Homeಕರ್ನಾಟಕಉತ್ತರ ಕನ್ನಡ ಸಂತಾನ ಸಂರಕ್ಷಣೆಗೆ ಒಂದಾದ ಮ್ಯಾಗಿಯಜ್ಜಿ ದೇಶಜ್ಜ!!

ಉತ್ತರ ಕನ್ನಡ ಸಂತಾನ ಸಂರಕ್ಷಣೆಗೆ ಒಂದಾದ ಮ್ಯಾಗಿಯಜ್ಜಿ ದೇಶಜ್ಜ!!

- Advertisement -
- Advertisement -

ಉತ್ತರ ಕನ್ನಡದ ಕಾಂಗ್ರೆಸ್ ಪೊರೆ ಕಳಚಿಕೊಳ್ಳುತ್ತಿದೆ! ಮದವೇರಿದ ಮದ್ದಾನೆಗಳಂತಾಗಿ ದಶಕಗಟ್ಟಲೆ ಕಾಲ ಗುದ್ದಾಡಿ ಜಿಲ್ಲಾ ಕಾಂಗ್ರೆಸನ್ನು ನಜ್ಜುಗುಜ್ಜುಮಾಡಿದ್ದ ಮ್ಯಾಗಿಯಜ್ಜಿ ಮತ್ತು ದೇಶಜ್ಜ ರಾಜಿ ಸಂಕೇತ ಬಿತ್ತರಿಸುತ್ತಿದ್ದಾರೆ. ಪರಸ್ಪರ ಅಸ್ತಿತ್ವ ಉಳಿಸಿಕೊಳ್ಳಲು ಈ ಮುದಿಮಣಿಗಳು ಹೊಂದಾಣಿಕೆಯ ಅನಿವಾರ್ಯಕ್ಕೆ ಬಿದ್ದಿವೆ. ಬದ್ಧವೈರಿಗಳ ಈ ಮನಃಪರಿವರ್ತನೆ ಯಲ್ಲಾಪುರ ಬೈ-ಇಲೆಕ್ಷನ್ ಸೋಲಿನ ನೇರ ಪರಿಣಾಮ ಎಂತಲೇ ರಾಜಕೀಯ ಪಡಸಾಲೆಯಲ್ಲಿ ವಿಶ್ಲೇಷಣೆಗಳು ನಡೆದಿದೆ.

ದೇಶಪಾಂಡೆ ತನ್ನ ಮೂರು ದಶಕದ ರಾಜಕೀಯದಲ್ಲಿ ಜನತಾ ಪರಿವಾರದಲ್ಲಿರಲಿ ಅಥವಾ ಕಾಂಗ್ರೆಸಿನಲ್ಲಿರಲಿ ಯಾರನ್ನೂ ಗೆಲ್ಲಿಸಲು ತ್ರಿಕರ್ಣಪೂರ್ವಕ ಪ್ರಯತ್ನ ಮಾಡಿದ ಕುರುಹುಗಳಿಲ್ಲ. ಹಾಗಂತ ಸೋಲಿಸಲು ಹಲವು ಸಲ ಹಠಹಿಡಿದು ಹಿಕಮತ್ತು ನಡೆಸಿದ ದಾಖಲೆಗಳಿವೆ. ಇಂಥ ಇತಿಹಾಸದ ದೇಶ್ ಕಳೆದ ಯಲ್ಲಾಪುರ ಬೈ-ಇಲೆಕ್ಷನ್‍ನಲ್ಲಿ ತನ್ನ ಚೇಲಾ ಭೀಮಣ್ಣ ನಾಯ್ಕನ ಗೆಲ್ಲಿಸಿ ವೈರಿ ಹೆಬ್ಬಾರ್ ಮೇಲಿನ ಸೇಡು ತೀರಿಸಿಕೊಳ್ಳಲು ಪ್ರತಿಷ್ಠೆ ಪಣಕ್ಕಿಟ್ಟು ಹೋರಾಡಿದ್ದರು. ಆದರೆ ಸ್ವಯಂಕೃತಾಪರಾಧಗಳ ಸರಣಿಯಿಂದ ವರ್ಚಸ್ಸು ಕಳಕೊಂಡಿರುವ ದೇಶ್ ಮುಗ್ಗರಿಸಿ ಮಕಾಡೆ ಮಲಗಿಬಿಟ್ಟರು! ಕಂಗಾಲಾಗಿ ದೇಶಪಾಂಡೆ ಕೂತಿದ್ದ ಈ ಹೊತ್ತಿನಲ್ಲೇ ಬರೋಬ್ಬರಿ ಒಂದು ವರ್ಷದನಂತರ ಜಿಲ್ಲೆಗೆ ವಕ್ಕರಿಸಿದ ಇಲ್ಲಿಯ ಮಾಜಿ ಸಂಸದೆ ಮಾರ್ಗರೇಟ್ ಆಳ್ವ ಆಟ ಶುರುಹಚ್ಚಿಕೊಂಡಿದ್ದರು. ನೇರ ಮ್ಯಾಗಿಯ ಶಿರಸಿಯ ಮನೆಗೇ ಹೋದ ದೇಶ್ ಆಕೆಯ ಮುಂದೆ ನಿಂತು ಹೊಸ ನಂಟಿನ ಪ್ರಸ್ತಾಪ ಇಟ್ಟಿರುವುದು ಅನಿರೀಕ್ಷಿತ ಸಮೀಕರಣವನ್ನು ಜಿಲ್ಲಾ ರಾಜಕೀಯ ಭೂಮಿಕೆಯಲ್ಲಿ ಸೃಷ್ಟಿಸಿಬಿಟ್ಟಿದೆ.

ಮ್ಯಾಗಿ ಮತ್ತಾಕೆಯ ಮಗ ಆಳ್ವ ಫೌಂಡೇಶನ್ ಕಟ್ಟಿಕೊಂಡಿದ್ದರೆ, ದೇಶ್ ಮತ್ತವರ ಪುತ್ರ ಪ್ರಶಾಂತ ದೇಶಪಾಂಡೆ ಟ್ರಸ್ಟ್ ಸ್ಥಾಪಿಸಿಕೊಂಡಿದ್ದಾರೆ. ಎರಡೂ ಕುಟುಂಬಗಳು ಸಾಮಾಜಿಕ ಸೇವೆಯ ಹೆಸರಲ್ಲಿ ರಾಜಕೀಯ ಫಾಯ್ದೆಗೆ ಹವಣಿಸುತ್ತಿವೆ. ಮ್ಯಾಗಿಗೆ ತನ್ನ ಪೆದ್ದು ಕುಲೋದ್ಧಾರಕನನ್ನು ಶಿರಸಿಯ ಶಾಸಕನ ಮಾಡುವ ಕನಸು; ದೇಶ್‍ಗೆ ಮುಂಬೈನಲ್ಲಿ ವಕೀಲಿಕೆ ಮಾಡುವ ಅನಿವಾಸಿ ಉತ್ತರ ಕನ್ನಡಿಗ ಮಗ ಮಹಾರಾಯನ ಸಂಸದನ ಮಾಡುವ ಆಸೆ. ಇದೇ ಒಳಉದ್ದೇಶದಿಂದ ಮ್ಯಾಗಿ ಫೌಂಡೇಷನ್ ಕಾರ್ಯಕ್ರಮ ಹಾಕಿಕೊಂಡು ಈಗ ಜಿಲ್ಲೆಯಲ್ಲಿ ಅಂಡಲೆಯುತ್ತಿದ್ದಾರೆ. ಆಕೆ ಫಂಕ್ಷನ್ ಮುಗಿಸಿ ಮನೆಗೆ ಬರುವುದನ್ನೇ ಕಾಯುತ್ತಿದ್ದ ದೇಶಪಾಂಡೆ ಮೊನ್ನೆ ಶನಿವಾರ ಭೇಟಿಯಾಗಿ ಗ್ಯಾಂಗ್‍ವಾರ್ ನಿಲ್ಲಿಸುವ ಒಪ್ಪಂದ ಮಾಡಿಕೊಂಡಿದ್ದಾರೆ. ಜಿಲ್ಲೆಯಲ್ಲಿ ಬಿಜೆಪಿ ಎಬ್ಬಿಸಿರುವ ಬಡಿವಾರಕ್ಕೆ ಬೆದರಿರುವ ಮ್ಯಾಗಿ-ದೇಶ್ ನೈಚ್ಛಾನುಸಂಧಾನ ನಡೆಸಬೇಕಾಗಿ ಬಂದಿವೆ, ಪಾಪ!!

ಮ್ಯಾಗಿ-ದೇಶ್ ಅಕ್ಕ-ಪಕ್ಕ ಕುಳಿತು ಕಳೆದ ಅಸೆಂಬ್ಲಿ ಲೋಕಸಭೆ ಚುನಾವಣೆಗಳಲ್ಲಿ ತಮ್ಮ ಬಣ ಬಡಿದಾಟದಿಂದಾದ ಹಾನಿಯ ಲೆಕ್ಕ ತೆಗೆದಿದ್ದಾರೆ. ತಮ್ಮೊಳಗಿನ ದ್ವೇಷಾಸೂಯೆ ಮೇಲಾಟದಿಂದ ಗತಿಗೇಡಿ ಬಿಜೆಪಿ ಸೈತಾನನಂತೆ ಬೆಳೆದಿದೆ ಎಂದು ಪಾಪಪ್ರಜ್ಞೆಯಿಂದ ಮಾತಾಡಿಕೊಂಡಿದ್ದಾರೆ; ಈಗಿಂದಲೇ ತಳಮಟ್ಟದಿಂದ ಪಾರ್ಟಿಯನ್ನು ಕಟ್ಟದಿದ್ದರೆ ತಮ್ಮ ವಂಶದ ಉತ್ತರಾಧಿಕಾರಿಗಳಿಗೆ ಭವಿಷ್ಯವಿಲ್ಲ ಎಂಬುದು ಮನಗಂಡಿದ್ದಾರೆ. ಜಿಲ್ಲಾ ಕಾಂಗ್ರೆಸ್ ಉದ್ಧಾರವಾಗಬೇಕಿದ್ದರೆ ಮೊದಲು ಹಾಲಿ ಡಿಸಿಸಿ ಅಧ್ಯಕ್ಷ ಭೀಮಣ್ಣ ನಾಯ್ಕನ ಉಚ್ಚಾಟಿಸಿ ಹೊಸ ಆಯ್ಕೆ ಮಾಡಬೇಕು; ಆನಂತರ ತಾವಿಬ್ಬರೂ ಒಟ್ಟಾಗಿ ಜಿಲ್ಲಾ ಟೂರ್ ಹೊಡೆದು ಪಕ್ಷಕ್ಕೆ ಜೀವ ತುಂಬಬೇಕೆಂದು ಮ್ಯಾಗಿ ಮನದಿಂಗಿತವನ್ನು ದೇಶ್ ಮುಂದೆ ಮಂಡಿಸಿದ್ದಾರೆ. ಇದನ್ನು ದೇಶಪಾಂಡೆಯೂ ಒಪ್ಪಿದ್ದಾರೆ.

ಬದಲಾದ ವರಸೆಯಲ್ಲಿ ಮ್ಯಾಗಿಗೆ ದೇಶಪಾಂಡೆಗಿಂತಲೂ ಹೆಚ್ಚು ಸಿಟ್ಟಿರುವುದು ಭೀಮಣ್ಣನ ಮೇಲೆ. ತನ್ನನ್ನು ಕೊನೆತನಕವೂ ಕಾಡಿದ ಮಾಜಿ ಸಿಎಂ ‘ಬಂ’ನ ಭಾಮೈದ ಈ ಭೀಮಣ್ಣನೆಂಬುದು ಮ್ಯಾಗಿಯ ಹಲವು ಅಸಮಾಧಾನದ ಕಾರಣಗಳಲ್ಲಿ ಒಂದು. ಈ ಭೀಮಣ್ಣ ನಾಯ್ಕನೂ ಅಷ್ಟೇ ಕಿತಾಪತಿಗಾರ. ಮ್ಯಾಗಿಗೆ ಆತ ಕೇರ್ ಮಾಡುತ್ತಿರಲಿಲ್ಲ. ಆಕೆಯ ನಿಷ್ಠಾವಂತ ಹಿಂಬಾಲಕರಾದ ವಿ.ಎನ್.ನಾಯ್ಕ್, ವಸಂತನಾಯ್ಕ್ ವಗೈರೆ ದೀವರ ಹುಡುಗರನ್ನು ಭೀಮಣ್ಣ ಹಣಿಯುತ್ತಲೇ ಬಂದಿದ್ದ. 2013ರ ಅಸೆಂಬ್ಲಿ ಇಲೆಕ್ಷನ್‍ನಲ್ಲಿ ಶಿರಸಿಯಲ್ಲಿ ಸ್ಪೀಕರ್ ಕಾಗೇರಿ ಎದುರು ಮೂರು ಸಾವಿರ ಚಿಲ್ಲರೆ ಮತದ ತೀರಾ ಸಣ್ಣ ಅಂತರದಲ್ಲಿ ಸೋತಿದ್ದ ದಿವಂಗತ ದೀಪಕ್ ಹೊನ್ನಾವರ್ ಮ್ಯಾಗಿಯ ಪುಂಡ ಪಟ್ಟ ಶಿಷ್ಯನಾಗಿದ್ದ. ಆತ ಗೆಲುವಿನ ಹತ್ತಿರ ಬಂದು ಮುಗ್ಗರಿಸಲು ಭೀಮಣ್ಣ-ರವೀಂದ್ರನಾಥ್ ನಾಯ್ಕ ಜೋಡಿಯ ದ್ರೋಹವೇ ಅಂದು ಕಾರಣವಾಗಿತ್ತು. ಈ ಉರಿ ಮ್ಯಾಗಿಗಿನ್ನೂ ಕಡಿಮೆಯಾಗಿಲ್ಲ. ಒಂದು ಕಾಲದಲ್ಲಿ ರವಿ ಮ್ಯಾಗಿ ಶಿಷ್ಯನಾಗಿದ್ದವ. ಆಕೆಯಿಂದಲೇ ಶಿರಸಿ ಕಾಂಗ್ರೆಸ್ ಕ್ಯಾಂಡಿಡೇಟಾಗಿದ್ದವ. ಆನಂತರ ಗುರುಮಾತೆಗೇ ತಿರುಗಿಬಿದ್ದಿದ್ದ ರವಿ ಜೆಡಿಎಸ್ ಪಾಲಾಗಿದ್ದ. ಮೊನ್ನೆಯ ಯಲ್ಲಾಪುರ ಉಪಚುನಾವಣೆ ಗಡಿಬಿಡಿಯಲ್ಲಿ ಈ ರವಿ, ದೇಶಪಾಂಡೆ ಜುಬ್ಬ ಹಿಡಿದುಕೊಂಡು ಕಾಂಗ್ರೆಸ್‍ಗೆ ನುಸುಳಿದ್ದಾನೆ.

ಇಂಥ ಭೀಮ-ರವಿಯಂಥವರ ದೂರವಿಟ್ಟರೆ ಮ್ಯಾಗಿ-ದೇಶ್‍ನಂಟು ಕುದುರುತ್ತದೆ. 2018ರ ಶಿರಸಿ ವಿಧಾನಸಭಾ ಕ್ಷೇತ್ರದ ಚುನಾವಣೆ ಮತ್ತು ಮೊನ್ನೆಯ ಯಲ್ಲಾಪುರ ಉಪಚುನಾವಣೆಯಲ್ಲಿ ಹೇತ್ಲಾಂಡಿ ಭೀಮಣ್ಣನ ಕಾಂಗ್ರೆಸ್ ಕ್ಯಾಂಡಿಡೇಟ್ ಮಾಡಿದ್ದೇ ತಪ್ಪು ಆಯ್ಕೆ ಎನ್ನುವ ಮ್ಯಾಗಿ ತನ್ನ ಮಗ ಶಿರಸಿಯಲ್ಲಿ “ರೈಟ್ ಕ್ಯಾಂಡಿಡೇಟ್” ಎನ್ನುವುದೇ ವಿಚಿತ್ರ. ಬಿಜೆಪಿ ಬೆಂಬಲಿಗರಾದ ಹವ್ಯಕ ಬ್ರಾಹ್ಮಣ ಬಾಹುಳ್ಯದ ಶಿರಸಿ-ಸಿದ್ಧಾಪುರ ಕ್ಷೇತ್ರದಲ್ಲಿ ಅಲ್ಪಸಂಖ್ಯಾತ ಕ್ರಿಶ್ಚಿಯನ್ ಸಮುದಾಯದ ನಿವೇದಿತ್ ಆಳ್ವ ಗೆಲ್ಲುವುದು ಅಷ್ಟು ಸುಲಭವೇನಲ್ಲ. ಅಲ್ಪಸಂಖ್ಯಾತರ ದ್ವೇಷದ ಮೇಲೆಯೇ ಬಿಜೆಪಿಯನ್ನು ಕಟ್ಟಿರುವ ಕಾಗೇರಿ, ಅನಂತ್ಮಾಣಿಗಳ ತವರು ಶಿರಸಿಯಲ್ಲಿ ಕಾಂಗ್ರೆಸ್ ಹವ್ಯಕ ಮಾಣಿ/ಕೂಸು ನಿಲ್ಲಿಸಿದರಷ್ಟೇ ಅನುಕೂಲ. ಸದ್ಯ ಜೆಡಿಎಸ್‍ನಲ್ಲಿರುವ ದಿವಂಗತ ಮಾಜಿ ಸಿಎಂ ರಾಮಕೃಷ್ಣ ಹೆಗಡೆಜೀ ದಾಯಾದಿ ಮೊಮ್ಮಗ ಶಶಿಭೂಷಣ ಹೆಗಡೆ ಕಾಂಗ್ರೆಸ್‍ಗೆ ಸೂಕ್ತ ಅಭ್ಯರ್ಥಿ. ಕಾಂಗ್ರೆಸ್ ಸೇರುವ ಆಸೆ ಶಶಿಗಿದ್ದರೂ ಹೆಗಡೆಜೀಯ ದೊಡ್ಮನೆ ಫ್ಯಾಮಿಲಿ ಬಗ್ಗೆ ದೇಶಪಾಂಡೆಗಿರುವ ಪುರಾತನ ದ್ವೇಷಕ್ಕೆ ಹೆದರಿ ಆತ ಸುಮ್ಮನಿದ್ದಾರೆ.

ಗೆಲ್ಲಲು ಇರುವ ಇಂಥ ಸರಳ ಲೆಕ್ಕಾಚಾರಗಳು ಪುತ್ರ ವ್ಯಾಮೋಹದಲ್ಲಿ ಮಂಕಾಗಿರುವ ಮ್ಯಾಗಜ್ಜೀ-ದೇಶಜ್ಜನಿಗೆ ಅರ್ಥವಾಗೋದಿಲ್ಲ. ಔಟ್‍ಡೇಟೆಡ್ ದಿಗ್ಗಜರು ಹಳೆಯದನ್ನು ಮರೆತು ಒಂದಾಗಿ ಪಾರ್ಟಿ ಕಟ್ಟಬಹುದೆಂಬ ನಂಬಿಕೆ ನಿಷ್ಠಾವಂತ ಕಾಂಗ್ರೆಸಿಗರಿಗಂತೂ ಇಲ್ಲಾ. ಆದರೆ ಮಕ್ಕಳ ಭವಿಷ್ಯ ಬೆಳಗಲು ಅನಿವಾರ್ಯವಾಗಿ ಮ್ಯಾಗಿ-ದೇಶ್ ಹೊಸ ಹೊಂದಾಣಿಕೆಯ ಸ್ಕೆಚ್ ಹಾಕಿದ್ದಾರೆಂಬುದು ಕಾಂಗ್ರೆಸ್‍ನಲ್ಲಷ್ಟೇ ಅಲ್ಲ ವಿರೋಧಿ ಕೇಸರಿ ಪಾಳೆಯದಲ್ಲೂ ಸಣ್ಣದೊಂದು ತಲ್ಲಣ ಎಬ್ಬಿಸಿರುವುದಂತೂ ಖರೆ!!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

2 COMMENTS

LEAVE A REPLY

Please enter your comment!
Please enter your name here

- Advertisment -

31 ವರ್ಷಗಳ ಹಳೇ ಸಾಲ ತೀರಿಸಲು 1200 ಕಿ.ಮೀ ಪ್ರಯಾಣಿಸಿದ ಕೇರಳದ ಇಸ್ಮಾಯಿಲ್

"ನನ್ನ ಕಣ್ಣುಗಳಿಂದ ಆನಂದಬಾಷ್ಪಗಳು ಉದುರಿದವು. ನನ್ನ ಮನಸ್ಸಿಗೆ ಅದೆಷ್ಟು ನೆಮ್ಮದಿ ಸಿಕ್ಕಿತೆಂದರೆ, ಅದನ್ನು ವಿವರಿಸಲು ಪದಗಳೇ ಸಾಲದು. ಆತನಿಗೂ ಅಷ್ಟೇ ದೊಡ್ಡ ಸಮಾಧಾನ." ಹೀಗೆ ಭಾವುಕರಾಗಿ ನುಡಿಯುತ್ತಾರೆ ಮೊಹಮ್ಮದ್ ಇಸ್ಮಾಯಿಲ್. 1995ರಲ್ಲಿ ಸೌದಿ...

ಬಂಡಾಯದ ಬಳಿಕ ಟಿಎಂಸಿಗೆ ಮತ್ತೊಂದು ಸವಾಲು : ಪಕ್ಷದ ಬ್ಯಾಂಕ್ ಖಾತೆಗಳು ಫ್ರೀಝ್

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಮೂರು ಬ್ಯಾಂಕ್ ಖಾತೆಗಳಲ್ಲಿರುವ 440 ಕೋಟಿ ರೂಪಾಯಿ ಹಣವನ್ನು ಭಾಗಶಃ ಬಳಸಲು ಕಲ್ಕತ್ತಾ ಹೈಕೋರ್ಟ್ ಅನುಮತಿ ನೀಡಿದ ಮರುದಿನವೇ, ಪಶ್ಚಿಮ ಬಂಗಾಳ ಪೊಲೀಸರು...

ಮಂದಿರ ನಿರ್ಮಾಣದ ಕ್ರೆಡಿಟ್‌ಗೆ ಇದ್ದ ಯಜಮಾನಿಕೆ, ಕೊಳ್ಳೆ ಹೊಡೆದಾಗ ಯಾಕಿಲ್ಲ ಸೇವಕರೇ?

ಬಾಲರಾಮನ ಪ್ರಾಣಪ್ರತಿಷ್ಠಾಪನೆಗೆ ಮುನ್ನ ಪ್ರಧಾನಿಯವರು 11 ದಿನಗಳ ಕಾಲ ಕಠಿಣ ಉಪವಾಸ ವ್ರತ ಆಚರಿಸಿದ್ದರು, ಕೇವಲ ಎಳನೀರು ಕುಡಿದರು, ನೆಲದ ಮೇಲೆ ಮಲಗಿದರು ಎಂದು ಇಡೀ ದೇಶಕ್ಕೆ ಸಾರಲಾಗಿತ್ತು. ಅಯೋಧ್ಯೆಯಿಂದ ಹೊಸ ಕಾಲದ...

‘ಫ್ರೀ ಪ್ಯಾಲೆಸ್ತೀನ್’ ಘೋಷಣೆಯನ್ನು ತಮಾಷೆ ಮಾಡಿದ ಸೈಫ್ ಅಲಿ ಖಾನ್ – ನಿರೂಪಕಿ ಅನುಪಮಾ ಚೋಪ್ರಾ

ಸ್ಪ್ಯಾನಿಷ್ ನಟ ಜೇವಿಯರ್ ಬಾರ್ಡೆಮ್ ಅವರ "ಫ್ರೀ ಪ್ಯಾಲೆಸ್ತೀನ್" ಹೇಳಿಕೆ ಕುರಿತು ಸೈಫ್ ಅಲಿ ಖಾನ್ ಮತ್ತು ಚಲನಚಿತ್ರ ಪತ್ರಕರ್ತೆ ಅನುಪಮಾ ಚೋಪ್ರಾ ನಗುತ್ತಿರುವ ಕ್ಲಿಪ್ ಆನ್‌ಲೈನ್‌ನಲ್ಲಿ ವೈರಲ್ ಆಗಿದ್ದು, ನಟನ ಅಸೂಕ್ಷ್ಮ...

ತೆಲಂಗಾಣ : ಪೋಕ್ಸೋ ಪ್ರಕರಣದ ಆರೋಪಿಯಿಂದ ಸಂತ್ರಸ್ತೆ ಸೇರಿ 6 ಜನರ ಹತ್ಯೆ

ಪೋಕ್ಸೋ ಪ್ರಕರಣದ ಆರೋಪಿಯೊಬ್ಬ ಸಂತ್ರಸ್ತೆ ಸೇರಿದಂತೆ ಒಟ್ಟು ಆರು ಜನರನ್ನು ಭೀಕರವಾಗಿ ಹತ್ಯೆ ಮಾಡಿರುವ ಘಟನೆ ತೆಲಂಗಾಣದ ರಂಗಾರೆಡ್ಡಿ ಜಿಲ್ಲೆಯ ಶಾಬಾದ್ ಮಂಡಲದಲ್ಲಿ ಶುಕ್ರವಾರ (ಜು.10) ರಾತ್ರಿ ನಡೆದಿದೆ. 28 ವರ್ಷ ವಯಸ್ಸಿನ...

‘ನನ್ನನ್ನು ಮೌನಗೊಳಿಸಲು, ನೀವು ನನ್ನನ್ನು ಕೊಲ್ಲಬೇಕಾಗುತ್ತದೆ’: ಟಿಎಂಸಿ ಬಿಕ್ಕಟ್ಟಿನ ನಡುವೆ ಬಿಜೆಪಿ ವಿರುದ್ಧ ಮಮತಾ ಬ್ಯಾನರ್ಜಿ ಆಕ್ರೋಶ  

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಆಡಳಿತಾರೂಢ ತೃಣಮೂಲ ಕಾಂಗ್ರೆಸ್ (TMC) ಪಕ್ಷದಲ್ಲಿ ಆಂತರಿಕ ಬಿಕ್ಕಟ್ಟು ತಾರಕಕ್ಕೇರಿರುವ ಬೆನ್ನಲ್ಲೇ, ಪಕ್ಷದ ಸುಪ್ರೀಮೋ ಹಾಗೂ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಇತ್ತೀಚಿನ ತಿಂಗಳುಗಳಲ್ಲೇ ಅತ್ಯಂತ ಪ್ರಬಲವಾದ ರಾಜಕೀಯ...

ಸುಪ್ರೀಂ ಕೋರ್ಟ್‌ನಲ್ಲಿ ಜಡ್ಜ್‌ಗಳನ್ನೇ ‘ನ್ಯಾಯಾಂಗ ಸೇವಕರು’ ಎಂದ ಅರ್ಜಿದರ

ಸುಪ್ರೀಂ ಕೋರ್ಟ್‌ನಲ್ಲಿ ಶುಕ್ರವಾರ ಅತ್ಯಂತ ನಾಟಕೀಯ ಹಾಗೂ ಆಘಾತಕಾರಿ ದೃಶ್ಯವೊಂದು ತೆರೆದುಕೊಂಡಿದೆ. ಪ್ರಕರಣವೊಂದರ ವಿಚಾರಣೆ ವೇಳೆ ಖುದ್ದಾಗಿ ಹಾಜರಾಗಿದ್ದ ಅರ್ಜಿದಾರನೊಬ್ಬ, ಲಕ್ನೋದ ಪೊಲೀಸ್ ಅಧಿಕಾರಿಯೊಬ್ಬರ ವಿರುದ್ಧ ಎಫ್‌ಐಆರ್ (FIR) ದಾಖಲಿಸಲು ನಾನು ನ್ಯಾಯಪೀಠಕ್ಕೆ...

ಮದ್ಯದ ಅಮಲಿನಲ್ಲಿ ಸಾರಿಗೆ ಬಸ್‌ ಅಪಹರಿಸಿದ ವ್ಯಕ್ತಿ; 21 ಕಿ.ಮೀ. ಪ್ರಯಾಣದ ನಂತರ ಅಪಘಾತ

ತೆಲಂಗಾಣದ ಜನಗಾಂವ್ ಬಸ್ ನಿಲ್ದಾಣದಲ್ಲಿ ನಿಂತಿದ್ದ ತೆಲಂಗಾಣ ರಾಜ್ಯ ರಸ್ತೆ ಸಾರಿಗೆ ನಿಗಮದ (ಟಿಜಿಎಸ್‌ಆರ್‌ಟಿಸಿ) ಬಸ್‌ ಅನ್ನು ವ್ಯಕ್ತಿಯೊಬ್ಬ ಕುಡಿದ ಮತ್ತಿನಲ್ಲಿ ಕದ್ದಿದ್ದಾನೆ. ನಂತರ ಅದನ್ನು ಸುಮಾರು 21 ಕಿ.ಮೀ. ದೂರ ಓಡಿಸಿ,...

ಬೆಂಗಳೂರಿನಲ್ಲಿ: ರಸ್ತೆ ಬದಿ ವಾರಗಟ್ಟಲೆ ವಾಹನ ನಿಲ್ಲಿಸಿದರೆ ಜಪ್ತಿ ಮಾಡಿ ‘ಹರಾಜು’ ಹಾಕಲಿದೆ ಸರ್ಕಾರ!

ಸಿಲಿಕಾನ್ ಸಿಟಿಯ ಟ್ರಾಫಿಕ್ ದಟ್ಟಣೆಗೆ ಮುಕ್ತಿ ಹಾಡಲು ಮತ್ತು ಪಾದಚಾರಿಗಳ ಹಕ್ಕನ್ನು ರಕ್ಷಿಸಲು ರಾಜ್ಯ ಸರ್ಕಾರ ಈಗ ಅತ್ಯಂತ ಕಠಿಣ ಹೆಜ್ಜೆಯನ್ನಿಟ್ಟಿದೆ. ನಗರದ ರಸ್ತೆ ಬದಿ ಹಾಗೂ ಫುಟ್‌ಪಾತ್‌ಗಳಲ್ಲಿ ತಿಂಗಳುಗಟ್ಟಲೆ ಧೂಳು ತಿನ್ನುತ್ತಾ...

ಸರ್ಕಾರಿ ಶಾಲೆಗಳಲ್ಲಿ 86 ಲಕ್ಷ ವಿದ್ಯಾರ್ಥಿಗಳ ಕುಸಿತ, ಖಾಸಗಿ ಶಾಲೆಗಳತ್ತ ಮುಖ ಮಾಡಿದ 88 ಲಕ್ಷ ಮಕ್ಕಳು: ಕಳವಳಕಾರಿ ವರದಿ

ನವದೆಹಲಿ: ದೇಶದ ಶಾಲಾ ಶಿಕ್ಷಣ ವ್ಯವಸ್ಥೆಯಲ್ಲಿ ಮಹತ್ತರ ಬದಲಾವಣೆಗಳು ಕಂಡುಬರುತ್ತಿದ್ದು, ಸರ್ಕಾರಿ ಶಾಲೆಗಳ ದಾಖಲಾತಿಯಲ್ಲಿ ಭಾರಿ ಕುಸಿತ ಉಂಟಾಗಿದೆ. 2023–24 ಮತ್ತು 2025–26ರ ಶೈಕ್ಷಣಿಕ ವರ್ಷಗಳ ನಡುವಿನ ಅವಧಿಯಲ್ಲಿ ದೇಶಾದ್ಯಂತ ಸರ್ಕಾರಿ ಶಾಲೆಗಳಲ್ಲಿ...