Homeಎಕಾನಮಿಬಡ ಕಾರ್ಮಿಕರ ಪಿಎಫ್‌ ಹಣವನ್ನು ದಾವೂದ್ ಇಬ್ರಾಹಿಂ ಸಹಚರ ಇಕ್ಬಾಲ್ ಮಿರ್ಚಿಗೆ ಕೊಟ್ಟ ಯೋಗಿ ಸರ್ಕಾರ...

ಬಡ ಕಾರ್ಮಿಕರ ಪಿಎಫ್‌ ಹಣವನ್ನು ದಾವೂದ್ ಇಬ್ರಾಹಿಂ ಸಹಚರ ಇಕ್ಬಾಲ್ ಮಿರ್ಚಿಗೆ ಕೊಟ್ಟ ಯೋಗಿ ಸರ್ಕಾರ…

ಉತ್ತರಪ್ರದೇಶದ ಯುಪಿಪಿಸಿಎಲ್ ಕಾರ್ಮಿಕರಿಗೆ ಸೇರಿದ ಒಟ್ಟು 2,600 ಕೋಟಿ ರೂ.ಗಳನ್ನು ದೇಶದ್ರೋಹಿ ದಾವೂದ್ ಇಬ್ರಾಹಿಂ ಅವರ ಸಹಚರ ಇಕ್ಬಾಲ್ ಮಿರ್ಚಿ ಒಡೆತನದ ಡಿಎಚ್‍ಎಫ್‍ಎಲ್‍ನಲ್ಲಿ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಹೂಡಿದ್ದಾರೆ.

- Advertisement -
- Advertisement -

ಕಳೆದ 70 ವರ್ಷದಿಂದ ಅಧಿಕಾರದಲ್ಲಿದ್ದ ಕಾಂಗ್ರೆಸ್ ಸರ್ಕಾರ ಜನಸಾಮಾನ್ಯರ ದುಡ್ಡಿನ ಮೇಲೆ ಮೋಜು-ಮಸ್ತಿ ನಡೆಸಿದೆ ಎಂದು ಆರೋಪಿಸುವ ಪ್ರಧಾನಿ ಮೋದಿ, ಇಲ್ಲಿಯ ಜನಸಾಮಾನ್ಯರು ಎದುರಿಸುತ್ತಿರುವ ದುಃಖ ದುಮ್ಮಾನಗಳ ನಿವಾರಣೆಗೆ ನಿಮ್ಮ ಯೋಜನೆಗಳೇನು ಎಂದು ಕೇಳುವವರಿಗೆ ದೇಶದ್ರೋಹದ ಪಟ್ಟ ಕಟ್ಟುವುದು ಬಹಿರಂಗವಾಗಿ ನಡೆದಿದೆ.

ಮತ್ತೊಂದೆಡೆ, ದೇಶದ್ರೋಹಿಗಳ ನಿಕಟ ಒಡನಾಡಿಯಾದ ವ್ಯಕ್ತಿ-ಸಂಸ್ಥೆಗಳ ವಹಿವಾಟು ಅಭಿವೃದ್ಧಿಗಾಗಿ ಕಾರ್ಮಿಕರ ಭವಿಷ್ಯನಿಧಿಯನ್ನೇ ಒತ್ತೆ ಇಟ್ಟು ದೇಶಾಭಿಮಾನ ಮೆರೆಯುತ್ತಿದೆ. ಭಾರತೀಯ ಸಂತ-ಸಂಸ್ಕೃತಿಯ ನೈಜ ವಾರಸುದಾರ ಎಂಬ ಖ್ಯಾತಿಯ ಯೋಗಿ ಆದಿತ್ಯನಾಥ್ ನೇತೃತ್ವದ ಉತ್ತರಪ್ರದೇಶ ಸರ್ಕಾರದಲ್ಲಿ ನಡೆದಿದೆ. ಕಾರ್ಮಿಕರ ಭವಿಷ್ಯನಿಧಿಯನ್ನು ದೇಶದ್ರೋಹಿ ಒಡನಾಡಿಯ ಅಭಿವೃದ್ಧಿಗೆ ಉದಾರವಾಗಿ ನೀಡಿ, ತಮ್ಮ ದೇಶಾಭಿಮಾನದ ನೈಜ ಸ್ವರೂಪ ತೋರಿದ್ದಾರೆ.

ಉತ್ತರಪ್ರದೇಶದ ವಿದ್ಯುತ್ ನಿಗಮ ನಿಯಮಿತದ (ಯುಪಿಪಿಸಿಎಲ್) ಕಾರ್ಮಿಕರಿಗೆ ಸೇರಿದ ಒಟ್ಟು 2,600 ಕೋಟಿ ರೂ.ಗಳನ್ನು ದೇಶದ್ರೋಹಿ ದಾವೂದ್ ಇಬ್ರಾಹಿಂ ಸಹಚರ ಇಕ್ಬಾಲ್ ಮಿರ್ಚಿ ಪಾಲುದಾರಿಕೆಯ ಡಿಎಚ್‍ಎಫ್‍ಎಲ್‍ನಲ್ಲಿ (ಮಾರ್ಚ್ -2017 ಹಾಗೂ ಡಿಸೆಂಬರ್-2018ರ ಅವಧಿ) ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಹೂಡಿದ್ದಾರೆ.

ಮುಂಬೈ ಮೂಲದ ಈ ವಿವಾದಿತ ಕಂಪನಿಯಲ್ಲಿ ಬಂಡವಾಳ ಹೂಡಲು ಕಾರ್ಮಿಕರ ಭವಿಷ್ಯ ನಿದಿಯೇ ಬೇಕಿತ್ತೆ? ಅದೂ, ದೇಶದ್ರೋಹಿ ದಾವೂದ್ ಇಬ್ರಾಹಿಂ ಸಹಚರನಾಗಿದ್ದ ಇಕ್ಬಾಲ್ ಮಿರ್ಚಿ ಒಡೆತನದ ಸಂಸ್ಥೆಗೆ ಎಂಬುದೀಗ ಚರ್ಚೆಯ ವಸ್ತುವಾಗುತ್ತಿದೆ.

ಆರ್ಥಿಕ ದುರುಪಯೋಗದ ಗಂಭೀರ ಪ್ರಕರಣವಲ್ಲವೆ?
ಉತ್ತರಪ್ರದೇಶ ವಿದ್ಯುತ್ ನಿಗಮ ನಿಯಮಿತದ ಕಾರ್ಮಿಕರ 2,600 ಕೋಟಿ ರೂ.ಗಳಷ್ಟು ಭವಿಷ್ಯ ನಿಧಿಯನ್ನು ಬೇರೆ ಉದ್ದೆಶಗಳಿಗಾಗಿ ಬಳಸುವುದು ಅಪರಾಧ. ಯೋಗಿ ಆದಿತ್ಯನಾಥ ಸರ್ಕಾರದ ಕಾರ್ಮಿಕರಿಗೆ ಸೇರಿದ ಹಾಗೂ ಪ್ರಧಾನಿ ಮೋದಿ ನೇತೃತ್ವದ ಕೇಂದ್ರ ಸರ್ಕಾರ ಸ್ವಾಮ್ಯದ ಭವಿಷ್ಯ ನಿದಿ-ಇಷ್ಟೊಂದು ಭಾರಿ ಮೊತ್ತದ ಹಣವನ್ನು ವಿವಾದಿತ ಕಂಪನಿಯೊಂದರಲ್ಲಿ ಹೂಡಿರುವುದು ಹತ್ತು ಹಲವು ಸಂಶಯಗಳಿಗೆ ಕಾರಣವಾಗುತ್ತಿದೆ.

ದೇಶಾಭಿಮಾನಿ ಮುಖ್ಯಮಂತ್ರಿ ಹಾಗೂ ದೇಶದ್ರೋಹಿಯ ಒಡನಾಡಿಯೊಬ್ಬರ ಒಡೆತನದ ಕಂಪನಿಯೊಂದಿಗಿರುವ ಸಂಬಂಧವೂ ಈಗ ಪ್ರಶ್ನಾರ್ಹವಾಗುತ್ತಿದೆ.

ತನಿಖೆ ಆರಂಭವೇ ಭ್ರಷ್ಟಾಚಾರಕ್ಕೆ ಸಾಕ್ಷಿ
ಓತಿಕಾಟಕ್ಕೆ ಬೇಲಿ ಸಾಕ್ಷಿ ಎಂಬಂತೆ, ಉತ್ತರಪ್ರದೇಶ ಸರಕಾರದ (ಇಂಧನ) ಪ್ರಧಾನ ಕಾರ್ಯದರ್ಶಿ ಅಲೋಕಕುಮಾರ್, ಪ್ರಕರಣದ ವಿರುದ್ಧ ತನಿಖೆಗೆ ಆದೇಶಿಸಿದ್ದಾರೆ. ಯೋಗಿ ಆದಿತ್ಯನಾಥ್ ಸರ್ಕಾರದಲ್ಲಿ ಭ್ರಷ್ಟಾಚಾರ ನಡೆದಿದೆ ಎಂಬುದಕ್ಕೆ ಸಾಕ್ಷಿ ನುಡಿಯುತ್ತಿದೆ.

ಈಗಾಗಲೇ, ವಿದ್ಯುತ್ ವಲಯ ಕಾರ್ಮಿಕರ ಟ್ರಸ್ಟ್ ಪ್ರಧಾನ ವ್ಯವಸ್ಥಾಪಕ ಪಿ.ಕೆ.ಗುಪ್ತಾ ಅವರನ್ನು ಅಮಾನತುಗೊಳಿಸಿದ್ದು, ಪ್ರಕರಣದ ವಿರುದ್ಧ ಕಾನೂನು ಕ್ರಮ ಜರುಗಿಸಲು ಇಂಧನ ವಿಭಾಗ ನಿರ್ದೇಶಕ ಸುಧೀರ್ ಆರ್ಯ ಅವರಿಗೆ ಸೂಚಿಸಿದ್ದಾರೆ.

ಹೂಡಿಕೆ ವಾಪಸಾತಿಗೆ ಹೆಚ್ಚಿದ ಒತ್ತಡ
ಮತ್ತೊಂದು ಕಂಪನಿಯ ನೆರಳಲ್ಲಿ ಬೆಳೆಯುವ ಕಂಪನಿಯೊಂದಕ್ಕೆ ಪೂರ್ವಾಪರ ತಿಳಿಯದೇ ಕಾರ್ಮಿಕರ ಸಾವಿರಾರು ಕೋಟಿ ರೂ.ಗಳ ಭವಿಷ್ಯ ನಿಧಿ ಹೂಡಿದ್ದನ್ನು ಪ್ರಶ್ನಿಸಿದ್ದು ಮಾತ್ರವಲ್ಲ; ಬಂಡವಾಳ ಹೂಡಿಕೆಯನ್ನು ವಾಪಸ್ ಪಡೆಯಲು ಉತ್ತರಪ್ರದೇಶ ರಾಜ್ಯ ವಿದ್ಯುತ್ ಮಂಡಳಿಯ ಎಂಜಿನಿಯರರ ಸಂಸ್ಥೆಯು (ಯುಪಿಎಸ್‍ಇಬಿಇಎ) ಮುಖ್ಯಮಂತ್ರಿ ಯೋಗಿ ಆದಿತ್ಯನಾಥ ಅವರಿಗೆ ಪತ್ರ ಬರೆದು ಆಗ್ರಹಿಸಿದೆ.

ಸುಮಾರು 2600 ಕೋಟಿ ರೂ.ಗಳಿಗೂ ಅಧಿಕ ಹಣ ಡಿ.ಎಚ್.ಎಫ್.ಎಲ್ ನಲ್ಲಿದೆ. ಅದನ್ನು ಮರಳಿ ಪಡೆಯಬೇಕು. ಮಾತ್ರವಲ್ಲ ಪ್ರಧಾನ ಪ್ರಾವಿಡೆಂಟ್ ಫಂಡ್ (ಜಿಪಿಎಫ್) ಹಾಗೂ ಕಾಂಟ್ರಿಬ್ಯೂಟರಿ ಪ್ರಾವಿಡೆಂಟ್ ಫಂಡ್ (ಸಿಪಿಎಫ್) ಟ್ರಸ್ಟ್ ನಿಂದ ಇನ್ನು ಮುಂದೆ ಇಂತಹ ಖಾಸಗಿ ಸಂಸ್ಥೆಗಳಿಗೆ ಹಣ ಹೂಡುವುದಿಲ್ಲ ಎಂಬ ಬಗ್ಗೆ ಭರವಸೆ ನೀಡುವಂತೆ ಯುಪಿಎಸ್‍ಇಬಿಇಎ ಪ್ರಧಾನ ಕಾರ್ಯದರ್ಶಿ ರಾಜೀವ್ ಕುಮಾರ್ ಮುಖ್ಯಮಂತ್ರಿ ಯೋಗಿ ಅವರನ್ನು ಇಕ್ಕಟ್ಟಿನಲ್ಲಿ ಸಿಲುಕಿಸಿದ್ದಾರೆ.

ಅಲ್ಲದೇ, 2017ರ ಮಾರ್ಚ್‍ನಿಂದ2018-ಡಿಸೆಂಬರ್ ವರೆಗೆ ಡಿ.ಎಚ್.ಎಫ್‍.ಎಲ್ ನಲ್ಲಿ ವಿದ್ಯುತ್ ಕಾರ್ಮಿಕರ ಭವಿಷ್ಯ ನಿಧಿಯನ್ನು ಠೇವಣಿಯಾಗಿ ಇರಿಸಲಾಗಿದೆ. ಡಿಎಚ್‍ಎಫ್‍ಎಲ್ ಕಂಪನಿಯು ಇತರೆ ಖಾಸಗಿ ವಿವಾದಿತ ಕಂಪನಿಗಳೊಂದಿಗೆ ನಡೆಸುವ ವ್ಯಾಪಾರ-ವಹಿವಾಟುಗಳ ಹಿನ್ನೆಲೆಯಲ್ಲಿ ಮುಂಬೈ ಹೈಕೋರ್ಟ್ ಸಹ ಪ್ರಕರಣವೊಂದರಲ್ಲಿ ತಡೆಯಾಜ್ಞೆ ನೀಡಿದೆ.

ಸುಮಾರು 2,600 ಕೋಟಿ ರೂ.ಗಳಿಗೂ ಅಧಿಕ ಹಣ ಡಿಎಚ್‍ಎಫ್‍ಎಲ್ ನಲ್ಲಿದೆ ಎಂದು ಟ್ರಸ್ಟ್ ಕಾರ್ಯದರ್ಶಿ ಹೇಳುತ್ತಾರೆ. ಕಾರ್ಮಿಕರಿಗೆ ಸೇರಿದ ಭವಿಷ್ಯನಿಧಿಯು ಖಾಸಗಿ ಕಂಪನಿಯ ವ್ಯವಹಾರಕ್ಕೆ ವರ್ಗಾಯಿಸುವುದು ಗಂಭೀರ ಅಪರಾಧ. ಕಾರ್ಮಿಕರ ಸೇವಾ ನಿವೃತ್ತಿಯ ನಂತರ ಈ ಭವಿಷ್ಯನಿಧಿ ಅವರನ್ನು ಕಾಪಾಡುತ್ತದೆ. ಇಂತಹ ಹಣವನ್ನು ಖಾಸಗಿ ಕಂಪನಿಗೆ ನೀಡುವುದು ಎಷ್ಟು ಸರಿ ಎಂದು ಸಂಸ್ಥೆಯ ಎಂಜಿನಿಯರರು ಪ್ರಶ್ನಿಸುತ್ತಿದ್ದಾರೆ.

ಇನ್ನು ಈ ಕುರಿತು ಕಾಂಗ್ರೆಸ್‌ ನಾಯಕಿ ಪ್ರಿಯಾಂಕ ಗಾಂಧಿ ಕೂಡ ಟ್ವೀಟ್‌ ಮಾಡಿ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಪಾರದರ್ಶಕ ಆಡಳಿತಕ್ಕೆ ಸವಾಲು
ತಮ್ಮ ಕಣ್ಣು ತಪ್ಪಿಸಿ ಪ್ರಕರಣ ನಡೆದಿದೆ ಎನ್ನುವುದಾದರೆ ತನಿಖೆ ತೀವ್ರಗೊಳಿಸಲಿ ಎಂದು ಅಖಿಲ ಭಾರತ ವಿದ್ಯುತ್ ಎಂಜಿನಿಯರರ ಒಕ್ಕೂಟದ ಅಧ್ಯಕ್ಷ ಶೈಲೇಂದ್ರ ದುಬೆ ಅವರು ಮುಖ್ಯಮಂತ್ರಿ ಯೋಗಿ ಆದಿತ್ಯನಾಥ ಅವರ ಪಾರದರ್ಶಕ ಆಡಳಿತಕ್ಕೆ ಸವಾಲು ಹಾಕಿದ್ದಾರೆ. ಖಾಸಗಿ ಕಂಪನಿಗೆ ಹೂಡಿದ ಹಣವನ್ನು ಶೀಘ್ರವೇ ವಾಪಸ್ ಪಡೆಯಬೇಕು. ಯಾರ ಆದೇಶದ ಮೇರೆಗೆ ಮಂಡಳಿಯು ಕಾರ್ಮಿಕರ ಭವಿಷ್ಯನಿಧಿಯನ್ನು ಖಾಸಗಿ ಕಂಪನಿಯಲ್ಲಿ ಹೂಡಲು ನಿರ್ಧರಿಸಿತು?. ಮಂಡಳಿಯು ಬಹುದೊಡ್ಡ ತಪ್ಪು ಮಾಡಿದೆ. ಬಹುಕೋಟಿ ರೂ.ಗಳ ಹಗರಣ ಇದಾಗಲಿದೆ. ತನಿಖೆಯ ಮೂಲಕವೇ ಬಯಲಿಗೆಳೆಯಬೇಕು ಎಂದು ಆಗ್ರಹಿಸಿದ್ದಾರೆ.

ದುಬೈಯ ವಿವಾದಿತ “ಮಿರ್ಚಿ’ ಸಂಪರ್ಕ
ಭೂ ಅಕ್ರಮಗಳಿಗೆ ಸಂಬಂಧಿಸಿದಂತೆ ದೇಶದ್ರೋಹಿ ಹಾಗೂ ಭೂಗತ ಪಾತಕಿ ದಾವೂದ್ ಇಬ್ರಾಹಿಂನ ವ್ಯವಹಾರಗಳು ಬಯಲಿಗೆ ಬರುತ್ತಿದ್ದಂತೆ, ಜಾರಿ ನಿರ್ದೇಶನಾಲಯವು ಡಿ.ಎಚ್.ಎಫ್.ಎಲ್ ಸನ್ ಬ್ಲಿಂಕ್ ರಿಯಲ್ ಎಸ್ಟೇಟ್ ಸಂಸ್ಥೆಗಳ ವಹಿವಾಟುಗಳನ್ನು ಪರಿಶೀಲಿಸಿ ತನಿಖೆಗೆ ಒಳಪಡಿಸಿತ್ತು. ಈ ವಹಿವಾಟುಗಳಿಂದ ದುಬೈಯಲ್ಲಿರುವ “ಮಿರ್ಚಿ’ ಸಂಸ್ಥೆಯ ಮೂಲಕವೇ ದಾವೂದ್ ಗುಂಪಿಗೆ ಹಣ ರವಾನೆಯಾಗುತ್ತಿತ್ತು.
ಡಿ.ಎಚ್.ಎಫ್.ಎಲ್ ಸಂಸ್ಥೆಯ ಅಧ್ಯಕ್ಷ ಕಪಿಲ್ ವಾಧವನ್ ಹಾಗೂ ಆತನ ಸಹೋದರ ಧೀರಜ್ ಅವರನ್ನು ಇತ್ತೀಚೆಗೆ ಜಾರಿ ನಿರ್ದೇಶನಾಲಯವು ವಿಚಾರಣೆಗೆ ಒಳಪಡಿಸಿ, ರಿಯಲ್ ಎಸ್ಟೇಟ್ ಸಂಸ್ಥೆಗಳಿಗೆ ಸುಮಾರು 2186 ಕೋಟಿ ರೂ.ಗಳ ಸಾಲ ನೀಡಿದ್ದರ ಬಗ್ಗೆ ಪ್ರಶ್ನಿಸಿತ್ತು.

ಕಾರ್ಮಿಕರ ಭವಿಷ್ಯ ನಿಧಿಯನ್ನು ಖಾಸಗಿ ಕಂಪನಿಗೆ ಅದರಲ್ಲೂ ವಿವಾದಿತ ಕಂಪನಿಯಲ್ಲಿ ತೊಡಗಿಸಿದ ಉತ್ತರಪ್ರದೇಶ ಸರ್ಕಾರ ಗಂಭೀರ ಅಪರಾಧ ಎಸಗಿದ್ದು ಮೇಲ್ನೋಟಕ್ಕೆ ಸಾಬೀತಾಗುತ್ತದೆ. ಕೋಟ್ಯಂತರ ರೂ.ಗಳ ದುರುಪಯೋಗಕ್ಕೆ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ ಉತ್ತರಿಸಬೇಕು ಎಂಬ ಆಗ್ರಹ ಹೆಚ್ಚುತ್ತಿದೆ.
(ಮಾಹಿತಿ ಮೂಲ: ನ್ಯಾಷನಲ್ ಹೆರಾಲ್ಡ್)

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸಂವಿಧಾನದ ಬುಡಕ್ಕೆ ಕೊಡಲಿ ಏಟು: ಆರ್‌ಎಸ್‌ಎಸ್-ಬಿಜೆಪಿಯ ಷಡ್ಯಂತ್ರ ಸೋಲಿಸಲು ಎರಡನೇ ಸ್ವಾತಂತ್ರ್ಯ ಸಂಗ್ರಾಮ ಅನಿವಾರ್ಯ – ಬಿ.ಕೆ. ಹರಿಪ್ರಸಾದ್

ಎಸ್‌ಐಆರ್ (SIR) ವಿರೋಧಿ ಹೋರಾಟದಲ್ಲಿ ನಮ್ಮ ಪಕ್ಷ ನಿಮ್ಮ ಜೊತೆಗಿದೆ ಎಂದು ಹೇಳಲು ಸರ್ಕಾರದ ಪ್ರತಿನಿಧಿಯಾಗಿ ನಾನು ಇಲ್ಲಿ ಬಂದಿದ್ದೇನೆ. ನೀವು ಮಂಡಿಸಿರುವ ಹಕ್ಕೊತ್ತಾಯಗಳ ಕುರಿತು ನೂತನ ಮುಖ್ಯಮಂತ್ರಿಗಳು, ಸಿದ್ದರಾಮಯ್ಯ ಸೇರಿದಂತೆ ಪಕ್ಷದ...

ಮತದಾರರ ಪಟ್ಟಿಯಿಂದ 65 ಲಕ್ಷ ಜನರನ್ನು ಹೊರಹಾಕಿದ್ದು ಯಾರು? ಈ ಅಕ್ರಮಕ್ಕೆ ಚುನಾವಣಾ ಆಯೋಗವೇ ಉತ್ತರಿಸಬೇಕು: ಮೊಹಮ್ಮದ್ ಯೂಸುಫ್ ಕನ್ನಿ

"ಬ್ರಿಟಿಷರ ವಿರುದ್ಧ ಹೋರಾಡಿ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟಿದ್ದೇವೆ. 1952ರ ಮೊದಲ ಚುನಾವಣೆಯ ಸಂದರ್ಭದಲ್ಲಿ ಸುಮಾರು 17.32 ಕೋಟಿ ಮತದಾರರಿದ್ದರು. 1955ರಲ್ಲಿ ಸಿಟಿಜನ್‌ಶಿಪ್ ಆಕ್ಟ್ ಜಾರಿಯಾದ ಬಳಿಕ ನಡೆದ 1957ರ ಚುನಾವಣೆಯಲ್ಲಿ ಈ ಸಂಖ್ಯೆ...

ಸರ್ಕಾರ-ನ್ಯಾಯಾಂಗ ವ್ಯವಸ್ಥೆ ಕೈಬಿಟ್ಟರೆ ರಾಜ್ಯದ ಜನ ಅನಾಥರಾಗುತ್ತಾರೆ : ಹಿರಿಯ ಸಾಹಿತಿ ಬಿ.ಟಿ. ಲಲಿತಾ ನಾಯ್ಕ್

ಎಸ್‌ಐಆರ್‌ ವಿಚಾರದಲ್ಲಿ ಇಂದು ನಾಡಿನ ಜನತೆ ಭೀಕರ ಸಂಕಷ್ಟದಲ್ಲಿದ್ದಾರೆ. ಈ ಗೊಂದಲವನ್ನು ಉಂಟು ಮಾಡಿದವರು ಯಾರು? ಕೇಂದ್ರ ಸರ್ಕಾರವೋ ಅಥವಾ ಕರ್ನಾಟಕ ಸರ್ಕಾರದ ಅಲಕ್ಷ್ಯ ಇದಕ್ಕೆ ಕಾರಣವೇ? ಅಥವಾ ನಮಗೆ ಸಂಬಂಧವೇ ಇಲ್ಲ...

ಎಸ್ಐಆರ್ ಹೆಸರಿನಲ್ಲಿ ನಡೆಯುತ್ತಿರುವ ಜನವಿರೋಧಿ ಹುನ್ನಾರಗಳನ್ನು ಸೋಲಿಸಬೇಕಿದೆ: ಎಸ್. ವರಲಕ್ಷ್ಮಿ

ಬೆಂಗಳೂರು: ರಾಜ್ಯಾದ್ಯಂತ ಎಸ್ಐಆರ್ (SIR) ವಿರುದ್ಧ ನಡೆಯುತ್ತಿರುವ ಸಮಾವೇಶವು ಆಕ್ರಮಣಕಾರಿ ಧೋರಣೆಯ ವಿರುದ್ಧದ ಬೃಹತ್ ಪ್ರತಿರೋಧವಾಗಿದೆ ಎಂದು ಸಿಐಟಿಯು ರಾಜ್ಯ ಪ್ರಧಾನ ಕಾರ್ಯದರ್ಶಿ ಎಸ್. ವರಲಕ್ಷ್ಮಿ ತಿಳಿಸಿದರು. ಎಸ್ಐಆರ್ ಸಮಸ್ಯೆಯಲ್ಲ ಎಂದು ಬಿಂಬಿಸುವ ಸಂಘಪರಿವಾರದವರ...

ಮತದಾನ ನಮ್ಮ ಜನ್ಮಸಿದ್ದ ಹಕ್ಕು, ಎಸ್‌ಐಆರ್ ಕುರಿತು ಜನ ಜಾಗೃತಿ ಅಗತ್ಯ: ಪೀಟರ್ ಮಚಾಡೋ

'ಮತದಾನ ನಮ್ಮ ಜನ್ಮಸಿದ್ದ ಹಕ್ಕು ಅದನ್ನು ನಾವು ಬಿಟ್ಟು ಕೊಡುವುದಿಲ್ಲ' ಎಂದು ಕರ್ನಾಟಕ ಕ್ರೈಸ್ತ ಸಮುದಾಯದ ಮಹಾ ಧರ್ಮಾಧ್ಯಕ್ಷ ರೆವೆಂಡರ್ ಫಾದರ್ ಪೀಟರ್ ಮಚಾಡೋ ಹೇಳಿದರು. ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ...

ಸುರಿವ ಮಳೆಯಲ್ಲಿಯೂ ಎಸ್‌ಐಆರ್ ವಿರೋಧಿ ಜಾಥಾಕ್ಕೆ ಜೊತೆಯಾದ ಮಳವಳ್ಳಿ, ಮದ್ದೂರು, ಮಂಡ್ಯ ಜನತೆ

ಮಂಡ್ಯ: ಮಳವಳ್ಳಿಯ ಬಸ್ ನಿಲ್ದಾಣದ ಬಳಿ ಸುರಿವ ಮಳೆಯಲ್ಲಿಯೂ 'ಎಸ್‌ಐಆರ್ (SIR) ವಿರೋಧಿ ಕರ್ನಾಟಕ' ಜಾಥಾಕ್ಕೆ ಹೋರಾಟಗಾರರು, ಬರಹಗಾರರು, ಜನಚಳವಳಿಗಳ ಮುಖಂಡರು ಹಾಗೂ ಪ್ರಗತಿಪರರು ಬೆಂಬಲ ವ್ಯಕ್ತಪಡಿಸಿದರು‌. ಈ ವೇಳೆ ಎಸ್‌ಐಆರ್ ಕುರಿತು ಮಾತನಾಡಿದ...

ಚಿತ್ರದುರ್ಗದಲ್ಲಿ ಸಮಾರೋಪಗೊಂಡ ಮಾರ್ಗ -3 SIR ವಿರೋಧಿ ಜನಜಾಗೃತಿ ಜಾಥ: ಜೂನ್ 20ರ ಸಮಾವೇಶದ ಯಶಸ್ಸಿಗೆ ಕರೆ

ಚುನಾವಣಾ ಆಯೋಗ ಜಾರಿಗೆ ತರಲು ಹೊರಟಿರುವ ಎಸ್‌ಐಆರ್ (SIR) ವ್ಯವಸ್ಥೆಯನ್ನು ವಿರೋಧಿಸಿ ಹಮ್ಮಿಕೊಳ್ಳಲಾಗಿದ್ದ ‘ಎಸ್‌ಐಆರ್ ವಿರೋಧಿ ಜನಜಾಗೃತಿ ಜಾಥಾ’ವು ದಾವಣಗೆರೆಯಲ್ಲಿ ಪ್ರಚಾರ ಮುಗಿಸಿ ಚಿತ್ರದುರ್ಗವನ್ನು ತಲುಪಿದ್ದು, ಇಲ್ಲಿ ಯಶಸ್ವಿಯಾಗಿ ಸಮಾರೋಪಗೊಂಡಿದೆ. ಎದ್ದೇಳು ಕರ್ನಾಟಕ,...

ಗದಗ | ಮನುವಾದದ ಜಾರಿಗೆ ಎಸ್‌ಐಆರ್‌ ಹೇರಿಕೆ : ಡಾ.ಇಸಾಬೆಲ್ಲ ಝೇವಿಯರ್

ದೇಶದಲ್ಲಿ ಮನುವಾದ ಜಾರಿಗೆ ತರುವುದು ಆರ್‌ಎಸ್‌ಎಸ್‌-ಸಂಘಪರಿವಾರದ ಮೂಲ ಉದ್ದೇಶ, ಅದಕ್ಕಾಗಿ ಜನರ ಮೇಲೆ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಯಂತಹ ಹೊಸ ಹೊಸ ಪ್ರಕ್ರಿಯೆಗಳನ್ನು ಹೇರಲಾಗುತ್ತಿದೆ ಎಂದು ಸಾಮಾಜಿಕ ಹೋರಾಟಗಾರ್ತಿ...

ಸಂವಿಧಾನ ವಿರೋಧಿ ‘SIR’ಗೆ ಹರಿಹರದಲ್ಲಿ ತೀವ್ರ ವಿರೋಧ: ಜನಜಾಗೃತಿ ಜಾಥಾದ ಮೂಲಕ ಕೇಂದ್ರ ಸರ್ಕಾರದ ವಿರುದ್ಧ ನಾಗರಿಕರ ಆಕ್ರೋಶ

ದಾವಣಗೆರೆ ಜಿಲ್ಲೆಯ ಹರಿಹರ ತಾಲ್ಲೂಕಿನಲ್ಲಿ ಇತ್ತೀಚೆಗೆ ಕೇಂದ್ರ ಚುನಾವಣಾ ಆಯೋಗದ 'SIR' (ವಿಶೇಷ ಗುರುತಿನ ಪರಿಶೀಲನೆ/ಮರುಪರಿಶೀಲನಾ ಕ್ರಮ) ಯೋಜನೆ ವಿರುದ್ಧ ಬೃಹತ್ ಜನಜಾಗೃತಿ ಜಾಥಾ ಯಶಸ್ವಿಯಾಗಿ ಸಂಚರಿಸಿತು. ಸಾರ್ವಜನಿಕರಲ್ಲಿ ಈ ಯೋಜನೆಯ ಕುರಿತು...

“ಎಸ್ಐಆರ್ ಮೂಲಕ ಮನುವಾದದ ಜಾರಿಗೆ ಕುತಂತ್ರ ರೂಪಿಸುತ್ತಿರುವ ಬಿಜೆಪಿ ಗೆಲ್ಲಲು ಬಿಡುವುದಿಲ್ಲ”:  ಮೈಸೂರಿನಲ್ಲಿ ಜನಾಕ್ರೋಶ

2026 ಜೂನ್ 16 ರಂದು ಹುಣುಸೂರು, ಹೆಚ್.ಡಿ ಕೋಟೆ, ಮೈಸೂರಿನಲ್ಲಿ ಸಾಗಿದ ಎಸ್ಐಆರ್ ವಿರೋಧಿ ಕರ್ನಾಟಕ ಜಾಥಾಕ್ಕೆ ಹುಣುಸೂರಿನ ಸಂವಿಧಾನ ಸರ್ಕಲ್ ನಿಂದ ಅಭೂತಪೂರ್ವ ಬೆಂಬಲ ಸಿಕ್ಕಿತು. ಬೆಳಗ್ಗೆ 8 ಗಂಟೆ ಸುಮಾರಿಗೆ ಎಸ್ಐಆರ್...