Homeಮುಖಪುಟಉತ್ತರಾಖಂಡ | 55 ವರ್ಷ ಹಳೆಯ ಮಸೀದಿಯನ್ನು ಕೆಡವಲು ಬಿಜೆಪಿ ಪರ ಸಂಘಟನೆಗಳ ಬೇಡಿಕೆ; ಹೈಕೋರ್ಟ್...

ಉತ್ತರಾಖಂಡ | 55 ವರ್ಷ ಹಳೆಯ ಮಸೀದಿಯನ್ನು ಕೆಡವಲು ಬಿಜೆಪಿ ಪರ ಸಂಘಟನೆಗಳ ಬೇಡಿಕೆ; ಹೈಕೋರ್ಟ್ ಮಟ್ಟಿಲೇರಿದ ವಿವಾದ

- Advertisement -
- Advertisement -

ಉತ್ತರಾಖಂಡದ ಉತ್ತರಕಾಶಿ ಜಿಲ್ಲೆಯಲ್ಲಿ 55 ವರ್ಷಗಳಷ್ಟು ಹಳೆಯದಾದ ಮಸೀದಿಯನ್ನು ಕೆಡವುವಂತೆ ಆಗ್ರಹಿಸಿ ಬಿಜೆಪಿ ಪರ ಸಂಘಟನೆಗಳು ನಡೆಸುತ್ತಿರುವ ಕೃತ್ಯದಿಂದ ಬೇಸತ್ತು ಮಸೀದಿಯ ಮಂಡಳಿಯು ನೈನಿತಾಲ್ ಹೈಕೋರ್ಟ್‌ ಮಟ್ಟಿಲೇರಿದೆ. ಹಂಗಾಮಿ ಮುಖ್ಯ ನ್ಯಾಯಮೂರ್ತಿ ಮನೋಜ್ ಕುಮಾರ್ ತಿವಾರಿ ಮತ್ತು ನ್ಯಾಯಮೂರ್ತಿ ರಾಕೇಶ್ ಥಪ್ಲಿಯಾಲ್ ಅವರಿದ್ದ ವಿಭಾಗೀಯ ಪೀಠವು ಪ್ರಕರಣಕ್ಕೆ ಸಂಬಂಧಿಸಿದ ಅರ್ಜಿಯ ವಿಚಾರಣೆಯನ್ನು ಶುಕ್ರವಾರ ನಡೆಸಿದೆ. ಉತ್ತರಾಖಂಡ

ವಿಚಾರಣೆಯ ನಂತರ ನ್ಯಾಯಾಲಯವು ರಾಜ್ಯ ಸರ್ಕಾರ ಮತ್ತು ಪೊಲೀಸ್ ಮಹಾನಿರ್ದೇಶಕರಿಗೆ ನಿರ್ದೇಶನಗಳನ್ನು ನೀಡಿದ್ದು, ಪ್ರದೇಶದಲ್ಲಿ ಶಾಂತಿ ಮತ್ತು ಭದ್ರತೆಯನ್ನು ಕಾಪಾಡುವ ಅಗತ್ಯವನ್ನು ಒತ್ತಿಹೇಳಿದೆ. ಉತ್ತರಾಖಂಡ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
ಇಲ್ಲಿಕ್ಲಿಕ್ ಮಾಡಿ

ಶುಕ್ರವಾರ ಹೈಕೋರ್ಟ್‌ನ ವಿಭಾಗೀಯ ಪೀಠದ ಮುಂದೆ ನಡೆದ ವಿಚಾರಣೆಯಲ್ಲಿ, ಅರ್ಜಿದಾರರನ್ನು ಪ್ರತಿನಿಧಿಸುವ ಹಿರಿಯ ವಕೀಲರಾದ ಡಾ. ಕಾರ್ತಿಕೇ ಹರಿ ಗುಪ್ತಾ, ಇಮ್ರಾನ್ ಅಲಿ ಖಾನ್, ಪಲ್ಲವಿ ಬಹುಗುಣ, ರಫತ್ ಮುನೀರ್ ಅಲಿ ಮತ್ತು ಇರುಮ್ ಝೆಬಾ ಅವರು ಮುಸ್ಲಿಮರನ್ನು ಉದ್ದೇಶಿಸಿ ನಡೆಸಲಾಗುತ್ತಿರುವ ದ್ವೇಷ ಭಾಷಣದ ಬಗ್ಗೆ ಗಂಭೀರ ಕಳವಳ ವ್ಯಕ್ತಪಡಿಸಿದ್ದಾರೆ.

“ಸಂಯುಕ್ತ ಸನಾತನ ಧರಮ್ ರಕ್ಷಾ ಸಂಘದ ಸದಸ್ಯರು ಮತ್ತು ಅವರ ಸಹಚರರು ಮುಸ್ಲಿಮರು ಮತ್ತು ಮಸೀದಿಯ ವಿರುದ್ಧ ತೀವ್ರವಾದ ದ್ವೇಷದ ಭಾಷಣದಲ್ಲಿ ತೊಡಗಿದ್ದಾರೆ” ಎಂದು ಅವರು ವಾದಿಸಿದ್ದಾರೆ. ಇಂತಹ ಕ್ರಮಗಳು ಭಾರತದ ಗೌರವಾನ್ವಿತ ಸುಪ್ರೀಂ ಕೋರ್ಟ್ ನೀಡಿದ ನಿರ್ದೇಶನಗಳನ್ನು ಉಲ್ಲಂಘಿಸುತ್ತವೆ ಎಂದು ಒತ್ತಿ ಹೇಳಿದ್ದಾರೆ.

‘ಉತ್ತರಕಾಶಿಯ ಭಟ್ವಾರಿ ರಸ್ತೆಯಲ್ಲಿರುವ ಜಾಮಾ ಮಸೀದಿಯನ್ನು 1969ರಲ್ಲಿ ಖಾಸಗಿಯಾಗಿ ಖರೀದಿಸಿದ ಜಮೀನಿನಲ್ಲಿ ನಿರ್ಮಿಸಲಾಗಿದೆ’ ಎಂದು ಪ್ರತಿಪಾದಿಸಿ ‘ಅಲ್ಪಸಂಖಾಯಕ್ ಸೇವಾ ಸಮಿತಿ’ ರಿಟ್ ಅರ್ಜಿ ಸಲ್ಲಿಸಿದೆ. 1986 ರಲ್ಲಿ ಉತ್ತರ ಪ್ರದೇಶದ ಸಹಾಯಕ ವಕ್ಫ್ ಕಮಿಷನರ್ ವಿಚಾರಣೆ ನಡೆಸಿ ಮುಸ್ಲಿಂ ಸಮುದಾಯದ ಸದಸ್ಯರು ಧರ್ಮಾರ್ಥ ನಿಧಿಯನ್ನು ಬಳಸಿ ನಿರ್ಮಿಸಿದ ಖಾಸ್ರಾ ನಂ. 2223 ರಲ್ಲಿ ಮಸೀದಿ ಅಸ್ತಿತ್ವದಲ್ಲಿದೆ ಎಂದು ದೃಢಪಡಿಸಿದರು ಎಂದು ಅರ್ಜಿಯಲ್ಲಿ ತಿಳಿಸಲಾಗಿದೆ.

ಹೆಚ್ಚುವರಿಯಾಗಿ, ವಕ್ಫ್ ಆಯುಕ್ತರ ವರದಿಯು “ಮಸೀದಿಯನ್ನು ಸುನ್ನಿ ಸಮುದಾಯವು ಸಕ್ರಿಯವಾಗಿ ಬಳಸುತ್ತದೆ” ಎಂದು ಪ್ರಮಾಣೀಕರಿಸಿದೆ ಅರ್ಜಿದಾರರು ಕೋರ್ಟ್‌ಗೆ ತಿಳಿಸಿದ್ದಾರೆ.

“1987 ರಲ್ಲಿ, ಭಟ್ವಾರಿ ರಸ್ತೆಯಲ್ಲಿರುವ ಜಾಮಾ ಮಸೀದಿಯನ್ನು ಅಧಿಕೃತವಾಗಿ ವಕ್ಫ್ ಆಸ್ತಿಯಾಗಿ ನೋಂದಾಯಿಸಲಾಯಿತು. ಆದರೆ, ಸೆಪ್ಟೆಂಬರ್ 2024 ರಲ್ಲಿ, ಬಿಜೆಪಿ ಬೆಂಬಲಿತ ಸಂಘಟನೆಯ ನಾಯಕರಾದ ಜಿತೇಂದ್ರ ಸಿಂಗ್ ಚೌಹಾಣ್, ಸ್ವಾಮಿ ದರ್ಶನ್ ಭಾರತಿ, ಸೋನು ಸಿಂಗ್ ನೇಗಿ, ಲಖ್ಪತ್ ಸಿಂಗ್ ಭಂಡಾರಿ ಮತ್ತು ಅನುಜ್ ವಾಲಿಯಾ ಸೇರಿದಂತೆ ಸಂಯುಕ್ತ ಸನಾತನ ಧರ್ಮ ರಕ್ಷಾ ಸಂಘದ ಸದಸ್ಯರು ಮತ್ತು ವಿಶ್ವ ಹಿಂದೂ ಪರಿಷತ್, ಮಸೀದಿ ಕೆಡವುವುದಾಗಿ ಬೆದರಿಕೆ ಹಾಕಲು ಆರಂಭಿಸಿತು” ಎಂದು ಅರ್ಜಿದಾದರರು ಕೋರ್ಟ್‌ಗೆ ಹೇಳಿದ್ದಾರೆ.

ಈ ನಾಯಕರು ಮಸೀದಿಯ ಕಾನೂನುಬದ್ಧತೆಯ ಬಗ್ಗೆ ಸುಳ್ಳು ಮಾಹಿತಿಯನ್ನು ಹರಡಿದ್ದಾರೆ ಮತ್ತು ಮುಸ್ಲಿಂ ಸಮುದಾಯದ ವಿರುದ್ಧ ದ್ವೇಷದ ಭಾಷಣದಲ್ಲಿ ತೊಡಗಿದ್ದಾರೆ ಎಂದು ಅರ್ಜಿದಾರರು ಆರೋಪಿಸಿದ್ದಾರೆ.

ವರುಣಾವತ್ ಪರ್ವತದ ಬುಡದಲ್ಲಿರುವ ಮಸೀದಿಯನ್ನು ಕೆಡವಲು ಒತ್ತಾಯಿಸುತ್ತಿರುವ ಸಂಯುಕ್ತ ಸನಾತನ ಧರ್ಮ ರಕ್ಷಣಾ ಸಂಘದ ನೇತೃತ್ವದಲ್ಲಿ ವ್ಯಾಪಕ ಅಭಿಯಾನ ನಡೆಸಲಾಗುತ್ತಿದೆ. ಆರೆಸ್ಸೆಸ್‌ನ ವಿಶ್ವ ಹಿಂದೂ ಪರಿಷತ್ (ವಿಎಚ್‌ಪಿ) ಸಹ ಡಿಸೆಂಬರ್ 1 ರಂದು ತಮ್ಮ ಹೋರಾಟಕ್ಕೆ ಬೆಂಬಲವಾಗಿ ಮಹಾಪಂಚಾಯತ್ ನಡೆಸುವ ಯೋಜನೆಯನ್ನು ಪ್ರಕಟಿಸಿದೆ.

ಬಿಜೆಪಿ ಪರ ಸಂಘಟನೆಗಳು ಕೃತ್ಯಗಳ ಕಾರಣಕ್ಕೆ ಪ್ರದೇಶದಲ್ಲಿ ಈಗಾಗಲೇ ಹಿಂಸಾಚಾರ ನಡೆದಿದ್ದು, ಅಕ್ಟೋಬರ್ 24 ರಂದು, ಉದ್ವಿಗ್ನತೆ ಭುಗಿಲೆದ್ದಿತ್ತು. ಈ ವೇಳೆ ಕಲ್ಲು ತೂರಾಟ ನಡೆಸಲಾಗಿದ್ದು, ಪೋಲೀಸರು ಲಾಠಿ ಚಾರ್ಜ್‌ ಮಾಡಿದ್ದರು. ಘಟನೆಯಲ್ಲಿ ಒಂಬತ್ತು ಪೊಲೀಸ್ ಅಧಿಕಾರಿಗಳು ಸೇರಿದಂತೆ 27 ಜನರು ಗಾಯಗೊಂಡಿದ್ದಾರೆ. ಘಟನೆಗೆ ಪ್ರತಿಕ್ರಿಯೆಯಾಗಿ, ಪೊಲೀಸರು 200 ಅಪರಿಚಿತ ವ್ಯಕ್ತಿಗಳ ವಿರುದ್ಧ ಎಫ್ಐಆರ್ ದಾಖಲಿಸಿದ್ದು, ಎಂಟು ಶಂಕಿತರನ್ನು ಹೆಸರಿಸಿದ್ದಾರೆ. ಮೂವರು ಪ್ರಮುಖ ಸಂಘಟಕರನ್ನು ಬಂಧಿಸಲಾಗಿದ್ದರೂ, ಅವರು ನಂತರ ಜಿಲ್ಲಾ ನ್ಯಾಯಾಧೀಶರ ನ್ಯಾಯಾಲಯದಿಂದ ಜಾಮೀನು ಪಡೆದಿದ್ದಾರೆ.

ಇದನ್ನೂ ಓದಿ: ಲೂಟಿಯಾದ ಶಸ್ತ್ರಾಸ್ತ್ರಗಳನ್ನು ಹಿಂಪಡೆಯುವಂತೆ ಕುಕಿ ಶಾಸಕರ ಒತ್ತಾಯ; ಮಣಿಪುರದಾದ್ಯಂತ ‘ಎಎಫ್‌ಎಸ್‌ಪಿಎ’ ವಿಸ್ತರಣೆಗೆ ಆಗ್ರಹ

ಲೂಟಿಯಾದ ಶಸ್ತ್ರಾಸ್ತ್ರಗಳನ್ನು ಹಿಂಪಡೆಯುವಂತೆ ಕುಕಿ ಶಾಸಕರ ಒತ್ತಾಯ; ಮಣಿಪುರದಾದ್ಯಂತ ‘ಎಎಫ್‌ಎಸ್‌ಪಿಎ’ ವಿಸ್ತರಣೆಗೆ ಆಗ್ರಹ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಹೊತ್ತಿ ಉರಿಯುತ್ತಿರುವ ಮಣಿಪುರ’: ಶತಮಾನದ ಬೆಂಕಿಗೆ ತುಪ್ಪ ಸುರಿದ ಬಿಜೆಪಿಯ ಕೋಮುರಾಜಕಾರಣ

ಭಾರತದ ಈಶಾನ್ಯ ರಾಜ್ಯ ಮಣಿಪುರ ಅಕ್ಷರಶಃ ಹೊತ್ತಿ ಉರಿಯುತ್ತಿದೆ. ಶತಮಾನಗಳಿಂದ ಹೊಗೆಯಾಡುತ್ತಿದ್ದ ಹಗೆತನಕ್ಕೆ ಕೋಮುರಾಜಕಾರಣದ ಬಣ್ಣ ಬಳಿದ ಬಿಜೆಪಿ ಮತ್ತು ಕೇಂದ್ರ ಸರ್ಕಾರ ಮಣಿಪುರದ ಜನರತ್ತ ತಿರುಗಿಯೂ ನೋಡುತ್ತಿಲ್ಲ. 2023ರಲ್ಲಿ ಭುಗಿಲೆದ್ದ ಉದ್ವಿಗ್ನತೆ...

ಮಧ್ಯಪ್ರದೇಶ| ದಲಿತ ದಂಪತಿಗೆ ಹನುಮಾನ್ ದೇಗುಲ ಪ್ರವೇಶ ನಿರಾಕರಣೆ; ಸಾಮಾಜಿಕ ಬಹಿಷ್ಕಾರ

ಮಧ್ಯಪ್ರದೇಶದ ಖಾರ್ಗೋನ್ ಜಿಲ್ಲೆಯ ಹನುಮಾನ್ ದೇವಸ್ಥಾನಕ್ಕೆ ನವವಿವಾಹಿತ ದಲಿತ ದಂಪತಿಗೆ ಪ್ರವೇಶ ನಿರಾಕರಿಸಲಾಗಿದೆ ಎಂಬ ಆರೋಪ ಕೇಳಿಬಂದಿದ್ದು, ಇದು ಗ್ರಾಮದಲ್ಲಿ ಉದ್ವಿಗ್ನತೆಯನ್ನು ಉಂಟುಮಾಡಿದೆ. ಈ ಘಟನೆಯು ಜಾತಿ ಆಧಾರಿತ ತಾರತಮ್ಯದ ಕುರಿತು ಕಳವಳ...

ಬಂಗಾಳ SIR : ನ್ಯಾಯಮಂಡಳಿಗಳಿಂದ ಪರಿಹಾರ ಪಡೆದವರು ಕೇವಲ 0.01% ಜನ

ಪಶ್ಚಿಮ ಬಂಗಾಳದಲ್ಲಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಲ್ಲಿ ಉಂಟಾದ ವಿವಾದಗಳನ್ನು ಬಗೆಹರಿಸಲು ಮೇಲ್ಮನವಿ ನ್ಯಾಯಮಂಡಳಿಗಳನ್ನು ಸ್ಥಾಪಿಸಲಾಗಿದೆ. ಎಸ್‌ಐಆರ್ ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಿಂದ ಹೆಸರುಗಳನ್ನು ಕೈಬಿಟ್ಟಿರುವುದರ ಅಥವಾ...

ಪ.ಬಂಗಾಳ ಎಸ್‌ಐಆರ್‌ : ದೇಶ ಕಾದ ಯೋಧನಿಂದ ತೀರ್ಪು ಕೊಟ್ಟ ನ್ಯಾಯಾಧೀಶರವರೆಗೆ.. ಮತ ಹಕ್ಕು ಕಳೆದುಕೊಂಡ ಲಕ್ಷಾಂತರ ಜನರು

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ದೇಶದಲ್ಲಿ ಪ್ರಸ್ತುತ ಚರ್ಚೆಯಲ್ಲಿರುವ ಪ್ರಮುಖ ವಿಚಾರ. ಹಲವು ಗೊಂದಲಗಳ ನಡುವೆ ಮೊದಲ ಹಂತದಲ್ಲಿ ಬಿಹಾರದಲ್ಲಿ ಎಸ್‌ಐಆರ್‌ ಪೂರ್ತಿಗೊಳಿಸಿದ ಚುನಾವಣಾ ಆಯೋಗ, ನಂತರ ಅಲ್ಲಿ ವಿಧಾನಸಭಾ...

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...