Homeಮುಖಪುಟಉತ್ತರಾಖಂಡ | 17 ವರ್ಷದ ಬಾಲಕಿಯೊಂದಿಗೆ ಸಂಬಂಧ ಬೆಳೆಸಿದ್ದ 10ಕ್ಕೂ ಹೆಚ್ಚು ಯುವಕರಿಗೆ ಎಚ್‌ಐವಿ ಸೋಂಕು

ಉತ್ತರಾಖಂಡ | 17 ವರ್ಷದ ಬಾಲಕಿಯೊಂದಿಗೆ ಸಂಬಂಧ ಬೆಳೆಸಿದ್ದ 10ಕ್ಕೂ ಹೆಚ್ಚು ಯುವಕರಿಗೆ ಎಚ್‌ಐವಿ ಸೋಂಕು

- Advertisement -
- Advertisement -

ಹೆರಾಯಿನ್‌ಗೆ ವ್ಯಸನಿಯಾಗಿದ್ದ 17 ವರ್ಷದ ಬಾಲಕಿಯೊಂದಿಗೆ ದೈಹಿಕ ಸಂಬಂಧ ಬೆಳೆಸಿದ್ದ 10ಕ್ಕೂ ಹೆಚ್ಚು ಯುವಕರು ಎಚ್‌ಐವಿ / ಏಡ್ಸ್‌ಗೆ ತುತ್ತಾಗಿರುವ ಘಟನೆ ಉತ್ತರಾಖಂಡ ರಾಜ್ಯದ ನೈನಿತಾಲ್ ಜಿಲ್ಲೆಯ ರಾಮನಗರದಲ್ಲಿ ನಡೆದಿದೆ. ಘಟನೆಯು ಪ್ರದೇಶದಾದ್ಯಂತ ಆಘಾತವನ್ನು ಉಂಟುಮಾಡಿದೆ.

“ಇದು ಗೊಂದಲಕಾರಿ ಘಟನೆಯಾಗಿದ್ದು, ನಾವು ತಕ್ಷಣ ಕ್ರಮ ತೆಗೆದುಕೊಳ್ಳುತ್ತಿದ್ದೇವೆ. ಹುಡುಗಿಯ ಚಟವು ಈ ದುರದೃಷ್ಟಕರ ಪರಿಸ್ಥಿತಿಗೆ ಕಾರಣ. ನಾವು ಅವರಿಗೆ ಸಲಹೆ ಮತ್ತು ಬೆಂಬಲವನ್ನು ಒದಗಿಸಲು ಕೆಲಸ ಮಾಡುತ್ತಿದ್ದೇವೆ” ಎಂದು ಜಿಲ್ಲಾ ಆರೋಗ್ಯಾಧಿಕಾರಿ ಹೇಳಿದ್ದಾರೆ.. ಉತ್ತರಾಖಂಡ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
ಇಲ್ಲಿಕ್ಲಿಕ್ ಮಾಡಿ

ಹೆರಾಯಿನ್ ಚಟಕ್ಕೆ ಒಳಗಾಗಿರುವ 17 ವರ್ಷದ ಬಾಲಕಿ ತನ್ನ ಚಟಕ್ಕೆ ಹಣ ಹೊಂದಿಸಲು ಯುವಕರೊಂದಿಗೆ ಶಾರೀರಿಕ ಸಂಬಂಧದಲ್ಲಿ ತೊಡಗಿದ್ದಳು ಎನ್ನಲಾಗಿದೆ. ಯುವಕರು ಅನಾರೋಗ್ಯಕ್ಕೆ ಒಳಗಾದಾಗ ಆಸ್ಪತ್ರೆಗೆ ದಾಖಲಾಗಿದ್ದು, ಈ ವೇಳೆ ನಡೆಸಿದ ಪರೀಕ್ಷೆಯ ವೇಳೆ ಯುವಕರಿಗೆ ಎಚ್‌ಐವಿ ಇರುವುದು ದೃಢವಾಗಿದೆ ಎಂದು ವರದಿ ಉಲ್ಲೇಖಿಸಿದೆ.

ನೈನಿತಾಲ್‌ನ ಮುಖ್ಯ ವೈದ್ಯಾಧಿಕಾರಿ ಡಾ.ಹರೀಶ್ ಚಂದ್ರ ಪಂತ್ ಮಾತನಾಡಿ, ಪ್ರದೇಶದಲ್ಲಿ ಎಚ್‌ಐವಿ ಪ್ರಕರಣಗಳಲ್ಲಿ ಹಠಾತ್ ಹೆಚ್ಚಳದ ಬಗ್ಗೆ ಕಳವಳ ವ್ಯಕ್ತಪಡಿಸಿದ್ದಾರೆ. “ಸಾಮಾನ್ಯವಾಗಿ, ವಾರ್ಷಿಕವಾಗಿ ಸುಮಾರು 20 HIV ಪಾಸಿಟಿವ್ ಪ್ರಕರಣಗಳು ಪತ್ತೆಯಾಗುತ್ತವೆ. ಆದಾಗ್ಯೂ, ಈ ವರ್ಷ ಕೇವಲ ಐದು ತಿಂಗಳೊಳಗೆ, 19 ಹೊಸ ಪ್ರಕರಣಗಳು ವರದಿಯಾಗಿವೆ.” ಎಂದು ಅವರು ಹೇಳಿದ್ದಾರೆ.

ಅಧಿಕಾರಿಗಳು ಈ ಘಟನೆಯನ್ನು ಗಂಭೀರವಾಗಿ ಪರಿಗಣಿಸಿದ್ದು, ಸಮಸ್ಯೆಯನ್ನು ಪರಿಹರಿಸಲು ವಿವಿಧ ಪ್ರದೇಶಗಳಲ್ಲಿ ಕೌನ್ಸೆಲಿಂಗ್ ಸೇವೆಗಳನ್ನು ಪ್ರಾರಂಭಿಸಿದ್ದಾರೆ ಎಂದು ಅವರು ಒತ್ತಿ ಹೇಳಿದರು.

“ಎಚ್‌ಐವಿ ಪ್ರಕರಣಗಳಲ್ಲಿ ಈ ಹಠಾತ್ ಹೆಚ್ಚಳದಿಂದ, ಅದರಲ್ಲೂ ವಿಶೇಷವಾಗಿ ವಾರ್ಷಿಕವಾಗಿ ವರದಿಯಾಗುವ ಪ್ರಕರಣಗಳು ಈಗಲೆ ವರದಿಯಾಗಿದ್ದು ಆತಂಕಕಾರಿ” ಎಂದು ಡಾ. ಪಂತ್ ಹೇಳಿದ್ದಾರೆ. ಜಿಲ್ಲಾ ಆರೋಗ್ಯ ಇಲಾಖೆಯು ಈಗ ಪೀಡಿತ ಸಮುದಾಯಗಳಿಗೆ ಬೆಂಬಲ ಮತ್ತು ಶಿಕ್ಷಣವನ್ನು ಒದಗಿಸಲು ಕೆಲಸ ಮಾಡುತ್ತಿದೆ ಎಂದು ಅವರು ಹೇಳಿದ್ದಾರೆ.

“ಕಳೆದ 17 ತಿಂಗಳುಗಳಲ್ಲಿ, ರಾಮನಗರದಲ್ಲಿ 45 ವ್ಯಕ್ತಿಗಳು ಎಚ್‌ಐವಿ ಪಾಸಿಟಿವ್ ಆಗಿದ್ದಾರೆ ಎಂದು ವರದಿಯಾಗಿದೆ. ಇದು ಆರೋಗ್ಯ ಅಧಿಕಾರಿಗಳಲ್ಲಿ ಕಳವಳವನ್ನು ಉಂಟುಮಾಡಿದೆ” ಎಂದು ಆರೋಗ್ಯ ಇಲಾಖೆಯ ಹಿರಿಯ ಮೂಲಗಳು ಬಹಿರಂಗಪಡಿಸಿವೆ.

“ಯುವಕರು ಅನಾರೋಗ್ಯಕ್ಕೆ ಒಳಗಾಗಲು ಪ್ರಾರಂಭವಾದಾಗ ಆಸ್ಪತ್ರೆಗೆ ದಾಖಲಾಗಿದ್ದರು. ಈ ವೇಳೆ ನಡೆಸಿದ ಪರೀಕ್ಷೆಗಳು ಅವರು ಎಚ್ಐವಿ ಪಾಸಿಟಿವ್ ಆಗಿರುವುದು ದೃಢಪಡಿಸಿವೆ. ಇನ್ನೂ ಹೆಚ್ಚು ಆತಂಕದ ಸಂಗತಿಯೆಂದರೆ, ಈ ವ್ಯಕ್ತಿಗಳಲ್ಲಿ ಹಲವಾರು ವ್ಯಕ್ತಿಗಳು ಮದುವೆಯಾಗಿದ್ದು, ಅವರ ಸಂಗಾತಿಗಳು ಸಹ ಈ ಕಾಯಿಲೆಗೆ ತುತ್ತಾಗಿದ್ದಾರೆ” ಎಂದು ಮೂಲಗಳು ಹೇಳಿವೆ.

ಇದು ನಮ್ಮ ಸಮುದಾಯಕ್ಕೆ ಎಚ್ಚರಿಕೆಯ ಕರೆಗಂಟೆಯಾಗಿದೆ ಎಂದು ನೈನಿತಾಲ್‌ನ ಮುಖ್ಯ ವೈದ್ಯಾಧಿಕಾರಿ ಡಾ.ಹರೀಶ್ ಚಂದ್ರ ಪಂತ್ ಹೇಳಿದ್ದಾರೆ. “ನಾವು ಜಾಗೃತಿ ಮೂಡಿಸಲು, ಸಮಾಲೋಚನೆ ನೀಡಲು ಮತ್ತು ಈ ಸಾಂಕ್ರಮಿಕವನ್ನು ತಡೆಗಟ್ಟಲು ದಣಿವರಿಯಿಲ್ಲದೆ ಕೆಲಸ ಮಾಡುತ್ತಿದ್ದೇವೆ.” ಎಂದು ಅವರು ತಿಳಿಸಿದ್ದಾರೆ.

“ರಾಮನಗರ ಎಚ್‌ಐವಿ ಸಾಂಕ್ರಮಿಕ್ಕೆ ಸಂಬಂಧಿಸಿ ಅನೇಕ ಯುವಕರು ಅವರ ಸಾಮಾನ್ಯ ಲಿಂಕ್ ಅನ್ನು ಹಂಚಿಕೊಂಡಿದ್ದಾರೆ. ಅದರ ಮೂಲಕ ಅವರ ಅರಿವಿಗೆ ಬಾರದಂತೆ ರೋಗಕ್ಕೆ ತುತ್ತಾಗಿದ್ದಾರೆ. ಸಮಾಲೋಚನೆಯ ಅವಧಿಯಲ್ಲಿ, ಅವರೆಲ್ಲರೂ ಬಾಲಕಿಯೊಂದಿಗೆ ದೈಹಿಕ ಸಂಬಂಧಗಳನ್ನು ಹೊಂದಿರುವ ಬಗ್ಗೆ ನಾವು ಕಂಡುಕೊಂಡಿದ್ದೇವೆ. ಬಾಲಕಿಯು ಮಾದಕ ದ್ರವ್ಯದ ಚಟ ಹೊಂದಿದ್ದರು ಎಂದು ಇವರ್ಯಾರಿಗೂ ತಿಳಿದಿರಲಿಲ್ಲ” ಎಂದು ಆರೋಗ್ಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

“ಚಟದಿಂದ ಹೊರಬರಲಾರದ ಬಾಲಕಿಯು ತನ್ನ ಚಟಕ್ಕೆ ಹಣ ಹೊಂದಿಸಲು ಈ ಸಂಬಂಧಗಳಲ್ಲಿ ತೊಡಗಿಸಿಕೊಂಡಿದ್ದರು. ದುರದೃಷ್ಟವಶಾತ್, ಯುವಕರು ಸುಲಭವಾಗಿ ಇದಕ್ಕೆ ಬಲಿಯಾಗಿದ್ದಾರೆ” ಎಂದು ಅಧಿಕಾರಿ ತಿಳಿಸಿದ್ದಾರೆ.

ಇದನ್ನೂ ಓದಿ: ಶಕ್ತಿ ಯೋಜನೆ ಮರುಪರಿಶೀಲನೆ : ಡಿ.ಕೆ ಶಿವಕುಮಾರ್ ಸುಳಿವು

ಶಕ್ತಿ ಯೋಜನೆ ಮರುಪರಿಶೀಲನೆ : ಡಿ.ಕೆ ಶಿವಕುಮಾರ್ ಸುಳಿವು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...