Homeಮುಖಪುಟಉತ್ತರಾಖಂಡ | 17 ವರ್ಷದ ಬಾಲಕಿಯೊಂದಿಗೆ ಸಂಬಂಧ ಬೆಳೆಸಿದ್ದ 10ಕ್ಕೂ ಹೆಚ್ಚು ಯುವಕರಿಗೆ ಎಚ್‌ಐವಿ ಸೋಂಕು

ಉತ್ತರಾಖಂಡ | 17 ವರ್ಷದ ಬಾಲಕಿಯೊಂದಿಗೆ ಸಂಬಂಧ ಬೆಳೆಸಿದ್ದ 10ಕ್ಕೂ ಹೆಚ್ಚು ಯುವಕರಿಗೆ ಎಚ್‌ಐವಿ ಸೋಂಕು

- Advertisement -
- Advertisement -

ಹೆರಾಯಿನ್‌ಗೆ ವ್ಯಸನಿಯಾಗಿದ್ದ 17 ವರ್ಷದ ಬಾಲಕಿಯೊಂದಿಗೆ ದೈಹಿಕ ಸಂಬಂಧ ಬೆಳೆಸಿದ್ದ 10ಕ್ಕೂ ಹೆಚ್ಚು ಯುವಕರು ಎಚ್‌ಐವಿ / ಏಡ್ಸ್‌ಗೆ ತುತ್ತಾಗಿರುವ ಘಟನೆ ಉತ್ತರಾಖಂಡ ರಾಜ್ಯದ ನೈನಿತಾಲ್ ಜಿಲ್ಲೆಯ ರಾಮನಗರದಲ್ಲಿ ನಡೆದಿದೆ. ಘಟನೆಯು ಪ್ರದೇಶದಾದ್ಯಂತ ಆಘಾತವನ್ನು ಉಂಟುಮಾಡಿದೆ.

“ಇದು ಗೊಂದಲಕಾರಿ ಘಟನೆಯಾಗಿದ್ದು, ನಾವು ತಕ್ಷಣ ಕ್ರಮ ತೆಗೆದುಕೊಳ್ಳುತ್ತಿದ್ದೇವೆ. ಹುಡುಗಿಯ ಚಟವು ಈ ದುರದೃಷ್ಟಕರ ಪರಿಸ್ಥಿತಿಗೆ ಕಾರಣ. ನಾವು ಅವರಿಗೆ ಸಲಹೆ ಮತ್ತು ಬೆಂಬಲವನ್ನು ಒದಗಿಸಲು ಕೆಲಸ ಮಾಡುತ್ತಿದ್ದೇವೆ” ಎಂದು ಜಿಲ್ಲಾ ಆರೋಗ್ಯಾಧಿಕಾರಿ ಹೇಳಿದ್ದಾರೆ.. ಉತ್ತರಾಖಂಡ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
ಇಲ್ಲಿಕ್ಲಿಕ್ ಮಾಡಿ

ಹೆರಾಯಿನ್ ಚಟಕ್ಕೆ ಒಳಗಾಗಿರುವ 17 ವರ್ಷದ ಬಾಲಕಿ ತನ್ನ ಚಟಕ್ಕೆ ಹಣ ಹೊಂದಿಸಲು ಯುವಕರೊಂದಿಗೆ ಶಾರೀರಿಕ ಸಂಬಂಧದಲ್ಲಿ ತೊಡಗಿದ್ದಳು ಎನ್ನಲಾಗಿದೆ. ಯುವಕರು ಅನಾರೋಗ್ಯಕ್ಕೆ ಒಳಗಾದಾಗ ಆಸ್ಪತ್ರೆಗೆ ದಾಖಲಾಗಿದ್ದು, ಈ ವೇಳೆ ನಡೆಸಿದ ಪರೀಕ್ಷೆಯ ವೇಳೆ ಯುವಕರಿಗೆ ಎಚ್‌ಐವಿ ಇರುವುದು ದೃಢವಾಗಿದೆ ಎಂದು ವರದಿ ಉಲ್ಲೇಖಿಸಿದೆ.

ನೈನಿತಾಲ್‌ನ ಮುಖ್ಯ ವೈದ್ಯಾಧಿಕಾರಿ ಡಾ.ಹರೀಶ್ ಚಂದ್ರ ಪಂತ್ ಮಾತನಾಡಿ, ಪ್ರದೇಶದಲ್ಲಿ ಎಚ್‌ಐವಿ ಪ್ರಕರಣಗಳಲ್ಲಿ ಹಠಾತ್ ಹೆಚ್ಚಳದ ಬಗ್ಗೆ ಕಳವಳ ವ್ಯಕ್ತಪಡಿಸಿದ್ದಾರೆ. “ಸಾಮಾನ್ಯವಾಗಿ, ವಾರ್ಷಿಕವಾಗಿ ಸುಮಾರು 20 HIV ಪಾಸಿಟಿವ್ ಪ್ರಕರಣಗಳು ಪತ್ತೆಯಾಗುತ್ತವೆ. ಆದಾಗ್ಯೂ, ಈ ವರ್ಷ ಕೇವಲ ಐದು ತಿಂಗಳೊಳಗೆ, 19 ಹೊಸ ಪ್ರಕರಣಗಳು ವರದಿಯಾಗಿವೆ.” ಎಂದು ಅವರು ಹೇಳಿದ್ದಾರೆ.

ಅಧಿಕಾರಿಗಳು ಈ ಘಟನೆಯನ್ನು ಗಂಭೀರವಾಗಿ ಪರಿಗಣಿಸಿದ್ದು, ಸಮಸ್ಯೆಯನ್ನು ಪರಿಹರಿಸಲು ವಿವಿಧ ಪ್ರದೇಶಗಳಲ್ಲಿ ಕೌನ್ಸೆಲಿಂಗ್ ಸೇವೆಗಳನ್ನು ಪ್ರಾರಂಭಿಸಿದ್ದಾರೆ ಎಂದು ಅವರು ಒತ್ತಿ ಹೇಳಿದರು.

“ಎಚ್‌ಐವಿ ಪ್ರಕರಣಗಳಲ್ಲಿ ಈ ಹಠಾತ್ ಹೆಚ್ಚಳದಿಂದ, ಅದರಲ್ಲೂ ವಿಶೇಷವಾಗಿ ವಾರ್ಷಿಕವಾಗಿ ವರದಿಯಾಗುವ ಪ್ರಕರಣಗಳು ಈಗಲೆ ವರದಿಯಾಗಿದ್ದು ಆತಂಕಕಾರಿ” ಎಂದು ಡಾ. ಪಂತ್ ಹೇಳಿದ್ದಾರೆ. ಜಿಲ್ಲಾ ಆರೋಗ್ಯ ಇಲಾಖೆಯು ಈಗ ಪೀಡಿತ ಸಮುದಾಯಗಳಿಗೆ ಬೆಂಬಲ ಮತ್ತು ಶಿಕ್ಷಣವನ್ನು ಒದಗಿಸಲು ಕೆಲಸ ಮಾಡುತ್ತಿದೆ ಎಂದು ಅವರು ಹೇಳಿದ್ದಾರೆ.

“ಕಳೆದ 17 ತಿಂಗಳುಗಳಲ್ಲಿ, ರಾಮನಗರದಲ್ಲಿ 45 ವ್ಯಕ್ತಿಗಳು ಎಚ್‌ಐವಿ ಪಾಸಿಟಿವ್ ಆಗಿದ್ದಾರೆ ಎಂದು ವರದಿಯಾಗಿದೆ. ಇದು ಆರೋಗ್ಯ ಅಧಿಕಾರಿಗಳಲ್ಲಿ ಕಳವಳವನ್ನು ಉಂಟುಮಾಡಿದೆ” ಎಂದು ಆರೋಗ್ಯ ಇಲಾಖೆಯ ಹಿರಿಯ ಮೂಲಗಳು ಬಹಿರಂಗಪಡಿಸಿವೆ.

“ಯುವಕರು ಅನಾರೋಗ್ಯಕ್ಕೆ ಒಳಗಾಗಲು ಪ್ರಾರಂಭವಾದಾಗ ಆಸ್ಪತ್ರೆಗೆ ದಾಖಲಾಗಿದ್ದರು. ಈ ವೇಳೆ ನಡೆಸಿದ ಪರೀಕ್ಷೆಗಳು ಅವರು ಎಚ್ಐವಿ ಪಾಸಿಟಿವ್ ಆಗಿರುವುದು ದೃಢಪಡಿಸಿವೆ. ಇನ್ನೂ ಹೆಚ್ಚು ಆತಂಕದ ಸಂಗತಿಯೆಂದರೆ, ಈ ವ್ಯಕ್ತಿಗಳಲ್ಲಿ ಹಲವಾರು ವ್ಯಕ್ತಿಗಳು ಮದುವೆಯಾಗಿದ್ದು, ಅವರ ಸಂಗಾತಿಗಳು ಸಹ ಈ ಕಾಯಿಲೆಗೆ ತುತ್ತಾಗಿದ್ದಾರೆ” ಎಂದು ಮೂಲಗಳು ಹೇಳಿವೆ.

ಇದು ನಮ್ಮ ಸಮುದಾಯಕ್ಕೆ ಎಚ್ಚರಿಕೆಯ ಕರೆಗಂಟೆಯಾಗಿದೆ ಎಂದು ನೈನಿತಾಲ್‌ನ ಮುಖ್ಯ ವೈದ್ಯಾಧಿಕಾರಿ ಡಾ.ಹರೀಶ್ ಚಂದ್ರ ಪಂತ್ ಹೇಳಿದ್ದಾರೆ. “ನಾವು ಜಾಗೃತಿ ಮೂಡಿಸಲು, ಸಮಾಲೋಚನೆ ನೀಡಲು ಮತ್ತು ಈ ಸಾಂಕ್ರಮಿಕವನ್ನು ತಡೆಗಟ್ಟಲು ದಣಿವರಿಯಿಲ್ಲದೆ ಕೆಲಸ ಮಾಡುತ್ತಿದ್ದೇವೆ.” ಎಂದು ಅವರು ತಿಳಿಸಿದ್ದಾರೆ.

“ರಾಮನಗರ ಎಚ್‌ಐವಿ ಸಾಂಕ್ರಮಿಕ್ಕೆ ಸಂಬಂಧಿಸಿ ಅನೇಕ ಯುವಕರು ಅವರ ಸಾಮಾನ್ಯ ಲಿಂಕ್ ಅನ್ನು ಹಂಚಿಕೊಂಡಿದ್ದಾರೆ. ಅದರ ಮೂಲಕ ಅವರ ಅರಿವಿಗೆ ಬಾರದಂತೆ ರೋಗಕ್ಕೆ ತುತ್ತಾಗಿದ್ದಾರೆ. ಸಮಾಲೋಚನೆಯ ಅವಧಿಯಲ್ಲಿ, ಅವರೆಲ್ಲರೂ ಬಾಲಕಿಯೊಂದಿಗೆ ದೈಹಿಕ ಸಂಬಂಧಗಳನ್ನು ಹೊಂದಿರುವ ಬಗ್ಗೆ ನಾವು ಕಂಡುಕೊಂಡಿದ್ದೇವೆ. ಬಾಲಕಿಯು ಮಾದಕ ದ್ರವ್ಯದ ಚಟ ಹೊಂದಿದ್ದರು ಎಂದು ಇವರ್ಯಾರಿಗೂ ತಿಳಿದಿರಲಿಲ್ಲ” ಎಂದು ಆರೋಗ್ಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

“ಚಟದಿಂದ ಹೊರಬರಲಾರದ ಬಾಲಕಿಯು ತನ್ನ ಚಟಕ್ಕೆ ಹಣ ಹೊಂದಿಸಲು ಈ ಸಂಬಂಧಗಳಲ್ಲಿ ತೊಡಗಿಸಿಕೊಂಡಿದ್ದರು. ದುರದೃಷ್ಟವಶಾತ್, ಯುವಕರು ಸುಲಭವಾಗಿ ಇದಕ್ಕೆ ಬಲಿಯಾಗಿದ್ದಾರೆ” ಎಂದು ಅಧಿಕಾರಿ ತಿಳಿಸಿದ್ದಾರೆ.

ಇದನ್ನೂ ಓದಿ: ಶಕ್ತಿ ಯೋಜನೆ ಮರುಪರಿಶೀಲನೆ : ಡಿ.ಕೆ ಶಿವಕುಮಾರ್ ಸುಳಿವು

ಶಕ್ತಿ ಯೋಜನೆ ಮರುಪರಿಶೀಲನೆ : ಡಿ.ಕೆ ಶಿವಕುಮಾರ್ ಸುಳಿವು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಪೊಲೀಸರನ್ನು ನಿಯಂತ್ರಿಸದಿದ್ದರೆ ಜರ್ಮನಿಯ ನಾಜಿಗಳಂತೆ ಆಗಬಹುದು’: ದಲಿತ ವ್ಯಕ್ತಿಯ ಮೇಲಿನ ದೌರ್ಜನ್ಯ ಪ್ರಕರಣದಲ್ಲಿ ಪಾಟ್ನಾ ಹೈಕೋರ್ಟ್ ಕಳವಳ

ದಲಿತ ವ್ಯಕ್ತಿಯೊಬ್ಬರ ಜಾತಿ ತಿಳಿದ ನಂತರ ಅವರ ಮೇಲೆ ಕ್ರೂರವಾಗಿ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿರುವ ಬಿಹಾರದ ಮಾಜಿ ಪೊಲೀಸ್ ಅಧಿಕಾರಿಯ ವಿರುದ್ಧ ತಕ್ಷಣವೇ ಎಫ್‌ಐಆರ್ (FIR) ದಾಖಲಿಸುವಂತೆ ಪಾಟ್ನಾ ಹೈಕೋರ್ಟ್ ನಿರ್ದೇಶಿಸಿದೆ....

“ಎಷ್ಟೊಂದು ದುರಹಂಕಾರ!”: ಜೆ.ಪಿ.ನಡ್ಡಾ ಹೇಳಿಕೆಗೆ ಕಪಿಲ್ ಸಿಬಲ್ ತೀವ್ರ ಆಕ್ಷೇಪ; ಪ್ರತಿಭಟನಾನಿರತ ಸಿಜೆಪಿ ಬೆಂಬಲಿಸಿ ವೀಡಿಯೋ ಸಂದೇಶ

ಪರೀಕ್ಷಾ ಅಕ್ರಮಗಳನ್ನು ಖಂಡಿಸಿ ಕ್ರಾಂತಿಕಾರಿ ಜಿರಳೆ ಜನತಾ ಪಕ್ಷ (ಸಿಜೆಪಿ) ನಡೆಸುತ್ತಿರುವ ವಿದ್ಯಾರ್ಥಿ ಪ್ರತಿಭಟನೆಯ ವಿಚಾರದಲ್ಲಿ ಕೇಂದ್ರ ಸರ್ಕಾರದ ನಡೆಗೆ ದೇಶಾದ್ಯಂತ ತೀವ್ರ ಆಕ್ರೋಶ ವ್ಯಕ್ತವಾಗುತ್ತಿದೆ. ಈ ನಡುವೆ ಕೇಂದ್ರ ಸಚಿವ ಜೆ.ಪಿ....

ವಿದ್ಯಾರ್ಥಿಗಳ ಮೇಲೆ ಪೊಲೀಸ್ ದೌರ್ಜನ್ಯ: ಮೋದಿ-ಅಮಿತ್ ಶಾ ರಾಜೀನಾಮೆಗೆ ರಾಹುಲ್ ಗಾಂಧಿ ಆಗ್ರಹ

ನೀಟ್‌ ಪ್ರಶ್ನೆ ಪತ್ರಿಕೆ ಸೋರಿಕೆ ಹೊಣೆ ಹೊತ್ತು ಕೇಂದ್ರ ಶಿಕ್ಷಣ ಸಚಿವ ರಾಜೀನಾಮೆ ನೀಡಬೇಕು ಎಂದು ಆಗ್ರಹಿಸಿ 'ಸಂಸತ್ ಚಲೋ' ಹಮ್ಮಿಕೊಂಡಿದ್ದ ವಿದ್ಯಾರ್ಥಿಗಳ ಮೇಲೆ ನಡೆದ ಪೊಲೀಸ್ ದೌರ್ಜನ್ಯವನ್ನು ಕಾಂಗ್ರೆಸ್ ನಾಯಕ ರಾಹುಲ್...

ಕೇಂದ್ರ ಸಚಿವ ಜೆ.ಪಿ.ನಡ್ಡಾ ಅವರನ್ನು ಭೇಟಿಯಾದ ಸಿಜೆಪಿ ನಿಯೋಗ; ಮನವಿ ಪತ್ರ ಸಲ್ಲಿಕೆ

ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್‌ ರಾಜೀನಾಮೆಗೆ ಆಗ್ರಹಿಸಿ ನವದೆಹಲಿಯಲ್ಲಿ ಪ್ರತಿಭಟನೆ ತೀವ್ರಗೊಂಡಿರುವ ಬೆನ್ನಲ್ಲೇ ಇಂದು ಕೇಂದ್ರ ಸಚಿವ ಜೆಪಿ ನಡ್ಡಾ ಅವರನ್ನು ಸಿಜೆಪಿ ಸದಸ್ಯರಾದ ಸೌರವ್ ದಾಸ್ ಮತ್ತು ಅಶುತೋಷ್ ರಂಕಾ...

‘ಸಂಸತ್ ಚಲೋ’: ‘ಸೋನಮ್ ವಾಂಗ್ಚುಕ್ ಪತ್ನಿ ಮೇಲೆ ದೆಹಲಿ ಪೊಲೀಸರಿಂದ ಹಲ್ಲೆ’: ವಿದ್ಯಾರ್ಥಿಗಳ ಮೇಲೂ ಲಾಠಿ ಚಾರ್ಜ್  

ನವದೆಹಲಿ: ರಾಷ್ಟ್ರ ರಾಜಧಾನಿಯಲ್ಲಿ ಆಯೋಜಿಸಲಾಗಿದ್ದ ‘ಸಂಸದ್ ಚಲೋ’ ಮೆರವಣಿಗೆಯ ವೇಳೆ ಶಿಕ್ಷಣ ತಜ್ಞ ಹಾಗೂ ಲಡಾಖ್ ಹೋರಾಟಗಾರ ಸೋನಮ್ ವಾಂಗ್ಚುಕ್ ಅವರ ಪತ್ನಿ ಗೀತಾಂಜಲಿ ಜೆ. ಆಂಗ್ಮೋ ಸೇರಿದಂತೆ ಹಲವಾರು ಪ್ರತಿಭಟನಾಕಾರರ ಮೇಲೆ...

ಕನಿಷ್ಠ 20 ಸಾವಿರ ‘ಕಾಕ್ರೋಚ್‌’ಗಳಿಂದ ಸಂಸತ್ತಿಗೆ ಮೆರವಣಿಗೆ; ವಿದ್ಯಾರ್ಥಿಗಳ ಮೇಲೆ ಪೊಲೀಸರಿಂದ ಲಾಠಿಚಾರ್ಜ್ – ಅಶ್ರುವಾಯು

ಧರ್ಮೇಂದ್ರ ಪ್ರಧಾನ್ ರಾಜೀನಾಮಗೆ ಒತ್ತಾಯಿಸಿ ಮುಂಗಾರು ಅಧಿವೇಶನದ ಮೊದಲ ದಿನದಂದು ಸಂಸತ್ತಿಗೆ ಮೆರವಣಿಗೆ ನಡೆಸಲು ದೆಹಲಿಯಲ್ಲಿ ಜಮಾಯಿಸಿದ್ದ ಕಾಕ್ರೋಚ್ ಜನತಾ ಪಕ್ಷದ (ಸಿಜೆಪಿ) ಸಾವಿರಾರು ಬೆಂಬಲಿಗರನ್ನು ಚದುರಿಸಲು ದೆಹಲಿ ಪೊಳಿಸರು ಅಶ್ರುವಾಯು ಶೆಲ್‌ಗಳನ್ನು...

ಸಿಜೆಪಿ ಪ್ರತಿಭಟನೆಗೆ ನಡುಗಿದ ಕೇಂದ್ರ ಸರ್ಕಾರ; ತರಾತುರಿಯಲ್ಲಿ ಸಂಸತ್ತಿನ ಗೇಟ್ ಮುಚ್ಚಿದ ಭದ್ರತಾ ಸಿಬ್ಬಂದಿ

ನೀಟ್‌ ಪರೀಕ್ಷೆಯಲ್ಲಿ ನಡೆದಿದೆ ಎನ್ನಲಾದ ಅಕ್ರಮಗಳನ್ನು ವಿರೋಧಿಸಿ, ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಒತ್ತಾಯಿಸಿ ಇಂದು ಕಾಕ್ರೋಚ್ ಜನತಾ ಪಕ್ಷ (ಸಿಜೆಪಿ) ಹಮ್ಮಿಕೊಂಡಿರುವ ಸಂಸತ್ ಮೆರವಣಿಗೆಗೆ ಕೇಂದ್ರ ಸರ್ಕಾರ...

ಹಕ್ಕುಗಳ ಕಾಯ್ದೆಗೆ 7 ವರ್ಷ: ಕಾಗದದಲ್ಲಷ್ಟೇ ಸಮಾನತೆ, ಉದ್ಯೋಗ ಸಿಗದೆ ಬೀದಿಗೆ ತಳ್ಳಲ್ಪಡುತ್ತಿರುವ ಟ್ರಾನ್ಸ್‌ಜೆಂಡರ್‌ ಸಮುದಾಯ

ಬೆಂಗಳೂರು: ರಾಷ್ಟ್ರೀಯ ಮಟ್ಟದಲ್ಲಿ ‘ಟ್ರಾನ್ಸ್‌ಜೆಂಡರ್ ವ್ಯಕ್ತಿಗಳ (ಹಕ್ಕುಗಳ ರಕ್ಷಣೆ) ಕಾಯ್ದೆ-2019’ ಜಾರಿಗೆ ಬಂದು ಏಳು ವರ್ಷಗಳು ಕಳೆದಿದ್ದರೂ, ಸಮುದಾಯದ ಆರ್ಥಿಕ ಸಬಲೀಕರಣ ಇನ್ನೂ ಕನಸಾಗಿಯೇ ಉಳಿದಿದೆ. ಬೆಂಗಳೂರಿನ ಸಾಮಾಜಿಕ ಮತ್ತು ಆರ್ಥಿಕ ಬದಲಾವಣೆ...

ಸಂಸತ್‌ ಚಲೋ: ಕಾಕ್ರೋಚ್ ಜನತಾ ಪಾರ್ಟಿ ಪ್ರತಿಭಟನೆಗೆ ಭಾರೀ ಬೆಂಬಲ

ದೇಶಾದ್ಯಂತ ಭಾರಿ ಸಂಚಲನ ಸೃಷ್ಟಿಸಿರುವ ನೀಟ್‌ (NEET) ಪ್ರಶ್ನೆಪತ್ರಿಕೆ ಸೋರಿಕೆ, ಸಾಲು ಸಾಲು ವಿದ್ಯಾರ್ಥಿಗಳ ಆತ್ಮಹತ್ಯೆ ಹಾಗೂ ದೇಶದ ಪರೀಕ್ಷಾ ವ್ಯವಸ್ಥೆಯ ಸರಣಿ ವೈಫಲ್ಯಗಳನ್ನು ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ (CJP) ಆಯೋಜಿಸಿರುವ...

ಡಿಜಿಟಲೀಕರಣಗೊಂಡ 2002ರ ಮತದಾರರ ಪಟ್ಟಿಯಿಂದ ಬೆಂಗಳೂರಿನ ಮತಗಟ್ಟೆಗಳೇ ಮಾಯ: ಮಾಹಿತಿ ಸಿಗದೆ ಆತಂಕದಲ್ಲಿ ನೂರಾರು ಮತದಾರರು

ಬೆಂಗಳೂರು: ಸಿಲಿಕಾನ್ ಸಿಟಿ ಬೆಂಗಳೂರಿನ ಹಲವು ಭಾಗಗಳಲ್ಲಿ 2002ರ ಡಿಜಿಟಲೀಕರಣಗೊಂಡ ಮತದಾರರ ಪಟ್ಟಿಯಿಂದ ಇಡೀ ಮತಗಟ್ಟೆಗಳೇ ಕಾಣೆಯಾಗಿರುವ ಗಂಭೀರ ಪ್ರಕರಣವೊಂದು ಬೆಳಕಿಗೆ ಬಂದಿದೆ. ಇದರಿಂದಾಗಿ ನೂರಾರು ಮತದಾರರು ಆತಂಕ ಮತ್ತು ಗೊಂದಲಕ್ಕೊಳಗಾಗಿದ್ದಾರೆ ಎಂದು...