Homeಕರ್ನಾಟಕಉತ್ತರ ಕನ್ನಡ: ಪರಿಸರ ಪರಾಕ್ರಮಿ ಆಶೀಸರ ಮಾಣಿಯ ಗೂಟದ ಕಾರಿನ ಗಲಾಟೆ

ಉತ್ತರ ಕನ್ನಡ: ಪರಿಸರ ಪರಾಕ್ರಮಿ ಆಶೀಸರ ಮಾಣಿಯ ಗೂಟದ ಕಾರಿನ ಗಲಾಟೆ

- Advertisement -
- Advertisement -

| ಶುದ್ಧೋಧನ |

ಬಿಜೆಪಿ ಅಧಿಕಾರಕ್ಕೆ ಬಂದಾಗೆಲ್ಲ ಶಿರಸಿಯ ‘ಸು’ಪ್ರಸಿದ್ಧ ಸ್ವಯಂಘೋಷಿತ ಪರಿಸರ ಪರಾಕ್ರಮಿ ಅನಂತ ಹೆಗಡೆ ಆಶೀಸರ್‍ಗೆ ನಿಗಮ-ಮಂಡಳಿ ಹುದ್ದೆ ದಕ್ಕುತ್ತಿದೆ. ಅಂಥದೊಂದು ಗದ್ದುಗೆ ಏರುವ ಯಾವ ಯೋಗ್ಯತೆ ಇಲ್ಲದಿದ್ದರೂ ಆಶೀಸರ ಮಾಣಿಗೆ ಯೋಗ ಖುಲಾಯಿಸುತ್ತಿರುವುದು ಪಕ್ಕಾಚೆಡ್ಡಿ ಚಮತ್ಕಾರದಿಂದಷ್ಟೇ! ತಾನೊಬ್ಬ ಹುಟ್ಟಾ ಸಂಘಿ ಸರದಾರನೆಂತಲೂ ಪರಿಸರ ಬಚಾವಾಗಿರುವುದೇ ತನ್ನ ಮೂರೂವರೆ ದಶಕದ ಹಗಲಿರುಳಿನ ಹಾರಾಟದಿಂದೆಂತಲೂ ಎಂಬಂತೆ ಆರೆಸ್ಸೆಸ್‍ನ ಆಯಕಟ್ಟಿನ ರಿಂಗ್‍ಮಾಸ್ಟರ್‍ಗಳೆದುರು ಅದ್ಭುತ ಪ್ರದರ್ಶನ ಕೊಡಬಲ್ಲ ಆಶೀಸರ್ ಗೂಟದ ಕಾರು ಪಟಾಯಿಸುತ್ತಿದ್ದಾನೆ. ಬಿಜೆಪಿ-ಆರೆಸ್ಸೆಸ್‍ನ ಬ್ರಾಹ್ಮಣ ಲಾಬಿ 2008ರಲ್ಲಿ ಆಶೀಸರ್‍ಗೆ ಬಳುವಳಿಯಾಗಿ ಕೊಟ್ಟಿತ್ತು. ಈಗ ಅದೇ ಆಶೀಸರ್‍ಗೆ ಅದೇ ಕೇಸರಿ ಜನಿವಾರ ಕೂಟ ಜೀವ ವೈವಿಧ್ಯ ಮಂಡಳಿಯಲ್ಲಿ “ಪುನರ್ವಸತಿ” ಕಲ್ಪಿಸಿದೆ!

ಇದು ಉತ್ತರ ಕನ್ನಡ ಬಿಜೆಪಿಯ ನಿಷ್ಠಾವಂತ ಕಾರ್ಯಕರ್ತರನ್ನು ಕಿಚಾಯಿಸುತ್ತಿದೆ. ಸಹಜವಾಗೇ ಪಕ್ಷಕಟ್ಟಿದ ಹಿಂದುಳಿದ ವರ್ಗದ ಎರಡನೇ ಸ್ತರದ ಮರಿಮುಖಂಡರು ಕೆರಳಿದ್ದಾರೆ; ಪಕ್ಷಕ್ಕಾಗಿ ತಮ್ಮನ್ನು ದುಡಿಸಿಕೊಂಡು ಮಹತ್ವದ ಲಾಭದ ಸ್ಥಾನ-ಮಾನವೆಲ್ಲ ಬ್ರಾಹ್ಮಣರಿಗೆ ಕೊಡಬೇಕಾಗುತ್ತಿದೆ ಎಂಬ ಅಸಮಾಧಾನ ಭುಗಿಲೆದ್ದಿದೆ. ಎಂಪಿ ಅನಂತ್ಮಾಣಿ, ಸ್ಪೀಕರ್ ಕಾಗೇರಿ, ಜಿಲ್ಲಾ ಉಸ್ತುವಾರಿ ಮಂತ್ರಿಗಿರಿ ಮೀಸಲಿಡಲ್ಪಟ್ಟಿರುವ “ಅನರ್ಹ” ಶಿವರಾಮ ಹೆಬ್ಬಾರ್ ಮತ್ತು ನಿಗಮ-ಮಂಡಳಿಗೆ ವಕ್ಕರಿಸಿರುವ ಆಶೀಸರ ಎಲ್ಲರೂ ಹವ್ಯಕ ಬ್ರಾಹ್ಮಣ ಸಮುದಾಯದವರು. ಜಿಲ್ಲಾ ಬಿಜೆಪಿ ಅಧ್ಯಕ್ಷತೆ ಕೊಂಕಣಿ ಬ್ರಾಹ್ಮಣ ಹಳಿಯಾಳದ ಮಾಜಿ ಶಾಸಕ ಸುನಿಲ್ ಹೆಗ್ಡೆಗೆ ಕೊಡಲು ರಹಸ್ಯ ತಯಾರಿ ಮತ್ತೊಂದೆಡೆ ನಡೆದಿದೆ. ಒಟ್ಟಿನಲ್ಲಿ ಬ್ರಾಹ್ಮಣರ ಹಿಂದೂತ್ವದ ಅಧಿಕಾರ ರಾಜಕಾರಣದ ಯುದ್ಧದಲ್ಲಿ ದೀವರು, ಮೀನುಗಾರರು, ಹಾಲಕ್ಕಿ ಒಕ್ಕಲಿಗರೇ ಮುಂದಾದ ಶೂದ್ರರು ಬರೀ ಕಾಲಾಳುಗಳು ಮಾತ್ರ.

ಶೂದ್ರರ ಕೈಲಿ ಲಾಠಿಕೊಟ್ಟು ಶೀಟಿ ಊದುತ್ತಾ ಬೇಳೆ ಬೇಯಿಸಿಕೊಳ್ಳುವ ಜನಿವಾರ ಪಡೆಯ ತೆರೆಮರೆ ತಂತ್ರಗಾರರಲ್ಲಿ ಆಶೀಸರನೂ ಒಬ್ಬನೆಂಬುದಕ್ಕೆ ಅನುಮಾನವೇ ಇಲ್ಲ. ಸ್ವಜಾತಿ ಅನಂತ್ಮಾಣಿಗೇ ಟಾಂಗುಕೊಟ್ಟು ಎಂಪಿಗಿರಿ ಟಿಕೆಟ್ ಪಡೆಯಲು ಈತ ಚೆಡ್ಡಿ ಬಿಡಾರದಲ್ಲಿ ವಶೀಲಿ ಕಾರ್ಯಾಚರಣೆ ಮಾಡಿದ್ದೂ ಇದೆ. ಹಾಗಂತ ಉತ್ತರ ಕನ್ನಡ ಬಿಜೆಪಿಗೆ ಈತನಿಂದ ನಯಾಪೈಸೆ ಫಾಯ್ದೆಯಿಲ್ಲ. ಬ್ರಾಹ್ಮಣೇತರ ಕಾರ್ಯಕರ್ತರು ಕಟ್ಟಿದ ಹುತ್ತದಲ್ಲಿ ಸದ್ದಿಲ್ಲದೆ ಸೇರಿಕೊಳ್ಳುವ ಘಟಸರ್ಪವೆಂಬ ಚರ್ಚೆ ಸ್ಥಳೀಯ ಬಿಜೆಪಿಯಲ್ಲೀಗ ಜೋರಾಗಿದೆ. ಈತನ ಪರಿಸರ ಧೋರಣೆಯೂ ಇಬ್ಬಂದಿ ಸ್ವಜಾತಿ ಅಡಿಕೆ ತೋಟಿಗರಿಗೆ ಸರ್ಕಾರಿ ಯೋಜನೆಗಳಿಂದ ತೊಂದರೆ ಆಗುತ್ತದೆಂದಾಗ ಆಶೀಸರ್‍ನಲ್ಲಿ ಅತ್ಯುಗ್ರ ಪರಿಸರ ಕಾಳಜಿ ಶುರುಹೊಡೆಯುತ್ತದೆ! ಉತ್ತರ ಕನ್ನಡದ ಅಭಿವೃದ್ಧಿಯ ಭಾಗ್ಯದ ಬಾಗಿಲನ್ನೇ ತೆರೆಯಬಲ್ಲ ಹುಬ್ಬಳ್ಳಿ-ಅಂಕೋಲಾ ರೈಲು ಮಾರ್ಗಕ್ಕೆ ಆಶೀಸರ್ ನೇತೃತ್ವದ ಪರಿಸರವಾಧಿ ತಂಡ ಕಲ್ಲು ಹಾಕುತ್ತಲೇ ಬಂದಿದೆ!!

ಈ ರೈಲು ಹಳಿಯಿಂದ ಅರಣ್ಯ ನಾಶವಾಗುತ್ತದೆ, ವನ್ಯ ಪ್ರಾಣಿಗಳಿಗೆ ಗಂಡಾಂತರ, ಪರಿಸರ ಸರ್ವನಾಶವಾಗುತ್ತದೆಂದು ಬೊಬ್ಬಿರಿವ ಆಶೀಸರ್‍ಗೆ ತನ್ನ ಸಮುದಾಯಕ್ಕೆ ಅನುಕೂಲವಾಗುವ ಹಾವೇರಿ-ಶಿರಸಿ ರೈಲು ಮಾರ್ಗದ ಪರಿಸರ ಹಾನಿ ಗೌಣ! ಕುಮಟಾ-ಶಿರಸಿ ರಸ್ತೆ ಅಗಲಗೊಂಡು ರಾಷ್ಟ್ರೀಯ ಹೆದ್ದಾರಿಯಾದರೆ ಜೀವ ವೈವಿಧ್ಯಕ್ಕೆ ಧಕ್ಕೆ ಎಂಬ ವಾದ ಈ ಪರಿಸರ “ತಜ್ಞ”ನದು. ಆನರ ಬಹುಬೇಡಿಕೆಯ ಜಿಲ್ಲೆಯ ಮಹತ್ವದ ಯೋಜನೆಯಿದು. ಆಶೀಸರ್ ಜೀವ ವೈವಿಧ್ಯ ಮಂಡಳಿ ಅಧ್ಯಕ್ಷನಾಗುತ್ತಲೇ ಶಿರಸಿ-ಕುಮಟಾ ರಸ್ತೆ ಅಗಲೀಕರಣ ಯೋಜನೆಗೆ ಎಳ್ಳು-ನೀರು ಬಿಟ್ಟಂತಾಗಿದೆ!! ಪರಿಸರ ಸಂರಕ್ಷಣೆ ಕುರಿತು ಉದ್ದುದ್ದ ಭಾಷಣ ಬಿಗಿಯುವ ಈ ಪರಿಸರ ದುರಂಧರ ಎಕರೆಗಟ್ಟಲೆ ಅರಣ್ಯ ಕಬಳಿಸಿ ಸಮೃದ್ಧ ಅಡಿಕೆ ತೋಟ ಮಾಡಿಕೊಂಡಿರುವ ಅಪವಾದಕ್ಕೆ ತುತ್ತಾಗಿರುವುದು ವಿಪರ್ಯಾಸವೇ ಸರಿ!!

ಕಾಡು ನುಂಗಿರುವ “ಕ್ಯಾತಿ”ಯ ಆಶೀಸರ ಸ್ವರ್ಣವಲ್ಲಿ ಮಠದ ಹುಸಿ ಹಸಿರು ಸ್ವಾಮಿಯ ಆಸ್ಥಾನದ ಪರಿಸರ ಪಂಡಿತ. ಕಾವಿ-ಚೆಡ್ಡಿ ಪ್ರಭಾವದಿಂದ ರಾಜ್ಯ ಬಿಜೆಪಿಯ ಪರಮೋಚ್ಚ ನಾಯಕ ಸಂತೋಷ್‍ಜೀ ಕೃಪಾಕಟಾಕ್ಷಕ್ಕೆ ಪಾತ್ರನಾಗಿರುವ ಆಶೀಸರ್ ಮಾಣಿಗೆ ರಾಜ್ಯ ಜೀವ ವೈವಿಧ್ಯ ಮಂಡಳಿ ಪಡೆಯುವುದಕ್ಕೆ ತ್ರಾಸೇನೂ ಆಗಿಲ್ಲ! ಆಶೀಸರ್ ನೇಮಕಾತಿ ಘೋಷಣೆ ಆಗುತ್ತಲೇ ಉತ್ತರ ಕನ್ನಡ ಬಿಜೆಪಿ ಬಣ ಬಡಿದಾಟಕ್ಕೆ ಬಣ್ಣ ಬಂದುಬಿಟ್ಟಿದೆ. ಎಂಪಿ ಅನಂತ್ಮಾಣಿಗೆ ಮಂಡಳಿ ಅಧ್ಯಕ್ಷತೆ ಆಶೀಸರ್‍ಗೆ ಕೊಟ್ಟಿರುವುದು ಇಷ್ಟವಾಗಿಲ್ಲ. ಅನಂತ್ಮಾಣಿ ಎದುರಾಳಿ ಸ್ಪೀಕರ್ ಕಾಗೇರಿ- “ಪಾಪ, ಆಶೀಸರ್‍ಗೆ ಗೂಟದ ಕಾರೊಂದು ಕೊಡೋದ್ರಿಂದ ತೊಂದ್ರೆಂತದೂ ಇಲ್ಲೆ” ಎಂದು ಸಮಾಧಾನ ಮಂತ್ರ ಪಠಿಸುತ್ತಿದ್ದಾರೆ. ಆಶೀಸರ್ ನೇಮಕಾತಿಯನ್ನ ದೊಡ್ಡದೊಂದು ವರ್ಗ ಬಲವಾಗಿ ವಿರೋಧಿಸುತ್ತಿದೆ.

ಪಕ್ಷಕ್ಕಾಗಿ ಹಲವು ವರ್ಷದಿಂದ ನಿಷ್ಠೆಯಿಂದ ದುಡಿದ ಶೂದ್ರರನ್ನು ಕಡೆಗಣಿಸಿ ಜನಿವಾರ ಲಾಬಿ ಮಾಡೋರಿಗೆ ಅವಕಾಶ ಕೊಡುವ ಹೈಕಮಾಂಡ್ ವಿರುದ್ಧ ಕೂಗೆದ್ದಿದೆ. ಆಶೀಸರ್ ನೇಮಕಾತಿ ರದ್ದು ಮಾಡುವಂತೆ ಜಿಲ್ಲಾ ಬಿಜೆಪಿ ಅಧ್ಯಕ್ಷ ನಳಿನ್‍ಕುಮಾರ್ ಕಟೀಲ್‍ಗೆ ಲಗ್ಗೆ ಹಾಕಲು ಕಾರ್ಯಕರ್ತರು ಸ್ಕೆಚ್ ಹಾಕುತ್ತಿದ್ದಾರೆ. ಅಸಮಾನಿತರ ಬೆನ್ನಿಗೆ ಅನಂತ್ಮಾಣಿ ಬಲವಿರುವುದರಿಂದ ಆಶೀಸರ್ ಮುಖ ಸಪ್ಪಗಾಗಿದೆ. ಬಿಜೆಪಿಯ ಗ್ಯಾಂಗ್‍ವಾರ್ ಬೀದಿಗೆ ಬರುವ ಸೂಚನೆಗಳು ಗೋಚರಿಸುತ್ತಿವೆ. ತನ್ನ ಎಂಪಿ ಸೀಟಿಗೇ ಕೈಹಾಕಿದ್ದ, ಮುಂದೂ ಹಾಕಲಿರುವ ಆಶೀಸರ್‍ಗೆ ಅನಂತ್ಮಾಣಿ ಸುಮ್ಮನೆ ಬಿಡಲು ಸಾಧ್ಯವಾ?!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

ಮಧ್ಯಪ್ರದೇಶ| ವಂದೇ ಮಾತರಂ ಹಾಡಲು ನಿರಾಕರಣೆ; ಇಬ್ಬರು ಕಾಂಗ್ರೆಸ್ ಕೌನ್ಸಿಲರ್‌ಗಳ ವಿರುದ್ಧ ಎಫ್‌ಐಆರ್

ಏಪ್ರಿಲ್ 8 ರಂದು ಇಂದೋರ್ ಮುನ್ಸಿಪಲ್ ಕಾರ್ಪೊರೇಷನ್‌ನ ಬಜೆಟ್ ಅಧಿವೇಶನದಲ್ಲಿ ಧಾರ್ಮಿಕ ಮತ್ತು ಸಾಂವಿಧಾನಿಕ ಕಾರಣಗಳನ್ನು ಉಲ್ಲೇಖಿಸಿ ವಂದೇ ಮಾತರಂ ಹಾಡಲು ನಿರಾಕರಿಸಿದ್ದಕ್ಕಾಗಿ ಮಧ್ಯಪ್ರದೇಶ ಪೊಲೀಸರು ಇಬ್ಬರು ಕಾಂಗ್ರೆಸ್ ಕೌನ್ಸಿಲರ್‌ಗಳ ವಿರುದ್ಧ ಎಫ್‌ಐಆರ್...

ನ್ಯಾಯಾಂಗ ಸೇವೆಗಳು, ಸರ್ಕಾರಿ ಸಮಿತಿಗಳಲ್ಲಿ ಶೇ. 50 ಮಹಿಳಾ ಪ್ರಾತಿನಿಧ್ಯ ಕೋರಿ ಪಿಐಎಲ್ : ವಜಾಗೊಳಿಸಿದ ಸುಪ್ರೀಂ ಕೋರ್ಟ್

ಸರ್ಕಾರಿ ಸಮಿತಿಗಳು ಮತ್ತು ನ್ಯಾಯಾಂಗ ಸೇವೆಯ ಖಾಲಿ ಇರುವ ಸ್ಥಾನಗಳಲ್ಲಿ ಮಹಿಳೆಯರಿಗೆ ಶೇ. 50ರಷ್ಟು ಪ್ರಾತಿನಿಧ್ಯ ನೀಡಬೇಕೆಂದು ಕೋರಿ ಸಲ್ಲಿಸಲಾಗಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು (ಪಿಐಎಲ್‌) ವಿಚಾರಣೆಗೆ ಸ್ವೀಕರಿಸಲು ಸುಪ್ರೀಂ ಕೋರ್ಟ್ ಗುರುವಾರ...

ರಷ್ಯಾ ತೈಲ ಖರೀದಿಸಲು ಭಾರತಕ್ಕೆ ನೀಡಿದ್ದ ಕಾಲಾವಕಾಶ ವಿಸ್ತರಿಸುವುದಿಲ್ಲ: ಅಮೆರಿಕ

ಇರಾನ್ ಮತ್ತು ರಷ್ಯಾದಿಂದ ತೈಲವನ್ನು ಖರೀದಿಸಲು ಭಾರತ ಸೇರಿದಂತೆ ವಿವಿಧ ದೇಶಗಳಿಗೆ ಈವರೆಗೆ ನೀಡಲಾಗಿದ್ದ ನಿರ್ಬಂಧ ಸಡಿಲಿಕೆಯನ್ನು ಇನ್ನು ಮುಂದೆ ಮುಂದುವರಿಸುವುದಿಲ್ಲ ಎಂದು ಅಮೆರಿಕದ ಖಜಾನೆ ಕಾರ್ಯದರ್ಶಿ ಸ್ಕಾಟ್ ಬೆಸೆಂಟ್ ಬುಧವಾರ (ಏ.15)...

ಬೆಂಗಳೂರಿನಲ್ಲಿ ಮಾದಕ ವಸ್ತು ಜಾಲ ಪತ್ತೆ; 10 ಜನರ ಬಂಧನ, 23.6 ಕೋಟಿ ಮೌಲ್ಯದ ಮಾದಕ ವಸ್ತು ವಶ

ಬೆಂಗಳೂರು: ಬೃಹತ್ ಮಾದಕ ವಸ್ತು ಜಾಲ ಪತ್ತೆಯಾಗಿದ್ದು, ಬೆಂಗಳೂರು ನಗರ ಪೊಲೀಸರು 10 ಜನ ಶಂಕಿತರನ್ನು ಬಂಧಿಸಿದ್ದಾರೆ ಮತ್ತು ಅಂದಾಜು 23.63 ಕೋಟಿ ರೂ. ಮಾರುಕಟ್ಟೆ ಮೌಲ್ಯದ ಮಾದಕ ದ್ರವ್ಯಗಳನ್ನು ವಶಪಡಿಸಿಕೊಂಡಿದ್ದಾರೆ. ಕಳೆದ ಕೆಲವು...

‘ಮತ ಚಲಾಯಿಸದವರನ್ನು ಶಿಕ್ಷಿಸಲು ಸಾಧ್ಯವಿಲ್ಲ’: ಮತದಾನ ಕಡ್ಡಾಯಗೊಳಿಸಲು ಕೋರಿದ್ದ ಅರ್ಜಿ ತಿರಸ್ಕರಿಸಿದ ಸುಪ್ರೀಂ ಕೋರ್ಟ್

ಮತ ಚಲಾಯಿಸುವುದನ್ನು ಕಡ್ಡಾಯಗೊಳಿಸಲು ನಿರ್ದೇಶನಗಳನ್ನು ಕೋರಿ ಸಲ್ಲಿಸಲಾದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು (ಪಿಐಎಲ್‌) ಸುಪ್ರೀಂ ಕೋರ್ಟ್ ಗುರುವಾರ (ಏ. 16) ವಜಾಗೊಳಿಸಿದೆ ಮತ್ತು ಉದ್ದೇಶಪೂರ್ವಕವಾಗಿ ಮತದಾನದಿಂದ ದೂರ ಉಳಿಯುವ ನಾಗರಿಕರಿಗೆ ದಂಡ ವಿಧಿಸಲು...

ಆರ್‌ಎಸ್‌ಎಸ್‌ಗೆ 100 ವರ್ಷ; ಮುದ್ರಣ ಮಾಧ್ಯಮ ಜಾಹೀರಾತಿಗೆ 76.13 ಲಕ್ಷ ರೂ. ಖರ್ಚು ಮಾಡಿದ ಕೇಂದ್ರ ಸರ್ಕಾರ

ಅಧಿಕೃತವಾಗಿ ನೊಂದಣಿಯಾಗದ ರಾಷ್ಟ್ರೀಯ ಸ್ವಯಂಸೇವಕ ಸಂಘ (ಆರ್‌ಎಸ್‌ಎಸ್) ದ 100ನೇ ವರ್ಷಾಚರಣೆಯ ಜಾಹೀರಾತುಗಳಿಗಾಗಿ ಕೇಂದ್ರ ಸಂಸ್ಕೃತಿ ಸಚಿವಾಲಯವು 76.13 ಲಕ್ಷ ರೂ.ಗಳನ್ನು ಖರ್ಚು ಮಾಡಿದೆ ಎಂದು ಮಾಹಿತಿ ಹಕ್ಕು (ಆರ್‌ಟಿಐ) ಕಾಯ್ದೆಯಿಂದ ತಿಳಿದುಬಂದಿದೆ. ಹಿಂದೂ...

ಡಿಲಿಮಿಟೇಶನ್‌ಗೆ ಲಿಂಕ್ ಮಾಡದೆ ‘ಮಹಿಳಾ ಮೀಸಲಾತಿ’ ಜಾರಿ ಮಾಡಿ: ಗೌರವ್ ಗೊಗೊಯ್

"ಮಹಿಳಾ ಮೀಸಲಾತಿಯನ್ನು ಪ್ರಸ್ತುತ ಲೋಕಸಭೆಯ 543 ಸದಸ್ಯರ ಬಲದ ಮೇಲೆ ಜಾರಿಗೆ ತರಬೇಕು, ಅದನ್ನು ಡಿಲಿಮಿಟೇಷನ್ (ಕ್ಷೇತ್ರ ಪುನರ್‌ ವಿಂಗಡಣೆ) ಸೀಮಿತಗೊಳಿಸಬಾರದು" ಎಂದು ಕಾಂಗ್ರೆಸ್ ಸಂಸದ ಗೌರವ್ ಗೊಗೊಯ್ ಹೇಳಿದರು. "ಸರ್ಕಾರವು ಮಸೂದೆಗಳನ್ನು...

ಕ್ಷೇತ್ರ ಮರುವಿಂಗಡನೆ, ಮಹಿಳಾ ಮೀಸಲಾತಿ : ಲೋಕಸಭೆಯಲ್ಲಿ ಮೂರು ಪ್ರಮುಖ ಮಸೂದೆಗಳ ಮಂಡನೆ

ಮಹಿಳಾ ಮೀಸಲಾತಿ ಕಾಯ್ದೆಗೆ ತಿದ್ದುಪಡಿ ತರಲು ಮತ್ತು ಕ್ಷೇತ್ರ ಮರುವಿಂಗಡಣಾ ಆಯೋಗವನ್ನು ಸ್ಥಾಪಿಸಲು ಕೇಂದ್ರ ಸಚಿವರಾದ ಅರ್ಜುನ್ ರಾಮ್ ಮೇಘವಾಲ್ ಮತ್ತು ಅಮಿತ್ ಶಾ ಅವರು ಗುರುವಾರ (ಏ.16) ಲೋಕಸಭೆಯಲ್ಲಿ ಮೂರು ವಿಧೇಯಕಗಳನ್ನು...

ಮತಾಂತರ ವಿರೋಧಿ ಕಾನೂನನ್ನು ಪೊಲೀಸರು ದುರುಪಯೋಗಪಡಿಸಿಕೊಳ್ಳುತ್ತಿದ್ದಾರೆ: ಅಲಹಾಬಾದ್ ಹೈಕೋರ್ಟ್

ಉತ್ತರ ಪ್ರದೇಶದಲ್ಲಿ 2021 ರ ಕಾನೂನುಬಾಹಿರ ಧರ್ಮ ಮತಾಂತರ ನಿಷೇಧ ಕಾಯ್ದೆಯಡಿಯಲ್ಲಿ ದಾಖಲಾಗಿರುವ ಹಲವಾರು "ಸುಳ್ಳು, ನಕಲಿ ಮತ್ತು ಕ್ಷುಲ್ಲಕ ಎಫ್‌ಐಆರ್"ಗಳನ್ನು ಅಲಹಾಬಾದ್ ಹೈಕೋರ್ಟ್ ಗುರುತಿಸಿದೆ. "ಪೊಲೀಸರು ಮತ್ತು ದೂರುದಾರರು ಕಾನೂನನ್ನು ದುರುಪಯೋಗಪಡಿಸಿಕೊಳ್ಳುವ...

ಸಂಸತ್ತಿನ 3 ದಿನಗಳ ವಿಶೇಷ ಅಧಿವೇಶನ: ಕ್ಷೇತ್ರ ಮರುವಿಂಗಡಣೆ, ಮಹಿಳಾ ಮೀಸಲಾತಿ ಕುರಿತ ಮಸೂದೆಗಳ ಮಂಡನೆ ಸಾಧ್ಯತೆ

ಸಂಸತ್ತಿನ ಮೂರು ದಿನಗಳ ವಿಶೇಷ ಅಧಿವೇಶನ ಗುರುವಾರದಿಂದ (ಏ.16) ಪ್ರಾರಂಭಗೊಂಡಿದೆ. ಕ್ಷೇತ್ರ ಮರುವಿಂಗಡನೆ, ಮಹಿಳಾ ಮೀಸಲಾತಿ ಸೇರಿದಂತೆ ಪ್ರಮುಖ ಮೂರು ಮಸೂದೆಗಳು ಮಂಡನೆಯಾಗುವ ಸಾಧ್ಯತೆ ಇದೆ. ಲೋಕಸಭೆಯ ಒಟ್ಟು ಸ್ಥಾನಗಳ ಸಂಖ್ಯೆಯನ್ನು ಪ್ರಸ್ತುತ...