Homeಕರ್ನಾಟಕಉತ್ತರ ಕನ್ನಡ ಬಿಜೆಪಿ: ಹವ್ಯಕ ಮಂಡಲ ಕೊಂಕಣಿ ಕಮಂಡಲ

ಉತ್ತರ ಕನ್ನಡ ಬಿಜೆಪಿ: ಹವ್ಯಕ ಮಂಡಲ ಕೊಂಕಣಿ ಕಮಂಡಲ

- Advertisement -
- Advertisement -

ಉತ್ತರ ಕನ್ನಡದ ಬಿಜೆಪಿ ಪಲ್ಲಕ್ಕಿಯಲ್ಲಿ ಮೇಲ್ವರ್ಗದ ಹವ್ಯಕ ಹಾಗೂ ಕೊಂಕಣಿ ಕಂಠೀರವರೇ ವಿಜೃಂಭಿಸುತ್ತಿದ್ದಾರೆ! ಆ “ಪವಿತ್ರ” ಪಲ್ಲಕ್ಕಿಯನ್ನು ಹಿಂದುಳಿದ ವರ್ಗದ ಕಾಲಾಳುಗಳು ಹೊತ್ತು ಮೆರೆಸುತ್ತಿದ್ದಾರೆ. ಜಿಲ್ಲೆಯ ಹವ್ಯಕ ಹಾಗೂ ಜಿಎಸ್ಬಿ ಸೇರಿದಂತೆ ಒಟ್ಟೂ ಜನಸಂಖ್ಯೆ ಅಬ್ಬಬ್ಬಾ ಎಂದರೆ ಶೇಕಡಾ ಹತ್ತು ದಾಟುವುದಿಲ್ಲ. ಆದರೆ ಬಿಜೆಪಿ ದರ್ಬಾರಿನಲ್ಲಿ ಈ “ಅಲ್ಪಸಂಖ್ಯಾತರಿಗೆ” ಆಯಕಟ್ಟಿನ ಅಧಿಕಾರ ಒಂದೊಂದಾಗಿ ಸಂದಾಯವಾಗುತ್ತಿದೆ. ಹಿಂದುಳಿದವರು- ದಲಿತರು-ಅಲ್ಪಸಂಖ್ಯಾತರು ದಿಕ್ಕು ದೆಸೆಯಿಲ್ಲದ ಅಬ್ಬೇಪಾರಿಗಳಾಗಿದ್ದಾರೆ.

ಮುಸಲರು, ಕ್ರೈಸ್ತರ ಬಿಡಿ, ಆ ಜನಾಂಗ ಕಂಡರೆ ಬಿಜೆಪಿಗೆ ಆಗಬರುವುದಿಲ್ಲ. ಆದರೆ ಹಿಂದೂತ್ವದ ಆವಹನೆ ಮಾಡಿಕೊಂಡು ಕುಣಿಯುವ ಹಿಂದುಳಿದವರ-ದಲಿತರ ಪಾಲಿಗೆ ಗೆರಟೆಯ ಗತಿಯಾಗಿದೆ! ಹಿಂದೂ ನಾವೆಲ್ಲ ಒಂದು ಎಂದು ಸುಳ್ಳು ಸ್ಲೋಗನ್ ಹೊಡೆಯುತ್ತ ಬಂದಿರುವ ಬಿಜೆಪಿ ಪರಿವಾರ ಶೋಷಿತರಿಗೆ ಅಧಿಕಾರ ಕೊಡುತ್ತಿಲ್ಲ.

ಬಿಜೆಪಿ ಸ್ಥಾಪನೆಯಾದ ನಂತರ ನಡೆದ ಎಲ್ಲ ಪಾರ್ಲಿಮೆಂಟ್ ಚುನಾವಣೆಯಲ್ಲಿ ಕೇಸರಿ ಪಾರ್ಟಿಯ ಹುರಿಯಾಳಾಗಿದ್ದು ಹವ್ಯಕ ಬ್ರಾಹ್ಮಣ ಬಹಾದ್ದೂರರೇ! ಸತತವಾಗಿ ಸಂಸದನಾಗುತ್ತಿರುವ ಅನಂತ್ಮಾಣಿ ಹವ್ಯಕ ಕಣ್ಮಣಿ. ಈ ಬಾರಿ ಅನಂತ್ಮಾಣಿಗೆ ಟಿಕೆಟ್ ತಪ್ಪಿಸಲು ಹವಣಿಸಿದ್ದ ಹವ್ಯಕರ ತಂಡವೂ ಹುಡುಕುತ್ತಿದ್ದು ರಕ್ತ ಬಾಂಧವರನ್ನೇ. ವಿಧಾನಸಭೆ ಚುನಾವಣೆಯಲ್ಲಿ ಠೇವಣಿ ಕಳಕೊಂಡಿದ್ದ ಕುಮಟೆಯ ಡಾ| ಜಿ.ಜಿ.ಹೆಗಡೆ, ಸಿದ್ಧಾಪುರದ ವಕೀಲ ರವಿ ಹೆಗಡೆ ಹೂವಿನಮನೆ, ಪತ್ರಕರ್ತ ವಿಶ್ವೇಶ್ವರ ಭಟ್ಟ, ಹಾಲಿ ಸ್ಪೀಕರ್ ಕಾಗೇರಿ… ವಗೈರೆ ಮಾಣಿಗಳೆ ಟಿಕೆಟ್ ಟ್ಯಾಕ್ಟಿಸ್‍ನಲ್ಲಿದ್ದರು.

ಹವ್ಯಕ ಪ್ರಾಬಲ್ಯದ ಈ ಹಿಂದಿನ ಅಂಕೋಲ ಹಾಗೂ ಈಗಿನ ಶಿರಸಿ ಕ್ಷೇತ್ರದಲ್ಲಿ ಸ್ವಜಾತಿ ಸ್ವಾಮೀಜಿಗಳ ಮಂತ್ರಾಕ್ಷತೆಯಿಂದ ಗೆಲ್ಲುತ್ತಿರುವ ಕಾಗೇರಿ ಸತತ ಆರು ಬಾರಿ ಎಮ್ಮೆಲ್ಲೆಯಾಗಿದ್ದಾರೆ. ಬಿಜೆಪಿ ಅಧಿಕಾರಕ್ಕೆ ಬಂದರೆ ಎಬಿವಿಪಿ ಕೇಡರಿನ ಕಾಗೇರಿಗೆ ದೊಡ್ಡ ಪೀಠ ಖಂಡಿತ! ಹಿಂದೆ ಕ್ಯಾಬಿನೆಟ್ ಮಂತ್ರಿಯಾಗಿದ್ದ ಕಾಗೇರಿ ಈಗ ಮಹತ್ವದ ವಿಧಾನಸಭಾಧ್ಯಕ್ಷರಾಗಿ ಪ್ರತಿಷ್ಟಾಪನೆಗೊಂಡಿದ್ದಾರೆ. ಮಂತ್ರಿಯಾಗಿ ಜೀವನ ಕೊನೆಯ ಆಸೆ ಈಡೇರಿಸಿಕೊಳ್ಳುವ ತೆವಲಿಂದ ಕಾಂಗ್ರೆಸ್ ಶಾಸಕತ್ವಕ್ಕೆ ಅನರ್ಹತೆ ತಂದುಕೊಂಡಿದ್ದ ಯಲ್ಲಾಪುರದ ಕಳ್ಳ ಅದಿರು ಉದ್ಯಮಿ ಶಿವರಾಮ ಹೆಬ್ಬಾರ್ ಎಂಬ ಹವ್ಯಕ ಹಿರೇಮಣಿಗೆ ಕ್ಯಾಬಿನೆಟ್ ಮಂತ್ರಿ ಮಾಡಲಾಗಿದೆ.

ಬಿಜೆಪಿ ಅಧಿಕಾರಕ್ಕೆ ಬಂದಾಗೆಲ್ಲಾ ಕಾಡನ್ನು ಅತಿಕ್ರಮಣ ಮಾಡಿ ತೋಟ ಮಾಡಿಕೊಂಡಿರುವ ಪರಿಸರವ್ಯಾಧಿ ಅನಂತ ಹೆಗಡೆ ಆಶೀಸರ್‍ಗೆ ನಿಗಮ ಒಂದು ಗ್ಯಾರಂಟಿ. ಕೇಶವಕೃಪಾದಲ್ಲಿ ಆಶ್ರಯದಾತರ ಸಂಪಾದಿಸಿರುವ ಆಶೀಸರ್‍ಗೆ ಜೀವ ವೈವಿಧ್ಯ ಮಂಡಳಿ ಇನಾಮಾಗಿ ಸಿಕ್ಕಿದೆ. ಸಿದ್ದು ಸರ್ಕಾರವಿದ್ಧಾಗ ಪ್ರೊ. ಎಂ.ಎ.ಹೆಗಡೆಗೆ ಯಕ್ಷಗಾನ ಅಕಾಡೆಮಿಗೆ ಅಧ್ಯಕ್ಷನಾಗಿ ನೇಮಿಸಲಾಗಿತ್ತು. ಈ “ಯಕ್ಷತಜ್ಞ” ಬಿಜೆಪಿ ಅಧಿಕಾರಕ್ಕೆ ಬರುತ್ತಿದ್ದಂತೆಯೇ ಸ್ವಜಾತಿ ಲಾಬಿ ಪ್ರಯೋಗಿಸಿ ಅಲ್ಲೇ ಹಾಯಾಗಿ ಮುಂದುವರಿದಿದ್ದಾರೆ. ಒಟ್ಟಿನಲ್ಲಿ ಜಿಲ್ಲೆಗೆ ದಕ್ಕಿರುವ ಐದೂ ಸರ್ಕಾರಿ ಕಾರಿನ ಭಾಗ್ಯ ಹವ್ಯಕರಿಗೇ ಖುಲಾಯಿಸಿದೆ. ಇದು ಕಾಕತಾಳೀಯವಲ್ಲ; ಜನಿವಾರ ಜಾದೂ!! ಈ ಹವ್ಯಕ ವೈಭವ ಪ್ರಸಂಗ ಕಂಡು ಹಾಲಕ್ಕಿ ಒಕ್ಕಲಿಗರು, ದೀವರು, ಮೀನುಗಾರರು, ಕೋಮಾರಪಂತ, ಮರಾಠರೇ ಮುಂತಾದ ಹಿಂದುಳಿದವರು ಬಲವಂತದ “ಖುಷಿ”ಪಡುತ್ತಿದ್ದಾರೆ.

ಹವ್ಯಕರು ಸಿಕ್ಕ-ಸಿಕ್ಕ ಅಧಿಕಾರ ಗದ್ದುಗೆ ಬರುತ್ತಿದ್ದರೂ ಕೊಂಕಣಿಗರಿಗೇನೂ ಬೇಸರವಿಲ್ಲ. ಯಾಕೆಂದರೆ, ಜಿಲ್ಲಾ ಬಿಜೆಪಿ ಮೇಲೆ ಸಂಪೂರ್ಣ ಹಿಡಿತ ಸಾಧಿಸಿದ ಸಂತೃಪ್ತಿ ಕೊಂಕಣಿಗರದು!! ಪಕ್ಷಕ್ಕೆ ಪ್ರಯೋಜನವಿಲ್ಲದ ರಾಜಕೀಯ ದಂಧೆದಾರ ವಿನೋದ ಪ್ರಭು ರಾಜ್ಯ ಬಿಜೆಪಿಯ ಪ್ರಮುಖ ಪದಾಧಿಕಾರಿ. ಕುಮಟೆಯ ಡಿಂಗ್ಡಾಂಗ್ ಶಾಸಕ ದಿನಕರ ಶೆಟ್ಟಿಯ ವಿರೋಧ ಲೆಕ್ಕಿಸದೆ ಕೊಂಕಣಿ ಕುವರ ವೆಂಕಟೇಶ್ ನಾಯಕ್‍ಗೆ ಜಿಲ್ಲಾ ಬಿಜೆಪಿ ಅಧ್ಯಕ್ಷನಾಗಿ ಆರೆಸೆಸ್ ದೀಕ್ಷೆಕೊಟ್ಟಿದೆ. ಹಳಿಯಾಳ ಮೂಲದ ಸಂಘಿ ಸರದಾರ ಮಂಗೇಶ್ ಬೆಂಡೆ ಜಿಲ್ಲಾ ಬಿಜೆಪಿ ಹೈಕಮಾಂಡ್, ಕುಮಟಾದ “ಕಲ್ಲಡ್ಕ” ಹನ್ಮಂತ ಶಾನಭೋಗ್ ಸುಪ್ರೀಂ ಕಮಾಂಡರ್. ಅನಂತ್ಮಾಣಿ ಈ ರಿಂಗ್ ಮಾಸ್ಟರ್‍ಗಳ ಕಣ್ಸನ್ನೆಗೆ ಬಾಲ ಅಲ್ಲಾಡಿಸುವ ಕಮಾಂಡರ್. ಕೊಂಕಣಿಗರ ಈಶಾರೆ ಇಲ್ಲದೆ ಪಕ್ಷದಲ್ಲಿ ಏನೂ ಆಗುವುದಿಲ್ಲ. ಸೀನಿಯರ್ ಕಾಗೇರಿ ಆದಿಯಾಗಿ ಜಿಲ್ಲೆಯ ಅಷ್ಟೂ ಬಿಜೆಪಿ ಶಾಸಕರು ಕೊಂಕಣಿ ಕಮಾಂಡ್‍ನ ಅಡಿಯಾಳುಗಳು.

ಬಿಜೆಪಿ ಭೂಪರು ಕರಾವಳಿಯ ಮೂರು ವಿಧಾನಸಭಾ ಕ್ಷೇತ್ರದಲ್ಲಿ ಹಿಂದುಳಿದವರನ್ನು ಎಮ್ಮೆಲ್ಲೆ ಮಾಡಿದ್ದೇವೆಂದು ಸಾಮಾಜಿಕ ನ್ಯಾಯದ ಸಬೂಬು ಹೇಳುತ್ತಿದೆ. ವಾಸ್ತವವೆಂದರೆ, ಈ ಹಿಂದುಳಿದವರ ಪ್ರಾಬಲ್ಯದ ಕ್ಷೇತ್ರಗಳಲ್ಲಿ ಜನಿವಾರಿಗಳು ಸ್ಪರ್ಧಿಸಿದರೆ ಠೇವಣಿಯೂ ಉಳಿಯುವುದಿಲ್ಲ. ಹೀಗಾಗಿ ತಮ್ಮ ಗುಲಾಮಗಿರಿ ಅಚ್ಚುಕಟ್ಟಾಗಿ ನಿರ್ವಹಿಸಬಲ್ಲ ಶೂದ್ರರನ್ನು ಶಾಸಕರಾಗಿ ಮಾಡಿಕೊಂಡಿದ್ದಾರೆ. ತಮಗೆ ಸೆಡ್ಡು ಹೊಡೆಯಬಹುದಾದ ಸೂರಜ್ ನಾಯ್ಕನ ಹೊರತಳ್ಳಿದ್ದಾರೆ. ಮಾಜಿ ಮಂತ್ರಿ ಶಿವಾನಂದ ನಾಯ್ಕರನ್ನು ಜನಿವಾರ ಲಾಬಿ ಬರ್ಬರವಾಗಿ ಹಣಿದ ದೊಡ್ಡ ಇತಿಹಾಸವೇ ಇದೆ. ಸಿದ್ಧಾಪುರದ ಕೆ.ಜಿ.ನಾಯ್ಕ, ಕಾರವಾರದ ನಾಗರಾಜ್ ನಾಯಕ್, ಗಣಪತಿ ಉಳ್ವೇಕರ್….. ಮುಂತಾದ ಶೂದ್ರರು ಬಿಜೆಪಿಯ ಪಹರೆ ಕಾಯುವುದಕ್ಕμÉ್ಟೀ ಸೀಮಿತರಾಗಿದ್ದಾರೆ, ಪಾಪ! ತಾವು ವೈದಿಕ ಬಾಸ್‍ಗಳ ಕೃಪಾಶೀರ್ವಾದದಿಂದಲೇ ಗೆದ್ದಿದ್ದೇವೆಂದು ದೈನೇಸಿಯಾಗಿ ಹೇಳುತ್ತಿರುವ ಕರಾವಳಿಯ ಕೇಸರಿ ಶಾಸಕರು – “ಕುಲಕ್ಕೆ ಮೃತ್ಯು ಕೊಡಲಿ ಕಾವು” – ಎಂಬಂತಾಗಿದ್ದಾರೆ ಹಿಂದುಳಿದ ಸಮುದಾಯಕ್ಕೆ!!

ಕಾರವಾರದ ರೂಪಾಲಿ ನಾಯ್ಕ್, ಕುಮಟೆಯ ದಿನಕರ ಶೆಟ್ಟಿ ಮತ್ತು ಭಟ್ಕಳದ ಸುನೀಲ್ ನಾಯ್ಕ್ ಹೆಸರಿಗಷ್ಟೇ ಶಾಸಕರು. ಈ ಶಾಸಕರ ಚಲನವಲನದ ಮೇಲೆ ರಹಸ್ಯ ಕಣ್ಣಿಟ್ಟಿದೆ! ರೂಪಾಲಿಯಮ್ಮನ ಸರ್ಕಾರಿ ಪಿಎಸ್ ಸಂಸದ ಮಾಣಿಯ ಖಾಸಾ ಆದ್ಮಿ. ಜಿಲ್ಲಾ ಬಿಜೆಪಿ ವಕ್ತಾರ ರಾಜೇಶ್ ನಾಯಕ್‍ನ ಅಣತಿಯಾಚೆ ರೂಪಾಲಿ ಹೆಜ್ಜೆ ಹಾಕುವಂತಿಲ್ಲ. ಕುಮಟೆಯ ದಿನಕರ ಶೆಟ್ಟಿಯನ್ನು ಸರ್ಕಾರಿ ಕಂಟ್ರಾಕ್ಟರ್ ಲಾಬಿಯ ಗಜುಪೈ ಮತ್ತು ಸುಧೀರ್ ಪಂಡಿತ್ ಎಂಬ “ಬಿಲ್ವಿದ್ಯಾ” ಪಂಡಿತರು ನಿಯಂತ್ರಿಸುತ್ತಿದ್ದಾರೆ. ಭಟ್ಕಳದ ಸುನೀಲ್ ನಾಯ್ಕನಿಗೆ ಆರೆಸ್ಸೆಸ್ನ ಪ್ರಮೋದ್ ಜೋಶಿ ಮೂಗುದಾರ ಹಾಕಿ ಕುಂತಿದ್ದಾನೆ. ಜನಿವಾರದ ಬಿಗಿ ಬಂಧನದಲ್ಲಿ ಹಿಂದುಳಿದ ವರ್ಗದ ಶಾಸಕರು ಏದುಸಿರು ಬಿಡುತ್ತಿದ್ದಾರೆ. ಅಬ್ರಾಹ್ಮಣರು “ಒಡೆದೀರು” ಮೊಣಕೈಗೆ ಸವರಿದ ತುಪ್ಪದ ಪರಿಮಳಕ್ಕೆ ಬಲಿಬೀಳುತ್ತಲೇ ಇದ್ದಾರೆ…..

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತಮಿಳುನಾಡು: ಕ್ಷೇತ್ರ ಪುನರ್ವಿಂಗಡೆ ವಿರುದ್ಧ ರಾಜ್ಯಾದ್ಯಂತ ಬೃಹತ್ ಪ್ರತಿಭಟನೆ: ಕೇಂದ್ರ ಸರ್ಕಾರಕ್ಕೆ ಎಂ.ಕೆ. ಸ್ಟಾಲಿನ್ ಎಚ್ಚರಿಕೆ

ಚೆನ್ನೈ: ಏಪ್ರಿಲ್ 16 ರಂದು ಸಂಸತ್ತಿನ ವಿಶೇಷ ಅಧಿವೇಶನ ಕರೆಯಲಾಗಿರುವ ಪ್ರಸ್ತಾವಿತ ಕ್ಷೇತ್ರ ಪುನರ್ವಿಂಗಡಣೆ ಪ್ರಕ್ರಿಯೆಯ ವಿರುದ್ಧ ರಾಜ್ಯಾದ್ಯಂತ ಬೃಹತ್ ಪ್ರತಿಭಟನೆಗಳ ಬಗ್ಗೆ ತಮಿಳುನಾಡು ಮುಖ್ಯಮಂತ್ರಿ ಮತ್ತು ಡಿಎಂಕೆ ಅಧ್ಯಕ್ಷರು ಮಂಗಳವಾರ ಬಿಜೆಪಿ...

ಪಶ್ಚಿಮ ಏಷ್ಯಾ ಸಂಘರ್ಷವು 25 ಲಕ್ಷ ಭಾರತೀಯರನ್ನು ಬಡತನಕ್ಕೆ ತಳ್ಳುವ ಅಪಾಯವಿದೆ : ವಿಶ್ವಸಂಸ್ಥೆ ವರದಿ

ಪಶ್ಚಿಮ ಏಷ್ಯಾ ಸಂಘರ್ಷವು 25 ಲಕ್ಷ ಭಾರತೀಯರನ್ನು ಬಡತನದ ಕೂಪಕ್ಕೆ ತಳ್ಳಬಹುದು ಮತ್ತು ದೇಶದ ಮಾನವ ಅಭಿವೃದ್ಧಿ ಪ್ರಗತಿಯಲ್ಲಿ ಸ್ವಲ್ಪ ಮಟ್ಟಿನ ಹಿನ್ನಡೆಯನ್ನುಂಟು ಮಾಡಬಹುದು ಎಂದು ವಿಶ್ವಸಂಸ್ಥೆಯ ಅಭಿವೃದ್ಧಿ ಕಾರ್ಯಕ್ರಮದ (ಯುಎನ್‌ಡಿಪಿ) ಹೊಸ...

ಗೋ-ರಕ್ಷಕರ ದಾಳಿಯ ನಂತರ ವ್ಯಕ್ತಿ ನಾಪತ್ತೆ: ಜಮ್ಮುವಿನ ರಾಂಬನ್‌ನಲ್ಲಿ ತೀವ್ರ ಪ್ರತಿಭಟನೆ; ಸಾಮಾಜಿಕ ಮಾಧ್ಯಮಗಳಲ್ಲೂ ಆಕ್ರೋಶ

ಗೋರಕ್ಷಕರ ದಾಳಿಗೆ ಸಂಬಂಧಿಸಿ ಸ್ಥಳೀಯ ನಿವಾಸಿ ತನ್ವೀರ್ ಅಹ್ಮದ್ ಚೋಪನ್ ನಾಪತ್ತೆಯಾದ ನಂತರ ಸೋಮವಾರ ರಾಂಬನ್ ಜಿಲ್ಲೆಯ ರಾಷ್ಟ್ರೀಯ ಹೆದ್ದಾರಿ 44 ರಲ್ಲಿ ಸಾವಿರಾರು ಜನರು ಸಂಚಾರ ತಡೆದು ಪ್ರತಿಭಟಿಸಿದ್ದಾರೆ. ಪೊಲೀಸರ ಪ್ರಕಾರ,...

ನಿತೀಶ್ ಕುಮಾರ್ ರಾಜೀನಾಮೆ : ಬಿಹಾರದ ಹೊಸ ಸಿಎಂ ಆಗಿ ಬಿಜೆಪಿಯ ಸಾಮ್ರಾಟ್ ಚೌಧರಿ ಆಯ್ಕೆ

ಬಿಹಾರದ ಮುಖ್ಯಮಂತ್ರಿ ಸ್ಥಾನಕ್ಕೆ ನಿತೀಶ್ ಕುಮಾರ್ ರಾಜೀನಾಮೆ ನೀಡಿದ್ದು, ಹೊಸ ಮುಖ್ಯಮಂತ್ರಿಯಾಗಿ ಬಿಜೆಪಿಯ ಸಾಮ್ರಾಟ್ ಚೌಧರಿ ಅವರನ್ನು ಆಯ್ಕೆ ಮಾಡಲಾಗಿದೆ. ಪಾಟ್ನಾದ ಲೋಕ ಭವನದಲ್ಲಿ ಮಂಗಳವಾರ (ಏ.14) ರಾಜ್ಯಪಾಲ ಲೆಫ್ಟಿನೆಂಟ್ ಜನರಲ್ (ನಿವೃತ್ತ)...

ಮುಂಬೈ ಸಂಗೀತ ಕಾರ್ಯಕ್ರಮದಲ್ಲಿ ಮಾದಕ ದ್ರವ್ಯ ಸೇವನೆಯಿಂದ ಇಬ್ಬರು ವಿದ್ಯಾರ್ಥಿಗಳು ಸಾವು, ಐವರ ಬಂಧನ; ತನಿಖೆ

ಮಂಗಳವಾರ ಮುಂಬೈನಲ್ಲಿ ನಡೆದ ಸಂಗೀತ ಕಾರ್ಯಕ್ರಮವೊಂದರಲ್ಲಿ ಮಾದಕ ದ್ರವ್ಯ ಸೇವಿಸಿದ ಆರೋಪದ ಮೇಲೆ ಇಬ್ಬರು ವಿದ್ಯಾರ್ಥಿಗಳು ಸಾವನ್ನಪ್ಪಿದ್ದು, ಮತ್ತೊಬ್ಬರ ಸ್ಥಿತಿ ಗಂಭೀರವಾಗಿದೆ. ದಕ್ಷಿಣ ಮುಂಬೈನ ಪ್ರತಿಷ್ಠಿತ ಸಂಸ್ಥೆಯ ವಿದ್ಯಾರ್ಥಿಗಳು ಎಂಬಿಎ ಓದುತ್ತಿದ್ದರು ಎಂದು...

ನಸೀರ್ ಅಹ್ಮದ್‌ರನ್ನು ವಜಾಗೊಳಿಸಿದ್ದೇಕೆ… ಡಿಕೆಶಿ ಹೇಳಿದ್ದೇನು?  

ಮುಖ್ಯಮಂತ್ರಿಗಳು ತಮ್ಮದೇ ಆದ ವಿವಿಧ ಮೂಲಗಳಿಂದ ಮಾಹಿತಿ ಪಡೆದು, ಪಕ್ಷದ ಹಿತದೃಷ್ಟಿಯಿಂದ ನಸೀರ್ ಅಹ್ಮದ್ ವಿಚಾರದಲ್ಲಿ ತೀರ್ಮಾನ ತೆಗೆದುಕೊಂಡಿದ್ದಾರೆ ಎಂದು ಉಪ ಮುಖ್ಯಮಂತ್ರಿ ಹಾಗೂ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಹೇಳಿದ್ದಾರೆ. ಮಂಗಳವಾರ (ಏ.14)...

ಆಟೋ ಪರ್ಮಿಟ್‌ಗಳಿಗೆ ಮರಾಠಿ ಭಾಷೆ ಕಡ್ಡಾಯ ನಿಯಮ; ಆರ್‌ಟಿಒ ಅಧಿಕಾರಿಗೆ ಬಿಷ್ಣೋಯ್ ಗ್ಯಾಂಗ್‌ನಿಂದ ಬೆದರಿಕೆ

ಕಳವಳಕಾರಿ ಬೆಳವಣಿಗೆಯಲ್ಲಿ, ಆಟೋ-ರಿಕ್ಷಾ ಪರ್ಮಿಟ್ ಪರಿಶೀಲನೆಗೆ ಮರಾಠಿ ಜ್ಞಾನವನ್ನು ಕಡ್ಡಾಯಗೊಳಿಸುವ ರಾಜ್ಯ ಸರ್ಕಾರದ ಆದೇಶಕ್ಕೆ ವಿರೋಧ ವ್ಯಕ್ತವಾಗಿದ್ದು, ಇದರಲ್ಲಿ ಬಿಷ್ಣೋಯ್ ಗ್ಯಾಂಗ್ ಭಾಗಿಯಾಗಿದೆ ಎಂದು ಆರೋಪಿಸಲಾಗಿದೆ. ಪ್ರಾದೇಶಿಕ ಸಾರಿಗೆ ಕಚೇರಿ (ಆರ್‌ಟಿಒ) ಅಧಿಕಾರಿ...

‘ನಾನು ಪ್ರೀತಿಯಲ್ಲಿ ನಂಬಿಕೆ ಇಡುತ್ತೇನೆ, ಬುಲ್ಡೋಜರ್‌ ರಾಜಕೀಯದಲ್ಲಿ ಅಲ್ಲ’: ಯುಪಿ ಮಾದರಿ ವಿವಾದದ ನಡುವೆ ಯೋಗಿ ವಿರುದ್ಧ ಮಮತಾ ದಾಳಿ

ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಸೋಮವಾರ ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ವಿರುದ್ಧ ದಾಳಿ ನಡೆಸಿದ್ದಾರೆ. ಅವರು ಬುಲ್ಡೋಜರ್ ರಾಜಕೀಯದಲ್ಲಿ ನಂಬಿಕೆ ಇಡುವುದಿಲ್ಲ ಎಂದು ಹೇಳಿದ್ದಾರೆ ಮತ್ತು ಉತ್ತರ ಪ್ರದೇಶದಲ್ಲಿ...

ಬಿಹಾರ| ಸಿಎಂ ಹುದ್ದೆಗೆ ರಾಜೀನಾಮೆ ನೀಡಲು ಅಣಿಯಾದ ನಿತೀಶ್ ಕುಮಾರ್ : ಸಂಪುಟ ವಿಸರ್ಜನೆಗೆ ಶಿಫಾರಸು

ಬಿಹಾರದಲ್ಲಿ ಹೊಸ ಸರ್ಕಾರ ರಚನೆ ಕಸರತ್ತು ತೀವ್ರಗೊಂಡಿದೆ. ಮುಖ್ಯಮಂತ್ರಿ ನಿತೀಶ್ ಕುಮಾರ್ ರಾಜ್ಯಪಾಲರನ್ನು ಭೇಟಿಯಾಗಿ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಲು ಅಣಿಯಾಗಿದ್ದು, ಅದಕ್ಕೂ ಮೊದಲು ಸಚಿವ ಸಂಪುಟ ವಿಸರ್ಜಿಸಲು ಅವರು ಶಿಫಾರಸು ಮಾಡಿದ್ದಾರೆ....

‘ರಾತ್ರೋರಾತ್ರಿ ಒಪ್ಪಂದ ಸಾಧ್ಯವಿಲ್ಲ’: ಪಶ್ಚಿಮ ಏಷ್ಯಾ ಯುದ್ಧದ ಕುರಿತು ನಿರಂತರ ಮಾತುಕತೆಗೆ ವಿಶ್ವಸಂಸ್ಥೆ ಒತ್ತಾಯ

ವಿಶ್ವಸಂಸ್ಥೆಯ ಮುಖ್ಯಸ್ಥ ಆಂಟೋನಿಯೊ ಗುಟೆರೆಸ್ ಅವರು ಅಮೆರಿಕ ಮತ್ತು ಇರಾನ್ ನಡುವೆ ನಿರಂತರ ರಾಜತಾಂತ್ರಿಕ ಮಾತುಕತೆಗೆ ಕರೆ ನೀಡಿದ್ದಾರೆ. "ಒಂದು ಒಪ್ಪಂದವನ್ನು ರಾತ್ರೋರಾತ್ರಿ ತಲುಪಲು ಸಾಧ್ಯವಿಲ್ಲ" ಎಂದು ಒತ್ತಿ ಹೇಳಿದ ಅವರು ಪಶ್ಚಿಮ...