Homeಕರ್ನಾಟಕಉತ್ತರ ಕನ್ನಡ ಸಂತಾನ ಸಂರಕ್ಷಣೆಗೆ ಒಂದಾದ ಮ್ಯಾಗಿಯಜ್ಜಿ ದೇಶಜ್ಜ!!

ಉತ್ತರ ಕನ್ನಡ ಸಂತಾನ ಸಂರಕ್ಷಣೆಗೆ ಒಂದಾದ ಮ್ಯಾಗಿಯಜ್ಜಿ ದೇಶಜ್ಜ!!

- Advertisement -
- Advertisement -

ಉತ್ತರ ಕನ್ನಡದ ಕಾಂಗ್ರೆಸ್ ಪೊರೆ ಕಳಚಿಕೊಳ್ಳುತ್ತಿದೆ! ಮದವೇರಿದ ಮದ್ದಾನೆಗಳಂತಾಗಿ ದಶಕಗಟ್ಟಲೆ ಕಾಲ ಗುದ್ದಾಡಿ ಜಿಲ್ಲಾ ಕಾಂಗ್ರೆಸನ್ನು ನಜ್ಜುಗುಜ್ಜುಮಾಡಿದ್ದ ಮ್ಯಾಗಿಯಜ್ಜಿ ಮತ್ತು ದೇಶಜ್ಜ ರಾಜಿ ಸಂಕೇತ ಬಿತ್ತರಿಸುತ್ತಿದ್ದಾರೆ. ಪರಸ್ಪರ ಅಸ್ತಿತ್ವ ಉಳಿಸಿಕೊಳ್ಳಲು ಈ ಮುದಿಮಣಿಗಳು ಹೊಂದಾಣಿಕೆಯ ಅನಿವಾರ್ಯಕ್ಕೆ ಬಿದ್ದಿವೆ. ಬದ್ಧವೈರಿಗಳ ಈ ಮನಃಪರಿವರ್ತನೆ ಯಲ್ಲಾಪುರ ಬೈ-ಇಲೆಕ್ಷನ್ ಸೋಲಿನ ನೇರ ಪರಿಣಾಮ ಎಂತಲೇ ರಾಜಕೀಯ ಪಡಸಾಲೆಯಲ್ಲಿ ವಿಶ್ಲೇಷಣೆಗಳು ನಡೆದಿದೆ.

ದೇಶಪಾಂಡೆ ತನ್ನ ಮೂರು ದಶಕದ ರಾಜಕೀಯದಲ್ಲಿ ಜನತಾ ಪರಿವಾರದಲ್ಲಿರಲಿ ಅಥವಾ ಕಾಂಗ್ರೆಸಿನಲ್ಲಿರಲಿ ಯಾರನ್ನೂ ಗೆಲ್ಲಿಸಲು ತ್ರಿಕರ್ಣಪೂರ್ವಕ ಪ್ರಯತ್ನ ಮಾಡಿದ ಕುರುಹುಗಳಿಲ್ಲ. ಹಾಗಂತ ಸೋಲಿಸಲು ಹಲವು ಸಲ ಹಠಹಿಡಿದು ಹಿಕಮತ್ತು ನಡೆಸಿದ ದಾಖಲೆಗಳಿವೆ. ಇಂಥ ಇತಿಹಾಸದ ದೇಶ್ ಕಳೆದ ಯಲ್ಲಾಪುರ ಬೈ-ಇಲೆಕ್ಷನ್‍ನಲ್ಲಿ ತನ್ನ ಚೇಲಾ ಭೀಮಣ್ಣ ನಾಯ್ಕನ ಗೆಲ್ಲಿಸಿ ವೈರಿ ಹೆಬ್ಬಾರ್ ಮೇಲಿನ ಸೇಡು ತೀರಿಸಿಕೊಳ್ಳಲು ಪ್ರತಿಷ್ಠೆ ಪಣಕ್ಕಿಟ್ಟು ಹೋರಾಡಿದ್ದರು. ಆದರೆ ಸ್ವಯಂಕೃತಾಪರಾಧಗಳ ಸರಣಿಯಿಂದ ವರ್ಚಸ್ಸು ಕಳಕೊಂಡಿರುವ ದೇಶ್ ಮುಗ್ಗರಿಸಿ ಮಕಾಡೆ ಮಲಗಿಬಿಟ್ಟರು! ಕಂಗಾಲಾಗಿ ದೇಶಪಾಂಡೆ ಕೂತಿದ್ದ ಈ ಹೊತ್ತಿನಲ್ಲೇ ಬರೋಬ್ಬರಿ ಒಂದು ವರ್ಷದನಂತರ ಜಿಲ್ಲೆಗೆ ವಕ್ಕರಿಸಿದ ಇಲ್ಲಿಯ ಮಾಜಿ ಸಂಸದೆ ಮಾರ್ಗರೇಟ್ ಆಳ್ವ ಆಟ ಶುರುಹಚ್ಚಿಕೊಂಡಿದ್ದರು. ನೇರ ಮ್ಯಾಗಿಯ ಶಿರಸಿಯ ಮನೆಗೇ ಹೋದ ದೇಶ್ ಆಕೆಯ ಮುಂದೆ ನಿಂತು ಹೊಸ ನಂಟಿನ ಪ್ರಸ್ತಾಪ ಇಟ್ಟಿರುವುದು ಅನಿರೀಕ್ಷಿತ ಸಮೀಕರಣವನ್ನು ಜಿಲ್ಲಾ ರಾಜಕೀಯ ಭೂಮಿಕೆಯಲ್ಲಿ ಸೃಷ್ಟಿಸಿಬಿಟ್ಟಿದೆ.

ಮ್ಯಾಗಿ ಮತ್ತಾಕೆಯ ಮಗ ಆಳ್ವ ಫೌಂಡೇಶನ್ ಕಟ್ಟಿಕೊಂಡಿದ್ದರೆ, ದೇಶ್ ಮತ್ತವರ ಪುತ್ರ ಪ್ರಶಾಂತ ದೇಶಪಾಂಡೆ ಟ್ರಸ್ಟ್ ಸ್ಥಾಪಿಸಿಕೊಂಡಿದ್ದಾರೆ. ಎರಡೂ ಕುಟುಂಬಗಳು ಸಾಮಾಜಿಕ ಸೇವೆಯ ಹೆಸರಲ್ಲಿ ರಾಜಕೀಯ ಫಾಯ್ದೆಗೆ ಹವಣಿಸುತ್ತಿವೆ. ಮ್ಯಾಗಿಗೆ ತನ್ನ ಪೆದ್ದು ಕುಲೋದ್ಧಾರಕನನ್ನು ಶಿರಸಿಯ ಶಾಸಕನ ಮಾಡುವ ಕನಸು; ದೇಶ್‍ಗೆ ಮುಂಬೈನಲ್ಲಿ ವಕೀಲಿಕೆ ಮಾಡುವ ಅನಿವಾಸಿ ಉತ್ತರ ಕನ್ನಡಿಗ ಮಗ ಮಹಾರಾಯನ ಸಂಸದನ ಮಾಡುವ ಆಸೆ. ಇದೇ ಒಳಉದ್ದೇಶದಿಂದ ಮ್ಯಾಗಿ ಫೌಂಡೇಷನ್ ಕಾರ್ಯಕ್ರಮ ಹಾಕಿಕೊಂಡು ಈಗ ಜಿಲ್ಲೆಯಲ್ಲಿ ಅಂಡಲೆಯುತ್ತಿದ್ದಾರೆ. ಆಕೆ ಫಂಕ್ಷನ್ ಮುಗಿಸಿ ಮನೆಗೆ ಬರುವುದನ್ನೇ ಕಾಯುತ್ತಿದ್ದ ದೇಶಪಾಂಡೆ ಮೊನ್ನೆ ಶನಿವಾರ ಭೇಟಿಯಾಗಿ ಗ್ಯಾಂಗ್‍ವಾರ್ ನಿಲ್ಲಿಸುವ ಒಪ್ಪಂದ ಮಾಡಿಕೊಂಡಿದ್ದಾರೆ. ಜಿಲ್ಲೆಯಲ್ಲಿ ಬಿಜೆಪಿ ಎಬ್ಬಿಸಿರುವ ಬಡಿವಾರಕ್ಕೆ ಬೆದರಿರುವ ಮ್ಯಾಗಿ-ದೇಶ್ ನೈಚ್ಛಾನುಸಂಧಾನ ನಡೆಸಬೇಕಾಗಿ ಬಂದಿವೆ, ಪಾಪ!!

ಮ್ಯಾಗಿ-ದೇಶ್ ಅಕ್ಕ-ಪಕ್ಕ ಕುಳಿತು ಕಳೆದ ಅಸೆಂಬ್ಲಿ ಲೋಕಸಭೆ ಚುನಾವಣೆಗಳಲ್ಲಿ ತಮ್ಮ ಬಣ ಬಡಿದಾಟದಿಂದಾದ ಹಾನಿಯ ಲೆಕ್ಕ ತೆಗೆದಿದ್ದಾರೆ. ತಮ್ಮೊಳಗಿನ ದ್ವೇಷಾಸೂಯೆ ಮೇಲಾಟದಿಂದ ಗತಿಗೇಡಿ ಬಿಜೆಪಿ ಸೈತಾನನಂತೆ ಬೆಳೆದಿದೆ ಎಂದು ಪಾಪಪ್ರಜ್ಞೆಯಿಂದ ಮಾತಾಡಿಕೊಂಡಿದ್ದಾರೆ; ಈಗಿಂದಲೇ ತಳಮಟ್ಟದಿಂದ ಪಾರ್ಟಿಯನ್ನು ಕಟ್ಟದಿದ್ದರೆ ತಮ್ಮ ವಂಶದ ಉತ್ತರಾಧಿಕಾರಿಗಳಿಗೆ ಭವಿಷ್ಯವಿಲ್ಲ ಎಂಬುದು ಮನಗಂಡಿದ್ದಾರೆ. ಜಿಲ್ಲಾ ಕಾಂಗ್ರೆಸ್ ಉದ್ಧಾರವಾಗಬೇಕಿದ್ದರೆ ಮೊದಲು ಹಾಲಿ ಡಿಸಿಸಿ ಅಧ್ಯಕ್ಷ ಭೀಮಣ್ಣ ನಾಯ್ಕನ ಉಚ್ಚಾಟಿಸಿ ಹೊಸ ಆಯ್ಕೆ ಮಾಡಬೇಕು; ಆನಂತರ ತಾವಿಬ್ಬರೂ ಒಟ್ಟಾಗಿ ಜಿಲ್ಲಾ ಟೂರ್ ಹೊಡೆದು ಪಕ್ಷಕ್ಕೆ ಜೀವ ತುಂಬಬೇಕೆಂದು ಮ್ಯಾಗಿ ಮನದಿಂಗಿತವನ್ನು ದೇಶ್ ಮುಂದೆ ಮಂಡಿಸಿದ್ದಾರೆ. ಇದನ್ನು ದೇಶಪಾಂಡೆಯೂ ಒಪ್ಪಿದ್ದಾರೆ.

ಬದಲಾದ ವರಸೆಯಲ್ಲಿ ಮ್ಯಾಗಿಗೆ ದೇಶಪಾಂಡೆಗಿಂತಲೂ ಹೆಚ್ಚು ಸಿಟ್ಟಿರುವುದು ಭೀಮಣ್ಣನ ಮೇಲೆ. ತನ್ನನ್ನು ಕೊನೆತನಕವೂ ಕಾಡಿದ ಮಾಜಿ ಸಿಎಂ ‘ಬಂ’ನ ಭಾಮೈದ ಈ ಭೀಮಣ್ಣನೆಂಬುದು ಮ್ಯಾಗಿಯ ಹಲವು ಅಸಮಾಧಾನದ ಕಾರಣಗಳಲ್ಲಿ ಒಂದು. ಈ ಭೀಮಣ್ಣ ನಾಯ್ಕನೂ ಅಷ್ಟೇ ಕಿತಾಪತಿಗಾರ. ಮ್ಯಾಗಿಗೆ ಆತ ಕೇರ್ ಮಾಡುತ್ತಿರಲಿಲ್ಲ. ಆಕೆಯ ನಿಷ್ಠಾವಂತ ಹಿಂಬಾಲಕರಾದ ವಿ.ಎನ್.ನಾಯ್ಕ್, ವಸಂತನಾಯ್ಕ್ ವಗೈರೆ ದೀವರ ಹುಡುಗರನ್ನು ಭೀಮಣ್ಣ ಹಣಿಯುತ್ತಲೇ ಬಂದಿದ್ದ. 2013ರ ಅಸೆಂಬ್ಲಿ ಇಲೆಕ್ಷನ್‍ನಲ್ಲಿ ಶಿರಸಿಯಲ್ಲಿ ಸ್ಪೀಕರ್ ಕಾಗೇರಿ ಎದುರು ಮೂರು ಸಾವಿರ ಚಿಲ್ಲರೆ ಮತದ ತೀರಾ ಸಣ್ಣ ಅಂತರದಲ್ಲಿ ಸೋತಿದ್ದ ದಿವಂಗತ ದೀಪಕ್ ಹೊನ್ನಾವರ್ ಮ್ಯಾಗಿಯ ಪುಂಡ ಪಟ್ಟ ಶಿಷ್ಯನಾಗಿದ್ದ. ಆತ ಗೆಲುವಿನ ಹತ್ತಿರ ಬಂದು ಮುಗ್ಗರಿಸಲು ಭೀಮಣ್ಣ-ರವೀಂದ್ರನಾಥ್ ನಾಯ್ಕ ಜೋಡಿಯ ದ್ರೋಹವೇ ಅಂದು ಕಾರಣವಾಗಿತ್ತು. ಈ ಉರಿ ಮ್ಯಾಗಿಗಿನ್ನೂ ಕಡಿಮೆಯಾಗಿಲ್ಲ. ಒಂದು ಕಾಲದಲ್ಲಿ ರವಿ ಮ್ಯಾಗಿ ಶಿಷ್ಯನಾಗಿದ್ದವ. ಆಕೆಯಿಂದಲೇ ಶಿರಸಿ ಕಾಂಗ್ರೆಸ್ ಕ್ಯಾಂಡಿಡೇಟಾಗಿದ್ದವ. ಆನಂತರ ಗುರುಮಾತೆಗೇ ತಿರುಗಿಬಿದ್ದಿದ್ದ ರವಿ ಜೆಡಿಎಸ್ ಪಾಲಾಗಿದ್ದ. ಮೊನ್ನೆಯ ಯಲ್ಲಾಪುರ ಉಪಚುನಾವಣೆ ಗಡಿಬಿಡಿಯಲ್ಲಿ ಈ ರವಿ, ದೇಶಪಾಂಡೆ ಜುಬ್ಬ ಹಿಡಿದುಕೊಂಡು ಕಾಂಗ್ರೆಸ್‍ಗೆ ನುಸುಳಿದ್ದಾನೆ.

ಇಂಥ ಭೀಮ-ರವಿಯಂಥವರ ದೂರವಿಟ್ಟರೆ ಮ್ಯಾಗಿ-ದೇಶ್‍ನಂಟು ಕುದುರುತ್ತದೆ. 2018ರ ಶಿರಸಿ ವಿಧಾನಸಭಾ ಕ್ಷೇತ್ರದ ಚುನಾವಣೆ ಮತ್ತು ಮೊನ್ನೆಯ ಯಲ್ಲಾಪುರ ಉಪಚುನಾವಣೆಯಲ್ಲಿ ಹೇತ್ಲಾಂಡಿ ಭೀಮಣ್ಣನ ಕಾಂಗ್ರೆಸ್ ಕ್ಯಾಂಡಿಡೇಟ್ ಮಾಡಿದ್ದೇ ತಪ್ಪು ಆಯ್ಕೆ ಎನ್ನುವ ಮ್ಯಾಗಿ ತನ್ನ ಮಗ ಶಿರಸಿಯಲ್ಲಿ “ರೈಟ್ ಕ್ಯಾಂಡಿಡೇಟ್” ಎನ್ನುವುದೇ ವಿಚಿತ್ರ. ಬಿಜೆಪಿ ಬೆಂಬಲಿಗರಾದ ಹವ್ಯಕ ಬ್ರಾಹ್ಮಣ ಬಾಹುಳ್ಯದ ಶಿರಸಿ-ಸಿದ್ಧಾಪುರ ಕ್ಷೇತ್ರದಲ್ಲಿ ಅಲ್ಪಸಂಖ್ಯಾತ ಕ್ರಿಶ್ಚಿಯನ್ ಸಮುದಾಯದ ನಿವೇದಿತ್ ಆಳ್ವ ಗೆಲ್ಲುವುದು ಅಷ್ಟು ಸುಲಭವೇನಲ್ಲ. ಅಲ್ಪಸಂಖ್ಯಾತರ ದ್ವೇಷದ ಮೇಲೆಯೇ ಬಿಜೆಪಿಯನ್ನು ಕಟ್ಟಿರುವ ಕಾಗೇರಿ, ಅನಂತ್ಮಾಣಿಗಳ ತವರು ಶಿರಸಿಯಲ್ಲಿ ಕಾಂಗ್ರೆಸ್ ಹವ್ಯಕ ಮಾಣಿ/ಕೂಸು ನಿಲ್ಲಿಸಿದರಷ್ಟೇ ಅನುಕೂಲ. ಸದ್ಯ ಜೆಡಿಎಸ್‍ನಲ್ಲಿರುವ ದಿವಂಗತ ಮಾಜಿ ಸಿಎಂ ರಾಮಕೃಷ್ಣ ಹೆಗಡೆಜೀ ದಾಯಾದಿ ಮೊಮ್ಮಗ ಶಶಿಭೂಷಣ ಹೆಗಡೆ ಕಾಂಗ್ರೆಸ್‍ಗೆ ಸೂಕ್ತ ಅಭ್ಯರ್ಥಿ. ಕಾಂಗ್ರೆಸ್ ಸೇರುವ ಆಸೆ ಶಶಿಗಿದ್ದರೂ ಹೆಗಡೆಜೀಯ ದೊಡ್ಮನೆ ಫ್ಯಾಮಿಲಿ ಬಗ್ಗೆ ದೇಶಪಾಂಡೆಗಿರುವ ಪುರಾತನ ದ್ವೇಷಕ್ಕೆ ಹೆದರಿ ಆತ ಸುಮ್ಮನಿದ್ದಾರೆ.

ಗೆಲ್ಲಲು ಇರುವ ಇಂಥ ಸರಳ ಲೆಕ್ಕಾಚಾರಗಳು ಪುತ್ರ ವ್ಯಾಮೋಹದಲ್ಲಿ ಮಂಕಾಗಿರುವ ಮ್ಯಾಗಜ್ಜೀ-ದೇಶಜ್ಜನಿಗೆ ಅರ್ಥವಾಗೋದಿಲ್ಲ. ಔಟ್‍ಡೇಟೆಡ್ ದಿಗ್ಗಜರು ಹಳೆಯದನ್ನು ಮರೆತು ಒಂದಾಗಿ ಪಾರ್ಟಿ ಕಟ್ಟಬಹುದೆಂಬ ನಂಬಿಕೆ ನಿಷ್ಠಾವಂತ ಕಾಂಗ್ರೆಸಿಗರಿಗಂತೂ ಇಲ್ಲಾ. ಆದರೆ ಮಕ್ಕಳ ಭವಿಷ್ಯ ಬೆಳಗಲು ಅನಿವಾರ್ಯವಾಗಿ ಮ್ಯಾಗಿ-ದೇಶ್ ಹೊಸ ಹೊಂದಾಣಿಕೆಯ ಸ್ಕೆಚ್ ಹಾಕಿದ್ದಾರೆಂಬುದು ಕಾಂಗ್ರೆಸ್‍ನಲ್ಲಷ್ಟೇ ಅಲ್ಲ ವಿರೋಧಿ ಕೇಸರಿ ಪಾಳೆಯದಲ್ಲೂ ಸಣ್ಣದೊಂದು ತಲ್ಲಣ ಎಬ್ಬಿಸಿರುವುದಂತೂ ಖರೆ!!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

2 COMMENTS

LEAVE A REPLY

Please enter your comment!
Please enter your name here

- Advertisment -

ಭಾಗ-2: ಎಸ್‌ಐಆರ್ ಜಾರಿಯಿಂದ ಕಾಂಗ್ರೆಸ್‌ ಕಳೆದುಕೊಳ್ಳುವ ಕ್ಷೇತ್ರಗಳೆಷ್ಟು?

30 ಸಾವಿರದಿಂದ ಒಂದು ಸಾವಿರದ ಒಳಗಿನ ಮತಗಳ ಅಂತರದಿಂದ ಗೆದ್ದಿರುವ ಕರ್ನಾಟಕದ 97 ಕ್ಷೇತ್ರಗಳನ್ನು ನಾವು ಪಟ್ಟಿ ಮಾಡಿದ್ದೇವೆ. ಪಶ್ಚಿಮ ಬಂಗಾಳದಲ್ಲಿ ಆದಂತೆಯೇ ರಾಜ್ಯದಲ್ಲಿ ಚುನಾವಣೆ ಸಮೀಪಿಸಿದಾಗ ಎಸ್‌ಐಆರ್ ಜಾರಿಯಾದರೆ ಬಿಜೆಪಿಗೆ ಅನುಕೂಲವಾಗುವ...

ತಮಿಳುನಾಡಿನಲ್ಲಿ ಮೊದಲ ಬಾರಿಗೆ ಸ್ಪರ್ಧಿಸಿ ಗೆದ್ದ 60 ನೂತನ ಶಾಸಕರು

ತಮಿಳುನಾಡು ರಾಜಕಾರಣ ಎಂದರೆ ಅದು ಐದು ದಶಕಗಳಿಂದ ಕೇವಲ ಡಿಎಂಕೆ ಮತ್ತು ಎಐಎಡಿಎಂಕೆ ನಡುವಿನ ಜಿದ್ದಾಜಿದ್ದಿ. ಆದರೆ 2026ರ ಫಲಿತಾಂಶವು ಈ "ದ್ವಿಪಕ್ಷೀಯ" ಸಂಪ್ರದಾಯವನ್ನು ಮುರಿದುಹಾಕಿದೆ. ನಟ ವಿಜಯ್ ನೇತೃತ್ವದ ತಮಿಳಗ ವೆಟ್ರಿ...

‘ಪ್ರಜಾತಂತ್ರಕ್ಕೆ ಬೆದರಿಕೆ ಒಡ್ಡುತ್ತಿರುವ ಎಸ್ಐಆರ್’: ಬಿಜೆಪಿಯ (ಕು)ತಂತ್ರ ಫಲಿಸಿದರೇ ಭಾರತವೇ ಇರುವುದಿಲ್ಲ..!

ಪಂಚರಾಜ್ಯ ಚುನಾವಣಾ ಫಲಿತಾಂಶಗಳು 2026 ಮೇ 4ರಂದು ಹೊರಬಿದ್ದಿದ್ದು, ಭಾರತೀಯ ಜನತಾ ಪಾರ್ಟಿ ಪಶ್ಚಿಮ ಬಂಗಾಳವನ್ನು ತನ್ನ ತೆಕ್ಕೆಗೆ ತೆಗೆದುಕೊಂಡಿದೆ. ಆದರೆ ಈ ಗೆಲುವು ಕೇವಲ ಜನರ ಆದರ್ಶವಲ್ಲ, ಬದಲಿಗೆ ಚುನಾವಣಾ ವ್ಯವಸ್ಥೆಯೇ...

ಬಿಹಾರ-ಬಂಗಾಳದ ಬಳಿಕ ಕರ್ನಾಟಕದ ಸರತಿ; ಎಸ್‌ಐಆರ್ ಜಾರಿಯಿಂದ ಕಾಂಗ್ರೆಸ್‌ ಕಳೆದುಕೊಳ್ಳುವ ಕ್ಷೇತ್ರಗಳೆಷ್ಟು?

ಭಾಗ-1 ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರ ತರಾತುರಿಯಲ್ಲಿ ಮತದಾರರ ಪಟ್ಟಿ ತೀವ್ರ ಪರಿಷ್ಕರಣೆ (ಎಸ್‌ಐಆರ್) ಜಾರಿ ಮಾಡಿದ ಹಿಂದಿನ ದುರುದ್ದೇಶ ಬಿಹಾರದ ಬಳಿಕ ಈಗ ಪಶ್ಚಿಮ ಬಂಗಾಳದಲ್ಲಿ ಸಾಬೀತಾಗಿದೆ. ಹಿಂದಿನ ಚುನಾವಣೆಗಳಲ್ಲಿ ಕಡಿಮೆ...

ವಿಜಯ್ ಪಕ್ಷದ ಗೆಲುವಿಗೆ ಕಾರಣವಾದ ಡಿಎಂಕೆ-ಎಐಎಡಿಎಂಕೆ ಪಕ್ಷದ ವಲಸೆ ನಾಯಕರು

50 ವರ್ಷಗಳಿಂದ ಡಿಎಂಕೆ (DMK) ಮತ್ತು ಎಐಎಡಿಎಂಕೆ (AIADMK) ಎಂಬ ಎರಡು ದ್ರಾವಿಡ ಪಕ್ಷಗಳ ಅಧಿಪತ್ಯದಲ್ಲಿದ್ದ ತಮಿಳು ಮಣ್ಣಿನಲ್ಲಿ ಈಗ ಮಹತ್ವದ ಬದಲಾವಣೆ ಗಾಳಿ ಬೀಸಿದೆ. ನಟ ವಿಜಯ್ ನೇತೃತ್ವದ 'ತಮಿಳಗ ವೆಟ್ರಿ...

ಪಶ್ಚಿಮ ಬಂಗಾಳದ ಬಿಜೆಪಿ ಗೆಲುವು ಎಸ್‌ಐಆರ್‌ ಕುತಂತ್ರದ ಫಲ?

ಕಳೆದ 15 ವರ್ಷದಿಂದ ಪಶ್ಚಿಮ ಬಂಗಾಳದ ಅಧಿಕಾರದ ಚುಕ್ಕಾಣಿ ಹಿಡಿದಿದ್ದ ಮಮತಾ ಬ್ಯಾನರ್ಜಿ ಆಡಳಿತಕ್ಕೆ 2026ರ ಚುನಾವಣಾ ಫಲಿತಾಂಶ ಬ್ರೇಕ್ ನೀಡಿದೆ.  ಪಶ್ಚಿಮ ಬಂಗಾಳದ ಒಟ್ಟು 293 ಕ್ಷೇತ್ರಗಳ ಪೈಕಿ 200ರಲ್ಲಿ ಬಿಜಿಪಿ...

ಗೋಮಾಂಸ ಸಾಗಣೆ ಆರೋಪದ ಮೇಲೆ ವಾಹನ ಮುಟ್ಟುಗೋಲು: ಉತ್ತರ ಪ್ರದೇಶ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡ ಹೈಕೋರ್ಟ್

ಗೋಮಾಂಸ ಸಾಗಣೆ ಮಾಡುತ್ತಿದ್ದಾರೆ ಎಂದು ಕೇವಲ ಅನುಮಾನದ ಮೇಲೆ ವ್ಯಕ್ತಿಯ ವಿರುದ್ಧ ಕ್ರಮ ಕೈಗೊಳ್ಳುವುದು ಕಾನೂನುಬಾಹಿರ ಎಂದು ಅಲಹಾಬಾದ್ ಹೈಕೋರ್ಟ್ ಅಭಿಪ್ರಾಯಪಟ್ಟಿದ್ದು, ಅಂತಹ ಯಾವುದೇ ಕ್ರಮ ತೆಗೆದುಕೊಳ್ಳುವ ಮೊದಲು ವೈಜ್ಞಾನಿಕ ದೃಢೀಕರಣ ಅಗತ್ಯ...

ಎಕ್ಸಿಟ್‌ ಪೋಲ್ಸ್‌ಗಳು ‘ಹಣ-ಒತ್ತಡ’ದಿಂದ ಕೂಡಿವೆ; ಟಿಎಂಸಿ 226 ಸ್ಥಾನಗಳನ್ನು ಮೀರಲಿದೆ: ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳದಲ್ಲಿ ಎರಡನೇ ಹಂತದ ಮತದಾನದ ನಂತರ ಇತ್ತೀಚಿನ ಚುನಾವಣೋತ್ತರ ಸಮೀಕ್ಷೆಗಳ ವಿಶ್ವಾಸಾರ್ಹತೆಯನ್ನು ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಬಲವಾಗಿ ತಳ್ಳಿಹಾಕಿದ್ದಾರೆ. ಅವರ ಪಕ್ಷವಾದ ತೃಣಮೂಲ ಕಾಂಗ್ರೆಸ್ (ಟಿಎಂಸಿ) 294 ಸದಸ್ಯರ ವಿಧಾನಸಭೆಯಲ್ಲಿ 226...

ಗುಜರಾತ್‌| ರಾಮ ಮಂದಿರ ಕಾರ್ಯಕ್ರಮದಲ್ಲಿ ದಲಿತರಿಗೆ ಪ್ರತ್ಯೇಕ ಊಟದ ವ್ಯವಸ್ಥೆ; ಅಸ್ಪೃಶ್ಯತೆ ಆಚರಣೆ ಆರೋಪ

ಗುಜರಾತ್‌ನ ಜುನಾಗಢ್ ಜಿಲ್ಲೆಯಲ್ಲಿ ಜಾತಿ ತಾರತಮ್ಯದ ಆರೋಪ ಹೊರಿಸಲಾಗಿದ್ದು, ಧಾರ್ಮಿಕ ಕಾರ್ಯಕ್ರಮದ ಸಂದರ್ಭದಲ್ಲಿ ದೇವಾಲಯದ ಆಯೋಜಕರು ಅಸ್ಪೃಶ್ಯತೆ ಆಚರಿಸುತ್ತಿದ್ದಾರೆ ಎಂದು ದಲಿತ ಸಮುದಾಯದ ಸದಸ್ಯರು ಆರೋಪಿಸಿದ್ದಾರೆ. ಭುಟ್ಡಿ ಗ್ರಾಮದ ನಿವಾಸಿ 25 ವರ್ಷದ ಅಜಯ್...

ಕೋಗಿಲು ಬಡಾವಣೆ ಮನೆಗಳ ನೆಲಸಮ: ಹದಿನೈದು ದಿನಗಳೊಳಗೆ ಪುನರ್ವಸತಿ ಕಲ್ಪಿಸದಿದ್ದರೆ ತೀವ್ರ ಹೋರಾಟದ ಎಚ್ಚರಿಕೆ

ಬೆಂಗಳೂರು ಉತ್ತರ ತಾಲ್ಲೂಕಿನ ಯಲಹಂಕ ಪ್ರದೇಶದ ಕೋಗಿಲು ಲೇಔಟ್‌ನ ಫಕೀರ್ ಕಾಲೋನಿ ಮತ್ತು ಮಹಾನಾಯಕ ಅಂಬೇಡ್ಕರ್ ನಗರ (ವಾಸಿಂ ಲೇಔಟ್‌) ಪ್ರದೇಶದ ಬಡ ನಿವಾಸಿಗಳ ಮನೆಗಳನ್ನು 2025 ಡಿಸೆಂಬರ್ 20ರಂದು ಬೆಳಿಗ್ಗೆ ಸುಮಾರು...