Homeಎಕಾನಮಿಬಡ ಕಾರ್ಮಿಕರ ಪಿಎಫ್‌ ಹಣವನ್ನು ದಾವೂದ್ ಇಬ್ರಾಹಿಂ ಸಹಚರ ಇಕ್ಬಾಲ್ ಮಿರ್ಚಿಗೆ ಕೊಟ್ಟ ಯೋಗಿ ಸರ್ಕಾರ...

ಬಡ ಕಾರ್ಮಿಕರ ಪಿಎಫ್‌ ಹಣವನ್ನು ದಾವೂದ್ ಇಬ್ರಾಹಿಂ ಸಹಚರ ಇಕ್ಬಾಲ್ ಮಿರ್ಚಿಗೆ ಕೊಟ್ಟ ಯೋಗಿ ಸರ್ಕಾರ…

ಉತ್ತರಪ್ರದೇಶದ ಯುಪಿಪಿಸಿಎಲ್ ಕಾರ್ಮಿಕರಿಗೆ ಸೇರಿದ ಒಟ್ಟು 2,600 ಕೋಟಿ ರೂ.ಗಳನ್ನು ದೇಶದ್ರೋಹಿ ದಾವೂದ್ ಇಬ್ರಾಹಿಂ ಅವರ ಸಹಚರ ಇಕ್ಬಾಲ್ ಮಿರ್ಚಿ ಒಡೆತನದ ಡಿಎಚ್‍ಎಫ್‍ಎಲ್‍ನಲ್ಲಿ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಹೂಡಿದ್ದಾರೆ.

- Advertisement -
- Advertisement -

ಕಳೆದ 70 ವರ್ಷದಿಂದ ಅಧಿಕಾರದಲ್ಲಿದ್ದ ಕಾಂಗ್ರೆಸ್ ಸರ್ಕಾರ ಜನಸಾಮಾನ್ಯರ ದುಡ್ಡಿನ ಮೇಲೆ ಮೋಜು-ಮಸ್ತಿ ನಡೆಸಿದೆ ಎಂದು ಆರೋಪಿಸುವ ಪ್ರಧಾನಿ ಮೋದಿ, ಇಲ್ಲಿಯ ಜನಸಾಮಾನ್ಯರು ಎದುರಿಸುತ್ತಿರುವ ದುಃಖ ದುಮ್ಮಾನಗಳ ನಿವಾರಣೆಗೆ ನಿಮ್ಮ ಯೋಜನೆಗಳೇನು ಎಂದು ಕೇಳುವವರಿಗೆ ದೇಶದ್ರೋಹದ ಪಟ್ಟ ಕಟ್ಟುವುದು ಬಹಿರಂಗವಾಗಿ ನಡೆದಿದೆ.

ಮತ್ತೊಂದೆಡೆ, ದೇಶದ್ರೋಹಿಗಳ ನಿಕಟ ಒಡನಾಡಿಯಾದ ವ್ಯಕ್ತಿ-ಸಂಸ್ಥೆಗಳ ವಹಿವಾಟು ಅಭಿವೃದ್ಧಿಗಾಗಿ ಕಾರ್ಮಿಕರ ಭವಿಷ್ಯನಿಧಿಯನ್ನೇ ಒತ್ತೆ ಇಟ್ಟು ದೇಶಾಭಿಮಾನ ಮೆರೆಯುತ್ತಿದೆ. ಭಾರತೀಯ ಸಂತ-ಸಂಸ್ಕೃತಿಯ ನೈಜ ವಾರಸುದಾರ ಎಂಬ ಖ್ಯಾತಿಯ ಯೋಗಿ ಆದಿತ್ಯನಾಥ್ ನೇತೃತ್ವದ ಉತ್ತರಪ್ರದೇಶ ಸರ್ಕಾರದಲ್ಲಿ ನಡೆದಿದೆ. ಕಾರ್ಮಿಕರ ಭವಿಷ್ಯನಿಧಿಯನ್ನು ದೇಶದ್ರೋಹಿ ಒಡನಾಡಿಯ ಅಭಿವೃದ್ಧಿಗೆ ಉದಾರವಾಗಿ ನೀಡಿ, ತಮ್ಮ ದೇಶಾಭಿಮಾನದ ನೈಜ ಸ್ವರೂಪ ತೋರಿದ್ದಾರೆ.

ಉತ್ತರಪ್ರದೇಶದ ವಿದ್ಯುತ್ ನಿಗಮ ನಿಯಮಿತದ (ಯುಪಿಪಿಸಿಎಲ್) ಕಾರ್ಮಿಕರಿಗೆ ಸೇರಿದ ಒಟ್ಟು 2,600 ಕೋಟಿ ರೂ.ಗಳನ್ನು ದೇಶದ್ರೋಹಿ ದಾವೂದ್ ಇಬ್ರಾಹಿಂ ಸಹಚರ ಇಕ್ಬಾಲ್ ಮಿರ್ಚಿ ಪಾಲುದಾರಿಕೆಯ ಡಿಎಚ್‍ಎಫ್‍ಎಲ್‍ನಲ್ಲಿ (ಮಾರ್ಚ್ -2017 ಹಾಗೂ ಡಿಸೆಂಬರ್-2018ರ ಅವಧಿ) ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಹೂಡಿದ್ದಾರೆ.

ಮುಂಬೈ ಮೂಲದ ಈ ವಿವಾದಿತ ಕಂಪನಿಯಲ್ಲಿ ಬಂಡವಾಳ ಹೂಡಲು ಕಾರ್ಮಿಕರ ಭವಿಷ್ಯ ನಿದಿಯೇ ಬೇಕಿತ್ತೆ? ಅದೂ, ದೇಶದ್ರೋಹಿ ದಾವೂದ್ ಇಬ್ರಾಹಿಂ ಸಹಚರನಾಗಿದ್ದ ಇಕ್ಬಾಲ್ ಮಿರ್ಚಿ ಒಡೆತನದ ಸಂಸ್ಥೆಗೆ ಎಂಬುದೀಗ ಚರ್ಚೆಯ ವಸ್ತುವಾಗುತ್ತಿದೆ.

ಆರ್ಥಿಕ ದುರುಪಯೋಗದ ಗಂಭೀರ ಪ್ರಕರಣವಲ್ಲವೆ?
ಉತ್ತರಪ್ರದೇಶ ವಿದ್ಯುತ್ ನಿಗಮ ನಿಯಮಿತದ ಕಾರ್ಮಿಕರ 2,600 ಕೋಟಿ ರೂ.ಗಳಷ್ಟು ಭವಿಷ್ಯ ನಿಧಿಯನ್ನು ಬೇರೆ ಉದ್ದೆಶಗಳಿಗಾಗಿ ಬಳಸುವುದು ಅಪರಾಧ. ಯೋಗಿ ಆದಿತ್ಯನಾಥ ಸರ್ಕಾರದ ಕಾರ್ಮಿಕರಿಗೆ ಸೇರಿದ ಹಾಗೂ ಪ್ರಧಾನಿ ಮೋದಿ ನೇತೃತ್ವದ ಕೇಂದ್ರ ಸರ್ಕಾರ ಸ್ವಾಮ್ಯದ ಭವಿಷ್ಯ ನಿದಿ-ಇಷ್ಟೊಂದು ಭಾರಿ ಮೊತ್ತದ ಹಣವನ್ನು ವಿವಾದಿತ ಕಂಪನಿಯೊಂದರಲ್ಲಿ ಹೂಡಿರುವುದು ಹತ್ತು ಹಲವು ಸಂಶಯಗಳಿಗೆ ಕಾರಣವಾಗುತ್ತಿದೆ.

ದೇಶಾಭಿಮಾನಿ ಮುಖ್ಯಮಂತ್ರಿ ಹಾಗೂ ದೇಶದ್ರೋಹಿಯ ಒಡನಾಡಿಯೊಬ್ಬರ ಒಡೆತನದ ಕಂಪನಿಯೊಂದಿಗಿರುವ ಸಂಬಂಧವೂ ಈಗ ಪ್ರಶ್ನಾರ್ಹವಾಗುತ್ತಿದೆ.

ತನಿಖೆ ಆರಂಭವೇ ಭ್ರಷ್ಟಾಚಾರಕ್ಕೆ ಸಾಕ್ಷಿ
ಓತಿಕಾಟಕ್ಕೆ ಬೇಲಿ ಸಾಕ್ಷಿ ಎಂಬಂತೆ, ಉತ್ತರಪ್ರದೇಶ ಸರಕಾರದ (ಇಂಧನ) ಪ್ರಧಾನ ಕಾರ್ಯದರ್ಶಿ ಅಲೋಕಕುಮಾರ್, ಪ್ರಕರಣದ ವಿರುದ್ಧ ತನಿಖೆಗೆ ಆದೇಶಿಸಿದ್ದಾರೆ. ಯೋಗಿ ಆದಿತ್ಯನಾಥ್ ಸರ್ಕಾರದಲ್ಲಿ ಭ್ರಷ್ಟಾಚಾರ ನಡೆದಿದೆ ಎಂಬುದಕ್ಕೆ ಸಾಕ್ಷಿ ನುಡಿಯುತ್ತಿದೆ.

ಈಗಾಗಲೇ, ವಿದ್ಯುತ್ ವಲಯ ಕಾರ್ಮಿಕರ ಟ್ರಸ್ಟ್ ಪ್ರಧಾನ ವ್ಯವಸ್ಥಾಪಕ ಪಿ.ಕೆ.ಗುಪ್ತಾ ಅವರನ್ನು ಅಮಾನತುಗೊಳಿಸಿದ್ದು, ಪ್ರಕರಣದ ವಿರುದ್ಧ ಕಾನೂನು ಕ್ರಮ ಜರುಗಿಸಲು ಇಂಧನ ವಿಭಾಗ ನಿರ್ದೇಶಕ ಸುಧೀರ್ ಆರ್ಯ ಅವರಿಗೆ ಸೂಚಿಸಿದ್ದಾರೆ.

ಹೂಡಿಕೆ ವಾಪಸಾತಿಗೆ ಹೆಚ್ಚಿದ ಒತ್ತಡ
ಮತ್ತೊಂದು ಕಂಪನಿಯ ನೆರಳಲ್ಲಿ ಬೆಳೆಯುವ ಕಂಪನಿಯೊಂದಕ್ಕೆ ಪೂರ್ವಾಪರ ತಿಳಿಯದೇ ಕಾರ್ಮಿಕರ ಸಾವಿರಾರು ಕೋಟಿ ರೂ.ಗಳ ಭವಿಷ್ಯ ನಿಧಿ ಹೂಡಿದ್ದನ್ನು ಪ್ರಶ್ನಿಸಿದ್ದು ಮಾತ್ರವಲ್ಲ; ಬಂಡವಾಳ ಹೂಡಿಕೆಯನ್ನು ವಾಪಸ್ ಪಡೆಯಲು ಉತ್ತರಪ್ರದೇಶ ರಾಜ್ಯ ವಿದ್ಯುತ್ ಮಂಡಳಿಯ ಎಂಜಿನಿಯರರ ಸಂಸ್ಥೆಯು (ಯುಪಿಎಸ್‍ಇಬಿಇಎ) ಮುಖ್ಯಮಂತ್ರಿ ಯೋಗಿ ಆದಿತ್ಯನಾಥ ಅವರಿಗೆ ಪತ್ರ ಬರೆದು ಆಗ್ರಹಿಸಿದೆ.

ಸುಮಾರು 2600 ಕೋಟಿ ರೂ.ಗಳಿಗೂ ಅಧಿಕ ಹಣ ಡಿ.ಎಚ್.ಎಫ್.ಎಲ್ ನಲ್ಲಿದೆ. ಅದನ್ನು ಮರಳಿ ಪಡೆಯಬೇಕು. ಮಾತ್ರವಲ್ಲ ಪ್ರಧಾನ ಪ್ರಾವಿಡೆಂಟ್ ಫಂಡ್ (ಜಿಪಿಎಫ್) ಹಾಗೂ ಕಾಂಟ್ರಿಬ್ಯೂಟರಿ ಪ್ರಾವಿಡೆಂಟ್ ಫಂಡ್ (ಸಿಪಿಎಫ್) ಟ್ರಸ್ಟ್ ನಿಂದ ಇನ್ನು ಮುಂದೆ ಇಂತಹ ಖಾಸಗಿ ಸಂಸ್ಥೆಗಳಿಗೆ ಹಣ ಹೂಡುವುದಿಲ್ಲ ಎಂಬ ಬಗ್ಗೆ ಭರವಸೆ ನೀಡುವಂತೆ ಯುಪಿಎಸ್‍ಇಬಿಇಎ ಪ್ರಧಾನ ಕಾರ್ಯದರ್ಶಿ ರಾಜೀವ್ ಕುಮಾರ್ ಮುಖ್ಯಮಂತ್ರಿ ಯೋಗಿ ಅವರನ್ನು ಇಕ್ಕಟ್ಟಿನಲ್ಲಿ ಸಿಲುಕಿಸಿದ್ದಾರೆ.

ಅಲ್ಲದೇ, 2017ರ ಮಾರ್ಚ್‍ನಿಂದ2018-ಡಿಸೆಂಬರ್ ವರೆಗೆ ಡಿ.ಎಚ್.ಎಫ್‍.ಎಲ್ ನಲ್ಲಿ ವಿದ್ಯುತ್ ಕಾರ್ಮಿಕರ ಭವಿಷ್ಯ ನಿಧಿಯನ್ನು ಠೇವಣಿಯಾಗಿ ಇರಿಸಲಾಗಿದೆ. ಡಿಎಚ್‍ಎಫ್‍ಎಲ್ ಕಂಪನಿಯು ಇತರೆ ಖಾಸಗಿ ವಿವಾದಿತ ಕಂಪನಿಗಳೊಂದಿಗೆ ನಡೆಸುವ ವ್ಯಾಪಾರ-ವಹಿವಾಟುಗಳ ಹಿನ್ನೆಲೆಯಲ್ಲಿ ಮುಂಬೈ ಹೈಕೋರ್ಟ್ ಸಹ ಪ್ರಕರಣವೊಂದರಲ್ಲಿ ತಡೆಯಾಜ್ಞೆ ನೀಡಿದೆ.

ಸುಮಾರು 2,600 ಕೋಟಿ ರೂ.ಗಳಿಗೂ ಅಧಿಕ ಹಣ ಡಿಎಚ್‍ಎಫ್‍ಎಲ್ ನಲ್ಲಿದೆ ಎಂದು ಟ್ರಸ್ಟ್ ಕಾರ್ಯದರ್ಶಿ ಹೇಳುತ್ತಾರೆ. ಕಾರ್ಮಿಕರಿಗೆ ಸೇರಿದ ಭವಿಷ್ಯನಿಧಿಯು ಖಾಸಗಿ ಕಂಪನಿಯ ವ್ಯವಹಾರಕ್ಕೆ ವರ್ಗಾಯಿಸುವುದು ಗಂಭೀರ ಅಪರಾಧ. ಕಾರ್ಮಿಕರ ಸೇವಾ ನಿವೃತ್ತಿಯ ನಂತರ ಈ ಭವಿಷ್ಯನಿಧಿ ಅವರನ್ನು ಕಾಪಾಡುತ್ತದೆ. ಇಂತಹ ಹಣವನ್ನು ಖಾಸಗಿ ಕಂಪನಿಗೆ ನೀಡುವುದು ಎಷ್ಟು ಸರಿ ಎಂದು ಸಂಸ್ಥೆಯ ಎಂಜಿನಿಯರರು ಪ್ರಶ್ನಿಸುತ್ತಿದ್ದಾರೆ.

ಇನ್ನು ಈ ಕುರಿತು ಕಾಂಗ್ರೆಸ್‌ ನಾಯಕಿ ಪ್ರಿಯಾಂಕ ಗಾಂಧಿ ಕೂಡ ಟ್ವೀಟ್‌ ಮಾಡಿ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಪಾರದರ್ಶಕ ಆಡಳಿತಕ್ಕೆ ಸವಾಲು
ತಮ್ಮ ಕಣ್ಣು ತಪ್ಪಿಸಿ ಪ್ರಕರಣ ನಡೆದಿದೆ ಎನ್ನುವುದಾದರೆ ತನಿಖೆ ತೀವ್ರಗೊಳಿಸಲಿ ಎಂದು ಅಖಿಲ ಭಾರತ ವಿದ್ಯುತ್ ಎಂಜಿನಿಯರರ ಒಕ್ಕೂಟದ ಅಧ್ಯಕ್ಷ ಶೈಲೇಂದ್ರ ದುಬೆ ಅವರು ಮುಖ್ಯಮಂತ್ರಿ ಯೋಗಿ ಆದಿತ್ಯನಾಥ ಅವರ ಪಾರದರ್ಶಕ ಆಡಳಿತಕ್ಕೆ ಸವಾಲು ಹಾಕಿದ್ದಾರೆ. ಖಾಸಗಿ ಕಂಪನಿಗೆ ಹೂಡಿದ ಹಣವನ್ನು ಶೀಘ್ರವೇ ವಾಪಸ್ ಪಡೆಯಬೇಕು. ಯಾರ ಆದೇಶದ ಮೇರೆಗೆ ಮಂಡಳಿಯು ಕಾರ್ಮಿಕರ ಭವಿಷ್ಯನಿಧಿಯನ್ನು ಖಾಸಗಿ ಕಂಪನಿಯಲ್ಲಿ ಹೂಡಲು ನಿರ್ಧರಿಸಿತು?. ಮಂಡಳಿಯು ಬಹುದೊಡ್ಡ ತಪ್ಪು ಮಾಡಿದೆ. ಬಹುಕೋಟಿ ರೂ.ಗಳ ಹಗರಣ ಇದಾಗಲಿದೆ. ತನಿಖೆಯ ಮೂಲಕವೇ ಬಯಲಿಗೆಳೆಯಬೇಕು ಎಂದು ಆಗ್ರಹಿಸಿದ್ದಾರೆ.

ದುಬೈಯ ವಿವಾದಿತ “ಮಿರ್ಚಿ’ ಸಂಪರ್ಕ
ಭೂ ಅಕ್ರಮಗಳಿಗೆ ಸಂಬಂಧಿಸಿದಂತೆ ದೇಶದ್ರೋಹಿ ಹಾಗೂ ಭೂಗತ ಪಾತಕಿ ದಾವೂದ್ ಇಬ್ರಾಹಿಂನ ವ್ಯವಹಾರಗಳು ಬಯಲಿಗೆ ಬರುತ್ತಿದ್ದಂತೆ, ಜಾರಿ ನಿರ್ದೇಶನಾಲಯವು ಡಿ.ಎಚ್.ಎಫ್.ಎಲ್ ಸನ್ ಬ್ಲಿಂಕ್ ರಿಯಲ್ ಎಸ್ಟೇಟ್ ಸಂಸ್ಥೆಗಳ ವಹಿವಾಟುಗಳನ್ನು ಪರಿಶೀಲಿಸಿ ತನಿಖೆಗೆ ಒಳಪಡಿಸಿತ್ತು. ಈ ವಹಿವಾಟುಗಳಿಂದ ದುಬೈಯಲ್ಲಿರುವ “ಮಿರ್ಚಿ’ ಸಂಸ್ಥೆಯ ಮೂಲಕವೇ ದಾವೂದ್ ಗುಂಪಿಗೆ ಹಣ ರವಾನೆಯಾಗುತ್ತಿತ್ತು.
ಡಿ.ಎಚ್.ಎಫ್.ಎಲ್ ಸಂಸ್ಥೆಯ ಅಧ್ಯಕ್ಷ ಕಪಿಲ್ ವಾಧವನ್ ಹಾಗೂ ಆತನ ಸಹೋದರ ಧೀರಜ್ ಅವರನ್ನು ಇತ್ತೀಚೆಗೆ ಜಾರಿ ನಿರ್ದೇಶನಾಲಯವು ವಿಚಾರಣೆಗೆ ಒಳಪಡಿಸಿ, ರಿಯಲ್ ಎಸ್ಟೇಟ್ ಸಂಸ್ಥೆಗಳಿಗೆ ಸುಮಾರು 2186 ಕೋಟಿ ರೂ.ಗಳ ಸಾಲ ನೀಡಿದ್ದರ ಬಗ್ಗೆ ಪ್ರಶ್ನಿಸಿತ್ತು.

ಕಾರ್ಮಿಕರ ಭವಿಷ್ಯ ನಿಧಿಯನ್ನು ಖಾಸಗಿ ಕಂಪನಿಗೆ ಅದರಲ್ಲೂ ವಿವಾದಿತ ಕಂಪನಿಯಲ್ಲಿ ತೊಡಗಿಸಿದ ಉತ್ತರಪ್ರದೇಶ ಸರ್ಕಾರ ಗಂಭೀರ ಅಪರಾಧ ಎಸಗಿದ್ದು ಮೇಲ್ನೋಟಕ್ಕೆ ಸಾಬೀತಾಗುತ್ತದೆ. ಕೋಟ್ಯಂತರ ರೂ.ಗಳ ದುರುಪಯೋಗಕ್ಕೆ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ ಉತ್ತರಿಸಬೇಕು ಎಂಬ ಆಗ್ರಹ ಹೆಚ್ಚುತ್ತಿದೆ.
(ಮಾಹಿತಿ ಮೂಲ: ನ್ಯಾಷನಲ್ ಹೆರಾಲ್ಡ್)

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಒಳಮೀಸಲಾತಿ ಇಲ್ಲದೆ 56 ಸಾವಿರ ಹುದ್ದೆಗಳ ನೇಮಕಾತಿ ಇಲ್ಲ: ಸಚಿವ ಮುನಿಯಪ್ಪ

“ಒಳಮೀಸಲಾತಿ ಇಲ್ಲದೆ ಒಂದೇ ಒಂದು ಹುದ್ದೆಯನ್ನೂ ನೇಮಕ ಮಾಡಲು ಬಿಡುವುದಿಲ್ಲ, ಮುಖ್ಯಮಂತ್ರಿಗಳು ಈ ಬಗ್ಗೆ ಒಪ್ಪಿಕೊಂಡಿದ್ದಾರೆ. 27ರಂದು ನಡೆಯುವ ಸಚಿವ ಸಂಪುಟ ಸಭೆ ನಮಗೆ ಚಾರಿತ್ರಿಕವಾಗಲಿದೆ. ಮುಖ್ಯಮಂತ್ರಿಗಳ ಮೇಲೆ ವಿಶ್ವಾಸ ಇರಲಿ” ಎಂದು...

ಪಶ್ಚಿಮ ಏಷ್ಯಾ ಸಂಘರ್ಷ| ‘ಈ ಯುದ್ಧವನ್ನು ಕೊನೆಗೊಳಿಸಲು ಒಂದೇ ಮಾರ್ಗ…’: ಮೂರು ಷರತ್ತುಗಳನ್ನು ಮುಂದಿಟ್ಟ ಇರಾನ್

ಇರಾನ್ ಅಧ್ಯಕ್ಷ ಮಸೌದ್ ಪೆಜೆಶ್ಕಿಯಾನ್ ಅವರು ಅಮೆರಿಕ ಮತ್ತು ಇಸ್ರೇಲ್ ಜೊತೆಗಿನ ನಡೆಯುತ್ತಿರುವ ಸಂಘರ್ಷವನ್ನು ಕೊನೆಗೊಳಿಸಲು ಮೂರು ಷರತ್ತುಗಳನ್ನು ನಿಗದಿಪಡಿಸಿದ್ದಾರೆ. ಇದರಲ್ಲಿ ದೇಶವು ಭವಿಷ್ಯದ ದಾಳಿಗಳನ್ನು ಎದುರಿಸುವುದಿಲ್ಲ ಎಂಬ ಖಾತರಿಗಳು ಸೇರಿವೆ. ಬುಧವಾರ ತಮ್ಮ...

ಖಾಸಗಿ ಜಾಗದ ನಮಾಝ್‌ಗೆ ಅಧಿಕಾರಿಗಳಿಂದ ಅಡ್ಡಿ : ಮುಸ್ಲಿಂ ವ್ಯಕ್ತಿಗೆ ಭದ್ರತೆ ಒದಗಿಸಲು ಕೋರ್ಟ್ ಆದೇಶ

ಉತ್ತರ ಪ್ರದೇಶದ ಬರೇಲಿ ಜಿಲ್ಲೆಯ ಮುಸ್ಲಿಂ ವ್ಯಕ್ತಿಯೊಬ್ಬರು ತಮ್ಮ ಖಾಸಗಿ ಜಾಗದಲ್ಲಿ ಇತರರೊಂದಿಗೆ ನಮಾಝ್ ಮಾಡುವುದಕ್ಕೆ ಅಡ್ಡಿಪಡಿಸಲಾಗಿದೆ ಎಂದು ಆರೋಪಿಸಿದ ಹಿನ್ನೆಲೆ, ಅವರಿಗೆ ದಿನದ 24 ಗಂಟೆಯೂ ರಕ್ಷಣೆ ನೀಡಲು ಇಬ್ಬರು ಭದ್ರತಾ...

‘ಒಳಮೀಸಲಾತಿ ಜಾರಿಗೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಬಿಡುತ್ತಿಲ್ಲ’: ಮಂದಕೃಷ್ಣ ಮಾದಿಗ ಆರೋಪ

‘ಒಳಮೀಸಲಾತಿ ಜಾರಿಗೆ ತರುತ್ತೇವೆಂದು ಹೇಳಿದ್ದ ಕಾಂಗ್ರೆಸ್, ಈಗ ಒಳಮೀಸಲಾತಿ ಅನುಷ್ಠಾನದಲ್ಲಿ ಮೀನಾಮೇಷ ಎಣಿಸುತ್ತಿದೆ. ಕಾಂಗ್ರೆಸ್ ನ ಹೈಕಮಾಂಡ್ ಸೋನಿಯಾ ಗಾಂಧಿ, ರಾಹುಲ್ ಗಾಂಧಿ ಹಾಗೂ ಪ್ರಿಯಾಂಕಾ ಗಾಂಧಿ. ಈ ಮೂವರನ್ನು ನಿಯಂತ್ರಿಸುವವರು ಕಾಂಗ್ರೆಸ್...

ಸಾವರ್ಕರ್ ಕುರಿತು ಹೇಳಿಕೆ : ರಾಹುಲ್ ಗಾಂಧಿ ವಿರುದ್ಧದ ಮಾನನಷ್ಟ ಮೊಕದ್ದಮೆ ರದ್ದು

ಭಾರತ್ ಜೋಡೋ ಯಾತ್ರೆಯ ಸಂದರ್ಭದಲ್ಲಿ (2022ರಲ್ಲಿ) ಹಿಂದುತ್ವ ಸಿದ್ಧಾಂತವಾದಿ ವಿನಾಯಕ ದಾಮೋದರ್ ಸಾವರ್ಕರ್ ಕುರಿತು ನೀಡಿದ್ದ ಹೇಳಿಕೆಗೆ ಸಂಬಂಧಿಸಿದಂತೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿದ್ದ ಮಾನನಷ್ಟ ಮೊಕದ್ದಮೆಯನ್ನು...

‘ಒಳಮೀಸಲಾತಿ ಜಾರಿಯಲ್ಲಿ ಸರ್ಕಾರ ನಿರ್ಲಕ್ಷ್ಯ ಧೋರಣೆ ತೋರಿದರೆ ಹೋರಾಟ ವಿಧಾನಸೌಧಕ್ಕೆ ಸ್ಥಳಾಂತರವಾಗುತ್ತದೆ’: ಮಾದರ ಚೆನ್ನಯ್ಯ ಸ್ವಾಮೀಜಿ

ಕಳೆದ 35 ವರ್ಷಗಳಿಂದ ಹಲವಾರು ಹೋರಾಟಗಾರರು ತಮ್ಮ ಜೀವ-ಜೀವನವನ್ನು ಅರ್ಪಿಸಿ, ಮನೆ-ಮಠವನ್ನು ಬಿಟ್ಟು ಒಳಮೀಸಲಾತಿ ಹೋರಾಟವನ್ನು ಅಂತಿಮ ಘಟ್ಟಕ್ಕೆ ತಂದಿದ್ದಾರೆ. ಅನೇಕರು ಬದುಕನ್ನು ಮಾತ್ರವಲ್ಲ, ಪ್ರಾಣವನ್ನೂ ಕಳೆದುಕೊಂಡಿದ್ದಾರೆ. ಇದು 2ನೇ ಸ್ವಾತಂತ್ರ್ಯ ಹೋರಾಟವಾಗಿದೆ....

ಎಸ್‌ಎನ್‌ಡಿಪಿ ಪ್ರಧಾನ ಕಾರ್ಯದರ್ಶಿ ಹುದ್ದೆಯಿಂದ ವೆಳ್ಳಾಪ್ಪಳ್ಳಿ ನಟೇಶನ್ ಅನರ್ಹ

ಶ್ರೀ ನಾರಾಯಣ ಧರ್ಮ ಪರಿಪಾಲನ ಯೋಗಂ (ಎಸ್‌ಎನ್‌ಡಿಪಿ ಯೋಗಂ) ನ ಪ್ರಧಾನ ಕಾರ್ಯದರ್ಶಿ ಮತ್ತು ಮತ್ತು ಎಸ್‌ಎನ್ ಟ್ರಸ್ಟ್‌ನ ಕಾರ್ಯದರ್ಶಿ ಸ್ಥಾನದಿಂದ ವೆಳ್ಳಾಪ್ಪಳ್ಳಿ ನಟೇಶನ್ ಅವರನ್ನು ಕೇರಳ ಹೈಕೋರ್ಟ್ ಗುರುವಾರ (ಮಾ.12) ಅನರ್ಹಗೊಳಿಸಿದ್ದು,...

‘ಫಾರೂಕ್ ಅಬ್ದುಲ್ಲಾರನ್ನು ಕೊಲ್ಲುವುದು ಸರ್ಕಾರದ ಉದ್ದೇಶವೇ?’..ರಾಜ್ಯ ಸಭೆಯಲ್ಲಿ ಖರ್ಗೆ ಪ್ರಶ್ನೆ

ಜಮ್ಮು ಕಾಶ್ಮೀರದ ಮಾಜಿ ಮುಖ್ಯಮಂತ್ರಿ ಹಾಗೂ ನ್ಯಾಷನಲ್ ಕಾನ್ಫರೆನ್ಸ್ (ಎನ್‌ಸಿ) ಪಕ್ಷದ ಮುಖ್ಯಸ್ಥ ಫಾರೂಕ್ ಅಬ್ದುಲ್ಲಾ ಅವರ ಹತ್ಯೆ ಯತ್ನ ವಿಚಾರವನ್ನು ವಿಪಕ್ಷ ಸದಸ್ಯರು ಗುರುವಾರ (ಮಾ.12) ರಾಜ್ಯಸಭೆಯಲ್ಲಿ ಪ್ರಸ್ತಾಪಿಸಿದರು. ಘಟನೆ ಬಗ್ಗೆ...

56 ಸಾವಿರ ಹುದ್ದೆಗಳ ನೇಮಕಾತಿಯಲ್ಲಿ ಒಳಮೀಸಲಾತಿ ಅನ್ವಯಕ್ಕೆ ಆಗ್ರಹಿಸಿ ಎಡಗೈ ಸಮುದಾಯದಿಂದ ಬೃಹತ್ ಪ್ರತಿಭಟನೆ 

ಸರ್ಕಾರವು ಒಳ ಮೀಸಲಾತಿಯನ್ನು ತಪ್ಪಿಸುವ ಹುನ್ನಾರದಿಂದ ತರಾತುರಿಯಲ್ಲಿ 56,432 ಹುದ್ದೆಗಳ ನೇಮಕಾತಿಗೆ ಆದೇಶ ಹೊರಡಿಸಿದೆ. ನೇಮಕಾತಿಯಲ್ಲಿ ಒಳಮೀಸಲಾತಿ ಅಳವಡಿಸದೆ, ಎಡಗೈ ಸಮುದಾಯಗಳಿಗೆ ಸರ್ಕಾರ ಮತ್ತೆ ವಂಚಿಸುತ್ತಿದೆ ಎಂದು ‘ಒಳಮೀಸಲಾತಿ ಹೋರಾಟ ಸಮಿತಿ’ ಆರೋಪಿಸಿದೆ....

ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧದ ಅವಿಶ್ವಾಸ ನಿರ್ಣಯಕ್ಕೆ ಸೋಲು

ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧ ವಿರೋಧ ಪಕ್ಷಗಳು ಮಂಡಿಸಿದ್ದ ಅವಿಶ್ವಾಸ ನಿರ್ಣಯವು ಬುಧವಾರ (ಮಾ.11) ಧ್ವನಿ ಮತದ ಮೂಲಕ ತಿರಸ್ಕಾರಗೊಂಡಿದೆ. ಸದನದಲ್ಲಿ ವಿರೋಧ ಪಕ್ಷಗಳ ತೀವ್ರ ಗದ್ದಲ ಮತ್ತು ಘೋಷಣೆಗಳ ನಡುವೆಯೇ ಸ್ಪೀಕರ್...