Homeಮುಖಪುಟಉತ್ತರಾಖಂಡ | 17 ವರ್ಷದ ಬಾಲಕಿಯೊಂದಿಗೆ ಸಂಬಂಧ ಬೆಳೆಸಿದ್ದ 10ಕ್ಕೂ ಹೆಚ್ಚು ಯುವಕರಿಗೆ ಎಚ್‌ಐವಿ ಸೋಂಕು

ಉತ್ತರಾಖಂಡ | 17 ವರ್ಷದ ಬಾಲಕಿಯೊಂದಿಗೆ ಸಂಬಂಧ ಬೆಳೆಸಿದ್ದ 10ಕ್ಕೂ ಹೆಚ್ಚು ಯುವಕರಿಗೆ ಎಚ್‌ಐವಿ ಸೋಂಕು

- Advertisement -
- Advertisement -

ಹೆರಾಯಿನ್‌ಗೆ ವ್ಯಸನಿಯಾಗಿದ್ದ 17 ವರ್ಷದ ಬಾಲಕಿಯೊಂದಿಗೆ ದೈಹಿಕ ಸಂಬಂಧ ಬೆಳೆಸಿದ್ದ 10ಕ್ಕೂ ಹೆಚ್ಚು ಯುವಕರು ಎಚ್‌ಐವಿ / ಏಡ್ಸ್‌ಗೆ ತುತ್ತಾಗಿರುವ ಘಟನೆ ಉತ್ತರಾಖಂಡ ರಾಜ್ಯದ ನೈನಿತಾಲ್ ಜಿಲ್ಲೆಯ ರಾಮನಗರದಲ್ಲಿ ನಡೆದಿದೆ. ಘಟನೆಯು ಪ್ರದೇಶದಾದ್ಯಂತ ಆಘಾತವನ್ನು ಉಂಟುಮಾಡಿದೆ.

“ಇದು ಗೊಂದಲಕಾರಿ ಘಟನೆಯಾಗಿದ್ದು, ನಾವು ತಕ್ಷಣ ಕ್ರಮ ತೆಗೆದುಕೊಳ್ಳುತ್ತಿದ್ದೇವೆ. ಹುಡುಗಿಯ ಚಟವು ಈ ದುರದೃಷ್ಟಕರ ಪರಿಸ್ಥಿತಿಗೆ ಕಾರಣ. ನಾವು ಅವರಿಗೆ ಸಲಹೆ ಮತ್ತು ಬೆಂಬಲವನ್ನು ಒದಗಿಸಲು ಕೆಲಸ ಮಾಡುತ್ತಿದ್ದೇವೆ” ಎಂದು ಜಿಲ್ಲಾ ಆರೋಗ್ಯಾಧಿಕಾರಿ ಹೇಳಿದ್ದಾರೆ.. ಉತ್ತರಾಖಂಡ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
ಇಲ್ಲಿಕ್ಲಿಕ್ ಮಾಡಿ

ಹೆರಾಯಿನ್ ಚಟಕ್ಕೆ ಒಳಗಾಗಿರುವ 17 ವರ್ಷದ ಬಾಲಕಿ ತನ್ನ ಚಟಕ್ಕೆ ಹಣ ಹೊಂದಿಸಲು ಯುವಕರೊಂದಿಗೆ ಶಾರೀರಿಕ ಸಂಬಂಧದಲ್ಲಿ ತೊಡಗಿದ್ದಳು ಎನ್ನಲಾಗಿದೆ. ಯುವಕರು ಅನಾರೋಗ್ಯಕ್ಕೆ ಒಳಗಾದಾಗ ಆಸ್ಪತ್ರೆಗೆ ದಾಖಲಾಗಿದ್ದು, ಈ ವೇಳೆ ನಡೆಸಿದ ಪರೀಕ್ಷೆಯ ವೇಳೆ ಯುವಕರಿಗೆ ಎಚ್‌ಐವಿ ಇರುವುದು ದೃಢವಾಗಿದೆ ಎಂದು ವರದಿ ಉಲ್ಲೇಖಿಸಿದೆ.

ನೈನಿತಾಲ್‌ನ ಮುಖ್ಯ ವೈದ್ಯಾಧಿಕಾರಿ ಡಾ.ಹರೀಶ್ ಚಂದ್ರ ಪಂತ್ ಮಾತನಾಡಿ, ಪ್ರದೇಶದಲ್ಲಿ ಎಚ್‌ಐವಿ ಪ್ರಕರಣಗಳಲ್ಲಿ ಹಠಾತ್ ಹೆಚ್ಚಳದ ಬಗ್ಗೆ ಕಳವಳ ವ್ಯಕ್ತಪಡಿಸಿದ್ದಾರೆ. “ಸಾಮಾನ್ಯವಾಗಿ, ವಾರ್ಷಿಕವಾಗಿ ಸುಮಾರು 20 HIV ಪಾಸಿಟಿವ್ ಪ್ರಕರಣಗಳು ಪತ್ತೆಯಾಗುತ್ತವೆ. ಆದಾಗ್ಯೂ, ಈ ವರ್ಷ ಕೇವಲ ಐದು ತಿಂಗಳೊಳಗೆ, 19 ಹೊಸ ಪ್ರಕರಣಗಳು ವರದಿಯಾಗಿವೆ.” ಎಂದು ಅವರು ಹೇಳಿದ್ದಾರೆ.

ಅಧಿಕಾರಿಗಳು ಈ ಘಟನೆಯನ್ನು ಗಂಭೀರವಾಗಿ ಪರಿಗಣಿಸಿದ್ದು, ಸಮಸ್ಯೆಯನ್ನು ಪರಿಹರಿಸಲು ವಿವಿಧ ಪ್ರದೇಶಗಳಲ್ಲಿ ಕೌನ್ಸೆಲಿಂಗ್ ಸೇವೆಗಳನ್ನು ಪ್ರಾರಂಭಿಸಿದ್ದಾರೆ ಎಂದು ಅವರು ಒತ್ತಿ ಹೇಳಿದರು.

“ಎಚ್‌ಐವಿ ಪ್ರಕರಣಗಳಲ್ಲಿ ಈ ಹಠಾತ್ ಹೆಚ್ಚಳದಿಂದ, ಅದರಲ್ಲೂ ವಿಶೇಷವಾಗಿ ವಾರ್ಷಿಕವಾಗಿ ವರದಿಯಾಗುವ ಪ್ರಕರಣಗಳು ಈಗಲೆ ವರದಿಯಾಗಿದ್ದು ಆತಂಕಕಾರಿ” ಎಂದು ಡಾ. ಪಂತ್ ಹೇಳಿದ್ದಾರೆ. ಜಿಲ್ಲಾ ಆರೋಗ್ಯ ಇಲಾಖೆಯು ಈಗ ಪೀಡಿತ ಸಮುದಾಯಗಳಿಗೆ ಬೆಂಬಲ ಮತ್ತು ಶಿಕ್ಷಣವನ್ನು ಒದಗಿಸಲು ಕೆಲಸ ಮಾಡುತ್ತಿದೆ ಎಂದು ಅವರು ಹೇಳಿದ್ದಾರೆ.

“ಕಳೆದ 17 ತಿಂಗಳುಗಳಲ್ಲಿ, ರಾಮನಗರದಲ್ಲಿ 45 ವ್ಯಕ್ತಿಗಳು ಎಚ್‌ಐವಿ ಪಾಸಿಟಿವ್ ಆಗಿದ್ದಾರೆ ಎಂದು ವರದಿಯಾಗಿದೆ. ಇದು ಆರೋಗ್ಯ ಅಧಿಕಾರಿಗಳಲ್ಲಿ ಕಳವಳವನ್ನು ಉಂಟುಮಾಡಿದೆ” ಎಂದು ಆರೋಗ್ಯ ಇಲಾಖೆಯ ಹಿರಿಯ ಮೂಲಗಳು ಬಹಿರಂಗಪಡಿಸಿವೆ.

“ಯುವಕರು ಅನಾರೋಗ್ಯಕ್ಕೆ ಒಳಗಾಗಲು ಪ್ರಾರಂಭವಾದಾಗ ಆಸ್ಪತ್ರೆಗೆ ದಾಖಲಾಗಿದ್ದರು. ಈ ವೇಳೆ ನಡೆಸಿದ ಪರೀಕ್ಷೆಗಳು ಅವರು ಎಚ್ಐವಿ ಪಾಸಿಟಿವ್ ಆಗಿರುವುದು ದೃಢಪಡಿಸಿವೆ. ಇನ್ನೂ ಹೆಚ್ಚು ಆತಂಕದ ಸಂಗತಿಯೆಂದರೆ, ಈ ವ್ಯಕ್ತಿಗಳಲ್ಲಿ ಹಲವಾರು ವ್ಯಕ್ತಿಗಳು ಮದುವೆಯಾಗಿದ್ದು, ಅವರ ಸಂಗಾತಿಗಳು ಸಹ ಈ ಕಾಯಿಲೆಗೆ ತುತ್ತಾಗಿದ್ದಾರೆ” ಎಂದು ಮೂಲಗಳು ಹೇಳಿವೆ.

ಇದು ನಮ್ಮ ಸಮುದಾಯಕ್ಕೆ ಎಚ್ಚರಿಕೆಯ ಕರೆಗಂಟೆಯಾಗಿದೆ ಎಂದು ನೈನಿತಾಲ್‌ನ ಮುಖ್ಯ ವೈದ್ಯಾಧಿಕಾರಿ ಡಾ.ಹರೀಶ್ ಚಂದ್ರ ಪಂತ್ ಹೇಳಿದ್ದಾರೆ. “ನಾವು ಜಾಗೃತಿ ಮೂಡಿಸಲು, ಸಮಾಲೋಚನೆ ನೀಡಲು ಮತ್ತು ಈ ಸಾಂಕ್ರಮಿಕವನ್ನು ತಡೆಗಟ್ಟಲು ದಣಿವರಿಯಿಲ್ಲದೆ ಕೆಲಸ ಮಾಡುತ್ತಿದ್ದೇವೆ.” ಎಂದು ಅವರು ತಿಳಿಸಿದ್ದಾರೆ.

“ರಾಮನಗರ ಎಚ್‌ಐವಿ ಸಾಂಕ್ರಮಿಕ್ಕೆ ಸಂಬಂಧಿಸಿ ಅನೇಕ ಯುವಕರು ಅವರ ಸಾಮಾನ್ಯ ಲಿಂಕ್ ಅನ್ನು ಹಂಚಿಕೊಂಡಿದ್ದಾರೆ. ಅದರ ಮೂಲಕ ಅವರ ಅರಿವಿಗೆ ಬಾರದಂತೆ ರೋಗಕ್ಕೆ ತುತ್ತಾಗಿದ್ದಾರೆ. ಸಮಾಲೋಚನೆಯ ಅವಧಿಯಲ್ಲಿ, ಅವರೆಲ್ಲರೂ ಬಾಲಕಿಯೊಂದಿಗೆ ದೈಹಿಕ ಸಂಬಂಧಗಳನ್ನು ಹೊಂದಿರುವ ಬಗ್ಗೆ ನಾವು ಕಂಡುಕೊಂಡಿದ್ದೇವೆ. ಬಾಲಕಿಯು ಮಾದಕ ದ್ರವ್ಯದ ಚಟ ಹೊಂದಿದ್ದರು ಎಂದು ಇವರ್ಯಾರಿಗೂ ತಿಳಿದಿರಲಿಲ್ಲ” ಎಂದು ಆರೋಗ್ಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

“ಚಟದಿಂದ ಹೊರಬರಲಾರದ ಬಾಲಕಿಯು ತನ್ನ ಚಟಕ್ಕೆ ಹಣ ಹೊಂದಿಸಲು ಈ ಸಂಬಂಧಗಳಲ್ಲಿ ತೊಡಗಿಸಿಕೊಂಡಿದ್ದರು. ದುರದೃಷ್ಟವಶಾತ್, ಯುವಕರು ಸುಲಭವಾಗಿ ಇದಕ್ಕೆ ಬಲಿಯಾಗಿದ್ದಾರೆ” ಎಂದು ಅಧಿಕಾರಿ ತಿಳಿಸಿದ್ದಾರೆ.

ಇದನ್ನೂ ಓದಿ: ಶಕ್ತಿ ಯೋಜನೆ ಮರುಪರಿಶೀಲನೆ : ಡಿ.ಕೆ ಶಿವಕುಮಾರ್ ಸುಳಿವು

ಶಕ್ತಿ ಯೋಜನೆ ಮರುಪರಿಶೀಲನೆ : ಡಿ.ಕೆ ಶಿವಕುಮಾರ್ ಸುಳಿವು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಈದ್ ಹಬ್ಬದ ವೇಳೆ ಮುಸ್ಲೀಮರನ್ನು ಗುರಿಯಾಗಿಸಿ 46 ದ್ವೇಷ ಅಪರಾಧಗಳು, ಮೂವರ ಹತ್ಯೆ: APCR ಆತಂಕಕಾರಿ ವರದಿ

ಇತ್ತೀಚಿನ ಬಕ್ರೀದ್ (ಈದ್ ಉಲ್-ಅಧಾ) ಹಬ್ಬದ ಆಚರಣೆಯ ಸಂದರ್ಭದಲ್ಲಿ ದೇಶದ ವಿವಿಧೆಡೆ ಅಲ್ಪಸಂಖ್ಯಾತರನ್ನು ಗುರಿಯಾಗಿಸಿಕೊಂಡು ನಡೆದ ಕೋಮು ಕಿರುಕುಳ, ದ್ವೇಷ ಭಾಷಣ ಹಾಗೂ ಹಿಂಸಾಚಾರದ ಘಟನೆಗಳ ಕುರಿತು 'ನಾಗರಿಕ ಹಕ್ಕುಗಳ ರಕ್ಷಣಾ ಸಂಘ'...

ಗ್ರೇಟ್ ನಿಕೋಬಾರ್ : ಕಾರ್ಪೊರೇಟ್ ಹಿತಾಸಕ್ತಿಗೆ ಬಲಿಯಾಗುತ್ತಿರುವ ಪರಿಸರ, ಆದಿವಾಸಿಗಳ ಅಸ್ತಿತ್ವ

ಬಂಗಾಳಕೊಲ್ಲಿಯಲ್ಲಿರುವ ಭಾರತದ ದಕ್ಷಿಣ ತುದಿಯ ದ್ವೀಪದ ಸಮಗ್ರ ಅಭಿವೃದ್ಧಿಯ ಹೆಸರಿನಲ್ಲಿ ಕೇಂದ್ರ ಸರ್ಕಾರ ಬರೋಬ್ಬರಿ 72 ಸಾವಿರದಿಂದ 81 ಸಾವಿರ ಕೋಟಿ ರೂಪಾಯಿ ವೆಚ್ಚದ ’ಗ್ರೇಟ್ ನಿಕೋಬಾರ್ ದ್ವೀಪ ಅಭಿವೃದ್ಧಿ ಯೋಜನೆ’ಯನ್ನು ರೂಪಿಸಿದೆ.ಈ...

ಅಸ್ಸಾಂನ ನಾಲ್ವರು ಮುಸ್ಲಿಂ ಮಹಿಳೆಯರ ಗಡೀಪಾರು ಪ್ರಕ್ರಿಯೆಗೆ ಸುಪ್ರೀಂ ತಡೆ: ಕೇಂದ್ರ, ರಾಜ್ಯ ಸರ್ಕಾರಗಳಿಗೆ ನೋಟಿಸ್‌

ಅಸ್ಸಾಂನಲ್ಲಿ 'ವಿದೇಶಿಯರು' ಎಂದು ಘೋಷಿತರಾಗಿ ಗಡೀಪಾರು ಭೀತಿ ಎದುರಿಸುತ್ತಿದ್ದ ನಾಲ್ವರು ಮುಸ್ಲಿಂ ಮಹಿಳೆಯರ ವಿಚಾರದಲ್ಲಿ ಭಾರತದ ಸುಪ್ರೀಂ ಕೋರ್ಟ್ ಮಹತ್ವದ ಮಧ್ಯಪ್ರವೇಶ ಮಾಡಿದೆ. ಈ ಮಹಿಳೆಯರನ್ನು ದೇಶದಿಂದ ಹೊರಹಾಕುವ (ಗಡೀಪಾರು ಮಾಡುವ) ಪ್ರಕ್ರಿಯೆಗೆ...

ದೆಹಲಿಗೆ ಬಂದಿಳಿದ ಕಾಕ್ರೋಚ್ ಪಾರ್ಟಿ ಸಂಸ್ಥಾಪಕ ಅಭಿಜೀತ್ ದೀಪ್ಕೆ : ಜಂತರ್‌ ಮಂತರ್‌ನಲ್ಲಿ ಪ್ರತಿಭಟಿಸಲು ಪೊಲೀಸರಿಂದ ಅನುಮತಿ

ಶನಿವಾರ (ಜೂ.6) ಬೆಳಿಗ್ಗೆ ದೆಹಲಿಗೆ ಆಗಮಿಸಿದ ಕಾಕ್ರೋಚ್ ಜನತಾ ಪಾರ್ಟಿಯ (ಸಿಜೆಪಿ) ಸಂಸ್ಥಾಪಕ ಅಭಿಜೀತ್ ದೀಪ್ಕೆ, ಪ್ರತಿಭಟನೆಗೆ ದೆಹಲಿ ಪೊಲೀಸರು ಅನುಮತಿ ನೀಡಿದ್ದಾರೆ ಎಂದು ತಿಳಿಸಿದ್ದು, ಯೋಜಿತ ಆಂದೋಲನಕ್ಕಾಗಿ ನೇರವಾಗಿ ಜಂತರ್ ಮಂತರ್‌ನಲ್ಲಿ...

ಜಾಗತಿಕವಾಗಿ ಮೂರು ವರ್ಷಗಳಲ್ಲಿ 600 ಪರಿಸರ ರಕ್ಷಕರ ಹತ್ಯೆ: ವಿಶ್ವಸಂಸ್ಥೆ ತೀವ್ರ ಕಳವಳ: ಜಾಗತಿಕ ತಾಪಮಾನಕ್ಕೆ ಸಾಕ್ಷಿಯಾಗುತ್ತಿರುವ ಭಾರತ

ಜೂನ್ 5 ವಿಶ್ವ ಪರಿಸರ ದಿನ. ಜಗತ್ತಿನಾದ್ಯಂತ ಗಿಡ ನೆಡುವ, ಹಸಿರು ಭಾಷಣ ಬಿಗಿಯುವ ಮತ್ತು ಪರಿಸರ ಕಾಳಜಿಯ ಸಡಗರದ ಆಚರಣೆಗಳು ಎಲ್ಲೆಡೆ ವಿಭಿನ್ನ ರೀತಿಗಳಲ್ಲಿ ವಿಜೃಂಭಿಸುತ್ತಿವೆ. ಆದರೆ, ಇದೇ ಹೊತ್ತಿನಲ್ಲಿ ವಿಶ್ವಸಂಸ್ಥೆಯು...

ಮಣಿಪುರ ಎಸ್‌ಐಆರ್ ವಿರೋಧಿಸಿದ ಕುಕಿ-ಝೋ ಗುಂಪುಗಳು

ಮಣಿಪುರ ರಾಜ್ಯದಲ್ಲಿ ಪ್ರಸ್ತುತ ನಡೆಯುತ್ತಿರುವ ಮತದಾರರ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆ ವಿರುದ್ಧ ಪ್ರತಿಭಟನೆ ವ್ಯಕ್ತವಾಗಿದೆ. ಕುಕಿ-ಝೋ ಬುಡಕಟ್ಟು ಜನಾಂಗದ ಸಾಂಪ್ರದಾಯಿಕ ಗುಂಪಾದ ಕುಕಿ ಇನ್ಪಿ ಮಣಿಪುರ (ಕೆಐಎಂ) ಮತದಾರರ ಪಟ್ಟಿ...

ಹೇಗಿತ್ತು ‘ಕಾಕ್ರೋಚ್ ಜನತಾ ಪಕ್ಷ’ದ ಮೊದಲ ಸುದ್ದಿಗೋಷ್ಠಿ…? ಧರ್ಮೇಂದ್ರ ಪ್ರಧಾನ್‌ ರಾಜೀನಾಮೆಗೆ ಕರೆ

ಜೂನ್ 6, 2026 ರಂದು ಜಂತರ್ ಮಂತರ್‌ನಲ್ಲಿ ನಡೆಯಲಿರುವ 'ಶಾಂತಿಯುತ ಪ್ರತಿಭಟನೆ'ಗೆ ಮುನ್ನ ಜಿರಳೆ ಜನತಾ ಪಕ್ಷ (ಸಿಜೆಪಿ) ತನ್ನ ಮೊದಲ ಪತ್ರಿಕಾಗೋಷ್ಠಿಯನ್ನು ನಡೆಸಿದೆ. ಬುಧವಾರ ಸಂಜೆ (ಜೂ.3) ಸಿಜೆಪಿಯ ಮೂವರು ವಕ್ತಾರರು...

‘ಇದು ಆತ್ಮಹತ್ಯೆಯಲ್ಲ, ಮೋದಿ ಸರ್ಕಾರದ ಭ್ರಷ್ಟ ವ್ಯವಸ್ಥೆ ಮಾಡಿದ ಕೊಲೆ’: ನೀಟ್ ಆಕಾಂಕ್ಷಿಯ ಸಾವಿಗೆ ರಾಹುಲ್ ಗಾಂಧಿ ಆಕ್ರೋಶ

ದೇಶದ ವೈದ್ಯಕೀಯ ಪ್ರವೇಶ ಪರೀಕ್ಷೆಯಾದ ‘ನೀಟ್-ಯುಜಿ’ (NEET-UG) ವಿವಾದ ಮತ್ತು ವಿದ್ಯಾರ್ಥಿಗಳ ಸಾವುಗಳು ಭಾರತದ ಒಟ್ಟಾರೆ ಶಿಕ್ಷಣ ವ್ಯವಸ್ಥೆಯ ದಯನೀಯ ಸ್ಥಿತಿಗೆ ಕನ್ನಡಿ ಹಿಡಿದಿವೆ. ಪರೀಕ್ಷಾ ಅಕ್ರಮಗಳು, ಪ್ರಶ್ನೆ ಪತ್ರಿಕೆ ಸೋರಿಕೆ ಮತ್ತು...

ತಕ್ಷಣವೇ ‘SIR ಹೆಲ್ಪ್‌ ಡೆಸ್ಕ್‌’ ಸ್ಥಾಪಿಸುವಂತೆ ಅಧಿಕಾರಿಗಳಿಗೆ ಸಿಎಂ ಸೂಚನೆ

ರಾಜ್ಯದಲ್ಲಿ ಭಾರತೀಯ ಚುನಾವಣಾ ಆಯೋಗದಿಂದ ನಡೆಯುತ್ತಿರುವ ಎಸ್‌ಐಆರ್ (Special Electoral Roll Purification) ಪ್ರಕ್ರಿಯೆ ಸಂದರ್ಭದಲ್ಲಿ ರಾಜ್ಯದ ಯಾವುದೇ ಪ್ರಜೆಯೂ ತನ್ನ ಅತ್ಯಮೂಲ್ಯವಾದ ಮತದಾನದ ಹಕ್ಕನ್ನು ಕಳೆದುಕೊಳ್ಳಬಾರದು ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್...

ವಿಷಾಹಾರಕ್ಕೆ ಜಾಗತಿಕವಾಗಿ ವರ್ಷಕ್ಕೆ 15 ಲಕ್ಷ ಜನರು ಬಲಿ: ಮಕ್ಕಳಿಗೆ ಹೆಚ್ಚಿನ ಅಪಾಯ: ಭಾರತದ ಸ್ಥಿತಿಯೂ ಆತಂಕಕಾರಿ! 

ನಾವು ದಿನನಿತ್ಯ ಸೇವಿಸುವ ಆಹಾರವೇ ನಮ್ಮ ಜೀವಕ್ಕೆ ಕಂಟಕವಾಗುತ್ತಿದೆಯೇ? ಹೌದು ಎನ್ನುತ್ತದೆ ವಿಶ್ವ ಆರೋಗ್ಯ ಸಂಸ್ಥೆಯ (WHO) ಇತ್ತೀಚಿನ ಆಘಾತಕಾರಿ ವರದಿ. ಜಾಗತಿಕವಾಗಿ ಅಸುರಕ್ಷಿತ ಮತ್ತು ಕಲುಷಿತ ಆಹಾರದ ಸೇವನೆಯಿಂದಾಗಿ ಪ್ರತಿ ವರ್ಷ...