Homeಮುಖಪುಟಉತ್ತರಾಖಂಡ | 17 ವರ್ಷದ ಬಾಲಕಿಯೊಂದಿಗೆ ಸಂಬಂಧ ಬೆಳೆಸಿದ್ದ 10ಕ್ಕೂ ಹೆಚ್ಚು ಯುವಕರಿಗೆ ಎಚ್‌ಐವಿ ಸೋಂಕು

ಉತ್ತರಾಖಂಡ | 17 ವರ್ಷದ ಬಾಲಕಿಯೊಂದಿಗೆ ಸಂಬಂಧ ಬೆಳೆಸಿದ್ದ 10ಕ್ಕೂ ಹೆಚ್ಚು ಯುವಕರಿಗೆ ಎಚ್‌ಐವಿ ಸೋಂಕು

- Advertisement -
- Advertisement -

ಹೆರಾಯಿನ್‌ಗೆ ವ್ಯಸನಿಯಾಗಿದ್ದ 17 ವರ್ಷದ ಬಾಲಕಿಯೊಂದಿಗೆ ದೈಹಿಕ ಸಂಬಂಧ ಬೆಳೆಸಿದ್ದ 10ಕ್ಕೂ ಹೆಚ್ಚು ಯುವಕರು ಎಚ್‌ಐವಿ / ಏಡ್ಸ್‌ಗೆ ತುತ್ತಾಗಿರುವ ಘಟನೆ ಉತ್ತರಾಖಂಡ ರಾಜ್ಯದ ನೈನಿತಾಲ್ ಜಿಲ್ಲೆಯ ರಾಮನಗರದಲ್ಲಿ ನಡೆದಿದೆ. ಘಟನೆಯು ಪ್ರದೇಶದಾದ್ಯಂತ ಆಘಾತವನ್ನು ಉಂಟುಮಾಡಿದೆ.

“ಇದು ಗೊಂದಲಕಾರಿ ಘಟನೆಯಾಗಿದ್ದು, ನಾವು ತಕ್ಷಣ ಕ್ರಮ ತೆಗೆದುಕೊಳ್ಳುತ್ತಿದ್ದೇವೆ. ಹುಡುಗಿಯ ಚಟವು ಈ ದುರದೃಷ್ಟಕರ ಪರಿಸ್ಥಿತಿಗೆ ಕಾರಣ. ನಾವು ಅವರಿಗೆ ಸಲಹೆ ಮತ್ತು ಬೆಂಬಲವನ್ನು ಒದಗಿಸಲು ಕೆಲಸ ಮಾಡುತ್ತಿದ್ದೇವೆ” ಎಂದು ಜಿಲ್ಲಾ ಆರೋಗ್ಯಾಧಿಕಾರಿ ಹೇಳಿದ್ದಾರೆ.. ಉತ್ತರಾಖಂಡ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
ಇಲ್ಲಿಕ್ಲಿಕ್ ಮಾಡಿ

ಹೆರಾಯಿನ್ ಚಟಕ್ಕೆ ಒಳಗಾಗಿರುವ 17 ವರ್ಷದ ಬಾಲಕಿ ತನ್ನ ಚಟಕ್ಕೆ ಹಣ ಹೊಂದಿಸಲು ಯುವಕರೊಂದಿಗೆ ಶಾರೀರಿಕ ಸಂಬಂಧದಲ್ಲಿ ತೊಡಗಿದ್ದಳು ಎನ್ನಲಾಗಿದೆ. ಯುವಕರು ಅನಾರೋಗ್ಯಕ್ಕೆ ಒಳಗಾದಾಗ ಆಸ್ಪತ್ರೆಗೆ ದಾಖಲಾಗಿದ್ದು, ಈ ವೇಳೆ ನಡೆಸಿದ ಪರೀಕ್ಷೆಯ ವೇಳೆ ಯುವಕರಿಗೆ ಎಚ್‌ಐವಿ ಇರುವುದು ದೃಢವಾಗಿದೆ ಎಂದು ವರದಿ ಉಲ್ಲೇಖಿಸಿದೆ.

ನೈನಿತಾಲ್‌ನ ಮುಖ್ಯ ವೈದ್ಯಾಧಿಕಾರಿ ಡಾ.ಹರೀಶ್ ಚಂದ್ರ ಪಂತ್ ಮಾತನಾಡಿ, ಪ್ರದೇಶದಲ್ಲಿ ಎಚ್‌ಐವಿ ಪ್ರಕರಣಗಳಲ್ಲಿ ಹಠಾತ್ ಹೆಚ್ಚಳದ ಬಗ್ಗೆ ಕಳವಳ ವ್ಯಕ್ತಪಡಿಸಿದ್ದಾರೆ. “ಸಾಮಾನ್ಯವಾಗಿ, ವಾರ್ಷಿಕವಾಗಿ ಸುಮಾರು 20 HIV ಪಾಸಿಟಿವ್ ಪ್ರಕರಣಗಳು ಪತ್ತೆಯಾಗುತ್ತವೆ. ಆದಾಗ್ಯೂ, ಈ ವರ್ಷ ಕೇವಲ ಐದು ತಿಂಗಳೊಳಗೆ, 19 ಹೊಸ ಪ್ರಕರಣಗಳು ವರದಿಯಾಗಿವೆ.” ಎಂದು ಅವರು ಹೇಳಿದ್ದಾರೆ.

ಅಧಿಕಾರಿಗಳು ಈ ಘಟನೆಯನ್ನು ಗಂಭೀರವಾಗಿ ಪರಿಗಣಿಸಿದ್ದು, ಸಮಸ್ಯೆಯನ್ನು ಪರಿಹರಿಸಲು ವಿವಿಧ ಪ್ರದೇಶಗಳಲ್ಲಿ ಕೌನ್ಸೆಲಿಂಗ್ ಸೇವೆಗಳನ್ನು ಪ್ರಾರಂಭಿಸಿದ್ದಾರೆ ಎಂದು ಅವರು ಒತ್ತಿ ಹೇಳಿದರು.

“ಎಚ್‌ಐವಿ ಪ್ರಕರಣಗಳಲ್ಲಿ ಈ ಹಠಾತ್ ಹೆಚ್ಚಳದಿಂದ, ಅದರಲ್ಲೂ ವಿಶೇಷವಾಗಿ ವಾರ್ಷಿಕವಾಗಿ ವರದಿಯಾಗುವ ಪ್ರಕರಣಗಳು ಈಗಲೆ ವರದಿಯಾಗಿದ್ದು ಆತಂಕಕಾರಿ” ಎಂದು ಡಾ. ಪಂತ್ ಹೇಳಿದ್ದಾರೆ. ಜಿಲ್ಲಾ ಆರೋಗ್ಯ ಇಲಾಖೆಯು ಈಗ ಪೀಡಿತ ಸಮುದಾಯಗಳಿಗೆ ಬೆಂಬಲ ಮತ್ತು ಶಿಕ್ಷಣವನ್ನು ಒದಗಿಸಲು ಕೆಲಸ ಮಾಡುತ್ತಿದೆ ಎಂದು ಅವರು ಹೇಳಿದ್ದಾರೆ.

“ಕಳೆದ 17 ತಿಂಗಳುಗಳಲ್ಲಿ, ರಾಮನಗರದಲ್ಲಿ 45 ವ್ಯಕ್ತಿಗಳು ಎಚ್‌ಐವಿ ಪಾಸಿಟಿವ್ ಆಗಿದ್ದಾರೆ ಎಂದು ವರದಿಯಾಗಿದೆ. ಇದು ಆರೋಗ್ಯ ಅಧಿಕಾರಿಗಳಲ್ಲಿ ಕಳವಳವನ್ನು ಉಂಟುಮಾಡಿದೆ” ಎಂದು ಆರೋಗ್ಯ ಇಲಾಖೆಯ ಹಿರಿಯ ಮೂಲಗಳು ಬಹಿರಂಗಪಡಿಸಿವೆ.

“ಯುವಕರು ಅನಾರೋಗ್ಯಕ್ಕೆ ಒಳಗಾಗಲು ಪ್ರಾರಂಭವಾದಾಗ ಆಸ್ಪತ್ರೆಗೆ ದಾಖಲಾಗಿದ್ದರು. ಈ ವೇಳೆ ನಡೆಸಿದ ಪರೀಕ್ಷೆಗಳು ಅವರು ಎಚ್ಐವಿ ಪಾಸಿಟಿವ್ ಆಗಿರುವುದು ದೃಢಪಡಿಸಿವೆ. ಇನ್ನೂ ಹೆಚ್ಚು ಆತಂಕದ ಸಂಗತಿಯೆಂದರೆ, ಈ ವ್ಯಕ್ತಿಗಳಲ್ಲಿ ಹಲವಾರು ವ್ಯಕ್ತಿಗಳು ಮದುವೆಯಾಗಿದ್ದು, ಅವರ ಸಂಗಾತಿಗಳು ಸಹ ಈ ಕಾಯಿಲೆಗೆ ತುತ್ತಾಗಿದ್ದಾರೆ” ಎಂದು ಮೂಲಗಳು ಹೇಳಿವೆ.

ಇದು ನಮ್ಮ ಸಮುದಾಯಕ್ಕೆ ಎಚ್ಚರಿಕೆಯ ಕರೆಗಂಟೆಯಾಗಿದೆ ಎಂದು ನೈನಿತಾಲ್‌ನ ಮುಖ್ಯ ವೈದ್ಯಾಧಿಕಾರಿ ಡಾ.ಹರೀಶ್ ಚಂದ್ರ ಪಂತ್ ಹೇಳಿದ್ದಾರೆ. “ನಾವು ಜಾಗೃತಿ ಮೂಡಿಸಲು, ಸಮಾಲೋಚನೆ ನೀಡಲು ಮತ್ತು ಈ ಸಾಂಕ್ರಮಿಕವನ್ನು ತಡೆಗಟ್ಟಲು ದಣಿವರಿಯಿಲ್ಲದೆ ಕೆಲಸ ಮಾಡುತ್ತಿದ್ದೇವೆ.” ಎಂದು ಅವರು ತಿಳಿಸಿದ್ದಾರೆ.

“ರಾಮನಗರ ಎಚ್‌ಐವಿ ಸಾಂಕ್ರಮಿಕ್ಕೆ ಸಂಬಂಧಿಸಿ ಅನೇಕ ಯುವಕರು ಅವರ ಸಾಮಾನ್ಯ ಲಿಂಕ್ ಅನ್ನು ಹಂಚಿಕೊಂಡಿದ್ದಾರೆ. ಅದರ ಮೂಲಕ ಅವರ ಅರಿವಿಗೆ ಬಾರದಂತೆ ರೋಗಕ್ಕೆ ತುತ್ತಾಗಿದ್ದಾರೆ. ಸಮಾಲೋಚನೆಯ ಅವಧಿಯಲ್ಲಿ, ಅವರೆಲ್ಲರೂ ಬಾಲಕಿಯೊಂದಿಗೆ ದೈಹಿಕ ಸಂಬಂಧಗಳನ್ನು ಹೊಂದಿರುವ ಬಗ್ಗೆ ನಾವು ಕಂಡುಕೊಂಡಿದ್ದೇವೆ. ಬಾಲಕಿಯು ಮಾದಕ ದ್ರವ್ಯದ ಚಟ ಹೊಂದಿದ್ದರು ಎಂದು ಇವರ್ಯಾರಿಗೂ ತಿಳಿದಿರಲಿಲ್ಲ” ಎಂದು ಆರೋಗ್ಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

“ಚಟದಿಂದ ಹೊರಬರಲಾರದ ಬಾಲಕಿಯು ತನ್ನ ಚಟಕ್ಕೆ ಹಣ ಹೊಂದಿಸಲು ಈ ಸಂಬಂಧಗಳಲ್ಲಿ ತೊಡಗಿಸಿಕೊಂಡಿದ್ದರು. ದುರದೃಷ್ಟವಶಾತ್, ಯುವಕರು ಸುಲಭವಾಗಿ ಇದಕ್ಕೆ ಬಲಿಯಾಗಿದ್ದಾರೆ” ಎಂದು ಅಧಿಕಾರಿ ತಿಳಿಸಿದ್ದಾರೆ.

ಇದನ್ನೂ ಓದಿ: ಶಕ್ತಿ ಯೋಜನೆ ಮರುಪರಿಶೀಲನೆ : ಡಿ.ಕೆ ಶಿವಕುಮಾರ್ ಸುಳಿವು

ಶಕ್ತಿ ಯೋಜನೆ ಮರುಪರಿಶೀಲನೆ : ಡಿ.ಕೆ ಶಿವಕುಮಾರ್ ಸುಳಿವು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಾಗಲಕೋಟೆ: ಶಿವಾಜಿ ಜಯಂತಿ ಮೆರವಣಿಗೆ ವೇಳೆ ಕಲ್ಲು ತೂರಾಟ, ಉದ್ವಿಗ್ನ ಪರಿಸ್ಥಿತಿ: ಫೆ.24ರವರೆಗೆ ನಿಷೇಧಾಜ್ಞೆ ಜಾರಿ

ಬಾಗಲಕೋಟೆಯಲ್ಲಿ ಗುರುವಾರ ಛತ್ರಪತಿ ಶಿವಾಜಿ ಮಹಾರಾಜರ ಜಯಂತಿಯಂದು ನಡೆದ ಪ್ರತಿಮೆ ಮೆರವಣಿಗೆಯ ಸಂದರ್ಭದಲ್ಲಿ ಕಲ್ಲು ತೂರಾಟ ನಡೆದ ಘಟನೆ ವರದಿಯಾಗಿದೆ. ಹಳೆಯ ನಗರ ಪ್ರದೇಶದ ಪಂಕ ಮಸೀದಿ ಬಳಿ ಮೆರವಣಿಗೆ ಸಾಗುತ್ತಿದ್ದಾಗ ಈ...

ನಿಯಮಿತವಾಗಿ ಎಸ್‌ಸಿ/ಎಸ್‌ಟಿ ಕಾಯ್ದೆ ಕೋಶದ ಸಭೆ ನಡೆಸುತ್ತಿಲ್ಲ ಎಂದು ಆರೋಪಿಸಿದ ಮೇವಾನಿ; ಗುಜರಾತ್ ವಿಧಾನಸಭೆಯಲ್ಲಿ ಕಾಂಗ್ರೆಸ್- ಬಿಜೆಪಿ ನಡುವೆ ವಾಗ್ವಾದ

ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ (ದೌರ್ಜನ್ಯ ತಡೆ) ಕಾಯ್ದೆಯಡಿಯಲ್ಲಿ ರಚಿಸಲಾದ ರಾಜ್ಯ ಮೇಲ್ವಿಚಾರಣಾ ಕೋಶದ (ಎಸ್‌ಎಂಸಿ) ನಿಯಮಿತ ಸಭೆಗಳನ್ನು ಮುಖ್ಯಮಂತ್ರಿ ಭೂಪೇಂದ್ರ ಪಟೇಲ್ ಕರೆಯುತ್ತಿಲ್ಲ ಎಂದು ವಡ್ಗಾಮ್‌ನ ಕಾಂಗ್ರೆಸ್ ಶಾಸಕ ಜಿಗ್ನೇಶ್...

ನೆಲಮಂಗಲದಲ್ಲಿ ಹಾಸಿಗೆ ಹಿಡಿದ ಪತಿಯ ಎದುರೇ 60ವರ್ಷದ ಮಹಿಳೆಯ ಕೊಲೆ; ಐದು ಗಂಟೆಗಳಲ್ಲಿ ಆರೋಪಿ ಬಂಧನ

ಬೆಂಗಳೂರು: ಬೆಂಗಳೂರು ಹೊರವಲಯ ನೆಲಮಂಗಲದ ಪೇಟೆ ಬೀದಿಯಲ್ಲಿ ವೀಲ್‌ಚೇರ್‌ನಲ್ಲಿ ಕುಳಿತಿದ್ದ ಗಂಡನ ಮುಂದೆಯೇ ಮಹಿಳೆಯೊಬ್ಬಳ ಕೊಲೆಯಾದ ಐದು ಗಂಟೆಗಳಲ್ಲಿ ನೆಲಮಂಗಲ ಪಟ್ಟಣ ಪೊಲೀಸರು 45 ವರ್ಷದ ದಿನಸಿ ಅಂಗಡಿ ಮಾಲೀಕನನ್ನು ಬಂಧಿಸಿದ್ದಾರೆ. ಫೆಬ್ರವರಿ...

‘ದಿ ಕೇರಳ ಸ್ಟೋರಿ 2’ ಚಿತ್ರ ನಿರ್ಮಾಪಕರು, ಸಿಬಿಎಫ್‌ಸಿ ಮಂಡಳಿಗೆ ನೋಟಿಸ್ ಜಾರಿ ಮಾಡಿದ ಕೇರಳ ಹೈಕೋರ್ಟ್

ಕೊಚ್ಚಿ: 'ದಿ ಕೇರಳ ಸ್ಟೋರಿ 2 - ಗೋಸ್ ಬಿಯಾಂಡ್' ಚಿತ್ರದ ಪ್ರಮಾಣೀಕರಣವನ್ನು ರದ್ದುಗೊಳಿಸುವಂತೆ ಮತ್ತು ಅದರ ಶೀರ್ಷಿಕೆಯ ಮರುಪರಿಶೀಲನೆ ಸೇರಿದಂತೆ ಮಾರ್ಪಾಡುಗಳಿಗೆ ನಿರ್ದೇಶನ ನೀಡಬೇಕೆಂದು ಕೋರಿ ಕಣ್ಣೂರು ಮೂಲದವರು ಸಲ್ಲಿಸಿದ ಅರ್ಜಿಯ...

ಚುನಾವಣಾ ಸಮಯದಲ್ಲಿ ಉಚಿತ ಕೊಡುಗೆಗಳ ಪ್ರವೃತ್ತಿ ಪ್ರಶ್ನಿಸಿದ ಸುಪ್ರೀಂ ಕೋರ್ಟ್

ರಾಜಕೀಯ ಪಕ್ಷಗಳು ಮತ್ತು ರಾಜ್ಯ ಸರ್ಕಾರಗಳು ಚುನಾವಣೆಗೆ ಮುನ್ನ "ಉಚಿತ ಕೊಡುಗೆಗಳ" ಜಾಹೀರಾತು ನೀಡುವ ಅಭ್ಯಾಸ ಹೆಚ್ಚುತ್ತಿರುವ ಬಗ್ಗೆ ಸುಪ್ರೀಂ ಕೋರ್ಟ್ ಗುರುವಾರ ಬಲವಾದ ಮೌಖಿಕ ಅವಲೋಕನಗಳನ್ನು ನೀಡಿದೆ. ವಿದ್ಯುತ್ (ತಿದ್ದುಪಡಿ) ನಿಯಮಗಳು, 2024...

ರಾಹುಲ್ ಗಾಂಧಿಗೆ ಕರ್ಣಿ ಸೇನೆಯಿಂದ ಜೀವ ಬೆದರಿಕೆ: ಬಿಜೆಪಿ-ಆರ್‌ಎಸ್‌ಎಸ್ ಜಾಲವೇ ‘ಗೋಡ್ಸೆ ಕಾರ್ಖಾನೆ’ ಎಂದ ಕಾಂಗ್ರೆಸ್

ನವದೆಹಲಿ: ಲೋಕಸಭಾ ಸ್ಪೀಕರ್ ಓಂ ಬಿರ್ಲಾ ವಿರುದ್ಧ ನಡೆದ ಪ್ರತಿಭಟನೆಗೆ ಸಂಬಂಧಿಸಿದಂತೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರಿಗೆ ಕರ್ಣಿ ಸೇನೆ ಜೀವ ಬೆದರಿಕೆ ಹಾಕಿದ್ದು, ಇದು "ಏಕಾಂಗಿ ಸ್ಫೋಟವಲ್ಲ"...

ಬಿಹಾರ| ವಿಧಾನಸಭೆಯಲ್ಲಿ ‘ತಂಬಾಕು’ ತಿಂದ ಉಪಮುಖ್ಯಮಂತ್ರಿ ಸಾಮ್ರಾಟ್ ಚೌಧರಿ

ಬಿಹಾರ ವಿಧಾನಸಭೆಯ ಬಜೆಟ್ ಅಧಿವೇಶನದ ವಿಡಿಯೋ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆದ ಬಳಿಕ ರಾಜಕೀಯ ವಿವಾದಕ್ಕೆ ಕಾರಣವಾಗಿದೆ. ವಿಡಿಯೋದಲ್ಲಿ, ಉಪಮುಖ್ಯಮಂತ್ರಿ ಹಾಗೂ ಹಿರಿಯ ಬಿಜೆಪಿ ನಾಯಕ ಸಾಮ್ರಾಟ್ ಚೌಧರಿ ಕಲಾಪದ ಸಮಯದಲ್ಲಿ ವಸ್ತುವೊಂದನ್ನು...

‘ಬೆದರಿಕೆ, ಚಿತ್ರಹಿಂಸೆ, ಅತ್ಯಾಚಾರ ‘: ಇಸ್ರೇಲ್‌ ಜೈಲಿನ ದೌರ್ಜನ್ಯ ಬಿಚ್ಚಿಟ್ಟ ಪ್ಯಾಲೆಸ್ತೀನ್ ಪತ್ರಕರ್ತರು

ಇಸ್ರೇಲ್ ಜೈಲುಗಳಲ್ಲಿ ಬಂಧಿತರಾಗಿರುವ ಪ್ಯಾಲೆಸ್ತೀನ್ ಪತ್ರಕರ್ತರು ತೀವ್ರವಾದ ದೌರ್ಜನ್ಯಗಳನ್ನು ಎದುರಿಸುತ್ತಿದ್ದಾರೆ ಎಂದು ಅಂತಾರಾಷ್ಟ್ರೀಯ ಪತ್ರಕರ್ತರ ರಕ್ಷಣಾ ಸಮಿತಿ (ಸಿಪಿಜೆ) ಹೇಳಿದೆ. ಬಂಧನದಿಂದ ಬಿಡುಗಡೆಯಾಗಿರುವ ಪತ್ರಕರ್ತರನ್ನು ಸಂದರ್ಶಿಸಿರುವ ಸಿಪಿಜೆ, ಜೈಲಿನಲ್ಲಿರುವ ಪತ್ರಕರ್ತರು ನಿರಂತರವಾಗಿ ದೈಹಿಕ...

ಪಾಕಿಸ್ತಾನದ ಕರಾಚಿಯಲ್ಲಿ ಶಂಕಿತ ಅನಿಲ ಸೋರಿಕೆ: ಮಕ್ಕಳು ಸೇರಿದಂತೆ 16 ಮಂದಿ ಸಾವು

ಕರಾಚಿ: ಪಾಕಿಸ್ತಾನದ ಕರಾಚಿಯಲ್ಲಿ ಗುರುವಾರ ಬೆಳಿಗ್ಗೆ ವಸತಿ ಕಟ್ಟಡವೊಂದರಲ್ಲಿ ಶಂಕಿತ ಅನಿಲ ಸೋರಿಕೆಯಿಂದಾಗಿ ಸ್ಫೋಟ ಸಂಭವಿಸಿ, ಮಕ್ಕಳು ಸೇರಿದಂತೆ ಕನಿಷ್ಠ 16 ಜನರು ಸಾವನ್ನಪ್ಪಿದ್ದು, 14 ಜನರು ಗಾಯಗೊಂಡಿದ್ದಾರೆ. "ಓಲ್ಡ್ ಸೋಲ್ಜರ್ ಬಜಾರ್...

ಮಹಾರಾಷ್ಟ್ರ| 10 ದಿನಗಳ ಮಗುವಿನೊಂದಿಗೆ 12 ನೇ ತರಗತಿ ಪರೀಕ್ಷೆ ಬರೆದ ಮಹಿಳೆ

ಮಹಾರಾಷ್ಟ್ರದ ನಾಂದೇಡ್ ನಗರದಲ್ಲಿ 12 ನೇ ತರಗತಿಯ ಮಹಾರಾಷ್ಟ್ರ ಬೋರ್ಡ್ ಪರೀಕ್ಷೆಗೆ ಹಾಜರಾದ ಮಹಿಳೆಯೊಬ್ಬರು ತನ್ನ 10 ದಿನಗಳ ಮಗುವನ್ನು ಪರೀಕ್ಷಾ ಕೇಂದ್ರಕ್ಕೆ ಕರೆತಂದಿದ್ದಾರೆ. ಮಹಿಳೆ ಪರೀಕ್ಷೆ ಬರೆಯುವ ಕಾರಣಕ್ಕೆ ಕೇಂದ್ರದ ವಿಶೇಷ...