Homeಮುಖಪುಟಉತ್ತರಖಂಡ್: ಕಮರಿಗೆ ಬಸ್‌ ಉರುಳಿ 25 ಮಂದಿ ದುರ್ಮರಣ

ಉತ್ತರಖಂಡ್: ಕಮರಿಗೆ ಬಸ್‌ ಉರುಳಿ 25 ಮಂದಿ ದುರ್ಮರಣ

ಒಂದು ವಾರದ ಅಂತರದೊಳಗೆ ಮತ್ತೊಂದು ದುರಂತ ಘಟನೆಗೆ ದೇಶ ಸಾಕ್ಷಿಯಾಗಿದೆ.

- Advertisement -
- Advertisement -

ಅಕ್ಟೋಬರ್ 4ರ ಸಂಜೆ ಉತ್ತರಾಖಂಡ್‌ನ ಪೌರಿ ಜಿಲ್ಲೆಯ ಬಿರೋನ್‌ಖಾಲ್ ಪ್ರದೇಶದಲ್ಲಿನ ಮದುವೆ ಸಮಾರಂಭಕ್ಕೆ ತೆರಳುತ್ತಿದ್ದ ಸುಮಾರು 45-50 ಸದಸ್ಯರು ಇದ್ದ ಬಸ್ ಕಮರಿಗೆ ಉರುಳಿದ ಪರಿಣಾಮ 25 ಜನರು ಸಾವನ್ನಪ್ಪಿದ್ದಾರೆ.

ಬಸ್ ಲಾಲ್‌ಧಾಂಗ್‌ನಿಂದ ಬಿರೋನ್‌ಖಾಲ್‌ನ ಹಳ್ಳಿಯೊಂದಕ್ಕೆ ತೆರಳುತ್ತಿದ್ದಾಗ ಸಿಮ್ರಿ ತಿರುವಿನ ಬಳಿ ಅಪಘಾತ ಸಂಭವಿಸಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

“ಧೂಮಾಕೋಟ್‌ನ ಬಿರೋಖಾಲ್ ಪ್ರದೇಶದಲ್ಲಿ ನಿನ್ನೆ ರಾತ್ರಿ ನಡೆದ ಪೌರಿ ಗರ್ವಾಲ್ ಬಸ್ ಅಪಘಾತದಲ್ಲಿ 25 ಜನರು ಸಾವನ್ನಪ್ಪಿದ್ದಾರೆ. ಪೊಲೀಸ್ ಮತ್ತು ರಾಜ್ಯ ವಿಪತ್ತು ಪ್ರತಿಕ್ರಿಯೆ ಪಡೆ (ಎಸ್‌ಡಿಆರ್‌ಎಫ್‌) ರಾತ್ರೋರಾತ್ರಿ ಕಾರ್ಯಾರಣೆ ನಡೆಸಿ 21 ಜನರನ್ನು ರಕ್ಷಿಸಿದೆ. ಗಾಯಾಳುಗಳನ್ನು ಹತ್ತಿರದ ಆಸ್ಪತ್ರೆಗಳಿಗೆ ದಾಖಲಿಸಲಾಗಿದೆ” ಎಂದು ಉತ್ತರಾಖಂಡದ ಡಿಜಿಪಿ ಅಶೋಕ್ ಕುಮಾರ್ ಮಾಹಿತಿ ನೀಡಿದ್ದಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ರಾತ್ರಿ 7.30ರ ಸುಮಾರಿಗೆ ಅಪಘಾತ ಸಂಭವಿಸಿದೆ. ಬೆಳಕಿನ ಅಭಾವದಿಂದಾಗಿ ಆರಂಭಿಕ ರಕ್ಷಣಾ ಕಾರ್ಯಾಚರಣೆಗೆ ಅಡ್ಡಿಯಾಯಿತು.

“ಅಪಘಾತದ ಸ್ಥಳದಲ್ಲಿ ಯಾವುದೇ ವಿದ್ಯುತ್‌ ದೀಪಗಳು ಇರಲಿಲ್ಲ. ಬಸ್‌ನೊಳಗೆ ಸಿಲುಕಿರುವವರನ್ನು ರಕ್ಷಿಸಲು ಗ್ರಾಮಸ್ಥರು ತಮ್ಮ ಮೊಬೈಲ್ ಫೋನ್‌ಗಳಲ್ಲಿನ ಬ್ಯಾಟರಿ ದೀಪಗಳ ಸಹಾಯದಿಂದ ಹರಸಾಹಸ ಪಡುತ್ತಿದ್ದರು” ಎಂದು ಪ್ರತ್ಯಕ್ಷದರ್ಶಿಗಳನ್ನು ಉಲ್ಲೇಖಿಸಿ ಪಿಟಿಐ ವರದಿ ಮಾಡಿದೆ.

ಅಪಘಾತದ ಬಗ್ಗೆ ಮಾಹಿತಿ ಪಡೆದ ನಂತರ ಮುಖ್ಯಮಂತ್ರಿ ಪುಷ್ಕರ್ ಸಿಂಗ್ ಧಾಮಿ ಅವರು ಪರಿಸ್ಥಿತಿಯನ್ನು ಅವಲೋಕಿಸುತ್ತಿದ್ದು, ಘಟನೆಯ ಮೇಲ್ವಿಚಾರಣೆಗಾಗಿ ಎಸ್‌ಇಒಸಿ ನಿಯಂತ್ರಣ ಕೊಠಡಿಯನ್ನು ತಲುಪಿದ್ದಾರೆ.

“ರಾಜ್ಯ ವಿಪತ್ತು ನಿರ್ವಹಣಾ ಪಡೆ (SDRF) ತಂಡಗಳನ್ನು ಸಜ್ಜುಗೊಳಿಸಲಾಗಿದೆ. ಅಪಘಾತದ ಸ್ಥಳಕ್ಕೆ ಧಾವಿಸಲಾಗಿದೆ. ನಾವು ಜನರನ್ನು ರಕ್ಷಿಸಲು ಮತ್ತು ಅವರನ್ನು ಆದಷ್ಟು ಬೇಗ ಆಸ್ಪತ್ರೆಗೆ ಕರೆದೊಯ್ಯಲು ಪ್ರಯತ್ನಿಸಿದ್ದೇವೆ. ಸ್ಥಳೀಯ ಗ್ರಾಮಸ್ಥರು ಪ್ರಯತ್ನದಲ್ಲಿ ಸಹಾಯ ಮಾಡುತ್ತಿದ್ದಾರೆ” ಎಂದು ಘಟನೆಯ ಬಳಿಕ ಪ್ರತಿಕ್ರಿಯೆ ನೀಡಿದ್ದಾರೆ.

ಒಂದು ವಾರದ ಅಂತರದೊಳಗೆ ಎರಡು ದುರಂತ ಘಟನೆಗಳಿಗೆ ದೇಶ ಸಾಕ್ಷಿಯಾಗಿದೆ. ಕಳೆದ ಶನಿವಾರ ಉತ್ತರ ಪ್ರದೇಶದಲ್ಲಿ ಘಟಿಸಿದ ಅಪಘಾತದಲ್ಲಿ 26 ಜನರು ಸಾವನ್ನಪ್ಪಿದ್ದರು.

ಇತ್ತೀಚೆಗೆ ದುರಂತಕ್ಕೆ ಸಾಕ್ಷಿಯಾಗಿದ್ದ ಉತ್ತರಪ್ರದೇಶ

ಉತ್ತರ ಪ್ರದೇಶದ ಕಾನ್ಪುರ ಜಿಲ್ಲೆಯ ಹಳ್ಳಿಯೊಂದರ ಬಳಿ ಕಳೆದ ಶನಿವಾರ ಟ್ರ್ಯಾಕ್ಟರ್-ಟ್ರಾಲಿ ಪಲ್ಟಿಯಾಗಿ ಕೊಳಕ್ಕೆ ಬಿದ್ದ ಪರಿಣಾಮ ಕನಿಷ್ಠ 26 ಜನರು ಸಾವನ್ನಪ್ಪಿದ್ದರು. ಹಲವರು ಗಂಭೀರವಾಗಿ ಗಾಯಗೊಂಡಿದ್ದರು.

ಇದನ್ನೂ ಓದಿರಿ: ‘ಕಾಂತಾರ’ ವಿಮರ್ಶೆ: ಭೂತಾರಾಧನೆಯ ಆಚೆ-ಈಚೆ ಒಂದಿಷ್ಟು…

ಸಾರ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿರುವ ಭದೇನಾ ಗ್ರಾಮದ ಬಳಿ ಘಟನೆ ನಡೆದಿತ್ತು. ಟ್ರಾಕ್ಟರ್-ಟ್ರಾಲಿಯಲ್ಲಿ ಸುಮಾರು 50 ಜನರಿದ್ದರು. ಇವರು ಫತೇಪುರ್‌ನ ಚಂದ್ರಿಕಾ ದೇವಿ ದೇವಸ್ಥಾನದಲ್ಲಿ “ಮುಂಡನ್” ಸಮಾರಂಭದಲ್ಲಿ ಭಾಗವಹಿಸಿದ ನಂತರ ಘಟಂಪುರಕ್ಕೆ ತೆರಳುತ್ತಿದ್ದರು. ಆಗ ಅವಘಡ ನಡೆದಿದ್ದು ಹತ್ತಕ್ಕೂ ಹೆಚ್ಚು ಜನರು ಸ್ಥಳದಲ್ಲೇ ಸಾವನ್ನಪ್ಪಿದ್ದರು.

“ಕಾನ್ಪುರದಲ್ಲಿ ನಡೆದ ಟ್ರಾಕ್ಟರ್-ಟ್ರಾಲಿ ಅಪಘಾತದಿಂದ ದುಃಖಿತನಾಗಿರುವೆ. ಗಾಯಗೊಂಡವರ ಉಳಿವಿಗಾಗಿ ಪ್ರಾರ್ಥಿಸುವೆ. ಸ್ಥಳೀಯ ಆಡಳಿತವು ಸಂತ್ರಸ್ತರಿಗೆ ಸಾಧ್ಯವಿರುವ ಎಲ್ಲ ನೆರವು ನೀಡುತ್ತಿದೆ” ಎಂದು ಮೋದಿ ಟ್ವೀಟ್‌ನಲ್ಲಿ ತಿಳಿಸಿದ್ದರು.

ಮೃತರ ಸಂಬಂಧಿಕರಿಗೆ ತಲಾ 2 ಲಕ್ಷ ರೂ.ಗಳನ್ನು ಪ್ರಧಾನಮಂತ್ರಿಗಳ ರಾಷ್ಟ್ರೀಯ ಪರಿಹಾರ ನಿಧಿಯಿಂದ (ಪಿಎಂಎನ್‌ಆರ್‌ಎಫ್) ನೀಡಲಾಗುವುದು ಎಂದು ಪ್ರಧಾನಮಂತ್ರಿ ಕಚೇರಿಯು (ಪಿಎಂಒ) ತಿಳಿಸಿತ್ತು. ಗಾಯಗೊಂಡವರಿಗೆ 50,000 ರೂಪಾಯಿ ನೀಡಲಾಗುವುದು ಎಂದು ಪ್ರಧಾನಿ ಪ್ರತಿಕ್ರಿಯಿಸಿದ್ದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಧಾರವಾಡ | ಪ್ರಕಾಶ್ ರಾಜ್ ಭಾಗವಹಿಸಿದ್ದ ಸಮುದಾಯ ಕಾರ್ಯಕ್ರಮಕ್ಕೆ ಅಡ್ಡಿಪಡಿಸಲು ಯತ್ನ : ದೂರು ದಾಖಲು

ಭಾನುವಾರ (ಆ.30) ಧಾರವಾಡದ ಕರ್ನಾಟಕ ವಿದ್ಯಾವರ್ಧಕ ಸಂಘದ ಸಭಾ ಭವನದಲ್ಲಿ ಆಯೋಜಿಸಿದ್ದ ಸಮುದಾಯ ಸಂಘಟನೆಯ ಕಾರ್ಯಕ್ರಮಕ್ಕೆ ಅಡ್ಡಿಪಡಿಸಲು ಯತ್ನಿಸಿ ಗಲಾಟೆ ಎಬ್ಬಿಸಿದ ಬಿಜೆಪಿ-ಸಂಘಪರಿವಾರದ ಬೆಂಬಲಿಗರ ವಿರುದ್ಧ ದೂರು ದಾಖಲಿಸಲಾಗಿದೆ. ಸಮುದಾಯ ಸಂಘಟನೆಯ ಧಾರವಾಡದ...

ಚಲಿಸುತ್ತಿದ್ದ ಸ್ಲೀಪರ್ ಬಸ್‌ನಲ್ಲಿ ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರ : ಚಾಲಕ, ಕಂಡಕ್ಟರ್ ಬಂಧನ

ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ 2012ರಲ್ಲಿ ನಡೆದ ನಿರ್ಭಯಾ ಪ್ರಕರಣವನ್ನು ನೆನಪಿಸುವಂತಹ ಆಘಾತಕಾರಿ ಘಟನೆಯೊಂದು ನಡೆದಿದೆ. ಸ್ಲೀಪರ್‌ ಬಸ್‌ನಲ್ಲಿ ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಲಾಗಿದೆ. indiatoday.in ವರದಿಯ ಪ್ರಕಾರ, ಈ ಘಟನೆಯು ಆಗಸ್ಟ್ 4ರ...

ಜಗತ್ತಿನ ಪ್ರತಿಯೊಬ್ಬರಿಗೂ ಲ್ಯಾಪ್‌ಟಾಪ್ ಕೊಳ್ಳುವಷ್ಟು ಕಪ್ಪು ಹಣ ಪ್ರಪಂಚದಲ್ಲಿದೆ: ಮುಖ್ಯ ನ್ಯಾಯಮೂರ್ತಿ ಸೂರ್ಯ ಕಾಂತ್

ಅಕ್ರಮ ಹಣ ವರ್ಗಾವಣೆ (Money Laundering) ಮತ್ತು 'ಡಿಜಿಟಲ್ ಅರೆಸ್ಟ್' ನಂತಹ ಆನ್‌ಲೈನ್ ವಂಚನೆಗಳ ಪ್ರಮಾಣದ ಕುರಿತು ಭಾರತದ ಮುಖ್ಯ ನ್ಯಾಯಮೂರ್ತಿ (CJI) ಸೂರ್ಯ ಕಾಂತ್ ತೀವ್ರ ಕಳವಳ ವ್ಯಕ್ತಪಡಿಸಿದ್ದಾರೆ. ಈ ರೀತಿಯ...

ಪೆಟ್ರೋಲ್‌ನಲ್ಲಿ ಎಥನಾಲ್ ಪ್ರಮಾಣ ಬಹಿರಂಗಪಡಿಸುವಂತೆ ಕೋರಿದ್ದ ಅರ್ಜಿ ವಜಾಗೊಳಿಸಿದ ಸುಪ್ರೀಂ ಕೋರ್ಟ್

ಪೆಟ್ರೋಲ್‌ನಲ್ಲಿ ಬೆರೆಸಲಾಗುವ ಎಥನಾಲ್ ಪ್ರಮಾಣವನ್ನು ಕಡ್ಡಾಯವಾಗಿ ನಮೂದಿಸಬೇಕು ಮತ್ತು ವಾಹನಗಳಿಗೆ ಎಥನಾಲ್ ಮಿಶ್ರಿತ ಇಂಧನದ ಹೊಂದಾಣಿಕೆಯ ಬಗ್ಗೆ ಹೆಚ್ಚಿನ ಪಾರದರ್ಶಕತೆ ತರಬೇಕು ಎಂದು ಕೋರಿ ಸಲ್ಲಿಕೆಯಾಗಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು (ಪಿಐಎಲ್‌) ವಿಚಾರಣೆ...

ದೆಹಲಿ| ಜಮಾ ಮಸೀದಿ ಸುತ್ತಮುತ್ತಲಿನ ಅಕ್ರಮ ಒತ್ತುವರಿ ತೆರವು ಕಾರ್ಯಾಚರಣೆ ಆರಂಭಿಸಿದ ಎಂಸಿಡಿ

ದೆಹಲಿ ಹೈಕೋರ್ಟ್ ನಿರ್ದೇಶನದಂತೆ, ಮೊಘಲರ ಕಾಲದ ಐತಿಹಾಸಿಕ ಜಮಾ ಮಸೀದಿ ಸುತ್ತಮುತ್ತಲಿನ ಅಕ್ರಮ ನಿರ್ಮಾಣಗಳನ್ನು ಸಮೀಕ್ಷೆ ಮಾಡಿ, ಒತ್ತುವರಿಯನ್ನು ತೆರವುಗೊಳಿಸುವ ಬೃಹತ್ ಕಾರ್ಯಾಚರಣೆಯನ್ನು ದೆಹಲಿ ಮಹಾನಗರ ಪಾಲಿಕೆ (ಎಂಸಿಡಿ) ಸೋಮವಾರ (ಆ.31) ಪ್ರಾರಂಭಿಸಿದೆ...

ವೆನೆಜುವೆಲಾ ಮತ್ತೆ ಎದ್ದು ನಿಲ್ಲಲಿದೆ: ಬಂಧನದಲ್ಲಿರುವ ವೆನೆಜುವೆಲಾ ಮಾಜಿ ಅಧ್ಯಕ್ಷ ಮಡುರೊ ಮೊದಲ ಫೋಟೋ ಹಂಚಿಕೆ

ಜನವರಿಯಲ್ಲಿ ಅಮೆರಿಕ ಪಡೆಗಳಿಂದ ಬಂಧನಕ್ಕೊಳಗಾಗಿದ್ದ ವೆನೆಜುವೆಲಾದ ಮಾಜಿ ಅಧ್ಯಕ್ಷ ನಿಕೋಲಸ್ ಮಡುರೊ, ಅಮೆರಿಕದ ಬಂಧನ ಕೇಂದ್ರದಿಂದ ತಮ್ಮ ಎರಡು ಛಾಯಾಚಿತ್ರಗಳನ್ನು ಸಾಮಾಜಿಕ ಮಾಧ್ಯಮಗಳಲ್ಲಿ ಹಂಚಿಕೊಂಡಿದ್ದಾರೆ. ಬಂಧನದ ಬಳಿಕ ಮಡುರೊ ಅವರ ಫೋಟೋಗಳು ಹೊರಬಂದಿರುವುದು...

‘ಮಹಿಳೆಯರು ಆಭರಣದಂತೆ ಮನೆಯಲ್ಲೇ ಇರಬೇಕು’ ಮುಸ್ಲಿಂ ಧರ್ಮಗುರು ವಿವಾದಾತ್ಮಕ ಹೇಳಿಕೆ

ಮಹಿಳೆಯರು ಮನೆಯಲ್ಲೇ ಇರಬೇಕು ಮತ್ತು ಸಾರ್ವಜನಿಕ ಕ್ಷೇತ್ರಕ್ಕೆ ಪ್ರವೇಶಿಸಬಾರದು ಎಂದು ಕೇರಳದ ಪ್ರಭಾವಿ ಮುಸ್ಲಿಂ ಧರ್ಮಗುರು ಶೇಖ್ ಅಬೂಬಕರ್ ಅಹ್ಮದ್ ನೀಡಿದ ಹೇಳಿಕೆ ಸಾಮಾಜಿಕ ಮಾಧ್ಯಮಗಳಲ್ಲಿ ಹಾಗೂ ಸಾರ್ವಜನಿಕ ವಲಯದಲ್ಲಿ ತೀವ್ರ ಚರ್ಚೆ...

ಹಲ್ದ್ವಾನಿ ‘ಶುದ್ಧೀಕರಣ’ ವಿವಾದ : ರಾಹುಲ್ ಗಾಂಧಿ ವಿರುದ್ಧ ಎಫ್‌ಐಆರ್

ಉತ್ತರಾಖಂಡದ ಹಲ್ದ್ವಾನಿಯಲ್ಲಿ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ರ್‍ಯಾಲಿ ನಡೆದ ಸ್ಥಳದಲ್ಲಿ ಬಿಜೆಪಿ ಬೆಂಬಲಿಗರು 'ಶುದ್ಧೀಕರಣ' ನಡೆಸಿದ ವಿವಾದ ಹೊಸ ರಾಜಕೀಯ ಮತ್ತು ಕಾನೂನು ತಿರುವು ಪಡೆದುಕೊಂಡಿದೆ. ಜಾತಿ ನಿಂದನೆಗೆ ಸಂಬಂಧಿಸಿದಂತೆ...

ಜೈಲಿನಲ್ಲಿದ್ದ KPSC ಅಧ್ಯಕ್ಷರ ಭೇಟಿಯಾಗಿದ್ದೇಕೆ HDK? ಪ್ರಿಯಾಂಕ್ ಖರ್ಗೆ ಪ್ರಶ್ನೆ

ಕರ್ನಾಟಕ ಲೋಕಸೇವಾ ಆಯೋಗದ (ಕೆಪಿಎಸ್‌ಸಿ) ನೇಮಕಾತಿ ವಿಚಾರವಾಗಿ ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ವಿರುದ್ಧ ಕೇಳಿಬಂದಿರುವ ಗಂಭೀರ ಆರೋಪಗಳಿಗೆ ಅವರು ತಾರ್ಕಿಕ ಸ್ಪಷ್ಟನೆ ನೀಡುವ ಬದಲು, ಜಾರಿಕೊಳ್ಳುವ ರೀತಿಯಲ್ಲಿ ಪತ್ರಿಕಾಗೋಷ್ಠಿ ನಡೆಸಿದ್ದಾರೆ ಎಂದು...

ನೇಪಾಳ: ಶಿಕ್ಷಕನ ಸಮಯಪ್ರಜ್ಞೆಯಿಂದ ಉಳಿಯಿತು 1643 ಮಕ್ಕಳ ಪ್ರಾಣ

ನೇಪಾಳದ ರಸುವಾ ಜಿಲ್ಲೆಯಲ್ಲಿ ಸಂಭವಿಸಿದ ಭೀಕರ ಜಲಪ್ರಳಯಕ್ಕೆ ಬಲಿಯಾದವರ ಸಂಖ್ಯೆ 700ರ ಗಡಿ ದಾಟಿದೆ. 2,000ಕ್ಕೂ ಹೆಚ್ಚು ಜನರು ಇಂದಿಗೂ ನಾಪತ್ತೆಯಾಗಿದ್ದು, ರಕ್ಷಣಾ ಪಡೆಗಳು ಅವಿಶ್ರಾಂತವಾಗಿ ಶೋಧ ಕಾರ್ಯ ನಡೆಸುತ್ತಿವೆ. ಪ್ರಕೃತಿ ತನ್ನ...