Homeಎಕಾನಮಿಬಡ ಕಾರ್ಮಿಕರ ಪಿಎಫ್‌ ಹಣವನ್ನು ದಾವೂದ್ ಇಬ್ರಾಹಿಂ ಸಹಚರ ಇಕ್ಬಾಲ್ ಮಿರ್ಚಿಗೆ ಕೊಟ್ಟ ಯೋಗಿ ಸರ್ಕಾರ...

ಬಡ ಕಾರ್ಮಿಕರ ಪಿಎಫ್‌ ಹಣವನ್ನು ದಾವೂದ್ ಇಬ್ರಾಹಿಂ ಸಹಚರ ಇಕ್ಬಾಲ್ ಮಿರ್ಚಿಗೆ ಕೊಟ್ಟ ಯೋಗಿ ಸರ್ಕಾರ…

ಉತ್ತರಪ್ರದೇಶದ ಯುಪಿಪಿಸಿಎಲ್ ಕಾರ್ಮಿಕರಿಗೆ ಸೇರಿದ ಒಟ್ಟು 2,600 ಕೋಟಿ ರೂ.ಗಳನ್ನು ದೇಶದ್ರೋಹಿ ದಾವೂದ್ ಇಬ್ರಾಹಿಂ ಅವರ ಸಹಚರ ಇಕ್ಬಾಲ್ ಮಿರ್ಚಿ ಒಡೆತನದ ಡಿಎಚ್‍ಎಫ್‍ಎಲ್‍ನಲ್ಲಿ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಹೂಡಿದ್ದಾರೆ.

- Advertisement -
- Advertisement -

ಕಳೆದ 70 ವರ್ಷದಿಂದ ಅಧಿಕಾರದಲ್ಲಿದ್ದ ಕಾಂಗ್ರೆಸ್ ಸರ್ಕಾರ ಜನಸಾಮಾನ್ಯರ ದುಡ್ಡಿನ ಮೇಲೆ ಮೋಜು-ಮಸ್ತಿ ನಡೆಸಿದೆ ಎಂದು ಆರೋಪಿಸುವ ಪ್ರಧಾನಿ ಮೋದಿ, ಇಲ್ಲಿಯ ಜನಸಾಮಾನ್ಯರು ಎದುರಿಸುತ್ತಿರುವ ದುಃಖ ದುಮ್ಮಾನಗಳ ನಿವಾರಣೆಗೆ ನಿಮ್ಮ ಯೋಜನೆಗಳೇನು ಎಂದು ಕೇಳುವವರಿಗೆ ದೇಶದ್ರೋಹದ ಪಟ್ಟ ಕಟ್ಟುವುದು ಬಹಿರಂಗವಾಗಿ ನಡೆದಿದೆ.

ಮತ್ತೊಂದೆಡೆ, ದೇಶದ್ರೋಹಿಗಳ ನಿಕಟ ಒಡನಾಡಿಯಾದ ವ್ಯಕ್ತಿ-ಸಂಸ್ಥೆಗಳ ವಹಿವಾಟು ಅಭಿವೃದ್ಧಿಗಾಗಿ ಕಾರ್ಮಿಕರ ಭವಿಷ್ಯನಿಧಿಯನ್ನೇ ಒತ್ತೆ ಇಟ್ಟು ದೇಶಾಭಿಮಾನ ಮೆರೆಯುತ್ತಿದೆ. ಭಾರತೀಯ ಸಂತ-ಸಂಸ್ಕೃತಿಯ ನೈಜ ವಾರಸುದಾರ ಎಂಬ ಖ್ಯಾತಿಯ ಯೋಗಿ ಆದಿತ್ಯನಾಥ್ ನೇತೃತ್ವದ ಉತ್ತರಪ್ರದೇಶ ಸರ್ಕಾರದಲ್ಲಿ ನಡೆದಿದೆ. ಕಾರ್ಮಿಕರ ಭವಿಷ್ಯನಿಧಿಯನ್ನು ದೇಶದ್ರೋಹಿ ಒಡನಾಡಿಯ ಅಭಿವೃದ್ಧಿಗೆ ಉದಾರವಾಗಿ ನೀಡಿ, ತಮ್ಮ ದೇಶಾಭಿಮಾನದ ನೈಜ ಸ್ವರೂಪ ತೋರಿದ್ದಾರೆ.

ಉತ್ತರಪ್ರದೇಶದ ವಿದ್ಯುತ್ ನಿಗಮ ನಿಯಮಿತದ (ಯುಪಿಪಿಸಿಎಲ್) ಕಾರ್ಮಿಕರಿಗೆ ಸೇರಿದ ಒಟ್ಟು 2,600 ಕೋಟಿ ರೂ.ಗಳನ್ನು ದೇಶದ್ರೋಹಿ ದಾವೂದ್ ಇಬ್ರಾಹಿಂ ಸಹಚರ ಇಕ್ಬಾಲ್ ಮಿರ್ಚಿ ಪಾಲುದಾರಿಕೆಯ ಡಿಎಚ್‍ಎಫ್‍ಎಲ್‍ನಲ್ಲಿ (ಮಾರ್ಚ್ -2017 ಹಾಗೂ ಡಿಸೆಂಬರ್-2018ರ ಅವಧಿ) ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಹೂಡಿದ್ದಾರೆ.

ಮುಂಬೈ ಮೂಲದ ಈ ವಿವಾದಿತ ಕಂಪನಿಯಲ್ಲಿ ಬಂಡವಾಳ ಹೂಡಲು ಕಾರ್ಮಿಕರ ಭವಿಷ್ಯ ನಿದಿಯೇ ಬೇಕಿತ್ತೆ? ಅದೂ, ದೇಶದ್ರೋಹಿ ದಾವೂದ್ ಇಬ್ರಾಹಿಂ ಸಹಚರನಾಗಿದ್ದ ಇಕ್ಬಾಲ್ ಮಿರ್ಚಿ ಒಡೆತನದ ಸಂಸ್ಥೆಗೆ ಎಂಬುದೀಗ ಚರ್ಚೆಯ ವಸ್ತುವಾಗುತ್ತಿದೆ.

ಆರ್ಥಿಕ ದುರುಪಯೋಗದ ಗಂಭೀರ ಪ್ರಕರಣವಲ್ಲವೆ?
ಉತ್ತರಪ್ರದೇಶ ವಿದ್ಯುತ್ ನಿಗಮ ನಿಯಮಿತದ ಕಾರ್ಮಿಕರ 2,600 ಕೋಟಿ ರೂ.ಗಳಷ್ಟು ಭವಿಷ್ಯ ನಿಧಿಯನ್ನು ಬೇರೆ ಉದ್ದೆಶಗಳಿಗಾಗಿ ಬಳಸುವುದು ಅಪರಾಧ. ಯೋಗಿ ಆದಿತ್ಯನಾಥ ಸರ್ಕಾರದ ಕಾರ್ಮಿಕರಿಗೆ ಸೇರಿದ ಹಾಗೂ ಪ್ರಧಾನಿ ಮೋದಿ ನೇತೃತ್ವದ ಕೇಂದ್ರ ಸರ್ಕಾರ ಸ್ವಾಮ್ಯದ ಭವಿಷ್ಯ ನಿದಿ-ಇಷ್ಟೊಂದು ಭಾರಿ ಮೊತ್ತದ ಹಣವನ್ನು ವಿವಾದಿತ ಕಂಪನಿಯೊಂದರಲ್ಲಿ ಹೂಡಿರುವುದು ಹತ್ತು ಹಲವು ಸಂಶಯಗಳಿಗೆ ಕಾರಣವಾಗುತ್ತಿದೆ.

ದೇಶಾಭಿಮಾನಿ ಮುಖ್ಯಮಂತ್ರಿ ಹಾಗೂ ದೇಶದ್ರೋಹಿಯ ಒಡನಾಡಿಯೊಬ್ಬರ ಒಡೆತನದ ಕಂಪನಿಯೊಂದಿಗಿರುವ ಸಂಬಂಧವೂ ಈಗ ಪ್ರಶ್ನಾರ್ಹವಾಗುತ್ತಿದೆ.

ತನಿಖೆ ಆರಂಭವೇ ಭ್ರಷ್ಟಾಚಾರಕ್ಕೆ ಸಾಕ್ಷಿ
ಓತಿಕಾಟಕ್ಕೆ ಬೇಲಿ ಸಾಕ್ಷಿ ಎಂಬಂತೆ, ಉತ್ತರಪ್ರದೇಶ ಸರಕಾರದ (ಇಂಧನ) ಪ್ರಧಾನ ಕಾರ್ಯದರ್ಶಿ ಅಲೋಕಕುಮಾರ್, ಪ್ರಕರಣದ ವಿರುದ್ಧ ತನಿಖೆಗೆ ಆದೇಶಿಸಿದ್ದಾರೆ. ಯೋಗಿ ಆದಿತ್ಯನಾಥ್ ಸರ್ಕಾರದಲ್ಲಿ ಭ್ರಷ್ಟಾಚಾರ ನಡೆದಿದೆ ಎಂಬುದಕ್ಕೆ ಸಾಕ್ಷಿ ನುಡಿಯುತ್ತಿದೆ.

ಈಗಾಗಲೇ, ವಿದ್ಯುತ್ ವಲಯ ಕಾರ್ಮಿಕರ ಟ್ರಸ್ಟ್ ಪ್ರಧಾನ ವ್ಯವಸ್ಥಾಪಕ ಪಿ.ಕೆ.ಗುಪ್ತಾ ಅವರನ್ನು ಅಮಾನತುಗೊಳಿಸಿದ್ದು, ಪ್ರಕರಣದ ವಿರುದ್ಧ ಕಾನೂನು ಕ್ರಮ ಜರುಗಿಸಲು ಇಂಧನ ವಿಭಾಗ ನಿರ್ದೇಶಕ ಸುಧೀರ್ ಆರ್ಯ ಅವರಿಗೆ ಸೂಚಿಸಿದ್ದಾರೆ.

ಹೂಡಿಕೆ ವಾಪಸಾತಿಗೆ ಹೆಚ್ಚಿದ ಒತ್ತಡ
ಮತ್ತೊಂದು ಕಂಪನಿಯ ನೆರಳಲ್ಲಿ ಬೆಳೆಯುವ ಕಂಪನಿಯೊಂದಕ್ಕೆ ಪೂರ್ವಾಪರ ತಿಳಿಯದೇ ಕಾರ್ಮಿಕರ ಸಾವಿರಾರು ಕೋಟಿ ರೂ.ಗಳ ಭವಿಷ್ಯ ನಿಧಿ ಹೂಡಿದ್ದನ್ನು ಪ್ರಶ್ನಿಸಿದ್ದು ಮಾತ್ರವಲ್ಲ; ಬಂಡವಾಳ ಹೂಡಿಕೆಯನ್ನು ವಾಪಸ್ ಪಡೆಯಲು ಉತ್ತರಪ್ರದೇಶ ರಾಜ್ಯ ವಿದ್ಯುತ್ ಮಂಡಳಿಯ ಎಂಜಿನಿಯರರ ಸಂಸ್ಥೆಯು (ಯುಪಿಎಸ್‍ಇಬಿಇಎ) ಮುಖ್ಯಮಂತ್ರಿ ಯೋಗಿ ಆದಿತ್ಯನಾಥ ಅವರಿಗೆ ಪತ್ರ ಬರೆದು ಆಗ್ರಹಿಸಿದೆ.

ಸುಮಾರು 2600 ಕೋಟಿ ರೂ.ಗಳಿಗೂ ಅಧಿಕ ಹಣ ಡಿ.ಎಚ್.ಎಫ್.ಎಲ್ ನಲ್ಲಿದೆ. ಅದನ್ನು ಮರಳಿ ಪಡೆಯಬೇಕು. ಮಾತ್ರವಲ್ಲ ಪ್ರಧಾನ ಪ್ರಾವಿಡೆಂಟ್ ಫಂಡ್ (ಜಿಪಿಎಫ್) ಹಾಗೂ ಕಾಂಟ್ರಿಬ್ಯೂಟರಿ ಪ್ರಾವಿಡೆಂಟ್ ಫಂಡ್ (ಸಿಪಿಎಫ್) ಟ್ರಸ್ಟ್ ನಿಂದ ಇನ್ನು ಮುಂದೆ ಇಂತಹ ಖಾಸಗಿ ಸಂಸ್ಥೆಗಳಿಗೆ ಹಣ ಹೂಡುವುದಿಲ್ಲ ಎಂಬ ಬಗ್ಗೆ ಭರವಸೆ ನೀಡುವಂತೆ ಯುಪಿಎಸ್‍ಇಬಿಇಎ ಪ್ರಧಾನ ಕಾರ್ಯದರ್ಶಿ ರಾಜೀವ್ ಕುಮಾರ್ ಮುಖ್ಯಮಂತ್ರಿ ಯೋಗಿ ಅವರನ್ನು ಇಕ್ಕಟ್ಟಿನಲ್ಲಿ ಸಿಲುಕಿಸಿದ್ದಾರೆ.

ಅಲ್ಲದೇ, 2017ರ ಮಾರ್ಚ್‍ನಿಂದ2018-ಡಿಸೆಂಬರ್ ವರೆಗೆ ಡಿ.ಎಚ್.ಎಫ್‍.ಎಲ್ ನಲ್ಲಿ ವಿದ್ಯುತ್ ಕಾರ್ಮಿಕರ ಭವಿಷ್ಯ ನಿಧಿಯನ್ನು ಠೇವಣಿಯಾಗಿ ಇರಿಸಲಾಗಿದೆ. ಡಿಎಚ್‍ಎಫ್‍ಎಲ್ ಕಂಪನಿಯು ಇತರೆ ಖಾಸಗಿ ವಿವಾದಿತ ಕಂಪನಿಗಳೊಂದಿಗೆ ನಡೆಸುವ ವ್ಯಾಪಾರ-ವಹಿವಾಟುಗಳ ಹಿನ್ನೆಲೆಯಲ್ಲಿ ಮುಂಬೈ ಹೈಕೋರ್ಟ್ ಸಹ ಪ್ರಕರಣವೊಂದರಲ್ಲಿ ತಡೆಯಾಜ್ಞೆ ನೀಡಿದೆ.

ಸುಮಾರು 2,600 ಕೋಟಿ ರೂ.ಗಳಿಗೂ ಅಧಿಕ ಹಣ ಡಿಎಚ್‍ಎಫ್‍ಎಲ್ ನಲ್ಲಿದೆ ಎಂದು ಟ್ರಸ್ಟ್ ಕಾರ್ಯದರ್ಶಿ ಹೇಳುತ್ತಾರೆ. ಕಾರ್ಮಿಕರಿಗೆ ಸೇರಿದ ಭವಿಷ್ಯನಿಧಿಯು ಖಾಸಗಿ ಕಂಪನಿಯ ವ್ಯವಹಾರಕ್ಕೆ ವರ್ಗಾಯಿಸುವುದು ಗಂಭೀರ ಅಪರಾಧ. ಕಾರ್ಮಿಕರ ಸೇವಾ ನಿವೃತ್ತಿಯ ನಂತರ ಈ ಭವಿಷ್ಯನಿಧಿ ಅವರನ್ನು ಕಾಪಾಡುತ್ತದೆ. ಇಂತಹ ಹಣವನ್ನು ಖಾಸಗಿ ಕಂಪನಿಗೆ ನೀಡುವುದು ಎಷ್ಟು ಸರಿ ಎಂದು ಸಂಸ್ಥೆಯ ಎಂಜಿನಿಯರರು ಪ್ರಶ್ನಿಸುತ್ತಿದ್ದಾರೆ.

ಇನ್ನು ಈ ಕುರಿತು ಕಾಂಗ್ರೆಸ್‌ ನಾಯಕಿ ಪ್ರಿಯಾಂಕ ಗಾಂಧಿ ಕೂಡ ಟ್ವೀಟ್‌ ಮಾಡಿ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಪಾರದರ್ಶಕ ಆಡಳಿತಕ್ಕೆ ಸವಾಲು
ತಮ್ಮ ಕಣ್ಣು ತಪ್ಪಿಸಿ ಪ್ರಕರಣ ನಡೆದಿದೆ ಎನ್ನುವುದಾದರೆ ತನಿಖೆ ತೀವ್ರಗೊಳಿಸಲಿ ಎಂದು ಅಖಿಲ ಭಾರತ ವಿದ್ಯುತ್ ಎಂಜಿನಿಯರರ ಒಕ್ಕೂಟದ ಅಧ್ಯಕ್ಷ ಶೈಲೇಂದ್ರ ದುಬೆ ಅವರು ಮುಖ್ಯಮಂತ್ರಿ ಯೋಗಿ ಆದಿತ್ಯನಾಥ ಅವರ ಪಾರದರ್ಶಕ ಆಡಳಿತಕ್ಕೆ ಸವಾಲು ಹಾಕಿದ್ದಾರೆ. ಖಾಸಗಿ ಕಂಪನಿಗೆ ಹೂಡಿದ ಹಣವನ್ನು ಶೀಘ್ರವೇ ವಾಪಸ್ ಪಡೆಯಬೇಕು. ಯಾರ ಆದೇಶದ ಮೇರೆಗೆ ಮಂಡಳಿಯು ಕಾರ್ಮಿಕರ ಭವಿಷ್ಯನಿಧಿಯನ್ನು ಖಾಸಗಿ ಕಂಪನಿಯಲ್ಲಿ ಹೂಡಲು ನಿರ್ಧರಿಸಿತು?. ಮಂಡಳಿಯು ಬಹುದೊಡ್ಡ ತಪ್ಪು ಮಾಡಿದೆ. ಬಹುಕೋಟಿ ರೂ.ಗಳ ಹಗರಣ ಇದಾಗಲಿದೆ. ತನಿಖೆಯ ಮೂಲಕವೇ ಬಯಲಿಗೆಳೆಯಬೇಕು ಎಂದು ಆಗ್ರಹಿಸಿದ್ದಾರೆ.

ದುಬೈಯ ವಿವಾದಿತ “ಮಿರ್ಚಿ’ ಸಂಪರ್ಕ
ಭೂ ಅಕ್ರಮಗಳಿಗೆ ಸಂಬಂಧಿಸಿದಂತೆ ದೇಶದ್ರೋಹಿ ಹಾಗೂ ಭೂಗತ ಪಾತಕಿ ದಾವೂದ್ ಇಬ್ರಾಹಿಂನ ವ್ಯವಹಾರಗಳು ಬಯಲಿಗೆ ಬರುತ್ತಿದ್ದಂತೆ, ಜಾರಿ ನಿರ್ದೇಶನಾಲಯವು ಡಿ.ಎಚ್.ಎಫ್.ಎಲ್ ಸನ್ ಬ್ಲಿಂಕ್ ರಿಯಲ್ ಎಸ್ಟೇಟ್ ಸಂಸ್ಥೆಗಳ ವಹಿವಾಟುಗಳನ್ನು ಪರಿಶೀಲಿಸಿ ತನಿಖೆಗೆ ಒಳಪಡಿಸಿತ್ತು. ಈ ವಹಿವಾಟುಗಳಿಂದ ದುಬೈಯಲ್ಲಿರುವ “ಮಿರ್ಚಿ’ ಸಂಸ್ಥೆಯ ಮೂಲಕವೇ ದಾವೂದ್ ಗುಂಪಿಗೆ ಹಣ ರವಾನೆಯಾಗುತ್ತಿತ್ತು.
ಡಿ.ಎಚ್.ಎಫ್.ಎಲ್ ಸಂಸ್ಥೆಯ ಅಧ್ಯಕ್ಷ ಕಪಿಲ್ ವಾಧವನ್ ಹಾಗೂ ಆತನ ಸಹೋದರ ಧೀರಜ್ ಅವರನ್ನು ಇತ್ತೀಚೆಗೆ ಜಾರಿ ನಿರ್ದೇಶನಾಲಯವು ವಿಚಾರಣೆಗೆ ಒಳಪಡಿಸಿ, ರಿಯಲ್ ಎಸ್ಟೇಟ್ ಸಂಸ್ಥೆಗಳಿಗೆ ಸುಮಾರು 2186 ಕೋಟಿ ರೂ.ಗಳ ಸಾಲ ನೀಡಿದ್ದರ ಬಗ್ಗೆ ಪ್ರಶ್ನಿಸಿತ್ತು.

ಕಾರ್ಮಿಕರ ಭವಿಷ್ಯ ನಿಧಿಯನ್ನು ಖಾಸಗಿ ಕಂಪನಿಗೆ ಅದರಲ್ಲೂ ವಿವಾದಿತ ಕಂಪನಿಯಲ್ಲಿ ತೊಡಗಿಸಿದ ಉತ್ತರಪ್ರದೇಶ ಸರ್ಕಾರ ಗಂಭೀರ ಅಪರಾಧ ಎಸಗಿದ್ದು ಮೇಲ್ನೋಟಕ್ಕೆ ಸಾಬೀತಾಗುತ್ತದೆ. ಕೋಟ್ಯಂತರ ರೂ.ಗಳ ದುರುಪಯೋಗಕ್ಕೆ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ ಉತ್ತರಿಸಬೇಕು ಎಂಬ ಆಗ್ರಹ ಹೆಚ್ಚುತ್ತಿದೆ.
(ಮಾಹಿತಿ ಮೂಲ: ನ್ಯಾಷನಲ್ ಹೆರಾಲ್ಡ್)

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಗುಜರಾತ್: ‘ಲವ್ ಜಿಹಾದ್’ ತಡೆಗೆ ವಿವಾಹ ನೋಂದಣಿ ಪ್ರಕ್ರಿಯೆಯಲ್ಲಿ ಗಮನಾರ್ಹ ಬದಲಾವಣೆಗಳನ್ನು ಮಾಡುತ್ತೇವೆ; ಡಿಸಿಎಂ ಹರ್ಷ ಸಾಂಘವಿ ಘೋಷಣೆ

ಅಹಮದಾಬಾದ್: ಗುಜರಾತ್‌ನ ಉಪಮುಖ್ಯಮಂತ್ರಿ ಹರ್ಷ ಸಾಂಘವಿ ಶುಕ್ರವಾರ, ರಾಜ್ಯ ಸರ್ಕಾರವು ವಿವಾಹ ನೋಂದಣಿ ಕಾರ್ಯವಿಧಾನದಲ್ಲಿ ಬದಲಾವಣೆಗಳನ್ನು ತರಲಿದೆ ಎಂದು ಘೋಷಿಸಿದ್ದು, "ಸಮಾಜ ವಿರೋಧಿ ಶಕ್ತಿಗಳು", ವಿಶೇಷವಾಗಿ ಗುಜರಾತ್‌ನ ಹೆಣ್ಣುಮಕ್ಕಳನ್ನು "ಲವ್ ಜಿಹಾದ್" ಗಾಗಿ...

ಬಂಗಾಳ ಎಸ್ಐಆರ್ ಪ್ರಕ್ರಿಯೆ: ಚುನಾವಣಾ ಆಯೋಗದ ಸಹಾಯಕ್ಕೆ ನ್ಯಾಯಾಂಗ ಅಧಿಕಾರಿಗಳನ್ನು ನೇಮಿಸಲು ಕಲ್ಕತ್ತಾ ಹೈಕೋರ್ಟ್‌ಗೆ ಸುಪ್ರೀಂ ಸೂಚನೆ

ನವದೆಹಲಿ: ಪಶ್ಚಿಮ ಬಂಗಾಳ ಸರ್ಕಾರ ಮತ್ತು ಚುನಾವಣಾ ಆಯೋಗದ ನಡುವೆ ಮತದಾರರ ಪಟ್ಟಿ ಶುದ್ಧೀಕರಣ ಅಭಿಯಾನಕ್ಕೆ ಸಂಬಂಧಿಸಿದಂತೆ ದುರದೃಷ್ಟಕರ ಆರೋಪದ ಆಟ ನಡೆಯುತ್ತಿದೆ ಎಂದು ಪ್ರತಿಕ್ರಿಯಿಸಿರುವ ಸುಪ್ರೀಂ ಕೋರ್ಟ್, ವಿಶೇಷ ತೀವ್ರ ಪರಿಷ್ಕರಣೆ...

ಬಾಲಿವುಡ್ ನಟ ರಣವೀರ್ ಸಿಂಗ್ ಗೆ ಬಿಷ್ಣೋಯಿ ಗ್ಯಾಂಗ್ ನಿಂದ ಜೀವಬೆದರಿಕೆ: ಅಮೆರಿಕಾ ನಂಬರ್ ನಿಂದ 10ಕೋಟಿ ರೂ. ಬೇಡಿಕೆ 

ಬಿಷ್ಣೋಯ್ ಗ್ಯಾಂಗ್ ಬಾಲಿವುಡ್ ನಟ ರಣವೀರ್ ಸಿಂಗ್ ಅವರಿಂದ 10 ಕೋಟಿ ರೂ.ಗೆ ಬೇಡಿಕೆ ಇಟ್ಟಿದೆ ಎನ್ನಲಾಗಿದೆ. ಅಮೆರಿಕದ ಸಂಖ್ಯೆಯಿಂದ ಬಂದ ವಾಯ್ಸ್ ನೋಟ್ ಮೂಲಕ ಬೆದರಿಕೆ ಹಾಕಲಾಗಿದೆ ಎಂದು ವರದಿಯಾಗಿದೆ. ಮುಂಬೈ ಪೊಲೀಸ್...

‘ರಾಜಿ ಮಾಡಿಕೊಂಡ ಪ್ರಧಾನಿ’: ಎಐ ಇಂಪ್ಯಾಕ್ಟ್ ಶೃಂಗಸಭೆಯಲ್ಲಿ ಯುವ ಕಾಂಗ್ರೆಸ್‌ ಕಾರ್ಯಕರ್ತರಿಂದ ಶರ್ಟ್‌ ಬಿಚ್ಚಿ ಪ್ರತಿಭಟನೆ

ಎಐ ಇಂಪ್ಯಾಕ್ಟ್ ಶೃಂಗಸಭೆಗೆ ಸಂಬಂಧಿಸಿದಂತೆ ಪ್ರಧಾನಿ ನರೇಂದ್ರ ಮೋದಿಯವರನ್ನು ಗುರಿಯಾಗಿಸಿಕೊಂಡು ಮತ್ತು ಪ್ರಧಾನಿ "ರಾಜಿ ಮಾಡಿಕೊಂಡಿದ್ದಾರೆ" ಎಂದು ಆರೋಪಿಸಿ ಭಾರತೀಯ ಯುವ ಕಾಂಗ್ರೆಸ್ ಕಾರ್ಯಕರ್ತರು ಶುಕ್ರವಾರ ಭಾರತ್ ಮಂಟಪದಲ್ಲಿ ಶರ್ಟ್ ಧರಿಸದೆ ಪ್ರತಿಭಟನೆ...

ಬಾಗಲಕೋಟೆ: ಶಿವಾಜಿ ಜಯಂತಿ ಮೆರವಣಿಗೆ ವೇಳೆ ಕಲ್ಲು ತೂರಾಟ, ಉದ್ವಿಗ್ನ ಪರಿಸ್ಥಿತಿ: ಫೆ.24ರವರೆಗೆ ನಿಷೇಧಾಜ್ಞೆ ಜಾರಿ

ಬಾಗಲಕೋಟೆಯಲ್ಲಿ ಗುರುವಾರ ಛತ್ರಪತಿ ಶಿವಾಜಿ ಮಹಾರಾಜರ ಜಯಂತಿಯಂದು ನಡೆದ ಪ್ರತಿಮೆ ಮೆರವಣಿಗೆಯ ಸಂದರ್ಭದಲ್ಲಿ ಕಲ್ಲು ತೂರಾಟ ನಡೆದ ಘಟನೆ ವರದಿಯಾಗಿದೆ. ಹಳೆಯ ನಗರ ಪ್ರದೇಶದ ಪಂಕ ಮಸೀದಿ ಬಳಿ ಮೆರವಣಿಗೆ ಸಾಗುತ್ತಿದ್ದಾಗ ಈ...

ನಿಯಮಿತವಾಗಿ ಎಸ್‌ಸಿ/ಎಸ್‌ಟಿ ಕಾಯ್ದೆ ಕೋಶದ ಸಭೆ ನಡೆಸುತ್ತಿಲ್ಲ ಎಂದು ಆರೋಪಿಸಿದ ಮೇವಾನಿ; ಗುಜರಾತ್ ವಿಧಾನಸಭೆಯಲ್ಲಿ ಕಾಂಗ್ರೆಸ್- ಬಿಜೆಪಿ ನಡುವೆ ವಾಗ್ವಾದ

ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ (ದೌರ್ಜನ್ಯ ತಡೆ) ಕಾಯ್ದೆಯಡಿಯಲ್ಲಿ ರಚಿಸಲಾದ ರಾಜ್ಯ ಮೇಲ್ವಿಚಾರಣಾ ಕೋಶದ (ಎಸ್‌ಎಂಸಿ) ನಿಯಮಿತ ಸಭೆಗಳನ್ನು ಮುಖ್ಯಮಂತ್ರಿ ಭೂಪೇಂದ್ರ ಪಟೇಲ್ ಕರೆಯುತ್ತಿಲ್ಲ ಎಂದು ವಡ್ಗಾಮ್‌ನ ಕಾಂಗ್ರೆಸ್ ಶಾಸಕ ಜಿಗ್ನೇಶ್...

ನೆಲಮಂಗಲದಲ್ಲಿ ಹಾಸಿಗೆ ಹಿಡಿದ ಪತಿಯ ಎದುರೇ 60ವರ್ಷದ ಮಹಿಳೆಯ ಕೊಲೆ; ಐದು ಗಂಟೆಗಳಲ್ಲಿ ಆರೋಪಿ ಬಂಧನ

ಬೆಂಗಳೂರು: ಬೆಂಗಳೂರು ಹೊರವಲಯ ನೆಲಮಂಗಲದ ಪೇಟೆ ಬೀದಿಯಲ್ಲಿ ವೀಲ್‌ಚೇರ್‌ನಲ್ಲಿ ಕುಳಿತಿದ್ದ ಗಂಡನ ಮುಂದೆಯೇ ಮಹಿಳೆಯೊಬ್ಬಳ ಕೊಲೆಯಾದ ಐದು ಗಂಟೆಗಳಲ್ಲಿ ನೆಲಮಂಗಲ ಪಟ್ಟಣ ಪೊಲೀಸರು 45 ವರ್ಷದ ದಿನಸಿ ಅಂಗಡಿ ಮಾಲೀಕನನ್ನು ಬಂಧಿಸಿದ್ದಾರೆ. ಫೆಬ್ರವರಿ...

‘ದಿ ಕೇರಳ ಸ್ಟೋರಿ 2’ ಚಿತ್ರ ನಿರ್ಮಾಪಕರು, ಸಿಬಿಎಫ್‌ಸಿ ಮಂಡಳಿಗೆ ನೋಟಿಸ್ ಜಾರಿ ಮಾಡಿದ ಕೇರಳ ಹೈಕೋರ್ಟ್

ಕೊಚ್ಚಿ: 'ದಿ ಕೇರಳ ಸ್ಟೋರಿ 2 - ಗೋಸ್ ಬಿಯಾಂಡ್' ಚಿತ್ರದ ಪ್ರಮಾಣೀಕರಣವನ್ನು ರದ್ದುಗೊಳಿಸುವಂತೆ ಮತ್ತು ಅದರ ಶೀರ್ಷಿಕೆಯ ಮರುಪರಿಶೀಲನೆ ಸೇರಿದಂತೆ ಮಾರ್ಪಾಡುಗಳಿಗೆ ನಿರ್ದೇಶನ ನೀಡಬೇಕೆಂದು ಕೋರಿ ಕಣ್ಣೂರು ಮೂಲದವರು ಸಲ್ಲಿಸಿದ ಅರ್ಜಿಯ...

ಚುನಾವಣಾ ಸಮಯದಲ್ಲಿ ಉಚಿತ ಕೊಡುಗೆಗಳ ಪ್ರವೃತ್ತಿ ಪ್ರಶ್ನಿಸಿದ ಸುಪ್ರೀಂ ಕೋರ್ಟ್

ರಾಜಕೀಯ ಪಕ್ಷಗಳು ಮತ್ತು ರಾಜ್ಯ ಸರ್ಕಾರಗಳು ಚುನಾವಣೆಗೆ ಮುನ್ನ "ಉಚಿತ ಕೊಡುಗೆಗಳ" ಜಾಹೀರಾತು ನೀಡುವ ಅಭ್ಯಾಸ ಹೆಚ್ಚುತ್ತಿರುವ ಬಗ್ಗೆ ಸುಪ್ರೀಂ ಕೋರ್ಟ್ ಗುರುವಾರ ಬಲವಾದ ಮೌಖಿಕ ಅವಲೋಕನಗಳನ್ನು ನೀಡಿದೆ. ವಿದ್ಯುತ್ (ತಿದ್ದುಪಡಿ) ನಿಯಮಗಳು, 2024...

ರಾಹುಲ್ ಗಾಂಧಿಗೆ ಕರ್ಣಿ ಸೇನೆಯಿಂದ ಜೀವ ಬೆದರಿಕೆ: ಬಿಜೆಪಿ-ಆರ್‌ಎಸ್‌ಎಸ್ ಜಾಲವೇ ‘ಗೋಡ್ಸೆ ಕಾರ್ಖಾನೆ’ ಎಂದ ಕಾಂಗ್ರೆಸ್

ನವದೆಹಲಿ: ಲೋಕಸಭಾ ಸ್ಪೀಕರ್ ಓಂ ಬಿರ್ಲಾ ವಿರುದ್ಧ ನಡೆದ ಪ್ರತಿಭಟನೆಗೆ ಸಂಬಂಧಿಸಿದಂತೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರಿಗೆ ಕರ್ಣಿ ಸೇನೆ ಜೀವ ಬೆದರಿಕೆ ಹಾಕಿದ್ದು, ಇದು "ಏಕಾಂಗಿ ಸ್ಫೋಟವಲ್ಲ"...