Homeಎಕಾನಮಿಬಡ ಕಾರ್ಮಿಕರ ಪಿಎಫ್‌ ಹಣವನ್ನು ದಾವೂದ್ ಇಬ್ರಾಹಿಂ ಸಹಚರ ಇಕ್ಬಾಲ್ ಮಿರ್ಚಿಗೆ ಕೊಟ್ಟ ಯೋಗಿ ಸರ್ಕಾರ...

ಬಡ ಕಾರ್ಮಿಕರ ಪಿಎಫ್‌ ಹಣವನ್ನು ದಾವೂದ್ ಇಬ್ರಾಹಿಂ ಸಹಚರ ಇಕ್ಬಾಲ್ ಮಿರ್ಚಿಗೆ ಕೊಟ್ಟ ಯೋಗಿ ಸರ್ಕಾರ…

ಉತ್ತರಪ್ರದೇಶದ ಯುಪಿಪಿಸಿಎಲ್ ಕಾರ್ಮಿಕರಿಗೆ ಸೇರಿದ ಒಟ್ಟು 2,600 ಕೋಟಿ ರೂ.ಗಳನ್ನು ದೇಶದ್ರೋಹಿ ದಾವೂದ್ ಇಬ್ರಾಹಿಂ ಅವರ ಸಹಚರ ಇಕ್ಬಾಲ್ ಮಿರ್ಚಿ ಒಡೆತನದ ಡಿಎಚ್‍ಎಫ್‍ಎಲ್‍ನಲ್ಲಿ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಹೂಡಿದ್ದಾರೆ.

- Advertisement -
- Advertisement -

ಕಳೆದ 70 ವರ್ಷದಿಂದ ಅಧಿಕಾರದಲ್ಲಿದ್ದ ಕಾಂಗ್ರೆಸ್ ಸರ್ಕಾರ ಜನಸಾಮಾನ್ಯರ ದುಡ್ಡಿನ ಮೇಲೆ ಮೋಜು-ಮಸ್ತಿ ನಡೆಸಿದೆ ಎಂದು ಆರೋಪಿಸುವ ಪ್ರಧಾನಿ ಮೋದಿ, ಇಲ್ಲಿಯ ಜನಸಾಮಾನ್ಯರು ಎದುರಿಸುತ್ತಿರುವ ದುಃಖ ದುಮ್ಮಾನಗಳ ನಿವಾರಣೆಗೆ ನಿಮ್ಮ ಯೋಜನೆಗಳೇನು ಎಂದು ಕೇಳುವವರಿಗೆ ದೇಶದ್ರೋಹದ ಪಟ್ಟ ಕಟ್ಟುವುದು ಬಹಿರಂಗವಾಗಿ ನಡೆದಿದೆ.

ಮತ್ತೊಂದೆಡೆ, ದೇಶದ್ರೋಹಿಗಳ ನಿಕಟ ಒಡನಾಡಿಯಾದ ವ್ಯಕ್ತಿ-ಸಂಸ್ಥೆಗಳ ವಹಿವಾಟು ಅಭಿವೃದ್ಧಿಗಾಗಿ ಕಾರ್ಮಿಕರ ಭವಿಷ್ಯನಿಧಿಯನ್ನೇ ಒತ್ತೆ ಇಟ್ಟು ದೇಶಾಭಿಮಾನ ಮೆರೆಯುತ್ತಿದೆ. ಭಾರತೀಯ ಸಂತ-ಸಂಸ್ಕೃತಿಯ ನೈಜ ವಾರಸುದಾರ ಎಂಬ ಖ್ಯಾತಿಯ ಯೋಗಿ ಆದಿತ್ಯನಾಥ್ ನೇತೃತ್ವದ ಉತ್ತರಪ್ರದೇಶ ಸರ್ಕಾರದಲ್ಲಿ ನಡೆದಿದೆ. ಕಾರ್ಮಿಕರ ಭವಿಷ್ಯನಿಧಿಯನ್ನು ದೇಶದ್ರೋಹಿ ಒಡನಾಡಿಯ ಅಭಿವೃದ್ಧಿಗೆ ಉದಾರವಾಗಿ ನೀಡಿ, ತಮ್ಮ ದೇಶಾಭಿಮಾನದ ನೈಜ ಸ್ವರೂಪ ತೋರಿದ್ದಾರೆ.

ಉತ್ತರಪ್ರದೇಶದ ವಿದ್ಯುತ್ ನಿಗಮ ನಿಯಮಿತದ (ಯುಪಿಪಿಸಿಎಲ್) ಕಾರ್ಮಿಕರಿಗೆ ಸೇರಿದ ಒಟ್ಟು 2,600 ಕೋಟಿ ರೂ.ಗಳನ್ನು ದೇಶದ್ರೋಹಿ ದಾವೂದ್ ಇಬ್ರಾಹಿಂ ಸಹಚರ ಇಕ್ಬಾಲ್ ಮಿರ್ಚಿ ಪಾಲುದಾರಿಕೆಯ ಡಿಎಚ್‍ಎಫ್‍ಎಲ್‍ನಲ್ಲಿ (ಮಾರ್ಚ್ -2017 ಹಾಗೂ ಡಿಸೆಂಬರ್-2018ರ ಅವಧಿ) ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಹೂಡಿದ್ದಾರೆ.

ಮುಂಬೈ ಮೂಲದ ಈ ವಿವಾದಿತ ಕಂಪನಿಯಲ್ಲಿ ಬಂಡವಾಳ ಹೂಡಲು ಕಾರ್ಮಿಕರ ಭವಿಷ್ಯ ನಿದಿಯೇ ಬೇಕಿತ್ತೆ? ಅದೂ, ದೇಶದ್ರೋಹಿ ದಾವೂದ್ ಇಬ್ರಾಹಿಂ ಸಹಚರನಾಗಿದ್ದ ಇಕ್ಬಾಲ್ ಮಿರ್ಚಿ ಒಡೆತನದ ಸಂಸ್ಥೆಗೆ ಎಂಬುದೀಗ ಚರ್ಚೆಯ ವಸ್ತುವಾಗುತ್ತಿದೆ.

ಆರ್ಥಿಕ ದುರುಪಯೋಗದ ಗಂಭೀರ ಪ್ರಕರಣವಲ್ಲವೆ?
ಉತ್ತರಪ್ರದೇಶ ವಿದ್ಯುತ್ ನಿಗಮ ನಿಯಮಿತದ ಕಾರ್ಮಿಕರ 2,600 ಕೋಟಿ ರೂ.ಗಳಷ್ಟು ಭವಿಷ್ಯ ನಿಧಿಯನ್ನು ಬೇರೆ ಉದ್ದೆಶಗಳಿಗಾಗಿ ಬಳಸುವುದು ಅಪರಾಧ. ಯೋಗಿ ಆದಿತ್ಯನಾಥ ಸರ್ಕಾರದ ಕಾರ್ಮಿಕರಿಗೆ ಸೇರಿದ ಹಾಗೂ ಪ್ರಧಾನಿ ಮೋದಿ ನೇತೃತ್ವದ ಕೇಂದ್ರ ಸರ್ಕಾರ ಸ್ವಾಮ್ಯದ ಭವಿಷ್ಯ ನಿದಿ-ಇಷ್ಟೊಂದು ಭಾರಿ ಮೊತ್ತದ ಹಣವನ್ನು ವಿವಾದಿತ ಕಂಪನಿಯೊಂದರಲ್ಲಿ ಹೂಡಿರುವುದು ಹತ್ತು ಹಲವು ಸಂಶಯಗಳಿಗೆ ಕಾರಣವಾಗುತ್ತಿದೆ.

ದೇಶಾಭಿಮಾನಿ ಮುಖ್ಯಮಂತ್ರಿ ಹಾಗೂ ದೇಶದ್ರೋಹಿಯ ಒಡನಾಡಿಯೊಬ್ಬರ ಒಡೆತನದ ಕಂಪನಿಯೊಂದಿಗಿರುವ ಸಂಬಂಧವೂ ಈಗ ಪ್ರಶ್ನಾರ್ಹವಾಗುತ್ತಿದೆ.

ತನಿಖೆ ಆರಂಭವೇ ಭ್ರಷ್ಟಾಚಾರಕ್ಕೆ ಸಾಕ್ಷಿ
ಓತಿಕಾಟಕ್ಕೆ ಬೇಲಿ ಸಾಕ್ಷಿ ಎಂಬಂತೆ, ಉತ್ತರಪ್ರದೇಶ ಸರಕಾರದ (ಇಂಧನ) ಪ್ರಧಾನ ಕಾರ್ಯದರ್ಶಿ ಅಲೋಕಕುಮಾರ್, ಪ್ರಕರಣದ ವಿರುದ್ಧ ತನಿಖೆಗೆ ಆದೇಶಿಸಿದ್ದಾರೆ. ಯೋಗಿ ಆದಿತ್ಯನಾಥ್ ಸರ್ಕಾರದಲ್ಲಿ ಭ್ರಷ್ಟಾಚಾರ ನಡೆದಿದೆ ಎಂಬುದಕ್ಕೆ ಸಾಕ್ಷಿ ನುಡಿಯುತ್ತಿದೆ.

ಈಗಾಗಲೇ, ವಿದ್ಯುತ್ ವಲಯ ಕಾರ್ಮಿಕರ ಟ್ರಸ್ಟ್ ಪ್ರಧಾನ ವ್ಯವಸ್ಥಾಪಕ ಪಿ.ಕೆ.ಗುಪ್ತಾ ಅವರನ್ನು ಅಮಾನತುಗೊಳಿಸಿದ್ದು, ಪ್ರಕರಣದ ವಿರುದ್ಧ ಕಾನೂನು ಕ್ರಮ ಜರುಗಿಸಲು ಇಂಧನ ವಿಭಾಗ ನಿರ್ದೇಶಕ ಸುಧೀರ್ ಆರ್ಯ ಅವರಿಗೆ ಸೂಚಿಸಿದ್ದಾರೆ.

ಹೂಡಿಕೆ ವಾಪಸಾತಿಗೆ ಹೆಚ್ಚಿದ ಒತ್ತಡ
ಮತ್ತೊಂದು ಕಂಪನಿಯ ನೆರಳಲ್ಲಿ ಬೆಳೆಯುವ ಕಂಪನಿಯೊಂದಕ್ಕೆ ಪೂರ್ವಾಪರ ತಿಳಿಯದೇ ಕಾರ್ಮಿಕರ ಸಾವಿರಾರು ಕೋಟಿ ರೂ.ಗಳ ಭವಿಷ್ಯ ನಿಧಿ ಹೂಡಿದ್ದನ್ನು ಪ್ರಶ್ನಿಸಿದ್ದು ಮಾತ್ರವಲ್ಲ; ಬಂಡವಾಳ ಹೂಡಿಕೆಯನ್ನು ವಾಪಸ್ ಪಡೆಯಲು ಉತ್ತರಪ್ರದೇಶ ರಾಜ್ಯ ವಿದ್ಯುತ್ ಮಂಡಳಿಯ ಎಂಜಿನಿಯರರ ಸಂಸ್ಥೆಯು (ಯುಪಿಎಸ್‍ಇಬಿಇಎ) ಮುಖ್ಯಮಂತ್ರಿ ಯೋಗಿ ಆದಿತ್ಯನಾಥ ಅವರಿಗೆ ಪತ್ರ ಬರೆದು ಆಗ್ರಹಿಸಿದೆ.

ಸುಮಾರು 2600 ಕೋಟಿ ರೂ.ಗಳಿಗೂ ಅಧಿಕ ಹಣ ಡಿ.ಎಚ್.ಎಫ್.ಎಲ್ ನಲ್ಲಿದೆ. ಅದನ್ನು ಮರಳಿ ಪಡೆಯಬೇಕು. ಮಾತ್ರವಲ್ಲ ಪ್ರಧಾನ ಪ್ರಾವಿಡೆಂಟ್ ಫಂಡ್ (ಜಿಪಿಎಫ್) ಹಾಗೂ ಕಾಂಟ್ರಿಬ್ಯೂಟರಿ ಪ್ರಾವಿಡೆಂಟ್ ಫಂಡ್ (ಸಿಪಿಎಫ್) ಟ್ರಸ್ಟ್ ನಿಂದ ಇನ್ನು ಮುಂದೆ ಇಂತಹ ಖಾಸಗಿ ಸಂಸ್ಥೆಗಳಿಗೆ ಹಣ ಹೂಡುವುದಿಲ್ಲ ಎಂಬ ಬಗ್ಗೆ ಭರವಸೆ ನೀಡುವಂತೆ ಯುಪಿಎಸ್‍ಇಬಿಇಎ ಪ್ರಧಾನ ಕಾರ್ಯದರ್ಶಿ ರಾಜೀವ್ ಕುಮಾರ್ ಮುಖ್ಯಮಂತ್ರಿ ಯೋಗಿ ಅವರನ್ನು ಇಕ್ಕಟ್ಟಿನಲ್ಲಿ ಸಿಲುಕಿಸಿದ್ದಾರೆ.

ಅಲ್ಲದೇ, 2017ರ ಮಾರ್ಚ್‍ನಿಂದ2018-ಡಿಸೆಂಬರ್ ವರೆಗೆ ಡಿ.ಎಚ್.ಎಫ್‍.ಎಲ್ ನಲ್ಲಿ ವಿದ್ಯುತ್ ಕಾರ್ಮಿಕರ ಭವಿಷ್ಯ ನಿಧಿಯನ್ನು ಠೇವಣಿಯಾಗಿ ಇರಿಸಲಾಗಿದೆ. ಡಿಎಚ್‍ಎಫ್‍ಎಲ್ ಕಂಪನಿಯು ಇತರೆ ಖಾಸಗಿ ವಿವಾದಿತ ಕಂಪನಿಗಳೊಂದಿಗೆ ನಡೆಸುವ ವ್ಯಾಪಾರ-ವಹಿವಾಟುಗಳ ಹಿನ್ನೆಲೆಯಲ್ಲಿ ಮುಂಬೈ ಹೈಕೋರ್ಟ್ ಸಹ ಪ್ರಕರಣವೊಂದರಲ್ಲಿ ತಡೆಯಾಜ್ಞೆ ನೀಡಿದೆ.

ಸುಮಾರು 2,600 ಕೋಟಿ ರೂ.ಗಳಿಗೂ ಅಧಿಕ ಹಣ ಡಿಎಚ್‍ಎಫ್‍ಎಲ್ ನಲ್ಲಿದೆ ಎಂದು ಟ್ರಸ್ಟ್ ಕಾರ್ಯದರ್ಶಿ ಹೇಳುತ್ತಾರೆ. ಕಾರ್ಮಿಕರಿಗೆ ಸೇರಿದ ಭವಿಷ್ಯನಿಧಿಯು ಖಾಸಗಿ ಕಂಪನಿಯ ವ್ಯವಹಾರಕ್ಕೆ ವರ್ಗಾಯಿಸುವುದು ಗಂಭೀರ ಅಪರಾಧ. ಕಾರ್ಮಿಕರ ಸೇವಾ ನಿವೃತ್ತಿಯ ನಂತರ ಈ ಭವಿಷ್ಯನಿಧಿ ಅವರನ್ನು ಕಾಪಾಡುತ್ತದೆ. ಇಂತಹ ಹಣವನ್ನು ಖಾಸಗಿ ಕಂಪನಿಗೆ ನೀಡುವುದು ಎಷ್ಟು ಸರಿ ಎಂದು ಸಂಸ್ಥೆಯ ಎಂಜಿನಿಯರರು ಪ್ರಶ್ನಿಸುತ್ತಿದ್ದಾರೆ.

ಇನ್ನು ಈ ಕುರಿತು ಕಾಂಗ್ರೆಸ್‌ ನಾಯಕಿ ಪ್ರಿಯಾಂಕ ಗಾಂಧಿ ಕೂಡ ಟ್ವೀಟ್‌ ಮಾಡಿ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಪಾರದರ್ಶಕ ಆಡಳಿತಕ್ಕೆ ಸವಾಲು
ತಮ್ಮ ಕಣ್ಣು ತಪ್ಪಿಸಿ ಪ್ರಕರಣ ನಡೆದಿದೆ ಎನ್ನುವುದಾದರೆ ತನಿಖೆ ತೀವ್ರಗೊಳಿಸಲಿ ಎಂದು ಅಖಿಲ ಭಾರತ ವಿದ್ಯುತ್ ಎಂಜಿನಿಯರರ ಒಕ್ಕೂಟದ ಅಧ್ಯಕ್ಷ ಶೈಲೇಂದ್ರ ದುಬೆ ಅವರು ಮುಖ್ಯಮಂತ್ರಿ ಯೋಗಿ ಆದಿತ್ಯನಾಥ ಅವರ ಪಾರದರ್ಶಕ ಆಡಳಿತಕ್ಕೆ ಸವಾಲು ಹಾಕಿದ್ದಾರೆ. ಖಾಸಗಿ ಕಂಪನಿಗೆ ಹೂಡಿದ ಹಣವನ್ನು ಶೀಘ್ರವೇ ವಾಪಸ್ ಪಡೆಯಬೇಕು. ಯಾರ ಆದೇಶದ ಮೇರೆಗೆ ಮಂಡಳಿಯು ಕಾರ್ಮಿಕರ ಭವಿಷ್ಯನಿಧಿಯನ್ನು ಖಾಸಗಿ ಕಂಪನಿಯಲ್ಲಿ ಹೂಡಲು ನಿರ್ಧರಿಸಿತು?. ಮಂಡಳಿಯು ಬಹುದೊಡ್ಡ ತಪ್ಪು ಮಾಡಿದೆ. ಬಹುಕೋಟಿ ರೂ.ಗಳ ಹಗರಣ ಇದಾಗಲಿದೆ. ತನಿಖೆಯ ಮೂಲಕವೇ ಬಯಲಿಗೆಳೆಯಬೇಕು ಎಂದು ಆಗ್ರಹಿಸಿದ್ದಾರೆ.

ದುಬೈಯ ವಿವಾದಿತ “ಮಿರ್ಚಿ’ ಸಂಪರ್ಕ
ಭೂ ಅಕ್ರಮಗಳಿಗೆ ಸಂಬಂಧಿಸಿದಂತೆ ದೇಶದ್ರೋಹಿ ಹಾಗೂ ಭೂಗತ ಪಾತಕಿ ದಾವೂದ್ ಇಬ್ರಾಹಿಂನ ವ್ಯವಹಾರಗಳು ಬಯಲಿಗೆ ಬರುತ್ತಿದ್ದಂತೆ, ಜಾರಿ ನಿರ್ದೇಶನಾಲಯವು ಡಿ.ಎಚ್.ಎಫ್.ಎಲ್ ಸನ್ ಬ್ಲಿಂಕ್ ರಿಯಲ್ ಎಸ್ಟೇಟ್ ಸಂಸ್ಥೆಗಳ ವಹಿವಾಟುಗಳನ್ನು ಪರಿಶೀಲಿಸಿ ತನಿಖೆಗೆ ಒಳಪಡಿಸಿತ್ತು. ಈ ವಹಿವಾಟುಗಳಿಂದ ದುಬೈಯಲ್ಲಿರುವ “ಮಿರ್ಚಿ’ ಸಂಸ್ಥೆಯ ಮೂಲಕವೇ ದಾವೂದ್ ಗುಂಪಿಗೆ ಹಣ ರವಾನೆಯಾಗುತ್ತಿತ್ತು.
ಡಿ.ಎಚ್.ಎಫ್.ಎಲ್ ಸಂಸ್ಥೆಯ ಅಧ್ಯಕ್ಷ ಕಪಿಲ್ ವಾಧವನ್ ಹಾಗೂ ಆತನ ಸಹೋದರ ಧೀರಜ್ ಅವರನ್ನು ಇತ್ತೀಚೆಗೆ ಜಾರಿ ನಿರ್ದೇಶನಾಲಯವು ವಿಚಾರಣೆಗೆ ಒಳಪಡಿಸಿ, ರಿಯಲ್ ಎಸ್ಟೇಟ್ ಸಂಸ್ಥೆಗಳಿಗೆ ಸುಮಾರು 2186 ಕೋಟಿ ರೂ.ಗಳ ಸಾಲ ನೀಡಿದ್ದರ ಬಗ್ಗೆ ಪ್ರಶ್ನಿಸಿತ್ತು.

ಕಾರ್ಮಿಕರ ಭವಿಷ್ಯ ನಿಧಿಯನ್ನು ಖಾಸಗಿ ಕಂಪನಿಗೆ ಅದರಲ್ಲೂ ವಿವಾದಿತ ಕಂಪನಿಯಲ್ಲಿ ತೊಡಗಿಸಿದ ಉತ್ತರಪ್ರದೇಶ ಸರ್ಕಾರ ಗಂಭೀರ ಅಪರಾಧ ಎಸಗಿದ್ದು ಮೇಲ್ನೋಟಕ್ಕೆ ಸಾಬೀತಾಗುತ್ತದೆ. ಕೋಟ್ಯಂತರ ರೂ.ಗಳ ದುರುಪಯೋಗಕ್ಕೆ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ ಉತ್ತರಿಸಬೇಕು ಎಂಬ ಆಗ್ರಹ ಹೆಚ್ಚುತ್ತಿದೆ.
(ಮಾಹಿತಿ ಮೂಲ: ನ್ಯಾಷನಲ್ ಹೆರಾಲ್ಡ್)

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಗೋಮಾಂಸ ಸಾಗಣೆ ಆರೋಪದ ಮೇಲೆ ವಾಹನ ಮುಟ್ಟುಗೋಲು: ಉತ್ತರ ಪ್ರದೇಶ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡ ಹೈಕೋರ್ಟ್

ಗೋಮಾಂಸ ಸಾಗಣೆ ಮಾಡುತ್ತಿದ್ದಾರೆ ಎಂದು ಕೇವಲ ಅನುಮಾನದ ಮೇಲೆ ವ್ಯಕ್ತಿಯ ವಿರುದ್ಧ ಕ್ರಮ ಕೈಗೊಳ್ಳುವುದು ಕಾನೂನುಬಾಹಿರ ಎಂದು ಅಲಹಾಬಾದ್ ಹೈಕೋರ್ಟ್ ಅಭಿಪ್ರಾಯಪಟ್ಟಿದ್ದು, ಅಂತಹ ಯಾವುದೇ ಕ್ರಮ ತೆಗೆದುಕೊಳ್ಳುವ ಮೊದಲು ವೈಜ್ಞಾನಿಕ ದೃಢೀಕರಣ ಅಗತ್ಯ...

ಎಕ್ಸಿಟ್‌ ಪೋಲ್ಸ್‌ಗಳು ‘ಹಣ-ಒತ್ತಡ’ದಿಂದ ಕೂಡಿವೆ; ಟಿಎಂಸಿ 226 ಸ್ಥಾನಗಳನ್ನು ಮೀರಲಿದೆ: ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳದಲ್ಲಿ ಎರಡನೇ ಹಂತದ ಮತದಾನದ ನಂತರ ಇತ್ತೀಚಿನ ಚುನಾವಣೋತ್ತರ ಸಮೀಕ್ಷೆಗಳ ವಿಶ್ವಾಸಾರ್ಹತೆಯನ್ನು ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಬಲವಾಗಿ ತಳ್ಳಿಹಾಕಿದ್ದಾರೆ. ಅವರ ಪಕ್ಷವಾದ ತೃಣಮೂಲ ಕಾಂಗ್ರೆಸ್ (ಟಿಎಂಸಿ) 294 ಸದಸ್ಯರ ವಿಧಾನಸಭೆಯಲ್ಲಿ 226...

ಗುಜರಾತ್‌| ರಾಮ ಮಂದಿರ ಕಾರ್ಯಕ್ರಮದಲ್ಲಿ ದಲಿತರಿಗೆ ಪ್ರತ್ಯೇಕ ಊಟದ ವ್ಯವಸ್ಥೆ; ಅಸ್ಪೃಶ್ಯತೆ ಆಚರಣೆ ಆರೋಪ

ಗುಜರಾತ್‌ನ ಜುನಾಗಢ್ ಜಿಲ್ಲೆಯಲ್ಲಿ ಜಾತಿ ತಾರತಮ್ಯದ ಆರೋಪ ಹೊರಿಸಲಾಗಿದ್ದು, ಧಾರ್ಮಿಕ ಕಾರ್ಯಕ್ರಮದ ಸಂದರ್ಭದಲ್ಲಿ ದೇವಾಲಯದ ಆಯೋಜಕರು ಅಸ್ಪೃಶ್ಯತೆ ಆಚರಿಸುತ್ತಿದ್ದಾರೆ ಎಂದು ದಲಿತ ಸಮುದಾಯದ ಸದಸ್ಯರು ಆರೋಪಿಸಿದ್ದಾರೆ. ಭುಟ್ಡಿ ಗ್ರಾಮದ ನಿವಾಸಿ 25 ವರ್ಷದ ಅಜಯ್...

ಕೋಗಿಲು ಬಡಾವಣೆ ಮನೆಗಳ ನೆಲಸಮ: ಹದಿನೈದು ದಿನಗಳೊಳಗೆ ಪುನರ್ವಸತಿ ಕಲ್ಪಿಸದಿದ್ದರೆ ತೀವ್ರ ಹೋರಾಟದ ಎಚ್ಚರಿಕೆ

ಬೆಂಗಳೂರು ಉತ್ತರ ತಾಲ್ಲೂಕಿನ ಯಲಹಂಕ ಪ್ರದೇಶದ ಕೋಗಿಲು ಲೇಔಟ್‌ನ ಫಕೀರ್ ಕಾಲೋನಿ ಮತ್ತು ಮಹಾನಾಯಕ ಅಂಬೇಡ್ಕರ್ ನಗರ (ವಾಸಿಂ ಲೇಔಟ್‌) ಪ್ರದೇಶದ ಬಡ ನಿವಾಸಿಗಳ ಮನೆಗಳನ್ನು 2025 ಡಿಸೆಂಬರ್ 20ರಂದು ಬೆಳಿಗ್ಗೆ ಸುಮಾರು...

ಡಾಲರ್ ಎದುರು ಸಾರ್ವಕಾಲಿಕ ಕನಿಷ್ಠ ಮಟ್ಟ 95.20 ರೂ.ಗೆ ಕುಸಿತ ಕಂಡ ಭಾರತೀಯ ರೂಪಾಯಿ ಮೌಲ್ಯ 

ನವದೆಹಲಿ: ಏಪ್ರಿಲ್ 30ರಂದು ಆರಂಭಿಕ ವಹಿವಾಟಿನಲ್ಲಿ ಭಾರತೀಯ ರೂಪಾಯಿ ಮೌಲ್ಯವು ಅಮೆರಿಕನ್ ಡಾಲರ್ ಎದುರು ಸಾರ್ವಕಾಲಿಕ ಕನಿಷ್ಠ ಮಟ್ಟವಾದ 95.07 ಕ್ಕೆ ಕುಸಿದಿದೆ. ಕರೆನ್ಸಿ 0.4% ಕುಸಿತದೊಂದಿಗೆ 95.2325 ಕ್ಕೆ ಇಳಿದಿದೆ. ಇದು ಮಾರ್ಚ್...

ತಮಿಳುನಾಡು| ದಲಿತ ಯುವಕನ ಶವ ಪತ್ತೆ; ‘ಜಾತಿ ಕಾರಣಕ್ಕೆ ಹತ್ಯೆಯಾಗಿದೆ’ ಎಂದು ಕುಟುಂಬದ ಆರೋಪ

ತಮಿಳುನಾಡಿನ ಪುದುಕ್ಕೊಟ್ಟೈ ಜಿಲ್ಲೆಯ ಕ್ವಾರಿ ಕೆರೆಯ ಬಳಿ 20 ವರ್ಷದ ದಲಿತ ಯುವಕನ ಶವ ಪತ್ತೆಯಾಗಿದ್ದು, ಹಿಂದುಳಿದ ವರ್ಗದ ಯುವತಿಯೊಂದಿಗಿನ ಸಂಬಂಧದಿಂದಾಗಿ ಆತನನ್ನು ಕೊಲ್ಲಲಾಗಿದೆ ಎಂದು ಆತನ ಕುಟುಂಬ ಆರೋಪಿಸಿದೆ. ಆದರೆ, ಈ...

‘ಬಾಲ ಕಾರ್ಮಿಕ’ ಶಂಕೆಯ ಮೇಲೆ 155 ಮುಸ್ಲಿಂ ವಿದ್ಯಾರ್ಥಿಗಳ ಬಂಧನ: ಧಾರ್ಮಿಕ ಗುರುತಿನ ಕಾರಣಕ್ಕೆ ಬಂಧಿಸಿರುವುದಾಗಿ ಪೋಷಕರ ಆರೋಪ

ಮಧ್ಯಪ್ರದೇಶದ ಕಟ್ನಿಯಲ್ಲಿ ಸರ್ಕಾರಿ ರೈಲ್ವೆ ಪೊಲೀಸರು (GRP) 155 ಮುಸ್ಲಿಂ ವಿದ್ಯಾರ್ಥಿಗಳು ಮತ್ತು ಎಂಟು ಶಿಕ್ಷಕರನ್ನು "ಬಾಲ ಕಾರ್ಮಿಕ" ಶಂಕೆಯ ಮೇಲೆ ಬಂಧಿಸಿದ ನಂತರ, ಪೋಷಕರು ಮುಸ್ಲಿಂ ವಿರೋಧಿ ಪಕ್ಷಪಾತವನ್ನು ಹೊಂದಿದ್ದಾರೆಂದು ಆರೋಪಿಸಿದ್ದಾರೆ....

ಜನಿವಾರದ ಹಿಂದೆ ಬಿದ್ದಿರುವ ವಿರೋಧ ಪಕ್ಷ ಮತ್ತು ಮಾಧ್ಯಮಗಳು

ಏಪ್ರಿಲ್ 23, 2026 ರಂದು ನಡೆದ ಕರ್ನಾಟಕ ಸಾಮಾನ್ಯ ಪ್ರವೇಶ ಪರೀಕ್ಷೆ (KCET) ವೇಳೆ ಬೆಂಗಳೂರಿನ ಕೋರಮಂಗಲದಲ್ಲಿರುವ ಕೃಪಾನಿಧಿ ಪಿಯು ಕಾಲೇಜಿನಲ್ಲಿ ಐವರು ಬ್ರಾಹ್ಮಣ ವಿದ್ಯಾರ್ಥಿಗಳ ಜನಿವಾರವನ್ನು ಬಲವಂತವಾಗಿ ತೆಗೆಸಿದ ಘಟನೆ ರಾಜಕೀಯ...

ಒಡಿಶಾ| ಸಾವಿನ ದಾಖಲೆ ಕೇಳಿದ ಬ್ಯಾಂಕ್‌ ಸಿಬ್ಬಂದಿ; ಸಮಾದಿ ಅಗೆದು ಸಹೋದರಿಯ ಅಸ್ಥಿಪಂಜರ ತಂದ ಬುಡಕಟ್ಟು ವ್ಯಕ್ತಿ

ಒಡಿಶಾದ ಕಿಯೋಂಜಾರ್ ಜಿಲ್ಲೆಯಲ್ಲಿ, ಬುಡಕಟ್ಟು ವ್ಯಕ್ತಿಯೊಬ್ಬ ತನ್ನ ಮೃತ ಸಹೋದರಿಯ ಅಸ್ಥಿಪಂಜರವನ್ನು ಅಗೆದು ಗ್ರಾಮೀಣ ಬ್ಯಾಂಕ್‌ಗೆ ತೆಗೆದುಕೊಂಡು ಹೋಗಿದ್ದಾನೆ. ಆಕೆಯ ಸಾವನ್ನು ಸಾಬೀತುಪಡಿಸುವ ಮೂಲಕ ಆಕೆಯ ಖಾತೆಯಲ್ಲಿ ಜಮಾ ಮಾಡಿದ ಹಣವನ್ನು ಪಡೆಯಲು...

ಜಾತಿ ಕಿರುಕುಳಕ್ಕೆ ದಲಿತ ವಿದ್ಯಾರ್ಥಿ ಸಾವು ಪ್ರಕರಣ: ಇಂದು ಸಂಜೆ 6 ರವರೆಗೆ ಕೇರಳ ಬಂದ್

ಜಾತಿ ಆಧಾರಿತ ಕಿರುಕುಳದಿಂದ ಮನನೊಂದಿದ್ದ ಕೇರಳದ ಅಂಚರಕಂಡಿಯ ಕಣ್ಣೂರು ದಂತ ಕಾಲೇಜಿನಲ್ಲಿ ಪ್ರಥಮ ವರ್ಷದ ಬಿಡಿಎಸ್ ವಿದ್ಯಾರ್ಥಿ ಆರ್.ಎಲ್. ನಿತಿನ್ ರಾಜ್ ಆತ್ಮಹತ್ಯೆಗೆ ರಾಜ್ಯದಾದ್ಯಂತ ಆಕ್ರೋಶ ವ್ಯಕ್ತವಾಗಿದೆ. ಕಾಲೇಜು ಕಟ್ಟಡದಿಂದ ಹಾರಿ ಆತ್ಮಹತ್ಯೆ...