Homeಕರ್ನಾಟಕಉತ್ತರ ಕನ್ನಡ: ಬನವಾಸಿ ಮೇಲ್ಯಾಕೆ ಯಡ್ಡಿ ಕುಟುಂಬದ ಕಣ್ಣು!?

ಉತ್ತರ ಕನ್ನಡ: ಬನವಾಸಿ ಮೇಲ್ಯಾಕೆ ಯಡ್ಡಿ ಕುಟುಂಬದ ಕಣ್ಣು!?

`ಆರಂಕುಶವಿಟ್ಟೊಡಂ ನೆನೆವುದೆನ್ನ ಮನಂ ಬನವಾಸಿ ದೇಶಂ' ಎಂದು ಎದೆತುಂಬಿ ಪಂಪ ಮಹಾಕವಿ ಹಾಡಿದ್ದ ಐತಿಹಾಸಿಕ ಮಹತ್ವದ ಬನವಾಸಿಗೆ ಉತ್ತರ ಕನ್ನಡದೊಂದಿಗೆ, ಅದರಲ್ಲೂ ಮಲೆನಾಡಿನ ಸೆರಗಿನ ಶಿರಸಿ ಸೀಮೆಯೊಂದಿಗೆ ಅವಿನಾಭಾವ ಸಂಬಂಧ.

- Advertisement -
- Advertisement -

| ನಹುಷ |

`ಆರಂಕುಶವಿಟ್ಟೊಡಂ ನೆನೆವುದೆನ್ನ ಮನಂ ಬನವಾಸಿ ದೇಶಂ’ ಎಂದು ಎದೆತುಂಬಿ ಪಂಪ ಮಹಾಕವಿ ಹಾಡಿದ್ದ ಐತಿಹಾಸಿಕ ಮಹತ್ವದ ಬನವಾಸಿಗೆ ಉತ್ತರ ಕನ್ನಡದೊಂದಿಗೆ, ಅದರಲ್ಲೂ ಮಲೆನಾಡಿನ ಸೆರಗಿನ ಶಿರಸಿ ಸೀಮೆಯೊಂದಿಗೆ ಅವಿನಾಭಾವ ಸಂಬಂಧ. ಶಿವಮೊಗ್ಗ ಜಿಲ್ಲೆಯ ಸೊರಬ-ಶಿಕಾರಿಪುರ ತಾಲ್ಲೂಕಿನ ಅಂಚಿನಲ್ಲಿರುವ ಕನ್ನಡದ ಈ ಮೊದಲ ರಾಜಧಾನಿ, ಯಡ್ಡಿ ಮುಖ್ಯಮಂತ್ರಿ ಆದಾಗೆಲ್ಲಾ ಕರುಳು ಸಂಬಂಧವೇ ಕಡಿದು ಹೋಗುವ ಆತಂಕಕ್ಕೆ ಬಿದ್ದು ಒದ್ದಾಡುತ್ತದೆ.

ಯಡ್ಡಿ ಈ ಹಿಂದೆ ಸಿಎಂ ಆಗಿದ್ದಾಗ ಬನವಾಸಿಯನ್ನು ಸೊರಬದ ಆನವಟ್ಟಿ ಹೋಬಳಿಗೆ ಸೇರಿಸುವ ಮಸಲತ್ತು ನಡೆದಿತ್ತು. ಆದರೆ ಯಡ್ಡಿ ಭಿನ್ನಮತಕ್ಕೆ ಬಲಿಯಾಗಿ ಅಧಿಕಾರ ಕಳಕೊಂಡು ಬಿಜೆಪಿ ಪಾಲಿಗೆ “ಕಾಫಿರ್” ಆಗಿಹೋಗಿದ್ದರು. ಹೀಗಾಗಿ ಬನವಾಸಿಯನ್ನು ಉತ್ತರ ಕನ್ನಡದಿಂದ ಹೊತ್ತೊಯ್ಯುವ ಯಡ್ಡಿ ಮತ್ತವರ ಮಗನೂ ಸಂಸದನೂ ಆಗಿರುವ ಬಸ್‍ಸ್ಟ್ಯಾಂಡ್ ರಾಘುನ ಪ್ಲಾನ್ ಫ್ಲಾಪ್ ಆಗಿತ್ತು. ಈಗ ಮತ್ತೆ ಶಿರಸಿಯ ಬನವಾಸಿ ಮೇಲೆ ಯಡ್ಡಿ ಕುಟುಂಬದ ಕಣ್ಣು ಬಿದ್ದಿದೆ. ಈ ರಹಸ್ಯ ಹುನ್ನಾರದ ಹೂರಣ ಹೊರಬರುತ್ತಲೇ ಬನವಾಸಿ ಭಾಗದ ಜನರು ಕೆರಳಿ ಬೀದಿಗಿಳಿದು ಪ್ರತಿಭಟಿಸುತ್ತಿದ್ದಾರೆ.

ಅಷ್ಟಕ್ಕೂ ಈ ಅಪ್ಪ-ಮಗನಿಗೆ ಉತ್ತರ ಕನ್ನಡ ಸಂಸ್ಕøತಿ-ಸಂಸ್ಕಾರದ ಬನವಾಸಿ ಮತ್ತದರ ಸುತ್ತಲಿನ ಹಳ್ಳಿಗಳನ್ನು ಕಬಳಿಸುವ ಹಠವೇಕೆಂದು ಬಲ್ಲಿರಾ? ಶಿವಮೊಗ್ಗ ಜಿಲ್ಲೆಯನ್ನು ಒಡೆದು ಶಿಕಾರಿಪುರ ಜಿಲ್ಲೆ ರಚನೆ ಮಾಡಿ ರಾಜಕೀಯ ಫಾಯ್ದೆ ಹೊಡೆಯಲು ಯಡ್ಡಿ-ರಾಘು ಸ್ಕೆಚ್ ಹಾಕಿದ್ದಾರೆ. ಆದರೆ ಜಿಲ್ಲೆ ರಚನೆಗೆ ಬೇಕಾದ ಭೌಗೋಳಿಕ ಪ್ರದೇಶ ಮತ್ತು ಜನಸಂಖ್ಯೆಯ ಕೊರತೆಯಿದೆ. ಪಕ್ಕದ ಬನವಾಸಿ ಮತ್ತು ಅದರ ಆಚೀಚೆಯ ಹತ್ತು ಗ್ರಾಮ ಪಂಚಾಯತ್ ಏರಿಯಾ ಸೇರಿಸಿಕೊಂಡರೆ ಏಕ್‍ದಮ್ 50 ಸಾವಿರಕ್ಕಿಂತ ಹೆಚ್ಚು ಜನಸಂಖ್ಯೆಯೂ ಸಿಗುತ್ತದೆ! ಈ ದೂ(ದು)ರಾಲೋಚನೆಯಿಂದ ಬನವಾಸಿ ಸೀಮೆ ಆಪೋಷನಕ್ಕೆ ಯಡ್ಡಿ-ರಾಘು ಸರ್ಕಸ್ ನಡೆಸಿದ್ದಾರೆ.

ಯಡ್ಡಿ ಅಕ್ರಮ ಸರ್ಕಾರದ ಚಕ್ರವರ್ತಿಯಾಗುತ್ತಲೇ ಆತನ ತವರೂರು ಶಿಕಾರಿಪುರಕ್ಕೆ ಭರಪೂರ ಅನುದಾನ ಹರಿದುಬರುತ್ತಿದೆ. ಪಕ್ಕದ ಶಿಕಾರಿಪುರದ ಉದ್ಧಾರಕ್ಕೆ ಯಥೇಚ್ಛವಾಗಿ ಹಣ ಹರಿದು ಬರುತ್ತಿದ್ದರೆ ಉತ್ತರ ಕನ್ನಡಕ್ಕೆ ಅನ್ಯಾಯ-ಅತ್ಯಾಚಾರ ಆಗುತ್ತಿದೆ! ಅನುದಾನ ತರುವುದು ಸಾಯಲಿ, ಜಿಲ್ಲೆ ಬರಡಾಗದಂತೆ ತಡೆಯಬೇಕೆಂಬ ಕನಿಷ್ಟ ಕಾಳಜಿಯೂ ಉತ್ತರ ಕನ್ನಡದ ಹೇತ್ಲಾಂಡಿ ಶಾಸಕ-ಸಂಸದ-ಮಂತ್ರಿಗಳಿಗಿಲ್ಲ. ಲಾಗಾಯ್ತಿನಿಂದ ಉತ್ತರ ಕನ್ನಡದ ಪ್ರಗತಿಗೆ ಅಡ್ಡಗಾಲು ಹಾಕಲಾಗುತ್ತಿದೆ. ಅಂಕೋಲಾ-ಹುಬ್ಬಳ್ಳಿ, ಹಾವೇರಿ-ಶಿರಸಿ ಮತ್ತು ತಾಳಗುಪ್ಪ-ಸಿದ್ಧಾಪುರ ರೈಲು ಮಾರ್ಗ ಹಲವು ವರ್ಷದಿಂದ ಬರೀ ಕನಸಾಗೇ ಕಾಡುತ್ತಿದೆ. ಉತ್ತರ ಕನ್ನಡಕ್ಕೆ ತೀರಾ ಹತ್ತಿರದಲ್ಲಿರುವ ಸಾಗರ ತಾಲ್ಲೂಕಿನ ತಾಳಗುಪ್ಪದಲ್ಲಿ ನಿರ್ಮಾಣ ಮಾಡಲು ಉದ್ದೇಶಿಸಿದ್ದ ರೈಲು ಟರ್ಮಿನಲನ್ನು ಯಡ್ಡಿ ಪರ್ವದಲ್ಲಿ ಶಿವಮೊಗ್ಗಕ್ಕೆ ಸ್ಥಳಾಂತರಿಸುವ ಕಿತಾಪತಿ ನಡೆಯುತ್ತಿದೆ. ತಾಳಗುಪ್ಪ ಜಂಕ್ಷನ್ ಆಗಿದ್ದರೆ ಈ ರೈಲು ಮಾರ್ಗ ಸಿದ್ಧಾಪುರದವರೆಗೆ ವಿಸ್ತರಿಸಲು ಅನುಕೂಲವಾಗುತ್ತಿತ್ತು.

ಈಗ ಅದಕ್ಕೂ ಕಲ್ಲು ಹಾಕಲಾಗುತ್ತಿದೆ. ಜಂಕ್ಷನ್ ಸ್ಥಳಾಂತರಕ್ಕೆ ಸಾಕ್ಷಾತ್ ಸಿಎಂ ಸಾಹೇಬರೇ ಒಪ್ಪಿಗೆ ಕೊಟ್ಟಿದ್ದಾರೆ. ತಾಳಗುಪ್ಪ-ಸಿದ್ಧಾಪುರ ರೈಲು ಮಾರ್ಗಕ್ಕೆಂದು ಅಂದಿನ ರೈಲು ಮಂತ್ರಿ ಸುರೇಶ್ ಪ್ರಭು 320 ಕೋಟಿ ಮಂಜೂರು ಮಾಡುವುದಾಗಿ ಘೋಷಿಸಿದ್ದರು. ಈ ಹಣ ಎಲ್ಲಿ ಹೋಯಿತೆಂದು ಸಂಸದ ಅನಂತ್ಮಾಣಿಗೂ ಗೊತ್ತಾಗಿಲ್ಲ. ಉತ್ತರ ಕನ್ನಡದ ಅಭಿವೃದ್ಧಿಗಾಗೇ ಅವತಾರ ಎತ್ತಿದ್ದೇನೆಂದು ಒಣ ಘರ್ಜನೆ ಮಾಡುವ ಮಾಣಿ ಮೋದಿ ಮಂತ್ರಿಗಿರಿಯಿಂದ ತೆಗೆದುಹಾಕಿದ ಕ್ಷಣದಿಂದಲೇ ಬಿಲ ಸೇರಿಕೊಂಡಿದ್ದಾನೆ. ಬನವಾಸಿ ಅಪಹರಿಸುವ ಸುದ್ಧಿ ಕೇಳಿ ಜನರು ಬೀದಿಗಿಯಲು ಅಣಿಯಾದರೂ ಶಿರಸಿ ಶಾಸಕ ಕಂ ಸ್ಪೀಕರ್ ಕಾಗೇರಿಯಾಗಲಿ, ಬನವಾಸಿಯ ‘ಅನರ್ಹ’ ಶಾಸಕ ಶಿವರಾಮ ಹೆಬ್ಬಾರನಾಗಲಿ, ಶಿರಸಿಯಲ್ಲೇ ಐಷಾರಾಮಿ ಬಂಗಲೆ ಕಟ್ಟಿಕೊಂಡು ವಾಸಿಸುತ್ತಿರುವ ಸ್ವಯಂ ಘೋಷಿತ ದೇಶಭಕ್ತ ಅನಂತ್ಮಾಣಿಯಾಗಲಿ ತುಟಿಪಿಟಿಕ್ ಅಂದಿಲ್ಲ.

ಗುರುವಾರ 10ನೇ ತಾರೀಖಿನಂದು ಬನವಾಸಿ ಮತ್ತು ಸುತ್ತಲಿನ ಹಳ್ಳಿಗರು ಸಹಸ್ರಾರು ಸಂಖ್ಯೆಯಲ್ಲಿ ಮಧುಕೇಶ್ವರ ದೇವಾಲಯದ ಅಂಗಳದಲ್ಲಿ ಜಮೆಯಾಗಿ ಬನವಾಸಿ ಹೈಜಾಕ್ ಮಾಡದಂತೆ ಎಚ್ಚರಿಕೆಯ ರ್ಯಾಲಿ ನಡೆಸಿದ್ದಾರೆ. ಇದನ್ನು ಕಂಡು ಬೆಚ್ಚಿಬಿದ್ದಿರುವ ಅನರ್ಹ ಶಾಸಕ ಹೆಬ್ಬಾರ್ `ಬನವಾಸಿ ಶಿಕಾರಿಪುರಕ್ಕೆ ಸೇರಿಸುವ ಸುದ್ದಿ ಸುಳ್ಳೆಂದು’ ತಿಪ್ಪರಲಾಗ ಹೊಡೆದಿದ್ದಾನೆ. ಉಪಚುನಾವಣೆಯಲ್ಲಿ ಬನವಾಸಿ ಭಾನ್ಗಡಿ ತನಗೆ ದುಬಾರಿ ಆಗಬಾರದೆಂಬ ಭಯವೇ ಹೊರತು ಕ್ಷೇತ್ರದ ಬಗ್ಗೆ ಪ್ರಾಮಾಣಿಕ ಕಾಳಜಿಯೇನಿಲ್ಲ ಈ ರಾಜಕಾರಣಿಗೆ.

ಬನವಾಸಿ ಅಭಿವೃದ್ಧಿ ಪ್ರಾಧಿಕಾರ ರಚನೆಯಾಗಿ ವರ್ಷಗಳು ಉರುಳಿದರೂ ಹೆಬ್ಬಾರ್‍ನ ಅಯೋಗ್ಯತೆಯಿಂದಾಗಿ ಅರ್ಧಕಾಸಿನ ಪ್ರಯೋಜನವಾಗಿಲ್ಲ. ಬನವಾಸಿಯನ್ನು ತಾಲ್ಲೂಕು ಮಾಡಿಯೆಂದು ಜನ ಬೊಬ್ಬೆ ಹೊಡೆಯುತ್ತಿದ್ದರೂ ಶಾಸಕನಾಗಿದ್ದ ಹೆಬ್ಬಾರ್‍ಗೆ ಅಡ್ಡದಾರಿಯಲ್ಲಿ ಮಂತ್ರಿಯಾಗುವುದೇ ಮುಖ್ಯವಾಗಿತ್ತು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಹಾವಿನ ವಿಷ ಪ್ರಕರಣ : ಎಲ್ವಿಶ್ ಯಾದವ್ ವಿರುದ್ಧದ ಎಫ್‌ಐಆರ್ ರದ್ದುಗೊಳಿಸಿದ ಸುಪ್ರೀಂ ಕೋರ್ಟ್

ಯೂಟ್ಯೂಬರ್ ಎಲ್ವಿಶ್ ಯಾದವ್ ವಿರುದ್ಧದ ಹಾವಿನ ವಿಷ ಪ್ರಕರಣಕ್ಕೆ ಸಂಬಂಧಿಸಿದ ಎಫ್‌ಐಆರ್ ಮತ್ತು ಕ್ರಿಮಿನಲ್ ಪ್ರಕ್ರಿಯೆಗಳನ್ನು ಸುಪ್ರೀಂ ಕೋರ್ಟ್ ಗುರುವಾರ (ಮಾ.19) ರದ್ದುಗೊಳಿಸಿದೆ.  ವನ್ಯಜೀವಿ (ರಕ್ಷಣೆ) ಕಾಯ್ದೆಯ ಅಡಿಯಲ್ಲಿ ಪ್ರಕರಣ ದಾಖಲಿಸಲು ಅಧಿಕೃತ ವ್ಯಕ್ತಿಯಿಂದ ದೂರು...

ದೆಹಲಿಯ ಉತ್ತಮ್ ನಗರದಲ್ಲಿ ಮುಸ್ಲಿಮರಿಗೆ ಬೆದರಿಕೆ; ಅಮಿತ್ ಶಾಗೆ ಪತ್ರ ಬರೆದ ವಿಪಕ್ಷ ಸಂಸದರು

ರಾಷ್ಟ್ರ ರಾಜಧಾನಿಯ ಉತ್ತಮ್ ನಗರದಲ್ಲಿ ಮುಸ್ಲಿಮರನ್ನು ಗುರಿಯಾಗಿಸಿಕೊಂಡು ಹಿಂದುತ್ವ ಗುಂಪುಗಳು ಮಾಡುತ್ತಿರುವ ಬೆದರಿಕೆಗಳ ಬಗ್ಗೆ ತುರ್ತು ಹಸ್ತಕ್ಷೇಪವನ್ನು ಕೋರಿ ಹಲವಾರು ವಿರೋಧ ಪಕ್ಷದ ಸದಸ್ಯರು ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರಿಗೆ...

‘ಇರಾನ್ ಕತಾರ್ ಮೇಲೆ ಮತ್ತೊಮ್ಮೆ ದಾಳಿ ಮಾಡಿದರೆ, ಸೌತ್ ಪಾರ್ಸ್ ಅನಿಲ ಕ್ಷೇತ್ರವನ್ನು ಸ್ಪೋಟಿಸುತ್ತೇವೆ’; ಟ್ರಂಪ್ ಬೆದರಿಕೆ

ಇರಾನ್ ಕತಾರ್‌ನ ಇಂಧನ ಸೌಲಭ್ಯಗಳನ್ನು ಗುರಿಯಾಗಿಸಿಕೊಂಡರೆ, ಅಮೆರಿಕ ”ಸೌತ್ ಪಾರ್ಸ್ ಅನಿಲ ಕ್ಷೇತ್ರವನ್ನು ಬೃಹತ್ ಪ್ರಮಾಣದಲ್ಲಿ ಸ್ಫೋಟಿಸುತ್ತದೆ” ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಬುಧವಾರ ರಾಜ್ಯಸಭೆಯಲ್ಲಿ ಎಚ್ಚರಿಸಿದ್ದಾರೆ. ಇರಾನ್‌ನ ಸೌತ್ ಪಾರ್ಸ್ ಗ್ಯಾಸ್...

ಮುಸ್ಲಿಂ ಪ್ರಯಾಣಿಕರ ಮೇಲೆ ಹಲ್ಲೆ ನಡೆಸಿದ್ದಾಗಿ ಹೇಳಿಕೊಂಡ ಓಲಾ ಚಾಲಕ; ‘ಇಸ್ಲಾಮೋಫೋಬಿಕ್’ ಕುರಿತು ಆತಂಕ ವ್ಯಕ್ತಪಡಿಸಿದ ವಕೀಲ

ರಾಷ್ಟ್ರ ರಾಜಧಾನಿ ದೆಹಲಿಯಲ್ಲಿನ ಓಲಾ ಕ್ಯಾಬ್ ಪ್ರಯಾಣದ ಸಂದರ್ಭದಲ್ಲಿ ಚಾಲಕನಿಂದ ನನಗೆ ಬೆದರಿಕೆ ಮತ್ತು ಇಸ್ಲಾಮೋಫೋಬಿಕ್ ಹೇಳಿಕೆಗಳು ಬಂದಿವೆ ಎಂದು ಸುಪ್ರೀಂ ಕೋರ್ಟ್ ವಕೀಲರೊಬ್ಬರು ಆರೋಪಿಸಿದ್ದಾರೆ. ಈ ಘಟನೆಯು, ಪ್ರಯಾಣಿಕರ ಸುರಕ್ಷತೆ ಮತ್ತು...

ಬೆಳ್ತಂಗಡಿ | ಮುಸ್ಲಿಂ ಬಾಲಕನ ಮೇಲೆ ಗುಂಪು ಹಲ್ಲೆ ಆರೋಪ; ಬಜರಂಗದಳದ ಕಾರ್ಯಕರ್ತರ ವಿರುದ್ಧ ಪ್ರಕರಣ ದಾಖಲು

ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಉಜಿರೆಯ ಜನಾರ್ಧನ ಸ್ವಾಮಿ ದೇವಸ್ಥಾನದ ಬ್ರಹ್ಮಕಲಶೋತ್ಸವಕ್ಕೆ ಸ್ನೇಹಿತರೊಂದಿಗೆ ತೆರಳಿದ್ದ ಮುಸ್ಲಿಂ ಬಾಲಕನ ಮೇಲೆ ಅಮಾನುಷವಾಗಿ ಹಲ್ಲೆ ನಡೆಸಿ, ಅಪಹರಿಸಿ, ಬೆದರಿಕೆ ಹಾಕಿ ಆತ್ಮಹತ್ಯೆಗೆ ಪ್ರೇರೇಪಿಸಿದ ಆರೋಪದಡಿ...

ಉಮರ್ ಖಾಲಿದ್ ಬಂಧನ ನಿರಂಕುಶ; ಕಾನೂನು ಆಧಾರವಿಲ್ಲ: ವಿಶ್ವಸಂಸ್ಥೆ ಕಾರ್ಯಪಡೆ

"ಜವಾಹರಲಾಲ್ ನೆಹರು ವಿಶ್ವವಿದ್ಯಾಲಯದ (ಜೆಎನ್‌ಯು) ವಿದ್ಯಾರ್ಥಿ ಕಾರ್ಯಕರ್ತ ಮತ್ತು ಸಂಶೊಧನಾ ವಿದ್ಯಾರ್ಥಿ ಉಮರ್ ಖಾಲಿದ್ ಅವರ ಬಂಧನವು ನಿರಂಕುಶವಾಗಿದೆ, ಅದಕ್ಕೆ ಯಾವುದೇ ಕಾನೂನು ಆಧಾರವಿಲ್ಲ" ಎಂದು ವಿಶ್ವಸಂಸ್ಥೆಯ ಸಮಿತಿ ಹೇಳಿದೆ. ಸಾಮಾಜಿಕ ಕಾರ್ಯಕರ್ತರ...

ಮಹಾರಾಷ್ಟ್ರ | ಲೈಂಗಿಕ ದೌರ್ಜನ್ಯ ಆರೋಪ : ಸ್ವಯಂ ಘೋಷಿತ ದೇವಮಾನವನ ಬಂಧನ

ಮಹಿಳೆಯರನ್ನು ಅಸಭ್ಯವಾಗಿ ಚಿತ್ರೀಕರಿಸಿ, ಆ ವಿಡಿಯೋಗಳನ್ನು ಇಟ್ಟುಕೊಂಡು ಲೈಂಗಿಕವಾಗಿ ಶೋಷಣೆ ಮಾಡುತ್ತಿದ್ದ ಆರೋಪದ ಮೇಲೆ ಸ್ವಯಂಘೋಷಿತ ದೇವಮಾನವ ಮತ್ತು ಜ್ಯೋತಿಷಿ ಕ್ಯಾಪ್ಟನ್ ಅಶೋಕ್ ಖಾರಟ್‌ನನ್ನು ಮಹಾರಾಷ್ಟ್ರದ ನಾಸಿಕ್ ಪೊಲೀಸರು ಬಂಧಿಸಿದ್ದಾರೆ ಎಂದು ವರದಿಯಾಗಿದೆ....

‘ಕಾಂಗ್ರೆಸ್ ಜೊತೆ ಬಲವಂತದ ಮದುವೆ ಆಗಿತ್ತು’: ಖರ್ಗೆ ಅವರ ‘ಮೋದಿ ಜೊತೆ ಮದುವೆ’ ಟೀಕೆಗೆ ದೇವೇಗೌಡ ತಿರುಗೇಟು

ಸಂಸತ್ತಿನಲ್ಲಿ ಕಾಂಗ್ರೆಸ್ ಮುಖ್ಯಸ್ಥ ಮಲ್ಲಿಕಾರ್ಜುನ ಖರ್ಗೆ ಅವರ 'ಮದುವೆ' ಮತ್ತು 'ಪ್ರೀತಿ' ಹೇಳಿಕೆಗೆ ಮಾಜಿ ಪ್ರಧಾನಿ ಮತ್ತು ರಾಜ್ಯಸಭಾ ಸಂಸದ ಎಚ್‌ಡಿ ದೇವೇಗೌಡ ಪ್ರತಿಕ್ರಿಯಿಸಿದ್ದಾರೆ. ದೇವೇಗೌಡರು ಕಾಂಗ್ರೆಸ್ ಅನ್ನು "ಪ್ರೀತಿಸಿದರು" ಆದರೆ ಮೋದಿ (ಬಿಜೆಪಿ)...

ರಾಹುಲ್ ಗಾಂಧಿಯನ್ನು ‘ಟಪೋರಿ’ ಎಂದು ಕರೆದ ಬಿಜೆಪಿ ಸಂಸದೆ ಕಂಗನಾ ರಣಾವತ್

ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ವಾಗ್ದಾಳಿ ನಡೆಸಿರುವ ಬಿಜೆಪಿ ಸಂಸದೆ - ನಟಿ ಕಂಗನಾ ರನೌತ್, ಅವರನ್ನು ಟಪೋರಿ ಎಂದು ಕರೆದಿದ್ದಾರೆ. ಅವರ ನಡವಳಿಕೆಯು ಮಹಿಳೆಯರಿಗೆ ಅನಾನುಕೂಲವನ್ನುಂಟು ಮಾಡುತ್ತದೆ ಎಂದು...

ಎಸ್‌ಬಿಐಗೆ ವಂಚನೆ ಪ್ರಕರಣ : ಅನಿಲ್ ಅಂಬಾನಿ ವಿಚಾರಣೆ ನಡೆಸಿದ ಸಿಬಿಐ

ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾದ ದೂರಿನ ಮೇರೆಗೆ ರಿಲಯನ್ಸ್ ಕಮ್ಯುನಿಕೇಷನ್ಸ್ ಲಿಮಿಟೆಡ್ ವಿರುದ್ಧ ದಾಖಲಾಗಿರುವ 2,929 ಕೋಟಿ ರೂಪಾಯಿ ವಂಚನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಗುರುವಾರ (ಮಾ.19) ಕೈಗಾರಿಕೋದ್ಯಮಿ ಅನಿಲ್ ಅಂಬಾನಿ ಅವರನ್ನು ಕೇಂದ್ರ...