Homeಕರ್ನಾಟಕಉತ್ತರ ಕನ್ನಡ: ಬನವಾಸಿ ಮೇಲ್ಯಾಕೆ ಯಡ್ಡಿ ಕುಟುಂಬದ ಕಣ್ಣು!?

ಉತ್ತರ ಕನ್ನಡ: ಬನವಾಸಿ ಮೇಲ್ಯಾಕೆ ಯಡ್ಡಿ ಕುಟುಂಬದ ಕಣ್ಣು!?

`ಆರಂಕುಶವಿಟ್ಟೊಡಂ ನೆನೆವುದೆನ್ನ ಮನಂ ಬನವಾಸಿ ದೇಶಂ' ಎಂದು ಎದೆತುಂಬಿ ಪಂಪ ಮಹಾಕವಿ ಹಾಡಿದ್ದ ಐತಿಹಾಸಿಕ ಮಹತ್ವದ ಬನವಾಸಿಗೆ ಉತ್ತರ ಕನ್ನಡದೊಂದಿಗೆ, ಅದರಲ್ಲೂ ಮಲೆನಾಡಿನ ಸೆರಗಿನ ಶಿರಸಿ ಸೀಮೆಯೊಂದಿಗೆ ಅವಿನಾಭಾವ ಸಂಬಂಧ.

- Advertisement -
- Advertisement -

| ನಹುಷ |

`ಆರಂಕುಶವಿಟ್ಟೊಡಂ ನೆನೆವುದೆನ್ನ ಮನಂ ಬನವಾಸಿ ದೇಶಂ’ ಎಂದು ಎದೆತುಂಬಿ ಪಂಪ ಮಹಾಕವಿ ಹಾಡಿದ್ದ ಐತಿಹಾಸಿಕ ಮಹತ್ವದ ಬನವಾಸಿಗೆ ಉತ್ತರ ಕನ್ನಡದೊಂದಿಗೆ, ಅದರಲ್ಲೂ ಮಲೆನಾಡಿನ ಸೆರಗಿನ ಶಿರಸಿ ಸೀಮೆಯೊಂದಿಗೆ ಅವಿನಾಭಾವ ಸಂಬಂಧ. ಶಿವಮೊಗ್ಗ ಜಿಲ್ಲೆಯ ಸೊರಬ-ಶಿಕಾರಿಪುರ ತಾಲ್ಲೂಕಿನ ಅಂಚಿನಲ್ಲಿರುವ ಕನ್ನಡದ ಈ ಮೊದಲ ರಾಜಧಾನಿ, ಯಡ್ಡಿ ಮುಖ್ಯಮಂತ್ರಿ ಆದಾಗೆಲ್ಲಾ ಕರುಳು ಸಂಬಂಧವೇ ಕಡಿದು ಹೋಗುವ ಆತಂಕಕ್ಕೆ ಬಿದ್ದು ಒದ್ದಾಡುತ್ತದೆ.

ಯಡ್ಡಿ ಈ ಹಿಂದೆ ಸಿಎಂ ಆಗಿದ್ದಾಗ ಬನವಾಸಿಯನ್ನು ಸೊರಬದ ಆನವಟ್ಟಿ ಹೋಬಳಿಗೆ ಸೇರಿಸುವ ಮಸಲತ್ತು ನಡೆದಿತ್ತು. ಆದರೆ ಯಡ್ಡಿ ಭಿನ್ನಮತಕ್ಕೆ ಬಲಿಯಾಗಿ ಅಧಿಕಾರ ಕಳಕೊಂಡು ಬಿಜೆಪಿ ಪಾಲಿಗೆ “ಕಾಫಿರ್” ಆಗಿಹೋಗಿದ್ದರು. ಹೀಗಾಗಿ ಬನವಾಸಿಯನ್ನು ಉತ್ತರ ಕನ್ನಡದಿಂದ ಹೊತ್ತೊಯ್ಯುವ ಯಡ್ಡಿ ಮತ್ತವರ ಮಗನೂ ಸಂಸದನೂ ಆಗಿರುವ ಬಸ್‍ಸ್ಟ್ಯಾಂಡ್ ರಾಘುನ ಪ್ಲಾನ್ ಫ್ಲಾಪ್ ಆಗಿತ್ತು. ಈಗ ಮತ್ತೆ ಶಿರಸಿಯ ಬನವಾಸಿ ಮೇಲೆ ಯಡ್ಡಿ ಕುಟುಂಬದ ಕಣ್ಣು ಬಿದ್ದಿದೆ. ಈ ರಹಸ್ಯ ಹುನ್ನಾರದ ಹೂರಣ ಹೊರಬರುತ್ತಲೇ ಬನವಾಸಿ ಭಾಗದ ಜನರು ಕೆರಳಿ ಬೀದಿಗಿಳಿದು ಪ್ರತಿಭಟಿಸುತ್ತಿದ್ದಾರೆ.

ಅಷ್ಟಕ್ಕೂ ಈ ಅಪ್ಪ-ಮಗನಿಗೆ ಉತ್ತರ ಕನ್ನಡ ಸಂಸ್ಕøತಿ-ಸಂಸ್ಕಾರದ ಬನವಾಸಿ ಮತ್ತದರ ಸುತ್ತಲಿನ ಹಳ್ಳಿಗಳನ್ನು ಕಬಳಿಸುವ ಹಠವೇಕೆಂದು ಬಲ್ಲಿರಾ? ಶಿವಮೊಗ್ಗ ಜಿಲ್ಲೆಯನ್ನು ಒಡೆದು ಶಿಕಾರಿಪುರ ಜಿಲ್ಲೆ ರಚನೆ ಮಾಡಿ ರಾಜಕೀಯ ಫಾಯ್ದೆ ಹೊಡೆಯಲು ಯಡ್ಡಿ-ರಾಘು ಸ್ಕೆಚ್ ಹಾಕಿದ್ದಾರೆ. ಆದರೆ ಜಿಲ್ಲೆ ರಚನೆಗೆ ಬೇಕಾದ ಭೌಗೋಳಿಕ ಪ್ರದೇಶ ಮತ್ತು ಜನಸಂಖ್ಯೆಯ ಕೊರತೆಯಿದೆ. ಪಕ್ಕದ ಬನವಾಸಿ ಮತ್ತು ಅದರ ಆಚೀಚೆಯ ಹತ್ತು ಗ್ರಾಮ ಪಂಚಾಯತ್ ಏರಿಯಾ ಸೇರಿಸಿಕೊಂಡರೆ ಏಕ್‍ದಮ್ 50 ಸಾವಿರಕ್ಕಿಂತ ಹೆಚ್ಚು ಜನಸಂಖ್ಯೆಯೂ ಸಿಗುತ್ತದೆ! ಈ ದೂ(ದು)ರಾಲೋಚನೆಯಿಂದ ಬನವಾಸಿ ಸೀಮೆ ಆಪೋಷನಕ್ಕೆ ಯಡ್ಡಿ-ರಾಘು ಸರ್ಕಸ್ ನಡೆಸಿದ್ದಾರೆ.

ಯಡ್ಡಿ ಅಕ್ರಮ ಸರ್ಕಾರದ ಚಕ್ರವರ್ತಿಯಾಗುತ್ತಲೇ ಆತನ ತವರೂರು ಶಿಕಾರಿಪುರಕ್ಕೆ ಭರಪೂರ ಅನುದಾನ ಹರಿದುಬರುತ್ತಿದೆ. ಪಕ್ಕದ ಶಿಕಾರಿಪುರದ ಉದ್ಧಾರಕ್ಕೆ ಯಥೇಚ್ಛವಾಗಿ ಹಣ ಹರಿದು ಬರುತ್ತಿದ್ದರೆ ಉತ್ತರ ಕನ್ನಡಕ್ಕೆ ಅನ್ಯಾಯ-ಅತ್ಯಾಚಾರ ಆಗುತ್ತಿದೆ! ಅನುದಾನ ತರುವುದು ಸಾಯಲಿ, ಜಿಲ್ಲೆ ಬರಡಾಗದಂತೆ ತಡೆಯಬೇಕೆಂಬ ಕನಿಷ್ಟ ಕಾಳಜಿಯೂ ಉತ್ತರ ಕನ್ನಡದ ಹೇತ್ಲಾಂಡಿ ಶಾಸಕ-ಸಂಸದ-ಮಂತ್ರಿಗಳಿಗಿಲ್ಲ. ಲಾಗಾಯ್ತಿನಿಂದ ಉತ್ತರ ಕನ್ನಡದ ಪ್ರಗತಿಗೆ ಅಡ್ಡಗಾಲು ಹಾಕಲಾಗುತ್ತಿದೆ. ಅಂಕೋಲಾ-ಹುಬ್ಬಳ್ಳಿ, ಹಾವೇರಿ-ಶಿರಸಿ ಮತ್ತು ತಾಳಗುಪ್ಪ-ಸಿದ್ಧಾಪುರ ರೈಲು ಮಾರ್ಗ ಹಲವು ವರ್ಷದಿಂದ ಬರೀ ಕನಸಾಗೇ ಕಾಡುತ್ತಿದೆ. ಉತ್ತರ ಕನ್ನಡಕ್ಕೆ ತೀರಾ ಹತ್ತಿರದಲ್ಲಿರುವ ಸಾಗರ ತಾಲ್ಲೂಕಿನ ತಾಳಗುಪ್ಪದಲ್ಲಿ ನಿರ್ಮಾಣ ಮಾಡಲು ಉದ್ದೇಶಿಸಿದ್ದ ರೈಲು ಟರ್ಮಿನಲನ್ನು ಯಡ್ಡಿ ಪರ್ವದಲ್ಲಿ ಶಿವಮೊಗ್ಗಕ್ಕೆ ಸ್ಥಳಾಂತರಿಸುವ ಕಿತಾಪತಿ ನಡೆಯುತ್ತಿದೆ. ತಾಳಗುಪ್ಪ ಜಂಕ್ಷನ್ ಆಗಿದ್ದರೆ ಈ ರೈಲು ಮಾರ್ಗ ಸಿದ್ಧಾಪುರದವರೆಗೆ ವಿಸ್ತರಿಸಲು ಅನುಕೂಲವಾಗುತ್ತಿತ್ತು.

ಈಗ ಅದಕ್ಕೂ ಕಲ್ಲು ಹಾಕಲಾಗುತ್ತಿದೆ. ಜಂಕ್ಷನ್ ಸ್ಥಳಾಂತರಕ್ಕೆ ಸಾಕ್ಷಾತ್ ಸಿಎಂ ಸಾಹೇಬರೇ ಒಪ್ಪಿಗೆ ಕೊಟ್ಟಿದ್ದಾರೆ. ತಾಳಗುಪ್ಪ-ಸಿದ್ಧಾಪುರ ರೈಲು ಮಾರ್ಗಕ್ಕೆಂದು ಅಂದಿನ ರೈಲು ಮಂತ್ರಿ ಸುರೇಶ್ ಪ್ರಭು 320 ಕೋಟಿ ಮಂಜೂರು ಮಾಡುವುದಾಗಿ ಘೋಷಿಸಿದ್ದರು. ಈ ಹಣ ಎಲ್ಲಿ ಹೋಯಿತೆಂದು ಸಂಸದ ಅನಂತ್ಮಾಣಿಗೂ ಗೊತ್ತಾಗಿಲ್ಲ. ಉತ್ತರ ಕನ್ನಡದ ಅಭಿವೃದ್ಧಿಗಾಗೇ ಅವತಾರ ಎತ್ತಿದ್ದೇನೆಂದು ಒಣ ಘರ್ಜನೆ ಮಾಡುವ ಮಾಣಿ ಮೋದಿ ಮಂತ್ರಿಗಿರಿಯಿಂದ ತೆಗೆದುಹಾಕಿದ ಕ್ಷಣದಿಂದಲೇ ಬಿಲ ಸೇರಿಕೊಂಡಿದ್ದಾನೆ. ಬನವಾಸಿ ಅಪಹರಿಸುವ ಸುದ್ಧಿ ಕೇಳಿ ಜನರು ಬೀದಿಗಿಯಲು ಅಣಿಯಾದರೂ ಶಿರಸಿ ಶಾಸಕ ಕಂ ಸ್ಪೀಕರ್ ಕಾಗೇರಿಯಾಗಲಿ, ಬನವಾಸಿಯ ‘ಅನರ್ಹ’ ಶಾಸಕ ಶಿವರಾಮ ಹೆಬ್ಬಾರನಾಗಲಿ, ಶಿರಸಿಯಲ್ಲೇ ಐಷಾರಾಮಿ ಬಂಗಲೆ ಕಟ್ಟಿಕೊಂಡು ವಾಸಿಸುತ್ತಿರುವ ಸ್ವಯಂ ಘೋಷಿತ ದೇಶಭಕ್ತ ಅನಂತ್ಮಾಣಿಯಾಗಲಿ ತುಟಿಪಿಟಿಕ್ ಅಂದಿಲ್ಲ.

ಗುರುವಾರ 10ನೇ ತಾರೀಖಿನಂದು ಬನವಾಸಿ ಮತ್ತು ಸುತ್ತಲಿನ ಹಳ್ಳಿಗರು ಸಹಸ್ರಾರು ಸಂಖ್ಯೆಯಲ್ಲಿ ಮಧುಕೇಶ್ವರ ದೇವಾಲಯದ ಅಂಗಳದಲ್ಲಿ ಜಮೆಯಾಗಿ ಬನವಾಸಿ ಹೈಜಾಕ್ ಮಾಡದಂತೆ ಎಚ್ಚರಿಕೆಯ ರ್ಯಾಲಿ ನಡೆಸಿದ್ದಾರೆ. ಇದನ್ನು ಕಂಡು ಬೆಚ್ಚಿಬಿದ್ದಿರುವ ಅನರ್ಹ ಶಾಸಕ ಹೆಬ್ಬಾರ್ `ಬನವಾಸಿ ಶಿಕಾರಿಪುರಕ್ಕೆ ಸೇರಿಸುವ ಸುದ್ದಿ ಸುಳ್ಳೆಂದು’ ತಿಪ್ಪರಲಾಗ ಹೊಡೆದಿದ್ದಾನೆ. ಉಪಚುನಾವಣೆಯಲ್ಲಿ ಬನವಾಸಿ ಭಾನ್ಗಡಿ ತನಗೆ ದುಬಾರಿ ಆಗಬಾರದೆಂಬ ಭಯವೇ ಹೊರತು ಕ್ಷೇತ್ರದ ಬಗ್ಗೆ ಪ್ರಾಮಾಣಿಕ ಕಾಳಜಿಯೇನಿಲ್ಲ ಈ ರಾಜಕಾರಣಿಗೆ.

ಬನವಾಸಿ ಅಭಿವೃದ್ಧಿ ಪ್ರಾಧಿಕಾರ ರಚನೆಯಾಗಿ ವರ್ಷಗಳು ಉರುಳಿದರೂ ಹೆಬ್ಬಾರ್‍ನ ಅಯೋಗ್ಯತೆಯಿಂದಾಗಿ ಅರ್ಧಕಾಸಿನ ಪ್ರಯೋಜನವಾಗಿಲ್ಲ. ಬನವಾಸಿಯನ್ನು ತಾಲ್ಲೂಕು ಮಾಡಿಯೆಂದು ಜನ ಬೊಬ್ಬೆ ಹೊಡೆಯುತ್ತಿದ್ದರೂ ಶಾಸಕನಾಗಿದ್ದ ಹೆಬ್ಬಾರ್‍ಗೆ ಅಡ್ಡದಾರಿಯಲ್ಲಿ ಮಂತ್ರಿಯಾಗುವುದೇ ಮುಖ್ಯವಾಗಿತ್ತು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಎಐ ಶೃಂಗಸಭೆ ಪ್ರತಿಭಟನೆ | ಆರೋಪಿಗಳ ಬಂಧನ ವೇಳೆ ಭಾರೀ ಹೈಡ್ರಾಮ : ದೆಹಲಿ ಪೊಲೀಸರನ್ನೇ ವಶಕ್ಕೆ ಪಡೆದ ಶಿಮ್ಲಾ ಪೊಲೀಸರು

ದೆಹಲಿಯ ಎಐ ಶೃಂಗಸಭೆಯಲ್ಲಿ ಅರೆಬೆತ್ತಲೆಯಾಗಿ ಪ್ರತಿಭಟಿಸಿದ ಯುವ ಕಾಂಗ್ರೆಸ್‌ ಕಾರ್ಯಕರ್ತರ ಬಂಧನ ವೇಳೆ ಭಾರೀ ಹೈಡ್ರಾಮ ನಡೆದಿದೆ. ಆರೋಪಿಗಳನ್ನು ಬಂಧಿಸಿ ಕರೆತರಲು ಹಿಮಾಚಲ ಪ್ರದೇಶದ ಶಿಮ್ಲಾ ಜಿಲ್ಲೆಗೆ ತೆರಳಿದ್ದ ದೆಹಲಿ ಪೊಲೀಸರನ್ನು ಅಲ್ಲಿನ...

ಉತ್ತರ ಪ್ರದೇಶ| ಪೊಲೀಸರಿಂದ ಬೈಕ್ ಸೀಝ್‌; ಠಾಣೆ ಮುಂದೆ ಬೆಂಕಿ ಹಚ್ಚಿಕೊಂಡ ‘ಗಿಗ್’ ಕಾರ್ಮಿಕ

ಪೊಲೀಸರು ತನ್ನ ಬೈಕ್‌ ವಶಪಡಿಸಿಕೊಂಡ ನಂತರ 32 ವರ್ಷದ ಗಿಗ್ ಕಾರ್ಮಿಕನೊಬ್ಬ ಠಾಣೆಯ ಹೊರಗೆ ಬೆಂಕಿಹಚ್ಚಿಕೊಂಡು ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ಉತ್ತರ ಪ್ರದೇಶದ ಬರೇಲಿಯಲ್ಲಿ ನಡೆದಿದೆ. ಅಕ್ಷಯ್ ಕಶ್ಯಪ್ ಎಂದು ಗುರುತಿಸಲ್ಪಟ್ಟ ಯುವಕನಿಗೆ ದೇಹದ...

ಎಪ್‌ಸ್ಟೀನ್ ಫೈಲ್ಸ್ ನಲ್ಲಿ ಹೆಸರು ಪ್ರಸ್ತಾಪ; ಗೇಟ್ಸ್ ಫೌಂಡೇಶನ್ ಸಿಬ್ಬಂದಿಗೆ ಕ್ಷಮೆಯಾಚಿಸಿದ ಬಿಲ್ ಗೇಟ್ಸ್: ವರದಿ 

ನ್ಯೂಯಾರ್ಕ್: ಅಮೆರಿಕದ ತಂತ್ರಜ್ಞಾನ ಉದ್ಯಮಿ ಬಿಲ್ ಗೇಟ್ಸ್, ಲೈಂಗಿಕ ಅಪರಾಧಿ ಜೆಫ್ರಿ ಎಪ್‌ಸ್ಟೈನ್‌ನೊಂದಿಗಿನ ಹಳೆಯ ಸಂಪರ್ಕಕ್ಕಾಗಿ ಗೇಟ್ಸ್ ಫೌಂಡೇಶನ್ ಸಿಬ್ಬಂದಿಗೆ ಕ್ಷಮೆಯಾಚಿಸಿದ್ದಾರೆ ಎಂದು ವರದಿಯಾಗಿದೆ. ವಾಲ್ ಸ್ಟ್ರೀಟ್ ಜರ್ನಲ್ ವರದಿಯ ಪ್ರಕಾರ, ಫೌಂಡೇಶನ್‌ನ ಟೌನ್...

ಕೆಎಸ್‌ಯು-ಐಯುಎಂಎಲ್ ಪ್ರತಿಭಟನೆಯಲ್ಲಿ ಘರ್ಷಣೆ; ಗಾಯಗೊಂಡ ಕೇರಳ ಆರೋಗ್ಯ ಸಚಿವೆ ವೀಣಾ ಜಾರ್ಜ್

ಕಣ್ಣೂರು ರೈಲ್ವೆ ನಿಲ್ದಾಣದಲ್ಲಿ ಬುಧವಾರ ಪೊಲೀಸರು ಮತ್ತು ಕೇರಳ ವಿದ್ಯಾರ್ಥಿ ಸಂಘ (ಕೆಎಸ್‌ಯು)-ಐಯುಎಂಎಲ್ ಯುವ ಘಟಕದ ಪ್ರತಿಭಟನಾಕಾರರ ನಡುವೆ ನಡೆದ ಘರ್ಷಣೆಯಲ್ಲಿ ಆರೋಗ್ಯ ಸಚಿವೆ ವೀಣಾ ಜಾರ್ಜ್ ಕುತ್ತಿಗೆ ಮತ್ತು ಕೈಗೆ ಗಾಯಗಳಾಗಿದೆ. ಕಾಂಗ್ರೆಸ್-ಕೆಎಸ್‌ಯು...

ಉತ್ತರಾಖಂಡ| ದೇವಸ್ಥಾನದ ಸಮೀಪ ಖಾಲಿ ಜಾಗದಲ್ಲಿ ನಮಾಜ್; ವೃದ್ಧ ಮುಸ್ಲಿಂ ವ್ಯಕ್ತಿಯ ಮೇಲೆ ಹಲ್ಲೆ

ಉತ್ತರಾಖಂಡದ ಜಗತ್ಪುರದ ಅತ್ರಿಯ ದೇವಸ್ಥಾನದ ಮುಂಭಾಗದಲ್ಲಿರುವ ಖಾಲಿ ಜಾಗದಲ್ಲಿ ನಮಾಜ್ ಮಾಡಿದ ನಂತರ ಶಾಹಿದ್ ಎಂದು ಗುರುತಿಸಲಾದ ವೃದ್ಧ ಮುಸ್ಲಿಂ ವ್ಯಕ್ತಿಯ ಮೇಲೆ ಹಲ್ಲೆ ನಡೆಸಿ ಧಾರ್ಮಿಕ ಘೋಷಣೆಗಳನ್ನು ಪಠಿಸುವಂತೆ ಒತ್ತಾಯಿಸಲಾಗಿದೆ ಎಂದು...

ಮುಝಫ್ಫರ್‌ನಗರ ಗಲಭೆ ಪ್ರಕರಣ : 37 ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

ಉತ್ತರ ಪ್ರದೇಶದ ಮುಝಫ್ಫರ್‌ನಗರದ ನ್ಯಾಯಾಲಯ 2013ರ ಕೋಮು ಗಲಭೆಗೆ ಸಂಬಂಧಿಸಿದ ಎಂಟು ಜನರ ಹತ್ಯೆ ಪ್ರಕರಣದಲ್ಲಿ ಸಾಕ್ಷ್ಯಗಳ ಕೊರತೆಯನ್ನು ಉಲ್ಲೇಖಿಸಿ 37 ಆರೋಪಿಗಳನ್ನು ಮಂಗಳವಾರ (ಫೆ.25) ಖುಲಾಸೆಗೊಳಿಸಿದೆ ಎಂದು ವರದಿಯಾಗಿದೆ. ತೀರ್ಪು ಪ್ರಕಟಿಸಿದ ಹೆಚ್ಚುವರಿ...

ಇಸ್ರೇಲ್ ಸಂಸತ್ತಿನಲ್ಲಿ ಭಾಷಣದ ವೇಳೆ ಪ್ರಧಾನಿ ಮೋದಿ ಗಾಝಾ ನರಮೇಧ ಉಲ್ಲೇಖಿಸಲಿ : ಪ್ರಿಯಾಂಕಾ ಗಾಂಧಿ ಆಗ್ರಹ

ಇಸ್ರೇಲ್‌ಗೆ ಭೇಟಿ ನೀಡಿರುವ ಪ್ರಧಾನಿ ನರೇಂದ್ರ ಮೋದಿ, ಅಲ್ಲಿನ ಸಂಸತ್ತಾದ ನೆಸೆಟ್ ಅನ್ನು ಉದ್ದೇಶಿಸಿ ಮಾತನಾಡುವಾಗ ಗಾಝಾ ನರಮೇಧವನ್ನು ಉಲ್ಲೇಖಿಸಿ ನ್ಯಾಯಕ್ಕಾಗಿ ಆಗ್ರಹಿಸಬೇಕು ಎಂದು ಎಐಸಿಸಿ ಕಾರ್ಯದರ್ಶಿ ಹಾಗೂ ವಯನಾಡ್ ಸಂಸದೆ ಪ್ರಿಯಾಂಕಾ...

ಕೇಂದ್ರ ಸಚಿವರ ಸಮ್ಮುಖದಲ್ಲಿ ‘ಮುಸ್ಲಿಂ ವಿರೋಧಿ ಹೇಳಿಕೆ’ ನೀಡಿದ ಹಿಂದುತ್ವವಾದಿ ವ್ಯಕ್ತಿ

ಉತ್ತರಾಖಂಡದಲ್ಲಿ ನಡೆದ ಸಾರ್ವಜನಿಕ ಹಿಂದೂ ಧಾರ್ಮಿಕ ಕಾರ್ಯಕ್ರಮದಲ್ಲಿ, ಕೇಂದ್ರ ಸಚಿವರ ಸಮ್ಮುಖದಲ್ಲಿಯೇ ಹಿಂದುತ್ವವಾದಿ ಮುಖಂಡನೊಬ್ಬ ಮುಸ್ಲಿಮರ ವಿರುದ್ಧ ಪ್ರಚೋದನಕಾರಿ ಹೇಳಿಕೆ ನೀಡಿದ್ದು ರಾಜಕೀಯ ಮತ್ತು ಸಾಮಾಜಿಕ ವಿವಾದಕ್ಕೆ ಕಾರಣವಾಗಿದೆ. ಇದು ಪೊಲೀಸ್ ಕ್ರಮ...

ಎನ್‌ಸಿಇಆರ್‌ಟಿ ಪಠ್ಯಪುಸ್ತಕದ ‘ನ್ಯಾಯಾಂಗದಲ್ಲಿನ ಭ್ರಷ್ಟಾಚಾರ’ ವಿಷಯಕ್ಕೆ ಸುಪ್ರೀಂ ಕೋರ್ಟ್ ತೀವ್ರ ಆಕ್ಷೇಪ

ರಾಷ್ಟ್ರೀಯ ಶೈಕ್ಷಣಿಕ ಸಂಶೋಧನೆ ಮತ್ತು ತರಬೇತಿ ಮಂಡಳಿ (ಎನ್‌ಸಿಇಆರ್‌ಟಿ) ಪ್ರಕಟಿಸಿದ 8ನೇ ತರಗತಿಯ ಹೊಸ ಸಮಾಜ ವಿಜ್ಞಾನ ಪಠ್ಯಪುಸ್ತಕದಲ್ಲಿ "ನ್ಯಾಯಾಂಗದಲ್ಲಿನ ಭ್ರಷ್ಟಾಚಾರ" ಎಂಬ ವಿಷಯ ಉಲ್ಲೇಖಿಸಿರುವುದಕ್ಕೆ ಸುಪ್ರೀಂ ಕೋರ್ಟ್ ಬುಧವಾರ (ಫೆ.25) ತೀವ್ರ...

ಮಧ್ಯಪ್ರದೇಶ: ಡಾ. ಹರಿಸಿಂಗ್ ಗೌರ್ ವಿವಿಯಲ್ಲಿ ಎಬಿವಿಪಿ-ಆರ್‌ಎಸ್‌ಎಸ್‌ ದುಷ್ಕರ್ಮಿಗಳಿಂದ ವಿದ್ಯಾರ್ಥಿಗಳ ಮೇಲೆ ದಾಳಿ, ಜೀವಬೆದರಿಕೆ;  ಎಫ್‌ಐಆರ್ ದಾಖಲು

ಮಧ್ಯಪ್ರದೇಶದ ಸಾಗರ್‌ನಲ್ಲಿರುವ ಡಾ. ಹರಿ ಸಿಂಗ್ ಗೌರ್ ವಿಶ್ವವಿದ್ಯಾಲಯದಲ್ಲಿ ನಡೆದ ಸರಣಿ ಹಿಂಸಾತ್ಮಕ ಘಟನೆಗಳು ಕ್ಯಾಂಪಸ್ ಸುರಕ್ಷತೆಯ ಬಗ್ಗೆ ಗಂಭೀರ ಕಳವಳವನ್ನು ಉಂಟುಮಾಡಿವೆ. ಐದು ದಿನಗಳಲ್ಲಿ ಎಬಿವಿಪಿ-ಆರ್‌ಎಸ್‌ಎಸ್‌ಗೆ ಸಂಬಂಧಿಸಿದ ವ್ಯಕ್ತಿಗಳಿಂದ ಎರಡು ಜೀವ...