Homeಕರ್ನಾಟಕಉತ್ತರ ಕನ್ನಡ ಸಂತಾನ ಸಂರಕ್ಷಣೆಗೆ ಒಂದಾದ ಮ್ಯಾಗಿಯಜ್ಜಿ ದೇಶಜ್ಜ!!

ಉತ್ತರ ಕನ್ನಡ ಸಂತಾನ ಸಂರಕ್ಷಣೆಗೆ ಒಂದಾದ ಮ್ಯಾಗಿಯಜ್ಜಿ ದೇಶಜ್ಜ!!

- Advertisement -
- Advertisement -

ಉತ್ತರ ಕನ್ನಡದ ಕಾಂಗ್ರೆಸ್ ಪೊರೆ ಕಳಚಿಕೊಳ್ಳುತ್ತಿದೆ! ಮದವೇರಿದ ಮದ್ದಾನೆಗಳಂತಾಗಿ ದಶಕಗಟ್ಟಲೆ ಕಾಲ ಗುದ್ದಾಡಿ ಜಿಲ್ಲಾ ಕಾಂಗ್ರೆಸನ್ನು ನಜ್ಜುಗುಜ್ಜುಮಾಡಿದ್ದ ಮ್ಯಾಗಿಯಜ್ಜಿ ಮತ್ತು ದೇಶಜ್ಜ ರಾಜಿ ಸಂಕೇತ ಬಿತ್ತರಿಸುತ್ತಿದ್ದಾರೆ. ಪರಸ್ಪರ ಅಸ್ತಿತ್ವ ಉಳಿಸಿಕೊಳ್ಳಲು ಈ ಮುದಿಮಣಿಗಳು ಹೊಂದಾಣಿಕೆಯ ಅನಿವಾರ್ಯಕ್ಕೆ ಬಿದ್ದಿವೆ. ಬದ್ಧವೈರಿಗಳ ಈ ಮನಃಪರಿವರ್ತನೆ ಯಲ್ಲಾಪುರ ಬೈ-ಇಲೆಕ್ಷನ್ ಸೋಲಿನ ನೇರ ಪರಿಣಾಮ ಎಂತಲೇ ರಾಜಕೀಯ ಪಡಸಾಲೆಯಲ್ಲಿ ವಿಶ್ಲೇಷಣೆಗಳು ನಡೆದಿದೆ.

ದೇಶಪಾಂಡೆ ತನ್ನ ಮೂರು ದಶಕದ ರಾಜಕೀಯದಲ್ಲಿ ಜನತಾ ಪರಿವಾರದಲ್ಲಿರಲಿ ಅಥವಾ ಕಾಂಗ್ರೆಸಿನಲ್ಲಿರಲಿ ಯಾರನ್ನೂ ಗೆಲ್ಲಿಸಲು ತ್ರಿಕರ್ಣಪೂರ್ವಕ ಪ್ರಯತ್ನ ಮಾಡಿದ ಕುರುಹುಗಳಿಲ್ಲ. ಹಾಗಂತ ಸೋಲಿಸಲು ಹಲವು ಸಲ ಹಠಹಿಡಿದು ಹಿಕಮತ್ತು ನಡೆಸಿದ ದಾಖಲೆಗಳಿವೆ. ಇಂಥ ಇತಿಹಾಸದ ದೇಶ್ ಕಳೆದ ಯಲ್ಲಾಪುರ ಬೈ-ಇಲೆಕ್ಷನ್‍ನಲ್ಲಿ ತನ್ನ ಚೇಲಾ ಭೀಮಣ್ಣ ನಾಯ್ಕನ ಗೆಲ್ಲಿಸಿ ವೈರಿ ಹೆಬ್ಬಾರ್ ಮೇಲಿನ ಸೇಡು ತೀರಿಸಿಕೊಳ್ಳಲು ಪ್ರತಿಷ್ಠೆ ಪಣಕ್ಕಿಟ್ಟು ಹೋರಾಡಿದ್ದರು. ಆದರೆ ಸ್ವಯಂಕೃತಾಪರಾಧಗಳ ಸರಣಿಯಿಂದ ವರ್ಚಸ್ಸು ಕಳಕೊಂಡಿರುವ ದೇಶ್ ಮುಗ್ಗರಿಸಿ ಮಕಾಡೆ ಮಲಗಿಬಿಟ್ಟರು! ಕಂಗಾಲಾಗಿ ದೇಶಪಾಂಡೆ ಕೂತಿದ್ದ ಈ ಹೊತ್ತಿನಲ್ಲೇ ಬರೋಬ್ಬರಿ ಒಂದು ವರ್ಷದನಂತರ ಜಿಲ್ಲೆಗೆ ವಕ್ಕರಿಸಿದ ಇಲ್ಲಿಯ ಮಾಜಿ ಸಂಸದೆ ಮಾರ್ಗರೇಟ್ ಆಳ್ವ ಆಟ ಶುರುಹಚ್ಚಿಕೊಂಡಿದ್ದರು. ನೇರ ಮ್ಯಾಗಿಯ ಶಿರಸಿಯ ಮನೆಗೇ ಹೋದ ದೇಶ್ ಆಕೆಯ ಮುಂದೆ ನಿಂತು ಹೊಸ ನಂಟಿನ ಪ್ರಸ್ತಾಪ ಇಟ್ಟಿರುವುದು ಅನಿರೀಕ್ಷಿತ ಸಮೀಕರಣವನ್ನು ಜಿಲ್ಲಾ ರಾಜಕೀಯ ಭೂಮಿಕೆಯಲ್ಲಿ ಸೃಷ್ಟಿಸಿಬಿಟ್ಟಿದೆ.

ಮ್ಯಾಗಿ ಮತ್ತಾಕೆಯ ಮಗ ಆಳ್ವ ಫೌಂಡೇಶನ್ ಕಟ್ಟಿಕೊಂಡಿದ್ದರೆ, ದೇಶ್ ಮತ್ತವರ ಪುತ್ರ ಪ್ರಶಾಂತ ದೇಶಪಾಂಡೆ ಟ್ರಸ್ಟ್ ಸ್ಥಾಪಿಸಿಕೊಂಡಿದ್ದಾರೆ. ಎರಡೂ ಕುಟುಂಬಗಳು ಸಾಮಾಜಿಕ ಸೇವೆಯ ಹೆಸರಲ್ಲಿ ರಾಜಕೀಯ ಫಾಯ್ದೆಗೆ ಹವಣಿಸುತ್ತಿವೆ. ಮ್ಯಾಗಿಗೆ ತನ್ನ ಪೆದ್ದು ಕುಲೋದ್ಧಾರಕನನ್ನು ಶಿರಸಿಯ ಶಾಸಕನ ಮಾಡುವ ಕನಸು; ದೇಶ್‍ಗೆ ಮುಂಬೈನಲ್ಲಿ ವಕೀಲಿಕೆ ಮಾಡುವ ಅನಿವಾಸಿ ಉತ್ತರ ಕನ್ನಡಿಗ ಮಗ ಮಹಾರಾಯನ ಸಂಸದನ ಮಾಡುವ ಆಸೆ. ಇದೇ ಒಳಉದ್ದೇಶದಿಂದ ಮ್ಯಾಗಿ ಫೌಂಡೇಷನ್ ಕಾರ್ಯಕ್ರಮ ಹಾಕಿಕೊಂಡು ಈಗ ಜಿಲ್ಲೆಯಲ್ಲಿ ಅಂಡಲೆಯುತ್ತಿದ್ದಾರೆ. ಆಕೆ ಫಂಕ್ಷನ್ ಮುಗಿಸಿ ಮನೆಗೆ ಬರುವುದನ್ನೇ ಕಾಯುತ್ತಿದ್ದ ದೇಶಪಾಂಡೆ ಮೊನ್ನೆ ಶನಿವಾರ ಭೇಟಿಯಾಗಿ ಗ್ಯಾಂಗ್‍ವಾರ್ ನಿಲ್ಲಿಸುವ ಒಪ್ಪಂದ ಮಾಡಿಕೊಂಡಿದ್ದಾರೆ. ಜಿಲ್ಲೆಯಲ್ಲಿ ಬಿಜೆಪಿ ಎಬ್ಬಿಸಿರುವ ಬಡಿವಾರಕ್ಕೆ ಬೆದರಿರುವ ಮ್ಯಾಗಿ-ದೇಶ್ ನೈಚ್ಛಾನುಸಂಧಾನ ನಡೆಸಬೇಕಾಗಿ ಬಂದಿವೆ, ಪಾಪ!!

ಮ್ಯಾಗಿ-ದೇಶ್ ಅಕ್ಕ-ಪಕ್ಕ ಕುಳಿತು ಕಳೆದ ಅಸೆಂಬ್ಲಿ ಲೋಕಸಭೆ ಚುನಾವಣೆಗಳಲ್ಲಿ ತಮ್ಮ ಬಣ ಬಡಿದಾಟದಿಂದಾದ ಹಾನಿಯ ಲೆಕ್ಕ ತೆಗೆದಿದ್ದಾರೆ. ತಮ್ಮೊಳಗಿನ ದ್ವೇಷಾಸೂಯೆ ಮೇಲಾಟದಿಂದ ಗತಿಗೇಡಿ ಬಿಜೆಪಿ ಸೈತಾನನಂತೆ ಬೆಳೆದಿದೆ ಎಂದು ಪಾಪಪ್ರಜ್ಞೆಯಿಂದ ಮಾತಾಡಿಕೊಂಡಿದ್ದಾರೆ; ಈಗಿಂದಲೇ ತಳಮಟ್ಟದಿಂದ ಪಾರ್ಟಿಯನ್ನು ಕಟ್ಟದಿದ್ದರೆ ತಮ್ಮ ವಂಶದ ಉತ್ತರಾಧಿಕಾರಿಗಳಿಗೆ ಭವಿಷ್ಯವಿಲ್ಲ ಎಂಬುದು ಮನಗಂಡಿದ್ದಾರೆ. ಜಿಲ್ಲಾ ಕಾಂಗ್ರೆಸ್ ಉದ್ಧಾರವಾಗಬೇಕಿದ್ದರೆ ಮೊದಲು ಹಾಲಿ ಡಿಸಿಸಿ ಅಧ್ಯಕ್ಷ ಭೀಮಣ್ಣ ನಾಯ್ಕನ ಉಚ್ಚಾಟಿಸಿ ಹೊಸ ಆಯ್ಕೆ ಮಾಡಬೇಕು; ಆನಂತರ ತಾವಿಬ್ಬರೂ ಒಟ್ಟಾಗಿ ಜಿಲ್ಲಾ ಟೂರ್ ಹೊಡೆದು ಪಕ್ಷಕ್ಕೆ ಜೀವ ತುಂಬಬೇಕೆಂದು ಮ್ಯಾಗಿ ಮನದಿಂಗಿತವನ್ನು ದೇಶ್ ಮುಂದೆ ಮಂಡಿಸಿದ್ದಾರೆ. ಇದನ್ನು ದೇಶಪಾಂಡೆಯೂ ಒಪ್ಪಿದ್ದಾರೆ.

ಬದಲಾದ ವರಸೆಯಲ್ಲಿ ಮ್ಯಾಗಿಗೆ ದೇಶಪಾಂಡೆಗಿಂತಲೂ ಹೆಚ್ಚು ಸಿಟ್ಟಿರುವುದು ಭೀಮಣ್ಣನ ಮೇಲೆ. ತನ್ನನ್ನು ಕೊನೆತನಕವೂ ಕಾಡಿದ ಮಾಜಿ ಸಿಎಂ ‘ಬಂ’ನ ಭಾಮೈದ ಈ ಭೀಮಣ್ಣನೆಂಬುದು ಮ್ಯಾಗಿಯ ಹಲವು ಅಸಮಾಧಾನದ ಕಾರಣಗಳಲ್ಲಿ ಒಂದು. ಈ ಭೀಮಣ್ಣ ನಾಯ್ಕನೂ ಅಷ್ಟೇ ಕಿತಾಪತಿಗಾರ. ಮ್ಯಾಗಿಗೆ ಆತ ಕೇರ್ ಮಾಡುತ್ತಿರಲಿಲ್ಲ. ಆಕೆಯ ನಿಷ್ಠಾವಂತ ಹಿಂಬಾಲಕರಾದ ವಿ.ಎನ್.ನಾಯ್ಕ್, ವಸಂತನಾಯ್ಕ್ ವಗೈರೆ ದೀವರ ಹುಡುಗರನ್ನು ಭೀಮಣ್ಣ ಹಣಿಯುತ್ತಲೇ ಬಂದಿದ್ದ. 2013ರ ಅಸೆಂಬ್ಲಿ ಇಲೆಕ್ಷನ್‍ನಲ್ಲಿ ಶಿರಸಿಯಲ್ಲಿ ಸ್ಪೀಕರ್ ಕಾಗೇರಿ ಎದುರು ಮೂರು ಸಾವಿರ ಚಿಲ್ಲರೆ ಮತದ ತೀರಾ ಸಣ್ಣ ಅಂತರದಲ್ಲಿ ಸೋತಿದ್ದ ದಿವಂಗತ ದೀಪಕ್ ಹೊನ್ನಾವರ್ ಮ್ಯಾಗಿಯ ಪುಂಡ ಪಟ್ಟ ಶಿಷ್ಯನಾಗಿದ್ದ. ಆತ ಗೆಲುವಿನ ಹತ್ತಿರ ಬಂದು ಮುಗ್ಗರಿಸಲು ಭೀಮಣ್ಣ-ರವೀಂದ್ರನಾಥ್ ನಾಯ್ಕ ಜೋಡಿಯ ದ್ರೋಹವೇ ಅಂದು ಕಾರಣವಾಗಿತ್ತು. ಈ ಉರಿ ಮ್ಯಾಗಿಗಿನ್ನೂ ಕಡಿಮೆಯಾಗಿಲ್ಲ. ಒಂದು ಕಾಲದಲ್ಲಿ ರವಿ ಮ್ಯಾಗಿ ಶಿಷ್ಯನಾಗಿದ್ದವ. ಆಕೆಯಿಂದಲೇ ಶಿರಸಿ ಕಾಂಗ್ರೆಸ್ ಕ್ಯಾಂಡಿಡೇಟಾಗಿದ್ದವ. ಆನಂತರ ಗುರುಮಾತೆಗೇ ತಿರುಗಿಬಿದ್ದಿದ್ದ ರವಿ ಜೆಡಿಎಸ್ ಪಾಲಾಗಿದ್ದ. ಮೊನ್ನೆಯ ಯಲ್ಲಾಪುರ ಉಪಚುನಾವಣೆ ಗಡಿಬಿಡಿಯಲ್ಲಿ ಈ ರವಿ, ದೇಶಪಾಂಡೆ ಜುಬ್ಬ ಹಿಡಿದುಕೊಂಡು ಕಾಂಗ್ರೆಸ್‍ಗೆ ನುಸುಳಿದ್ದಾನೆ.

ಇಂಥ ಭೀಮ-ರವಿಯಂಥವರ ದೂರವಿಟ್ಟರೆ ಮ್ಯಾಗಿ-ದೇಶ್‍ನಂಟು ಕುದುರುತ್ತದೆ. 2018ರ ಶಿರಸಿ ವಿಧಾನಸಭಾ ಕ್ಷೇತ್ರದ ಚುನಾವಣೆ ಮತ್ತು ಮೊನ್ನೆಯ ಯಲ್ಲಾಪುರ ಉಪಚುನಾವಣೆಯಲ್ಲಿ ಹೇತ್ಲಾಂಡಿ ಭೀಮಣ್ಣನ ಕಾಂಗ್ರೆಸ್ ಕ್ಯಾಂಡಿಡೇಟ್ ಮಾಡಿದ್ದೇ ತಪ್ಪು ಆಯ್ಕೆ ಎನ್ನುವ ಮ್ಯಾಗಿ ತನ್ನ ಮಗ ಶಿರಸಿಯಲ್ಲಿ “ರೈಟ್ ಕ್ಯಾಂಡಿಡೇಟ್” ಎನ್ನುವುದೇ ವಿಚಿತ್ರ. ಬಿಜೆಪಿ ಬೆಂಬಲಿಗರಾದ ಹವ್ಯಕ ಬ್ರಾಹ್ಮಣ ಬಾಹುಳ್ಯದ ಶಿರಸಿ-ಸಿದ್ಧಾಪುರ ಕ್ಷೇತ್ರದಲ್ಲಿ ಅಲ್ಪಸಂಖ್ಯಾತ ಕ್ರಿಶ್ಚಿಯನ್ ಸಮುದಾಯದ ನಿವೇದಿತ್ ಆಳ್ವ ಗೆಲ್ಲುವುದು ಅಷ್ಟು ಸುಲಭವೇನಲ್ಲ. ಅಲ್ಪಸಂಖ್ಯಾತರ ದ್ವೇಷದ ಮೇಲೆಯೇ ಬಿಜೆಪಿಯನ್ನು ಕಟ್ಟಿರುವ ಕಾಗೇರಿ, ಅನಂತ್ಮಾಣಿಗಳ ತವರು ಶಿರಸಿಯಲ್ಲಿ ಕಾಂಗ್ರೆಸ್ ಹವ್ಯಕ ಮಾಣಿ/ಕೂಸು ನಿಲ್ಲಿಸಿದರಷ್ಟೇ ಅನುಕೂಲ. ಸದ್ಯ ಜೆಡಿಎಸ್‍ನಲ್ಲಿರುವ ದಿವಂಗತ ಮಾಜಿ ಸಿಎಂ ರಾಮಕೃಷ್ಣ ಹೆಗಡೆಜೀ ದಾಯಾದಿ ಮೊಮ್ಮಗ ಶಶಿಭೂಷಣ ಹೆಗಡೆ ಕಾಂಗ್ರೆಸ್‍ಗೆ ಸೂಕ್ತ ಅಭ್ಯರ್ಥಿ. ಕಾಂಗ್ರೆಸ್ ಸೇರುವ ಆಸೆ ಶಶಿಗಿದ್ದರೂ ಹೆಗಡೆಜೀಯ ದೊಡ್ಮನೆ ಫ್ಯಾಮಿಲಿ ಬಗ್ಗೆ ದೇಶಪಾಂಡೆಗಿರುವ ಪುರಾತನ ದ್ವೇಷಕ್ಕೆ ಹೆದರಿ ಆತ ಸುಮ್ಮನಿದ್ದಾರೆ.

ಗೆಲ್ಲಲು ಇರುವ ಇಂಥ ಸರಳ ಲೆಕ್ಕಾಚಾರಗಳು ಪುತ್ರ ವ್ಯಾಮೋಹದಲ್ಲಿ ಮಂಕಾಗಿರುವ ಮ್ಯಾಗಜ್ಜೀ-ದೇಶಜ್ಜನಿಗೆ ಅರ್ಥವಾಗೋದಿಲ್ಲ. ಔಟ್‍ಡೇಟೆಡ್ ದಿಗ್ಗಜರು ಹಳೆಯದನ್ನು ಮರೆತು ಒಂದಾಗಿ ಪಾರ್ಟಿ ಕಟ್ಟಬಹುದೆಂಬ ನಂಬಿಕೆ ನಿಷ್ಠಾವಂತ ಕಾಂಗ್ರೆಸಿಗರಿಗಂತೂ ಇಲ್ಲಾ. ಆದರೆ ಮಕ್ಕಳ ಭವಿಷ್ಯ ಬೆಳಗಲು ಅನಿವಾರ್ಯವಾಗಿ ಮ್ಯಾಗಿ-ದೇಶ್ ಹೊಸ ಹೊಂದಾಣಿಕೆಯ ಸ್ಕೆಚ್ ಹಾಕಿದ್ದಾರೆಂಬುದು ಕಾಂಗ್ರೆಸ್‍ನಲ್ಲಷ್ಟೇ ಅಲ್ಲ ವಿರೋಧಿ ಕೇಸರಿ ಪಾಳೆಯದಲ್ಲೂ ಸಣ್ಣದೊಂದು ತಲ್ಲಣ ಎಬ್ಬಿಸಿರುವುದಂತೂ ಖರೆ!!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

2 COMMENTS

LEAVE A REPLY

Please enter your comment!
Please enter your name here

- Advertisment -

ಸಂವಿಧಾನದ ಬುಡಕ್ಕೆ ಕೊಡಲಿ ಏಟು: ಆರ್‌ಎಸ್‌ಎಸ್-ಬಿಜೆಪಿಯ ಷಡ್ಯಂತ್ರ ಸೋಲಿಸಲು ಎರಡನೇ ಸ್ವಾತಂತ್ರ್ಯ ಸಂಗ್ರಾಮ ಅನಿವಾರ್ಯ – ಬಿ.ಕೆ. ಹರಿಪ್ರಸಾದ್

ಎಸ್‌ಐಆರ್ (SIR) ವಿರೋಧಿ ಹೋರಾಟದಲ್ಲಿ ನಮ್ಮ ಪಕ್ಷ ನಿಮ್ಮ ಜೊತೆಗಿದೆ ಎಂದು ಹೇಳಲು ಸರ್ಕಾರದ ಪ್ರತಿನಿಧಿಯಾಗಿ ನಾನು ಇಲ್ಲಿ ಬಂದಿದ್ದೇನೆ. ನೀವು ಮಂಡಿಸಿರುವ ಹಕ್ಕೊತ್ತಾಯಗಳ ಕುರಿತು ನೂತನ ಮುಖ್ಯಮಂತ್ರಿಗಳು, ಸಿದ್ದರಾಮಯ್ಯ ಸೇರಿದಂತೆ ಪಕ್ಷದ...

ಮತದಾರರ ಪಟ್ಟಿಯಿಂದ 65 ಲಕ್ಷ ಜನರನ್ನು ಹೊರಹಾಕಿದ್ದು ಯಾರು? ಈ ಅಕ್ರಮಕ್ಕೆ ಚುನಾವಣಾ ಆಯೋಗವೇ ಉತ್ತರಿಸಬೇಕು: ಮೊಹಮ್ಮದ್ ಯೂಸುಫ್ ಕನ್ನಿ

"ಬ್ರಿಟಿಷರ ವಿರುದ್ಧ ಹೋರಾಡಿ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟಿದ್ದೇವೆ. 1952ರ ಮೊದಲ ಚುನಾವಣೆಯ ಸಂದರ್ಭದಲ್ಲಿ ಸುಮಾರು 17.32 ಕೋಟಿ ಮತದಾರರಿದ್ದರು. 1955ರಲ್ಲಿ ಸಿಟಿಜನ್‌ಶಿಪ್ ಆಕ್ಟ್ ಜಾರಿಯಾದ ಬಳಿಕ ನಡೆದ 1957ರ ಚುನಾವಣೆಯಲ್ಲಿ ಈ ಸಂಖ್ಯೆ...

ಸರ್ಕಾರ-ನ್ಯಾಯಾಂಗ ವ್ಯವಸ್ಥೆ ಕೈಬಿಟ್ಟರೆ ರಾಜ್ಯದ ಜನ ಅನಾಥರಾಗುತ್ತಾರೆ : ಹಿರಿಯ ಸಾಹಿತಿ ಬಿ.ಟಿ. ಲಲಿತಾ ನಾಯ್ಕ್

ಎಸ್‌ಐಆರ್‌ ವಿಚಾರದಲ್ಲಿ ಇಂದು ನಾಡಿನ ಜನತೆ ಭೀಕರ ಸಂಕಷ್ಟದಲ್ಲಿದ್ದಾರೆ. ಈ ಗೊಂದಲವನ್ನು ಉಂಟು ಮಾಡಿದವರು ಯಾರು? ಕೇಂದ್ರ ಸರ್ಕಾರವೋ ಅಥವಾ ಕರ್ನಾಟಕ ಸರ್ಕಾರದ ಅಲಕ್ಷ್ಯ ಇದಕ್ಕೆ ಕಾರಣವೇ? ಅಥವಾ ನಮಗೆ ಸಂಬಂಧವೇ ಇಲ್ಲ...

ಎಸ್ಐಆರ್ ಹೆಸರಿನಲ್ಲಿ ನಡೆಯುತ್ತಿರುವ ಜನವಿರೋಧಿ ಹುನ್ನಾರಗಳನ್ನು ಸೋಲಿಸಬೇಕಿದೆ: ಎಸ್. ವರಲಕ್ಷ್ಮಿ

ಬೆಂಗಳೂರು: ರಾಜ್ಯಾದ್ಯಂತ ಎಸ್ಐಆರ್ (SIR) ವಿರುದ್ಧ ನಡೆಯುತ್ತಿರುವ ಸಮಾವೇಶವು ಆಕ್ರಮಣಕಾರಿ ಧೋರಣೆಯ ವಿರುದ್ಧದ ಬೃಹತ್ ಪ್ರತಿರೋಧವಾಗಿದೆ ಎಂದು ಸಿಐಟಿಯು ರಾಜ್ಯ ಪ್ರಧಾನ ಕಾರ್ಯದರ್ಶಿ ಎಸ್. ವರಲಕ್ಷ್ಮಿ ತಿಳಿಸಿದರು. ಎಸ್ಐಆರ್ ಸಮಸ್ಯೆಯಲ್ಲ ಎಂದು ಬಿಂಬಿಸುವ ಸಂಘಪರಿವಾರದವರ...

ಮತದಾನ ನಮ್ಮ ಜನ್ಮಸಿದ್ದ ಹಕ್ಕು, ಎಸ್‌ಐಆರ್ ಕುರಿತು ಜನ ಜಾಗೃತಿ ಅಗತ್ಯ: ಪೀಟರ್ ಮಚಾಡೋ

'ಮತದಾನ ನಮ್ಮ ಜನ್ಮಸಿದ್ದ ಹಕ್ಕು ಅದನ್ನು ನಾವು ಬಿಟ್ಟು ಕೊಡುವುದಿಲ್ಲ' ಎಂದು ಕರ್ನಾಟಕ ಕ್ರೈಸ್ತ ಸಮುದಾಯದ ಮಹಾ ಧರ್ಮಾಧ್ಯಕ್ಷ ರೆವೆಂಡರ್ ಫಾದರ್ ಪೀಟರ್ ಮಚಾಡೋ ಹೇಳಿದರು. ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ...

ಸುರಿವ ಮಳೆಯಲ್ಲಿಯೂ ಎಸ್‌ಐಆರ್ ವಿರೋಧಿ ಜಾಥಾಕ್ಕೆ ಜೊತೆಯಾದ ಮಳವಳ್ಳಿ, ಮದ್ದೂರು, ಮಂಡ್ಯ ಜನತೆ

ಮಂಡ್ಯ: ಮಳವಳ್ಳಿಯ ಬಸ್ ನಿಲ್ದಾಣದ ಬಳಿ ಸುರಿವ ಮಳೆಯಲ್ಲಿಯೂ 'ಎಸ್‌ಐಆರ್ (SIR) ವಿರೋಧಿ ಕರ್ನಾಟಕ' ಜಾಥಾಕ್ಕೆ ಹೋರಾಟಗಾರರು, ಬರಹಗಾರರು, ಜನಚಳವಳಿಗಳ ಮುಖಂಡರು ಹಾಗೂ ಪ್ರಗತಿಪರರು ಬೆಂಬಲ ವ್ಯಕ್ತಪಡಿಸಿದರು‌. ಈ ವೇಳೆ ಎಸ್‌ಐಆರ್ ಕುರಿತು ಮಾತನಾಡಿದ...

ಚಿತ್ರದುರ್ಗದಲ್ಲಿ ಸಮಾರೋಪಗೊಂಡ ಮಾರ್ಗ -3 SIR ವಿರೋಧಿ ಜನಜಾಗೃತಿ ಜಾಥ: ಜೂನ್ 20ರ ಸಮಾವೇಶದ ಯಶಸ್ಸಿಗೆ ಕರೆ

ಚುನಾವಣಾ ಆಯೋಗ ಜಾರಿಗೆ ತರಲು ಹೊರಟಿರುವ ಎಸ್‌ಐಆರ್ (SIR) ವ್ಯವಸ್ಥೆಯನ್ನು ವಿರೋಧಿಸಿ ಹಮ್ಮಿಕೊಳ್ಳಲಾಗಿದ್ದ ‘ಎಸ್‌ಐಆರ್ ವಿರೋಧಿ ಜನಜಾಗೃತಿ ಜಾಥಾ’ವು ದಾವಣಗೆರೆಯಲ್ಲಿ ಪ್ರಚಾರ ಮುಗಿಸಿ ಚಿತ್ರದುರ್ಗವನ್ನು ತಲುಪಿದ್ದು, ಇಲ್ಲಿ ಯಶಸ್ವಿಯಾಗಿ ಸಮಾರೋಪಗೊಂಡಿದೆ. ಎದ್ದೇಳು ಕರ್ನಾಟಕ,...

ಗದಗ | ಮನುವಾದದ ಜಾರಿಗೆ ಎಸ್‌ಐಆರ್‌ ಹೇರಿಕೆ : ಡಾ.ಇಸಾಬೆಲ್ಲ ಝೇವಿಯರ್

ದೇಶದಲ್ಲಿ ಮನುವಾದ ಜಾರಿಗೆ ತರುವುದು ಆರ್‌ಎಸ್‌ಎಸ್‌-ಸಂಘಪರಿವಾರದ ಮೂಲ ಉದ್ದೇಶ, ಅದಕ್ಕಾಗಿ ಜನರ ಮೇಲೆ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಯಂತಹ ಹೊಸ ಹೊಸ ಪ್ರಕ್ರಿಯೆಗಳನ್ನು ಹೇರಲಾಗುತ್ತಿದೆ ಎಂದು ಸಾಮಾಜಿಕ ಹೋರಾಟಗಾರ್ತಿ...

ಸಂವಿಧಾನ ವಿರೋಧಿ ‘SIR’ಗೆ ಹರಿಹರದಲ್ಲಿ ತೀವ್ರ ವಿರೋಧ: ಜನಜಾಗೃತಿ ಜಾಥಾದ ಮೂಲಕ ಕೇಂದ್ರ ಸರ್ಕಾರದ ವಿರುದ್ಧ ನಾಗರಿಕರ ಆಕ್ರೋಶ

ದಾವಣಗೆರೆ ಜಿಲ್ಲೆಯ ಹರಿಹರ ತಾಲ್ಲೂಕಿನಲ್ಲಿ ಇತ್ತೀಚೆಗೆ ಕೇಂದ್ರ ಚುನಾವಣಾ ಆಯೋಗದ 'SIR' (ವಿಶೇಷ ಗುರುತಿನ ಪರಿಶೀಲನೆ/ಮರುಪರಿಶೀಲನಾ ಕ್ರಮ) ಯೋಜನೆ ವಿರುದ್ಧ ಬೃಹತ್ ಜನಜಾಗೃತಿ ಜಾಥಾ ಯಶಸ್ವಿಯಾಗಿ ಸಂಚರಿಸಿತು. ಸಾರ್ವಜನಿಕರಲ್ಲಿ ಈ ಯೋಜನೆಯ ಕುರಿತು...

“ಎಸ್ಐಆರ್ ಮೂಲಕ ಮನುವಾದದ ಜಾರಿಗೆ ಕುತಂತ್ರ ರೂಪಿಸುತ್ತಿರುವ ಬಿಜೆಪಿ ಗೆಲ್ಲಲು ಬಿಡುವುದಿಲ್ಲ”:  ಮೈಸೂರಿನಲ್ಲಿ ಜನಾಕ್ರೋಶ

2026 ಜೂನ್ 16 ರಂದು ಹುಣುಸೂರು, ಹೆಚ್.ಡಿ ಕೋಟೆ, ಮೈಸೂರಿನಲ್ಲಿ ಸಾಗಿದ ಎಸ್ಐಆರ್ ವಿರೋಧಿ ಕರ್ನಾಟಕ ಜಾಥಾಕ್ಕೆ ಹುಣುಸೂರಿನ ಸಂವಿಧಾನ ಸರ್ಕಲ್ ನಿಂದ ಅಭೂತಪೂರ್ವ ಬೆಂಬಲ ಸಿಕ್ಕಿತು. ಬೆಳಗ್ಗೆ 8 ಗಂಟೆ ಸುಮಾರಿಗೆ ಎಸ್ಐಆರ್...