Homeಕರ್ನಾಟಕಉತ್ತರ ಕನ್ನಡ: ಬನವಾಸಿ ಮೇಲ್ಯಾಕೆ ಯಡ್ಡಿ ಕುಟುಂಬದ ಕಣ್ಣು!?

ಉತ್ತರ ಕನ್ನಡ: ಬನವಾಸಿ ಮೇಲ್ಯಾಕೆ ಯಡ್ಡಿ ಕುಟುಂಬದ ಕಣ್ಣು!?

`ಆರಂಕುಶವಿಟ್ಟೊಡಂ ನೆನೆವುದೆನ್ನ ಮನಂ ಬನವಾಸಿ ದೇಶಂ' ಎಂದು ಎದೆತುಂಬಿ ಪಂಪ ಮಹಾಕವಿ ಹಾಡಿದ್ದ ಐತಿಹಾಸಿಕ ಮಹತ್ವದ ಬನವಾಸಿಗೆ ಉತ್ತರ ಕನ್ನಡದೊಂದಿಗೆ, ಅದರಲ್ಲೂ ಮಲೆನಾಡಿನ ಸೆರಗಿನ ಶಿರಸಿ ಸೀಮೆಯೊಂದಿಗೆ ಅವಿನಾಭಾವ ಸಂಬಂಧ.

- Advertisement -
- Advertisement -

| ನಹುಷ |

`ಆರಂಕುಶವಿಟ್ಟೊಡಂ ನೆನೆವುದೆನ್ನ ಮನಂ ಬನವಾಸಿ ದೇಶಂ’ ಎಂದು ಎದೆತುಂಬಿ ಪಂಪ ಮಹಾಕವಿ ಹಾಡಿದ್ದ ಐತಿಹಾಸಿಕ ಮಹತ್ವದ ಬನವಾಸಿಗೆ ಉತ್ತರ ಕನ್ನಡದೊಂದಿಗೆ, ಅದರಲ್ಲೂ ಮಲೆನಾಡಿನ ಸೆರಗಿನ ಶಿರಸಿ ಸೀಮೆಯೊಂದಿಗೆ ಅವಿನಾಭಾವ ಸಂಬಂಧ. ಶಿವಮೊಗ್ಗ ಜಿಲ್ಲೆಯ ಸೊರಬ-ಶಿಕಾರಿಪುರ ತಾಲ್ಲೂಕಿನ ಅಂಚಿನಲ್ಲಿರುವ ಕನ್ನಡದ ಈ ಮೊದಲ ರಾಜಧಾನಿ, ಯಡ್ಡಿ ಮುಖ್ಯಮಂತ್ರಿ ಆದಾಗೆಲ್ಲಾ ಕರುಳು ಸಂಬಂಧವೇ ಕಡಿದು ಹೋಗುವ ಆತಂಕಕ್ಕೆ ಬಿದ್ದು ಒದ್ದಾಡುತ್ತದೆ.

ಯಡ್ಡಿ ಈ ಹಿಂದೆ ಸಿಎಂ ಆಗಿದ್ದಾಗ ಬನವಾಸಿಯನ್ನು ಸೊರಬದ ಆನವಟ್ಟಿ ಹೋಬಳಿಗೆ ಸೇರಿಸುವ ಮಸಲತ್ತು ನಡೆದಿತ್ತು. ಆದರೆ ಯಡ್ಡಿ ಭಿನ್ನಮತಕ್ಕೆ ಬಲಿಯಾಗಿ ಅಧಿಕಾರ ಕಳಕೊಂಡು ಬಿಜೆಪಿ ಪಾಲಿಗೆ “ಕಾಫಿರ್” ಆಗಿಹೋಗಿದ್ದರು. ಹೀಗಾಗಿ ಬನವಾಸಿಯನ್ನು ಉತ್ತರ ಕನ್ನಡದಿಂದ ಹೊತ್ತೊಯ್ಯುವ ಯಡ್ಡಿ ಮತ್ತವರ ಮಗನೂ ಸಂಸದನೂ ಆಗಿರುವ ಬಸ್‍ಸ್ಟ್ಯಾಂಡ್ ರಾಘುನ ಪ್ಲಾನ್ ಫ್ಲಾಪ್ ಆಗಿತ್ತು. ಈಗ ಮತ್ತೆ ಶಿರಸಿಯ ಬನವಾಸಿ ಮೇಲೆ ಯಡ್ಡಿ ಕುಟುಂಬದ ಕಣ್ಣು ಬಿದ್ದಿದೆ. ಈ ರಹಸ್ಯ ಹುನ್ನಾರದ ಹೂರಣ ಹೊರಬರುತ್ತಲೇ ಬನವಾಸಿ ಭಾಗದ ಜನರು ಕೆರಳಿ ಬೀದಿಗಿಳಿದು ಪ್ರತಿಭಟಿಸುತ್ತಿದ್ದಾರೆ.

ಅಷ್ಟಕ್ಕೂ ಈ ಅಪ್ಪ-ಮಗನಿಗೆ ಉತ್ತರ ಕನ್ನಡ ಸಂಸ್ಕøತಿ-ಸಂಸ್ಕಾರದ ಬನವಾಸಿ ಮತ್ತದರ ಸುತ್ತಲಿನ ಹಳ್ಳಿಗಳನ್ನು ಕಬಳಿಸುವ ಹಠವೇಕೆಂದು ಬಲ್ಲಿರಾ? ಶಿವಮೊಗ್ಗ ಜಿಲ್ಲೆಯನ್ನು ಒಡೆದು ಶಿಕಾರಿಪುರ ಜಿಲ್ಲೆ ರಚನೆ ಮಾಡಿ ರಾಜಕೀಯ ಫಾಯ್ದೆ ಹೊಡೆಯಲು ಯಡ್ಡಿ-ರಾಘು ಸ್ಕೆಚ್ ಹಾಕಿದ್ದಾರೆ. ಆದರೆ ಜಿಲ್ಲೆ ರಚನೆಗೆ ಬೇಕಾದ ಭೌಗೋಳಿಕ ಪ್ರದೇಶ ಮತ್ತು ಜನಸಂಖ್ಯೆಯ ಕೊರತೆಯಿದೆ. ಪಕ್ಕದ ಬನವಾಸಿ ಮತ್ತು ಅದರ ಆಚೀಚೆಯ ಹತ್ತು ಗ್ರಾಮ ಪಂಚಾಯತ್ ಏರಿಯಾ ಸೇರಿಸಿಕೊಂಡರೆ ಏಕ್‍ದಮ್ 50 ಸಾವಿರಕ್ಕಿಂತ ಹೆಚ್ಚು ಜನಸಂಖ್ಯೆಯೂ ಸಿಗುತ್ತದೆ! ಈ ದೂ(ದು)ರಾಲೋಚನೆಯಿಂದ ಬನವಾಸಿ ಸೀಮೆ ಆಪೋಷನಕ್ಕೆ ಯಡ್ಡಿ-ರಾಘು ಸರ್ಕಸ್ ನಡೆಸಿದ್ದಾರೆ.

ಯಡ್ಡಿ ಅಕ್ರಮ ಸರ್ಕಾರದ ಚಕ್ರವರ್ತಿಯಾಗುತ್ತಲೇ ಆತನ ತವರೂರು ಶಿಕಾರಿಪುರಕ್ಕೆ ಭರಪೂರ ಅನುದಾನ ಹರಿದುಬರುತ್ತಿದೆ. ಪಕ್ಕದ ಶಿಕಾರಿಪುರದ ಉದ್ಧಾರಕ್ಕೆ ಯಥೇಚ್ಛವಾಗಿ ಹಣ ಹರಿದು ಬರುತ್ತಿದ್ದರೆ ಉತ್ತರ ಕನ್ನಡಕ್ಕೆ ಅನ್ಯಾಯ-ಅತ್ಯಾಚಾರ ಆಗುತ್ತಿದೆ! ಅನುದಾನ ತರುವುದು ಸಾಯಲಿ, ಜಿಲ್ಲೆ ಬರಡಾಗದಂತೆ ತಡೆಯಬೇಕೆಂಬ ಕನಿಷ್ಟ ಕಾಳಜಿಯೂ ಉತ್ತರ ಕನ್ನಡದ ಹೇತ್ಲಾಂಡಿ ಶಾಸಕ-ಸಂಸದ-ಮಂತ್ರಿಗಳಿಗಿಲ್ಲ. ಲಾಗಾಯ್ತಿನಿಂದ ಉತ್ತರ ಕನ್ನಡದ ಪ್ರಗತಿಗೆ ಅಡ್ಡಗಾಲು ಹಾಕಲಾಗುತ್ತಿದೆ. ಅಂಕೋಲಾ-ಹುಬ್ಬಳ್ಳಿ, ಹಾವೇರಿ-ಶಿರಸಿ ಮತ್ತು ತಾಳಗುಪ್ಪ-ಸಿದ್ಧಾಪುರ ರೈಲು ಮಾರ್ಗ ಹಲವು ವರ್ಷದಿಂದ ಬರೀ ಕನಸಾಗೇ ಕಾಡುತ್ತಿದೆ. ಉತ್ತರ ಕನ್ನಡಕ್ಕೆ ತೀರಾ ಹತ್ತಿರದಲ್ಲಿರುವ ಸಾಗರ ತಾಲ್ಲೂಕಿನ ತಾಳಗುಪ್ಪದಲ್ಲಿ ನಿರ್ಮಾಣ ಮಾಡಲು ಉದ್ದೇಶಿಸಿದ್ದ ರೈಲು ಟರ್ಮಿನಲನ್ನು ಯಡ್ಡಿ ಪರ್ವದಲ್ಲಿ ಶಿವಮೊಗ್ಗಕ್ಕೆ ಸ್ಥಳಾಂತರಿಸುವ ಕಿತಾಪತಿ ನಡೆಯುತ್ತಿದೆ. ತಾಳಗುಪ್ಪ ಜಂಕ್ಷನ್ ಆಗಿದ್ದರೆ ಈ ರೈಲು ಮಾರ್ಗ ಸಿದ್ಧಾಪುರದವರೆಗೆ ವಿಸ್ತರಿಸಲು ಅನುಕೂಲವಾಗುತ್ತಿತ್ತು.

ಈಗ ಅದಕ್ಕೂ ಕಲ್ಲು ಹಾಕಲಾಗುತ್ತಿದೆ. ಜಂಕ್ಷನ್ ಸ್ಥಳಾಂತರಕ್ಕೆ ಸಾಕ್ಷಾತ್ ಸಿಎಂ ಸಾಹೇಬರೇ ಒಪ್ಪಿಗೆ ಕೊಟ್ಟಿದ್ದಾರೆ. ತಾಳಗುಪ್ಪ-ಸಿದ್ಧಾಪುರ ರೈಲು ಮಾರ್ಗಕ್ಕೆಂದು ಅಂದಿನ ರೈಲು ಮಂತ್ರಿ ಸುರೇಶ್ ಪ್ರಭು 320 ಕೋಟಿ ಮಂಜೂರು ಮಾಡುವುದಾಗಿ ಘೋಷಿಸಿದ್ದರು. ಈ ಹಣ ಎಲ್ಲಿ ಹೋಯಿತೆಂದು ಸಂಸದ ಅನಂತ್ಮಾಣಿಗೂ ಗೊತ್ತಾಗಿಲ್ಲ. ಉತ್ತರ ಕನ್ನಡದ ಅಭಿವೃದ್ಧಿಗಾಗೇ ಅವತಾರ ಎತ್ತಿದ್ದೇನೆಂದು ಒಣ ಘರ್ಜನೆ ಮಾಡುವ ಮಾಣಿ ಮೋದಿ ಮಂತ್ರಿಗಿರಿಯಿಂದ ತೆಗೆದುಹಾಕಿದ ಕ್ಷಣದಿಂದಲೇ ಬಿಲ ಸೇರಿಕೊಂಡಿದ್ದಾನೆ. ಬನವಾಸಿ ಅಪಹರಿಸುವ ಸುದ್ಧಿ ಕೇಳಿ ಜನರು ಬೀದಿಗಿಯಲು ಅಣಿಯಾದರೂ ಶಿರಸಿ ಶಾಸಕ ಕಂ ಸ್ಪೀಕರ್ ಕಾಗೇರಿಯಾಗಲಿ, ಬನವಾಸಿಯ ‘ಅನರ್ಹ’ ಶಾಸಕ ಶಿವರಾಮ ಹೆಬ್ಬಾರನಾಗಲಿ, ಶಿರಸಿಯಲ್ಲೇ ಐಷಾರಾಮಿ ಬಂಗಲೆ ಕಟ್ಟಿಕೊಂಡು ವಾಸಿಸುತ್ತಿರುವ ಸ್ವಯಂ ಘೋಷಿತ ದೇಶಭಕ್ತ ಅನಂತ್ಮಾಣಿಯಾಗಲಿ ತುಟಿಪಿಟಿಕ್ ಅಂದಿಲ್ಲ.

ಗುರುವಾರ 10ನೇ ತಾರೀಖಿನಂದು ಬನವಾಸಿ ಮತ್ತು ಸುತ್ತಲಿನ ಹಳ್ಳಿಗರು ಸಹಸ್ರಾರು ಸಂಖ್ಯೆಯಲ್ಲಿ ಮಧುಕೇಶ್ವರ ದೇವಾಲಯದ ಅಂಗಳದಲ್ಲಿ ಜಮೆಯಾಗಿ ಬನವಾಸಿ ಹೈಜಾಕ್ ಮಾಡದಂತೆ ಎಚ್ಚರಿಕೆಯ ರ್ಯಾಲಿ ನಡೆಸಿದ್ದಾರೆ. ಇದನ್ನು ಕಂಡು ಬೆಚ್ಚಿಬಿದ್ದಿರುವ ಅನರ್ಹ ಶಾಸಕ ಹೆಬ್ಬಾರ್ `ಬನವಾಸಿ ಶಿಕಾರಿಪುರಕ್ಕೆ ಸೇರಿಸುವ ಸುದ್ದಿ ಸುಳ್ಳೆಂದು’ ತಿಪ್ಪರಲಾಗ ಹೊಡೆದಿದ್ದಾನೆ. ಉಪಚುನಾವಣೆಯಲ್ಲಿ ಬನವಾಸಿ ಭಾನ್ಗಡಿ ತನಗೆ ದುಬಾರಿ ಆಗಬಾರದೆಂಬ ಭಯವೇ ಹೊರತು ಕ್ಷೇತ್ರದ ಬಗ್ಗೆ ಪ್ರಾಮಾಣಿಕ ಕಾಳಜಿಯೇನಿಲ್ಲ ಈ ರಾಜಕಾರಣಿಗೆ.

ಬನವಾಸಿ ಅಭಿವೃದ್ಧಿ ಪ್ರಾಧಿಕಾರ ರಚನೆಯಾಗಿ ವರ್ಷಗಳು ಉರುಳಿದರೂ ಹೆಬ್ಬಾರ್‍ನ ಅಯೋಗ್ಯತೆಯಿಂದಾಗಿ ಅರ್ಧಕಾಸಿನ ಪ್ರಯೋಜನವಾಗಿಲ್ಲ. ಬನವಾಸಿಯನ್ನು ತಾಲ್ಲೂಕು ಮಾಡಿಯೆಂದು ಜನ ಬೊಬ್ಬೆ ಹೊಡೆಯುತ್ತಿದ್ದರೂ ಶಾಸಕನಾಗಿದ್ದ ಹೆಬ್ಬಾರ್‍ಗೆ ಅಡ್ಡದಾರಿಯಲ್ಲಿ ಮಂತ್ರಿಯಾಗುವುದೇ ಮುಖ್ಯವಾಗಿತ್ತು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮತದಾನದ ಹಕ್ಕು ಪ್ರಜಾಪ್ರಭುತ್ವದ ಜೀವಾಳ: ತರೀಕೆರೆಯಲ್ಲಿ ಶಾಸಕ G.H ಶ್ರೀನಿವಾಸ್ ಅಭಿಮತ

ರಾಜ್ಯಾದ್ಯಂತ ನಡೆಯುತ್ತಿರುವ ಎಸ್‌ಐಆರ್ (SIR) ವಿರೋಧಿ ಜನಜಾಗೃತಿ ಜಾಥಾದ ನಾಲ್ಕನೇ ದಿನದ ಪಯಣ ಇಂದು ತರೀಕೆರೆಗೆ ತಲುಪಿತು. ಪ್ರಜಾಪ್ರಭುತ್ವದ ಅಡಿಪಾಯವಾಗಿರುವ ಮತದಾನದ ಹಕ್ಕನ್ನು ಉಳಿಸಿಕೊಳ್ಳುವ ನಿಟ್ಟಿನಲ್ಲಿ ಹಮ್ಮಿಕೊಂಡಿರುವ ಈ ಜಾಥಾವನ್ನು, ತರೀಕೆರೆಯ ಜಾಗೃತ...

ಬೆಳಗಾವಿಯ ವಿವಿದೆಡೆ ಎಸ್‌ಐಆರ್‌ ವಿರೋಧಿ ಜನಜಾಗೃತಿ ಜಾಥಾ

ಚುನಾವಣಾ ಆಯೋಗ ಕೈಗೊಂಡಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ವಿರುದ್ಧ ಬೆಳಗಾವಿಯ ವಿವಿಧ ಭಾಗಗಳಲ್ಲಿ ಸೋಮವಾರ (ಜೂ.15) ಜನಜಾಗೃತಿ ಜಾಥಾ ನಡೆಯಿತು. ಬಾಗಲಕೋಟೆಯಿಂದ ಆಗಮಿಸಿದ ಜಾಥಾ ತಂಡವನ್ನು ಯರಗಟ್ಟಿ ಪಟ್ಟಣದಲ್ಲಿ...

ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಯಶಸ್ವಿಯಾದ ಎಸ್‌ಐಆರ್ ವಿರೋಧಿ ಜಾಥಾ; ಜನಪರ ಸಂಘಟನೆಗಳ ಬೆಂಬಲ

ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ವಿರೋಧಿಸಿ ನಡೆಯುತ್ತಿರುವ ರಾಜ್ಯ ಮಟ್ಟದ ಜಾಥಾ ಇಂದು ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಯಶಸ್ವಿಯಾಗಿ ನಡೆಯಿತು. ಜಾಥಾದ ಮೂರನೇ ದಿನವಾದ ಇಂದು ಗೌರಿಬಿದನೂರು ತಾಲ್ಲೂಕಿನ ಕಾದಲವೇಣಿ ಗ್ರಾಮದಿಂದ ಆರಂಭವಾದ...

SIR ಮೂಲಕ ಕೇಂದ್ರ ಸರ್ಕಾರ ಪ್ರಜಾತಂತ್ರ ವ್ಯವಸ್ಥೆಯನ್ನು ನಾಶ ಮಾಡಲು ಹೊರಟಿದೆ: ಮಾಜಿ ಸಚಿವ ಬಿ.ಬಿ.ಲಿಂಗಯ್ಯ ಆಕ್ರೋಶ

ಕೇಂದ್ರದ ಬಿಜೆಪಿ ಸರ್ಕಾರವು ‘SIR’ ಜಾರಿಯ ಮೂಲಕ ಜನರ ಮತದಾನದ ಹಕ್ಕನ್ನು ಕಿತ್ತುಕೊಳ್ಳಲು ಮತ್ತು ಪ್ರಜಾತಂತ್ರ ವ್ಯವಸ್ಥೆಯನ್ನು ಕಗ್ಗೊಲೆ ಮಾಡಲು ಸಂಚು ರೂಪಿಸಿದೆ ಎಂದು ಮಾಜಿ ಸಚಿವ ಬಿ.ಬಿ. ಲಿಂಗಯ್ಯ ತೀವ್ರ ಆಕ್ರೋಶ...

ಖ್ಯಾತ ಪತ್ರಕರ್ತ ಪಿ. ಲಂಕೇಶ್ ಪತ್ನಿ ಇಂದಿರಾ ಲಂಕೇಶ್ ಇನ್ನಿಲ್ಲ

ಕನ್ನಡ ಪತ್ರಿಕೋದ್ಯಮದ ಧ್ರುವತಾರೆ, ದಿವಂಗತ ಪಿ. ಲಂಕೇಶ್ ಅವರ ಧರ್ಮಪತ್ನಿ ಹಾಗೂ ದಿವಂಗತ ಪತ್ರಕರ್ತೆ ಗೌರಿ ಲಂಕೇಶ್ ಅವರ ತಾಯಿಯಾದ ಇಂದಿರಾ ಲಂಕೇಶ್ (84) ಅವರು ಸೋಮವಾರ ಬೆಳಗ್ಗೆ ನಿಧನರಾಗಿದ್ದಾರೆ. ವಯೋಸಹಜ ಅನಾರೋಗ್ಯದಿಂದ ಬಳಲುತ್ತಿದ್ದ...

ಬಾಗಲಕೋಟೆಯ ವಿವಿಧ ಪ್ರದೇಶಗಳಲ್ಲಿ ಎಸ್‌ಐಆರ್‌ ವಿರುದ್ಧ ಜನಜಾಗೃತಿ ಜಾಥಾ

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ವಿರುದ್ಧ ಬಾಗಲಕೋಟೆ ನಗರದ ವಿವಿಧ ಭಾಗಗಳಲ್ಲಿ ಭಾನುವಾರ (ಜೂ.14) ಜಾಗೃತಿ ಜಾಥಾ ನಡೆಯಿತು. ನವನಗರದ ವಿದ್ಯಾಗಿರಿ ಬಸವೇಶ್ವರ ಇಂಜಿನಿಯರಿಂಗ್ ಕಾಲೇಜು ಸರ್ಕಲ್‌ನಿಂದ ಪ್ರಾರಂಭವಾದ ಜಾಥಾ...

SIR ವಿರೋಧಿ ಜನಜಾಗೃತಿ ಜಾಥಾ: ಕಾಫಿ ನಾಡು ಚಿಕ್ಕಮಗಳೂರಲ್ಲಿ ಅದ್ದೂರಿ ಸ್ವಾಗತ

ಚಿಕ್ಕಮಗಳೂರು: ರಾಜ್ಯಾದ್ಯಂತ ಐದು ವಿಭಾಗಗಳಲ್ಲಿ ಸಂಚರಿಸುತ್ತಿರುವ 'SIR ವಿರೋಧಿ ಜನಜಾಗೃತಿ ಜಾಥಾ'ದ 3ನೇ ಮಾರ್ಗದ ತಂಡಕ್ಕೆ ಕಾಫಿ ನಾಡು ಚಿಕ್ಕಮಗಳೂರಿನಲ್ಲಿ ಅದ್ದೂರಿ ಸ್ವಾಗತ ದೊರೆಯಿತು. ಭಾನುವಾರ ಬೆಳಗ್ಗೆ ಜಿಲ್ಲೆಯ ಕೊಪ್ಪ ತಾಲ್ಲೂಕಿಗೆ ಆಗಮಿಸಿದ ಜಾಥಾ...

ಚಿಕ್ಕಮಗಳೂರಿನಲ್ಲಿ ಎಸ್‌ಐಆರ್ (SIR) ವಿರೋಧಿ ಜಾಥಾ: ಮತದಾರರ ಹಕ್ಕು ಕಸಿಯುವ ಹುನ್ನಾರದ ವಿರುದ್ಧ ಆಕ್ರೋಶ

ಭಾರತ ಚುನಾವಣಾ ಆಯೋಗವು ಜಾರಿಗೆ ತಂದಿರುವ ವಿಶೇಷ ತೀವ್ರ ಪರಿಷ್ಕರಣೆ (SIR - Special Intensive Revision) ಪ್ರಕ್ರಿಯೆಯಲ್ಲಿ ಯಾವುದೇ ಅರ್ಹ ಮತದಾರರು ಪಟ್ಟಿಯಿಂದ ಹೊರಗುಳಿಯದಂತೆ ಜಾಗ್ರತೆ ವಹಿಸಬೇಕಾದ ಜವಾಬ್ದಾರಿ ನಮ್ಮೆಲ್ಲರ ಮೇಲಿದೆ....

ಮಂಗಳೂರು: ಚುನಾವಣಾ ಆಯೋಗ ಕೇಂದ್ರ ಸರ್ಕಾರದ ಮುಖವಾಣಿಯಾಗಿ ಕಾರ್ಯನಿರ್ವಹಿಸುತ್ತಿದೆ: ವಿ.ಎಸ್. ಶ್ರೀಧರ್ 

ರಾಜ್ಯದ ಆರು ಜಿಲ್ಲೆಗಳಲ್ಲಿ ಪ್ರಗತಿಪರ ಸಂಘಟನೆಗಳು, ಎದ್ದೇಳು ಕರ್ನಾಟಕ ಹಾಗೂ ಜಾತ್ಯತೀತ ಪಕ್ಷಗಳ ಒಕ್ಕೂಟವಾದ ‘ಎಸ್‌ಐಆರ್ ವಿರೋಧಿ ಕರ್ನಾಟಕ’ ನೇತೃತ್ವದಲ್ಲಿ ಹಮ್ಮಿಕೊಳ್ಳಲಾಗಿರುವ ಎಸ್‌ಐಆರ್ ಜನಜಾಗೃತಿ ಜಾಥಾದ ಭಾಗವಾಗಿ ಇಂದು (ಜೂನ್-14) ಮಂಗಳೂರಿನಲ್ಲಿ ಸಭೆ...

ಬಿಸಿಲ ನಾಡು ಕಲಬುರಗಿಯಲ್ಲಿ ಮೊಳಗಿದ SIR ವಿರೋಧಿ ಘೋಷಣೆ.

ಕೇಂದ್ರ ಚುನಾವಣಾ ಆಯೋಗ ಜಾರಿಗೆ ತಂದಿರುವ ವಿಶೇಷ ತೀವ್ರ ಮತ ಪರಿಷ್ಕರಣೆ SIR ಅನ್ನು ಕರ್ನಾಟಕದಲ್ಲಿ ಜಾರಿ ಮಾಡಬಾರದು ಎಂದು ಆಗ್ರಹಿಸಿ ಕರ್ನಾಟಕದಾದ್ಯಂತ ಎದ್ದೇಳು ಕರ್ನಾಟಕ ಹಾಗಾ SIR ವಿರೋಧಿ ಕರ್ನಾಟಕ ವೇದಿಕೆಯು...