Homeಕರ್ನಾಟಕಉತ್ತರ ಕನ್ನಡ: ಪರಿಸರ ಪರಾಕ್ರಮಿ ಆಶೀಸರ ಮಾಣಿಯ ಗೂಟದ ಕಾರಿನ ಗಲಾಟೆ

ಉತ್ತರ ಕನ್ನಡ: ಪರಿಸರ ಪರಾಕ್ರಮಿ ಆಶೀಸರ ಮಾಣಿಯ ಗೂಟದ ಕಾರಿನ ಗಲಾಟೆ

- Advertisement -
- Advertisement -

| ಶುದ್ಧೋಧನ |

ಬಿಜೆಪಿ ಅಧಿಕಾರಕ್ಕೆ ಬಂದಾಗೆಲ್ಲ ಶಿರಸಿಯ ‘ಸು’ಪ್ರಸಿದ್ಧ ಸ್ವಯಂಘೋಷಿತ ಪರಿಸರ ಪರಾಕ್ರಮಿ ಅನಂತ ಹೆಗಡೆ ಆಶೀಸರ್‍ಗೆ ನಿಗಮ-ಮಂಡಳಿ ಹುದ್ದೆ ದಕ್ಕುತ್ತಿದೆ. ಅಂಥದೊಂದು ಗದ್ದುಗೆ ಏರುವ ಯಾವ ಯೋಗ್ಯತೆ ಇಲ್ಲದಿದ್ದರೂ ಆಶೀಸರ ಮಾಣಿಗೆ ಯೋಗ ಖುಲಾಯಿಸುತ್ತಿರುವುದು ಪಕ್ಕಾಚೆಡ್ಡಿ ಚಮತ್ಕಾರದಿಂದಷ್ಟೇ! ತಾನೊಬ್ಬ ಹುಟ್ಟಾ ಸಂಘಿ ಸರದಾರನೆಂತಲೂ ಪರಿಸರ ಬಚಾವಾಗಿರುವುದೇ ತನ್ನ ಮೂರೂವರೆ ದಶಕದ ಹಗಲಿರುಳಿನ ಹಾರಾಟದಿಂದೆಂತಲೂ ಎಂಬಂತೆ ಆರೆಸ್ಸೆಸ್‍ನ ಆಯಕಟ್ಟಿನ ರಿಂಗ್‍ಮಾಸ್ಟರ್‍ಗಳೆದುರು ಅದ್ಭುತ ಪ್ರದರ್ಶನ ಕೊಡಬಲ್ಲ ಆಶೀಸರ್ ಗೂಟದ ಕಾರು ಪಟಾಯಿಸುತ್ತಿದ್ದಾನೆ. ಬಿಜೆಪಿ-ಆರೆಸ್ಸೆಸ್‍ನ ಬ್ರಾಹ್ಮಣ ಲಾಬಿ 2008ರಲ್ಲಿ ಆಶೀಸರ್‍ಗೆ ಬಳುವಳಿಯಾಗಿ ಕೊಟ್ಟಿತ್ತು. ಈಗ ಅದೇ ಆಶೀಸರ್‍ಗೆ ಅದೇ ಕೇಸರಿ ಜನಿವಾರ ಕೂಟ ಜೀವ ವೈವಿಧ್ಯ ಮಂಡಳಿಯಲ್ಲಿ “ಪುನರ್ವಸತಿ” ಕಲ್ಪಿಸಿದೆ!

ಇದು ಉತ್ತರ ಕನ್ನಡ ಬಿಜೆಪಿಯ ನಿಷ್ಠಾವಂತ ಕಾರ್ಯಕರ್ತರನ್ನು ಕಿಚಾಯಿಸುತ್ತಿದೆ. ಸಹಜವಾಗೇ ಪಕ್ಷಕಟ್ಟಿದ ಹಿಂದುಳಿದ ವರ್ಗದ ಎರಡನೇ ಸ್ತರದ ಮರಿಮುಖಂಡರು ಕೆರಳಿದ್ದಾರೆ; ಪಕ್ಷಕ್ಕಾಗಿ ತಮ್ಮನ್ನು ದುಡಿಸಿಕೊಂಡು ಮಹತ್ವದ ಲಾಭದ ಸ್ಥಾನ-ಮಾನವೆಲ್ಲ ಬ್ರಾಹ್ಮಣರಿಗೆ ಕೊಡಬೇಕಾಗುತ್ತಿದೆ ಎಂಬ ಅಸಮಾಧಾನ ಭುಗಿಲೆದ್ದಿದೆ. ಎಂಪಿ ಅನಂತ್ಮಾಣಿ, ಸ್ಪೀಕರ್ ಕಾಗೇರಿ, ಜಿಲ್ಲಾ ಉಸ್ತುವಾರಿ ಮಂತ್ರಿಗಿರಿ ಮೀಸಲಿಡಲ್ಪಟ್ಟಿರುವ “ಅನರ್ಹ” ಶಿವರಾಮ ಹೆಬ್ಬಾರ್ ಮತ್ತು ನಿಗಮ-ಮಂಡಳಿಗೆ ವಕ್ಕರಿಸಿರುವ ಆಶೀಸರ ಎಲ್ಲರೂ ಹವ್ಯಕ ಬ್ರಾಹ್ಮಣ ಸಮುದಾಯದವರು. ಜಿಲ್ಲಾ ಬಿಜೆಪಿ ಅಧ್ಯಕ್ಷತೆ ಕೊಂಕಣಿ ಬ್ರಾಹ್ಮಣ ಹಳಿಯಾಳದ ಮಾಜಿ ಶಾಸಕ ಸುನಿಲ್ ಹೆಗ್ಡೆಗೆ ಕೊಡಲು ರಹಸ್ಯ ತಯಾರಿ ಮತ್ತೊಂದೆಡೆ ನಡೆದಿದೆ. ಒಟ್ಟಿನಲ್ಲಿ ಬ್ರಾಹ್ಮಣರ ಹಿಂದೂತ್ವದ ಅಧಿಕಾರ ರಾಜಕಾರಣದ ಯುದ್ಧದಲ್ಲಿ ದೀವರು, ಮೀನುಗಾರರು, ಹಾಲಕ್ಕಿ ಒಕ್ಕಲಿಗರೇ ಮುಂದಾದ ಶೂದ್ರರು ಬರೀ ಕಾಲಾಳುಗಳು ಮಾತ್ರ.

ಶೂದ್ರರ ಕೈಲಿ ಲಾಠಿಕೊಟ್ಟು ಶೀಟಿ ಊದುತ್ತಾ ಬೇಳೆ ಬೇಯಿಸಿಕೊಳ್ಳುವ ಜನಿವಾರ ಪಡೆಯ ತೆರೆಮರೆ ತಂತ್ರಗಾರರಲ್ಲಿ ಆಶೀಸರನೂ ಒಬ್ಬನೆಂಬುದಕ್ಕೆ ಅನುಮಾನವೇ ಇಲ್ಲ. ಸ್ವಜಾತಿ ಅನಂತ್ಮಾಣಿಗೇ ಟಾಂಗುಕೊಟ್ಟು ಎಂಪಿಗಿರಿ ಟಿಕೆಟ್ ಪಡೆಯಲು ಈತ ಚೆಡ್ಡಿ ಬಿಡಾರದಲ್ಲಿ ವಶೀಲಿ ಕಾರ್ಯಾಚರಣೆ ಮಾಡಿದ್ದೂ ಇದೆ. ಹಾಗಂತ ಉತ್ತರ ಕನ್ನಡ ಬಿಜೆಪಿಗೆ ಈತನಿಂದ ನಯಾಪೈಸೆ ಫಾಯ್ದೆಯಿಲ್ಲ. ಬ್ರಾಹ್ಮಣೇತರ ಕಾರ್ಯಕರ್ತರು ಕಟ್ಟಿದ ಹುತ್ತದಲ್ಲಿ ಸದ್ದಿಲ್ಲದೆ ಸೇರಿಕೊಳ್ಳುವ ಘಟಸರ್ಪವೆಂಬ ಚರ್ಚೆ ಸ್ಥಳೀಯ ಬಿಜೆಪಿಯಲ್ಲೀಗ ಜೋರಾಗಿದೆ. ಈತನ ಪರಿಸರ ಧೋರಣೆಯೂ ಇಬ್ಬಂದಿ ಸ್ವಜಾತಿ ಅಡಿಕೆ ತೋಟಿಗರಿಗೆ ಸರ್ಕಾರಿ ಯೋಜನೆಗಳಿಂದ ತೊಂದರೆ ಆಗುತ್ತದೆಂದಾಗ ಆಶೀಸರ್‍ನಲ್ಲಿ ಅತ್ಯುಗ್ರ ಪರಿಸರ ಕಾಳಜಿ ಶುರುಹೊಡೆಯುತ್ತದೆ! ಉತ್ತರ ಕನ್ನಡದ ಅಭಿವೃದ್ಧಿಯ ಭಾಗ್ಯದ ಬಾಗಿಲನ್ನೇ ತೆರೆಯಬಲ್ಲ ಹುಬ್ಬಳ್ಳಿ-ಅಂಕೋಲಾ ರೈಲು ಮಾರ್ಗಕ್ಕೆ ಆಶೀಸರ್ ನೇತೃತ್ವದ ಪರಿಸರವಾಧಿ ತಂಡ ಕಲ್ಲು ಹಾಕುತ್ತಲೇ ಬಂದಿದೆ!!

ಈ ರೈಲು ಹಳಿಯಿಂದ ಅರಣ್ಯ ನಾಶವಾಗುತ್ತದೆ, ವನ್ಯ ಪ್ರಾಣಿಗಳಿಗೆ ಗಂಡಾಂತರ, ಪರಿಸರ ಸರ್ವನಾಶವಾಗುತ್ತದೆಂದು ಬೊಬ್ಬಿರಿವ ಆಶೀಸರ್‍ಗೆ ತನ್ನ ಸಮುದಾಯಕ್ಕೆ ಅನುಕೂಲವಾಗುವ ಹಾವೇರಿ-ಶಿರಸಿ ರೈಲು ಮಾರ್ಗದ ಪರಿಸರ ಹಾನಿ ಗೌಣ! ಕುಮಟಾ-ಶಿರಸಿ ರಸ್ತೆ ಅಗಲಗೊಂಡು ರಾಷ್ಟ್ರೀಯ ಹೆದ್ದಾರಿಯಾದರೆ ಜೀವ ವೈವಿಧ್ಯಕ್ಕೆ ಧಕ್ಕೆ ಎಂಬ ವಾದ ಈ ಪರಿಸರ “ತಜ್ಞ”ನದು. ಆನರ ಬಹುಬೇಡಿಕೆಯ ಜಿಲ್ಲೆಯ ಮಹತ್ವದ ಯೋಜನೆಯಿದು. ಆಶೀಸರ್ ಜೀವ ವೈವಿಧ್ಯ ಮಂಡಳಿ ಅಧ್ಯಕ್ಷನಾಗುತ್ತಲೇ ಶಿರಸಿ-ಕುಮಟಾ ರಸ್ತೆ ಅಗಲೀಕರಣ ಯೋಜನೆಗೆ ಎಳ್ಳು-ನೀರು ಬಿಟ್ಟಂತಾಗಿದೆ!! ಪರಿಸರ ಸಂರಕ್ಷಣೆ ಕುರಿತು ಉದ್ದುದ್ದ ಭಾಷಣ ಬಿಗಿಯುವ ಈ ಪರಿಸರ ದುರಂಧರ ಎಕರೆಗಟ್ಟಲೆ ಅರಣ್ಯ ಕಬಳಿಸಿ ಸಮೃದ್ಧ ಅಡಿಕೆ ತೋಟ ಮಾಡಿಕೊಂಡಿರುವ ಅಪವಾದಕ್ಕೆ ತುತ್ತಾಗಿರುವುದು ವಿಪರ್ಯಾಸವೇ ಸರಿ!!

ಕಾಡು ನುಂಗಿರುವ “ಕ್ಯಾತಿ”ಯ ಆಶೀಸರ ಸ್ವರ್ಣವಲ್ಲಿ ಮಠದ ಹುಸಿ ಹಸಿರು ಸ್ವಾಮಿಯ ಆಸ್ಥಾನದ ಪರಿಸರ ಪಂಡಿತ. ಕಾವಿ-ಚೆಡ್ಡಿ ಪ್ರಭಾವದಿಂದ ರಾಜ್ಯ ಬಿಜೆಪಿಯ ಪರಮೋಚ್ಚ ನಾಯಕ ಸಂತೋಷ್‍ಜೀ ಕೃಪಾಕಟಾಕ್ಷಕ್ಕೆ ಪಾತ್ರನಾಗಿರುವ ಆಶೀಸರ್ ಮಾಣಿಗೆ ರಾಜ್ಯ ಜೀವ ವೈವಿಧ್ಯ ಮಂಡಳಿ ಪಡೆಯುವುದಕ್ಕೆ ತ್ರಾಸೇನೂ ಆಗಿಲ್ಲ! ಆಶೀಸರ್ ನೇಮಕಾತಿ ಘೋಷಣೆ ಆಗುತ್ತಲೇ ಉತ್ತರ ಕನ್ನಡ ಬಿಜೆಪಿ ಬಣ ಬಡಿದಾಟಕ್ಕೆ ಬಣ್ಣ ಬಂದುಬಿಟ್ಟಿದೆ. ಎಂಪಿ ಅನಂತ್ಮಾಣಿಗೆ ಮಂಡಳಿ ಅಧ್ಯಕ್ಷತೆ ಆಶೀಸರ್‍ಗೆ ಕೊಟ್ಟಿರುವುದು ಇಷ್ಟವಾಗಿಲ್ಲ. ಅನಂತ್ಮಾಣಿ ಎದುರಾಳಿ ಸ್ಪೀಕರ್ ಕಾಗೇರಿ- “ಪಾಪ, ಆಶೀಸರ್‍ಗೆ ಗೂಟದ ಕಾರೊಂದು ಕೊಡೋದ್ರಿಂದ ತೊಂದ್ರೆಂತದೂ ಇಲ್ಲೆ” ಎಂದು ಸಮಾಧಾನ ಮಂತ್ರ ಪಠಿಸುತ್ತಿದ್ದಾರೆ. ಆಶೀಸರ್ ನೇಮಕಾತಿಯನ್ನ ದೊಡ್ಡದೊಂದು ವರ್ಗ ಬಲವಾಗಿ ವಿರೋಧಿಸುತ್ತಿದೆ.

ಪಕ್ಷಕ್ಕಾಗಿ ಹಲವು ವರ್ಷದಿಂದ ನಿಷ್ಠೆಯಿಂದ ದುಡಿದ ಶೂದ್ರರನ್ನು ಕಡೆಗಣಿಸಿ ಜನಿವಾರ ಲಾಬಿ ಮಾಡೋರಿಗೆ ಅವಕಾಶ ಕೊಡುವ ಹೈಕಮಾಂಡ್ ವಿರುದ್ಧ ಕೂಗೆದ್ದಿದೆ. ಆಶೀಸರ್ ನೇಮಕಾತಿ ರದ್ದು ಮಾಡುವಂತೆ ಜಿಲ್ಲಾ ಬಿಜೆಪಿ ಅಧ್ಯಕ್ಷ ನಳಿನ್‍ಕುಮಾರ್ ಕಟೀಲ್‍ಗೆ ಲಗ್ಗೆ ಹಾಕಲು ಕಾರ್ಯಕರ್ತರು ಸ್ಕೆಚ್ ಹಾಕುತ್ತಿದ್ದಾರೆ. ಅಸಮಾನಿತರ ಬೆನ್ನಿಗೆ ಅನಂತ್ಮಾಣಿ ಬಲವಿರುವುದರಿಂದ ಆಶೀಸರ್ ಮುಖ ಸಪ್ಪಗಾಗಿದೆ. ಬಿಜೆಪಿಯ ಗ್ಯಾಂಗ್‍ವಾರ್ ಬೀದಿಗೆ ಬರುವ ಸೂಚನೆಗಳು ಗೋಚರಿಸುತ್ತಿವೆ. ತನ್ನ ಎಂಪಿ ಸೀಟಿಗೇ ಕೈಹಾಕಿದ್ದ, ಮುಂದೂ ಹಾಕಲಿರುವ ಆಶೀಸರ್‍ಗೆ ಅನಂತ್ಮಾಣಿ ಸುಮ್ಮನೆ ಬಿಡಲು ಸಾಧ್ಯವಾ?!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

‘ನಮ್ಮ ಹಟ್ಟಿ’ ಕೇವಲ ದೊರೈರಾಜು ಅವರ ಕಥೆಯಲ್ಲ, ಒಂದು ಸಾಂಸ್ಕೃತಿಕ ಲೋಕವನ್ನೇ ಕಟ್ಟಿಕೊಡುವ ಕೃತಿ’: ಕೋಟಿಗಾನಹಳ್ಳಿ ರಾಮಯ್ಯ 

‘ಸಾಮಾನ್ಯವಾಗಿ ಆತ್ಮಕಥನಗಳು ಅಂದರೆ ಒಬ್ಬ ವ್ಯಕ್ತಿಯ ವಿವರಗಳು ಬಿಚ್ಚಿಕೊಳ್ಳುತ್ತಾ ಹೋಗುತ್ತವೆ. ಆದರೆ ‘ನಮ್ಮ ಹಟ್ಟಿ’ ಆತ್ಮಕಥಾನಕದಲ್ಲಿ ಒಂದು ಹಟ್ಟಿಯ ವಿವರಗಳು ಬಿಚ್ಚಿಕೊಳ್ಳುತ್ತಾ ಹೋಗುತ್ತವೆ. ಅಲ್ಲಿರುವ ಅನೇಕ ಕುಶಲ ಕರ್ಮಿಗಳು, ಹಾಗೂ ವಿಶಿಷ್ಟ ಲೋಕವೇ...

ಪ. ಬಂಗಾಳ ಎಸ್‌ಐಆರ್ | ಮೈಕ್ರೋ ಅಬ್ಸರ್ವರ್ಸ್ ಬದಲಿಗೆ 8,505 ಗ್ರೂಪ್ ಬಿ ಅಧಿಕಾರಿಗಳನ್ನು ಒದಗಿಸುತ್ತೇವೆ : ಚು. ಆಯೋಗಕ್ಕೆ ತಿಳಿಸಿದ ಮಮತಾ ಸರ್ಕಾರ

ರಾಜ್ಯದಲ್ಲಿ ಪ್ರಸ್ತುತ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಕಾರ್ಯಕ್ಕಾಗಿ ಮೈಕ್ರೋ ಅಬ್ಸರ್ವರ್ಸ್ ಬದಲಿಗೆ ತನ್ನ ಅಧೀನದ ಸುಮಾರು 8,505 ಗ್ರೂಪ್ ಬಿ ಅಧಿಕಾರಿಗಳನ್ನು ನಿಯೋಜಿಸಲು ಸಿದ್ಧವಿರುವುದಾಗಿ ಪಶ್ಚಿಮ ಬಂಗಾಳ ಸರ್ಕಾರ ಕೇಂದ್ರ...

ಸಿಎಂ ಶರ್ಮಾ ಮುಸ್ಲಿಮರಿಗೆ ಗುಂಡಿಕ್ಕಿದಂತೆ ತೋರಿಸುವ ವಿಡಿಯೋ ಹಂಚಿಕೊಂಡ ಅಸ್ಸಾಂ ಬಿಜೆಪಿ!

ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಮುಸ್ಲಿಮರಿಗೆ ಗುಂಡಿಕ್ಕಿದಂತೆ ತೋರಿಸುವ ವಿಡಿಯೋವನ್ನು ಅಸ್ಸಾಂ ಬಿಜೆಪಿಯ ರಾಜ್ಯ ಘಟಕ ತನ್ನ ಅಧಿಕೃತ ಎಕ್ಸ್ ಹ್ಯಾಂಡಲ್‌ನಲ್ಲಿ ಶನಿವಾರ (ಫೆ.7) ಹಂಚಿಕೊಂಡಿತ್ತು. ತೀವ್ರ ಆಕ್ರೋಶ ವ್ಯಕ್ತವಾದ ಬಳಿಕ ಅದನ್ನು...

ಯಾವುದೇ ಕಾರಣಕ್ಕೂ ಕೇರಳದಲ್ಲಿ ಎನ್‌ಪಿಆರ್ ಜಾರಿಯಾಗುವುದಿಲ್ಲ : ಸಿಎಂ ಪಿಣರಾಯಿ ವಿಜಯನ್

ಕೇರಳದಲ್ಲಿ ರಾಷ್ಟ್ರೀಯ ಜನಸಂಖ್ಯಾ ನೋಂದಣಿ (ಎನ್‌ಪಿಆರ್) ಯನ್ನು ಜಾರಿಗೆ ತರಲು ಬಿಡುವುದಿಲ್ಲ ಎಂದು ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಶನಿವಾರ (ಫೆ.7) ಪುನರುಚ್ಚರಿಸಿದ್ದಾರೆ. ಈ ಬಗ್ಗೆ ಸಾಮಾಜಿಕ ಜಾಲತಾಣಗಳಲ್ಲಿ ಪೋಸ್ಟ್ ಹಾಕಿರುವ ಅವರು, "ಯಾವುದೇ ಸಂದರ್ಭದಲ್ಲೂ...

ಕೋಗಿಲು ಬಡಾವಣೆ ಮನೆಗಳ ನೆಲಸಮ : ವರದಿ ಸಲ್ಲಿಸಲು ಹೈಕೋರ್ಟ್ ಸೂಚನೆ

ಬೆಂಗಳೂರಿನ ಕೋಗಿಲು ಬಡಾವಣೆಯಲ್ಲಿ ಎಷ್ಟು ಮನೆಗಳನ್ನು ನೆಲಸಮ ಮಾಡಲಾಗಿದೆ. ಇದರಿಂದಾಗಿ ಎಷ್ಟು ಕುಟುಂಬಗಳು ನಿರಾಶ್ರಿತರಾಗಿದ್ದಾರೆ ಮತ್ತು ಪುನರ್ವವಸತಿಗೆ ಏನೆಲ್ಲ ಕ್ರಮಗಳನ್ನು ಕೈಗೊಳ್ಳಲಾಗಿದೆ ಎಂಬ ಮಾಹಿತಿಯನ್ನು ಒಳಗೊಂಡ ವರದಿ ಸಲ್ಲಿಸುವಂತೆ ಪ್ರಕರಣದಲ್ಲಿ ನ್ಯಾಯಾಲಯದ ನೆರವುಗಾರರಾಗಿರುವ...

ಫೈಝಾನ್ ಸಾವು ಪ್ರಕರಣ : ಆರು ವರ್ಷಗಳ ಬಳಿಕ ಇಬ್ಬರು ಪೊಲೀಸರಿಗೆ ಕೋರ್ಟ್ ಸಮನ್ಸ್

ಈಶಾನ್ಯ ದೆಹಲಿಯ 2020ರ ಗಲಭೆ ವೇಳೆ ಮುಸ್ಲಿಂ ಯುವಕ ಫೈಝಾನ್ ಸಾವಿಗೀಡಾದ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರು ಪೊಲೀಸ್ ಸಿಬ್ಬಂದಿಗೆ ನ್ಯಾಯಾಲಯ ಸಮನ್ಸ್ ಜಾರಿ ಮಾಡಿದೆ ಎಂದು ವರದಿಯಾಗಿದೆ. ಸಾವನ್ನಪ್ಪುವ ಮುನ್ನ ಇತರ ನಾಲ್ಕೈದು ಯುವಕರೊಂದಿಗೆ...

ಗಂಗಾವತಿ : ವಿದೇಶಿ ಮಹಿಳೆ ಸೇರಿ ಇಬ್ಬರ ಅತ್ಯಾಚಾರ, ಓರ್ವನ ಕೊಲೆ ಪ್ರಕರಣ : ಮೂವರು ದೋಷಿಗಳು ಎಂದ ಕೋರ್ಟ್

ಕೊಪ್ಪಳದ ಗಂಗಾವತಿ ತಾಲೂಕಿನ ಸಾಣಾಪುರ ಕೆರೆ ಬಳಿ ಸ್ಥಳೀಯ ಹೋಮ್‌ ಸ್ಟೇ ಮಾಲಕಿ ಮತ್ತು ಇಸ್ರೇಲಿ ಯುವತಿ ಮೇಲೆ ಅತ್ಯಾಚಾರವೆಸಗಿ, ಅವರ ಜೊತೆಗಿದ್ದ ಯುವಕನನ್ನು ಕೊಲೆಗೈದ ಪ್ರಕರಣದ ಮೂವರು ಆರೋಪಿಗಳನ್ನು ಒಂದನೇ ಹೆಚ್ಚುವರಿ...

ರಾಜಸ್ಥಾನದ ಬುಂಡಿಯಲ್ಲಿ ಎರಡು ಬಾಲ್ಯ ವಿವಾಹಗಳು ಸ್ಥಗಿತ; ಬಾಲಕಿಯರ ದೂರಿನ ಮೇರೆಗೆ ಅಧಿಕಾರಿಗಳ ಮಧ್ಯಪ್ರವೇಶ

ಕೋಟಾ: ಫೆಬ್ರವರಿ 10ರಂದು ನಿಗದಿಯಾಗಿದ್ದ ತಮ್ಮ ವಿವಾಹಗಳನ್ನು ನಿಲ್ಲಿಸುವಂತೆ ರಾಜಸ್ಥಾನದ ಬುಂಡಿ ಜಿಲ್ಲೆಯ 12ನೇ ತರಗತಿಯಲ್ಲಿ ಓದುತ್ತಿರುವ ಇಬ್ಬರು ಹುಡುಗಿಯರು ಅಧಿಕಾರಿಗಳನ್ನು ಸಂಪರ್ಕಿಸಿದ್ದಾರೆ ಎಂದು ಅಧಿಕಾರಿಗಳು ಶನಿವಾರ ತಿಳಿಸಿದ್ದಾರೆ. 17 ವರ್ಷದ ಬಾಲಕಿಯೊಬ್ಬಳು ತನ್ನ...

ಮುಂಬೈ ಮೇಯರ್ ಅಭ್ಯರ್ಥಿಯಾಗಿ ಬಿಜೆಪಿಯ ರಿತು ತಾವ್ಡೆ, ಉಪಮೇಯರ್ ಹುದ್ದೆಗೆ ಶಿವಸೇನೆಯ ಸಂಜಯ್ ಶಂಕರ್ ಘಾಡಿ ಹೆಸರು ಘೋಷಣೆ

ಮುಂಬೈ: ಭಾರತೀಯ ಜನತಾ ಪಕ್ಷ (ಬಿಜೆಪಿ) ಶನಿವಾರ ಮುಂಬೈ ಮೇಯರ್ ಚುನಾವಣೆಗೆ ಕಾರ್ಪೊರೇಟರ್ ರಿತು ತವಾಡೆ ಅವರನ್ನು ನಾಮನಿರ್ದೇಶನ ಮಾಡಿದ್ದರೆ, ಅದರ ಮಿತ್ರ ಪಕ್ಷ ಶಿವಸೇನೆ ಸಂಜಯ್ ಘಾಡಿ ಅವರನ್ನು ಉಪ ಮೇಯರ್...

ಪಾಕಿಸ್ತಾನದ ಶಿಯಾ ಮಸೀದಿಯಲ್ಲಿ ನಡೆದ ಆತ್ಮಾಹುತಿ ಬಾಂಬ್ ದಾಳಿ ಹೊಣೆ ಹೊತ್ತ ಐಸಿಸ್ 

ಪಾಕಿಸ್ತಾನದ ರಾಜಧಾನಿ ಇಸ್ಲಾಮಾಬಾದ್‌ನ ಮಸೀದಿಯಲ್ಲಿ ನಡೆದ ಆತ್ಮಾಹುತಿ ಬಾಂಬ್ ಸ್ಫೋಟದ ಹೊಣೆಯನ್ನು ಇಸ್ಲಾಮಿಕ್ ಸ್ಟೇಟ್ ಎಂದು ಕರೆಯಲ್ಪಡುವ ಗುಂಪು ಹೊತ್ತುಕೊಂಡಿದೆ, ಈ ಬಾಂಬ್ ಸ್ಫೋಟದಲ್ಲಿ ಕನಿಷ್ಠ 31 ಜನರು ಸಾವನ್ನಪ್ಪಿದ್ದಾರೆ ಮತ್ತು 169...