಎಲ್ ನಲ್ಲಿದೆ. ಅದನ್ನು ಮರಳಿ ಪಡೆಯಬೇಕು. ಮಾತ್ರವಲ್ಲ ಪ್ರಧಾನ ಪ್ರಾವಿಡೆಂಟ್ ಫಂಡ್ (ಜಿಪಿಎಫ್) ಹಾಗೂ ಕಾಂಟ್ರಿಬ್ಯೂಟರಿ ಪ್ರಾವಿಡೆಂಟ್ ಫಂಡ್ (ಸಿಪಿಎಫ್) ಟ್ರಸ್ಟ್ ನಿಂದ ಇನ್ನು ಮುಂದೆ ಇಂತಹ ಖಾಸಗಿ ಸಂಸ್ಥೆಗಳಿಗೆ ಹಣ ಹೂಡುವುದಿಲ್ಲ ಎಂಬ ಬಗ್ಗೆ ಭರವಸೆ ನೀಡುವಂತೆ ಯುಪಿಎಸ್‍ಇಬಿಇಎ ಪ್ರಧಾನ ಕಾರ್ಯದರ್ಶಿ ರಾಜೀವ್ ಕುಮಾರ್ ಮುಖ್ಯಮಂತ್ರಿ ಯೋಗಿ ಅವರನ್ನು ಇಕ್ಕಟ್ಟಿನಲ್ಲಿ ಸಿಲುಕಿಸಿದ್ದಾರೆ.

ಅಲ್ಲದೇ, 2017ರ ಮಾರ್ಚ್‍ನಿಂದ2018-ಡಿಸೆಂಬರ್ ವರೆಗೆ ಡಿ.ಎಚ್.ಎಫ್‍.ಎಲ್ ನಲ್ಲಿ ವಿದ್ಯುತ್ ಕಾರ್ಮಿಕರ ಭವಿಷ್ಯ ನಿಧಿಯನ್ನು ಠೇವಣಿಯಾಗಿ ಇರಿಸಲಾಗಿದೆ. ಡಿಎಚ್‍ಎಫ್‍ಎಲ್ ಕಂಪನಿಯು ಇತರೆ ಖಾಸಗಿ ವಿವಾದಿತ ಕಂಪನಿಗಳೊಂದಿಗೆ ನಡೆಸುವ ವ್ಯಾಪಾರ-ವಹಿವಾಟುಗಳ ಹಿನ್ನೆಲೆಯಲ್ಲಿ ಮುಂಬೈ ಹೈಕೋರ್ಟ್ ಸಹ ಪ್ರಕರಣವೊಂದರಲ್ಲಿ ತಡೆಯಾಜ್ಞೆ ನೀಡಿದೆ.

ಸುಮಾರು 2,600 ಕೋಟಿ ರೂ.ಗಳಿಗೂ ಅಧಿಕ ಹಣ ಡಿಎಚ್‍ಎಫ್‍ಎಲ್ ನಲ್ಲಿದೆ ಎಂದು ಟ್ರಸ್ಟ್ ಕಾರ್ಯದರ್ಶಿ ಹೇಳುತ್ತಾರೆ. ಕಾರ್ಮಿಕರಿಗೆ ಸೇರಿದ ಭವಿಷ್ಯನಿಧಿಯು ಖಾಸಗಿ ಕಂಪನಿಯ ವ್ಯವಹಾರಕ್ಕೆ ವರ್ಗಾಯಿಸುವುದು ಗಂಭೀರ ಅಪರಾಧ. ಕಾರ್ಮಿಕರ ಸೇವಾ ನಿವೃತ್ತಿಯ ನಂತರ ಈ ಭವಿಷ್ಯನಿಧಿ ಅವರನ್ನು ಕಾಪಾಡುತ್ತದೆ. ಇಂತಹ ಹಣವನ್ನು ಖಾಸಗಿ ಕಂಪನಿಗೆ ನೀಡುವುದು ಎಷ್ಟು ಸರಿ ಎಂದು ಸಂಸ್ಥೆಯ ಎಂಜಿನಿಯರರು ಪ್ರಶ್ನಿಸುತ್ತಿದ್ದಾರೆ.

ಇನ್ನು ಈ ಕುರಿತು ಕಾಂಗ್ರೆಸ್‌ ನಾಯಕಿ ಪ್ರಿಯಾಂಕ ಗಾಂಧಿ ಕೂಡ ಟ್ವೀಟ್‌ ಮಾಡಿ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಪಾರದರ್ಶಕ ಆಡಳಿತಕ್ಕೆ ಸವಾಲು
ತಮ್ಮ ಕಣ್ಣು ತಪ್ಪಿಸಿ ಪ್ರಕರಣ ನಡೆದಿದೆ ಎನ್ನುವುದಾದರೆ ತನಿಖೆ ತೀವ್ರಗೊಳಿಸಲಿ ಎಂದು ಅಖಿಲ ಭಾರತ ವಿದ್ಯುತ್ ಎಂಜಿನಿಯರರ ಒಕ್ಕೂಟದ ಅಧ್ಯಕ್ಷ ಶೈಲೇಂದ್ರ ದುಬೆ ಅವರು ಮುಖ್ಯಮಂತ್ರಿ ಯೋಗಿ ಆದಿತ್ಯನಾಥ ಅವರ ಪಾರದರ್ಶಕ ಆಡಳಿತಕ್ಕೆ ಸವಾಲು ಹಾಕಿದ್ದಾರೆ. ಖಾಸಗಿ ಕಂಪನಿಗೆ ಹೂಡಿದ ಹಣವನ್ನು ಶೀಘ್ರವೇ ವಾಪಸ್ ಪಡೆಯಬೇಕು. ಯಾರ ಆದೇಶದ ಮೇರೆಗೆ ಮಂಡಳಿಯು ಕಾರ್ಮಿಕರ ಭವಿಷ್ಯನಿಧಿಯನ್ನು ಖಾಸಗಿ ಕಂಪನಿಯಲ್ಲಿ ಹೂಡಲು ನಿರ್ಧರಿಸಿತು?. ಮಂಡಳಿಯು ಬಹುದೊಡ್ಡ ತಪ್ಪು ಮಾಡಿದೆ. ಬಹುಕೋಟಿ ರೂ.ಗಳ ಹಗರಣ ಇದಾಗಲಿದೆ. ತನಿಖೆಯ ಮೂಲಕವೇ ಬಯಲಿಗೆಳೆಯಬೇಕು ಎಂದು ಆಗ್ರಹಿಸಿದ್ದಾರೆ.

ದುಬೈಯ ವಿವಾದಿತ “ಮಿರ್ಚಿ’ ಸಂಪರ್ಕ
ಭೂ ಅಕ್ರಮಗಳಿಗೆ ಸಂಬಂಧಿಸಿದಂತೆ ದೇಶದ್ರೋಹಿ ಹಾಗೂ ಭೂಗತ ಪಾತಕಿ ದಾವೂದ್ ಇಬ್ರಾಹಿಂನ ವ್ಯವಹಾರಗಳು ಬಯಲಿಗೆ ಬರುತ್ತಿದ್ದಂತೆ, ಜಾರಿ ನಿರ್ದೇಶನಾಲಯವು ಡಿ.ಎಚ್.ಎಫ್.ಎಲ್ ಸನ್ ಬ್ಲಿಂಕ್ ರಿಯಲ್ ಎಸ್ಟೇಟ್ ಸಂಸ್ಥೆಗಳ ವಹಿವಾಟುಗಳನ್ನು ಪರಿಶೀಲಿಸಿ ತನಿಖೆಗೆ ಒಳಪಡಿಸಿತ್ತು. ಈ ವಹಿವಾಟುಗಳಿಂದ ದುಬೈಯಲ್ಲಿರುವ “ಮಿರ್ಚಿ’ ಸಂಸ್ಥೆಯ ಮೂಲಕವೇ ದಾವೂದ್ ಗುಂಪಿಗೆ ಹಣ ರವಾನೆಯಾಗುತ್ತಿತ್ತು.
ಡಿ.ಎಚ್.ಎಫ್.ಎಲ್ ಸಂಸ್ಥೆಯ ಅಧ್ಯಕ್ಷ ಕಪಿಲ್ ವಾಧವನ್ ಹಾಗೂ ಆತನ ಸಹೋದರ ಧೀರಜ್ ಅವರನ್ನು ಇತ್ತೀಚೆಗೆ ಜಾರಿ ನಿರ್ದೇಶನಾಲಯವು ವಿಚಾರಣೆಗೆ ಒಳಪಡಿಸಿ, ರಿಯಲ್ ಎಸ್ಟೇಟ್ ಸಂಸ್ಥೆಗಳಿಗೆ ಸುಮಾರು 2186 ಕೋಟಿ ರೂ.ಗಳ ಸಾಲ ನೀಡಿದ್ದರ ಬಗ್ಗೆ ಪ್ರಶ್ನಿಸಿತ್ತು.

ಕಾರ್ಮಿಕರ ಭವಿಷ್ಯ ನಿಧಿಯನ್ನು ಖಾಸಗಿ ಕಂಪನಿಗೆ ಅದರಲ್ಲೂ ವಿವಾದಿತ ಕಂಪನಿಯಲ್ಲಿ ತೊಡಗಿಸಿದ ಉತ್ತರಪ್ರದೇಶ ಸರ್ಕಾರ ಗಂಭೀರ ಅಪರಾಧ ಎಸಗಿದ್ದು ಮೇಲ್ನೋಟಕ್ಕೆ ಸಾಬೀತಾಗುತ್ತದೆ. ಕೋಟ್ಯಂತರ ರೂ.ಗಳ ದುರುಪಯೋಗಕ್ಕೆ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ ಉತ್ತರಿಸಬೇಕು ಎಂಬ ಆಗ್ರಹ ಹೆಚ್ಚುತ್ತಿದೆ.
(ಮಾಹಿತಿ ಮೂಲ: ನ್ಯಾಷನಲ್ ಹೆರಾಲ್ಡ್)

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಚುನಾವಣಾ ಸಮಯದಲ್ಲಿ ಉಚಿತ ಕೊಡುಗೆಗಳ ಪ್ರವೃತ್ತಿ ಪ್ರಶ್ನಿಸಿದ ಸುಪ್ರೀಂ ಕೋರ್ಟ್

ರಾಜಕೀಯ ಪಕ್ಷಗಳು ಮತ್ತು ರಾಜ್ಯ ಸರ್ಕಾರಗಳು ಚುನಾವಣೆಗೆ ಮುನ್ನ "ಉಚಿತ ಕೊಡುಗೆಗಳ" ಜಾಹೀರಾತು ನೀಡುವ ಅಭ್ಯಾಸ ಹೆಚ್ಚುತ್ತಿರುವ ಬಗ್ಗೆ ಸುಪ್ರೀಂ ಕೋರ್ಟ್ ಗುರುವಾರ ಬಲವಾದ ಮೌಖಿಕ ಅವಲೋಕನಗಳನ್ನು ನೀಡಿದೆ. ವಿದ್ಯುತ್ (ತಿದ್ದುಪಡಿ) ನಿಯಮಗಳು, 2024...

ರಾಹುಲ್ ಗಾಂಧಿಗೆ ಕರ್ಣಿ ಸೇನೆಯಿಂದ ಜೀವ ಬೆದರಿಕೆ: ಬಿಜೆಪಿ-ಆರ್‌ಎಸ್‌ಎಸ್ ಜಾಲವೇ ‘ಗೋಡ್ಸೆ ಕಾರ್ಖಾನೆ’ ಎಂದ ಕಾಂಗ್ರೆಸ್

ನವದೆಹಲಿ: ಲೋಕಸಭಾ ಸ್ಪೀಕರ್ ಓಂ ಬಿರ್ಲಾ ವಿರುದ್ಧ ನಡೆದ ಪ್ರತಿಭಟನೆಗೆ ಸಂಬಂಧಿಸಿದಂತೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರಿಗೆ ಕರ್ಣಿ ಸೇನೆ ಜೀವ ಬೆದರಿಕೆ ಹಾಕಿದ್ದು, ಇದು "ಏಕಾಂಗಿ ಸ್ಫೋಟವಲ್ಲ"...

ಬಿಹಾರ| ವಿಧಾನಸಭೆಯಲ್ಲಿ ‘ತಂಬಾಕು’ ತಿಂದ ಉಪಮುಖ್ಯಮಂತ್ರಿ ಸಾಮ್ರಾಟ್ ಚೌಧರಿ

ಬಿಹಾರ ವಿಧಾನಸಭೆಯ ಬಜೆಟ್ ಅಧಿವೇಶನದ ವಿಡಿಯೋ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆದ ಬಳಿಕ ರಾಜಕೀಯ ವಿವಾದಕ್ಕೆ ಕಾರಣವಾಗಿದೆ. ವಿಡಿಯೋದಲ್ಲಿ, ಉಪಮುಖ್ಯಮಂತ್ರಿ ಹಾಗೂ ಹಿರಿಯ ಬಿಜೆಪಿ ನಾಯಕ ಸಾಮ್ರಾಟ್ ಚೌಧರಿ ಕಲಾಪದ ಸಮಯದಲ್ಲಿ ವಸ್ತುವೊಂದನ್ನು...

‘ಬೆದರಿಕೆ, ಚಿತ್ರಹಿಂಸೆ, ಅತ್ಯಾಚಾರ ‘: ಇಸ್ರೇಲ್‌ ಜೈಲಿನ ದೌರ್ಜನ್ಯ ಬಿಚ್ಚಿಟ್ಟ ಪ್ಯಾಲೆಸ್ತೀನ್ ಪತ್ರಕರ್ತರು

ಇಸ್ರೇಲ್ ಜೈಲುಗಳಲ್ಲಿ ಬಂಧಿತರಾಗಿರುವ ಪ್ಯಾಲೆಸ್ತೀನ್ ಪತ್ರಕರ್ತರು ತೀವ್ರವಾದ ದೌರ್ಜನ್ಯಗಳನ್ನು ಎದುರಿಸುತ್ತಿದ್ದಾರೆ ಎಂದು ಅಂತಾರಾಷ್ಟ್ರೀಯ ಪತ್ರಕರ್ತರ ರಕ್ಷಣಾ ಸಮಿತಿ (ಸಿಪಿಜೆ) ಹೇಳಿದೆ. ಬಂಧನದಿಂದ ಬಿಡುಗಡೆಯಾಗಿರುವ ಪತ್ರಕರ್ತರನ್ನು ಸಂದರ್ಶಿಸಿರುವ ಸಿಪಿಜೆ, ಜೈಲಿನಲ್ಲಿರುವ ಪತ್ರಕರ್ತರು ನಿರಂತರವಾಗಿ ದೈಹಿಕ...

ಪಾಕಿಸ್ತಾನದ ಕರಾಚಿಯಲ್ಲಿ ಶಂಕಿತ ಅನಿಲ ಸೋರಿಕೆ: ಮಕ್ಕಳು ಸೇರಿದಂತೆ 16 ಮಂದಿ ಸಾವು

ಕರಾಚಿ: ಪಾಕಿಸ್ತಾನದ ಕರಾಚಿಯಲ್ಲಿ ಗುರುವಾರ ಬೆಳಿಗ್ಗೆ ವಸತಿ ಕಟ್ಟಡವೊಂದರಲ್ಲಿ ಶಂಕಿತ ಅನಿಲ ಸೋರಿಕೆಯಿಂದಾಗಿ ಸ್ಫೋಟ ಸಂಭವಿಸಿ, ಮಕ್ಕಳು ಸೇರಿದಂತೆ ಕನಿಷ್ಠ 16 ಜನರು ಸಾವನ್ನಪ್ಪಿದ್ದು, 14 ಜನರು ಗಾಯಗೊಂಡಿದ್ದಾರೆ. "ಓಲ್ಡ್ ಸೋಲ್ಜರ್ ಬಜಾರ್...

ಮಹಾರಾಷ್ಟ್ರ| 10 ದಿನಗಳ ಮಗುವಿನೊಂದಿಗೆ 12 ನೇ ತರಗತಿ ಪರೀಕ್ಷೆ ಬರೆದ ಮಹಿಳೆ

ಮಹಾರಾಷ್ಟ್ರದ ನಾಂದೇಡ್ ನಗರದಲ್ಲಿ 12 ನೇ ತರಗತಿಯ ಮಹಾರಾಷ್ಟ್ರ ಬೋರ್ಡ್ ಪರೀಕ್ಷೆಗೆ ಹಾಜರಾದ ಮಹಿಳೆಯೊಬ್ಬರು ತನ್ನ 10 ದಿನಗಳ ಮಗುವನ್ನು ಪರೀಕ್ಷಾ ಕೇಂದ್ರಕ್ಕೆ ಕರೆತಂದಿದ್ದಾರೆ. ಮಹಿಳೆ ಪರೀಕ್ಷೆ ಬರೆಯುವ ಕಾರಣಕ್ಕೆ ಕೇಂದ್ರದ ವಿಶೇಷ...

ಒಡಿಶಾ| ದಲಿತರು ವಾಸಿಸುವ ಪ್ರದೇಶಕ್ಕೆ ಕುಡಿಯುವ ನೀರು-ವಿದ್ಯುತ್ ಸಂಪರ್ಕ ಕಡಿತ

ಒಡಿಶಾದ ಬಲಂಗೀರ್ ಜಿಲ್ಲೆಯಲ್ಲಿ ಜಾತಿ ಆಧಾರಿತ ತಾರತಮ್ಯವಿದೆ ಎಂದು ಸ್ಥಳೀಯ ನಿವಾಸಿಗಳು ಆರೋಪಿಸಿದ್ದಾರೆ. ಆದರೆ, ಗ್ರಾಮದ ಅಧಿಕಾರಿಯೊಬ್ಬರು ಈ ಅಡಚಣೆಗೆ ಸ್ಥಳೀಯ ಕಲಹ ಕಾರಣ ಎಂದು ಆರೋಪಿಸಿದ್ದಾರೆ. ಜಿಲ್ಲೆಯ ತುರೆಕೆಲಾ ಬ್ಲಾಕ್‌ನ ಡುಮೆರ್ಚುವಾನ್ ಗ್ರಾಮದಲ್ಲಿ...

ತಮಿಳುನಾಡು ವಿಧಾನಸಭಾ ಚುನಾವಣೆ: ಡಿಎಂಕೆ ನೇತೃತ್ವದ ಮೈತ್ರಿಕೂಟಕ್ಕೆ ಡಿಎಂಡಿಕೆ ಸೇರ್ಪಡೆ

ಚೆನ್ನೈ: ದಿವಂಗತ ನಟ ವಿಜಯಕಾಂತ್ ಅವರ ದೇಶೀಯ ಮುರ್ಪೋಕ್ಕು ದ್ರಾವಿಡ ಕಳಗಂ (ಡಿಎಂಡಿಕೆ) ಗುರುವಾರ ದ್ರಾವಿಡ ಮುನ್ನೇತ್ರ ಕಳಗಂ ನೇತೃತ್ವದ ಜಾತ್ಯತೀತ ಪ್ರಗತಿಪರ ಒಕ್ಕೂಟ (ಎಸ್‌ಪಿಎ)ವನ್ನು 21ವರ್ಷಗಳ ಅಸ್ತಿತ್ವದ ನಂತರ ಮೊದಲ ಬಾರಿಗೆ...

ಟ್ರಕ್ ಚಾಲಕ ರಸ್ತೆಯಲ್ಲಿ ನಮಾಝ್ ಮಾಡಿದ್ದರಿಂದ ಟ್ರಾಫಿಕ್ ಜಾಮ್ ಎಂದು ಸುಳ್ಳು ಸುದ್ದಿ ಪ್ರಸಾರ : ಝೀ ನ್ಯೂಸ್‌ಗೆ 1 ಲಕ್ಷ ರೂ. ದಂಡ

ಮುಸ್ಲಿಂ ವ್ಯಕ್ತಿಯೊಬ್ಬರು ನಮಾಝ್ ಮಾಡಲು ಹೆದ್ದಾರಿ ಮಧ್ಯೆ ಟ್ರಕ್‌ ನಿಲ್ಲಿಸಿದ್ದರಿಂದ ಟ್ರಾಫಿಕ್ ಜಾಮ್‌ ಉಂಟಾಗಿದೆ ಎಂದು ಸುಳ್ಳು ಸುದ್ದಿ ಹಬ್ಬಿದ ಝೀ ನ್ಯೂಸ್‌ ಚಾನೆಲ್‌ಗೆ ಸುದ್ದಿ ಪ್ರಸಾರಕರು ಮತ್ತು ಡಿಜಿಟಲ್ ಮಾನದಂಡಗಳ ಪ್ರಾಧಿಕಾರ(ಎನ್‌ಬಿಡಿಎಸ್‌ಎ)...

ಗುಜರಾತ್‌| ಜಾತಿ ಆಧಾರಿತ ಜಗಳದಲ್ಲಿ ದಲಿತ ಯುವಕನ ಮೇಲೆ ಚಾಕುವಿನಿಂದ ದಾಳಿ

ಶನಿವಾರ ತಡರಾತ್ರಿ ರಾಣಿಪ್‌ನಲ್ಲಿ ನಡೆದ ಸಣ್ಣ ಭಿನ್ನಾಭಿಪ್ರಾಯವೊಂದು ಹಿಂಸಾಚಾರಕ್ಕೆ ತಿರುಗಿದ್ದು, 25 ವರ್ಷದ ದಲಿತ ಯುವಕ ಸಾಹಿಲ್ ವಘೇಲಾ ಮೇಲೆ ಚಾಕುವಿನಿಂದ ಹಲ್ಲೆ ನಡೆಸಲಾಗಿದೆ. ಯುವಕ ಗಂಭೀರವಾಗಿ ಗಾಯಗೊಂಡಿದ್ದು, ಘಟನೆಯು ಈ ಪ್ರದೇಶದಲ್ಲಿ...