Homeಕರ್ನಾಟಕಉತ್ತರ ಕನ್ನಡ ಸಂತಾನ ಸಂರಕ್ಷಣೆಗೆ ಒಂದಾದ ಮ್ಯಾಗಿಯಜ್ಜಿ ದೇಶಜ್ಜ!!

ಉತ್ತರ ಕನ್ನಡ ಸಂತಾನ ಸಂರಕ್ಷಣೆಗೆ ಒಂದಾದ ಮ್ಯಾಗಿಯಜ್ಜಿ ದೇಶಜ್ಜ!!

- Advertisement -
- Advertisement -

ಉತ್ತರ ಕನ್ನಡದ ಕಾಂಗ್ರೆಸ್ ಪೊರೆ ಕಳಚಿಕೊಳ್ಳುತ್ತಿದೆ! ಮದವೇರಿದ ಮದ್ದಾನೆಗಳಂತಾಗಿ ದಶಕಗಟ್ಟಲೆ ಕಾಲ ಗುದ್ದಾಡಿ ಜಿಲ್ಲಾ ಕಾಂಗ್ರೆಸನ್ನು ನಜ್ಜುಗುಜ್ಜುಮಾಡಿದ್ದ ಮ್ಯಾಗಿಯಜ್ಜಿ ಮತ್ತು ದೇಶಜ್ಜ ರಾಜಿ ಸಂಕೇತ ಬಿತ್ತರಿಸುತ್ತಿದ್ದಾರೆ. ಪರಸ್ಪರ ಅಸ್ತಿತ್ವ ಉಳಿಸಿಕೊಳ್ಳಲು ಈ ಮುದಿಮಣಿಗಳು ಹೊಂದಾಣಿಕೆಯ ಅನಿವಾರ್ಯಕ್ಕೆ ಬಿದ್ದಿವೆ. ಬದ್ಧವೈರಿಗಳ ಈ ಮನಃಪರಿವರ್ತನೆ ಯಲ್ಲಾಪುರ ಬೈ-ಇಲೆಕ್ಷನ್ ಸೋಲಿನ ನೇರ ಪರಿಣಾಮ ಎಂತಲೇ ರಾಜಕೀಯ ಪಡಸಾಲೆಯಲ್ಲಿ ವಿಶ್ಲೇಷಣೆಗಳು ನಡೆದಿದೆ.

ದೇಶಪಾಂಡೆ ತನ್ನ ಮೂರು ದಶಕದ ರಾಜಕೀಯದಲ್ಲಿ ಜನತಾ ಪರಿವಾರದಲ್ಲಿರಲಿ ಅಥವಾ ಕಾಂಗ್ರೆಸಿನಲ್ಲಿರಲಿ ಯಾರನ್ನೂ ಗೆಲ್ಲಿಸಲು ತ್ರಿಕರ್ಣಪೂರ್ವಕ ಪ್ರಯತ್ನ ಮಾಡಿದ ಕುರುಹುಗಳಿಲ್ಲ. ಹಾಗಂತ ಸೋಲಿಸಲು ಹಲವು ಸಲ ಹಠಹಿಡಿದು ಹಿಕಮತ್ತು ನಡೆಸಿದ ದಾಖಲೆಗಳಿವೆ. ಇಂಥ ಇತಿಹಾಸದ ದೇಶ್ ಕಳೆದ ಯಲ್ಲಾಪುರ ಬೈ-ಇಲೆಕ್ಷನ್‍ನಲ್ಲಿ ತನ್ನ ಚೇಲಾ ಭೀಮಣ್ಣ ನಾಯ್ಕನ ಗೆಲ್ಲಿಸಿ ವೈರಿ ಹೆಬ್ಬಾರ್ ಮೇಲಿನ ಸೇಡು ತೀರಿಸಿಕೊಳ್ಳಲು ಪ್ರತಿಷ್ಠೆ ಪಣಕ್ಕಿಟ್ಟು ಹೋರಾಡಿದ್ದರು. ಆದರೆ ಸ್ವಯಂಕೃತಾಪರಾಧಗಳ ಸರಣಿಯಿಂದ ವರ್ಚಸ್ಸು ಕಳಕೊಂಡಿರುವ ದೇಶ್ ಮುಗ್ಗರಿಸಿ ಮಕಾಡೆ ಮಲಗಿಬಿಟ್ಟರು! ಕಂಗಾಲಾಗಿ ದೇಶಪಾಂಡೆ ಕೂತಿದ್ದ ಈ ಹೊತ್ತಿನಲ್ಲೇ ಬರೋಬ್ಬರಿ ಒಂದು ವರ್ಷದನಂತರ ಜಿಲ್ಲೆಗೆ ವಕ್ಕರಿಸಿದ ಇಲ್ಲಿಯ ಮಾಜಿ ಸಂಸದೆ ಮಾರ್ಗರೇಟ್ ಆಳ್ವ ಆಟ ಶುರುಹಚ್ಚಿಕೊಂಡಿದ್ದರು. ನೇರ ಮ್ಯಾಗಿಯ ಶಿರಸಿಯ ಮನೆಗೇ ಹೋದ ದೇಶ್ ಆಕೆಯ ಮುಂದೆ ನಿಂತು ಹೊಸ ನಂಟಿನ ಪ್ರಸ್ತಾಪ ಇಟ್ಟಿರುವುದು ಅನಿರೀಕ್ಷಿತ ಸಮೀಕರಣವನ್ನು ಜಿಲ್ಲಾ ರಾಜಕೀಯ ಭೂಮಿಕೆಯಲ್ಲಿ ಸೃಷ್ಟಿಸಿಬಿಟ್ಟಿದೆ.

ಮ್ಯಾಗಿ ಮತ್ತಾಕೆಯ ಮಗ ಆಳ್ವ ಫೌಂಡೇಶನ್ ಕಟ್ಟಿಕೊಂಡಿದ್ದರೆ, ದೇಶ್ ಮತ್ತವರ ಪುತ್ರ ಪ್ರಶಾಂತ ದೇಶಪಾಂಡೆ ಟ್ರಸ್ಟ್ ಸ್ಥಾಪಿಸಿಕೊಂಡಿದ್ದಾರೆ. ಎರಡೂ ಕುಟುಂಬಗಳು ಸಾಮಾಜಿಕ ಸೇವೆಯ ಹೆಸರಲ್ಲಿ ರಾಜಕೀಯ ಫಾಯ್ದೆಗೆ ಹವಣಿಸುತ್ತಿವೆ. ಮ್ಯಾಗಿಗೆ ತನ್ನ ಪೆದ್ದು ಕುಲೋದ್ಧಾರಕನನ್ನು ಶಿರಸಿಯ ಶಾಸಕನ ಮಾಡುವ ಕನಸು; ದೇಶ್‍ಗೆ ಮುಂಬೈನಲ್ಲಿ ವಕೀಲಿಕೆ ಮಾಡುವ ಅನಿವಾಸಿ ಉತ್ತರ ಕನ್ನಡಿಗ ಮಗ ಮಹಾರಾಯನ ಸಂಸದನ ಮಾಡುವ ಆಸೆ. ಇದೇ ಒಳಉದ್ದೇಶದಿಂದ ಮ್ಯಾಗಿ ಫೌಂಡೇಷನ್ ಕಾರ್ಯಕ್ರಮ ಹಾಕಿಕೊಂಡು ಈಗ ಜಿಲ್ಲೆಯಲ್ಲಿ ಅಂಡಲೆಯುತ್ತಿದ್ದಾರೆ. ಆಕೆ ಫಂಕ್ಷನ್ ಮುಗಿಸಿ ಮನೆಗೆ ಬರುವುದನ್ನೇ ಕಾಯುತ್ತಿದ್ದ ದೇಶಪಾಂಡೆ ಮೊನ್ನೆ ಶನಿವಾರ ಭೇಟಿಯಾಗಿ ಗ್ಯಾಂಗ್‍ವಾರ್ ನಿಲ್ಲಿಸುವ ಒಪ್ಪಂದ ಮಾಡಿಕೊಂಡಿದ್ದಾರೆ. ಜಿಲ್ಲೆಯಲ್ಲಿ ಬಿಜೆಪಿ ಎಬ್ಬಿಸಿರುವ ಬಡಿವಾರಕ್ಕೆ ಬೆದರಿರುವ ಮ್ಯಾಗಿ-ದೇಶ್ ನೈಚ್ಛಾನುಸಂಧಾನ ನಡೆಸಬೇಕಾಗಿ ಬಂದಿವೆ, ಪಾಪ!!

ಮ್ಯಾಗಿ-ದೇಶ್ ಅಕ್ಕ-ಪಕ್ಕ ಕುಳಿತು ಕಳೆದ ಅಸೆಂಬ್ಲಿ ಲೋಕಸಭೆ ಚುನಾವಣೆಗಳಲ್ಲಿ ತಮ್ಮ ಬಣ ಬಡಿದಾಟದಿಂದಾದ ಹಾನಿಯ ಲೆಕ್ಕ ತೆಗೆದಿದ್ದಾರೆ. ತಮ್ಮೊಳಗಿನ ದ್ವೇಷಾಸೂಯೆ ಮೇಲಾಟದಿಂದ ಗತಿಗೇಡಿ ಬಿಜೆಪಿ ಸೈತಾನನಂತೆ ಬೆಳೆದಿದೆ ಎಂದು ಪಾಪಪ್ರಜ್ಞೆಯಿಂದ ಮಾತಾಡಿಕೊಂಡಿದ್ದಾರೆ; ಈಗಿಂದಲೇ ತಳಮಟ್ಟದಿಂದ ಪಾರ್ಟಿಯನ್ನು ಕಟ್ಟದಿದ್ದರೆ ತಮ್ಮ ವಂಶದ ಉತ್ತರಾಧಿಕಾರಿಗಳಿಗೆ ಭವಿಷ್ಯವಿಲ್ಲ ಎಂಬುದು ಮನಗಂಡಿದ್ದಾರೆ. ಜಿಲ್ಲಾ ಕಾಂಗ್ರೆಸ್ ಉದ್ಧಾರವಾಗಬೇಕಿದ್ದರೆ ಮೊದಲು ಹಾಲಿ ಡಿಸಿಸಿ ಅಧ್ಯಕ್ಷ ಭೀಮಣ್ಣ ನಾಯ್ಕನ ಉಚ್ಚಾಟಿಸಿ ಹೊಸ ಆಯ್ಕೆ ಮಾಡಬೇಕು; ಆನಂತರ ತಾವಿಬ್ಬರೂ ಒಟ್ಟಾಗಿ ಜಿಲ್ಲಾ ಟೂರ್ ಹೊಡೆದು ಪಕ್ಷಕ್ಕೆ ಜೀವ ತುಂಬಬೇಕೆಂದು ಮ್ಯಾಗಿ ಮನದಿಂಗಿತವನ್ನು ದೇಶ್ ಮುಂದೆ ಮಂಡಿಸಿದ್ದಾರೆ. ಇದನ್ನು ದೇಶಪಾಂಡೆಯೂ ಒಪ್ಪಿದ್ದಾರೆ.

ಬದಲಾದ ವರಸೆಯಲ್ಲಿ ಮ್ಯಾಗಿಗೆ ದೇಶಪಾಂಡೆಗಿಂತಲೂ ಹೆಚ್ಚು ಸಿಟ್ಟಿರುವುದು ಭೀಮಣ್ಣನ ಮೇಲೆ. ತನ್ನನ್ನು ಕೊನೆತನಕವೂ ಕಾಡಿದ ಮಾಜಿ ಸಿಎಂ ‘ಬಂ’ನ ಭಾಮೈದ ಈ ಭೀಮಣ್ಣನೆಂಬುದು ಮ್ಯಾಗಿಯ ಹಲವು ಅಸಮಾಧಾನದ ಕಾರಣಗಳಲ್ಲಿ ಒಂದು. ಈ ಭೀಮಣ್ಣ ನಾಯ್ಕನೂ ಅಷ್ಟೇ ಕಿತಾಪತಿಗಾರ. ಮ್ಯಾಗಿಗೆ ಆತ ಕೇರ್ ಮಾಡುತ್ತಿರಲಿಲ್ಲ. ಆಕೆಯ ನಿಷ್ಠಾವಂತ ಹಿಂಬಾಲಕರಾದ ವಿ.ಎನ್.ನಾಯ್ಕ್, ವಸಂತನಾಯ್ಕ್ ವಗೈರೆ ದೀವರ ಹುಡುಗರನ್ನು ಭೀಮಣ್ಣ ಹಣಿಯುತ್ತಲೇ ಬಂದಿದ್ದ. 2013ರ ಅಸೆಂಬ್ಲಿ ಇಲೆಕ್ಷನ್‍ನಲ್ಲಿ ಶಿರಸಿಯಲ್ಲಿ ಸ್ಪೀಕರ್ ಕಾಗೇರಿ ಎದುರು ಮೂರು ಸಾವಿರ ಚಿಲ್ಲರೆ ಮತದ ತೀರಾ ಸಣ್ಣ ಅಂತರದಲ್ಲಿ ಸೋತಿದ್ದ ದಿವಂಗತ ದೀಪಕ್ ಹೊನ್ನಾವರ್ ಮ್ಯಾಗಿಯ ಪುಂಡ ಪಟ್ಟ ಶಿಷ್ಯನಾಗಿದ್ದ. ಆತ ಗೆಲುವಿನ ಹತ್ತಿರ ಬಂದು ಮುಗ್ಗರಿಸಲು ಭೀಮಣ್ಣ-ರವೀಂದ್ರನಾಥ್ ನಾಯ್ಕ ಜೋಡಿಯ ದ್ರೋಹವೇ ಅಂದು ಕಾರಣವಾಗಿತ್ತು. ಈ ಉರಿ ಮ್ಯಾಗಿಗಿನ್ನೂ ಕಡಿಮೆಯಾಗಿಲ್ಲ. ಒಂದು ಕಾಲದಲ್ಲಿ ರವಿ ಮ್ಯಾಗಿ ಶಿಷ್ಯನಾಗಿದ್ದವ. ಆಕೆಯಿಂದಲೇ ಶಿರಸಿ ಕಾಂಗ್ರೆಸ್ ಕ್ಯಾಂಡಿಡೇಟಾಗಿದ್ದವ. ಆನಂತರ ಗುರುಮಾತೆಗೇ ತಿರುಗಿಬಿದ್ದಿದ್ದ ರವಿ ಜೆಡಿಎಸ್ ಪಾಲಾಗಿದ್ದ. ಮೊನ್ನೆಯ ಯಲ್ಲಾಪುರ ಉಪಚುನಾವಣೆ ಗಡಿಬಿಡಿಯಲ್ಲಿ ಈ ರವಿ, ದೇಶಪಾಂಡೆ ಜುಬ್ಬ ಹಿಡಿದುಕೊಂಡು ಕಾಂಗ್ರೆಸ್‍ಗೆ ನುಸುಳಿದ್ದಾನೆ.

ಇಂಥ ಭೀಮ-ರವಿಯಂಥವರ ದೂರವಿಟ್ಟರೆ ಮ್ಯಾಗಿ-ದೇಶ್‍ನಂಟು ಕುದುರುತ್ತದೆ. 2018ರ ಶಿರಸಿ ವಿಧಾನಸಭಾ ಕ್ಷೇತ್ರದ ಚುನಾವಣೆ ಮತ್ತು ಮೊನ್ನೆಯ ಯಲ್ಲಾಪುರ ಉಪಚುನಾವಣೆಯಲ್ಲಿ ಹೇತ್ಲಾಂಡಿ ಭೀಮಣ್ಣನ ಕಾಂಗ್ರೆಸ್ ಕ್ಯಾಂಡಿಡೇಟ್ ಮಾಡಿದ್ದೇ ತಪ್ಪು ಆಯ್ಕೆ ಎನ್ನುವ ಮ್ಯಾಗಿ ತನ್ನ ಮಗ ಶಿರಸಿಯಲ್ಲಿ “ರೈಟ್ ಕ್ಯಾಂಡಿಡೇಟ್” ಎನ್ನುವುದೇ ವಿಚಿತ್ರ. ಬಿಜೆಪಿ ಬೆಂಬಲಿಗರಾದ ಹವ್ಯಕ ಬ್ರಾಹ್ಮಣ ಬಾಹುಳ್ಯದ ಶಿರಸಿ-ಸಿದ್ಧಾಪುರ ಕ್ಷೇತ್ರದಲ್ಲಿ ಅಲ್ಪಸಂಖ್ಯಾತ ಕ್ರಿಶ್ಚಿಯನ್ ಸಮುದಾಯದ ನಿವೇದಿತ್ ಆಳ್ವ ಗೆಲ್ಲುವುದು ಅಷ್ಟು ಸುಲಭವೇನಲ್ಲ. ಅಲ್ಪಸಂಖ್ಯಾತರ ದ್ವೇಷದ ಮೇಲೆಯೇ ಬಿಜೆಪಿಯನ್ನು ಕಟ್ಟಿರುವ ಕಾಗೇರಿ, ಅನಂತ್ಮಾಣಿಗಳ ತವರು ಶಿರಸಿಯಲ್ಲಿ ಕಾಂಗ್ರೆಸ್ ಹವ್ಯಕ ಮಾಣಿ/ಕೂಸು ನಿಲ್ಲಿಸಿದರಷ್ಟೇ ಅನುಕೂಲ. ಸದ್ಯ ಜೆಡಿಎಸ್‍ನಲ್ಲಿರುವ ದಿವಂಗತ ಮಾಜಿ ಸಿಎಂ ರಾಮಕೃಷ್ಣ ಹೆಗಡೆಜೀ ದಾಯಾದಿ ಮೊಮ್ಮಗ ಶಶಿಭೂಷಣ ಹೆಗಡೆ ಕಾಂಗ್ರೆಸ್‍ಗೆ ಸೂಕ್ತ ಅಭ್ಯರ್ಥಿ. ಕಾಂಗ್ರೆಸ್ ಸೇರುವ ಆಸೆ ಶಶಿಗಿದ್ದರೂ ಹೆಗಡೆಜೀಯ ದೊಡ್ಮನೆ ಫ್ಯಾಮಿಲಿ ಬಗ್ಗೆ ದೇಶಪಾಂಡೆಗಿರುವ ಪುರಾತನ ದ್ವೇಷಕ್ಕೆ ಹೆದರಿ ಆತ ಸುಮ್ಮನಿದ್ದಾರೆ.

ಗೆಲ್ಲಲು ಇರುವ ಇಂಥ ಸರಳ ಲೆಕ್ಕಾಚಾರಗಳು ಪುತ್ರ ವ್ಯಾಮೋಹದಲ್ಲಿ ಮಂಕಾಗಿರುವ ಮ್ಯಾಗಜ್ಜೀ-ದೇಶಜ್ಜನಿಗೆ ಅರ್ಥವಾಗೋದಿಲ್ಲ. ಔಟ್‍ಡೇಟೆಡ್ ದಿಗ್ಗಜರು ಹಳೆಯದನ್ನು ಮರೆತು ಒಂದಾಗಿ ಪಾರ್ಟಿ ಕಟ್ಟಬಹುದೆಂಬ ನಂಬಿಕೆ ನಿಷ್ಠಾವಂತ ಕಾಂಗ್ರೆಸಿಗರಿಗಂತೂ ಇಲ್ಲಾ. ಆದರೆ ಮಕ್ಕಳ ಭವಿಷ್ಯ ಬೆಳಗಲು ಅನಿವಾರ್ಯವಾಗಿ ಮ್ಯಾಗಿ-ದೇಶ್ ಹೊಸ ಹೊಂದಾಣಿಕೆಯ ಸ್ಕೆಚ್ ಹಾಕಿದ್ದಾರೆಂಬುದು ಕಾಂಗ್ರೆಸ್‍ನಲ್ಲಷ್ಟೇ ಅಲ್ಲ ವಿರೋಧಿ ಕೇಸರಿ ಪಾಳೆಯದಲ್ಲೂ ಸಣ್ಣದೊಂದು ತಲ್ಲಣ ಎಬ್ಬಿಸಿರುವುದಂತೂ ಖರೆ!!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

2 COMMENTS

LEAVE A REPLY

Please enter your comment!
Please enter your name here

- Advertisment -

ಗೋವಾ | 25 ರಿಂದ 30 ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಆರೋಪ : ಬಿಜೆಪಿ ಕೌನ್ಸಿಲರ್ ಮಗನ ಬಂಧನ

ಗೋವಾದ ಕುರ್ಚೋರೆಮ್ ಪುರಸಭೆಯ ಬಿಜೆಪಿ ಕೌನ್ಸಿಲರ್ ಸುಶಾಂತ್ ನಾಯ್ಕ್ ಅವರ ಮಗ ಸೋಹಮ್ ನಾಯ್ಕ್ (20) ಎಂಬಾತನನ್ನು ಸುಮಾರು 25ರಿಂದ 30 ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದ ಮೇಲೆ ದಕ್ಷಿಣ ಗೋವಾ ಪೊಲೀಸರು ಬಂಧಿಸಿದ್ದಾರೆ.  ಆರೋಪಿ...

ಇರಾನ್‌ ಕದನ ವಿರಾಮಕ್ಕೆ 15 ಅಂಶಗಳ ಪ್ರಸ್ತಾಪ ಮುಂದಿಟ್ಟ ಟ್ರಂಪ್

ಪಶ್ಚಿಮ ಏಷ್ಯಾ ಸಂಘರ್ಷ ಪ್ರಾರಂಭಗೊಂಡು ನಾಲ್ಕು ವಾರಗಳು ಪೂರ್ಣಗೊಳ್ಳುವಾಗ, ಈವರೆಗೆ ಸುಮಾರು 2000 ಜೀವಗಳನ್ನು ಬಲಿ ಪಡೆದ ಹಾಗೂ ಜಾಗತಿಕವಾಗಿ ಇಂಧನ ಸಮಸ್ಯೆಯನ್ನು ಹುಟ್ಟು ಹಾಕಿರುವ ಯುದ್ಧವನ್ನು ಕೊನೆಗೊಳಿಸಲು ಅಮೆರಿಕ ಇರಾನ್‌ ಮುಂದೆ...

ಗುಜರಾತ್: ತೀವ್ರ ವಿರೋಧದ ನಡುವೆಯೂ ಏಕರೂಪ ನಾಗರೀಕ ಸಂಹಿತೆ ಮಸೂದೆ ಅಂಗೀಕಾರ; ಇದು ‘ಮುಸ್ಲಿಂ ವಿರೋಧಿ’ ಎಂದ ಕಾಂಗ್ರೆಸ್

ಗುಜರಾತ್ ವಿಧಾನಸಭೆ ಮಂಗಳವಾರ ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಮಸೂದೆಯನ್ನು ಅಂಗೀಕರಿಸಿದೆ. ಇದು ಧರ್ಮವನ್ನು ಲೆಕ್ಕಿಸದೆ ಮದುವೆ, ವಿಚ್ಛೇದನ, ಉತ್ತರಾಧಿಕಾರ ಮತ್ತು ಲಿವ್-ಇನ್ ಸಂಬಂಧಗಳನ್ನು ನಿಯಂತ್ರಿಸುವ ಸಾಮಾನ್ಯ ಕಾನೂನು ಚೌಕಟ್ಟನ್ನು ರಚಿಸುವ ಗುರಿಯನ್ನು...

ಅಜಿತ್ ಪವಾರ್ ಸಾವಿನ ಕುರಿತು ಹಲವು ಅನುಮಾನ : ಬೆಂಗಳೂರಿನಲ್ಲಿ ಎಫ್‌ಐಆರ್ ದಾಖಲು

ಮಹಾರಾಷ್ಟ್ರದ ಮಾಜಿ ಉಪಮುಖ್ಯಮಂತ್ರಿ ದಿವಂಗತ ಅಜಿತ್ ಪವಾರ್ ಅವರ ಸಾವಿನ ಕುರಿತು ಅನುಮಾನ ವ್ಯಕ್ತಪಡಿಸಿ, ಈ ಹಿಂದೆ ಸರಣಿ ಸುದ್ದಿಗೋಷ್ಠಿಗಳನ್ನು ನಡೆಸಿದ್ದ ಎನ್‌ಸಿಪಿ (ಎಸ್‌ಪಿ) ಶಾಸಕ ರೋಹಿತ್ ಪವಾರ್, ಮಂಗಳವಾರ (ಮಾ.24) ಬೆಂಗಳೂರಿನ...

ಇಂಧನ ಕೊರತೆ ವದಂತಿ: ಆತಂಕದಿಂದ ಕುಕ್ಕರ್, ಹಾಲಿನ ಡಬ್ಬಿ, ನೀರಿನ ಬಕೆಟ್ ಗಳಲ್ಲಿ ಇಂಧನ ಸಂಗ್ರಹಣೆಗೆ ಮುಂದಾದ ಜನರು

ಇಂಧನ ಕೊರತೆಯ ವದಂತಿಗಳಿಂದಾಗಿ ದೇಶದ ವಿವಿಧ ಭಾಗಗಳಲ್ಲಿ ಜನರು ಕುಕ್ಕರ್, ಅಡುಗೆ ಪಾತ್ರೆ, ಹಾಲಿನ ಡಬ್ಬಿಗಳು, ನೀರಿನ ಟ್ಯಾಂಕರ್, ನೀರಿನ ಬಕೆಟ್ ಮತ್ತು ಬ್ಯಾರೆಲ್‌ಗಳಂತಹ ಅಡುಗೆ ಸಲಕರಣೆಗಳಲ್ಲಿ ಪೆಟ್ರೋಲ್ ಮತ್ತು ಡೀಸೆಲ್ ಅನ್ನು...

ಪಂಜಾಬ್: ಮಹಿಳೆಗೆ ಲೈಂಗಿಕ ಶೋಷಣೆ, ಬೆದರಿಕೆ ಆರೋಪ; ತಲೆಮರೆಸಿಕೊಂಡಿದ್ದ ಎಎಪಿ ಶಾಸಕ ಹರ್ಮೀತ್ ಸಿಂಗ್ ಪಠಾಣಮಜ್ರಾ ಬಂಧನ 

ಕಳೆದ ಸೆಪ್ಟೆಂಬರ್‌ನಿಂದ ಅತ್ಯಾಚಾರ ಪ್ರಕರಣವೊಂದರಲ್ಲಿ ತಲೆಮರೆಸಿಕೊಂಡಿದ್ದ ಎಎಪಿ ಶಾಸಕ ಹರ್ಮೀತ್ ಸಿಂಗ್ ಪಠಾಣಮಜ್ರಾ ಅವರನ್ನು ಪಂಜಾಬ್ ಪೊಲೀಸರು ಮಧ್ಯಪ್ರದೇಶದ ಗ್ವಾಲಿಯರ್‌ನಲ್ಲಿ ಬಂಧಿಸಿದ್ದಾರೆ ಎಂದು ಅಧಿಕಾರಿಗಳು ಬುಧವಾರ ತಿಳಿಸಿದ್ದಾರೆ. ಸನೂರ್‌ನಿಂದ ಮೊದಲ ಬಾರಿಗೆ ಶಾಸಕರಾಗಿರುವ ಪಠಣಮಜ್ರಾ...

ಆಸ್ತಿ ವಿವರ ಮುಚ್ಚಿಟ್ಟು ನಾಮಪತ್ರ ಸಲ್ಲಿಸಿದ ಬಿಜೆಪಿ ಕೇರಳ ರಾಜ್ಯಾಧ್ಯಕ್ಷ ರಾಜೀವ್ ಚಂದ್ರಶೇಖರ್ : ಕಾಂಗ್ರೆಸ್ ಆರೋಪ

ಬಿಜೆಪಿ ಕೇರಳ ರಾಜ್ಯ ಘಟಕದ ಅಧ್ಯಕ್ಷ ಹಾಗೂ ಮಾಜಿ ಕೇಂದ್ರ ಸಚಿವ ರಾಜೀವ್ ಚಂದ್ರಶೇಖರ್ ತಮ್ಮ ಆಸ್ತಿ ವಿವರಗಳನ್ನು ಮುಚ್ಚಿಟ್ಟು ವಿಧಾನಸಭೆ ಚುನಾವಣೆಗೆ ನಾಮಪತ್ರ ಸಲ್ಲಿಸಿದ್ದಾರೆ ಎಂದು ಕಾಂಗ್ರೆಸ್ ಆರೋಪಿಸಿದೆ. ತಿರುವನಂತಪುರಂ ಜಿಲ್ಲೆಯ ನೇಮಮ್...

2026ರ ಮೊದಲ 74 ದಿನಗಳಲ್ಲಿ 170 ಕಸ್ಟಡಿ ಸಾವುಗಳು ವರದಿ; ಸಂಸತ್ತಿಗೆ ಕೇಂದ್ರ ಸರ್ಕಾರ ಮಾಹಿತಿ 

2026 ರ ಮೊದಲ 74 ದಿನಗಳಲ್ಲಿ (ಜನವರಿ 1 ರಿಂದ ಮಾರ್ಚ್ 15 ರವರೆಗೆ) ಭಾರತದಾದ್ಯಂತ ಒಟ್ಟು 170 ಕಸ್ಟಡಿ ಸಾವಿನ ಪ್ರಕರಣಗಳು ವರದಿಯಾಗಿವೆ ಎಂದು ಕೇಂದ್ರ ಸರ್ಕಾರ ಮಂಗಳವಾರ ಸಂಸತ್ತಿಗೆ ತಿಳಿಸಿದೆ. ಗೃಹ...

ಮುಸ್ಲಿಂ ಗ್ಯಾಸ್ ಏಜೆನ್ಸಿ ಮಾಲೀಕರನ್ನು ಬಾಂಗ್ಲಾದೇಶಿ ಎಂದು ನಿಂದನೆ; ಬುಲಂದ್‌ಶಹರ್‌ನಲ್ಲಿ ಹಿಂದೂ ರಕ್ಷಾ ದಳ ನಾಯಕನ ಬಂಧನ

ಉತ್ತರ ಪ್ರದೇಶದ ಬುಲಂದ್‌ಶಹರ್ ಜಿಲ್ಲೆಯಲ್ಲಿ ಹಿಂದೂ ರಕ್ಷಾ ದಳದ ನಾಯಕನೊಬ್ಬ ಮುಸ್ಲಿಂ ಗ್ಯಾಸ್ ಏಜೆನ್ಸಿ ಮಾಲೀಕರನ್ನು "ಬಾಂಗ್ಲಾದೇಶಿ" ಎಂದು ಕರೆದು ಬೆದರಿಕೆ ಹಾಕುತ್ತಿರುವ ವೀಡಿಯೊ ಕಾಣಿಸಿಕೊಂಡ ನಂತರ ಆತನನ್ನು ಬಂಧಿಸಲಾಗಿದೆ. ಜಿಲ್ಲೆಯ ಖುರ್ಜಾ ನಗರದಲ್ಲಿ...

ಭಾರತ 6ನೇ ಅತ್ಯಂತ ಕಲುಷಿತ ರಾಷ್ಟ್ರ; ಉತ್ತರ ಪ್ರದೇಶದ ಲೋನಿ ವಿಶ್ವದ ಅತ್ಯಂತ ಕಲುಷಿತ ನಗರ: ವರದಿ

ಪ್ರಮುಖ ವಾಯು ಮಾಲಿನ್ಯಕಾರಕ ಸೂಕ್ಷ್ಮ ಕಣಗಳ ಮಟ್ಟದಲ್ಲಿ ಭಾರತ ಆರನೇ ಅತ್ಯಂತ ಕಲುಷಿತ ರಾಷ್ಟ್ರವಾಗಿದ್ದರೆ, ಉತ್ತರ ಪ್ರದೇಶದ ಲೋನಿ ಜಗತ್ತಿನಾದ್ಯಂತ ಅತ್ಯಂತ ಕಲುಷಿತ ನಗರವಾಗಿದೆ. ದೆಹಲಿ ನಾಲ್ಕನೇ ಸ್ಥಾನದಲ್ಲಿದೆ ಎಂದು ವಿಶ್ವ ವಾಯು...