Homeದಲಿತ್ ಫೈಲ್ಸ್ಉತ್ತರಾಖಂಡ: ಮೇಲ್ಜಾತಿ ಯುವತಿ ಜೊತೆ ಸ್ನೇಹ ಬೆಳೆಸಿದ 18 ವರ್ಷದ ದಲಿತ ಯುವಕನ ಹತ್ಯೆ, ಸ್ನೇಹಿತನ...

ಉತ್ತರಾಖಂಡ: ಮೇಲ್ಜಾತಿ ಯುವತಿ ಜೊತೆ ಸ್ನೇಹ ಬೆಳೆಸಿದ 18 ವರ್ಷದ ದಲಿತ ಯುವಕನ ಹತ್ಯೆ, ಸ್ನೇಹಿತನ ಮೇಲೂ ಮಾರಣಾಂತಿಕ ಹಲ್ಲೆ 

- Advertisement -
- Advertisement -

ದೇಶದಲ್ಲಿ ಜಾತಿ ವ್ಯವಸ್ಥೆಯ ಕರಾಳ ಮುಖ ಮತ್ತೊಮ್ಮೆ ಅನಾವರಣಗೊಂಡಿದೆ. ಉತ್ತರಾಖಂಡದ ನ್ಯೂ ತೆಹ್ರಿ ಜಿಲ್ಲೆಯ ಪ್ರತಾಪ್ ನಗರ ಬ್ಲಾಕ್ ವ್ಯಾಪ್ತಿಯಲ್ಲಿ ಮೇಲ್ಜಾತಿಯ ಅಪ್ರಾಪ್ತ ಯುವತಿಯೊಂದಿಗೆ ಸ್ನೇಹ ಬೆಳೆಸಿದ್ದಕ್ಕಾಗಿ 18 ವರ್ಷದ ದಲಿತ ಹದಿಹರೆಯದ ಯುವಕನನ್ನು ಅತ್ಯಂತ ಕ್ರೂರವಾಗಿ ಥಳಿಸಿ ಕೊಲೆ ಮಾಡಿರುವ ಘಟನೆ ತಡವಾಗಿ ಬೆಳಕಿಗೆ ಬಂದಿದೆ. ದಾಳಿಯಲ್ಲಿ ಮೃತನ ಸ್ನೇಹಿತ ಕೂಡ ತೀವ್ರವಾಗಿ ಗಾಯಗೊಂಡಿದ್ದು, ಆಸ್ಪತ್ರೆಯಲ್ಲಿ ಸಾವು-ಬದುಕಿನ ನಡುವೆ ಹೋರಾಡುತ್ತಿದ್ದಾನೆ ಎಂದು ಪೊಲೀಸರು ಸೋಮವಾರ ತಿಳಿಸಿದ್ದಾರೆ.

ಮೃತನನ್ನು ದೇವಲ್ ಗ್ರಾಮದ ನಿವಾಸಿ ಕೇತನ್ ಲಾಲ್ (18) ಎಂದು ಗುರುತಿಸಲಾಗಿದೆ. ದಾಳಿಯಲ್ಲಿ ಬದುಕುಳಿದ ಆತನ ಸ್ನೇಹಿತ ದಿವಾಕರ್ ದಿಮ್ರಿ ತೀವ್ರ ಗಾಯಗೊಂಡಿದ್ದು, ಸದ್ಯ ಬೌರಾರಿಯಲ್ಲಿರುವ ಜಿಲ್ಲಾ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ.

ಮೃತ ಕೇತನ್ ಲಾಲ್ ತಂದೆ ಧನಪಾಲ್ ಲಾಲ್ ಪೊಲೀಸರಿಗೆ ನೀಡಿರುವ ದೂರಿನ ಪ್ರಕಾರ, ಈ ಭೀಕರ ಘಟನೆಯು ಭಾನುವಾರ ರಾತ್ರಿ ಖೋಲ್ಗಢ ಗ್ರಾಮದಲ್ಲಿ ನಡೆದಿದೆ. ಕೇತನ್ ಕಳೆದ ಆರು ತಿಂಗಳಿನಿಂದ ಖೋಲ್ಗಢ ಗ್ರಾಮದ ಮೇಲ್ಜಾತಿಯ ಯುವತಿಯೊಬ್ಬಳೊಂದಿಗೆ ಸ್ನೇಹ ಹೊಂದಿದ್ದ ಎನ್ನಲಾಗಿದೆ.

ಭಾನುವಾರ ರಾತ್ರಿ ಸುಮಾರು 11 ಗಂಟೆಯ ವೇಳೆಗೆ, ಯುವತಿಯು ಫೋನ್ ಮಾಡಿ ಕೇತನ್‌ನನ್ನು ತನ್ನ ಗ್ರಾಮಕ್ಕೆ ಬರುವಂತೆ ಕೇಳಿಕೊಂಡಿದ್ದಾಳೆ. ಅದರಂತೆ ಕೇತನ್ ತನ್ನ ಸ್ನೇಹಿತ ದಿವಾಕರ್ ಜೊತೆ ಖೋಲ್ಗಢ ಗ್ರಾಮಕ್ಕೆ ಹೋಗಿದ್ದಾನೆ. ಆದರೆ, ಅವರು ಅಲ್ಲಿಗೆ ತಲುಪುತ್ತಿದ್ದಂತೆ ಯುವತಿಯ ಕುಟುಂಬದ ಸದಸ್ಯರು ಇಬ್ಬರನ್ನೂ ಹಿಡಿದು ಕೋಣೆಯೊಂದರಲ್ಲಿ ಕೂಡಿ ಹಾಕಿದ್ದಾರೆ. ನಂತರ ಇಬ್ಬರ ಮೇಲೂ ಕೋಲು ಹಾಗೂ ಮಾರಕಾಸ್ತ್ರಗಳಿಂದ ಮೃಗೀಯವಾಗಿ ಹಲ್ಲೆ ನಡೆಸಿದ್ದಾರೆ ಎಂದು ಪೊಲೀಸರು ಪ್ರಾಥಮಿಕ ತನಿಖೆಯಲ್ಲಿ ತಿಳಿಸಿದ್ದಾರೆ.

ಮರುದಿನ ಅಂದರೆ ಸೋಮವಾರ ಮುಂಜಾನೆ, ಘಟನೆಯ ಪ್ರಮುಖ ಆರೋಪಿಗಳಲ್ಲಿ ಒಬ್ಬನಾದ ಯಶ್ವೀರ್ ಸಿಂಗ್ ಪನ್ವಾರ್, ಕೇತನ್ ತಂದೆ ಧನಪಾಲ್ ಲಾಲ್ ಅವರಿಗೆ ಫೋನ್ ಕರೆ ಮಾಡಿ, ನಿಮ್ಮ ಮಗನ ಸ್ಥಿತಿ ಗಂಭೀರವಾಗಿದೆ, ಬಂದು ಕರೆದುಕೊಂಡು ಹೋಗಿ ಎಂದು ತಿಳಿಸಿದ್ದಾನೆ. ಧನಪಾಲ್ ಅವರು ತಕ್ಷಣ ಸ್ಥಳಕ್ಕೆ ಧಾವಿಸಿದಾಗ ಮಗ ಕೇತನ್ ರಕ್ತದ ಮಡುವಿನಲ್ಲಿ ಪ್ರಜ್ಞಾಹೀನ ಸ್ಥಿತಿಯಲ್ಲಿ ಬಿದ್ದಿರುವುದು ಕಂಡುಬಂದಿದೆ. ತಕ್ಷಣ ಆತನನ್ನು ಚೌಂಡ್ ಲಂಬಗಾಂವ್‌ನಲ್ಲಿರುವ ಸಮುದಾಯ ಆರೋಗ್ಯ ಕೇಂದ್ರಕ್ಕೆ (CHC) ಕರೆದೊಯ್ಯಲಾಯಿತಾದರೂ, ಆತ ಈಗಾಗಲೇ ಮೃತಪಟ್ಟಿರುವುದಾಗಿ ವೈದ್ಯರು ಘೋಷಿಸಿದ್ದಾರೆ.

ಕೊಲೆ ಸುದ್ದಿ ತಿಳಿಯುತ್ತಿದ್ದಂತೆ ಸ್ಥಳೀಯ ಸಾರ್ವಜನಿಕರು ಹಾಗೂ ಮೃತನ ಕುಟುಂಬಸ್ಥರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಆರೋಪಿಗಳನ್ನು ತಕ್ಷಣವೇ ಬಂಧಿಸಿ ಕಠಿಣ ಕ್ರಮ ಕೈಗೊಳ್ಳುವವರೆಗೆ ಶವವನ್ನು ಆಸ್ಪತ್ರೆಯಿಂದ ಪಡೆಯುವುದಿಲ್ಲ ಎಂದು ಪಟ್ಟು ಹಿಡಿದು ಆಸ್ಪತ್ರೆಯ ಎದುರು ಪ್ರತಿಭಟನೆ ನಡೆಸಿದ್ದಾರೆ. ಇದರಿಂದಾಗಿ ಸ್ಥಳದಲ್ಲಿ ಸ್ವಲ್ಪ ಕಾಲ ಉದ್ವಿಗ್ನ ವಾತಾವರಣ ನಿರ್ಮಾಣವಾಗಿದೆ. 

ಈ ಘಟನೆಯ ಕುರಿತು ಮಾಹಿತಿ ನೀಡಿರುವ ತೆಹ್ರಿ ಗರ್ವಾಲ್ ಜಿಲ್ಲೆಯ ಹಿರಿಯ ಪೊಲೀಸ್ ವರಿಷ್ಠಾಧಿಕಾರಿ (SSP) ಶ್ವೇತಾ ಚೌಬೆ ಅವರು, “ಆರೋಪಿಗಳ ವಿರುದ್ಧ ಕೊಲೆ ಪ್ರಕರಣ ಹಾಗೂ ಎಸ್‌ಸಿ/ಎಸ್‌ಟಿ (ದೌರ್ಜನ್ಯ ತಡೆ) ಕಾಯ್ದೆಯ ಸೆಕ್ಷನ್ 3(2)(v) ಅಡಿಯಲ್ಲಿ ಎಫ್‌ಐಆರ್ ದಾಖಲಿಸಲಾಗಿದೆ. ಪ್ರಮುಖ ಆರೋಪಿಗಳಲ್ಲಿ ಒಬ್ಬನಾದ ಯಶ್ವೀರ್ ಸಿಂಗ್ ಪನ್ವಾರ್ ಎಂಬಾತನನ್ನು ಈಗಾಗಲೇ ವಶಕ್ಕೆ ಪಡೆದು ವಿಚಾರಣೆ ನಡೆಸಲಾಗುತ್ತಿದೆ” ಎಂದು ಸ್ಪಷ್ಟಪಡಿಸಿದ್ದಾರೆ.

ಈ ಘಟನೆಗೆ ವ್ಯಾಪಕ ಸಾಮಾಜಿಕ ಆಕ್ರೋಶ ವ್ಯಕ್ತವಾಗಿದ್ದು, ಸಿಪಿಐ (ಎಂಎಲ್) ಲಿಬರೇಶನ್ ಕೇಂದ್ರ ಸಮಿತಿ ಸದಸ್ಯ ಹಾಗೂ ಉತ್ತರಾಖಂಡ ರಾಜ್ಯ ಕಾರ್ಯದರ್ಶಿ ಇಂದ್ರೇಶ್ ಮೈಖುರಿ ಅವರು ತೀವ್ರವಾಗಿ ಖಂಡಿಸಿದ್ದಾರೆ.

“ಜಾತಿವಾದಿ ಮನಸ್ಥಿತಿಯು ಮನುಷ್ಯರನ್ನು ಎಷ್ಟು ಹಿಂಸಾತ್ಮಕ ಮತ್ತು ಅನಾಗರಿಕರನ್ನಾಗಿ ಮಾಡುತ್ತದೆ ಎಂಬುದಕ್ಕೆ ಈ ಕೊಲೆಯೇ ಪ್ರತ್ಯಕ್ಷ ಸಾಕ್ಷಿ. 2022 ರಲ್ಲಿ ಮೇಲ್ಜಾತಿಯ ಮಹಿಳೆಯನ್ನು ಮದುವೆಯಾಗಿದ್ದಕ್ಕಾಗಿ ದಲಿತ ರಾಜಕೀಯ ಕಾರ್ಯಕರ್ತ ಜಗದೀಶ್ ಚಂದ್ರ ಅವರನ್ನು ಇದೇ ರೀತಿ ಹತ್ಯೆ ಮಾಡಲಾಗಿತ್ತು. ಈಗ 18 ವರ್ಷದ ಯುವಕನ ಜೀವ ತೆಗೆಯಲಾಗಿದೆ” ಎಂದು ಅವರು ಹಳೆಯ ಘಟನೆಯನ್ನು ನೆನಪಿಸಿಕೊಂಡಿದ್ದಾರೆ.

ಮುಂದುವರಿದು ಮಾತನಾಡಿದ ಅವರು, “ಯಶ್ವೀರ್ ಪನ್ವಾರ್ ಮತ್ತು ಆತನ ಸಹಚರರ ರಕ್ತನಾಳಗಳಲ್ಲಿ ಜಾತಿವಾದದ ವಿಷ ಆಳವಾಗಿ ಹರಿಯುತ್ತಿತ್ತು. ಈ ಕೃತ್ಯದಿಂದ ಅವರು ವೀರರೇನೂ ಆಗಲಿಲ್ಲ, ಬದಲಿಗೆ ಸಮಾಜದ ಕ್ರೂರ ಕೊಲೆಗಾರರಾಗಿದ್ದಾರೆ. ಹಂತಕರಿಗೆ ಕಠಿಣ ಶಿಕ್ಷೆಯಾಗಬೇಕು ಮತ್ತು ಕೇತನ್ ಕುಟುಂಬಕ್ಕೆ ನ್ಯಾಯ ಸಿಗಬೇಕು” ಎಂದು ಒತ್ತಾಯಿಸಿದ್ದಾರೆ.

ಉತ್ತರಾಖಂಡದಲ್ಲಿ ಹೆಚ್ಚುತ್ತಿರುವ ದಲಿತರ ಮೇಲಿನ ದೌರ್ಜನ್ಯ: ಆತಂಕಕಾರಿ ಅಂಕಿ-ಅಂಶ

‘ದಲಿತ ಮಾನವ ಹಕ್ಕುಗಳ ರಾಷ್ಟ್ರೀಯ ಅಭಿಯಾನ’ (NCDHR) ಇತ್ತೀಚೆಗೆ ಬಿಡುಗಡೆ ಮಾಡಿರುವ “ಭಾರತದಲ್ಲಿ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಮೇಲಿನ ಅಪರಾಧಗಳ ವಿಶ್ಲೇಷಣೆ (2019-2023)” ವರದಿಯು ರಾಜ್ಯದಲ್ಲಿ ದಲಿತರ ಮೇಲಿನ ದೌರ್ಜನ್ಯಗಳ ಆತಂಕಕಾರಿ ಚಿತ್ರಣವನ್ನು ತೆರೆದಿಟ್ಟಿದೆ.

ಈ ರಾಷ್ಟ್ರೀಯ ವರದಿಯ ಪ್ರಕಾರ, ಎಸ್‌ಸಿ ಮತ್ತು ಎಸ್‌ಟಿ ಸಮುದಾಯಗಳ ಮೇಲಿನ ಅಪರಾಧ ಪ್ರಕರಣಗಳಲ್ಲಿ ಉತ್ತರಾಖಂಡ ರಾಜ್ಯವು ಭಾರತೀಯ ರಾಜ್ಯಗಳ ಪೈಕಿ 18ನೇ ಸ್ಥಾನದಲ್ಲಿದೆ. ದೇಶದಲ್ಲಿ ಪರಿಶಿಷ್ಟ ಜಾತಿ ಮತ್ತು ಪಂಗಡಗಳ ವಿರುದ್ಧ ನಡೆಯುವ ಒಟ್ಟು ಅಪರಾಧಗಳ ಪೈಕಿ ಶೇಕಡಾ 5.4 ರಷ್ಟು ಪ್ರಕರಣಗಳು ಉತ್ತರಾಖಂಡವೊಂದರಲ್ಲೇ ದಾಖಲಾಗುತ್ತಿರುವುದು ಆತಂಕಕ್ಕೆ ಕಾರಣವಾಗಿದೆ.

ಅಷ್ಟೇ ಅಲ್ಲದೆ, ಕಳೆದ ಐದು ವರ್ಷಗಳ ಅವಧಿಯನ್ನು ಗಮನಿಸಿದರೆ ರಾಜ್ಯದಲ್ಲಿ ಪರಿಸ್ಥಿತಿ ಮತ್ತಷ್ಟು ಬಿಗಡಾಯಿಸಿರುವುದು ಸ್ಪಷ್ಟವಾಗುತ್ತದೆ. 2019 ರಿಂದ 2023 ರ ನಡುವಿನ ಅವಧಿಯಲ್ಲಿ ಉತ್ತರಾಖಂಡದಲ್ಲಿ ಎಸ್‌ಸಿ/ಎಸ್‌ಟಿ ಸಮುದಾಯಗಳ ಮೇಲಿನ ದೌರ್ಜನ್ಯ ಮತ್ತು ಅಪರಾಧ ಪ್ರಕರಣಗಳ ಸಂಖ್ಯೆಯಲ್ಲಿ ಶೇಕಡಾ 21.4 ರಷ್ಟು ಭಾರಿ ಹೆಚ್ಚಳವಾಗಿದೆ ಎಂದು ವರದಿ ಸವಿಸ್ತಾರವಾಗಿ ಉಲ್ಲೇಖಿಸಿದೆ.

ಈ ಅಂಕಿ-ಅಂಶಗಳು ಉತ್ತರಾಖಂಡದಲ್ಲಿ ಹಿಂದುಳಿದ ವರ್ಗಗಳ ರಕ್ಷಣೆ ಮತ್ತು ಸಾಮಾಜಿಕ ಭದ್ರತೆಯು ತೀವ್ರ ಸವಾಲಾಗಿ ಪರಿಣಮಿಸಿರುವುದನ್ನು ಎತ್ತಿ ತೋರಿಸುತ್ತಿವೆ. ಸದ್ಯ ಪೊಲೀಸರು ಗ್ರಾಮದಲ್ಲಿ ಯಾವುದೇ ಅಹಿತಕರ ಘಟನೆ ನಡೆಯದಂತೆ ಬಿಗಿ ಬಂದೋಬಸ್ತ್ ಏರ್ಪಡಿಸಿದ್ದು, ಉಳಿದ ಆರೋಪಿಗಳ ಪತ್ತೆಗಾಗಿ ಹುಡುಕಾಟ ನಡೆಸುತ್ತಿದ್ದಾರೆ. 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಜಂತರ್ ಮಂತರ್ ಉಪವಾಸ ಸತ್ಯಾಗ್ರಹ ಸ್ಥಳಕ್ಕೆ ಕೇಜ್ರಿವಾಲ್ ಭೇಟಿ

ದೇಶಾದ್ಯಂತ ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿರುವ ನೀಟ್ (NEET) ಪರೀಕ್ಷಾ ಅಕ್ರಮ ಹಾಗೂ ಪ್ರಶ್ನೆ ಪತ್ರಿಕೆ ಸೋರಿಕೆ ಖಂಡಿಸಿ ಜಂತರ್ ಮಂತರ್‌ನಲ್ಲಿ ಆಮರಣಾಂತ ಉಪವಾಸ ಸತ್ಯಾಗ್ರಹ ನಡೆಸುತ್ತಿರುವ ಖ್ಯಾತ ಶಿಕ್ಷಣ ತಜ್ಞ ಹಾಗೂ ಪರಿಸರ...

E20 ಪೆಟ್ರೋಲ್ ಪ್ರಕರಣ : ‘ಗ್ರ್ಯಾಂಡ್ ವಿಟಾರಾ’ ಕಾರು ಬದಲಾಯಿಸಿ ಕೊಡಲು ಮಾರುತಿ ಸುಝುಕಿಗೆ ಗ್ರಾಹಕ ನ್ಯಾಯಾಲಯ ಆದೇಶ

ಛತ್ತೀಸ್‌ಗಢದ ರಾಯ್‌ಪುರದ ಜಿಲ್ಲಾ ಗ್ರಾಹಕ ವಿವಾದಗಳ ಪರಿಹಾರ ಆಯೋಗವು (ಡಿಸಿಡಿಆರ್‌ಸಿ), E20 ಇಂಧನ (ಪೆಟ್ರೋಲ್) ಬಳಕೆಯಿಂದಾಗಿ ಕಾರು ಕೆಟ್ಟುಹೋಗಿದೆ ಎಂದು ಆರೋಪಿಸಿದ ವ್ಯಕ್ತಿಗೆ ಹೊಸ 'ಗ್ರಾಂಡ್ ವಿಟಾರಾ' ಕಾರನ್ನು ನೀಡುವಂತೆ ಕಾರು ತಯಾರಿಕಾ...

ಸಿಜೆಪಿ ಶಾಂತಿಯುತ ಪ್ರತಿಭಟನೆಗೆ ನಿರಂತರ ಪೊಲೀಸ್ ಕಣ್ಗಾವಲು ಪ್ರಶ್ನಿಸಿ ದೆಹಲಿ ಹೈಕೋರ್ಟ್‌ಗೆ ಅರ್ಜಿ

ರಾಷ್ಟ್ರ ರಾಜಧಾನಿ ದೆಹಲಿಯ ಜಂತರ್ ಮಂತರ್‌ನಲ್ಲಿ ಜಿರಳೆ ಜನತಾ ಪಕ್ಷ (ಸಿಜೆಪಿ) ಆಯೋಜಿಸಿರುವ ಶಾಂತಿಯುತ ಧರಣಿ ಮತ್ತು ಉಪವಾಸ ಸತ್ಯಾಗ್ರಹದಲ್ಲಿ ಭಾಗವಹಿಸುವ ನಾಗರಿಕರ ಮೇಲೆ ದೆಹಲಿ ಪೊಲೀಸರು ನಿರಂತರ ಮತ್ತು ವ್ಯಾಪಕ ಕಣ್ಗಾವಲು...

IAS ಆಗುವ ಮುನ್ನ ‘ಪರಿಪೂರ್ಣ ತಾಯಿ’ಯಾಗಿ ಎಂದ ರಾಜ್ಯಪಾಲರ ಸಲಹೆ ಪುರುಷ ಪ್ರಾಧ್ಯಾನ್ಯತೆಯ ಮುಂದುವರೆದ ಆಚರಣೆ ಅಲ್ಲವೆ?

ಇತ್ತೀಚೆಗೆ ಉತ್ತರ ಪ್ರದೇಶದ ರಾಜ್ಯಪಾಲರಾದ ಆನಂದಿಬೆನ್ ಪಟೇಲ್ ಅವರು, "ಮಹಿಳೆಯರು IAS ಅಧಿಕಾರಿ ಅಥವಾ ಶಿಕ್ಷಕಿಯಾಗುವ ಕನಸು ಕಾಣುವ ಮೊದಲು 'ಪರಿಣಿತ ತಾಯಿ' ಆಗುವುದನ್ನು ಕಲಿಯಬೇಕು ಎಂದು ಸಲಹೆ ನೀಡಿದ್ದರು. ಕಾನ್ಪುರದ ಛತ್ರಪತಿ...

ಹಿಂದಿನ ಮದುವೆ, ಮಗು ವಿಚಾರ ಮುಚ್ಚಿಟ್ಟಿದ್ದಕ್ಕೆ ಸಹೋದರನೊಂದಿಗಿನ ಸಂಬಂಧ ಮುರಿದುಕೊಂಡಿದ್ದ ಕಾನೂನು ವಿದ್ಯಾರ್ಥಿನಿಯನ್ನು ಇರಿದು ಕೊಂದ ತಮ್ಮ

ಬೆಂಗಳೂರು: ಮೊದಲ ಮದುವೆ ಹಾಗೂ ಮಗುವಿದ್ದ ವಿಷಯವನ್ನು ಮುಚ್ಚಿಟ್ಟು ವಂಚಿಸಿದ್ದ ಪ್ರಿಯಕರನೊಂದಿಗಿನ ಸಂಬಂಧವನ್ನು ಮುರಿದುಕೊಂಡ ಕಾರಣಕ್ಕೆ, ಆತನ ಸಹೋದರನಿಂದಲೇ ಚಾಕು ಇರಿತಕ್ಕೊಳಗಾಗಿದ್ದ ಕಾನೂನು ವಿದ್ಯಾರ್ಥಿನಿಯೊಬ್ಬಳು ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿರುವ ಘಟನೆ ಸಿಲಿಕಾನ್ ಸಿಟಿಯಲ್ಲಿ...

ಮಕ್ಕಳ ಕ್ಯಾನ್ಸರ್ ಆಸ್ಪತ್ರೆಯ ಮೇಲೆ ಅಮೆರಿಕ ದಾಳಿಗೆ ಇರಾನ್‌ನಿಂದ ಪ್ರತೀಕಾರ

ಕಳೆದ ಗುರುವಾರ (ಜು.16) ಖುಜೆಸ್ತಾನ್ ಪ್ರಾಂತ್ಯದಲ್ಲಿರುವ ಮಕ್ಕಳ ಕ್ಯಾನ್ಸರ್ ಆಸ್ಪತ್ರೆಯ ಮೇಲೆ ನಡೆದ ದಾಳಿಗೆ ಪ್ರತೀಕಾರವಾಗಿ, ಕುವೈತ್ ಮತ್ತು ಬಹ್ರೇನ್ ಸೇರಿದಂತೆ ಗಲ್ಫ್ ರಾಷ್ಟ್ರಗಳಲ್ಲಿರುವ ಅಮೆರಿಕದ ವಾಯು ನೆಲೆಗಳ ಮೇಲೆ ಇರಾನ್ ಪ್ರತಿದಾಳಿ...

Lazarus To World Leaks : ಆತಂಕ ಸೃಷ್ಟಿಸಿದ ಕೂಡಂಕುಳಂ ಸೈಬರ್ ದಾಳಿಗಳು

ಭಾರತದ ಅತಿ ದೊಡ್ಡ ಪರಮಾಣು ವಿದ್ಯುತ್ ಕೇಂದ್ರವಾದ ತಮಿಳುನಾಡಿನ  ತಿರುನೆಲ್ವೇಲಿಯ ಕೂಡಂಕುಳಂ, ಕಳೆದ ಏಳು ವರ್ಷಗಳ ಅವಧಿಯಲ್ಲಿ ಎರಡು ಬಾರಿ ಪ್ರಮುಖ ಸೈಬರ್ ಭದ್ರತಾ ಆತಂಕಗಳಿಗೆ ಕೇಂದ್ರ ಬಿಂದುವಾಗಿದೆ. 2019ರ ಮೊದಲ ಘಟನೆಯು...

ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ: ಪ್ರಶ್ನೆಗಳನ್ನು ಖರೀದಿಸಲು 5 ಲಕ್ಷ ರೂ. ಪಾವತಿಸಿದ್ದ ಲಾತೂರ್ ಕೋಚಿಂಗ್ ಮಾಲೀಕ: ನ್ಯಾಯಾಲಯಕ್ಕೆ ಸಿಬಿಐ ಮಾಹಿತಿ

ದೇಶಾದ್ಯಂತ ಕೋಟ್ಯಂತರ ವಿದ್ಯಾರ್ಥಿಗಳ ಭವಿಷ್ಯವನ್ನು ಕತ್ತಲಿಗೆ ತಳ್ಳಿದ ನೀಟ್ (NEET-UG) ಪ್ರಶ್ನೆ ಪತ್ರಿಕೆ ಸೋರಿಕೆ ಹಗರಣದಲ್ಲಿ ದಿನಕ್ಕೊಂದು ಆಘಾತಕಾರಿ ಸತ್ಯಗಳು ಹೊರಬರುತ್ತಿದ್ದು, ಇಡೀ ಶಿಕ್ಷಣ ವ್ಯವಸ್ಥೆಯನ್ನು ಜರ್ಜರಿತಗೊಳಿಸಿರುವ ಈ ದಂಧೆಯ ಆಳ ಎಷ್ಟು...

ನಾನು ಸತ್ತರೂ ಪರ್ವಾಗಿಲ್ಲ, ಉಪವಾಸ ಹಿಂಪಡೆಯಲ್ಲ: ಜುಲೈ 20ರ ಸಂಸತ್ ಚಲೋಗೆ ವಾಂಗ್‌ಚುಕ್ ಕರೆ

ದೇಶದ ಶಿಕ್ಷಣ ವ್ಯವಸ್ಥೆಯಲ್ಲಿನ ಸರಣಿ ಪರೀಕ್ಷಾ ಅಕ್ರಮ ಹಾಗೂ ನೀಟ್ (NEET) ಹಗರಣದ ವಿರುದ್ಧ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಆಗ್ರಹಿಸಿ ನಡೆಯುತ್ತಿರುವ ಆಮರಣಾಂತ ಉಪವಾಸ ಸತ್ಯಾಗ್ರಹವನ್ನು ತಕ್ಷಣವೇ...

ಉತ್ತರ ಪ್ರದೇಶ : ಮೊಹಮ್ಮದ್ ಅಲಿ ಜೌಹರ್ ವಿವಿಯ 38 ಕಟ್ಟಡಗಳನ್ನು ಕೆಡವಲು ಮುಂದಾದ ಸರ್ಕಾರ!

ಸಮಾಜವಾದಿ ಪಕ್ಷದ (ಎಸ್‌ಪಿ) ಮುಖಂಡ ಆಝಂ ಖಾನ್ ಅವರಿಗೆ ಸೇರಿದ ಮೊಹಮ್ಮದ್ ಅಲಿ ಜೌಹರ್ ವಿಶ್ವವಿದ್ಯಾಲಯದ 38 ಕಟ್ಟಡಗಳನ್ನು ಕೆಡವಲು ಉತ್ತರ ಪ್ರದೇಶದ ರಾಂಪುರ ನಗರಾಭಿವೃದ್ಧಿ ಪ್ರಾಧಿಕಾರ (ಆರ್‌ಡಿಎ) ಆದೇಶಿಸಿದೆ ಎಂದು ಬುಧವಾರ...