Homeಕರ್ನಾಟಕಉತ್ತರ ಕನ್ನಡ: ಬನವಾಸಿ ಮೇಲ್ಯಾಕೆ ಯಡ್ಡಿ ಕುಟುಂಬದ ಕಣ್ಣು!?

ಉತ್ತರ ಕನ್ನಡ: ಬನವಾಸಿ ಮೇಲ್ಯಾಕೆ ಯಡ್ಡಿ ಕುಟುಂಬದ ಕಣ್ಣು!?

`ಆರಂಕುಶವಿಟ್ಟೊಡಂ ನೆನೆವುದೆನ್ನ ಮನಂ ಬನವಾಸಿ ದೇಶಂ' ಎಂದು ಎದೆತುಂಬಿ ಪಂಪ ಮಹಾಕವಿ ಹಾಡಿದ್ದ ಐತಿಹಾಸಿಕ ಮಹತ್ವದ ಬನವಾಸಿಗೆ ಉತ್ತರ ಕನ್ನಡದೊಂದಿಗೆ, ಅದರಲ್ಲೂ ಮಲೆನಾಡಿನ ಸೆರಗಿನ ಶಿರಸಿ ಸೀಮೆಯೊಂದಿಗೆ ಅವಿನಾಭಾವ ಸಂಬಂಧ.

- Advertisement -
- Advertisement -

| ನಹುಷ |

`ಆರಂಕುಶವಿಟ್ಟೊಡಂ ನೆನೆವುದೆನ್ನ ಮನಂ ಬನವಾಸಿ ದೇಶಂ’ ಎಂದು ಎದೆತುಂಬಿ ಪಂಪ ಮಹಾಕವಿ ಹಾಡಿದ್ದ ಐತಿಹಾಸಿಕ ಮಹತ್ವದ ಬನವಾಸಿಗೆ ಉತ್ತರ ಕನ್ನಡದೊಂದಿಗೆ, ಅದರಲ್ಲೂ ಮಲೆನಾಡಿನ ಸೆರಗಿನ ಶಿರಸಿ ಸೀಮೆಯೊಂದಿಗೆ ಅವಿನಾಭಾವ ಸಂಬಂಧ. ಶಿವಮೊಗ್ಗ ಜಿಲ್ಲೆಯ ಸೊರಬ-ಶಿಕಾರಿಪುರ ತಾಲ್ಲೂಕಿನ ಅಂಚಿನಲ್ಲಿರುವ ಕನ್ನಡದ ಈ ಮೊದಲ ರಾಜಧಾನಿ, ಯಡ್ಡಿ ಮುಖ್ಯಮಂತ್ರಿ ಆದಾಗೆಲ್ಲಾ ಕರುಳು ಸಂಬಂಧವೇ ಕಡಿದು ಹೋಗುವ ಆತಂಕಕ್ಕೆ ಬಿದ್ದು ಒದ್ದಾಡುತ್ತದೆ.

ಯಡ್ಡಿ ಈ ಹಿಂದೆ ಸಿಎಂ ಆಗಿದ್ದಾಗ ಬನವಾಸಿಯನ್ನು ಸೊರಬದ ಆನವಟ್ಟಿ ಹೋಬಳಿಗೆ ಸೇರಿಸುವ ಮಸಲತ್ತು ನಡೆದಿತ್ತು. ಆದರೆ ಯಡ್ಡಿ ಭಿನ್ನಮತಕ್ಕೆ ಬಲಿಯಾಗಿ ಅಧಿಕಾರ ಕಳಕೊಂಡು ಬಿಜೆಪಿ ಪಾಲಿಗೆ “ಕಾಫಿರ್” ಆಗಿಹೋಗಿದ್ದರು. ಹೀಗಾಗಿ ಬನವಾಸಿಯನ್ನು ಉತ್ತರ ಕನ್ನಡದಿಂದ ಹೊತ್ತೊಯ್ಯುವ ಯಡ್ಡಿ ಮತ್ತವರ ಮಗನೂ ಸಂಸದನೂ ಆಗಿರುವ ಬಸ್‍ಸ್ಟ್ಯಾಂಡ್ ರಾಘುನ ಪ್ಲಾನ್ ಫ್ಲಾಪ್ ಆಗಿತ್ತು. ಈಗ ಮತ್ತೆ ಶಿರಸಿಯ ಬನವಾಸಿ ಮೇಲೆ ಯಡ್ಡಿ ಕುಟುಂಬದ ಕಣ್ಣು ಬಿದ್ದಿದೆ. ಈ ರಹಸ್ಯ ಹುನ್ನಾರದ ಹೂರಣ ಹೊರಬರುತ್ತಲೇ ಬನವಾಸಿ ಭಾಗದ ಜನರು ಕೆರಳಿ ಬೀದಿಗಿಳಿದು ಪ್ರತಿಭಟಿಸುತ್ತಿದ್ದಾರೆ.

ಅಷ್ಟಕ್ಕೂ ಈ ಅಪ್ಪ-ಮಗನಿಗೆ ಉತ್ತರ ಕನ್ನಡ ಸಂಸ್ಕøತಿ-ಸಂಸ್ಕಾರದ ಬನವಾಸಿ ಮತ್ತದರ ಸುತ್ತಲಿನ ಹಳ್ಳಿಗಳನ್ನು ಕಬಳಿಸುವ ಹಠವೇಕೆಂದು ಬಲ್ಲಿರಾ? ಶಿವಮೊಗ್ಗ ಜಿಲ್ಲೆಯನ್ನು ಒಡೆದು ಶಿಕಾರಿಪುರ ಜಿಲ್ಲೆ ರಚನೆ ಮಾಡಿ ರಾಜಕೀಯ ಫಾಯ್ದೆ ಹೊಡೆಯಲು ಯಡ್ಡಿ-ರಾಘು ಸ್ಕೆಚ್ ಹಾಕಿದ್ದಾರೆ. ಆದರೆ ಜಿಲ್ಲೆ ರಚನೆಗೆ ಬೇಕಾದ ಭೌಗೋಳಿಕ ಪ್ರದೇಶ ಮತ್ತು ಜನಸಂಖ್ಯೆಯ ಕೊರತೆಯಿದೆ. ಪಕ್ಕದ ಬನವಾಸಿ ಮತ್ತು ಅದರ ಆಚೀಚೆಯ ಹತ್ತು ಗ್ರಾಮ ಪಂಚಾಯತ್ ಏರಿಯಾ ಸೇರಿಸಿಕೊಂಡರೆ ಏಕ್‍ದಮ್ 50 ಸಾವಿರಕ್ಕಿಂತ ಹೆಚ್ಚು ಜನಸಂಖ್ಯೆಯೂ ಸಿಗುತ್ತದೆ! ಈ ದೂ(ದು)ರಾಲೋಚನೆಯಿಂದ ಬನವಾಸಿ ಸೀಮೆ ಆಪೋಷನಕ್ಕೆ ಯಡ್ಡಿ-ರಾಘು ಸರ್ಕಸ್ ನಡೆಸಿದ್ದಾರೆ.

ಯಡ್ಡಿ ಅಕ್ರಮ ಸರ್ಕಾರದ ಚಕ್ರವರ್ತಿಯಾಗುತ್ತಲೇ ಆತನ ತವರೂರು ಶಿಕಾರಿಪುರಕ್ಕೆ ಭರಪೂರ ಅನುದಾನ ಹರಿದುಬರುತ್ತಿದೆ. ಪಕ್ಕದ ಶಿಕಾರಿಪುರದ ಉದ್ಧಾರಕ್ಕೆ ಯಥೇಚ್ಛವಾಗಿ ಹಣ ಹರಿದು ಬರುತ್ತಿದ್ದರೆ ಉತ್ತರ ಕನ್ನಡಕ್ಕೆ ಅನ್ಯಾಯ-ಅತ್ಯಾಚಾರ ಆಗುತ್ತಿದೆ! ಅನುದಾನ ತರುವುದು ಸಾಯಲಿ, ಜಿಲ್ಲೆ ಬರಡಾಗದಂತೆ ತಡೆಯಬೇಕೆಂಬ ಕನಿಷ್ಟ ಕಾಳಜಿಯೂ ಉತ್ತರ ಕನ್ನಡದ ಹೇತ್ಲಾಂಡಿ ಶಾಸಕ-ಸಂಸದ-ಮಂತ್ರಿಗಳಿಗಿಲ್ಲ. ಲಾಗಾಯ್ತಿನಿಂದ ಉತ್ತರ ಕನ್ನಡದ ಪ್ರಗತಿಗೆ ಅಡ್ಡಗಾಲು ಹಾಕಲಾಗುತ್ತಿದೆ. ಅಂಕೋಲಾ-ಹುಬ್ಬಳ್ಳಿ, ಹಾವೇರಿ-ಶಿರಸಿ ಮತ್ತು ತಾಳಗುಪ್ಪ-ಸಿದ್ಧಾಪುರ ರೈಲು ಮಾರ್ಗ ಹಲವು ವರ್ಷದಿಂದ ಬರೀ ಕನಸಾಗೇ ಕಾಡುತ್ತಿದೆ. ಉತ್ತರ ಕನ್ನಡಕ್ಕೆ ತೀರಾ ಹತ್ತಿರದಲ್ಲಿರುವ ಸಾಗರ ತಾಲ್ಲೂಕಿನ ತಾಳಗುಪ್ಪದಲ್ಲಿ ನಿರ್ಮಾಣ ಮಾಡಲು ಉದ್ದೇಶಿಸಿದ್ದ ರೈಲು ಟರ್ಮಿನಲನ್ನು ಯಡ್ಡಿ ಪರ್ವದಲ್ಲಿ ಶಿವಮೊಗ್ಗಕ್ಕೆ ಸ್ಥಳಾಂತರಿಸುವ ಕಿತಾಪತಿ ನಡೆಯುತ್ತಿದೆ. ತಾಳಗುಪ್ಪ ಜಂಕ್ಷನ್ ಆಗಿದ್ದರೆ ಈ ರೈಲು ಮಾರ್ಗ ಸಿದ್ಧಾಪುರದವರೆಗೆ ವಿಸ್ತರಿಸಲು ಅನುಕೂಲವಾಗುತ್ತಿತ್ತು.

ಈಗ ಅದಕ್ಕೂ ಕಲ್ಲು ಹಾಕಲಾಗುತ್ತಿದೆ. ಜಂಕ್ಷನ್ ಸ್ಥಳಾಂತರಕ್ಕೆ ಸಾಕ್ಷಾತ್ ಸಿಎಂ ಸಾಹೇಬರೇ ಒಪ್ಪಿಗೆ ಕೊಟ್ಟಿದ್ದಾರೆ. ತಾಳಗುಪ್ಪ-ಸಿದ್ಧಾಪುರ ರೈಲು ಮಾರ್ಗಕ್ಕೆಂದು ಅಂದಿನ ರೈಲು ಮಂತ್ರಿ ಸುರೇಶ್ ಪ್ರಭು 320 ಕೋಟಿ ಮಂಜೂರು ಮಾಡುವುದಾಗಿ ಘೋಷಿಸಿದ್ದರು. ಈ ಹಣ ಎಲ್ಲಿ ಹೋಯಿತೆಂದು ಸಂಸದ ಅನಂತ್ಮಾಣಿಗೂ ಗೊತ್ತಾಗಿಲ್ಲ. ಉತ್ತರ ಕನ್ನಡದ ಅಭಿವೃದ್ಧಿಗಾಗೇ ಅವತಾರ ಎತ್ತಿದ್ದೇನೆಂದು ಒಣ ಘರ್ಜನೆ ಮಾಡುವ ಮಾಣಿ ಮೋದಿ ಮಂತ್ರಿಗಿರಿಯಿಂದ ತೆಗೆದುಹಾಕಿದ ಕ್ಷಣದಿಂದಲೇ ಬಿಲ ಸೇರಿಕೊಂಡಿದ್ದಾನೆ. ಬನವಾಸಿ ಅಪಹರಿಸುವ ಸುದ್ಧಿ ಕೇಳಿ ಜನರು ಬೀದಿಗಿಯಲು ಅಣಿಯಾದರೂ ಶಿರಸಿ ಶಾಸಕ ಕಂ ಸ್ಪೀಕರ್ ಕಾಗೇರಿಯಾಗಲಿ, ಬನವಾಸಿಯ ‘ಅನರ್ಹ’ ಶಾಸಕ ಶಿವರಾಮ ಹೆಬ್ಬಾರನಾಗಲಿ, ಶಿರಸಿಯಲ್ಲೇ ಐಷಾರಾಮಿ ಬಂಗಲೆ ಕಟ್ಟಿಕೊಂಡು ವಾಸಿಸುತ್ತಿರುವ ಸ್ವಯಂ ಘೋಷಿತ ದೇಶಭಕ್ತ ಅನಂತ್ಮಾಣಿಯಾಗಲಿ ತುಟಿಪಿಟಿಕ್ ಅಂದಿಲ್ಲ.

ಗುರುವಾರ 10ನೇ ತಾರೀಖಿನಂದು ಬನವಾಸಿ ಮತ್ತು ಸುತ್ತಲಿನ ಹಳ್ಳಿಗರು ಸಹಸ್ರಾರು ಸಂಖ್ಯೆಯಲ್ಲಿ ಮಧುಕೇಶ್ವರ ದೇವಾಲಯದ ಅಂಗಳದಲ್ಲಿ ಜಮೆಯಾಗಿ ಬನವಾಸಿ ಹೈಜಾಕ್ ಮಾಡದಂತೆ ಎಚ್ಚರಿಕೆಯ ರ್ಯಾಲಿ ನಡೆಸಿದ್ದಾರೆ. ಇದನ್ನು ಕಂಡು ಬೆಚ್ಚಿಬಿದ್ದಿರುವ ಅನರ್ಹ ಶಾಸಕ ಹೆಬ್ಬಾರ್ `ಬನವಾಸಿ ಶಿಕಾರಿಪುರಕ್ಕೆ ಸೇರಿಸುವ ಸುದ್ದಿ ಸುಳ್ಳೆಂದು’ ತಿಪ್ಪರಲಾಗ ಹೊಡೆದಿದ್ದಾನೆ. ಉಪಚುನಾವಣೆಯಲ್ಲಿ ಬನವಾಸಿ ಭಾನ್ಗಡಿ ತನಗೆ ದುಬಾರಿ ಆಗಬಾರದೆಂಬ ಭಯವೇ ಹೊರತು ಕ್ಷೇತ್ರದ ಬಗ್ಗೆ ಪ್ರಾಮಾಣಿಕ ಕಾಳಜಿಯೇನಿಲ್ಲ ಈ ರಾಜಕಾರಣಿಗೆ.

ಬನವಾಸಿ ಅಭಿವೃದ್ಧಿ ಪ್ರಾಧಿಕಾರ ರಚನೆಯಾಗಿ ವರ್ಷಗಳು ಉರುಳಿದರೂ ಹೆಬ್ಬಾರ್‍ನ ಅಯೋಗ್ಯತೆಯಿಂದಾಗಿ ಅರ್ಧಕಾಸಿನ ಪ್ರಯೋಜನವಾಗಿಲ್ಲ. ಬನವಾಸಿಯನ್ನು ತಾಲ್ಲೂಕು ಮಾಡಿಯೆಂದು ಜನ ಬೊಬ್ಬೆ ಹೊಡೆಯುತ್ತಿದ್ದರೂ ಶಾಸಕನಾಗಿದ್ದ ಹೆಬ್ಬಾರ್‍ಗೆ ಅಡ್ಡದಾರಿಯಲ್ಲಿ ಮಂತ್ರಿಯಾಗುವುದೇ ಮುಖ್ಯವಾಗಿತ್ತು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇವಲ ಪ್ರತಿಭಟಿಸಿದ್ದಕ್ಕೆ ವಿದ್ಯಾರ್ಥಿಗಳು ಜೈಲುಪಾಲು; ಗಂಗೆಯ ದೋಣಿಯಲ್ಲಿ ಬಿರಿಯಾನಿ ತಿಂದವರಿಗೂ ಸಿಗುತ್ತಿಲ್ಲ ಜಾಮೀನು : ನ್ಯಾಯಮೂರ್ತಿ ಉಜ್ಜಲ್ ಭುಯಾನ್ ಕಳವಳ

ಭಾರತದಲ್ಲಿ ಭಿನ್ನಾಭಿಪ್ರಾಯಗಳನ್ನು ಗೌರವಿಸುವ ಮತ್ತು ಅವುಗಳಿಗೆ ಅವಕಾಶ ನೀಡುವ ಸಾರ್ವಜನಿಕ ಸ್ಥಳಗಳು ಎಷ್ಟು ಕಡಿಮೆಯಾಗುತ್ತಿವೆ ಎಂದರೆ, ತಮ್ಮ ಹಕ್ಕುಗಳಿಗಾಗಿ ಪ್ರತಿಭಟಿಸುವ ವಿದ್ಯಾರ್ಥಿಗಳನ್ನು ಬಂಧಿಸಿ ಅವರಿಗೆ ಜಾಮೀನು ನಿರಾಕರಿಸಲಾಗುತ್ತಿದೆ ಎಂದು ಸುಪ್ರೀಂ ಕೋರ್ಟ್‌ನ ನ್ಯಾಯಮೂರ್ತಿ...

ಪ.ಬಂಗಾಳ: ನೂತನ ‘ಗೂಂಡಾ ಕಾಯ್ದೆ’ ಅಡಿ NEET ಪ್ರತಿಭಟನೆಯಲ್ಲಿ ಭಾಗಿಯಾದ 10 ಮುಸ್ಲಿಂ ಯುವಕರು ಸೇರಿದಂತೆ 11 ಜನರ ಬಂಧನ 

ಕೋಲ್ಕತ್ತಾ: ಕೇಂದ್ರದ ನರೇಂದ್ರ ಮೋದಿ ಸರ್ಕಾರದ ಶಿಕ್ಷಣ ಕ್ಷೇತ್ರದ ವೈಫಲ್ಯಗಳು ಹಾಗೂ ನೀಟ್-ಯುಜಿ (NEET-UG) ಪ್ರಶ್ನೆ ಪತ್ರಿಕೆ ಸೋರಿಕೆ ಹಗರಣವನ್ನು ಖಂಡಿಸಿ ಶುಕ್ರವಾರ ಕೋಲ್ಕತ್ತಾದಲ್ಲಿ ನಡೆದ ಬೃಹತ್ ವಿದ್ಯಾರ್ಥಿ ಪ್ರತಿಭಟನೆಯು ತೀವ್ರ ರಾಜಕೀಯ...

ಪೊಲೀಸರ ಅನುಮತಿ ಪಡೆದಿದ್ದರೂ ನೀಟ್ ಪ್ರತಿಭಟನೆಗೆ ವಾಟ್ಸಾಪ್ ಗ್ರೂಪ್ ರಚಿಸಿದ್ದಕ್ಕಾಗಿ ಅಸ್ಸಾಂನಲ್ಲಿ ಮೂವರು ಮುಸ್ಲಿಂ ವಿದ್ಯಾರ್ಥಿಗಳ ಬಂಧನ

ಅಸ್ಸಾಂನಲ್ಲಿ ಬಿಜೆಪಿ ಸರ್ಕಾರದ ಕೋಮುವಾದಿ ಧೋರಣೆ ಮತ್ತು ಪ್ರಜಾಸತ್ತಾತ್ಮಕ ಹಕ್ಕುಗಳ ದಮನದ ದಾರುಣ ಚಿತ್ರಣವೊಂದು ಮತ್ತೆ ಮುನ್ನೆಲೆಗೆ ಬಂದಿದೆ. ದೇಶಾದ್ಯಂತ ಸದ್ದು ಮಾಡಿದ್ದ 'ನೀಟ್' (NEET) ಅಕ್ರಮಗಳ ವಿರುದ್ಧ ಧ್ವನಿ ಎತ್ತಲು ಮತ್ತು...

‘ವಿದ್ಯಾರ್ಥಿಗಳ ಮೇಲಿನ ವಿಕೃತ ದಾಳಿಗೆ ನಿಮ್ಮ ಸಮ್ಮತಿ ಇತ್ತೇ?’: ಪತ್ರದ ಮೂಲಕ ಅಮಿತ್ ಶಾಗೆ ರಾಹುಲ್ ಗಾಂಧಿ ಪ್ರಶ್ನೆ

ನವದೆಹಲಿ: ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಕಾರಣವಾದ ದೇಶವ್ಯಾಪಿ ವಿದ್ಯಾರ್ಥಿ ಆಂದೋಲನದ ವೇಳೆ ದೆಹಲಿ ಪೊಲೀಸರು ನಡೆಸಿದ ಭೀಕರ ದೌರ್ಜನ್ಯ ಮತ್ತು ಮಿತಿಮೀರಿದ ಬಲಪ್ರಯೋಗದ ವಿರುದ್ಧ ಲೋಕಸಭೆಯ ವಿರೋಧ...

‘ಮಗ ಬೇಗನೆ ಮನೆಗೆ ಬರಲಿ..’; ಭಾವುಕರಾದ ಅಭಿಜೀತ್ ದಿಪ್ಕೆ ಅವರ ಪೋಷಕರು

ಸಿಜೆಪಿ ಸಂಸ್ಥಾಪಕ ಅಭಿಜೀತ್ ದಿಪ್ಕೆ ನೇತೃತ್ವದಲ್ಲಿ ನಡೆದ ಅಸಾಧಾರಣ ಹೋರಾಟವು ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜಿನಾಮೆಯಲ್ಲಿ ಅಂತಿಮವಾಗಿದೆ. ಈ ಕುರಿತು ಮಾಧ್ಯಮಗಳಿಗೆ ಪ್ರತಿಕ್ರಿಯಿಸಿರುವ ಅವರ ಪೋಷಕರು ಭಾವುಕರಾಗಿದ್ದಾರೆ. "ಮಗ ಬೇಗನೆ ಮನೆಗೆ...

ಧರ್ಮೇಂದ್ರ ಪ್ರಧಾನ್ ರಾಜೀನಾಮೆ: ಕಾಕ್ರೋಚ್‌ಗಳಿಗೆ ಅಭಿನಂದಿಸಿದ ಸೋನಮ್ ವಾಂಗ್‌ಚುಕ್ – ಪ್ರಕಾಶ್‌ ರಾಜ್

ದೇಶದ ಯುವಜನರ ಹಲವು ದಿನಗಳ ಹೋರಾಟದ ಬಳಿಕ ಮೋದಿ ನೇತೃತ್ವದ ಕೇಂದ್ರ ಸರ್ಕಾರ ವಿದ್ಯಾರ್ಥಿಗಳ ಮುಂದೆ ಮಂಡಿಯೂರಿದೆ; ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡಿದ್ದಾರೆ. ಈ ಗೆಲುವಿಗೆ ಕಾಕ್ರೋಚ್ ಜನತಾ ಪಕ್ಷದ...

ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಜಿರಳೆಗಳ ಹರ್ಷೋದ್ಗಾರ: ದೆಹಲಿ ಪೊಲೀಸರಿಂದ ಸಾರ್ವಜನಿಕ ಕ್ಷಮೆಯಾಚನೆಗೆ ಆಗ್ರಹ

ದೇಶಾದ್ಯಂತ ನಡೆಯುತ್ತಿರುವ ಸಿಜೆಪಿ ಪ್ರತಿಭಟನೆಗಳ ನಡುವೆ ನೀಟ್ ಪತ್ರಿಕೆ ಸೋರಿಕೆಗೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ರಾಜೀನಾಮೆ ನೀಡಿದ್ದು, ದೆಹಲಿಯ ಜಂತರ್‌ ಮಂತರ್‌ನಲ್ಲಿ ಪ್ರತಿಭಟನೆ ನಡೆಸುತ್ತಿರುವ ಕಾಕ್ರೋಚ್‌ ಜನತಾ...

ಕಾಕ್ರೋಚ್‌ಗಳಿಗೆ ಮಣಿದ ಮೋದಿ ಸರ್ಕಾರ; ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್‌ ರಾಜೀನಾಮೆ

ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ನೇತೃತ್ವದಲ್ಲಿ ದೇಶಾದ್ಯಂತ ನಡೆಯುತ್ತಿರುವ ಪ್ರತಿಭಟನೆಗಳ ಮಧ್ಯೆ, ನೀಟ್ ಅಕ್ರಮಗಳಿಗೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ಇಂದು (ಜುಲೈ 25) ಪ್ರಧಾನ ಮಂತ್ರಿಗಳಿಗೆ ತಮ್ಮ...

ಅಭಿಜೀತ್ ದಿಪ್ಕೆಗೆ ಟೈಫಾಯ್ಡ್; ಪ್ರತಿಭಟನೆ ಮುಂದುವರಿಯಲಿದೆ ಎಂದ ಸಿಜೆಪಿ ಸಂಸ್ಥಾಪಕ

ತನಗೆ ಟೈಫಾಯ್ಡ್ ಇರುವುದು ಪತ್ತೆಯಾಗಿದೆ ಎಂದು ಕಾಕ್ರೋಚ್‌ ಜನತಾ ಪಕ್ಷದ (ಸಿಜೆಪಿ) ಸಂಸ್ಥಾಪಕ ಅಭಿಜೀತ್ ದಿಪ್ಕೆ ಅವರು ಇಂದು ಹೇಳಿದ್ದಾರೆ. "ನನ್ನ ಅನಾರೋಗ್ಯವು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ...

ಮುಸ್ಲಿಮರ ಬಗ್ಗೆ ನಿಂದನಾತ್ಮಕ, ಪ್ರಚೋದನಕಾರಿ ಹೇಳಿಕೆ : ಸಿ.ಟಿ ರವಿ ವಿರುದ್ಧ FIR

ಮುಸ್ಲಿಮರ ವಿರುದ್ಧ ನಿಂದನಾತ್ಮಕ ಹಾಗೂ ಪ್ರಚೋದನಕಾರಿ ಹೇಳಿಕೆ ನೀಡಿದ ವಿಧಾನಪರಿಷತ್ ಸದಸ್ಯ ಸಿ.ಟಿ ರವಿ ವಿರುದ್ಧ ಚಿಕ್ಕಮಗಳೂರು ನಗರ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ. ನಗರದ ಜಾಮಿಯಾ ಮಸೀದಿಯ ಅಧ್ಯಕ್ಷ ಮುದಸ್ಸಿರ್ ಪಾಷಾ ಅವರು...