Homeಕರ್ನಾಟಕಉತ್ತರ ಕನ್ನಡ ಸಂತಾನ ಸಂರಕ್ಷಣೆಗೆ ಒಂದಾದ ಮ್ಯಾಗಿಯಜ್ಜಿ ದೇಶಜ್ಜ!!

ಉತ್ತರ ಕನ್ನಡ ಸಂತಾನ ಸಂರಕ್ಷಣೆಗೆ ಒಂದಾದ ಮ್ಯಾಗಿಯಜ್ಜಿ ದೇಶಜ್ಜ!!

- Advertisement -
- Advertisement -

ಉತ್ತರ ಕನ್ನಡದ ಕಾಂಗ್ರೆಸ್ ಪೊರೆ ಕಳಚಿಕೊಳ್ಳುತ್ತಿದೆ! ಮದವೇರಿದ ಮದ್ದಾನೆಗಳಂತಾಗಿ ದಶಕಗಟ್ಟಲೆ ಕಾಲ ಗುದ್ದಾಡಿ ಜಿಲ್ಲಾ ಕಾಂಗ್ರೆಸನ್ನು ನಜ್ಜುಗುಜ್ಜುಮಾಡಿದ್ದ ಮ್ಯಾಗಿಯಜ್ಜಿ ಮತ್ತು ದೇಶಜ್ಜ ರಾಜಿ ಸಂಕೇತ ಬಿತ್ತರಿಸುತ್ತಿದ್ದಾರೆ. ಪರಸ್ಪರ ಅಸ್ತಿತ್ವ ಉಳಿಸಿಕೊಳ್ಳಲು ಈ ಮುದಿಮಣಿಗಳು ಹೊಂದಾಣಿಕೆಯ ಅನಿವಾರ್ಯಕ್ಕೆ ಬಿದ್ದಿವೆ. ಬದ್ಧವೈರಿಗಳ ಈ ಮನಃಪರಿವರ್ತನೆ ಯಲ್ಲಾಪುರ ಬೈ-ಇಲೆಕ್ಷನ್ ಸೋಲಿನ ನೇರ ಪರಿಣಾಮ ಎಂತಲೇ ರಾಜಕೀಯ ಪಡಸಾಲೆಯಲ್ಲಿ ವಿಶ್ಲೇಷಣೆಗಳು ನಡೆದಿದೆ.

ದೇಶಪಾಂಡೆ ತನ್ನ ಮೂರು ದಶಕದ ರಾಜಕೀಯದಲ್ಲಿ ಜನತಾ ಪರಿವಾರದಲ್ಲಿರಲಿ ಅಥವಾ ಕಾಂಗ್ರೆಸಿನಲ್ಲಿರಲಿ ಯಾರನ್ನೂ ಗೆಲ್ಲಿಸಲು ತ್ರಿಕರ್ಣಪೂರ್ವಕ ಪ್ರಯತ್ನ ಮಾಡಿದ ಕುರುಹುಗಳಿಲ್ಲ. ಹಾಗಂತ ಸೋಲಿಸಲು ಹಲವು ಸಲ ಹಠಹಿಡಿದು ಹಿಕಮತ್ತು ನಡೆಸಿದ ದಾಖಲೆಗಳಿವೆ. ಇಂಥ ಇತಿಹಾಸದ ದೇಶ್ ಕಳೆದ ಯಲ್ಲಾಪುರ ಬೈ-ಇಲೆಕ್ಷನ್‍ನಲ್ಲಿ ತನ್ನ ಚೇಲಾ ಭೀಮಣ್ಣ ನಾಯ್ಕನ ಗೆಲ್ಲಿಸಿ ವೈರಿ ಹೆಬ್ಬಾರ್ ಮೇಲಿನ ಸೇಡು ತೀರಿಸಿಕೊಳ್ಳಲು ಪ್ರತಿಷ್ಠೆ ಪಣಕ್ಕಿಟ್ಟು ಹೋರಾಡಿದ್ದರು. ಆದರೆ ಸ್ವಯಂಕೃತಾಪರಾಧಗಳ ಸರಣಿಯಿಂದ ವರ್ಚಸ್ಸು ಕಳಕೊಂಡಿರುವ ದೇಶ್ ಮುಗ್ಗರಿಸಿ ಮಕಾಡೆ ಮಲಗಿಬಿಟ್ಟರು! ಕಂಗಾಲಾಗಿ ದೇಶಪಾಂಡೆ ಕೂತಿದ್ದ ಈ ಹೊತ್ತಿನಲ್ಲೇ ಬರೋಬ್ಬರಿ ಒಂದು ವರ್ಷದನಂತರ ಜಿಲ್ಲೆಗೆ ವಕ್ಕರಿಸಿದ ಇಲ್ಲಿಯ ಮಾಜಿ ಸಂಸದೆ ಮಾರ್ಗರೇಟ್ ಆಳ್ವ ಆಟ ಶುರುಹಚ್ಚಿಕೊಂಡಿದ್ದರು. ನೇರ ಮ್ಯಾಗಿಯ ಶಿರಸಿಯ ಮನೆಗೇ ಹೋದ ದೇಶ್ ಆಕೆಯ ಮುಂದೆ ನಿಂತು ಹೊಸ ನಂಟಿನ ಪ್ರಸ್ತಾಪ ಇಟ್ಟಿರುವುದು ಅನಿರೀಕ್ಷಿತ ಸಮೀಕರಣವನ್ನು ಜಿಲ್ಲಾ ರಾಜಕೀಯ ಭೂಮಿಕೆಯಲ್ಲಿ ಸೃಷ್ಟಿಸಿಬಿಟ್ಟಿದೆ.

ಮ್ಯಾಗಿ ಮತ್ತಾಕೆಯ ಮಗ ಆಳ್ವ ಫೌಂಡೇಶನ್ ಕಟ್ಟಿಕೊಂಡಿದ್ದರೆ, ದೇಶ್ ಮತ್ತವರ ಪುತ್ರ ಪ್ರಶಾಂತ ದೇಶಪಾಂಡೆ ಟ್ರಸ್ಟ್ ಸ್ಥಾಪಿಸಿಕೊಂಡಿದ್ದಾರೆ. ಎರಡೂ ಕುಟುಂಬಗಳು ಸಾಮಾಜಿಕ ಸೇವೆಯ ಹೆಸರಲ್ಲಿ ರಾಜಕೀಯ ಫಾಯ್ದೆಗೆ ಹವಣಿಸುತ್ತಿವೆ. ಮ್ಯಾಗಿಗೆ ತನ್ನ ಪೆದ್ದು ಕುಲೋದ್ಧಾರಕನನ್ನು ಶಿರಸಿಯ ಶಾಸಕನ ಮಾಡುವ ಕನಸು; ದೇಶ್‍ಗೆ ಮುಂಬೈನಲ್ಲಿ ವಕೀಲಿಕೆ ಮಾಡುವ ಅನಿವಾಸಿ ಉತ್ತರ ಕನ್ನಡಿಗ ಮಗ ಮಹಾರಾಯನ ಸಂಸದನ ಮಾಡುವ ಆಸೆ. ಇದೇ ಒಳಉದ್ದೇಶದಿಂದ ಮ್ಯಾಗಿ ಫೌಂಡೇಷನ್ ಕಾರ್ಯಕ್ರಮ ಹಾಕಿಕೊಂಡು ಈಗ ಜಿಲ್ಲೆಯಲ್ಲಿ ಅಂಡಲೆಯುತ್ತಿದ್ದಾರೆ. ಆಕೆ ಫಂಕ್ಷನ್ ಮುಗಿಸಿ ಮನೆಗೆ ಬರುವುದನ್ನೇ ಕಾಯುತ್ತಿದ್ದ ದೇಶಪಾಂಡೆ ಮೊನ್ನೆ ಶನಿವಾರ ಭೇಟಿಯಾಗಿ ಗ್ಯಾಂಗ್‍ವಾರ್ ನಿಲ್ಲಿಸುವ ಒಪ್ಪಂದ ಮಾಡಿಕೊಂಡಿದ್ದಾರೆ. ಜಿಲ್ಲೆಯಲ್ಲಿ ಬಿಜೆಪಿ ಎಬ್ಬಿಸಿರುವ ಬಡಿವಾರಕ್ಕೆ ಬೆದರಿರುವ ಮ್ಯಾಗಿ-ದೇಶ್ ನೈಚ್ಛಾನುಸಂಧಾನ ನಡೆಸಬೇಕಾಗಿ ಬಂದಿವೆ, ಪಾಪ!!

ಮ್ಯಾಗಿ-ದೇಶ್ ಅಕ್ಕ-ಪಕ್ಕ ಕುಳಿತು ಕಳೆದ ಅಸೆಂಬ್ಲಿ ಲೋಕಸಭೆ ಚುನಾವಣೆಗಳಲ್ಲಿ ತಮ್ಮ ಬಣ ಬಡಿದಾಟದಿಂದಾದ ಹಾನಿಯ ಲೆಕ್ಕ ತೆಗೆದಿದ್ದಾರೆ. ತಮ್ಮೊಳಗಿನ ದ್ವೇಷಾಸೂಯೆ ಮೇಲಾಟದಿಂದ ಗತಿಗೇಡಿ ಬಿಜೆಪಿ ಸೈತಾನನಂತೆ ಬೆಳೆದಿದೆ ಎಂದು ಪಾಪಪ್ರಜ್ಞೆಯಿಂದ ಮಾತಾಡಿಕೊಂಡಿದ್ದಾರೆ; ಈಗಿಂದಲೇ ತಳಮಟ್ಟದಿಂದ ಪಾರ್ಟಿಯನ್ನು ಕಟ್ಟದಿದ್ದರೆ ತಮ್ಮ ವಂಶದ ಉತ್ತರಾಧಿಕಾರಿಗಳಿಗೆ ಭವಿಷ್ಯವಿಲ್ಲ ಎಂಬುದು ಮನಗಂಡಿದ್ದಾರೆ. ಜಿಲ್ಲಾ ಕಾಂಗ್ರೆಸ್ ಉದ್ಧಾರವಾಗಬೇಕಿದ್ದರೆ ಮೊದಲು ಹಾಲಿ ಡಿಸಿಸಿ ಅಧ್ಯಕ್ಷ ಭೀಮಣ್ಣ ನಾಯ್ಕನ ಉಚ್ಚಾಟಿಸಿ ಹೊಸ ಆಯ್ಕೆ ಮಾಡಬೇಕು; ಆನಂತರ ತಾವಿಬ್ಬರೂ ಒಟ್ಟಾಗಿ ಜಿಲ್ಲಾ ಟೂರ್ ಹೊಡೆದು ಪಕ್ಷಕ್ಕೆ ಜೀವ ತುಂಬಬೇಕೆಂದು ಮ್ಯಾಗಿ ಮನದಿಂಗಿತವನ್ನು ದೇಶ್ ಮುಂದೆ ಮಂಡಿಸಿದ್ದಾರೆ. ಇದನ್ನು ದೇಶಪಾಂಡೆಯೂ ಒಪ್ಪಿದ್ದಾರೆ.

ಬದಲಾದ ವರಸೆಯಲ್ಲಿ ಮ್ಯಾಗಿಗೆ ದೇಶಪಾಂಡೆಗಿಂತಲೂ ಹೆಚ್ಚು ಸಿಟ್ಟಿರುವುದು ಭೀಮಣ್ಣನ ಮೇಲೆ. ತನ್ನನ್ನು ಕೊನೆತನಕವೂ ಕಾಡಿದ ಮಾಜಿ ಸಿಎಂ ‘ಬಂ’ನ ಭಾಮೈದ ಈ ಭೀಮಣ್ಣನೆಂಬುದು ಮ್ಯಾಗಿಯ ಹಲವು ಅಸಮಾಧಾನದ ಕಾರಣಗಳಲ್ಲಿ ಒಂದು. ಈ ಭೀಮಣ್ಣ ನಾಯ್ಕನೂ ಅಷ್ಟೇ ಕಿತಾಪತಿಗಾರ. ಮ್ಯಾಗಿಗೆ ಆತ ಕೇರ್ ಮಾಡುತ್ತಿರಲಿಲ್ಲ. ಆಕೆಯ ನಿಷ್ಠಾವಂತ ಹಿಂಬಾಲಕರಾದ ವಿ.ಎನ್.ನಾಯ್ಕ್, ವಸಂತನಾಯ್ಕ್ ವಗೈರೆ ದೀವರ ಹುಡುಗರನ್ನು ಭೀಮಣ್ಣ ಹಣಿಯುತ್ತಲೇ ಬಂದಿದ್ದ. 2013ರ ಅಸೆಂಬ್ಲಿ ಇಲೆಕ್ಷನ್‍ನಲ್ಲಿ ಶಿರಸಿಯಲ್ಲಿ ಸ್ಪೀಕರ್ ಕಾಗೇರಿ ಎದುರು ಮೂರು ಸಾವಿರ ಚಿಲ್ಲರೆ ಮತದ ತೀರಾ ಸಣ್ಣ ಅಂತರದಲ್ಲಿ ಸೋತಿದ್ದ ದಿವಂಗತ ದೀಪಕ್ ಹೊನ್ನಾವರ್ ಮ್ಯಾಗಿಯ ಪುಂಡ ಪಟ್ಟ ಶಿಷ್ಯನಾಗಿದ್ದ. ಆತ ಗೆಲುವಿನ ಹತ್ತಿರ ಬಂದು ಮುಗ್ಗರಿಸಲು ಭೀಮಣ್ಣ-ರವೀಂದ್ರನಾಥ್ ನಾಯ್ಕ ಜೋಡಿಯ ದ್ರೋಹವೇ ಅಂದು ಕಾರಣವಾಗಿತ್ತು. ಈ ಉರಿ ಮ್ಯಾಗಿಗಿನ್ನೂ ಕಡಿಮೆಯಾಗಿಲ್ಲ. ಒಂದು ಕಾಲದಲ್ಲಿ ರವಿ ಮ್ಯಾಗಿ ಶಿಷ್ಯನಾಗಿದ್ದವ. ಆಕೆಯಿಂದಲೇ ಶಿರಸಿ ಕಾಂಗ್ರೆಸ್ ಕ್ಯಾಂಡಿಡೇಟಾಗಿದ್ದವ. ಆನಂತರ ಗುರುಮಾತೆಗೇ ತಿರುಗಿಬಿದ್ದಿದ್ದ ರವಿ ಜೆಡಿಎಸ್ ಪಾಲಾಗಿದ್ದ. ಮೊನ್ನೆಯ ಯಲ್ಲಾಪುರ ಉಪಚುನಾವಣೆ ಗಡಿಬಿಡಿಯಲ್ಲಿ ಈ ರವಿ, ದೇಶಪಾಂಡೆ ಜುಬ್ಬ ಹಿಡಿದುಕೊಂಡು ಕಾಂಗ್ರೆಸ್‍ಗೆ ನುಸುಳಿದ್ದಾನೆ.

ಇಂಥ ಭೀಮ-ರವಿಯಂಥವರ ದೂರವಿಟ್ಟರೆ ಮ್ಯಾಗಿ-ದೇಶ್‍ನಂಟು ಕುದುರುತ್ತದೆ. 2018ರ ಶಿರಸಿ ವಿಧಾನಸಭಾ ಕ್ಷೇತ್ರದ ಚುನಾವಣೆ ಮತ್ತು ಮೊನ್ನೆಯ ಯಲ್ಲಾಪುರ ಉಪಚುನಾವಣೆಯಲ್ಲಿ ಹೇತ್ಲಾಂಡಿ ಭೀಮಣ್ಣನ ಕಾಂಗ್ರೆಸ್ ಕ್ಯಾಂಡಿಡೇಟ್ ಮಾಡಿದ್ದೇ ತಪ್ಪು ಆಯ್ಕೆ ಎನ್ನುವ ಮ್ಯಾಗಿ ತನ್ನ ಮಗ ಶಿರಸಿಯಲ್ಲಿ “ರೈಟ್ ಕ್ಯಾಂಡಿಡೇಟ್” ಎನ್ನುವುದೇ ವಿಚಿತ್ರ. ಬಿಜೆಪಿ ಬೆಂಬಲಿಗರಾದ ಹವ್ಯಕ ಬ್ರಾಹ್ಮಣ ಬಾಹುಳ್ಯದ ಶಿರಸಿ-ಸಿದ್ಧಾಪುರ ಕ್ಷೇತ್ರದಲ್ಲಿ ಅಲ್ಪಸಂಖ್ಯಾತ ಕ್ರಿಶ್ಚಿಯನ್ ಸಮುದಾಯದ ನಿವೇದಿತ್ ಆಳ್ವ ಗೆಲ್ಲುವುದು ಅಷ್ಟು ಸುಲಭವೇನಲ್ಲ. ಅಲ್ಪಸಂಖ್ಯಾತರ ದ್ವೇಷದ ಮೇಲೆಯೇ ಬಿಜೆಪಿಯನ್ನು ಕಟ್ಟಿರುವ ಕಾಗೇರಿ, ಅನಂತ್ಮಾಣಿಗಳ ತವರು ಶಿರಸಿಯಲ್ಲಿ ಕಾಂಗ್ರೆಸ್ ಹವ್ಯಕ ಮಾಣಿ/ಕೂಸು ನಿಲ್ಲಿಸಿದರಷ್ಟೇ ಅನುಕೂಲ. ಸದ್ಯ ಜೆಡಿಎಸ್‍ನಲ್ಲಿರುವ ದಿವಂಗತ ಮಾಜಿ ಸಿಎಂ ರಾಮಕೃಷ್ಣ ಹೆಗಡೆಜೀ ದಾಯಾದಿ ಮೊಮ್ಮಗ ಶಶಿಭೂಷಣ ಹೆಗಡೆ ಕಾಂಗ್ರೆಸ್‍ಗೆ ಸೂಕ್ತ ಅಭ್ಯರ್ಥಿ. ಕಾಂಗ್ರೆಸ್ ಸೇರುವ ಆಸೆ ಶಶಿಗಿದ್ದರೂ ಹೆಗಡೆಜೀಯ ದೊಡ್ಮನೆ ಫ್ಯಾಮಿಲಿ ಬಗ್ಗೆ ದೇಶಪಾಂಡೆಗಿರುವ ಪುರಾತನ ದ್ವೇಷಕ್ಕೆ ಹೆದರಿ ಆತ ಸುಮ್ಮನಿದ್ದಾರೆ.

ಗೆಲ್ಲಲು ಇರುವ ಇಂಥ ಸರಳ ಲೆಕ್ಕಾಚಾರಗಳು ಪುತ್ರ ವ್ಯಾಮೋಹದಲ್ಲಿ ಮಂಕಾಗಿರುವ ಮ್ಯಾಗಜ್ಜೀ-ದೇಶಜ್ಜನಿಗೆ ಅರ್ಥವಾಗೋದಿಲ್ಲ. ಔಟ್‍ಡೇಟೆಡ್ ದಿಗ್ಗಜರು ಹಳೆಯದನ್ನು ಮರೆತು ಒಂದಾಗಿ ಪಾರ್ಟಿ ಕಟ್ಟಬಹುದೆಂಬ ನಂಬಿಕೆ ನಿಷ್ಠಾವಂತ ಕಾಂಗ್ರೆಸಿಗರಿಗಂತೂ ಇಲ್ಲಾ. ಆದರೆ ಮಕ್ಕಳ ಭವಿಷ್ಯ ಬೆಳಗಲು ಅನಿವಾರ್ಯವಾಗಿ ಮ್ಯಾಗಿ-ದೇಶ್ ಹೊಸ ಹೊಂದಾಣಿಕೆಯ ಸ್ಕೆಚ್ ಹಾಕಿದ್ದಾರೆಂಬುದು ಕಾಂಗ್ರೆಸ್‍ನಲ್ಲಷ್ಟೇ ಅಲ್ಲ ವಿರೋಧಿ ಕೇಸರಿ ಪಾಳೆಯದಲ್ಲೂ ಸಣ್ಣದೊಂದು ತಲ್ಲಣ ಎಬ್ಬಿಸಿರುವುದಂತೂ ಖರೆ!!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

2 COMMENTS

LEAVE A REPLY

Please enter your comment!
Please enter your name here

- Advertisment -

ಮಧ್ಯಪ್ರದೇಶ| ವಂದೇ ಮಾತರಂ ಹಾಡಲು ನಿರಾಕರಣೆ; ಇಬ್ಬರು ಕಾಂಗ್ರೆಸ್ ಕೌನ್ಸಿಲರ್‌ಗಳ ವಿರುದ್ಧ ಎಫ್‌ಐಆರ್

ಏಪ್ರಿಲ್ 8 ರಂದು ಇಂದೋರ್ ಮುನ್ಸಿಪಲ್ ಕಾರ್ಪೊರೇಷನ್‌ನ ಬಜೆಟ್ ಅಧಿವೇಶನದಲ್ಲಿ ಧಾರ್ಮಿಕ ಮತ್ತು ಸಾಂವಿಧಾನಿಕ ಕಾರಣಗಳನ್ನು ಉಲ್ಲೇಖಿಸಿ ವಂದೇ ಮಾತರಂ ಹಾಡಲು ನಿರಾಕರಿಸಿದ್ದಕ್ಕಾಗಿ ಮಧ್ಯಪ್ರದೇಶ ಪೊಲೀಸರು ಇಬ್ಬರು ಕಾಂಗ್ರೆಸ್ ಕೌನ್ಸಿಲರ್‌ಗಳ ವಿರುದ್ಧ ಎಫ್‌ಐಆರ್...

ನ್ಯಾಯಾಂಗ ಸೇವೆಗಳು, ಸರ್ಕಾರಿ ಸಮಿತಿಗಳಲ್ಲಿ ಶೇ. 50 ಮಹಿಳಾ ಪ್ರಾತಿನಿಧ್ಯ ಕೋರಿ ಪಿಐಎಲ್ : ವಜಾಗೊಳಿಸಿದ ಸುಪ್ರೀಂ ಕೋರ್ಟ್

ಸರ್ಕಾರಿ ಸಮಿತಿಗಳು ಮತ್ತು ನ್ಯಾಯಾಂಗ ಸೇವೆಯ ಖಾಲಿ ಇರುವ ಸ್ಥಾನಗಳಲ್ಲಿ ಮಹಿಳೆಯರಿಗೆ ಶೇ. 50ರಷ್ಟು ಪ್ರಾತಿನಿಧ್ಯ ನೀಡಬೇಕೆಂದು ಕೋರಿ ಸಲ್ಲಿಸಲಾಗಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು (ಪಿಐಎಲ್‌) ವಿಚಾರಣೆಗೆ ಸ್ವೀಕರಿಸಲು ಸುಪ್ರೀಂ ಕೋರ್ಟ್ ಗುರುವಾರ...

ರಷ್ಯಾ ತೈಲ ಖರೀದಿಸಲು ಭಾರತಕ್ಕೆ ನೀಡಿದ್ದ ಕಾಲಾವಕಾಶ ವಿಸ್ತರಿಸುವುದಿಲ್ಲ: ಅಮೆರಿಕ

ಇರಾನ್ ಮತ್ತು ರಷ್ಯಾದಿಂದ ತೈಲವನ್ನು ಖರೀದಿಸಲು ಭಾರತ ಸೇರಿದಂತೆ ವಿವಿಧ ದೇಶಗಳಿಗೆ ಈವರೆಗೆ ನೀಡಲಾಗಿದ್ದ ನಿರ್ಬಂಧ ಸಡಿಲಿಕೆಯನ್ನು ಇನ್ನು ಮುಂದೆ ಮುಂದುವರಿಸುವುದಿಲ್ಲ ಎಂದು ಅಮೆರಿಕದ ಖಜಾನೆ ಕಾರ್ಯದರ್ಶಿ ಸ್ಕಾಟ್ ಬೆಸೆಂಟ್ ಬುಧವಾರ (ಏ.15)...

ಬೆಂಗಳೂರಿನಲ್ಲಿ ಮಾದಕ ವಸ್ತು ಜಾಲ ಪತ್ತೆ; 10 ಜನರ ಬಂಧನ, 23.6 ಕೋಟಿ ಮೌಲ್ಯದ ಮಾದಕ ವಸ್ತು ವಶ

ಬೆಂಗಳೂರು: ಬೃಹತ್ ಮಾದಕ ವಸ್ತು ಜಾಲ ಪತ್ತೆಯಾಗಿದ್ದು, ಬೆಂಗಳೂರು ನಗರ ಪೊಲೀಸರು 10 ಜನ ಶಂಕಿತರನ್ನು ಬಂಧಿಸಿದ್ದಾರೆ ಮತ್ತು ಅಂದಾಜು 23.63 ಕೋಟಿ ರೂ. ಮಾರುಕಟ್ಟೆ ಮೌಲ್ಯದ ಮಾದಕ ದ್ರವ್ಯಗಳನ್ನು ವಶಪಡಿಸಿಕೊಂಡಿದ್ದಾರೆ. ಕಳೆದ ಕೆಲವು...

‘ಮತ ಚಲಾಯಿಸದವರನ್ನು ಶಿಕ್ಷಿಸಲು ಸಾಧ್ಯವಿಲ್ಲ’: ಮತದಾನ ಕಡ್ಡಾಯಗೊಳಿಸಲು ಕೋರಿದ್ದ ಅರ್ಜಿ ತಿರಸ್ಕರಿಸಿದ ಸುಪ್ರೀಂ ಕೋರ್ಟ್

ಮತ ಚಲಾಯಿಸುವುದನ್ನು ಕಡ್ಡಾಯಗೊಳಿಸಲು ನಿರ್ದೇಶನಗಳನ್ನು ಕೋರಿ ಸಲ್ಲಿಸಲಾದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು (ಪಿಐಎಲ್‌) ಸುಪ್ರೀಂ ಕೋರ್ಟ್ ಗುರುವಾರ (ಏ. 16) ವಜಾಗೊಳಿಸಿದೆ ಮತ್ತು ಉದ್ದೇಶಪೂರ್ವಕವಾಗಿ ಮತದಾನದಿಂದ ದೂರ ಉಳಿಯುವ ನಾಗರಿಕರಿಗೆ ದಂಡ ವಿಧಿಸಲು...

ಆರ್‌ಎಸ್‌ಎಸ್‌ಗೆ 100 ವರ್ಷ; ಮುದ್ರಣ ಮಾಧ್ಯಮ ಜಾಹೀರಾತಿಗೆ 76.13 ಲಕ್ಷ ರೂ. ಖರ್ಚು ಮಾಡಿದ ಕೇಂದ್ರ ಸರ್ಕಾರ

ಅಧಿಕೃತವಾಗಿ ನೊಂದಣಿಯಾಗದ ರಾಷ್ಟ್ರೀಯ ಸ್ವಯಂಸೇವಕ ಸಂಘ (ಆರ್‌ಎಸ್‌ಎಸ್) ದ 100ನೇ ವರ್ಷಾಚರಣೆಯ ಜಾಹೀರಾತುಗಳಿಗಾಗಿ ಕೇಂದ್ರ ಸಂಸ್ಕೃತಿ ಸಚಿವಾಲಯವು 76.13 ಲಕ್ಷ ರೂ.ಗಳನ್ನು ಖರ್ಚು ಮಾಡಿದೆ ಎಂದು ಮಾಹಿತಿ ಹಕ್ಕು (ಆರ್‌ಟಿಐ) ಕಾಯ್ದೆಯಿಂದ ತಿಳಿದುಬಂದಿದೆ. ಹಿಂದೂ...

ಡಿಲಿಮಿಟೇಶನ್‌ಗೆ ಲಿಂಕ್ ಮಾಡದೆ ‘ಮಹಿಳಾ ಮೀಸಲಾತಿ’ ಜಾರಿ ಮಾಡಿ: ಗೌರವ್ ಗೊಗೊಯ್

"ಮಹಿಳಾ ಮೀಸಲಾತಿಯನ್ನು ಪ್ರಸ್ತುತ ಲೋಕಸಭೆಯ 543 ಸದಸ್ಯರ ಬಲದ ಮೇಲೆ ಜಾರಿಗೆ ತರಬೇಕು, ಅದನ್ನು ಡಿಲಿಮಿಟೇಷನ್ (ಕ್ಷೇತ್ರ ಪುನರ್‌ ವಿಂಗಡಣೆ) ಸೀಮಿತಗೊಳಿಸಬಾರದು" ಎಂದು ಕಾಂಗ್ರೆಸ್ ಸಂಸದ ಗೌರವ್ ಗೊಗೊಯ್ ಹೇಳಿದರು. "ಸರ್ಕಾರವು ಮಸೂದೆಗಳನ್ನು...

ಕ್ಷೇತ್ರ ಮರುವಿಂಗಡನೆ, ಮಹಿಳಾ ಮೀಸಲಾತಿ : ಲೋಕಸಭೆಯಲ್ಲಿ ಮೂರು ಪ್ರಮುಖ ಮಸೂದೆಗಳ ಮಂಡನೆ

ಮಹಿಳಾ ಮೀಸಲಾತಿ ಕಾಯ್ದೆಗೆ ತಿದ್ದುಪಡಿ ತರಲು ಮತ್ತು ಕ್ಷೇತ್ರ ಮರುವಿಂಗಡಣಾ ಆಯೋಗವನ್ನು ಸ್ಥಾಪಿಸಲು ಕೇಂದ್ರ ಸಚಿವರಾದ ಅರ್ಜುನ್ ರಾಮ್ ಮೇಘವಾಲ್ ಮತ್ತು ಅಮಿತ್ ಶಾ ಅವರು ಗುರುವಾರ (ಏ.16) ಲೋಕಸಭೆಯಲ್ಲಿ ಮೂರು ವಿಧೇಯಕಗಳನ್ನು...

ಮತಾಂತರ ವಿರೋಧಿ ಕಾನೂನನ್ನು ಪೊಲೀಸರು ದುರುಪಯೋಗಪಡಿಸಿಕೊಳ್ಳುತ್ತಿದ್ದಾರೆ: ಅಲಹಾಬಾದ್ ಹೈಕೋರ್ಟ್

ಉತ್ತರ ಪ್ರದೇಶದಲ್ಲಿ 2021 ರ ಕಾನೂನುಬಾಹಿರ ಧರ್ಮ ಮತಾಂತರ ನಿಷೇಧ ಕಾಯ್ದೆಯಡಿಯಲ್ಲಿ ದಾಖಲಾಗಿರುವ ಹಲವಾರು "ಸುಳ್ಳು, ನಕಲಿ ಮತ್ತು ಕ್ಷುಲ್ಲಕ ಎಫ್‌ಐಆರ್"ಗಳನ್ನು ಅಲಹಾಬಾದ್ ಹೈಕೋರ್ಟ್ ಗುರುತಿಸಿದೆ. "ಪೊಲೀಸರು ಮತ್ತು ದೂರುದಾರರು ಕಾನೂನನ್ನು ದುರುಪಯೋಗಪಡಿಸಿಕೊಳ್ಳುವ...

ಸಂಸತ್ತಿನ 3 ದಿನಗಳ ವಿಶೇಷ ಅಧಿವೇಶನ: ಕ್ಷೇತ್ರ ಮರುವಿಂಗಡಣೆ, ಮಹಿಳಾ ಮೀಸಲಾತಿ ಕುರಿತ ಮಸೂದೆಗಳ ಮಂಡನೆ ಸಾಧ್ಯತೆ

ಸಂಸತ್ತಿನ ಮೂರು ದಿನಗಳ ವಿಶೇಷ ಅಧಿವೇಶನ ಗುರುವಾರದಿಂದ (ಏ.16) ಪ್ರಾರಂಭಗೊಂಡಿದೆ. ಕ್ಷೇತ್ರ ಮರುವಿಂಗಡನೆ, ಮಹಿಳಾ ಮೀಸಲಾತಿ ಸೇರಿದಂತೆ ಪ್ರಮುಖ ಮೂರು ಮಸೂದೆಗಳು ಮಂಡನೆಯಾಗುವ ಸಾಧ್ಯತೆ ಇದೆ. ಲೋಕಸಭೆಯ ಒಟ್ಟು ಸ್ಥಾನಗಳ ಸಂಖ್ಯೆಯನ್ನು ಪ್ರಸ್ತುತ...