Homeಮುಖಪುಟಉತ್ತರಾಖಂಡ | 55 ವರ್ಷ ಹಳೆಯ ಮಸೀದಿಯನ್ನು ಕೆಡವಲು ಬಿಜೆಪಿ ಪರ ಸಂಘಟನೆಗಳ ಬೇಡಿಕೆ; ಹೈಕೋರ್ಟ್...

ಉತ್ತರಾಖಂಡ | 55 ವರ್ಷ ಹಳೆಯ ಮಸೀದಿಯನ್ನು ಕೆಡವಲು ಬಿಜೆಪಿ ಪರ ಸಂಘಟನೆಗಳ ಬೇಡಿಕೆ; ಹೈಕೋರ್ಟ್ ಮಟ್ಟಿಲೇರಿದ ವಿವಾದ

- Advertisement -
- Advertisement -

ಉತ್ತರಾಖಂಡದ ಉತ್ತರಕಾಶಿ ಜಿಲ್ಲೆಯಲ್ಲಿ 55 ವರ್ಷಗಳಷ್ಟು ಹಳೆಯದಾದ ಮಸೀದಿಯನ್ನು ಕೆಡವುವಂತೆ ಆಗ್ರಹಿಸಿ ಬಿಜೆಪಿ ಪರ ಸಂಘಟನೆಗಳು ನಡೆಸುತ್ತಿರುವ ಕೃತ್ಯದಿಂದ ಬೇಸತ್ತು ಮಸೀದಿಯ ಮಂಡಳಿಯು ನೈನಿತಾಲ್ ಹೈಕೋರ್ಟ್‌ ಮಟ್ಟಿಲೇರಿದೆ. ಹಂಗಾಮಿ ಮುಖ್ಯ ನ್ಯಾಯಮೂರ್ತಿ ಮನೋಜ್ ಕುಮಾರ್ ತಿವಾರಿ ಮತ್ತು ನ್ಯಾಯಮೂರ್ತಿ ರಾಕೇಶ್ ಥಪ್ಲಿಯಾಲ್ ಅವರಿದ್ದ ವಿಭಾಗೀಯ ಪೀಠವು ಪ್ರಕರಣಕ್ಕೆ ಸಂಬಂಧಿಸಿದ ಅರ್ಜಿಯ ವಿಚಾರಣೆಯನ್ನು ಶುಕ್ರವಾರ ನಡೆಸಿದೆ. ಉತ್ತರಾಖಂಡ

ವಿಚಾರಣೆಯ ನಂತರ ನ್ಯಾಯಾಲಯವು ರಾಜ್ಯ ಸರ್ಕಾರ ಮತ್ತು ಪೊಲೀಸ್ ಮಹಾನಿರ್ದೇಶಕರಿಗೆ ನಿರ್ದೇಶನಗಳನ್ನು ನೀಡಿದ್ದು, ಪ್ರದೇಶದಲ್ಲಿ ಶಾಂತಿ ಮತ್ತು ಭದ್ರತೆಯನ್ನು ಕಾಪಾಡುವ ಅಗತ್ಯವನ್ನು ಒತ್ತಿಹೇಳಿದೆ. ಉತ್ತರಾಖಂಡ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
ಇಲ್ಲಿಕ್ಲಿಕ್ ಮಾಡಿ

ಶುಕ್ರವಾರ ಹೈಕೋರ್ಟ್‌ನ ವಿಭಾಗೀಯ ಪೀಠದ ಮುಂದೆ ನಡೆದ ವಿಚಾರಣೆಯಲ್ಲಿ, ಅರ್ಜಿದಾರರನ್ನು ಪ್ರತಿನಿಧಿಸುವ ಹಿರಿಯ ವಕೀಲರಾದ ಡಾ. ಕಾರ್ತಿಕೇ ಹರಿ ಗುಪ್ತಾ, ಇಮ್ರಾನ್ ಅಲಿ ಖಾನ್, ಪಲ್ಲವಿ ಬಹುಗುಣ, ರಫತ್ ಮುನೀರ್ ಅಲಿ ಮತ್ತು ಇರುಮ್ ಝೆಬಾ ಅವರು ಮುಸ್ಲಿಮರನ್ನು ಉದ್ದೇಶಿಸಿ ನಡೆಸಲಾಗುತ್ತಿರುವ ದ್ವೇಷ ಭಾಷಣದ ಬಗ್ಗೆ ಗಂಭೀರ ಕಳವಳ ವ್ಯಕ್ತಪಡಿಸಿದ್ದಾರೆ.

“ಸಂಯುಕ್ತ ಸನಾತನ ಧರಮ್ ರಕ್ಷಾ ಸಂಘದ ಸದಸ್ಯರು ಮತ್ತು ಅವರ ಸಹಚರರು ಮುಸ್ಲಿಮರು ಮತ್ತು ಮಸೀದಿಯ ವಿರುದ್ಧ ತೀವ್ರವಾದ ದ್ವೇಷದ ಭಾಷಣದಲ್ಲಿ ತೊಡಗಿದ್ದಾರೆ” ಎಂದು ಅವರು ವಾದಿಸಿದ್ದಾರೆ. ಇಂತಹ ಕ್ರಮಗಳು ಭಾರತದ ಗೌರವಾನ್ವಿತ ಸುಪ್ರೀಂ ಕೋರ್ಟ್ ನೀಡಿದ ನಿರ್ದೇಶನಗಳನ್ನು ಉಲ್ಲಂಘಿಸುತ್ತವೆ ಎಂದು ಒತ್ತಿ ಹೇಳಿದ್ದಾರೆ.

‘ಉತ್ತರಕಾಶಿಯ ಭಟ್ವಾರಿ ರಸ್ತೆಯಲ್ಲಿರುವ ಜಾಮಾ ಮಸೀದಿಯನ್ನು 1969ರಲ್ಲಿ ಖಾಸಗಿಯಾಗಿ ಖರೀದಿಸಿದ ಜಮೀನಿನಲ್ಲಿ ನಿರ್ಮಿಸಲಾಗಿದೆ’ ಎಂದು ಪ್ರತಿಪಾದಿಸಿ ‘ಅಲ್ಪಸಂಖಾಯಕ್ ಸೇವಾ ಸಮಿತಿ’ ರಿಟ್ ಅರ್ಜಿ ಸಲ್ಲಿಸಿದೆ. 1986 ರಲ್ಲಿ ಉತ್ತರ ಪ್ರದೇಶದ ಸಹಾಯಕ ವಕ್ಫ್ ಕಮಿಷನರ್ ವಿಚಾರಣೆ ನಡೆಸಿ ಮುಸ್ಲಿಂ ಸಮುದಾಯದ ಸದಸ್ಯರು ಧರ್ಮಾರ್ಥ ನಿಧಿಯನ್ನು ಬಳಸಿ ನಿರ್ಮಿಸಿದ ಖಾಸ್ರಾ ನಂ. 2223 ರಲ್ಲಿ ಮಸೀದಿ ಅಸ್ತಿತ್ವದಲ್ಲಿದೆ ಎಂದು ದೃಢಪಡಿಸಿದರು ಎಂದು ಅರ್ಜಿಯಲ್ಲಿ ತಿಳಿಸಲಾಗಿದೆ.

ಹೆಚ್ಚುವರಿಯಾಗಿ, ವಕ್ಫ್ ಆಯುಕ್ತರ ವರದಿಯು “ಮಸೀದಿಯನ್ನು ಸುನ್ನಿ ಸಮುದಾಯವು ಸಕ್ರಿಯವಾಗಿ ಬಳಸುತ್ತದೆ” ಎಂದು ಪ್ರಮಾಣೀಕರಿಸಿದೆ ಅರ್ಜಿದಾರರು ಕೋರ್ಟ್‌ಗೆ ತಿಳಿಸಿದ್ದಾರೆ.

“1987 ರಲ್ಲಿ, ಭಟ್ವಾರಿ ರಸ್ತೆಯಲ್ಲಿರುವ ಜಾಮಾ ಮಸೀದಿಯನ್ನು ಅಧಿಕೃತವಾಗಿ ವಕ್ಫ್ ಆಸ್ತಿಯಾಗಿ ನೋಂದಾಯಿಸಲಾಯಿತು. ಆದರೆ, ಸೆಪ್ಟೆಂಬರ್ 2024 ರಲ್ಲಿ, ಬಿಜೆಪಿ ಬೆಂಬಲಿತ ಸಂಘಟನೆಯ ನಾಯಕರಾದ ಜಿತೇಂದ್ರ ಸಿಂಗ್ ಚೌಹಾಣ್, ಸ್ವಾಮಿ ದರ್ಶನ್ ಭಾರತಿ, ಸೋನು ಸಿಂಗ್ ನೇಗಿ, ಲಖ್ಪತ್ ಸಿಂಗ್ ಭಂಡಾರಿ ಮತ್ತು ಅನುಜ್ ವಾಲಿಯಾ ಸೇರಿದಂತೆ ಸಂಯುಕ್ತ ಸನಾತನ ಧರ್ಮ ರಕ್ಷಾ ಸಂಘದ ಸದಸ್ಯರು ಮತ್ತು ವಿಶ್ವ ಹಿಂದೂ ಪರಿಷತ್, ಮಸೀದಿ ಕೆಡವುವುದಾಗಿ ಬೆದರಿಕೆ ಹಾಕಲು ಆರಂಭಿಸಿತು” ಎಂದು ಅರ್ಜಿದಾದರರು ಕೋರ್ಟ್‌ಗೆ ಹೇಳಿದ್ದಾರೆ.

ಈ ನಾಯಕರು ಮಸೀದಿಯ ಕಾನೂನುಬದ್ಧತೆಯ ಬಗ್ಗೆ ಸುಳ್ಳು ಮಾಹಿತಿಯನ್ನು ಹರಡಿದ್ದಾರೆ ಮತ್ತು ಮುಸ್ಲಿಂ ಸಮುದಾಯದ ವಿರುದ್ಧ ದ್ವೇಷದ ಭಾಷಣದಲ್ಲಿ ತೊಡಗಿದ್ದಾರೆ ಎಂದು ಅರ್ಜಿದಾರರು ಆರೋಪಿಸಿದ್ದಾರೆ.

ವರುಣಾವತ್ ಪರ್ವತದ ಬುಡದಲ್ಲಿರುವ ಮಸೀದಿಯನ್ನು ಕೆಡವಲು ಒತ್ತಾಯಿಸುತ್ತಿರುವ ಸಂಯುಕ್ತ ಸನಾತನ ಧರ್ಮ ರಕ್ಷಣಾ ಸಂಘದ ನೇತೃತ್ವದಲ್ಲಿ ವ್ಯಾಪಕ ಅಭಿಯಾನ ನಡೆಸಲಾಗುತ್ತಿದೆ. ಆರೆಸ್ಸೆಸ್‌ನ ವಿಶ್ವ ಹಿಂದೂ ಪರಿಷತ್ (ವಿಎಚ್‌ಪಿ) ಸಹ ಡಿಸೆಂಬರ್ 1 ರಂದು ತಮ್ಮ ಹೋರಾಟಕ್ಕೆ ಬೆಂಬಲವಾಗಿ ಮಹಾಪಂಚಾಯತ್ ನಡೆಸುವ ಯೋಜನೆಯನ್ನು ಪ್ರಕಟಿಸಿದೆ.

ಬಿಜೆಪಿ ಪರ ಸಂಘಟನೆಗಳು ಕೃತ್ಯಗಳ ಕಾರಣಕ್ಕೆ ಪ್ರದೇಶದಲ್ಲಿ ಈಗಾಗಲೇ ಹಿಂಸಾಚಾರ ನಡೆದಿದ್ದು, ಅಕ್ಟೋಬರ್ 24 ರಂದು, ಉದ್ವಿಗ್ನತೆ ಭುಗಿಲೆದ್ದಿತ್ತು. ಈ ವೇಳೆ ಕಲ್ಲು ತೂರಾಟ ನಡೆಸಲಾಗಿದ್ದು, ಪೋಲೀಸರು ಲಾಠಿ ಚಾರ್ಜ್‌ ಮಾಡಿದ್ದರು. ಘಟನೆಯಲ್ಲಿ ಒಂಬತ್ತು ಪೊಲೀಸ್ ಅಧಿಕಾರಿಗಳು ಸೇರಿದಂತೆ 27 ಜನರು ಗಾಯಗೊಂಡಿದ್ದಾರೆ. ಘಟನೆಗೆ ಪ್ರತಿಕ್ರಿಯೆಯಾಗಿ, ಪೊಲೀಸರು 200 ಅಪರಿಚಿತ ವ್ಯಕ್ತಿಗಳ ವಿರುದ್ಧ ಎಫ್ಐಆರ್ ದಾಖಲಿಸಿದ್ದು, ಎಂಟು ಶಂಕಿತರನ್ನು ಹೆಸರಿಸಿದ್ದಾರೆ. ಮೂವರು ಪ್ರಮುಖ ಸಂಘಟಕರನ್ನು ಬಂಧಿಸಲಾಗಿದ್ದರೂ, ಅವರು ನಂತರ ಜಿಲ್ಲಾ ನ್ಯಾಯಾಧೀಶರ ನ್ಯಾಯಾಲಯದಿಂದ ಜಾಮೀನು ಪಡೆದಿದ್ದಾರೆ.

ಇದನ್ನೂ ಓದಿ: ಲೂಟಿಯಾದ ಶಸ್ತ್ರಾಸ್ತ್ರಗಳನ್ನು ಹಿಂಪಡೆಯುವಂತೆ ಕುಕಿ ಶಾಸಕರ ಒತ್ತಾಯ; ಮಣಿಪುರದಾದ್ಯಂತ ‘ಎಎಫ್‌ಎಸ್‌ಪಿಎ’ ವಿಸ್ತರಣೆಗೆ ಆಗ್ರಹ

ಲೂಟಿಯಾದ ಶಸ್ತ್ರಾಸ್ತ್ರಗಳನ್ನು ಹಿಂಪಡೆಯುವಂತೆ ಕುಕಿ ಶಾಸಕರ ಒತ್ತಾಯ; ಮಣಿಪುರದಾದ್ಯಂತ ‘ಎಎಫ್‌ಎಸ್‌ಪಿಎ’ ವಿಸ್ತರಣೆಗೆ ಆಗ್ರಹ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇವಲ ಪ್ರತಿಭಟಿಸಿದ್ದಕ್ಕೆ ವಿದ್ಯಾರ್ಥಿಗಳು ಜೈಲುಪಾಲು; ಗಂಗೆಯ ದೋಣಿಯಲ್ಲಿ ಬಿರಿಯಾನಿ ತಿಂದವರಿಗೂ ಸಿಗುತ್ತಿಲ್ಲ ಜಾಮೀನು : ನ್ಯಾಯಮೂರ್ತಿ ಉಜ್ಜಲ್ ಭುಯಾನ್ ಕಳವಳ

ಭಾರತದಲ್ಲಿ ಭಿನ್ನಾಭಿಪ್ರಾಯಗಳನ್ನು ಗೌರವಿಸುವ ಮತ್ತು ಅವುಗಳಿಗೆ ಅವಕಾಶ ನೀಡುವ ಸಾರ್ವಜನಿಕ ಸ್ಥಳಗಳು ಎಷ್ಟು ಕಡಿಮೆಯಾಗುತ್ತಿವೆ ಎಂದರೆ, ತಮ್ಮ ಹಕ್ಕುಗಳಿಗಾಗಿ ಪ್ರತಿಭಟಿಸುವ ವಿದ್ಯಾರ್ಥಿಗಳನ್ನು ಬಂಧಿಸಿ ಅವರಿಗೆ ಜಾಮೀನು ನಿರಾಕರಿಸಲಾಗುತ್ತಿದೆ ಎಂದು ಸುಪ್ರೀಂ ಕೋರ್ಟ್‌ನ ನ್ಯಾಯಮೂರ್ತಿ...

ಪ.ಬಂಗಾಳ: ನೂತನ ‘ಗೂಂಡಾ ಕಾಯ್ದೆ’ ಅಡಿ NEET ಪ್ರತಿಭಟನೆಯಲ್ಲಿ ಭಾಗಿಯಾದ 10 ಮುಸ್ಲಿಂ ಯುವಕರು ಸೇರಿದಂತೆ 11 ಜನರ ಬಂಧನ 

ಕೋಲ್ಕತ್ತಾ: ಕೇಂದ್ರದ ನರೇಂದ್ರ ಮೋದಿ ಸರ್ಕಾರದ ಶಿಕ್ಷಣ ಕ್ಷೇತ್ರದ ವೈಫಲ್ಯಗಳು ಹಾಗೂ ನೀಟ್-ಯುಜಿ (NEET-UG) ಪ್ರಶ್ನೆ ಪತ್ರಿಕೆ ಸೋರಿಕೆ ಹಗರಣವನ್ನು ಖಂಡಿಸಿ ಶುಕ್ರವಾರ ಕೋಲ್ಕತ್ತಾದಲ್ಲಿ ನಡೆದ ಬೃಹತ್ ವಿದ್ಯಾರ್ಥಿ ಪ್ರತಿಭಟನೆಯು ತೀವ್ರ ರಾಜಕೀಯ...

ಪೊಲೀಸರ ಅನುಮತಿ ಪಡೆದಿದ್ದರೂ ನೀಟ್ ಪ್ರತಿಭಟನೆಗೆ ವಾಟ್ಸಾಪ್ ಗ್ರೂಪ್ ರಚಿಸಿದ್ದಕ್ಕಾಗಿ ಅಸ್ಸಾಂನಲ್ಲಿ ಮೂವರು ಮುಸ್ಲಿಂ ವಿದ್ಯಾರ್ಥಿಗಳ ಬಂಧನ

ಅಸ್ಸಾಂನಲ್ಲಿ ಬಿಜೆಪಿ ಸರ್ಕಾರದ ಕೋಮುವಾದಿ ಧೋರಣೆ ಮತ್ತು ಪ್ರಜಾಸತ್ತಾತ್ಮಕ ಹಕ್ಕುಗಳ ದಮನದ ದಾರುಣ ಚಿತ್ರಣವೊಂದು ಮತ್ತೆ ಮುನ್ನೆಲೆಗೆ ಬಂದಿದೆ. ದೇಶಾದ್ಯಂತ ಸದ್ದು ಮಾಡಿದ್ದ 'ನೀಟ್' (NEET) ಅಕ್ರಮಗಳ ವಿರುದ್ಧ ಧ್ವನಿ ಎತ್ತಲು ಮತ್ತು...

‘ವಿದ್ಯಾರ್ಥಿಗಳ ಮೇಲಿನ ವಿಕೃತ ದಾಳಿಗೆ ನಿಮ್ಮ ಸಮ್ಮತಿ ಇತ್ತೇ?’: ಪತ್ರದ ಮೂಲಕ ಅಮಿತ್ ಶಾಗೆ ರಾಹುಲ್ ಗಾಂಧಿ ಪ್ರಶ್ನೆ

ನವದೆಹಲಿ: ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಕಾರಣವಾದ ದೇಶವ್ಯಾಪಿ ವಿದ್ಯಾರ್ಥಿ ಆಂದೋಲನದ ವೇಳೆ ದೆಹಲಿ ಪೊಲೀಸರು ನಡೆಸಿದ ಭೀಕರ ದೌರ್ಜನ್ಯ ಮತ್ತು ಮಿತಿಮೀರಿದ ಬಲಪ್ರಯೋಗದ ವಿರುದ್ಧ ಲೋಕಸಭೆಯ ವಿರೋಧ...

‘ಮಗ ಬೇಗನೆ ಮನೆಗೆ ಬರಲಿ..’; ಭಾವುಕರಾದ ಅಭಿಜೀತ್ ದಿಪ್ಕೆ ಅವರ ಪೋಷಕರು

ಸಿಜೆಪಿ ಸಂಸ್ಥಾಪಕ ಅಭಿಜೀತ್ ದಿಪ್ಕೆ ನೇತೃತ್ವದಲ್ಲಿ ನಡೆದ ಅಸಾಧಾರಣ ಹೋರಾಟವು ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜಿನಾಮೆಯಲ್ಲಿ ಅಂತಿಮವಾಗಿದೆ. ಈ ಕುರಿತು ಮಾಧ್ಯಮಗಳಿಗೆ ಪ್ರತಿಕ್ರಿಯಿಸಿರುವ ಅವರ ಪೋಷಕರು ಭಾವುಕರಾಗಿದ್ದಾರೆ. "ಮಗ ಬೇಗನೆ ಮನೆಗೆ...

ಧರ್ಮೇಂದ್ರ ಪ್ರಧಾನ್ ರಾಜೀನಾಮೆ: ಕಾಕ್ರೋಚ್‌ಗಳಿಗೆ ಅಭಿನಂದಿಸಿದ ಸೋನಮ್ ವಾಂಗ್‌ಚುಕ್ – ಪ್ರಕಾಶ್‌ ರಾಜ್

ದೇಶದ ಯುವಜನರ ಹಲವು ದಿನಗಳ ಹೋರಾಟದ ಬಳಿಕ ಮೋದಿ ನೇತೃತ್ವದ ಕೇಂದ್ರ ಸರ್ಕಾರ ವಿದ್ಯಾರ್ಥಿಗಳ ಮುಂದೆ ಮಂಡಿಯೂರಿದೆ; ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡಿದ್ದಾರೆ. ಈ ಗೆಲುವಿಗೆ ಕಾಕ್ರೋಚ್ ಜನತಾ ಪಕ್ಷದ...

ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಜಿರಳೆಗಳ ಹರ್ಷೋದ್ಗಾರ: ದೆಹಲಿ ಪೊಲೀಸರಿಂದ ಸಾರ್ವಜನಿಕ ಕ್ಷಮೆಯಾಚನೆಗೆ ಆಗ್ರಹ

ದೇಶಾದ್ಯಂತ ನಡೆಯುತ್ತಿರುವ ಸಿಜೆಪಿ ಪ್ರತಿಭಟನೆಗಳ ನಡುವೆ ನೀಟ್ ಪತ್ರಿಕೆ ಸೋರಿಕೆಗೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ರಾಜೀನಾಮೆ ನೀಡಿದ್ದು, ದೆಹಲಿಯ ಜಂತರ್‌ ಮಂತರ್‌ನಲ್ಲಿ ಪ್ರತಿಭಟನೆ ನಡೆಸುತ್ತಿರುವ ಕಾಕ್ರೋಚ್‌ ಜನತಾ...

ಕಾಕ್ರೋಚ್‌ಗಳಿಗೆ ಮಣಿದ ಮೋದಿ ಸರ್ಕಾರ; ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್‌ ರಾಜೀನಾಮೆ

ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ನೇತೃತ್ವದಲ್ಲಿ ದೇಶಾದ್ಯಂತ ನಡೆಯುತ್ತಿರುವ ಪ್ರತಿಭಟನೆಗಳ ಮಧ್ಯೆ, ನೀಟ್ ಅಕ್ರಮಗಳಿಗೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ಇಂದು (ಜುಲೈ 25) ಪ್ರಧಾನ ಮಂತ್ರಿಗಳಿಗೆ ತಮ್ಮ...

ಅಭಿಜೀತ್ ದಿಪ್ಕೆಗೆ ಟೈಫಾಯ್ಡ್; ಪ್ರತಿಭಟನೆ ಮುಂದುವರಿಯಲಿದೆ ಎಂದ ಸಿಜೆಪಿ ಸಂಸ್ಥಾಪಕ

ತನಗೆ ಟೈಫಾಯ್ಡ್ ಇರುವುದು ಪತ್ತೆಯಾಗಿದೆ ಎಂದು ಕಾಕ್ರೋಚ್‌ ಜನತಾ ಪಕ್ಷದ (ಸಿಜೆಪಿ) ಸಂಸ್ಥಾಪಕ ಅಭಿಜೀತ್ ದಿಪ್ಕೆ ಅವರು ಇಂದು ಹೇಳಿದ್ದಾರೆ. "ನನ್ನ ಅನಾರೋಗ್ಯವು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ...

ಮುಸ್ಲಿಮರ ಬಗ್ಗೆ ನಿಂದನಾತ್ಮಕ, ಪ್ರಚೋದನಕಾರಿ ಹೇಳಿಕೆ : ಸಿ.ಟಿ ರವಿ ವಿರುದ್ಧ FIR

ಮುಸ್ಲಿಮರ ವಿರುದ್ಧ ನಿಂದನಾತ್ಮಕ ಹಾಗೂ ಪ್ರಚೋದನಕಾರಿ ಹೇಳಿಕೆ ನೀಡಿದ ವಿಧಾನಪರಿಷತ್ ಸದಸ್ಯ ಸಿ.ಟಿ ರವಿ ವಿರುದ್ಧ ಚಿಕ್ಕಮಗಳೂರು ನಗರ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ. ನಗರದ ಜಾಮಿಯಾ ಮಸೀದಿಯ ಅಧ್ಯಕ್ಷ ಮುದಸ್ಸಿರ್ ಪಾಷಾ ಅವರು...