Homeಕರ್ನಾಟಕಉತ್ತರ ಕನ್ನಡ: ಪರಿಸರ ಪರಾಕ್ರಮಿ ಆಶೀಸರ ಮಾಣಿಯ ಗೂಟದ ಕಾರಿನ ಗಲಾಟೆ

ಉತ್ತರ ಕನ್ನಡ: ಪರಿಸರ ಪರಾಕ್ರಮಿ ಆಶೀಸರ ಮಾಣಿಯ ಗೂಟದ ಕಾರಿನ ಗಲಾಟೆ

- Advertisement -
- Advertisement -

| ಶುದ್ಧೋಧನ |

ಬಿಜೆಪಿ ಅಧಿಕಾರಕ್ಕೆ ಬಂದಾಗೆಲ್ಲ ಶಿರಸಿಯ ‘ಸು’ಪ್ರಸಿದ್ಧ ಸ್ವಯಂಘೋಷಿತ ಪರಿಸರ ಪರಾಕ್ರಮಿ ಅನಂತ ಹೆಗಡೆ ಆಶೀಸರ್‍ಗೆ ನಿಗಮ-ಮಂಡಳಿ ಹುದ್ದೆ ದಕ್ಕುತ್ತಿದೆ. ಅಂಥದೊಂದು ಗದ್ದುಗೆ ಏರುವ ಯಾವ ಯೋಗ್ಯತೆ ಇಲ್ಲದಿದ್ದರೂ ಆಶೀಸರ ಮಾಣಿಗೆ ಯೋಗ ಖುಲಾಯಿಸುತ್ತಿರುವುದು ಪಕ್ಕಾಚೆಡ್ಡಿ ಚಮತ್ಕಾರದಿಂದಷ್ಟೇ! ತಾನೊಬ್ಬ ಹುಟ್ಟಾ ಸಂಘಿ ಸರದಾರನೆಂತಲೂ ಪರಿಸರ ಬಚಾವಾಗಿರುವುದೇ ತನ್ನ ಮೂರೂವರೆ ದಶಕದ ಹಗಲಿರುಳಿನ ಹಾರಾಟದಿಂದೆಂತಲೂ ಎಂಬಂತೆ ಆರೆಸ್ಸೆಸ್‍ನ ಆಯಕಟ್ಟಿನ ರಿಂಗ್‍ಮಾಸ್ಟರ್‍ಗಳೆದುರು ಅದ್ಭುತ ಪ್ರದರ್ಶನ ಕೊಡಬಲ್ಲ ಆಶೀಸರ್ ಗೂಟದ ಕಾರು ಪಟಾಯಿಸುತ್ತಿದ್ದಾನೆ. ಬಿಜೆಪಿ-ಆರೆಸ್ಸೆಸ್‍ನ ಬ್ರಾಹ್ಮಣ ಲಾಬಿ 2008ರಲ್ಲಿ ಆಶೀಸರ್‍ಗೆ ಬಳುವಳಿಯಾಗಿ ಕೊಟ್ಟಿತ್ತು. ಈಗ ಅದೇ ಆಶೀಸರ್‍ಗೆ ಅದೇ ಕೇಸರಿ ಜನಿವಾರ ಕೂಟ ಜೀವ ವೈವಿಧ್ಯ ಮಂಡಳಿಯಲ್ಲಿ “ಪುನರ್ವಸತಿ” ಕಲ್ಪಿಸಿದೆ!

ಇದು ಉತ್ತರ ಕನ್ನಡ ಬಿಜೆಪಿಯ ನಿಷ್ಠಾವಂತ ಕಾರ್ಯಕರ್ತರನ್ನು ಕಿಚಾಯಿಸುತ್ತಿದೆ. ಸಹಜವಾಗೇ ಪಕ್ಷಕಟ್ಟಿದ ಹಿಂದುಳಿದ ವರ್ಗದ ಎರಡನೇ ಸ್ತರದ ಮರಿಮುಖಂಡರು ಕೆರಳಿದ್ದಾರೆ; ಪಕ್ಷಕ್ಕಾಗಿ ತಮ್ಮನ್ನು ದುಡಿಸಿಕೊಂಡು ಮಹತ್ವದ ಲಾಭದ ಸ್ಥಾನ-ಮಾನವೆಲ್ಲ ಬ್ರಾಹ್ಮಣರಿಗೆ ಕೊಡಬೇಕಾಗುತ್ತಿದೆ ಎಂಬ ಅಸಮಾಧಾನ ಭುಗಿಲೆದ್ದಿದೆ. ಎಂಪಿ ಅನಂತ್ಮಾಣಿ, ಸ್ಪೀಕರ್ ಕಾಗೇರಿ, ಜಿಲ್ಲಾ ಉಸ್ತುವಾರಿ ಮಂತ್ರಿಗಿರಿ ಮೀಸಲಿಡಲ್ಪಟ್ಟಿರುವ “ಅನರ್ಹ” ಶಿವರಾಮ ಹೆಬ್ಬಾರ್ ಮತ್ತು ನಿಗಮ-ಮಂಡಳಿಗೆ ವಕ್ಕರಿಸಿರುವ ಆಶೀಸರ ಎಲ್ಲರೂ ಹವ್ಯಕ ಬ್ರಾಹ್ಮಣ ಸಮುದಾಯದವರು. ಜಿಲ್ಲಾ ಬಿಜೆಪಿ ಅಧ್ಯಕ್ಷತೆ ಕೊಂಕಣಿ ಬ್ರಾಹ್ಮಣ ಹಳಿಯಾಳದ ಮಾಜಿ ಶಾಸಕ ಸುನಿಲ್ ಹೆಗ್ಡೆಗೆ ಕೊಡಲು ರಹಸ್ಯ ತಯಾರಿ ಮತ್ತೊಂದೆಡೆ ನಡೆದಿದೆ. ಒಟ್ಟಿನಲ್ಲಿ ಬ್ರಾಹ್ಮಣರ ಹಿಂದೂತ್ವದ ಅಧಿಕಾರ ರಾಜಕಾರಣದ ಯುದ್ಧದಲ್ಲಿ ದೀವರು, ಮೀನುಗಾರರು, ಹಾಲಕ್ಕಿ ಒಕ್ಕಲಿಗರೇ ಮುಂದಾದ ಶೂದ್ರರು ಬರೀ ಕಾಲಾಳುಗಳು ಮಾತ್ರ.

ಶೂದ್ರರ ಕೈಲಿ ಲಾಠಿಕೊಟ್ಟು ಶೀಟಿ ಊದುತ್ತಾ ಬೇಳೆ ಬೇಯಿಸಿಕೊಳ್ಳುವ ಜನಿವಾರ ಪಡೆಯ ತೆರೆಮರೆ ತಂತ್ರಗಾರರಲ್ಲಿ ಆಶೀಸರನೂ ಒಬ್ಬನೆಂಬುದಕ್ಕೆ ಅನುಮಾನವೇ ಇಲ್ಲ. ಸ್ವಜಾತಿ ಅನಂತ್ಮಾಣಿಗೇ ಟಾಂಗುಕೊಟ್ಟು ಎಂಪಿಗಿರಿ ಟಿಕೆಟ್ ಪಡೆಯಲು ಈತ ಚೆಡ್ಡಿ ಬಿಡಾರದಲ್ಲಿ ವಶೀಲಿ ಕಾರ್ಯಾಚರಣೆ ಮಾಡಿದ್ದೂ ಇದೆ. ಹಾಗಂತ ಉತ್ತರ ಕನ್ನಡ ಬಿಜೆಪಿಗೆ ಈತನಿಂದ ನಯಾಪೈಸೆ ಫಾಯ್ದೆಯಿಲ್ಲ. ಬ್ರಾಹ್ಮಣೇತರ ಕಾರ್ಯಕರ್ತರು ಕಟ್ಟಿದ ಹುತ್ತದಲ್ಲಿ ಸದ್ದಿಲ್ಲದೆ ಸೇರಿಕೊಳ್ಳುವ ಘಟಸರ್ಪವೆಂಬ ಚರ್ಚೆ ಸ್ಥಳೀಯ ಬಿಜೆಪಿಯಲ್ಲೀಗ ಜೋರಾಗಿದೆ. ಈತನ ಪರಿಸರ ಧೋರಣೆಯೂ ಇಬ್ಬಂದಿ ಸ್ವಜಾತಿ ಅಡಿಕೆ ತೋಟಿಗರಿಗೆ ಸರ್ಕಾರಿ ಯೋಜನೆಗಳಿಂದ ತೊಂದರೆ ಆಗುತ್ತದೆಂದಾಗ ಆಶೀಸರ್‍ನಲ್ಲಿ ಅತ್ಯುಗ್ರ ಪರಿಸರ ಕಾಳಜಿ ಶುರುಹೊಡೆಯುತ್ತದೆ! ಉತ್ತರ ಕನ್ನಡದ ಅಭಿವೃದ್ಧಿಯ ಭಾಗ್ಯದ ಬಾಗಿಲನ್ನೇ ತೆರೆಯಬಲ್ಲ ಹುಬ್ಬಳ್ಳಿ-ಅಂಕೋಲಾ ರೈಲು ಮಾರ್ಗಕ್ಕೆ ಆಶೀಸರ್ ನೇತೃತ್ವದ ಪರಿಸರವಾಧಿ ತಂಡ ಕಲ್ಲು ಹಾಕುತ್ತಲೇ ಬಂದಿದೆ!!

ಈ ರೈಲು ಹಳಿಯಿಂದ ಅರಣ್ಯ ನಾಶವಾಗುತ್ತದೆ, ವನ್ಯ ಪ್ರಾಣಿಗಳಿಗೆ ಗಂಡಾಂತರ, ಪರಿಸರ ಸರ್ವನಾಶವಾಗುತ್ತದೆಂದು ಬೊಬ್ಬಿರಿವ ಆಶೀಸರ್‍ಗೆ ತನ್ನ ಸಮುದಾಯಕ್ಕೆ ಅನುಕೂಲವಾಗುವ ಹಾವೇರಿ-ಶಿರಸಿ ರೈಲು ಮಾರ್ಗದ ಪರಿಸರ ಹಾನಿ ಗೌಣ! ಕುಮಟಾ-ಶಿರಸಿ ರಸ್ತೆ ಅಗಲಗೊಂಡು ರಾಷ್ಟ್ರೀಯ ಹೆದ್ದಾರಿಯಾದರೆ ಜೀವ ವೈವಿಧ್ಯಕ್ಕೆ ಧಕ್ಕೆ ಎಂಬ ವಾದ ಈ ಪರಿಸರ “ತಜ್ಞ”ನದು. ಆನರ ಬಹುಬೇಡಿಕೆಯ ಜಿಲ್ಲೆಯ ಮಹತ್ವದ ಯೋಜನೆಯಿದು. ಆಶೀಸರ್ ಜೀವ ವೈವಿಧ್ಯ ಮಂಡಳಿ ಅಧ್ಯಕ್ಷನಾಗುತ್ತಲೇ ಶಿರಸಿ-ಕುಮಟಾ ರಸ್ತೆ ಅಗಲೀಕರಣ ಯೋಜನೆಗೆ ಎಳ್ಳು-ನೀರು ಬಿಟ್ಟಂತಾಗಿದೆ!! ಪರಿಸರ ಸಂರಕ್ಷಣೆ ಕುರಿತು ಉದ್ದುದ್ದ ಭಾಷಣ ಬಿಗಿಯುವ ಈ ಪರಿಸರ ದುರಂಧರ ಎಕರೆಗಟ್ಟಲೆ ಅರಣ್ಯ ಕಬಳಿಸಿ ಸಮೃದ್ಧ ಅಡಿಕೆ ತೋಟ ಮಾಡಿಕೊಂಡಿರುವ ಅಪವಾದಕ್ಕೆ ತುತ್ತಾಗಿರುವುದು ವಿಪರ್ಯಾಸವೇ ಸರಿ!!

ಕಾಡು ನುಂಗಿರುವ “ಕ್ಯಾತಿ”ಯ ಆಶೀಸರ ಸ್ವರ್ಣವಲ್ಲಿ ಮಠದ ಹುಸಿ ಹಸಿರು ಸ್ವಾಮಿಯ ಆಸ್ಥಾನದ ಪರಿಸರ ಪಂಡಿತ. ಕಾವಿ-ಚೆಡ್ಡಿ ಪ್ರಭಾವದಿಂದ ರಾಜ್ಯ ಬಿಜೆಪಿಯ ಪರಮೋಚ್ಚ ನಾಯಕ ಸಂತೋಷ್‍ಜೀ ಕೃಪಾಕಟಾಕ್ಷಕ್ಕೆ ಪಾತ್ರನಾಗಿರುವ ಆಶೀಸರ್ ಮಾಣಿಗೆ ರಾಜ್ಯ ಜೀವ ವೈವಿಧ್ಯ ಮಂಡಳಿ ಪಡೆಯುವುದಕ್ಕೆ ತ್ರಾಸೇನೂ ಆಗಿಲ್ಲ! ಆಶೀಸರ್ ನೇಮಕಾತಿ ಘೋಷಣೆ ಆಗುತ್ತಲೇ ಉತ್ತರ ಕನ್ನಡ ಬಿಜೆಪಿ ಬಣ ಬಡಿದಾಟಕ್ಕೆ ಬಣ್ಣ ಬಂದುಬಿಟ್ಟಿದೆ. ಎಂಪಿ ಅನಂತ್ಮಾಣಿಗೆ ಮಂಡಳಿ ಅಧ್ಯಕ್ಷತೆ ಆಶೀಸರ್‍ಗೆ ಕೊಟ್ಟಿರುವುದು ಇಷ್ಟವಾಗಿಲ್ಲ. ಅನಂತ್ಮಾಣಿ ಎದುರಾಳಿ ಸ್ಪೀಕರ್ ಕಾಗೇರಿ- “ಪಾಪ, ಆಶೀಸರ್‍ಗೆ ಗೂಟದ ಕಾರೊಂದು ಕೊಡೋದ್ರಿಂದ ತೊಂದ್ರೆಂತದೂ ಇಲ್ಲೆ” ಎಂದು ಸಮಾಧಾನ ಮಂತ್ರ ಪಠಿಸುತ್ತಿದ್ದಾರೆ. ಆಶೀಸರ್ ನೇಮಕಾತಿಯನ್ನ ದೊಡ್ಡದೊಂದು ವರ್ಗ ಬಲವಾಗಿ ವಿರೋಧಿಸುತ್ತಿದೆ.

ಪಕ್ಷಕ್ಕಾಗಿ ಹಲವು ವರ್ಷದಿಂದ ನಿಷ್ಠೆಯಿಂದ ದುಡಿದ ಶೂದ್ರರನ್ನು ಕಡೆಗಣಿಸಿ ಜನಿವಾರ ಲಾಬಿ ಮಾಡೋರಿಗೆ ಅವಕಾಶ ಕೊಡುವ ಹೈಕಮಾಂಡ್ ವಿರುದ್ಧ ಕೂಗೆದ್ದಿದೆ. ಆಶೀಸರ್ ನೇಮಕಾತಿ ರದ್ದು ಮಾಡುವಂತೆ ಜಿಲ್ಲಾ ಬಿಜೆಪಿ ಅಧ್ಯಕ್ಷ ನಳಿನ್‍ಕುಮಾರ್ ಕಟೀಲ್‍ಗೆ ಲಗ್ಗೆ ಹಾಕಲು ಕಾರ್ಯಕರ್ತರು ಸ್ಕೆಚ್ ಹಾಕುತ್ತಿದ್ದಾರೆ. ಅಸಮಾನಿತರ ಬೆನ್ನಿಗೆ ಅನಂತ್ಮಾಣಿ ಬಲವಿರುವುದರಿಂದ ಆಶೀಸರ್ ಮುಖ ಸಪ್ಪಗಾಗಿದೆ. ಬಿಜೆಪಿಯ ಗ್ಯಾಂಗ್‍ವಾರ್ ಬೀದಿಗೆ ಬರುವ ಸೂಚನೆಗಳು ಗೋಚರಿಸುತ್ತಿವೆ. ತನ್ನ ಎಂಪಿ ಸೀಟಿಗೇ ಕೈಹಾಕಿದ್ದ, ಮುಂದೂ ಹಾಕಲಿರುವ ಆಶೀಸರ್‍ಗೆ ಅನಂತ್ಮಾಣಿ ಸುಮ್ಮನೆ ಬಿಡಲು ಸಾಧ್ಯವಾ?!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

ಕೋಟ್ಯಾಂತರ ವಿದ್ಯಾರ್ಥಿಗಳ ಭವಿಷ್ಯದ ಜೊತೆ NTA ಚೆಲ್ಲಾಟ: RTI ನಲ್ಲಿ ಬಯಲಾಯ್ತು NTA ಕರ್ಮಕಾಂಡ

ನ್ಯಾಷನಲ್ ಟೆಸ್ಟಿಂಗ್ ಏಜೆನ್ಸಿ (NTA) ಎನ್ನುವ ಈ ಸರ್ಕಾರಿ ಸಂಸ್ಥೆಯ ಮೇಲೆ ಪ್ರತಿವರ್ಷ ಕೋಟ್ಯಂತರ ವಿದ್ಯಾರ್ಥಿಗಳು ತಮ್ಮ ಭವಿಷ್ಯದ ಕನಸುಗಳನ್ನು ಇಟ್ಟುಕೊಳ್ಳುತ್ತಾರೆ. 2018ರಲ್ಲಿ ಸ್ಥಾಪನೆಯಾದ ದಿನದಿಂದ ಇಲ್ಲಿಯವರೆಗೆ ಎನ್‌ಟಿಎ ಸುಮಾರು 270ಕ್ಕೂ ಹೆಚ್ಚು...

ಬಾಗಲಕೋಟೆ: ಪತಿಯಿಂದ 23 ವರ್ಷದ ಪತ್ನಿಯ ಕ್ರೂರ ಕೊಲೆ, ಪೋಷಕರಿಗೆ ವೀಡಿಯೊ ಕರೆ ಮಾಡಿ ಮಗಳ ಸಾವು-ಬದುಕಿನ ಹೋರಾಟ ತೋರಿಸಿದ ವಿಕೃತ ಪತಿ

ಬಾಗಲಕೋಟೆ: ಪತಿಯೋರ್ವ ತನ್ನ 23 ವರ್ಷದ ಪತ್ನಿಯ ಮೇಲೆ ವಿವಾಹೇತರ ಅನೈತಿಕ ಸಂಬಂಧದ ಶಂಕೆ ವ್ಯಕ್ತಪಡಿಸಿ, ಆಕೆಯ ಮೇಲೆ ಮರದ ದಿಮ್ಮಿಯಿಂದ ಕ್ರೂರವಾಗಿ ಹಲ್ಲೆ ನಡೆಸಿ, ತದನಂತರ ನೇಣಿಗೆ ಬಿಗಿದು ಅತ್ಯಂತ ಅಮಾನವೀಯವಾಗಿ...

ಕಾನೂನು-ಸುವ್ಯವಸ್ಥೆಗೆ ವಿದ್ಯಾರ್ಥಿಗಳು ಸಮಸ್ಯೆಯಾಗುತ್ತಾರೆ ಎಂದು ಪರಿಗಣಿಸಿದ್ದು ಏಕೆ: ಅಭಿಷೇಕ್ ಬ್ಯಾನರ್ಜಿ

ರಾಷ್ಟ್ರ ರಾಜಧಾನಿ ದೆಹಲಿ ಮತ್ತು ದೆಶದಾದ್ಯಂತ ಕಾಕ್ರೋಚ್ ಜನತಾ ಪಕ್ಷದ (ಸಿಜೆಪಿ) ನೇತೃತ್ವದಲ್ಲಿ ನಡೆದ ಪ್ರತಿಭಟನೆಗಳ ಸಂದರ್ಭದಲ್ಲಿ ವಿದ್ಯಾರ್ಥಿಗಳ ಮೇಲೆ ನಡೆದ ಭಾರೀ ಪೊಲೀಸ್ ಬಲಪ್ರಯೋವನ್ನು ವಿಪಕ್ಷಗಳು ಇಂದು ಲೋಕಸಭೆಯಲ್ಲಿ ಖಂಡಿಸಿವೆ. ವಿದ್ಯಾರ್ಥಿಗಳ...

ಪಬ್ಲಿಕ್ ಟಿವಿ ನಿರೂಪಕ ಅರುಣ್ ಬಡಿಗೇರ್ ವಿರುದ್ದ ಮೈಸೂರಿನಲ್ಲಿ ದೂರು ದಾಖಲು

ಸಂವಿಧಾನಬದ್ಧ ಮೀಸಲಾತಿಯ ಕುರಿತು ಅತ್ಯಂತ ನಿಂದನಾತ್ಮಕ, ಅವಹೇಳನಕಾರಿ ಹಾಗೂ ಸಮಾಜದಲ್ಲಿ ದ್ವೇಷ ಪ್ರಚೋದಿಸುವ ರೀತಿಯ ಹೇಳಿಕೆ ನೀಡಿರುವ 'ಪಬ್ಲಿಕ್ ಟಿವಿ' ನಿರೂಪಕ ಅರುಣ್ ಬಡಿಗೇರ್ ವಿರುದ್ಧ ಮೈಸೂರಿನಲ್ಲಿ ಕಾನೂನು ಕ್ರಮಕ್ಕೆ ಆಗ್ರಹಿಸಿ ಪೊಲೀಸ್‌...

ಕೇರಳ: ತಪ್ಪು ಪ್ರಕರಣದಲ್ಲಿ ಪೊಲೀಸರಿಂದ ಚಿತ್ರಹಿಂಸೆ: 29 ವರ್ಷದ ಮುಸ್ಲಿಂ ಯುವಕ ಸಾವು: ಕುಟುಂಬಕ್ಕಿದ್ದ ಒಂದೇ ಆಧಾರ ಕಳೆದುಕೊಂಡ ಪೋಷಕರು

ತಪ್ಪು ಗ್ರಹಿಕೆಯಿಂದ ಪೊಲೀಸ್ ಕಸ್ಟಡಿಗೆ ಪಡೆದ 29 ವರ್ಷದ ಮುಸ್ಲಿಂ ಯುವಕನೋರ್ವ, ಪೊಲೀಸರ ಕಠೋರ ಕಸ್ಟಡಿ ಚಿತ್ರಹಿಂಸೆಯಿಂದಾಗಿ ಪಕ್ಕೆಲುಬು ಮುರಿತಕ್ಕೊಳಗಾಗಿ, ಶ್ವಾಸಕೋಶದ ಸೋಂಕು ತೀವ್ರಗೊಂಡು ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿರುವ ಅಮಾನವೀಯ ಹಾಗೂ ಆಘಾತಕಾರಿ...

ಮಾಧ್ಯಮ ತನಿಖಾ ವರದಿಗೆ ಹೆದರಿ ₹ 99 ಲಕ್ಷ ಸಬ್ಸಿಡಿ ವಾಪಸ್ ಮಾಡಿದ ಕೇಂದ್ರ BJP ಸಚಿವ

ತಮ್ಮದೇ ಸಚಿವಾಲಯದ ಯೋಜನೆಯಡಿ ಬರೋಬ್ಬರಿ 99 ಲಕ್ಷ ರೂಪಾಯಿ ಸರ್ಕಾರಿ ಸಬ್ಸಿಡಿ ಪಡೆದು ಸಾರ್ವಜನಿಕರ ಆಕ್ರೋಶಕ್ಕೆ ಗುರಿಯಾಗಿದ್ದ ಕೇಂದ್ರ ಕೃಷಿ ಮತ್ತು ರೈತರ ಕಲ್ಯಾಣ ರಾಜ್ಯ ಸಚಿವ ಭಾಗೀರಥ್ ಚೌಧರಿ, ಕೊನೆಗೂ ಆ...

ಕಾಮನ್‌ವೆಲ್ತ್ ಕ್ರೀಡಾಕೂಟ: ಚಿನ್ನದ ಪದಕ ಗೆದ್ದ ಭಾರತದ ಮೊದಲ ಪ್ಯಾರಾ-ಅಥ್ಲೀಟ್ ಶರ್ಮಿಳಾ ಧನ್ಖರ್

ಎರಡು ವರ್ಷವಿದ್ದಾಗ ಪೋಲಿಯೊದಿಂದ ಅಂಗವಿಕಲಳಾಗಿ, ಬಾಲ್ಯದಲ್ಲಿ ದೌರ್ಜನ್ಯಕ್ಕೊಳಗಾದ, ವಿವಾಹದ ಆಘಾತದಿಂದ ಬದುಕುಳಿದ ಮಹಿಳೆ ಶರ್ಮಿಳಾ ಧನ್ಖರ್, ಕಾಮನ್‌ವೆಲ್ತ್ ಕ್ರೀಡಾಕೂಟದಲ್ಲಿ ಚಿನ್ನದ ಪದಕ ಗೆದ್ದ ಭಾರತದ ಮೊದಲ ಪ್ಯಾರಾ-ಅಥ್ಲೀಟ್ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ. ಗ್ಲ್ಯಾಸ್ಗೋದಲ್ಲಿ...

ಬಿಹಾರ: ವಿದ್ಯಾರ್ಥಿಗಳ ವಿರುದ್ಧ ಎಕೆ-47 ರೈಫಲ್ ಬಳಕೆ: ಗುಂಡು ಹಾರಿಸಲು ಆದೇಶಿಸಿದವರ ವಿರುದ್ಧ ತನಿಖೆಗೆ ಮನೋಜ್ ಝಾ ಆಗ್ರಹ; ಸುಪ್ರೀಂ ಮೆಟ್ಟಿಲೇರಿದ ಪ್ರಕರಣ

ನೀಟ್ (NEET) ಪ್ರಶ್ನೆ ಪತ್ರಿಕೆ ಸೋರಿಕೆ ಆರೋಪವನ್ನು ಖಂಡಿಸಿ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ, ಬಿಹಾರದ ಸಿವಾನ್ ಜಿಲ್ಲೆಯಲ್ಲಿ ಪೊಲೀಸ್ ಸಿಬ್ಬಂದಿಯೊಬ್ಬರು ಎಕೆ-47 ರೈಫಲ್‌ನಿಂದ ಗಾಳಿಯಲ್ಲಿ ಗುಂಡು ಹಾರಿಸುತ್ತಿದ್ದ ವೀಡಿಯೊ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್...

ಧರ್ಮೇಂದ್ರ ಪ್ರಧಾನ್ ಖಾತೆ ಬದಲಾವಣೆ ಪ್ರಸ್ತಾವನೆ ತಿರಸ್ಕರಿಸಿದ್ದ ಸಿಜೆಪಿ: ವರದಿ

ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಜುಲೈ 25 ರಂದು ಪ್ರಧಾನಿ ನರೇಂದ್ರ ಮೋದಿ ಅವರಿಗೆ ತಮ್ಮ ರಾಜೀನಾಮೆ ಸಲ್ಲಿಸಿದ್ದಾರೆ. ಆದರೆ, ಅದಕ್ಕೂ ಮೊದಲು ಕೇಂದ್ರ ಸರ್ಕಾರವು ಕಾಕ್ರೋಚ್ ಜನತಾ ಪಕ್ಷ (ಸಿಜೆಪಿ)...

ಹೈದರಾಬಾದ್| ಎಕ್ಸ್‌ಪ್ರೆಸ್‌ವೇನಲ್ಲಿ ನೇಮಕಾತಿ ಪರೀಕ್ಷೆ ಓಎಂಆರ್ ಹಾಳೆಗಳು ಪತ್ತೆ: ತನಿಖೆಗೆ ಆದೇಶ

ನೇಮಕಾತಿ ಪರೀಕ್ಷೆಯ ಮೂಲ ಆಪ್ಟಿಕಲ್ ಮಾರ್ಕ್ ರೆಕಗ್ನಿಷನ್ (ಒಎಂಆರ್) ಹಾಳೆಗಳು ಹೈದರಾಬಾದ್‌ನ ರಸ್ತೆಬದಿಯಲ್ಲಿ ರಾಶಿ ರಾಶಿಯಾಗಿ ಬಿದ್ದಿರುವುದು ಕಂಡುಬಂದ ನಂತರ ತೆಲಂಗಾಣ ಸಾರ್ವಜನಿಕ ಸೇವಾ ಆಯೋಗ (ಟಿಜಿಪಿಎಸ್‌ಸಿ) ತನಿಖೆಗೆ ಆದೇಶಿಸಿದೆ. 2018 ರ ಹಾಸ್ಟೆಲ್...