Homeಮುಖಪುಟಉತ್ತರಾಖಂಡ | 55 ವರ್ಷ ಹಳೆಯ ಮಸೀದಿಯನ್ನು ಕೆಡವಲು ಬಿಜೆಪಿ ಪರ ಸಂಘಟನೆಗಳ ಬೇಡಿಕೆ; ಹೈಕೋರ್ಟ್...

ಉತ್ತರಾಖಂಡ | 55 ವರ್ಷ ಹಳೆಯ ಮಸೀದಿಯನ್ನು ಕೆಡವಲು ಬಿಜೆಪಿ ಪರ ಸಂಘಟನೆಗಳ ಬೇಡಿಕೆ; ಹೈಕೋರ್ಟ್ ಮಟ್ಟಿಲೇರಿದ ವಿವಾದ

- Advertisement -
- Advertisement -

ಉತ್ತರಾಖಂಡದ ಉತ್ತರಕಾಶಿ ಜಿಲ್ಲೆಯಲ್ಲಿ 55 ವರ್ಷಗಳಷ್ಟು ಹಳೆಯದಾದ ಮಸೀದಿಯನ್ನು ಕೆಡವುವಂತೆ ಆಗ್ರಹಿಸಿ ಬಿಜೆಪಿ ಪರ ಸಂಘಟನೆಗಳು ನಡೆಸುತ್ತಿರುವ ಕೃತ್ಯದಿಂದ ಬೇಸತ್ತು ಮಸೀದಿಯ ಮಂಡಳಿಯು ನೈನಿತಾಲ್ ಹೈಕೋರ್ಟ್‌ ಮಟ್ಟಿಲೇರಿದೆ. ಹಂಗಾಮಿ ಮುಖ್ಯ ನ್ಯಾಯಮೂರ್ತಿ ಮನೋಜ್ ಕುಮಾರ್ ತಿವಾರಿ ಮತ್ತು ನ್ಯಾಯಮೂರ್ತಿ ರಾಕೇಶ್ ಥಪ್ಲಿಯಾಲ್ ಅವರಿದ್ದ ವಿಭಾಗೀಯ ಪೀಠವು ಪ್ರಕರಣಕ್ಕೆ ಸಂಬಂಧಿಸಿದ ಅರ್ಜಿಯ ವಿಚಾರಣೆಯನ್ನು ಶುಕ್ರವಾರ ನಡೆಸಿದೆ. ಉತ್ತರಾಖಂಡ

ವಿಚಾರಣೆಯ ನಂತರ ನ್ಯಾಯಾಲಯವು ರಾಜ್ಯ ಸರ್ಕಾರ ಮತ್ತು ಪೊಲೀಸ್ ಮಹಾನಿರ್ದೇಶಕರಿಗೆ ನಿರ್ದೇಶನಗಳನ್ನು ನೀಡಿದ್ದು, ಪ್ರದೇಶದಲ್ಲಿ ಶಾಂತಿ ಮತ್ತು ಭದ್ರತೆಯನ್ನು ಕಾಪಾಡುವ ಅಗತ್ಯವನ್ನು ಒತ್ತಿಹೇಳಿದೆ. ಉತ್ತರಾಖಂಡ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
ಇಲ್ಲಿಕ್ಲಿಕ್ ಮಾಡಿ

ಶುಕ್ರವಾರ ಹೈಕೋರ್ಟ್‌ನ ವಿಭಾಗೀಯ ಪೀಠದ ಮುಂದೆ ನಡೆದ ವಿಚಾರಣೆಯಲ್ಲಿ, ಅರ್ಜಿದಾರರನ್ನು ಪ್ರತಿನಿಧಿಸುವ ಹಿರಿಯ ವಕೀಲರಾದ ಡಾ. ಕಾರ್ತಿಕೇ ಹರಿ ಗುಪ್ತಾ, ಇಮ್ರಾನ್ ಅಲಿ ಖಾನ್, ಪಲ್ಲವಿ ಬಹುಗುಣ, ರಫತ್ ಮುನೀರ್ ಅಲಿ ಮತ್ತು ಇರುಮ್ ಝೆಬಾ ಅವರು ಮುಸ್ಲಿಮರನ್ನು ಉದ್ದೇಶಿಸಿ ನಡೆಸಲಾಗುತ್ತಿರುವ ದ್ವೇಷ ಭಾಷಣದ ಬಗ್ಗೆ ಗಂಭೀರ ಕಳವಳ ವ್ಯಕ್ತಪಡಿಸಿದ್ದಾರೆ.

“ಸಂಯುಕ್ತ ಸನಾತನ ಧರಮ್ ರಕ್ಷಾ ಸಂಘದ ಸದಸ್ಯರು ಮತ್ತು ಅವರ ಸಹಚರರು ಮುಸ್ಲಿಮರು ಮತ್ತು ಮಸೀದಿಯ ವಿರುದ್ಧ ತೀವ್ರವಾದ ದ್ವೇಷದ ಭಾಷಣದಲ್ಲಿ ತೊಡಗಿದ್ದಾರೆ” ಎಂದು ಅವರು ವಾದಿಸಿದ್ದಾರೆ. ಇಂತಹ ಕ್ರಮಗಳು ಭಾರತದ ಗೌರವಾನ್ವಿತ ಸುಪ್ರೀಂ ಕೋರ್ಟ್ ನೀಡಿದ ನಿರ್ದೇಶನಗಳನ್ನು ಉಲ್ಲಂಘಿಸುತ್ತವೆ ಎಂದು ಒತ್ತಿ ಹೇಳಿದ್ದಾರೆ.

‘ಉತ್ತರಕಾಶಿಯ ಭಟ್ವಾರಿ ರಸ್ತೆಯಲ್ಲಿರುವ ಜಾಮಾ ಮಸೀದಿಯನ್ನು 1969ರಲ್ಲಿ ಖಾಸಗಿಯಾಗಿ ಖರೀದಿಸಿದ ಜಮೀನಿನಲ್ಲಿ ನಿರ್ಮಿಸಲಾಗಿದೆ’ ಎಂದು ಪ್ರತಿಪಾದಿಸಿ ‘ಅಲ್ಪಸಂಖಾಯಕ್ ಸೇವಾ ಸಮಿತಿ’ ರಿಟ್ ಅರ್ಜಿ ಸಲ್ಲಿಸಿದೆ. 1986 ರಲ್ಲಿ ಉತ್ತರ ಪ್ರದೇಶದ ಸಹಾಯಕ ವಕ್ಫ್ ಕಮಿಷನರ್ ವಿಚಾರಣೆ ನಡೆಸಿ ಮುಸ್ಲಿಂ ಸಮುದಾಯದ ಸದಸ್ಯರು ಧರ್ಮಾರ್ಥ ನಿಧಿಯನ್ನು ಬಳಸಿ ನಿರ್ಮಿಸಿದ ಖಾಸ್ರಾ ನಂ. 2223 ರಲ್ಲಿ ಮಸೀದಿ ಅಸ್ತಿತ್ವದಲ್ಲಿದೆ ಎಂದು ದೃಢಪಡಿಸಿದರು ಎಂದು ಅರ್ಜಿಯಲ್ಲಿ ತಿಳಿಸಲಾಗಿದೆ.

ಹೆಚ್ಚುವರಿಯಾಗಿ, ವಕ್ಫ್ ಆಯುಕ್ತರ ವರದಿಯು “ಮಸೀದಿಯನ್ನು ಸುನ್ನಿ ಸಮುದಾಯವು ಸಕ್ರಿಯವಾಗಿ ಬಳಸುತ್ತದೆ” ಎಂದು ಪ್ರಮಾಣೀಕರಿಸಿದೆ ಅರ್ಜಿದಾರರು ಕೋರ್ಟ್‌ಗೆ ತಿಳಿಸಿದ್ದಾರೆ.

“1987 ರಲ್ಲಿ, ಭಟ್ವಾರಿ ರಸ್ತೆಯಲ್ಲಿರುವ ಜಾಮಾ ಮಸೀದಿಯನ್ನು ಅಧಿಕೃತವಾಗಿ ವಕ್ಫ್ ಆಸ್ತಿಯಾಗಿ ನೋಂದಾಯಿಸಲಾಯಿತು. ಆದರೆ, ಸೆಪ್ಟೆಂಬರ್ 2024 ರಲ್ಲಿ, ಬಿಜೆಪಿ ಬೆಂಬಲಿತ ಸಂಘಟನೆಯ ನಾಯಕರಾದ ಜಿತೇಂದ್ರ ಸಿಂಗ್ ಚೌಹಾಣ್, ಸ್ವಾಮಿ ದರ್ಶನ್ ಭಾರತಿ, ಸೋನು ಸಿಂಗ್ ನೇಗಿ, ಲಖ್ಪತ್ ಸಿಂಗ್ ಭಂಡಾರಿ ಮತ್ತು ಅನುಜ್ ವಾಲಿಯಾ ಸೇರಿದಂತೆ ಸಂಯುಕ್ತ ಸನಾತನ ಧರ್ಮ ರಕ್ಷಾ ಸಂಘದ ಸದಸ್ಯರು ಮತ್ತು ವಿಶ್ವ ಹಿಂದೂ ಪರಿಷತ್, ಮಸೀದಿ ಕೆಡವುವುದಾಗಿ ಬೆದರಿಕೆ ಹಾಕಲು ಆರಂಭಿಸಿತು” ಎಂದು ಅರ್ಜಿದಾದರರು ಕೋರ್ಟ್‌ಗೆ ಹೇಳಿದ್ದಾರೆ.

ಈ ನಾಯಕರು ಮಸೀದಿಯ ಕಾನೂನುಬದ್ಧತೆಯ ಬಗ್ಗೆ ಸುಳ್ಳು ಮಾಹಿತಿಯನ್ನು ಹರಡಿದ್ದಾರೆ ಮತ್ತು ಮುಸ್ಲಿಂ ಸಮುದಾಯದ ವಿರುದ್ಧ ದ್ವೇಷದ ಭಾಷಣದಲ್ಲಿ ತೊಡಗಿದ್ದಾರೆ ಎಂದು ಅರ್ಜಿದಾರರು ಆರೋಪಿಸಿದ್ದಾರೆ.

ವರುಣಾವತ್ ಪರ್ವತದ ಬುಡದಲ್ಲಿರುವ ಮಸೀದಿಯನ್ನು ಕೆಡವಲು ಒತ್ತಾಯಿಸುತ್ತಿರುವ ಸಂಯುಕ್ತ ಸನಾತನ ಧರ್ಮ ರಕ್ಷಣಾ ಸಂಘದ ನೇತೃತ್ವದಲ್ಲಿ ವ್ಯಾಪಕ ಅಭಿಯಾನ ನಡೆಸಲಾಗುತ್ತಿದೆ. ಆರೆಸ್ಸೆಸ್‌ನ ವಿಶ್ವ ಹಿಂದೂ ಪರಿಷತ್ (ವಿಎಚ್‌ಪಿ) ಸಹ ಡಿಸೆಂಬರ್ 1 ರಂದು ತಮ್ಮ ಹೋರಾಟಕ್ಕೆ ಬೆಂಬಲವಾಗಿ ಮಹಾಪಂಚಾಯತ್ ನಡೆಸುವ ಯೋಜನೆಯನ್ನು ಪ್ರಕಟಿಸಿದೆ.

ಬಿಜೆಪಿ ಪರ ಸಂಘಟನೆಗಳು ಕೃತ್ಯಗಳ ಕಾರಣಕ್ಕೆ ಪ್ರದೇಶದಲ್ಲಿ ಈಗಾಗಲೇ ಹಿಂಸಾಚಾರ ನಡೆದಿದ್ದು, ಅಕ್ಟೋಬರ್ 24 ರಂದು, ಉದ್ವಿಗ್ನತೆ ಭುಗಿಲೆದ್ದಿತ್ತು. ಈ ವೇಳೆ ಕಲ್ಲು ತೂರಾಟ ನಡೆಸಲಾಗಿದ್ದು, ಪೋಲೀಸರು ಲಾಠಿ ಚಾರ್ಜ್‌ ಮಾಡಿದ್ದರು. ಘಟನೆಯಲ್ಲಿ ಒಂಬತ್ತು ಪೊಲೀಸ್ ಅಧಿಕಾರಿಗಳು ಸೇರಿದಂತೆ 27 ಜನರು ಗಾಯಗೊಂಡಿದ್ದಾರೆ. ಘಟನೆಗೆ ಪ್ರತಿಕ್ರಿಯೆಯಾಗಿ, ಪೊಲೀಸರು 200 ಅಪರಿಚಿತ ವ್ಯಕ್ತಿಗಳ ವಿರುದ್ಧ ಎಫ್ಐಆರ್ ದಾಖಲಿಸಿದ್ದು, ಎಂಟು ಶಂಕಿತರನ್ನು ಹೆಸರಿಸಿದ್ದಾರೆ. ಮೂವರು ಪ್ರಮುಖ ಸಂಘಟಕರನ್ನು ಬಂಧಿಸಲಾಗಿದ್ದರೂ, ಅವರು ನಂತರ ಜಿಲ್ಲಾ ನ್ಯಾಯಾಧೀಶರ ನ್ಯಾಯಾಲಯದಿಂದ ಜಾಮೀನು ಪಡೆದಿದ್ದಾರೆ.

ಇದನ್ನೂ ಓದಿ: ಲೂಟಿಯಾದ ಶಸ್ತ್ರಾಸ್ತ್ರಗಳನ್ನು ಹಿಂಪಡೆಯುವಂತೆ ಕುಕಿ ಶಾಸಕರ ಒತ್ತಾಯ; ಮಣಿಪುರದಾದ್ಯಂತ ‘ಎಎಫ್‌ಎಸ್‌ಪಿಎ’ ವಿಸ್ತರಣೆಗೆ ಆಗ್ರಹ

ಲೂಟಿಯಾದ ಶಸ್ತ್ರಾಸ್ತ್ರಗಳನ್ನು ಹಿಂಪಡೆಯುವಂತೆ ಕುಕಿ ಶಾಸಕರ ಒತ್ತಾಯ; ಮಣಿಪುರದಾದ್ಯಂತ ‘ಎಎಫ್‌ಎಸ್‌ಪಿಎ’ ವಿಸ್ತರಣೆಗೆ ಆಗ್ರಹ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇಂದ್ರದ ವಿಬಿ-ಜಿ ರಾಮ್ ಜಿಗೆ ಟಕ್ಕರ್ : ಪ. ಬಂಗಾಳದ ‘ಕರ್ಮಶ್ರೀ’ ಯೋಜನೆಗೆ ಮಹಾತ್ಮ ಗಾಂಧಿ ಹೆಸರಿಡುವುದಾಗಿ ಘೋಷಿಸಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳ ಸರ್ಕಾರದ ಉದ್ಯೋಗ ಖಾತರಿ ಯೋಜನೆ 'ಕರ್ಮಶ್ರೀ'ಯನ್ನು ಮಹಾತ್ಮ ಗಾಂಧಿ ಹೆಸರಿನಲ್ಲಿ ಮರುನಾಮಕರಣ ಮಾಡುವುದಾಗಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಗುರುವಾರ (ಡಿಸೆಂಬರ್ 18) ಘೋಷಿಸಿದ್ದಾರೆ. ನರೇಗಾ ಯೋಜನೆಯಿಂದ ಮಹಾತ್ಮಾ ಗಾಂಧಿಯವರ ಹೆಸರನ್ನು ಕೈಬಿಟ್ಟಿರುವುದಕ್ಕೆ...

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ: ಶಾಸಕ ಕುಣಿಗಲ್ ರಂಗನಾಥ್ ವಿರುದ್ಧ ಕೆ.ಎನ್. ರಾಜಣ್ಣ ವಾಗ್ದಾಳಿ

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ ಮಾಡುವುದನ್ನು ಮಾಜಿ ಸಹಕಾರಿ ಸಚಿವ ಕೆ.ಎನ್. ರಾಜಣ್ಣ ಗುರುವಾರ ಬಲವಾಗಿ ಸಮರ್ಥಿಸಿಕೊಂಡಿದ್ದಾರೆ. ಆಡಳಿತ ಪಕ್ಷದೊಳಗಿನ ಸಾರ್ವಜನಿಕ ಭಿನ್ನಾಭಿಪ್ರಾಯದ ನಡುವೆಯೂ, "ಸಂಘಗಳಿಗೆ ವಿತರಿಸಲಾದ ನಿಧಿ ಠೇವಣಿದಾರರ ಹಣ,...

ತನ್ನದೇ ಶಾಸಕರ ಅನರ್ಹತೆ ಕೋರಿ ಬಿಆರ್‌ಎಸ್‌ ಅರ್ಜಿ : ತಿರಸ್ಕರಿಸಿದ ತೆಲಂಗಾಣ ಸ್ಪೀಕರ್

ಆಡಳಿತಾರೂಢ ಕಾಂಗ್ರೆಸ್‌ಗೆ ನಿಷ್ಠೆ ಬದಲಾಯಿಸಿದ್ದಾರೆಂದು ಹೇಳಲಾದ ಹತ್ತು ಬಿಆರ್‌ಎಸ್ ಶಾಸಕರನ್ನು ಅನರ್ಹಗೊಳಿಸುವಂತೆ ಕೋರಿದ್ದ ಅರ್ಜಿಗಳ ಪೈಕಿ ಐದು ಅರ್ಜಿಗಳನ್ನು ತೆಲಂಗಾಣ ವಿಧಾನಸಭೆಯ ಸ್ಪೀಕರ್ ಗದ್ದಂ ಪ್ರಸಾದ್ ಕುಮಾರ್ ಬುಧವಾರ (ಡಿಸೆಂಬರ್ 18) ತಿರಸ್ಕರಿಸಿದ್ದಾರೆ....

ಸಾಮಾಜಿಕ ಬಹಿಷ್ಕಾರ, ದ್ವೇಷ ಭಾಷಣ ತಡೆ ವಿಧೇಯಕಗಳು ವಿಧಾನಸಭೆಯಲ್ಲಿ ಅಂಗೀಕಾರ

ಕರ್ನಾಟಕ ಸಾಮಾಜಿಕ ಬಹಿಷ್ಕಾರ (ಪ್ರತಿಬಂಧ, ನಿಷೇಧ ಮತ್ತು ಪರಿಹಾರ) ವಿಧೇಯಕ-2025 ಗುರುವಾರ (ಡಿ.18) ವಿಧಾನಸಭೆಯಲ್ಲಿ ಸರ್ವಾನುಮತದ ಅಂಗೀಕಾರಗೊಂಡಿತು. ಬೆಳಗಾವಿ ಸುವರ್ಣ ಸೌಧದಲ್ಲಿ ನಡೆಯುತ್ತಿರುವ ಚಳಿಗಾಲದ ವಿಧಾನಮಂಡಲ ಅಧಿವೇಶನದ ವಿಧಾನಸಭೆ ಕಲಾಪದಲ್ಲಿ ಸಮಾಜ ಕಲ್ಯಾಣ ಇಲಾಖೆ...

ಆಕ್ರಮಿತ ಪೂರ್ವ ಜೆರುಸಲೆಮ್ ವಸಾಹತು ಪ್ರದೇಶದಲ್ಲಿ 9000 ವಸತಿ ಘಟಕಗಳ ಯೋಜನೆ ಮುಂದಿಟ್ಟ ಇಸ್ರೇಲ್ 

ಆಕ್ರಮಿತ ಪೂರ್ವ ಜೆರುಸಲೆಮ್‌ನಲ್ಲಿರುವ ಕೈಬಿಟ್ಟ ಖಲಾಂಡಿಯಾ ವಿಮಾನ ನಿಲ್ದಾಣದ ಸ್ಥಳ ಬಳಿ ಅಕ್ರಮ ವಸಾಹತು ಪ್ರದೇಶದಲ್ಲಿ ಸುಮಾರು 9,000 ಹೊಸ ವಸತಿ ಘಟಕಗಳನ್ನು ನಿರ್ಮಿಸಲು ಇಸ್ರೇಲಿ ಆಕ್ರಮಿತ ಅಧಿಕಾರಿಗಳು ಯೋಜನೆಗಳನ್ನು ರೂಪಿಸಲು ಸಜ್ಜಾಗಿದ್ದಾರೆ....

ವಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಲೋಕಸಭೆಯಲ್ಲಿ ‘ವಿಬಿ-ಜಿ ರಾಮ್ ಜಿ ಮಸೂದೆ’ ಅಂಗೀಕಾರ

ಪ್ರತಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಗುರುವಾರ (ಡಿ.18) ಲೋಕಸಭೆಯಲ್ಲಿ 'ವಿಕ್ಷಿತ್ ಭಾರತ್ ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ್ ) (ವಿಬಿ-ಜಿ ರಾಮ್ ಜಿ) ಮಸೂದೆ ಅಂಗೀಕಾರಗೊಂಡಿತು. ಈ ಮಸೂದೆ 2005ರಲ್ಲಿ...

ರಾಹುಲ್ ಗಾಂಧಿ ಆಪ್ತ ಸಹಾಯಕನ ಪತ್ನಿ ಪ್ರಜ್ಞಾ ಸತವ್ ಕಾಂಗ್ರೆಸ್ ಎಂಎಲ್‌ಸಿ ಸ್ಥಾನಕ್ಕೆ ರಾಜೀನಾಮೆ; ಬಿಜೆಪಿ ಸೇರುವ ನಿರೀಕ್ಷೆ

ಕಾಂಗ್ರೆಸ್ಸಿಗ ಮತ್ತು ಲೋಕಸಭಾ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿಯವರ ಆಪ್ತರಾಗಿದ್ದ ದಿವಂಗತ ರಾಜೀವ್ ಸತವ್ ಅವರ ಪತ್ನಿ ಸತವ್ ಬಿಜೆಪಿಗೆ ಸೇರುವ ನಿರೀಕ್ಷೆಯಿದೆ. ಮಹಾರಾಷ್ಟ್ರದ ಕಾಂಗ್ರೆಸ್ ನಾಯಕಿ ಪ್ರಜ್ಞಾ ಸತವ್ ಅವರು ಗುರುವಾರ...

ಭೂ ಕಬಳಿಕೆ ಆರೋಪ : ಸದನದಲ್ಲಿ ಚರ್ಚೆಗೆ ಸಿದ್ದ ಎಂದ ಸಚಿವ ಕೃಷ್ಣ ಬೈರೇಗೌಡ

"ಸದನದ ಸದಸ್ಯನಾಗಿ ನನ್ನ ಹಕ್ಕನ್ನು ಬಿಟ್ಟುಕೊಡಲು ಸಿದ್ದನಿದ್ದೇನೆ. ನನ್ನ ಬಗ್ಗೆ ಎತ್ತಿರುವ ವೈಯಕ್ತಿಕ ಆರೋಪದ ಬಗ್ಗೆ ಚರ್ಚೆಗೆ ಸಿದ್ದ" ಎಂದು ಸಚಿವ ಕೃಷ್ಣ ಬೈರೇಗೌಡ ಹೇಳಿದರು. ಗುರುವಾರ (ಡಿ.18) ವಿಧಾನಸಭೆಯ ಶೂನ್ಯ ವೇಳೆಯಲ್ಲಿ, ವಿಧಾನಪರಿಷತ್...

ಡಿಸೆಂಬರ್ 15 ರ ಪ್ರತಿಭಟನೆಯಲ್ಲಿ ಭಾಗವಹಿಸಿದ್ದಕ್ಕಾಗಿ ಜಾಮಿಯಾ ಮಿಲಿಯಾ ವಿದ್ಯಾರ್ಥಿಗಳಿಗೆ ವಿಶ್ವವಿದ್ಯಾಲಯದಿಂದ ಶೋಕಾಸ್ ನೋಟಿಸ್‌

2019 ರಲ್ಲಿ ವಿದ್ಯಾರ್ಥಿಗಳ ಮೇಲಿನ ಹಿಂಸಾಚಾರ ನಡೆದು ಆರು ವರ್ಷಗಳು ತುಂಬಿದ್ದು, ಅದರ ವಾರ್ಷಿಕ ನೆನಪಿನಲ್ಲಿ ಜಾಮಿಯಾ ಮಿಲಿಯಾ ಇಸ್ಲಾಮಿಯಾ ವಿದ್ಯಾರ್ಥಿಗಳು ಡಿಸೆಂಬರ್ 15 ರಂದು ಕ್ಯಾಂಪಸ್ ಒಳಗೆ ದೊಡ್ಡ ಪ್ರತಿಭಟನೆ ನಡೆಸಿದ್ದರು....

ಅಮೆರಿಕದ ಸುಂಕಗಳು ತಮಿಳುನಾಡಿನ ರಫ್ತು ಕೈಗಾರಿಕೆಗಳನ್ನು ಅಂಚಿಗೆ ತಳ್ಳುತ್ತವೆ: ಪ್ರಧಾನಿ ಮೋದಿಗೆ ಸಿಎಂ ಸ್ಟಾಲಿನ್ ಎಚ್ಚರಿಕೆ

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಭಾರತದ ರಫ್ತಿನ ಮೇಲೆ ಅಮೆರಿಕ ವಿಧಿಸಿರುವ ಭಾರೀ ಸುಂಕಗಳು ರಾಜ್ಯದ ಕೆಲವು ಉದ್ಯೋಗ- ಕೈಗಾರಿಕೆಗಳನ್ನು ತೀವ್ರ ಬಿಕ್ಕಟ್ಟಿನತ್ತ...