Homeಕರ್ನಾಟಕಉತ್ತರ ಕನ್ನಡ: ಪರಿಸರ ಪರಾಕ್ರಮಿ ಆಶೀಸರ ಮಾಣಿಯ ಗೂಟದ ಕಾರಿನ ಗಲಾಟೆ

ಉತ್ತರ ಕನ್ನಡ: ಪರಿಸರ ಪರಾಕ್ರಮಿ ಆಶೀಸರ ಮಾಣಿಯ ಗೂಟದ ಕಾರಿನ ಗಲಾಟೆ

- Advertisement -
- Advertisement -

| ಶುದ್ಧೋಧನ |

ಬಿಜೆಪಿ ಅಧಿಕಾರಕ್ಕೆ ಬಂದಾಗೆಲ್ಲ ಶಿರಸಿಯ ‘ಸು’ಪ್ರಸಿದ್ಧ ಸ್ವಯಂಘೋಷಿತ ಪರಿಸರ ಪರಾಕ್ರಮಿ ಅನಂತ ಹೆಗಡೆ ಆಶೀಸರ್‍ಗೆ ನಿಗಮ-ಮಂಡಳಿ ಹುದ್ದೆ ದಕ್ಕುತ್ತಿದೆ. ಅಂಥದೊಂದು ಗದ್ದುಗೆ ಏರುವ ಯಾವ ಯೋಗ್ಯತೆ ಇಲ್ಲದಿದ್ದರೂ ಆಶೀಸರ ಮಾಣಿಗೆ ಯೋಗ ಖುಲಾಯಿಸುತ್ತಿರುವುದು ಪಕ್ಕಾಚೆಡ್ಡಿ ಚಮತ್ಕಾರದಿಂದಷ್ಟೇ! ತಾನೊಬ್ಬ ಹುಟ್ಟಾ ಸಂಘಿ ಸರದಾರನೆಂತಲೂ ಪರಿಸರ ಬಚಾವಾಗಿರುವುದೇ ತನ್ನ ಮೂರೂವರೆ ದಶಕದ ಹಗಲಿರುಳಿನ ಹಾರಾಟದಿಂದೆಂತಲೂ ಎಂಬಂತೆ ಆರೆಸ್ಸೆಸ್‍ನ ಆಯಕಟ್ಟಿನ ರಿಂಗ್‍ಮಾಸ್ಟರ್‍ಗಳೆದುರು ಅದ್ಭುತ ಪ್ರದರ್ಶನ ಕೊಡಬಲ್ಲ ಆಶೀಸರ್ ಗೂಟದ ಕಾರು ಪಟಾಯಿಸುತ್ತಿದ್ದಾನೆ. ಬಿಜೆಪಿ-ಆರೆಸ್ಸೆಸ್‍ನ ಬ್ರಾಹ್ಮಣ ಲಾಬಿ 2008ರಲ್ಲಿ ಆಶೀಸರ್‍ಗೆ ಬಳುವಳಿಯಾಗಿ ಕೊಟ್ಟಿತ್ತು. ಈಗ ಅದೇ ಆಶೀಸರ್‍ಗೆ ಅದೇ ಕೇಸರಿ ಜನಿವಾರ ಕೂಟ ಜೀವ ವೈವಿಧ್ಯ ಮಂಡಳಿಯಲ್ಲಿ “ಪುನರ್ವಸತಿ” ಕಲ್ಪಿಸಿದೆ!

ಇದು ಉತ್ತರ ಕನ್ನಡ ಬಿಜೆಪಿಯ ನಿಷ್ಠಾವಂತ ಕಾರ್ಯಕರ್ತರನ್ನು ಕಿಚಾಯಿಸುತ್ತಿದೆ. ಸಹಜವಾಗೇ ಪಕ್ಷಕಟ್ಟಿದ ಹಿಂದುಳಿದ ವರ್ಗದ ಎರಡನೇ ಸ್ತರದ ಮರಿಮುಖಂಡರು ಕೆರಳಿದ್ದಾರೆ; ಪಕ್ಷಕ್ಕಾಗಿ ತಮ್ಮನ್ನು ದುಡಿಸಿಕೊಂಡು ಮಹತ್ವದ ಲಾಭದ ಸ್ಥಾನ-ಮಾನವೆಲ್ಲ ಬ್ರಾಹ್ಮಣರಿಗೆ ಕೊಡಬೇಕಾಗುತ್ತಿದೆ ಎಂಬ ಅಸಮಾಧಾನ ಭುಗಿಲೆದ್ದಿದೆ. ಎಂಪಿ ಅನಂತ್ಮಾಣಿ, ಸ್ಪೀಕರ್ ಕಾಗೇರಿ, ಜಿಲ್ಲಾ ಉಸ್ತುವಾರಿ ಮಂತ್ರಿಗಿರಿ ಮೀಸಲಿಡಲ್ಪಟ್ಟಿರುವ “ಅನರ್ಹ” ಶಿವರಾಮ ಹೆಬ್ಬಾರ್ ಮತ್ತು ನಿಗಮ-ಮಂಡಳಿಗೆ ವಕ್ಕರಿಸಿರುವ ಆಶೀಸರ ಎಲ್ಲರೂ ಹವ್ಯಕ ಬ್ರಾಹ್ಮಣ ಸಮುದಾಯದವರು. ಜಿಲ್ಲಾ ಬಿಜೆಪಿ ಅಧ್ಯಕ್ಷತೆ ಕೊಂಕಣಿ ಬ್ರಾಹ್ಮಣ ಹಳಿಯಾಳದ ಮಾಜಿ ಶಾಸಕ ಸುನಿಲ್ ಹೆಗ್ಡೆಗೆ ಕೊಡಲು ರಹಸ್ಯ ತಯಾರಿ ಮತ್ತೊಂದೆಡೆ ನಡೆದಿದೆ. ಒಟ್ಟಿನಲ್ಲಿ ಬ್ರಾಹ್ಮಣರ ಹಿಂದೂತ್ವದ ಅಧಿಕಾರ ರಾಜಕಾರಣದ ಯುದ್ಧದಲ್ಲಿ ದೀವರು, ಮೀನುಗಾರರು, ಹಾಲಕ್ಕಿ ಒಕ್ಕಲಿಗರೇ ಮುಂದಾದ ಶೂದ್ರರು ಬರೀ ಕಾಲಾಳುಗಳು ಮಾತ್ರ.

ಶೂದ್ರರ ಕೈಲಿ ಲಾಠಿಕೊಟ್ಟು ಶೀಟಿ ಊದುತ್ತಾ ಬೇಳೆ ಬೇಯಿಸಿಕೊಳ್ಳುವ ಜನಿವಾರ ಪಡೆಯ ತೆರೆಮರೆ ತಂತ್ರಗಾರರಲ್ಲಿ ಆಶೀಸರನೂ ಒಬ್ಬನೆಂಬುದಕ್ಕೆ ಅನುಮಾನವೇ ಇಲ್ಲ. ಸ್ವಜಾತಿ ಅನಂತ್ಮಾಣಿಗೇ ಟಾಂಗುಕೊಟ್ಟು ಎಂಪಿಗಿರಿ ಟಿಕೆಟ್ ಪಡೆಯಲು ಈತ ಚೆಡ್ಡಿ ಬಿಡಾರದಲ್ಲಿ ವಶೀಲಿ ಕಾರ್ಯಾಚರಣೆ ಮಾಡಿದ್ದೂ ಇದೆ. ಹಾಗಂತ ಉತ್ತರ ಕನ್ನಡ ಬಿಜೆಪಿಗೆ ಈತನಿಂದ ನಯಾಪೈಸೆ ಫಾಯ್ದೆಯಿಲ್ಲ. ಬ್ರಾಹ್ಮಣೇತರ ಕಾರ್ಯಕರ್ತರು ಕಟ್ಟಿದ ಹುತ್ತದಲ್ಲಿ ಸದ್ದಿಲ್ಲದೆ ಸೇರಿಕೊಳ್ಳುವ ಘಟಸರ್ಪವೆಂಬ ಚರ್ಚೆ ಸ್ಥಳೀಯ ಬಿಜೆಪಿಯಲ್ಲೀಗ ಜೋರಾಗಿದೆ. ಈತನ ಪರಿಸರ ಧೋರಣೆಯೂ ಇಬ್ಬಂದಿ ಸ್ವಜಾತಿ ಅಡಿಕೆ ತೋಟಿಗರಿಗೆ ಸರ್ಕಾರಿ ಯೋಜನೆಗಳಿಂದ ತೊಂದರೆ ಆಗುತ್ತದೆಂದಾಗ ಆಶೀಸರ್‍ನಲ್ಲಿ ಅತ್ಯುಗ್ರ ಪರಿಸರ ಕಾಳಜಿ ಶುರುಹೊಡೆಯುತ್ತದೆ! ಉತ್ತರ ಕನ್ನಡದ ಅಭಿವೃದ್ಧಿಯ ಭಾಗ್ಯದ ಬಾಗಿಲನ್ನೇ ತೆರೆಯಬಲ್ಲ ಹುಬ್ಬಳ್ಳಿ-ಅಂಕೋಲಾ ರೈಲು ಮಾರ್ಗಕ್ಕೆ ಆಶೀಸರ್ ನೇತೃತ್ವದ ಪರಿಸರವಾಧಿ ತಂಡ ಕಲ್ಲು ಹಾಕುತ್ತಲೇ ಬಂದಿದೆ!!

ಈ ರೈಲು ಹಳಿಯಿಂದ ಅರಣ್ಯ ನಾಶವಾಗುತ್ತದೆ, ವನ್ಯ ಪ್ರಾಣಿಗಳಿಗೆ ಗಂಡಾಂತರ, ಪರಿಸರ ಸರ್ವನಾಶವಾಗುತ್ತದೆಂದು ಬೊಬ್ಬಿರಿವ ಆಶೀಸರ್‍ಗೆ ತನ್ನ ಸಮುದಾಯಕ್ಕೆ ಅನುಕೂಲವಾಗುವ ಹಾವೇರಿ-ಶಿರಸಿ ರೈಲು ಮಾರ್ಗದ ಪರಿಸರ ಹಾನಿ ಗೌಣ! ಕುಮಟಾ-ಶಿರಸಿ ರಸ್ತೆ ಅಗಲಗೊಂಡು ರಾಷ್ಟ್ರೀಯ ಹೆದ್ದಾರಿಯಾದರೆ ಜೀವ ವೈವಿಧ್ಯಕ್ಕೆ ಧಕ್ಕೆ ಎಂಬ ವಾದ ಈ ಪರಿಸರ “ತಜ್ಞ”ನದು. ಆನರ ಬಹುಬೇಡಿಕೆಯ ಜಿಲ್ಲೆಯ ಮಹತ್ವದ ಯೋಜನೆಯಿದು. ಆಶೀಸರ್ ಜೀವ ವೈವಿಧ್ಯ ಮಂಡಳಿ ಅಧ್ಯಕ್ಷನಾಗುತ್ತಲೇ ಶಿರಸಿ-ಕುಮಟಾ ರಸ್ತೆ ಅಗಲೀಕರಣ ಯೋಜನೆಗೆ ಎಳ್ಳು-ನೀರು ಬಿಟ್ಟಂತಾಗಿದೆ!! ಪರಿಸರ ಸಂರಕ್ಷಣೆ ಕುರಿತು ಉದ್ದುದ್ದ ಭಾಷಣ ಬಿಗಿಯುವ ಈ ಪರಿಸರ ದುರಂಧರ ಎಕರೆಗಟ್ಟಲೆ ಅರಣ್ಯ ಕಬಳಿಸಿ ಸಮೃದ್ಧ ಅಡಿಕೆ ತೋಟ ಮಾಡಿಕೊಂಡಿರುವ ಅಪವಾದಕ್ಕೆ ತುತ್ತಾಗಿರುವುದು ವಿಪರ್ಯಾಸವೇ ಸರಿ!!

ಕಾಡು ನುಂಗಿರುವ “ಕ್ಯಾತಿ”ಯ ಆಶೀಸರ ಸ್ವರ್ಣವಲ್ಲಿ ಮಠದ ಹುಸಿ ಹಸಿರು ಸ್ವಾಮಿಯ ಆಸ್ಥಾನದ ಪರಿಸರ ಪಂಡಿತ. ಕಾವಿ-ಚೆಡ್ಡಿ ಪ್ರಭಾವದಿಂದ ರಾಜ್ಯ ಬಿಜೆಪಿಯ ಪರಮೋಚ್ಚ ನಾಯಕ ಸಂತೋಷ್‍ಜೀ ಕೃಪಾಕಟಾಕ್ಷಕ್ಕೆ ಪಾತ್ರನಾಗಿರುವ ಆಶೀಸರ್ ಮಾಣಿಗೆ ರಾಜ್ಯ ಜೀವ ವೈವಿಧ್ಯ ಮಂಡಳಿ ಪಡೆಯುವುದಕ್ಕೆ ತ್ರಾಸೇನೂ ಆಗಿಲ್ಲ! ಆಶೀಸರ್ ನೇಮಕಾತಿ ಘೋಷಣೆ ಆಗುತ್ತಲೇ ಉತ್ತರ ಕನ್ನಡ ಬಿಜೆಪಿ ಬಣ ಬಡಿದಾಟಕ್ಕೆ ಬಣ್ಣ ಬಂದುಬಿಟ್ಟಿದೆ. ಎಂಪಿ ಅನಂತ್ಮಾಣಿಗೆ ಮಂಡಳಿ ಅಧ್ಯಕ್ಷತೆ ಆಶೀಸರ್‍ಗೆ ಕೊಟ್ಟಿರುವುದು ಇಷ್ಟವಾಗಿಲ್ಲ. ಅನಂತ್ಮಾಣಿ ಎದುರಾಳಿ ಸ್ಪೀಕರ್ ಕಾಗೇರಿ- “ಪಾಪ, ಆಶೀಸರ್‍ಗೆ ಗೂಟದ ಕಾರೊಂದು ಕೊಡೋದ್ರಿಂದ ತೊಂದ್ರೆಂತದೂ ಇಲ್ಲೆ” ಎಂದು ಸಮಾಧಾನ ಮಂತ್ರ ಪಠಿಸುತ್ತಿದ್ದಾರೆ. ಆಶೀಸರ್ ನೇಮಕಾತಿಯನ್ನ ದೊಡ್ಡದೊಂದು ವರ್ಗ ಬಲವಾಗಿ ವಿರೋಧಿಸುತ್ತಿದೆ.

ಪಕ್ಷಕ್ಕಾಗಿ ಹಲವು ವರ್ಷದಿಂದ ನಿಷ್ಠೆಯಿಂದ ದುಡಿದ ಶೂದ್ರರನ್ನು ಕಡೆಗಣಿಸಿ ಜನಿವಾರ ಲಾಬಿ ಮಾಡೋರಿಗೆ ಅವಕಾಶ ಕೊಡುವ ಹೈಕಮಾಂಡ್ ವಿರುದ್ಧ ಕೂಗೆದ್ದಿದೆ. ಆಶೀಸರ್ ನೇಮಕಾತಿ ರದ್ದು ಮಾಡುವಂತೆ ಜಿಲ್ಲಾ ಬಿಜೆಪಿ ಅಧ್ಯಕ್ಷ ನಳಿನ್‍ಕುಮಾರ್ ಕಟೀಲ್‍ಗೆ ಲಗ್ಗೆ ಹಾಕಲು ಕಾರ್ಯಕರ್ತರು ಸ್ಕೆಚ್ ಹಾಕುತ್ತಿದ್ದಾರೆ. ಅಸಮಾನಿತರ ಬೆನ್ನಿಗೆ ಅನಂತ್ಮಾಣಿ ಬಲವಿರುವುದರಿಂದ ಆಶೀಸರ್ ಮುಖ ಸಪ್ಪಗಾಗಿದೆ. ಬಿಜೆಪಿಯ ಗ್ಯಾಂಗ್‍ವಾರ್ ಬೀದಿಗೆ ಬರುವ ಸೂಚನೆಗಳು ಗೋಚರಿಸುತ್ತಿವೆ. ತನ್ನ ಎಂಪಿ ಸೀಟಿಗೇ ಕೈಹಾಕಿದ್ದ, ಮುಂದೂ ಹಾಕಲಿರುವ ಆಶೀಸರ್‍ಗೆ ಅನಂತ್ಮಾಣಿ ಸುಮ್ಮನೆ ಬಿಡಲು ಸಾಧ್ಯವಾ?!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

ಅಮೆರಿಕ, ಇಸ್ರೇಲ್, ಇರಾನ್ ದಾಳಿ-ಪ್ರತಿ ದಾಳಿ : ಈವರೆಗೆ ಕನಿಷ್ಠ 8 ಸಾವು

ಶನಿವಾರ (ಫೆ.28) ಇಸ್ರೇಲ್ ಮತ್ತು ಅಮೆರಿಕ ಜಂಟಿಯಾಗಿ ಇರಾನ್ ಮೇಲೆ ನಡೆಸಿದ ದಾಳಿ ಹಾಗೂ ಅದಕ್ಕೆ ಪ್ರತಿಯಾಗಿ ಇರಾನ್ ನಡೆಸಿದ ಪ್ರತಿ-ದಾಳಿಗಳಲ್ಲಿ ಹಲವು ಸಾವು-ನೋವುಗಳು ಸಂಭವಿಸಿದ ಬಗ್ಗೆ ವರದಿಯಾಗಿದೆ. ದಕ್ಷಿಣ ಇರಾನ್‌ನ ಮಿನಾಬ್‌ನಲ್ಲಿರುವ ಹೆಣ್ಣು...

ಮಧ್ಯಪ್ರಾಚ್ಯ ಉದ್ವಿಗ್ನ : ಯುಎಇ, ಬಹ್ರೇನ್‌, ಕತಾರ್, ಕುವೈತ್‌ನ ಅಮೆರಿಕ ಸೇನಾ ನೆಲೆಗಳ ಮೇಲೆ ಇರಾನ್ ಪ್ರತಿ ದಾಳಿ!

ಶನಿವಾರ (ಫೆ.28) ಇಸ್ರೇಲ್ ಮತ್ತು ಅಮೆರಿಕ ನಡೆಸಿದ ಜಂಟಿ ದಾಳಿಗೆ ಪ್ರತಿಯಾಗಿ, ಇರಾನ್ ಅಮೆರಿಕದ ಮಿಲಿಟರಿ ನೆಲೆಗಳಿರುವ ಹಲವು ಅರಬ್ ರಾಷ್ಟ್ರಗಳ ಮೇಲೆ ಕ್ಷಿಪಣಿ ದಾಳಿ ನಡೆಸಿದೆ ಎಂದು ವರದಿಯಾಗಿದೆ. ಇರಾನ್ ಉಡಾಯಿಸಿದ ಬ್ಯಾಲಿಸ್ಟಿಕ್...

ರಾಜ್ಯಸಭೆಗೆ ಮೇನಕಾ ಗುರುಸ್ವಾಮಿ : ದೇಶದ ಮೊದಲ LGBTQ+ ಸಂಸದೆಯಾಗಲು ಅಣಿಯಾದ ಹಿರಿಯ ವಕೀಲೆ

ರಾಜ್ಯಸಭಾ ಚುನಾವಣೆಗೆ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಶುಕ್ರವಾರ (ಫೆ.27) ವಕೀಲೆ ಮೇನಕಾ ಗುರುಸ್ವಾಮಿ, ಪಶ್ಚಿಮ ಬಂಗಾಳದ ಮಾಜಿ ಪೊಲೀಸ್ ಮುಖ್ಯಸ್ಥ ರಾಜೀವ್ ಕುಮಾರ್, ರಾಜ್ಯ ಸಂಪುಟ ಸಚಿವ ಬಾಬುಲ್ ಸುಪ್ರಿಯೋ ಮತ್ತು ನಟಿ...

ದಾಳಿ ಮುಂದುವರಿಸುವ ಸೂಚನೆ ನೀಡಿದ ಟ್ರಂಪ್ : ಇರಾನ್‌ನಿಂದ ತೀವ್ರ ಪ್ರತಿದಾಳಿಯ ಎಚ್ಚರಿಕೆ

ಅಮೆರಿಕದ ಸಹಯೋಗದೊಂದಿಗೆ ಇಸ್ರೇಲ್ ಶನಿವಾರ (ಫೆ.28) ಇರಾನ್‌ ಮೇಲೆ ಕ್ಷಿಪಣಿ ದಾಳಿ ನಡೆಸಿದೆ. ಇದರಿಂದ ಮಧ್ಯಪ್ರಾಚ್ಯದಲ್ಲಿ ಯುದ್ಧ ಪ್ರಾರಂಭವಾಗುವಾಗ ಎಲ್ಲಾ ಲಕ್ಷಣಗಳು ಗೋಚರಿಸುತ್ತಿವೆ. ಇಸ್ರೇಲ್‌ ಇರಾನ್‌ನ ರಾಜಧಾನಿ ಟೆಹ್ರಾನ್‌ ಸೇರಿದಂತೆ ದೇಶದ ಹಲವು ಸ್ಥಳಗಳ...

ಅಮೆರಿಕ ಅಣತಿಯಂತೆ ಇರಾನ್ ಮೇಲೆ ಇಸ್ರೇಲ್ ದಾಳಿ : ಟೆಹ್ರಾನ್‌ನ ಹಲವೆಡೆ ಭಾರೀ ಸ್ಪೋಟ

ಇರಾನ್ ಮೇಲೆ ಇಸ್ರೇಲ್ ಶನಿವಾರ (ಫೆ.28) ವೈಮಾನಿಕ ದಾಳಿ ನಡೆಸಿರುವುದಾಗಿ ಅಂತಾರಾಷ್ಟ್ರೀಯ ಮಾಧ್ಯಮಗಳು ವರದಿ ಮಾಡಿವೆ. ಈ ದಾಳಿಯನ್ನು ಇಸ್ರೇಲ್ 'ಪೂರ್ವಭಾವಿ ದಾಳಿ' ಎಂದು ಕರೆದಿದೆ. ಇಂದು ಬೆಳಿಗ್ಗಿನ ಹೇಳಿಕೆಯೊಂದರಲ್ಲಿ, ಇಸ್ರೇಲ್ ರಕ್ಷಣಾ ಸಚಿವ...

ನಟಿಯ ಅಪಹರಣ, ಅತ್ಯಾಚಾರ ಪ್ರಕರಣ : ನಟ ದಿಲೀಪ್, ಇತರರ ಖುಲಾಸೆ ಪ್ರಶ್ನಿಸಿ ಮೇಲ್ಮನವಿ ಸಲ್ಲಿಸಿದ ಕೇರಳ ಸರ್ಕಾರ

ನಟಿಯ ಅಪಹರಣ ಮತ್ತು ಅತ್ಯಾಚಾರ ಪ್ರಕರಣದಲ್ಲಿ (2017ರ ಪ್ರಕರಣ) ಮಲಯಾಳಂನ ಪ್ರಮುಖ ನಟ ದಿಲೀಪ್ ಅವರನ್ನು ಎಲ್ಲಾ ಆರೋಪಗಳಿಂದ ಮುಕ್ತಗೊಳಿಸಿದ ಸೆಷನ್ಸ್ ನ್ಯಾಯಾಲಯದ ಆದೇಶವನ್ನು ಪ್ರಶ್ನಿಸಿ ಕೇರಳ ಸರ್ಕಾರ ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿದೆ. ಪ್ರಕರಣದ...

‘ದಿ ಕೇರಳ ಸ್ಟೋರಿ-2’ ಬಿಡುಗಡೆಗೆ ವಿಧಿಸಿದ್ದ ತಡೆಯಾಜ್ಞೆ ತೆರವು

'ದಿ ಕೇರಳ ಸ್ಟೋರಿ-2 : ಗೋಸ್ ಬಿಯಾಂಡ್' ಚಿತ್ರದ ಬಿಡುಗಡೆಗೆ ವಿಧಿಸಲಾಗಿದ್ದ ಮಧ್ಯಂತರ ತಡೆಯಾಜ್ಞೆಯನ್ನು ಕೇರಳ ಹೈಕೋರ್ಟ್ ವಿಭಾಗೀಯ ಪೀಠ ಶುಕ್ರವಾರ (ಫೆ.27) ತೆರವುಗೊಳಿಸಿದೆ. 'ಕೋಮು ಸಾಮರಸ್ಯ ಕದಡುವ ಸಾಧ್ಯತೆ'ಯನ್ನು ಉಲ್ಲೇಖಿಸಿ ನ್ಯಾಯಮೂರ್ತಿ ಬೆಚು...

‘ದೆಹಲಿಯಲ್ಲಿ ಮತ್ತೆ ಚುನಾವಣೆ ನಡೆಸಿ; ಬಿಜೆಪಿ 10ಕ್ಕಿಂತ ಹೆಚ್ಚು ಸ್ಥಾನ ಗೆದ್ದರೆ ರಾಜಕೀಯ ತ್ಯಜಿಸುತ್ತೇನೆ’: ಕೇಜ್ರಿವಾಲ್ ಸವಾಲು

"ದೆಹಲಿಯಲ್ಲಿ ಮತ್ತೆ ಚುನಾವಣೆ ನಡೆಸಿ, ಬಿಜೆಪಿ ಹತ್ತಕ್ಕಿಂತ ಹೆಚ್ಚು ಸ್ಥಾನಗಳನ್ನು ಗೆದ್ದರೆ ನಾನು ರಾಜಕೀಯ ತ್ಯಜಿಸುತ್ತೇನೆ" ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಆಮ್‌ ಆದ್ಮಿ ಪಕ್ಷದ (ಎಎಪಿ) ಮುಖ್ಯಸ್ಥ ಅರವಿಂದ್ ಕೇಜ್ರಿವಾಲ್ ಹೇಳಿದ್ದಾರೆ....

ಚನ್ನರಾಯಪಟ್ಟಣ| ಭೂಸ್ವಾಧೀನ ವಿರುದ್ಧ ಗೆದ್ದ ರೈತರಿಂದ ‘ಭೂಮಿ ಹಬ್ಬ’ ಸಂಭ್ರಮ: ಹೋರಾಟದ ಒಡನಾಡಿಗಳಿಗೆ ಗೌರವ ಸಮರ್ಪಣೆ

ದೇವನಹಳ್ಳಿಯ ಚನ್ನರಾಯಪಟ್ಟಣದ ಹೋಬಳಿಯ 13 ಹಳ್ಳಿಗಳ 1,777 ಎಕರೆ ಕೃಷಿ ಭೂಮಿಯನ್ನು ಉಳಿಸಿಕೊಳ್ಳಲು ರೈತರು ನಡೆಸಿದ ಸುದೀರ್ಘ ನಾಲ್ಕು ವರ್ಷಗಳ ಸತ್ಯಾಗ್ರಹಕ್ಕೆ ಐತಿಹಾಸಿಕ ಜಯ ಲಭಿಸಿದ ಹಿನ್ನಲೆಯಲ್ಲಿ, ಭೂಸ್ವಾದೀನ ವಿರೋಧಿ ಹೋರಾಟ ಸಮಿತಿಯು...

ಅಬಕಾರಿ ಹಗರಣದಲ್ಲಿ ಕೇಜ್ರಿವಾಲ್ ಮತ್ತು ಇತರರು ಖುಲಾಸೆ: ದೆಹಲಿ ಹೈಕೋರ್ಟ್‌ಗೆ ಮೇಲ್ಮನವಿ ಸಲ್ಲಿಸಿದ ಸಿಬಿಐ

ಮದ್ಯ ನೀತಿ ಪ್ರಕರಣದಲ್ಲಿ ಮಾಜಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್, ಮಾಜಿ ಉಪಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ಮತ್ತು ಇತರರನ್ನು ಖುಲಾಸೆಗೊಳಿಸಿದ ವಿಶೇಷ ನ್ಯಾಯಾಲಯದ ಆದೇಶವನ್ನು ಪ್ರಶ್ನಿಸಿ ಸಿಬಿಐ ದೆಹಲಿ ಹೈಕೋರ್ಟ್‌ನಲ್ಲಿ ಮೇಲ್ಮನವಿ ಸಲ್ಲಿಸಿದೆ ಎಂದು...