Homeಕರ್ನಾಟಕಉತ್ತರ ಕನ್ನಡ: ಬನವಾಸಿ ಮೇಲ್ಯಾಕೆ ಯಡ್ಡಿ ಕುಟುಂಬದ ಕಣ್ಣು!?

ಉತ್ತರ ಕನ್ನಡ: ಬನವಾಸಿ ಮೇಲ್ಯಾಕೆ ಯಡ್ಡಿ ಕುಟುಂಬದ ಕಣ್ಣು!?

`ಆರಂಕುಶವಿಟ್ಟೊಡಂ ನೆನೆವುದೆನ್ನ ಮನಂ ಬನವಾಸಿ ದೇಶಂ' ಎಂದು ಎದೆತುಂಬಿ ಪಂಪ ಮಹಾಕವಿ ಹಾಡಿದ್ದ ಐತಿಹಾಸಿಕ ಮಹತ್ವದ ಬನವಾಸಿಗೆ ಉತ್ತರ ಕನ್ನಡದೊಂದಿಗೆ, ಅದರಲ್ಲೂ ಮಲೆನಾಡಿನ ಸೆರಗಿನ ಶಿರಸಿ ಸೀಮೆಯೊಂದಿಗೆ ಅವಿನಾಭಾವ ಸಂಬಂಧ.

- Advertisement -
- Advertisement -

| ನಹುಷ |

`ಆರಂಕುಶವಿಟ್ಟೊಡಂ ನೆನೆವುದೆನ್ನ ಮನಂ ಬನವಾಸಿ ದೇಶಂ’ ಎಂದು ಎದೆತುಂಬಿ ಪಂಪ ಮಹಾಕವಿ ಹಾಡಿದ್ದ ಐತಿಹಾಸಿಕ ಮಹತ್ವದ ಬನವಾಸಿಗೆ ಉತ್ತರ ಕನ್ನಡದೊಂದಿಗೆ, ಅದರಲ್ಲೂ ಮಲೆನಾಡಿನ ಸೆರಗಿನ ಶಿರಸಿ ಸೀಮೆಯೊಂದಿಗೆ ಅವಿನಾಭಾವ ಸಂಬಂಧ. ಶಿವಮೊಗ್ಗ ಜಿಲ್ಲೆಯ ಸೊರಬ-ಶಿಕಾರಿಪುರ ತಾಲ್ಲೂಕಿನ ಅಂಚಿನಲ್ಲಿರುವ ಕನ್ನಡದ ಈ ಮೊದಲ ರಾಜಧಾನಿ, ಯಡ್ಡಿ ಮುಖ್ಯಮಂತ್ರಿ ಆದಾಗೆಲ್ಲಾ ಕರುಳು ಸಂಬಂಧವೇ ಕಡಿದು ಹೋಗುವ ಆತಂಕಕ್ಕೆ ಬಿದ್ದು ಒದ್ದಾಡುತ್ತದೆ.

ಯಡ್ಡಿ ಈ ಹಿಂದೆ ಸಿಎಂ ಆಗಿದ್ದಾಗ ಬನವಾಸಿಯನ್ನು ಸೊರಬದ ಆನವಟ್ಟಿ ಹೋಬಳಿಗೆ ಸೇರಿಸುವ ಮಸಲತ್ತು ನಡೆದಿತ್ತು. ಆದರೆ ಯಡ್ಡಿ ಭಿನ್ನಮತಕ್ಕೆ ಬಲಿಯಾಗಿ ಅಧಿಕಾರ ಕಳಕೊಂಡು ಬಿಜೆಪಿ ಪಾಲಿಗೆ “ಕಾಫಿರ್” ಆಗಿಹೋಗಿದ್ದರು. ಹೀಗಾಗಿ ಬನವಾಸಿಯನ್ನು ಉತ್ತರ ಕನ್ನಡದಿಂದ ಹೊತ್ತೊಯ್ಯುವ ಯಡ್ಡಿ ಮತ್ತವರ ಮಗನೂ ಸಂಸದನೂ ಆಗಿರುವ ಬಸ್‍ಸ್ಟ್ಯಾಂಡ್ ರಾಘುನ ಪ್ಲಾನ್ ಫ್ಲಾಪ್ ಆಗಿತ್ತು. ಈಗ ಮತ್ತೆ ಶಿರಸಿಯ ಬನವಾಸಿ ಮೇಲೆ ಯಡ್ಡಿ ಕುಟುಂಬದ ಕಣ್ಣು ಬಿದ್ದಿದೆ. ಈ ರಹಸ್ಯ ಹುನ್ನಾರದ ಹೂರಣ ಹೊರಬರುತ್ತಲೇ ಬನವಾಸಿ ಭಾಗದ ಜನರು ಕೆರಳಿ ಬೀದಿಗಿಳಿದು ಪ್ರತಿಭಟಿಸುತ್ತಿದ್ದಾರೆ.

ಅಷ್ಟಕ್ಕೂ ಈ ಅಪ್ಪ-ಮಗನಿಗೆ ಉತ್ತರ ಕನ್ನಡ ಸಂಸ್ಕøತಿ-ಸಂಸ್ಕಾರದ ಬನವಾಸಿ ಮತ್ತದರ ಸುತ್ತಲಿನ ಹಳ್ಳಿಗಳನ್ನು ಕಬಳಿಸುವ ಹಠವೇಕೆಂದು ಬಲ್ಲಿರಾ? ಶಿವಮೊಗ್ಗ ಜಿಲ್ಲೆಯನ್ನು ಒಡೆದು ಶಿಕಾರಿಪುರ ಜಿಲ್ಲೆ ರಚನೆ ಮಾಡಿ ರಾಜಕೀಯ ಫಾಯ್ದೆ ಹೊಡೆಯಲು ಯಡ್ಡಿ-ರಾಘು ಸ್ಕೆಚ್ ಹಾಕಿದ್ದಾರೆ. ಆದರೆ ಜಿಲ್ಲೆ ರಚನೆಗೆ ಬೇಕಾದ ಭೌಗೋಳಿಕ ಪ್ರದೇಶ ಮತ್ತು ಜನಸಂಖ್ಯೆಯ ಕೊರತೆಯಿದೆ. ಪಕ್ಕದ ಬನವಾಸಿ ಮತ್ತು ಅದರ ಆಚೀಚೆಯ ಹತ್ತು ಗ್ರಾಮ ಪಂಚಾಯತ್ ಏರಿಯಾ ಸೇರಿಸಿಕೊಂಡರೆ ಏಕ್‍ದಮ್ 50 ಸಾವಿರಕ್ಕಿಂತ ಹೆಚ್ಚು ಜನಸಂಖ್ಯೆಯೂ ಸಿಗುತ್ತದೆ! ಈ ದೂ(ದು)ರಾಲೋಚನೆಯಿಂದ ಬನವಾಸಿ ಸೀಮೆ ಆಪೋಷನಕ್ಕೆ ಯಡ್ಡಿ-ರಾಘು ಸರ್ಕಸ್ ನಡೆಸಿದ್ದಾರೆ.

ಯಡ್ಡಿ ಅಕ್ರಮ ಸರ್ಕಾರದ ಚಕ್ರವರ್ತಿಯಾಗುತ್ತಲೇ ಆತನ ತವರೂರು ಶಿಕಾರಿಪುರಕ್ಕೆ ಭರಪೂರ ಅನುದಾನ ಹರಿದುಬರುತ್ತಿದೆ. ಪಕ್ಕದ ಶಿಕಾರಿಪುರದ ಉದ್ಧಾರಕ್ಕೆ ಯಥೇಚ್ಛವಾಗಿ ಹಣ ಹರಿದು ಬರುತ್ತಿದ್ದರೆ ಉತ್ತರ ಕನ್ನಡಕ್ಕೆ ಅನ್ಯಾಯ-ಅತ್ಯಾಚಾರ ಆಗುತ್ತಿದೆ! ಅನುದಾನ ತರುವುದು ಸಾಯಲಿ, ಜಿಲ್ಲೆ ಬರಡಾಗದಂತೆ ತಡೆಯಬೇಕೆಂಬ ಕನಿಷ್ಟ ಕಾಳಜಿಯೂ ಉತ್ತರ ಕನ್ನಡದ ಹೇತ್ಲಾಂಡಿ ಶಾಸಕ-ಸಂಸದ-ಮಂತ್ರಿಗಳಿಗಿಲ್ಲ. ಲಾಗಾಯ್ತಿನಿಂದ ಉತ್ತರ ಕನ್ನಡದ ಪ್ರಗತಿಗೆ ಅಡ್ಡಗಾಲು ಹಾಕಲಾಗುತ್ತಿದೆ. ಅಂಕೋಲಾ-ಹುಬ್ಬಳ್ಳಿ, ಹಾವೇರಿ-ಶಿರಸಿ ಮತ್ತು ತಾಳಗುಪ್ಪ-ಸಿದ್ಧಾಪುರ ರೈಲು ಮಾರ್ಗ ಹಲವು ವರ್ಷದಿಂದ ಬರೀ ಕನಸಾಗೇ ಕಾಡುತ್ತಿದೆ. ಉತ್ತರ ಕನ್ನಡಕ್ಕೆ ತೀರಾ ಹತ್ತಿರದಲ್ಲಿರುವ ಸಾಗರ ತಾಲ್ಲೂಕಿನ ತಾಳಗುಪ್ಪದಲ್ಲಿ ನಿರ್ಮಾಣ ಮಾಡಲು ಉದ್ದೇಶಿಸಿದ್ದ ರೈಲು ಟರ್ಮಿನಲನ್ನು ಯಡ್ಡಿ ಪರ್ವದಲ್ಲಿ ಶಿವಮೊಗ್ಗಕ್ಕೆ ಸ್ಥಳಾಂತರಿಸುವ ಕಿತಾಪತಿ ನಡೆಯುತ್ತಿದೆ. ತಾಳಗುಪ್ಪ ಜಂಕ್ಷನ್ ಆಗಿದ್ದರೆ ಈ ರೈಲು ಮಾರ್ಗ ಸಿದ್ಧಾಪುರದವರೆಗೆ ವಿಸ್ತರಿಸಲು ಅನುಕೂಲವಾಗುತ್ತಿತ್ತು.

ಈಗ ಅದಕ್ಕೂ ಕಲ್ಲು ಹಾಕಲಾಗುತ್ತಿದೆ. ಜಂಕ್ಷನ್ ಸ್ಥಳಾಂತರಕ್ಕೆ ಸಾಕ್ಷಾತ್ ಸಿಎಂ ಸಾಹೇಬರೇ ಒಪ್ಪಿಗೆ ಕೊಟ್ಟಿದ್ದಾರೆ. ತಾಳಗುಪ್ಪ-ಸಿದ್ಧಾಪುರ ರೈಲು ಮಾರ್ಗಕ್ಕೆಂದು ಅಂದಿನ ರೈಲು ಮಂತ್ರಿ ಸುರೇಶ್ ಪ್ರಭು 320 ಕೋಟಿ ಮಂಜೂರು ಮಾಡುವುದಾಗಿ ಘೋಷಿಸಿದ್ದರು. ಈ ಹಣ ಎಲ್ಲಿ ಹೋಯಿತೆಂದು ಸಂಸದ ಅನಂತ್ಮಾಣಿಗೂ ಗೊತ್ತಾಗಿಲ್ಲ. ಉತ್ತರ ಕನ್ನಡದ ಅಭಿವೃದ್ಧಿಗಾಗೇ ಅವತಾರ ಎತ್ತಿದ್ದೇನೆಂದು ಒಣ ಘರ್ಜನೆ ಮಾಡುವ ಮಾಣಿ ಮೋದಿ ಮಂತ್ರಿಗಿರಿಯಿಂದ ತೆಗೆದುಹಾಕಿದ ಕ್ಷಣದಿಂದಲೇ ಬಿಲ ಸೇರಿಕೊಂಡಿದ್ದಾನೆ. ಬನವಾಸಿ ಅಪಹರಿಸುವ ಸುದ್ಧಿ ಕೇಳಿ ಜನರು ಬೀದಿಗಿಯಲು ಅಣಿಯಾದರೂ ಶಿರಸಿ ಶಾಸಕ ಕಂ ಸ್ಪೀಕರ್ ಕಾಗೇರಿಯಾಗಲಿ, ಬನವಾಸಿಯ ‘ಅನರ್ಹ’ ಶಾಸಕ ಶಿವರಾಮ ಹೆಬ್ಬಾರನಾಗಲಿ, ಶಿರಸಿಯಲ್ಲೇ ಐಷಾರಾಮಿ ಬಂಗಲೆ ಕಟ್ಟಿಕೊಂಡು ವಾಸಿಸುತ್ತಿರುವ ಸ್ವಯಂ ಘೋಷಿತ ದೇಶಭಕ್ತ ಅನಂತ್ಮಾಣಿಯಾಗಲಿ ತುಟಿಪಿಟಿಕ್ ಅಂದಿಲ್ಲ.

ಗುರುವಾರ 10ನೇ ತಾರೀಖಿನಂದು ಬನವಾಸಿ ಮತ್ತು ಸುತ್ತಲಿನ ಹಳ್ಳಿಗರು ಸಹಸ್ರಾರು ಸಂಖ್ಯೆಯಲ್ಲಿ ಮಧುಕೇಶ್ವರ ದೇವಾಲಯದ ಅಂಗಳದಲ್ಲಿ ಜಮೆಯಾಗಿ ಬನವಾಸಿ ಹೈಜಾಕ್ ಮಾಡದಂತೆ ಎಚ್ಚರಿಕೆಯ ರ್ಯಾಲಿ ನಡೆಸಿದ್ದಾರೆ. ಇದನ್ನು ಕಂಡು ಬೆಚ್ಚಿಬಿದ್ದಿರುವ ಅನರ್ಹ ಶಾಸಕ ಹೆಬ್ಬಾರ್ `ಬನವಾಸಿ ಶಿಕಾರಿಪುರಕ್ಕೆ ಸೇರಿಸುವ ಸುದ್ದಿ ಸುಳ್ಳೆಂದು’ ತಿಪ್ಪರಲಾಗ ಹೊಡೆದಿದ್ದಾನೆ. ಉಪಚುನಾವಣೆಯಲ್ಲಿ ಬನವಾಸಿ ಭಾನ್ಗಡಿ ತನಗೆ ದುಬಾರಿ ಆಗಬಾರದೆಂಬ ಭಯವೇ ಹೊರತು ಕ್ಷೇತ್ರದ ಬಗ್ಗೆ ಪ್ರಾಮಾಣಿಕ ಕಾಳಜಿಯೇನಿಲ್ಲ ಈ ರಾಜಕಾರಣಿಗೆ.

ಬನವಾಸಿ ಅಭಿವೃದ್ಧಿ ಪ್ರಾಧಿಕಾರ ರಚನೆಯಾಗಿ ವರ್ಷಗಳು ಉರುಳಿದರೂ ಹೆಬ್ಬಾರ್‍ನ ಅಯೋಗ್ಯತೆಯಿಂದಾಗಿ ಅರ್ಧಕಾಸಿನ ಪ್ರಯೋಜನವಾಗಿಲ್ಲ. ಬನವಾಸಿಯನ್ನು ತಾಲ್ಲೂಕು ಮಾಡಿಯೆಂದು ಜನ ಬೊಬ್ಬೆ ಹೊಡೆಯುತ್ತಿದ್ದರೂ ಶಾಸಕನಾಗಿದ್ದ ಹೆಬ್ಬಾರ್‍ಗೆ ಅಡ್ಡದಾರಿಯಲ್ಲಿ ಮಂತ್ರಿಯಾಗುವುದೇ ಮುಖ್ಯವಾಗಿತ್ತು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸುಪ್ರೀಂ ಕೋರ್ಟ್ ನಿರ್ದೇಶನದ ಹೊರತಾಗಿಯೂ ಮುಂದುವರೆದ ಬುಲ್ಡೋಝರ್ ಅ’ನ್ಯಾಯ’ : ಯುಪಿ ಸರ್ಕಾರಕ್ಕೆ ಅಲಾಹಾಬಾದ್‌ ಹೈಕೋರ್ಟ್‌ ಛೀಮಾರಿ

ಉತ್ತರ ಪ್ರದೇಶದ ಸರ್ಕಾರದ "ಬುಲ್ಡೋಝರ್ ಅನ್ಯಾಯ" ವಿರುದ್ಧ ಸುಪ್ರೀಂ ಕೋರ್ಟ್ 2024ರ ನವೆಂಬರ್‌ನಲ್ಲಿ ಕಟ್ಟುನಿಟ್ಟಾದ ತೀರ್ಪು ನೀಡಿದ್ದರೂ, ದಂಡನಾತ್ಮಕ ಕ್ರಮವಾಗಿ ಕಟ್ಟಡಗಳನ್ನು ಉರುಳಿಸುವ ಪ್ರಕ್ರಿಯೆ ಇನ್ನೂ ಮುಂದುವರಿಯುತ್ತಿರುವುದರ ಬಗ್ಗೆ ಅಲಹಾಬಾದ್ ಹೈಕೋರ್ಟ್ ತೀವ್ರ...

‘ಕಾಶ್ಮೀರಿಗಳ ವಿರುದ್ಧ ಗುಂಪು ಹಿಂಸಾಚಾರಕ್ಕೆ ರಾಜ್ಯ ಸರ್ಕಾರ ಪ್ರೋತ್ಸಾಹಿಸುತ್ತಿದೆ’: ಮೆಹಬೂಬಾ ಮುಫ್ತಿ ಆರೋಪ

ಶ್ರೀನಗರ: ಕೇಂದ್ರಾಡಳಿತ ಪ್ರದೇಶದ ಹೊರಗೆ ಕಾಶ್ಮೀರಿಗಳ ವಿರುದ್ಧ ಗುಂಪು ಹಿಂಸಾಚಾರಕ್ಕೆ ರಾಜ್ಯ ಸರ್ಕಾರಗಳು ಪ್ರೋತ್ಸಾಹ ನೀಡುತ್ತಿರುವಂತೆ ಕಾಣುತ್ತಿದೆ, ಕಾನೂನಿನ ಆಡಳಿತವನ್ನು ದ್ವೇಷವು ಬದಲಾಯಿಸಲು ಅವಕಾಶ ನೀಡುತ್ತದೆ ಎಂದು ಪಿಡಿಪಿ ಅಧ್ಯಕ್ಷೆ ಮೆಹಬೂಬಾ ಮುಫ್ತಿ...

ಭಾರತ-ಅಮೆರಿಕ ವ್ಯಾಪಾರ ಒಪ್ಪಂದ | ಒತ್ತಡಕ್ಕೆ ಮಣಿದು ಪ್ರಧಾನಿ ರಾಜಿ ಮಾಡಿಕೊಂಡಿದ್ದಾರೆ, ದೇಶವನ್ನು ಮಾರಿದ್ದಾರೆ : ರಾಹುಲ್ ಗಾಂಧಿ

ಭಾರತ-ಅಮೆರಿಕ ವ್ಯಾಪಾರ ಒಪ್ಪಂದ ಸಂಬಂಧ ಪ್ರಧಾನಿ ನರೇಂದ್ರ ಮೋದಿ ವಿರುದ್ದ ವಿಪಕ್ಷ ನಾಯಕ ರಾಹುಲ್ ಗಾಂಧಿ ಮಂಗಳವಾರ (ಫೆ.3) ತೀವ್ರ ವಾಗ್ದಾಳಿ ನಡೆಸಿದ್ದು, "ಪ್ರಧಾನಿ ರಾಜಿ ಮಾಡಿಕೊಂಡಿದ್ದಾರೆ, ದೇಶವನ್ನು ಮಾರಿದ್ದಾರೆ" ಎಂದು ಆರೋಪಿಸಿದರು. ಸಂಸತ್ತಿನ...

ಧರ್ಮಸ್ಥಳ ಪ್ರಕರಣದ ಚರ್ಚೆ ವೇಳೆ ಹಲ್ಲೆಗೆ ಯತ್ನ; ವಸಂತ್ ಗಿಳಿಯಾರ್, ಪುನೀತ್ ಕೆರೆಹಳ್ಳಿ, ಕಿರಿಕ್ ಕೀರ್ತಿ ವಿರುದ್ಧ ಎಫ್‌ಐಆರ್

2025ರ ಅಕ್ಟೋಬರ್‌ನಲ್ಲಿ ‘R.ಕನ್ನಡ’ ಸುದ್ದಿ ವಾಹಿನಿಯಲ್ಲಿ ಧರ್ಮಸ್ಥಳ ಪ್ರಕರಣ ಸಂಬಂಧ ನಡೆದಿದ್ದ ಚರ್ಚಾ ಕಾರ್ಯಕ್ರಮದ ವೇಳೆ ದಾಂಧಲೆ ನಡೆಸಿ, ಹಲ್ಲೆಗೆ ಯತ್ನಿಸಿದ್ದ ಹಿಂದುತ್ವ ಕೋಮುವಾದಿ ಕಾರ್ಯಕರ್ತ ವಸಂತ್ ಗಿಳಿಯಾರ್, ಪುನೀತ್ ಕೆರೆಹಳ್ಳಿ ಹಾಗೂ...

ಲೋಕಸಭೆಯಲ್ಲಿ ನರವಾಣೆ ಆತ್ಮಕಥೆ ಗದ್ದಲ : ವಿಪಕ್ಷಗಳ 8 ಮಂದಿ ಸಂಸದರು ಅಮಾನತು

ಮಾಜಿ ಸೇನಾ ಮುಖ್ಯಸ್ಥ ಮನೋಜ್ ಮುಕುಂದ್ ನರವಾಣೆ ಅವರ ಅಪ್ರಕಟಿತ ಆತ್ಮಕತೆಯ ವಿಚಾರ ಮಂಗಳವಾರ (ಫೆ.3) ಕೂಡ ಲೋಕಸಭೆಯಲ್ಲಿ ತೀವ್ರ ಗದ್ದಲಕ್ಕೆ ಕಾರಣವಾಯಿತು. ಪುಸ್ತಕದ ವಿಷಯಗಳನ್ನು ಪ್ರಸ್ತಾಪಿಸಲು ವಿರೋಧ ಪಕ್ಷದ ನಾಯಕ ರಾಹುಲ್...

ಮನ್ರೇಗಾ ಕಾರ್ಮಿಕರ ಮಹಾ ಪಂಚಾಯತ್ ರಾಷ್ಟ್ರಪತಿಗಳಿಗೆ ಬರೆದ ಮನ ಮುಟ್ಟುವ ಪತ್ರ

ಕೇಂದ್ರ ಸರ್ಕಾರ ವಿಬಿಜಿ- ರಾಮ್ ಜಿ 2025 ಕಾನೂನನ್ನು ವಾಪಸ್ ಪಡೆಯಬೇಕು ಹಾಗೂ ನರೇಗಾ ಯೋಜನೆಯನ್ನು ಮರು ಸ್ಥಾಪಿಸಬೇಕು ಎಂದು ಮನ್ರೇಗಾ ಕಾರ್ಮಿಕರ ಮಹಾ ಪಂಚಾಯತ್‌ ರಾಷ್ಟ್ರಪತಿಗಳಿಗೆ ಮನವಿ ಪತ್ರ ಸಲ್ಲಿಸಿದೆ.  2026 ಫೆಬ್ರವರಿ...

ಗುಜರಾತ್‌| ಕುದುರೆ ಸವಾರಿ ಮಾಡಿದ ದಲಿತ ವರನ ಮೇಲೆ ಕತ್ತಿಯಿಂದ ಹಲ್ಲೆ

ಗುಜರಾತ್‌ನ ಪಠಾನ್ ಜಿಲ್ಲೆಯ ಗ್ರಾಮವೊಂದರಲ್ಲಿ, ಕುದುರೆ ಸವಾರಿ ಮಾಡಿದ ದಲಿತ ವರನ ಮೇಲೆ ಕತ್ತಿಯಿಂದ ಹಲ್ಲೆ ನಡೆಸಿರುವ ಘಟನೆ ನಡೆದಿದೆ. ದಲಿತ ಸಮುದಾಯದ ಯುವಕ ವಿಶಾಲ್ ಚಾವ್ಡಾಗೆ ಮದುವೆಯ ಸಂತೋಷದ ದಿನವು ಜೀವನದ ದುಃಸ್ವಪ್ನವಾಗಿ...

ಗೃಹಲಕ್ಷ್ಮಿ ಯೋಜನೆಯಿಂದ 52 ಸಾವಿರಕ್ಕೂ ಹೆಚ್ಚಿನ ಮಹಿಳೆಯರು ಹೊರಕ್ಕೆ: ಆದಾಯ ತೆರಿಗೆ ಇಲಾಖೆ ದಾಖಲೆಗಳು ಕಾರಣ ಎಂದ ಲಕ್ಷ್ಮಿ ಹೆಬ್ಬಾಳ್ಕರ್

ಬೆಂಗಳೂರು: ರಾಜ್ಯಾದ್ಯಂತ 1.26 ಕೋಟಿ ಫಲಾನುಭವಿಗಳಲ್ಲಿ 52,000 ಕ್ಕೂ ಹೆಚ್ಚು ಮಹಿಳೆಯರನ್ನು ಗೃಹಲಕ್ಷ್ಮಿ ಯೋಜನೆಯಿಂದ ತೆಗೆದುಹಾಕಲಾಗಿದೆ, ಏಕೆಂದರೆ ಅವರು ಜಿಎಸ್ಟಿ ಅಥವಾ ಆದಾಯ ತೆರಿಗೆ ಇಲಾಖೆಗಳ ದಾಖಲೆಗಳಲ್ಲಿ ತೆರಿಗೆದಾರರಾಗಿದ್ದಾರೆ ಎಂದು ಮಹಿಳಾ ಮತ್ತು...

ವಿಬಿ-ಜಿ ರಾಮ್ ಜಿ ಕಾಯ್ದೆ ವಿರುದ್ಧ ವಿಧಾನಸಭೆಯಲ್ಲಿ ನಿರ್ಣಯ ಮಂಡನೆ

ಮನರೇಗಾ ಬದಲಾಗಿ ಕೇಂದ್ರ ಸರ್ಕಾರ ಜಾರಿಗೆ ತಂದಿರುವ ವಿಬಿ-ಜಿ ರಾಮ್ ಜಿ ಕಾಯ್ದೆ ವಿರುದ್ದ ಮುಖ್ಯಮಂತ್ರಿ ಸಿದ್ದರಾಮಯ್ಯ ಮಂಗಳವಾರ (ಫೆ.3) ವಿಧಾನಸಭೆಯಲ್ಲಿ ನಿರ್ಣಯ ಮಂಡಿಸಿದರು. ರಾಜ್ಯದ ಗ್ರಾಮೀಣ ಜನರ ಬದುಕಿನ ಹಕ್ಕನ್ನು ಕಾಪಾಡುವ ದೃಷ್ಟಿಯಿಂದ,...

‘ಖಾಸಗಿ ಮಾಹಿತಿಯ ಕಳ್ಳತನ’ : ವಿವಾದಾತ್ಮಕ ಗೌಪ್ಯತೆ ನೀತಿ ಸಂಬಂಧ ವಾಟ್ಸಾಪ್, ಮೆಟಾ ವಿರುದ್ಧ ಸುಪ್ರೀಂ ಕೋರ್ಟ್ ಕಿಡಿ

ನಾಗರಿಕರ ಗೌಪ್ಯತೆಯ ಹಕ್ಕನ್ನು ಉಲ್ಲಂಘಿಸಲಾಗಿದೆ ಎಂದು ಮಂಗಳವಾರ ಸುಪ್ರೀಂ ಕೋರ್ಟ್ ವಾಟ್ಸಾಪ್ ಮತ್ತು ಅದರ ಪೋಷಕ ಕಂಪನಿ ಮೆಟಾವನ್ನು ತೀವ್ರವಾಗಿ ತರಾಟೆಗೆ ತೆಗೆದುಕೊಂಡಿದೆ. ಡೇಟಾ ಹಂಚಿಕೆಯ ಹೆಸರಿನಲ್ಲಿ ಬಳಕೆದಾರರ ಖಾಸಗಿ ಡೇಟಾವನ್ನು ಬಳಸಿಕೊಳ್ಳಲು...