Homeಮುಖಪುಟಉತ್ತರಾಖಂಡ | 55 ವರ್ಷ ಹಳೆಯ ಮಸೀದಿಯನ್ನು ಕೆಡವಲು ಬಿಜೆಪಿ ಪರ ಸಂಘಟನೆಗಳ ಬೇಡಿಕೆ; ಹೈಕೋರ್ಟ್...

ಉತ್ತರಾಖಂಡ | 55 ವರ್ಷ ಹಳೆಯ ಮಸೀದಿಯನ್ನು ಕೆಡವಲು ಬಿಜೆಪಿ ಪರ ಸಂಘಟನೆಗಳ ಬೇಡಿಕೆ; ಹೈಕೋರ್ಟ್ ಮಟ್ಟಿಲೇರಿದ ವಿವಾದ

- Advertisement -
- Advertisement -

ಉತ್ತರಾಖಂಡದ ಉತ್ತರಕಾಶಿ ಜಿಲ್ಲೆಯಲ್ಲಿ 55 ವರ್ಷಗಳಷ್ಟು ಹಳೆಯದಾದ ಮಸೀದಿಯನ್ನು ಕೆಡವುವಂತೆ ಆಗ್ರಹಿಸಿ ಬಿಜೆಪಿ ಪರ ಸಂಘಟನೆಗಳು ನಡೆಸುತ್ತಿರುವ ಕೃತ್ಯದಿಂದ ಬೇಸತ್ತು ಮಸೀದಿಯ ಮಂಡಳಿಯು ನೈನಿತಾಲ್ ಹೈಕೋರ್ಟ್‌ ಮಟ್ಟಿಲೇರಿದೆ. ಹಂಗಾಮಿ ಮುಖ್ಯ ನ್ಯಾಯಮೂರ್ತಿ ಮನೋಜ್ ಕುಮಾರ್ ತಿವಾರಿ ಮತ್ತು ನ್ಯಾಯಮೂರ್ತಿ ರಾಕೇಶ್ ಥಪ್ಲಿಯಾಲ್ ಅವರಿದ್ದ ವಿಭಾಗೀಯ ಪೀಠವು ಪ್ರಕರಣಕ್ಕೆ ಸಂಬಂಧಿಸಿದ ಅರ್ಜಿಯ ವಿಚಾರಣೆಯನ್ನು ಶುಕ್ರವಾರ ನಡೆಸಿದೆ. ಉತ್ತರಾಖಂಡ

ವಿಚಾರಣೆಯ ನಂತರ ನ್ಯಾಯಾಲಯವು ರಾಜ್ಯ ಸರ್ಕಾರ ಮತ್ತು ಪೊಲೀಸ್ ಮಹಾನಿರ್ದೇಶಕರಿಗೆ ನಿರ್ದೇಶನಗಳನ್ನು ನೀಡಿದ್ದು, ಪ್ರದೇಶದಲ್ಲಿ ಶಾಂತಿ ಮತ್ತು ಭದ್ರತೆಯನ್ನು ಕಾಪಾಡುವ ಅಗತ್ಯವನ್ನು ಒತ್ತಿಹೇಳಿದೆ. ಉತ್ತರಾಖಂಡ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
ಇಲ್ಲಿಕ್ಲಿಕ್ ಮಾಡಿ

ಶುಕ್ರವಾರ ಹೈಕೋರ್ಟ್‌ನ ವಿಭಾಗೀಯ ಪೀಠದ ಮುಂದೆ ನಡೆದ ವಿಚಾರಣೆಯಲ್ಲಿ, ಅರ್ಜಿದಾರರನ್ನು ಪ್ರತಿನಿಧಿಸುವ ಹಿರಿಯ ವಕೀಲರಾದ ಡಾ. ಕಾರ್ತಿಕೇ ಹರಿ ಗುಪ್ತಾ, ಇಮ್ರಾನ್ ಅಲಿ ಖಾನ್, ಪಲ್ಲವಿ ಬಹುಗುಣ, ರಫತ್ ಮುನೀರ್ ಅಲಿ ಮತ್ತು ಇರುಮ್ ಝೆಬಾ ಅವರು ಮುಸ್ಲಿಮರನ್ನು ಉದ್ದೇಶಿಸಿ ನಡೆಸಲಾಗುತ್ತಿರುವ ದ್ವೇಷ ಭಾಷಣದ ಬಗ್ಗೆ ಗಂಭೀರ ಕಳವಳ ವ್ಯಕ್ತಪಡಿಸಿದ್ದಾರೆ.

“ಸಂಯುಕ್ತ ಸನಾತನ ಧರಮ್ ರಕ್ಷಾ ಸಂಘದ ಸದಸ್ಯರು ಮತ್ತು ಅವರ ಸಹಚರರು ಮುಸ್ಲಿಮರು ಮತ್ತು ಮಸೀದಿಯ ವಿರುದ್ಧ ತೀವ್ರವಾದ ದ್ವೇಷದ ಭಾಷಣದಲ್ಲಿ ತೊಡಗಿದ್ದಾರೆ” ಎಂದು ಅವರು ವಾದಿಸಿದ್ದಾರೆ. ಇಂತಹ ಕ್ರಮಗಳು ಭಾರತದ ಗೌರವಾನ್ವಿತ ಸುಪ್ರೀಂ ಕೋರ್ಟ್ ನೀಡಿದ ನಿರ್ದೇಶನಗಳನ್ನು ಉಲ್ಲಂಘಿಸುತ್ತವೆ ಎಂದು ಒತ್ತಿ ಹೇಳಿದ್ದಾರೆ.

‘ಉತ್ತರಕಾಶಿಯ ಭಟ್ವಾರಿ ರಸ್ತೆಯಲ್ಲಿರುವ ಜಾಮಾ ಮಸೀದಿಯನ್ನು 1969ರಲ್ಲಿ ಖಾಸಗಿಯಾಗಿ ಖರೀದಿಸಿದ ಜಮೀನಿನಲ್ಲಿ ನಿರ್ಮಿಸಲಾಗಿದೆ’ ಎಂದು ಪ್ರತಿಪಾದಿಸಿ ‘ಅಲ್ಪಸಂಖಾಯಕ್ ಸೇವಾ ಸಮಿತಿ’ ರಿಟ್ ಅರ್ಜಿ ಸಲ್ಲಿಸಿದೆ. 1986 ರಲ್ಲಿ ಉತ್ತರ ಪ್ರದೇಶದ ಸಹಾಯಕ ವಕ್ಫ್ ಕಮಿಷನರ್ ವಿಚಾರಣೆ ನಡೆಸಿ ಮುಸ್ಲಿಂ ಸಮುದಾಯದ ಸದಸ್ಯರು ಧರ್ಮಾರ್ಥ ನಿಧಿಯನ್ನು ಬಳಸಿ ನಿರ್ಮಿಸಿದ ಖಾಸ್ರಾ ನಂ. 2223 ರಲ್ಲಿ ಮಸೀದಿ ಅಸ್ತಿತ್ವದಲ್ಲಿದೆ ಎಂದು ದೃಢಪಡಿಸಿದರು ಎಂದು ಅರ್ಜಿಯಲ್ಲಿ ತಿಳಿಸಲಾಗಿದೆ.

ಹೆಚ್ಚುವರಿಯಾಗಿ, ವಕ್ಫ್ ಆಯುಕ್ತರ ವರದಿಯು “ಮಸೀದಿಯನ್ನು ಸುನ್ನಿ ಸಮುದಾಯವು ಸಕ್ರಿಯವಾಗಿ ಬಳಸುತ್ತದೆ” ಎಂದು ಪ್ರಮಾಣೀಕರಿಸಿದೆ ಅರ್ಜಿದಾರರು ಕೋರ್ಟ್‌ಗೆ ತಿಳಿಸಿದ್ದಾರೆ.

“1987 ರಲ್ಲಿ, ಭಟ್ವಾರಿ ರಸ್ತೆಯಲ್ಲಿರುವ ಜಾಮಾ ಮಸೀದಿಯನ್ನು ಅಧಿಕೃತವಾಗಿ ವಕ್ಫ್ ಆಸ್ತಿಯಾಗಿ ನೋಂದಾಯಿಸಲಾಯಿತು. ಆದರೆ, ಸೆಪ್ಟೆಂಬರ್ 2024 ರಲ್ಲಿ, ಬಿಜೆಪಿ ಬೆಂಬಲಿತ ಸಂಘಟನೆಯ ನಾಯಕರಾದ ಜಿತೇಂದ್ರ ಸಿಂಗ್ ಚೌಹಾಣ್, ಸ್ವಾಮಿ ದರ್ಶನ್ ಭಾರತಿ, ಸೋನು ಸಿಂಗ್ ನೇಗಿ, ಲಖ್ಪತ್ ಸಿಂಗ್ ಭಂಡಾರಿ ಮತ್ತು ಅನುಜ್ ವಾಲಿಯಾ ಸೇರಿದಂತೆ ಸಂಯುಕ್ತ ಸನಾತನ ಧರ್ಮ ರಕ್ಷಾ ಸಂಘದ ಸದಸ್ಯರು ಮತ್ತು ವಿಶ್ವ ಹಿಂದೂ ಪರಿಷತ್, ಮಸೀದಿ ಕೆಡವುವುದಾಗಿ ಬೆದರಿಕೆ ಹಾಕಲು ಆರಂಭಿಸಿತು” ಎಂದು ಅರ್ಜಿದಾದರರು ಕೋರ್ಟ್‌ಗೆ ಹೇಳಿದ್ದಾರೆ.

ಈ ನಾಯಕರು ಮಸೀದಿಯ ಕಾನೂನುಬದ್ಧತೆಯ ಬಗ್ಗೆ ಸುಳ್ಳು ಮಾಹಿತಿಯನ್ನು ಹರಡಿದ್ದಾರೆ ಮತ್ತು ಮುಸ್ಲಿಂ ಸಮುದಾಯದ ವಿರುದ್ಧ ದ್ವೇಷದ ಭಾಷಣದಲ್ಲಿ ತೊಡಗಿದ್ದಾರೆ ಎಂದು ಅರ್ಜಿದಾರರು ಆರೋಪಿಸಿದ್ದಾರೆ.

ವರುಣಾವತ್ ಪರ್ವತದ ಬುಡದಲ್ಲಿರುವ ಮಸೀದಿಯನ್ನು ಕೆಡವಲು ಒತ್ತಾಯಿಸುತ್ತಿರುವ ಸಂಯುಕ್ತ ಸನಾತನ ಧರ್ಮ ರಕ್ಷಣಾ ಸಂಘದ ನೇತೃತ್ವದಲ್ಲಿ ವ್ಯಾಪಕ ಅಭಿಯಾನ ನಡೆಸಲಾಗುತ್ತಿದೆ. ಆರೆಸ್ಸೆಸ್‌ನ ವಿಶ್ವ ಹಿಂದೂ ಪರಿಷತ್ (ವಿಎಚ್‌ಪಿ) ಸಹ ಡಿಸೆಂಬರ್ 1 ರಂದು ತಮ್ಮ ಹೋರಾಟಕ್ಕೆ ಬೆಂಬಲವಾಗಿ ಮಹಾಪಂಚಾಯತ್ ನಡೆಸುವ ಯೋಜನೆಯನ್ನು ಪ್ರಕಟಿಸಿದೆ.

ಬಿಜೆಪಿ ಪರ ಸಂಘಟನೆಗಳು ಕೃತ್ಯಗಳ ಕಾರಣಕ್ಕೆ ಪ್ರದೇಶದಲ್ಲಿ ಈಗಾಗಲೇ ಹಿಂಸಾಚಾರ ನಡೆದಿದ್ದು, ಅಕ್ಟೋಬರ್ 24 ರಂದು, ಉದ್ವಿಗ್ನತೆ ಭುಗಿಲೆದ್ದಿತ್ತು. ಈ ವೇಳೆ ಕಲ್ಲು ತೂರಾಟ ನಡೆಸಲಾಗಿದ್ದು, ಪೋಲೀಸರು ಲಾಠಿ ಚಾರ್ಜ್‌ ಮಾಡಿದ್ದರು. ಘಟನೆಯಲ್ಲಿ ಒಂಬತ್ತು ಪೊಲೀಸ್ ಅಧಿಕಾರಿಗಳು ಸೇರಿದಂತೆ 27 ಜನರು ಗಾಯಗೊಂಡಿದ್ದಾರೆ. ಘಟನೆಗೆ ಪ್ರತಿಕ್ರಿಯೆಯಾಗಿ, ಪೊಲೀಸರು 200 ಅಪರಿಚಿತ ವ್ಯಕ್ತಿಗಳ ವಿರುದ್ಧ ಎಫ್ಐಆರ್ ದಾಖಲಿಸಿದ್ದು, ಎಂಟು ಶಂಕಿತರನ್ನು ಹೆಸರಿಸಿದ್ದಾರೆ. ಮೂವರು ಪ್ರಮುಖ ಸಂಘಟಕರನ್ನು ಬಂಧಿಸಲಾಗಿದ್ದರೂ, ಅವರು ನಂತರ ಜಿಲ್ಲಾ ನ್ಯಾಯಾಧೀಶರ ನ್ಯಾಯಾಲಯದಿಂದ ಜಾಮೀನು ಪಡೆದಿದ್ದಾರೆ.

ಇದನ್ನೂ ಓದಿ: ಲೂಟಿಯಾದ ಶಸ್ತ್ರಾಸ್ತ್ರಗಳನ್ನು ಹಿಂಪಡೆಯುವಂತೆ ಕುಕಿ ಶಾಸಕರ ಒತ್ತಾಯ; ಮಣಿಪುರದಾದ್ಯಂತ ‘ಎಎಫ್‌ಎಸ್‌ಪಿಎ’ ವಿಸ್ತರಣೆಗೆ ಆಗ್ರಹ

ಲೂಟಿಯಾದ ಶಸ್ತ್ರಾಸ್ತ್ರಗಳನ್ನು ಹಿಂಪಡೆಯುವಂತೆ ಕುಕಿ ಶಾಸಕರ ಒತ್ತಾಯ; ಮಣಿಪುರದಾದ್ಯಂತ ‘ಎಎಫ್‌ಎಸ್‌ಪಿಎ’ ವಿಸ್ತರಣೆಗೆ ಆಗ್ರಹ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸತೀಶ್‌ ಜಾರಕಿಹೊಳಿ ಮೇಲಿನ ಇಡಿ ದಾಳಿಯನ್ನು ‘ಚಾರಿತ್ರ್ಯ ಹರಣ’ ಎಂದ ವಿಜಯ್ ಮಲ್ಯ

ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಅವರ ಮನೆ ಹಾಗೂ ಕಚೇರಿಗಳ ಮೇಲೆ ಜಾರಿ ನಿರ್ದೇಶನಾಲಯವು (ಇಡಿ) ನಡೆಸಿದ ದಾಳಿಯನ್ನು ಮಾಜಿ ಸಂಸದ ಮತ್ತು ದೇಶದಿಂದ ಪರಾರಿಯಾಗಿರುವ ಉದ್ಯಮಿ ವಿಜಯ್ ಮಲ್ಯ, "ಸಾರ್ವಜನಿಕವಾಗಿ ಚಾರಿತ್ರ್ಯ...

ಒಗ್ಗಟ್ಟಿನ ಮಾತುಗಳಷ್ಟೇ ಸಾಲದು, ಕೃತಿಯಲ್ಲಿರಲಿ ದಿಟ್ಟತನ : ಬ್ರಿಕ್ಸ್ ವಿಚಾರದಲ್ಲಿ ಕೇಂದ್ರಕ್ಕೆ ಕಾಂಗ್ರೆಸ್ ಚಾಟಿ

ಜಾಗತಿಕ ಮಟ್ಟದಲ್ಲಿ ಬ್ರಿಕ್ಸ್ (BRICS) ಒಕ್ಕೂಟದ ಪ್ರಭಾವ ಹೆಚ್ಚುತ್ತಿರುವುದನ್ನು ಸ್ವಾಗತಿಸಿರುವ ಕಾಂಗ್ರೆಸ್, ಈ ಒಕ್ಕೂಟದ ಅಧ್ಯಕ್ಷತೆಯನ್ನು ವಹಿಸಿರುವ ಭಾರತವು ‘ಗ್ಲೋಬಲ್ ಸೌತ್’ (Global South) ರಾಷ್ಟ್ರಗಳ ನಡುವೆ ತನ್ನ ರಾಜತಾಂತ್ರಿಕ ಸ್ಥಾನಮಾನವನ್ನು ಮರುಸ್ಥಾಪಿಸಲು...

9/11 ರ ಹಿಂದಿನ ದಾಳಿಯನ್ನು ಇರಾನ್ ಜೊತೆಗಿನ ಇಂದಿನ ಯುದ್ಧಕ್ಕೆ ಜೋಡಿಸಿದ ಡೊನಾಲ್ಡ್‌ ಟ್ರಂಪ್

"ಸೆಪ್ಟೆಂಬರ್ 11, 2001 ರ ದಾಳಿಯನ್ನು ಯುನೈಟೆಡ್ ಸ್ಟೇಟ್ಸ್ ಎಂದಿಗೂ ಮರೆಯುವುದಿಲ್ಲ. 25 ವರ್ಷಗಳ ನಂತರವೂ ಇರಾನ್ ಮೇಲೆ ದಾಳಿ ಮಾಡುವ ಮೂಲಕ ದೇಶವು ಭಯೋತ್ಪಾದನೆ ವಿರುದ್ಧದ ಯುದ್ಧವನ್ನು ಮುಂದುವರೆಸಿದೆ" ಎಂದು ಅಧ್ಯಕ್ಷ...

SIR ನೋಟಿಸ್ ಮತ್ತು ವಿಚಾರಣೆಯಲ್ಲಿ ಅಕ್ರಮ : ಚು. ಆಯೋಗದ ವಿರುದ್ಧ ನಾಗರಿಕ ಸಂಘಟನೆಗಳಿಂದ 2ನೇ ಎಫ್‌ಐಆರ್

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಭಾಗವಾಗಿ, ಆಗಸ್ಟ್ 24ರಂದು ರಾಜ್ಯ ಚುನಾವಣಾ ಆಯೋಗ ಬಿಡುಗಡೆ ಮಾಡಿದ್ದ ಕರಡು ಮತದಾರರ ಪಟ್ಟಿಯನ್ನು ತಿರಸ್ಕರಿಸಿ ಕೇಂದ್ರ ಚುನಾವಣಾ ಆಯೋಗದ ವಿರುದ್ಧ ಎಫ್‌ಐಆರ್ ಬಿಡುಗಡೆ...

‘ಕೊಂಕಣಿ – ಮಾಲ್ವಣಿ ಸಮುದಾಯಗಳು ಹಿಂದುತ್ವದ ಬೆಂಬಲಿಗರು..’; ಮಹಾರಾಷ್ಟ್ರ ಬಿಜೆಪಿ ನಾಯಕ ಅಮೀತ್ ಸತಮ್

ಮುಂಬೈನಲ್ಲಿ ವಾಸಿಸುತ್ತಿರುವ ಕೊಂಕಣಿ ಮತ್ತು ಮಾಲ್ವಣಿ ಸಮುದಾಯಗಳು ಸೇರಿದಂತೆ ಕೊಂಕಣ ಪ್ರದೇಶದ ಜನರು ಹಿಂದುತ್ವವನ್ನು ಬೆಂಬಲಿಸುತ್ತಾರೆ ಎಂದು ಬಿಜೆಪಿ ನಾಯಕ ಅಮೀತ್ ಸತಮ್ ಹೇಳಿದ್ದಾರೆ. ಮಹಾರಾಷ್ಟ್ರದ ಕೊಂಕಣ ಪ್ರದೇಶದ ಸಾವಂತವಾಡಿಗೆ ಗಣಪತಿ ಭಕ್ತರಿಗಾಗಿ ಛತ್ರಪತಿ...

SIR! ಸಾಮಾನ್ಯರಿಗೆ ಸಂಕಷ್ಟ; ಗಣ್ಯರಿಗೆ ಮನೆ ಬಾಗಿಲಲ್ಲೇ ಸೇವೆ?

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆ ಕರ್ನಾಟಕದಲ್ಲಿ ಮುಂದುವರೆದಿರುವ ನಡುವೆಯೇ, ಅದರ ಜಾರಿಯಲ್ಲಿ ಸಾಮಾನ್ಯ ಮತದಾರರು ಮತ್ತು ಪ್ರಭಾವಿ ವ್ಯಕ್ತಿಗಳ ಅನುಭವದ ನಡುವಿನ ವ್ಯತ್ಯಾಸದ ಕುರಿತು ಪ್ರಶ್ನೆಗಳು ಎದ್ದಿವೆ. ಮತದಾರರ ಪಟ್ಟಿಯಲ್ಲಿನ...

ದಲಿತ ಬಾಲಕಿ ನಿಶು ಆಜಾದ್ ಕುಟುಂಬಕ್ಕೆ ನಿಲ್ಲದ ಕಿರುಕುಳ; ಅಸಭ್ಯ ಭಾಷೆ – ಬೆದರಿಕೆ ಸಂದೇಶ ರವಾನೆ

ಸಿಜೆಪಿ ಪ್ರತಿಭಟನೆಯಲ್ಲಿ ಗಮನ ಸೆಳೆದಿದ್ದ ಹದಿನಾಲ್ಕು ವರ್ಷ ವಯಸ್ಸಿನ ದಲಿತ ಸಮುದಾಯದ ಕಂಟೆಂಟ್ ಕ್ರಿಯೇಟರ್ ನಿಶು ಆಜಾದ್ ಮತ್ತು ಅವರ ಕುಟುಂಬಕ್ಕೆ ಮೊಬೈಲ್‌ ಫೋನ್‌ ಮೂಲಕ ನಿರಂತರ ಕಿರುಕುಳ ಸಂದೇಶ ಬರುತ್ತಿವೆ ಎಂದು...

ಉತ್ತರ ಪ್ರದೇಶ| 8ನೇ ತರಗತಿಯ ದಲಿತ ವಿದ್ಯಾರ್ಥಿಗೆ ಶಿಕ್ಷಕಿಯಿಂದ ಜಾತಿ ತಾರತಮ್ಯ

ಉತ್ತರ ಪ್ರದೇಶದ ಲಖಿಂಪುರ ಖೇರಿ ಜಿಲ್ಲೆಯ ಸರ್ಕಾರಿ ಉನ್ನತ ಪ್ರಾಥಮಿಕ ಶಾಲೆಯ 8ನೇ ತರಗತಿಯ ವಿದ್ಯಾರ್ಥಿಯೊಬ್ಬರು ಶಿಕ್ಷಕಿಯಿಂದ ಜಾತಿ ಆಧಾರಿತ ತಾರತಮ್ಯ ಎಸಗಲಾಗಿದೆ ಎಂದು ಆರೋಪಿಸಿದ್ದಾನೆ. ಕೃಷ್ಣ ಎಂದು ಗುರುತಿಸಲ್ಪಟ್ಟ ಈ ವಿದ್ಯಾರ್ಥಿ ಪರಿಶಿಷ್ಟ...

ಯೆಮನ್ | ಸಂಪೂರ್ಣ ರೆಡ್ ಸೀ ಕರಾವಳಿಯನ್ನು ನಿಯಂತ್ರಣಕ್ಕೆ ತೆಗೆದುಕೊಂಡ ಹೌತಿ ಪಡೆ : ಮಂದೇಬ್ ಜಲಸಂಧಿ ಮೇಲೆಯೂ ಹಿಡಿತ ಸಾಧಿಸಿರುವುದಾಗಿ ವರದಿ

ಮಹತ್ವದ ಬೆಳವಣಿಗೆಯಲ್ಲಿ, ಹೌತಿ ಬಂಡುಕೋರರು ಯೆಮನ್‌ನ ಇಡೀ ಕೆಂಪು ಸಮುದ್ರದ (ರೆಡ್ ಸೀ) ಕರಾವಳಿಯನ್ನು ತಮ್ಮ ನಿಯಂತ್ರಣಕ್ಕೆ ತೆಗೆದುಕೊಂಡಿದ್ದಾರೆ ಎಂದು ವರದಿಯಾಗಿದೆ. ಇರಾನ್ ಬೆಂಬಲಿತ ಹೌತಿ ಸಶಸ್ತ್ರ ಪಡೆಗಳು ಯೆಮನ್ ಸರ್ಕಾರದ ನಿಯಂತ್ರಣದಲ್ಲಿದ್ದ...

ಭಾರತದ ಚುನಾವಣಾ ಪ್ರಕ್ರಿಯೆಯು ಅತ್ಯಂತ ಪಾರದರ್ಶಕವಾಗಿದೆ: ಸಿಇಸಿ ಜ್ಞಾನೇಶ್ ಕುಮಾರ್

ಭಾರತದ ಚುನಾವಣಾ ಪ್ರಕ್ರಿಯೆಯು ವಿಶ್ವದಲ್ಲೇ ಅತ್ಯಂತ ಪಾರದರ್ಶಕವಾದದ್ದು ಎಂದು ಮುಖ್ಯ ಚುನಾವಣಾ ಆಯುಕ್ತ (ಸಿಇಸಿ) ಜ್ಞಾನೇಶ್ ಕುಮಾರ್ (ಸೆ.11) ಹೇಳಿದ್ದಾರೆ. ಗುಜರಾತ್ ವಿಶ್ವವಿದ್ಯಾಲಯದ ಅಟಲ್ ಕಲಾಂ ಸಭಾಂಗಣದಲ್ಲಿ ನಡೆದ 'ಮತಗಟ್ಟೆ ಮಟ್ಟದ ಅಧಿಕಾರಿಗಳೊಂದಿಗೆ...