Homeಮುಖಪುಟಉತ್ತರಾಖಂಡ | 55 ವರ್ಷ ಹಳೆಯ ಮಸೀದಿಯನ್ನು ಕೆಡವಲು ಬಿಜೆಪಿ ಪರ ಸಂಘಟನೆಗಳ ಬೇಡಿಕೆ; ಹೈಕೋರ್ಟ್...

ಉತ್ತರಾಖಂಡ | 55 ವರ್ಷ ಹಳೆಯ ಮಸೀದಿಯನ್ನು ಕೆಡವಲು ಬಿಜೆಪಿ ಪರ ಸಂಘಟನೆಗಳ ಬೇಡಿಕೆ; ಹೈಕೋರ್ಟ್ ಮಟ್ಟಿಲೇರಿದ ವಿವಾದ

- Advertisement -
- Advertisement -

ಉತ್ತರಾಖಂಡದ ಉತ್ತರಕಾಶಿ ಜಿಲ್ಲೆಯಲ್ಲಿ 55 ವರ್ಷಗಳಷ್ಟು ಹಳೆಯದಾದ ಮಸೀದಿಯನ್ನು ಕೆಡವುವಂತೆ ಆಗ್ರಹಿಸಿ ಬಿಜೆಪಿ ಪರ ಸಂಘಟನೆಗಳು ನಡೆಸುತ್ತಿರುವ ಕೃತ್ಯದಿಂದ ಬೇಸತ್ತು ಮಸೀದಿಯ ಮಂಡಳಿಯು ನೈನಿತಾಲ್ ಹೈಕೋರ್ಟ್‌ ಮಟ್ಟಿಲೇರಿದೆ. ಹಂಗಾಮಿ ಮುಖ್ಯ ನ್ಯಾಯಮೂರ್ತಿ ಮನೋಜ್ ಕುಮಾರ್ ತಿವಾರಿ ಮತ್ತು ನ್ಯಾಯಮೂರ್ತಿ ರಾಕೇಶ್ ಥಪ್ಲಿಯಾಲ್ ಅವರಿದ್ದ ವಿಭಾಗೀಯ ಪೀಠವು ಪ್ರಕರಣಕ್ಕೆ ಸಂಬಂಧಿಸಿದ ಅರ್ಜಿಯ ವಿಚಾರಣೆಯನ್ನು ಶುಕ್ರವಾರ ನಡೆಸಿದೆ. ಉತ್ತರಾಖಂಡ

ವಿಚಾರಣೆಯ ನಂತರ ನ್ಯಾಯಾಲಯವು ರಾಜ್ಯ ಸರ್ಕಾರ ಮತ್ತು ಪೊಲೀಸ್ ಮಹಾನಿರ್ದೇಶಕರಿಗೆ ನಿರ್ದೇಶನಗಳನ್ನು ನೀಡಿದ್ದು, ಪ್ರದೇಶದಲ್ಲಿ ಶಾಂತಿ ಮತ್ತು ಭದ್ರತೆಯನ್ನು ಕಾಪಾಡುವ ಅಗತ್ಯವನ್ನು ಒತ್ತಿಹೇಳಿದೆ. ಉತ್ತರಾಖಂಡ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
ಇಲ್ಲಿಕ್ಲಿಕ್ ಮಾಡಿ

ಶುಕ್ರವಾರ ಹೈಕೋರ್ಟ್‌ನ ವಿಭಾಗೀಯ ಪೀಠದ ಮುಂದೆ ನಡೆದ ವಿಚಾರಣೆಯಲ್ಲಿ, ಅರ್ಜಿದಾರರನ್ನು ಪ್ರತಿನಿಧಿಸುವ ಹಿರಿಯ ವಕೀಲರಾದ ಡಾ. ಕಾರ್ತಿಕೇ ಹರಿ ಗುಪ್ತಾ, ಇಮ್ರಾನ್ ಅಲಿ ಖಾನ್, ಪಲ್ಲವಿ ಬಹುಗುಣ, ರಫತ್ ಮುನೀರ್ ಅಲಿ ಮತ್ತು ಇರುಮ್ ಝೆಬಾ ಅವರು ಮುಸ್ಲಿಮರನ್ನು ಉದ್ದೇಶಿಸಿ ನಡೆಸಲಾಗುತ್ತಿರುವ ದ್ವೇಷ ಭಾಷಣದ ಬಗ್ಗೆ ಗಂಭೀರ ಕಳವಳ ವ್ಯಕ್ತಪಡಿಸಿದ್ದಾರೆ.

“ಸಂಯುಕ್ತ ಸನಾತನ ಧರಮ್ ರಕ್ಷಾ ಸಂಘದ ಸದಸ್ಯರು ಮತ್ತು ಅವರ ಸಹಚರರು ಮುಸ್ಲಿಮರು ಮತ್ತು ಮಸೀದಿಯ ವಿರುದ್ಧ ತೀವ್ರವಾದ ದ್ವೇಷದ ಭಾಷಣದಲ್ಲಿ ತೊಡಗಿದ್ದಾರೆ” ಎಂದು ಅವರು ವಾದಿಸಿದ್ದಾರೆ. ಇಂತಹ ಕ್ರಮಗಳು ಭಾರತದ ಗೌರವಾನ್ವಿತ ಸುಪ್ರೀಂ ಕೋರ್ಟ್ ನೀಡಿದ ನಿರ್ದೇಶನಗಳನ್ನು ಉಲ್ಲಂಘಿಸುತ್ತವೆ ಎಂದು ಒತ್ತಿ ಹೇಳಿದ್ದಾರೆ.

‘ಉತ್ತರಕಾಶಿಯ ಭಟ್ವಾರಿ ರಸ್ತೆಯಲ್ಲಿರುವ ಜಾಮಾ ಮಸೀದಿಯನ್ನು 1969ರಲ್ಲಿ ಖಾಸಗಿಯಾಗಿ ಖರೀದಿಸಿದ ಜಮೀನಿನಲ್ಲಿ ನಿರ್ಮಿಸಲಾಗಿದೆ’ ಎಂದು ಪ್ರತಿಪಾದಿಸಿ ‘ಅಲ್ಪಸಂಖಾಯಕ್ ಸೇವಾ ಸಮಿತಿ’ ರಿಟ್ ಅರ್ಜಿ ಸಲ್ಲಿಸಿದೆ. 1986 ರಲ್ಲಿ ಉತ್ತರ ಪ್ರದೇಶದ ಸಹಾಯಕ ವಕ್ಫ್ ಕಮಿಷನರ್ ವಿಚಾರಣೆ ನಡೆಸಿ ಮುಸ್ಲಿಂ ಸಮುದಾಯದ ಸದಸ್ಯರು ಧರ್ಮಾರ್ಥ ನಿಧಿಯನ್ನು ಬಳಸಿ ನಿರ್ಮಿಸಿದ ಖಾಸ್ರಾ ನಂ. 2223 ರಲ್ಲಿ ಮಸೀದಿ ಅಸ್ತಿತ್ವದಲ್ಲಿದೆ ಎಂದು ದೃಢಪಡಿಸಿದರು ಎಂದು ಅರ್ಜಿಯಲ್ಲಿ ತಿಳಿಸಲಾಗಿದೆ.

ಹೆಚ್ಚುವರಿಯಾಗಿ, ವಕ್ಫ್ ಆಯುಕ್ತರ ವರದಿಯು “ಮಸೀದಿಯನ್ನು ಸುನ್ನಿ ಸಮುದಾಯವು ಸಕ್ರಿಯವಾಗಿ ಬಳಸುತ್ತದೆ” ಎಂದು ಪ್ರಮಾಣೀಕರಿಸಿದೆ ಅರ್ಜಿದಾರರು ಕೋರ್ಟ್‌ಗೆ ತಿಳಿಸಿದ್ದಾರೆ.

“1987 ರಲ್ಲಿ, ಭಟ್ವಾರಿ ರಸ್ತೆಯಲ್ಲಿರುವ ಜಾಮಾ ಮಸೀದಿಯನ್ನು ಅಧಿಕೃತವಾಗಿ ವಕ್ಫ್ ಆಸ್ತಿಯಾಗಿ ನೋಂದಾಯಿಸಲಾಯಿತು. ಆದರೆ, ಸೆಪ್ಟೆಂಬರ್ 2024 ರಲ್ಲಿ, ಬಿಜೆಪಿ ಬೆಂಬಲಿತ ಸಂಘಟನೆಯ ನಾಯಕರಾದ ಜಿತೇಂದ್ರ ಸಿಂಗ್ ಚೌಹಾಣ್, ಸ್ವಾಮಿ ದರ್ಶನ್ ಭಾರತಿ, ಸೋನು ಸಿಂಗ್ ನೇಗಿ, ಲಖ್ಪತ್ ಸಿಂಗ್ ಭಂಡಾರಿ ಮತ್ತು ಅನುಜ್ ವಾಲಿಯಾ ಸೇರಿದಂತೆ ಸಂಯುಕ್ತ ಸನಾತನ ಧರ್ಮ ರಕ್ಷಾ ಸಂಘದ ಸದಸ್ಯರು ಮತ್ತು ವಿಶ್ವ ಹಿಂದೂ ಪರಿಷತ್, ಮಸೀದಿ ಕೆಡವುವುದಾಗಿ ಬೆದರಿಕೆ ಹಾಕಲು ಆರಂಭಿಸಿತು” ಎಂದು ಅರ್ಜಿದಾದರರು ಕೋರ್ಟ್‌ಗೆ ಹೇಳಿದ್ದಾರೆ.

ಈ ನಾಯಕರು ಮಸೀದಿಯ ಕಾನೂನುಬದ್ಧತೆಯ ಬಗ್ಗೆ ಸುಳ್ಳು ಮಾಹಿತಿಯನ್ನು ಹರಡಿದ್ದಾರೆ ಮತ್ತು ಮುಸ್ಲಿಂ ಸಮುದಾಯದ ವಿರುದ್ಧ ದ್ವೇಷದ ಭಾಷಣದಲ್ಲಿ ತೊಡಗಿದ್ದಾರೆ ಎಂದು ಅರ್ಜಿದಾರರು ಆರೋಪಿಸಿದ್ದಾರೆ.

ವರುಣಾವತ್ ಪರ್ವತದ ಬುಡದಲ್ಲಿರುವ ಮಸೀದಿಯನ್ನು ಕೆಡವಲು ಒತ್ತಾಯಿಸುತ್ತಿರುವ ಸಂಯುಕ್ತ ಸನಾತನ ಧರ್ಮ ರಕ್ಷಣಾ ಸಂಘದ ನೇತೃತ್ವದಲ್ಲಿ ವ್ಯಾಪಕ ಅಭಿಯಾನ ನಡೆಸಲಾಗುತ್ತಿದೆ. ಆರೆಸ್ಸೆಸ್‌ನ ವಿಶ್ವ ಹಿಂದೂ ಪರಿಷತ್ (ವಿಎಚ್‌ಪಿ) ಸಹ ಡಿಸೆಂಬರ್ 1 ರಂದು ತಮ್ಮ ಹೋರಾಟಕ್ಕೆ ಬೆಂಬಲವಾಗಿ ಮಹಾಪಂಚಾಯತ್ ನಡೆಸುವ ಯೋಜನೆಯನ್ನು ಪ್ರಕಟಿಸಿದೆ.

ಬಿಜೆಪಿ ಪರ ಸಂಘಟನೆಗಳು ಕೃತ್ಯಗಳ ಕಾರಣಕ್ಕೆ ಪ್ರದೇಶದಲ್ಲಿ ಈಗಾಗಲೇ ಹಿಂಸಾಚಾರ ನಡೆದಿದ್ದು, ಅಕ್ಟೋಬರ್ 24 ರಂದು, ಉದ್ವಿಗ್ನತೆ ಭುಗಿಲೆದ್ದಿತ್ತು. ಈ ವೇಳೆ ಕಲ್ಲು ತೂರಾಟ ನಡೆಸಲಾಗಿದ್ದು, ಪೋಲೀಸರು ಲಾಠಿ ಚಾರ್ಜ್‌ ಮಾಡಿದ್ದರು. ಘಟನೆಯಲ್ಲಿ ಒಂಬತ್ತು ಪೊಲೀಸ್ ಅಧಿಕಾರಿಗಳು ಸೇರಿದಂತೆ 27 ಜನರು ಗಾಯಗೊಂಡಿದ್ದಾರೆ. ಘಟನೆಗೆ ಪ್ರತಿಕ್ರಿಯೆಯಾಗಿ, ಪೊಲೀಸರು 200 ಅಪರಿಚಿತ ವ್ಯಕ್ತಿಗಳ ವಿರುದ್ಧ ಎಫ್ಐಆರ್ ದಾಖಲಿಸಿದ್ದು, ಎಂಟು ಶಂಕಿತರನ್ನು ಹೆಸರಿಸಿದ್ದಾರೆ. ಮೂವರು ಪ್ರಮುಖ ಸಂಘಟಕರನ್ನು ಬಂಧಿಸಲಾಗಿದ್ದರೂ, ಅವರು ನಂತರ ಜಿಲ್ಲಾ ನ್ಯಾಯಾಧೀಶರ ನ್ಯಾಯಾಲಯದಿಂದ ಜಾಮೀನು ಪಡೆದಿದ್ದಾರೆ.

ಇದನ್ನೂ ಓದಿ: ಲೂಟಿಯಾದ ಶಸ್ತ್ರಾಸ್ತ್ರಗಳನ್ನು ಹಿಂಪಡೆಯುವಂತೆ ಕುಕಿ ಶಾಸಕರ ಒತ್ತಾಯ; ಮಣಿಪುರದಾದ್ಯಂತ ‘ಎಎಫ್‌ಎಸ್‌ಪಿಎ’ ವಿಸ್ತರಣೆಗೆ ಆಗ್ರಹ

ಲೂಟಿಯಾದ ಶಸ್ತ್ರಾಸ್ತ್ರಗಳನ್ನು ಹಿಂಪಡೆಯುವಂತೆ ಕುಕಿ ಶಾಸಕರ ಒತ್ತಾಯ; ಮಣಿಪುರದಾದ್ಯಂತ ‘ಎಎಫ್‌ಎಸ್‌ಪಿಎ’ ವಿಸ್ತರಣೆಗೆ ಆಗ್ರಹ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪಶ್ಚಿಮ ಏಷ್ಯಾ ಸಂಘರ್ಷ: ಇರಾನ್ ಭದ್ರತಾ ಮುಖ್ಯಸ್ಥ ಅಲಿ ಲಾರಿಜಾನಿ ಹತ್ಯೆ ಮಾಡಿರುವುದಾಗಿ ಹೇಳಿಕೊಂಡ ಇಸ್ರೇಲ್ 

ಇರಾನ್‌ನ ಭದ್ರತಾ ಮುಖ್ಯಸ್ಥ ಅಲಿ ಲಾರಿಜಾನಿ ವೈಮಾನಿಕ ದಾಳಿಯಲ್ಲಿ ಸಾವನ್ನಪ್ಪಿದ್ದಾರೆ ಎಂದು ಇಸ್ರೇಲ್ ರಕ್ಷಣಾ ಸಚಿವ ಕಾಟ್ಜ್ ಮಂಗಳವಾರ ಹೇಳಿದ್ದಾರೆ. ಆದರೆ ಟೆಹ್ರಾನ್‌ನಿಂದ ಯಾವುದೇ ಅಧಿಕೃತ ದೃಢೀಕರಣವಿಲ್ಲ. ಕಾಟ್ಜ್ ಪ್ರಕಾರ, ಜನರಲ್ ಘೋಲಮ್...

ನಾಲ್ಕು ತಿಂಗಳಲ್ಲೇ ಗರಿಷ್ಠ ಮಟ್ಟಕ್ಕೆ ತಲುಪಿದ ಯುವಜನರ ನಿರುದ್ಯೋಗ ಪ್ರಮಾಣ

15–29 ವರ್ಷ ವಯಸ್ಸಿನ ಯುವಕರಲ್ಲಿ ನಿರುದ್ಯೋಗ ದರವು ಫೆಬ್ರವರಿಯಲ್ಲಿ ನಾಲ್ಕು ತಿಂಗಳಲ್ಲೇ ಗರಿಷ್ಠ ಶೇ. 14.8 ಕ್ಕೆ ಏರಿದೆ. ಇದು ಜನವರಿಯಲ್ಲಿ ಶೇ. 14.7 ರಷ್ಟು ಹೆಚ್ಚಾಗಿ, ಯುವಜನರಲ್ಲಿ ನಿರುದ್ಯೋಗ ಹೆಚ್ಚಳ ಉಂಟಾಗಿದೆ...

ಆರ್‌ಎಸ್‌ಎಸ್‌ ನಿಷೇಧಕ್ಕೆ ಒತ್ತಾಯಿಸಿದ ಅಮೆರಿಕದ ಧಾರ್ಮಿಕ ಸ್ವಾತಂತ್ರ್ಯ ಸಮಿತಿ; ಕಾಂಗ್ರೆಸ್ ಪ್ರತಿಕ್ರಿಯೆ

ಭಾರತದಲ್ಲಿ ಧಾರ್ಮಿಕ ಸ್ವಾತಂತ್ರ್ಯದ ಉಲ್ಲಂಘನೆಯಾಗಿದೆ ಎಂದು ಆರೋಪಿಸಿರುವ ಅಂತರರಾಷ್ಟ್ರೀಯ ಧಾರ್ಮಿಕ ಸ್ವಾತಂತ್ರ್ಯದ ಯುನೈಟೆಡ್ ಸ್ಟೇಟ್ಸ್ ಆಯೋಗವು, ರಾಷ್ಟ್ರೀಯ ಸ್ವಯಂ ಸೇವಕ ಸಂಘ (ಆರೆಸ್ಸೆಸ್) ಮತ್ತು ಭಾರತದ ಬಾಹ್ಯ ಗುಪ್ತಚರ ಸಂಸ್ಥೆಯಾದ ಸಂಶೋಧನೆ, ವಿಶ್ಲೇಷಣಾ...

ಕಾಂಗ್ರೆಸ್ ವಿರುದ್ಧದ ‘ಟರ್ಕಿ ಕಚೇರಿ’ ಹೇಳಿಕೆ: ಅರ್ನಾಬ್ ಗೋಸ್ವಾಮಿಗೆ ₹2 ಕೋಟಿ ಮಾನನಷ್ಟ ಮೊಕದ್ದಮೆ ಹೂಡಲು ಸಮನ್ಸ್ ಜಾರಿ ಮಾಡಿದ ದೆಹಲಿ ಹೈಕೋರ್ಟ್

ಕಾಂಗ್ರೆಸ್ ವಿರುದ್ಧದ "ಟರ್ಕಿ ಕಚೇರಿ" ಆರೋಪಕ್ಕೆ ಸಂಬಂಧಿಸಿದಂತೆ ಅರ್ನಾಬ್ ಗೋಸ್ವಾಮಿಗೆ ₹2 ಕೋಟಿ ಮಾನನಷ್ಟ ಮೊಕದ್ದಮೆ ಹೂಡಲು ದೆಹಲಿ ಹೈಕೋರ್ಟ್ ಸಮನ್ಸ್ ಜಾರಿ ಮಾಡಿದೆ. ಟರ್ಕಿಯಲ್ಲಿ ಭಾರತೀಯ ರಾಷ್ಟ್ರೀಯ ಕಾಂಗ್ರೆಸ್ ಅಂತರರಾಷ್ಟ್ರೀಯ ಕಚೇರಿಯನ್ನು ನಡೆಸುತ್ತಿದೆ...

ಚುನಾವಣಾ ಆಯೋಗ ಬಿಜೆಪಿ ಆಜ್ಞೆಯ ಮೇರೆಗೆ ಕೆಲಸ ಮಾಡುತ್ತಿದೆ: ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ

ವಿಧಾನಸಭಾ ಚುನಾವಣೆಗೂ ಮುನ್ನ, ಭಾರತದ ಚುನಾವಣಾ ಆಯೋಗ (ಇಸಿಐ) ಪ್ರಸ್ತುತ ಡಿಜಿಪಿ, ಕೋಲ್ಕತ್ತಾ ಪೊಲೀಸ್ ಆಯುಕ್ತರು, ಮುಖ್ಯ ಮತ್ತು ಗೃಹ ಕಾರ್ಯದರ್ಶಿಗಳನ್ನು ಬದಲಿಸುವ ಮೂಲಕ ಪ್ರಮುಖ ಪುನರ್ರಚನೆಯನ್ನು ಮಾಡಿದೆ. ಪಶ್ಚಿಮ ಬಂಗಾಳದ ಹೊಸ ಡಿಜಿ...

‘ಶಾಂತಿಗೆ ಇದು ಸಮಯವಲ್ಲ’: ‘ಕದನ ವಿರಾಮ’ ಪ್ರಸ್ತಾಪಗಳನ್ನು ತಿರಸ್ಕರಿಸಿದ ಇರಾನ್ ಸರ್ವೋಚ್ಚ ನಾಯಕ ಮೊಜ್ತಾಬಾ ಖಮೇನಿ 

ಇರಾನ್‌ನ ನೂತನ ಸರ್ವೋಚ್ಚ ನಾಯಕ ಅಯತೊಲ್ಲಾ ಮೊಜ್ತಬಾ ಖಮೇನಿ ಅವರು ಉದ್ವಿಗ್ನತೆಯನ್ನು ಕಡಿಮೆ ಮಾಡುವ ಅಥವಾ ಎರಡು ಮಧ್ಯವರ್ತಿ ರಾಷ್ಟ್ರಗಳು ಟೆಹ್ರಾನ್‌ಗೆ ತಲುಪಿಸಿದ ಯುನೈಟೆಡ್ ಸ್ಟೇಟ್ಸ್‌ನೊಂದಿಗೆ ಕದನ ವಿರಾಮದ ಪ್ರಸ್ತಾಪಗಳನ್ನು ತಿರಸ್ಕರಿಸಿದರು ಎಂದು...

ಲೋಕಸಭೆ | 8 ವಿಪಕ್ಷ ಸಂಸದರ ಅಮಾನತು ರದ್ದು

ಲೋಕಸಭೆಯ ಎಂಟು ವಿಪಕ್ಷ ಸಂಸದರ ಅಮಾನತನ್ನು ತಕ್ಷಣಕ್ಕೆ ಜಾರಿಗೆ ಬರುವಂತೆ ಸ್ಪೀಕರ್ ಓಂ ಬಿರ್ಲಾ ಮಂಗಳವಾರ (ಮಾ.17) ವಾಪಸ್ ಪಡೆದಿದ್ದಾರೆ. ಅಶಿಸ್ತಿನ ಕಾರಣ ನೀಡಿ ಫೆಬ್ರವರಿ 8ರಂದು ಸಂಸದರನ್ನು ಅಮಾನತು ಮಾಡಲಾಗಿತ್ತು. ಅಮಾನತು...

ಪಿತೃತ್ವ ರಜೆಗೆ ಕಾನೂನು ತನ್ನಿ : ಕೇಂದ್ರಕ್ಕೆ ಸುಪ್ರೀಂ ಕೋರ್ಟ್ ಸೂಚನೆ

ಪಿತೃತ್ವ ರಜೆಯನ್ನು (paternity leave) ಸಾಮಾಜಿಕ ಭದ್ರತಾ ಸೌಲಭ್ಯವೆಂದು ಪರಿಗಣಿಸಿ ಕಾನೂನು ರೂಪಿಸುವಂತೆ ಸುಪ್ರೀಂ ಕೋರ್ಟ್ ಮಂಗಳವಾರ (ಮಾ.17) ಕೇಂದ್ರ ಸರ್ಕಾರಕ್ಕೆ ಸೂಚಿಸಿದೆ. ಈ ರಜೆಯ ಅವಧಿಯು ಪೋಷಕರು ಮತ್ತು ಮಗು ಇಬ್ಬರ...

‘ಕಾಲ ಎಲ್ಲಕ್ಕೂ ಉತ್ತರಿಸುತ್ತದೆ’; ಟಿವಿಕೆ ನಾಯಕನ ‘ಡಿಎಂಕೆ ಬೆದರಿಕೆ’ ಆರೋಪ ‘ಸತ್ಯಕ್ಕೆ ದೂರವಾದ ಮಾತು’ ಎಂದ ರಜನಿಕಾಂತ್

ರಾಜಕೀಯ ಪ್ರವೇಶಕ್ಕೆ ಯತ್ನಿಸಿದಾಗ ಡಿಎಂಕೆಯಿಂದ ಬೆದರಿಕೆ ಇತ್ತು ಎಂಬ ಟಿವಿಕೆ ನಾಯಕ ಆಧವ್ ಅರ್ಜುನ ಅವರ ಆರೋಪವನ್ನು ಸೂಪರ್‌ಸ್ಟಾರ್ ರಜನಿಕಾಂತ್ ಮಂಗಳವಾರ ನಿರಾಕರಿಸಿದ್ದಾರೆ ಮತ್ತು "ಕಾಲವೇ ಉತ್ತರ ನೀಡುತ್ತದೆ" ಎಂದು ಹೇಳಿದ್ದಾರೆ. ತಮ್ಮ ಅಧಿಕೃತ...

ಕಾಂಗ್ರೆಸ್‌ ಮಾನನಷ್ಟ ಪ್ರಕರಣ : ಅರ್ನಾಬ್ ಗೋಸ್ವಾಮಿ, ರಿಪಬ್ಲಿಕ್ ಟಿವಿಗೆ ದೆಹಲಿ ಹೈಕೋರ್ಟ್ ಸಮನ್ಸ್

ಟರ್ಕಿ ದೇಶದಲ್ಲಿ ಕಾಂಗ್ರೆಸ್‌ ಪಕ್ಷವು ಅಂತಾರಾಷ್ಟ್ರೀಯ ಕಚೇರಿ ಹೊಂದಿದೆ ಎಂಬ ವರದಿಗೆ ಸಂಬಂಧಿಸಿದಂತೆ, ಅರ್ನಾಬ್ ಗೋಸ್ವಾಮಿ ಮತ್ತು ರಿಪಬ್ಲಿಕ್ ಟಿವಿ ವಿರುದ್ಧ ಕಾಂಗ್ರೆಸ್ ಹೂಡಿರುವ ಮಾನನಷ್ಟ ಮೊಕದ್ದಮೆಯಲ್ಲಿ ದೆಹಲಿ ಹೈಕೋರ್ಟ್ ಮಂಗಳವಾರ (ಮಾ.17)...