Homeಮುಖಪುಟಉತ್ತರಾಖಂಡ ಸಿಎಂ ಇಂದು ಘೋಷಣೆ ಸಾಧ್ಯತೆ; ಗೋವಾ ಕುರಿತು ಸುಳಿವು ನೀಡದ BJP!

ಉತ್ತರಾಖಂಡ ಸಿಎಂ ಇಂದು ಘೋಷಣೆ ಸಾಧ್ಯತೆ; ಗೋವಾ ಕುರಿತು ಸುಳಿವು ನೀಡದ BJP!

- Advertisement -
- Advertisement -

ಬಿಜೆಪಿ ಉತ್ತರಾಖಂಡಕ್ಕೆ ತನ್ನ ಮುಖ್ಯಮಂತ್ರಿ ಆಯ್ಕೆಯನ್ನು ಸೋಮವಾರ ಪ್ರಕಟಿಸುವ ಸಾಧ್ಯತೆಯಿದೆ. ಬೆಳಗ್ಗೆ 11 ಗಂಟೆಗೆ ಶಾಸಕರು ಪ್ರಮಾಣ ವಚನ ಸ್ವೀಕರಿಸಲಿದ್ದಾರೆ. ರಾಜ್ಯದಲ್ಲಿ ಪಕ್ಷದ ವೀಕ್ಷಕರಾಗಿರುವ ಒಕ್ಕೂಟ ಸರ್ಕಾರದ ಸಚಿವ ರಾಜನಾಥ್ ಸಿಂಗ್ ಮತ್ತು ಮೀನಾಕ್ಷಿ ಲೇಖಿ ಅವರು ಮುಖ್ಯಮಂತ್ರಿ ಹೆಸರು ಘೋಷಣೆಯ ಮೇಲ್ವಿಚಾರಣೆ ನಡೆಸಲಿದ್ದಾರೆ. ಆದರೆ ಗೋವಾ ಮುಖ್ಯಮಂತ್ರಿಯ ಬಗ್ಗೆ ಬಿಜೆಪಿ ಇನ್ನೂ ಸಂದಿಗ್ಧ ಪರಿಸ್ಥಿತಿಯಲ್ಲಿದೆ ಎನ್ನಲಾಗಿದೆ.

ನಿನ್ನೆಯಷ್ಟೆ ಗೃಹ ಸಚಿವ ಅಮಿತ್ ಶಾ ಅವರು ಉತ್ತರಾಖಂಡದ ಹಂಗಾಮಿ ಮುಖ್ಯಮಂತ್ರಿ ಪುಷ್ಕರ್ ಸಿಂಗ್ ಧಾಮಿ ಮತ್ತು ಪಕ್ಷದ ಮುಖ್ಯಸ್ಥ ಜೆಪಿ ನಡ್ಡಾ ಸೇರಿದಂತೆ ಬಿಜೆಪಿಯ ಹಿರಿಯ ನಾಯಕರನ್ನು ದೆಹಲಿಯಲ್ಲಿ ಭೇಟಿಯಾಗಿ ರಾಜ್ಯದಲ್ಲಿ ಸರ್ಕಾರ ರಚನೆಯ ಕುರಿತು ಚರ್ಚಿಸಿದರು.

70 ಸದಸ್ಯ ಬಲದ ಉತ್ತರಾಖಂಡ ವಿಧಾನಸಭೆಯಲ್ಲಿ ಬಿಜೆಪಿ 47 ಸ್ಥಾನಗಳನ್ನು ಗೆದ್ದು ರಾಜ್ಯದಲ್ಲಿ ತನ್ನ ಸತತ ಎರಡನೇ ಅವಧಿಯನ್ನು ಭದ್ರಪಡಿಸಿಕೊಂಡಿದೆ. ಆದಾಗ್ಯೂ, ಧಾಮಿ ಅವರು ಖತಿಮಾ ಕ್ಷೇತ್ರದಿಂದ ಚುನಾವಣೆಯಲ್ಲಿ ಸೋತಿದ್ದಾರೆ.

ಇದನ್ನೂ ಓದಿ: ಕಾಂಗ್ರೆಸ್ ವೈಫಲ್ಯಗಳ ಮೇಲಿನ ಕೋಪ; ಪಂಜಾಬ್‌ಅನ್ನು ಸುಲಭವಾಗಿ ಒಲಿಸಿಕೊಂಡ ಆಪ್

ಉತ್ತರಾಖಂಡದ ಮುಖ್ಯಮಂತ್ರಿ ಹುದ್ದೆಗೆ ಹಾಲಿ ಮುಖ್ಯಮಂತ್ರಿ ಧಾಮಿ, ಬಿಜೆಪಿಯ ಉತ್ತರಾಖಂಡದ ಪ್ರಧಾನ ಕಾರ್ಯದರ್ಶಿ ಸುರೇಶ್ ಭಟ್, ಪಕ್ಷದ ಸಂಸದ ಅನಿಲ್ ಬಲುನಿ; ಶಾಸಕರಾದ ಧನ್ ಸಿಂಗ್ ರಾವತ್, ಸತ್ಪಾಲ್ ಮಹಾರಾಜ್ ಮತ್ತು ರಿತು ಖಂಡೂರಿ ಮತ್ತು ಪಕ್ಷದ ಸಂಸದ ರಮೇಶ್ ಪೋಖ್ರಿಯಾಲ್ ನಿಶಾಂಕ್ ಆಕಾಂಕ್ಷಿಗಳಾಗಿದ್ದಾರೆ.

ಈ ಮಧ್ಯೆ, ಗೋವಾದಲ್ಲಿ ಪ್ರಮೋದ್ ಸಾವಂತ್ ಮತ್ತು ವಿಶ್ವಜಿತ್ ರಾಣೆ ನಡುವೆ ಪೈಪೋಟಿ ನಡೆಯುತ್ತಿದೆ. ಆದರೆ ಆಯ್ಕೆಯ ಬಗ್ಗೆ ಬಿಜೆಪಿ ಇನ್ನೂ ಸಂದಿಗ್ಧ ಪರಿಸ್ಥಿತಿಯಲ್ಲಿದೆ ಎನ್ನಲಾಗಿದೆ. ಹಾಲಿ ಮುಖ್ಯಮಂತ್ರಿ ಪ್ರಮೋದ್‌ ಸಾವಂತ್ ಅವರು ಮುಖ್ಯಮಂತ್ರಿಯಾಗಿ ಎರಡನೇ ಅವಧಿಗೆ ಅಧಿಕಾರ ಪಡೆಯಲಿದ್ದಾರೆ ಎಂದು ಮೂಲಗಳನ್ನು ಉಲ್ಲೇಖಿಸಿ ಎನ್‌ಡಿಟಿವಿ ವರದಿ ಮಾಡಿದೆ. ಸರ್ಕಾರ ರಚನೆಗೆ ಹಕ್ಕು ಮಂಡಿಸಲು ಬಿಜೆಪಿ ರಾಜ್ಯಪಾಲರನ್ನು ಭೇಟಿ ಮಾಡುವ ಮುನ್ನಾ ದಿನವಾದ ಇಂದು ನಿರ್ಧಾರ ಕೈಗೊಳ್ಳುವ ಸಾಧ್ಯತೆ ಇದೆ.

ಉತ್ತರ ಪ್ರದೇಶದಲ್ಲಿ ಮುಖ್ಯಮಂತ್ರಿ ಆದಿತ್ಯನಾಥ್ ಶುಕ್ರವಾರ ಎರಡನೇ ಅವಧಿಗೆ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ ಎಂದು ಬಿಜೆಪಿ ಕಳೆದ ವಾರದ ಆರಂಭದಲ್ಲಿ ಹೇಳಿತ್ತು. ಆದರೆ ಅವರ ಸಂಪುಟದ ಗಾತ್ರ ಅಥವಾ ವಿವಿಧ ಸಚಿವಾಲಯಗಳಿಗೆ ಹೆಸರುಗಳನ್ನು ಅಂತಿಮಗೊಳಿಸಲಾಗಿಲ್ಲ.

ಇದನ್ನೂ ಓದಿ: ದೋರನಹಳ್ಳಿ ಸಿಲಿಂಡರ್ ಸ್ಪೋಟ ಪ್ರಕರಣ: ಸಂತ್ರಸ್ತರಿಗೆ ತಲಾ 5 ಲಕ್ಷ ರೂ.ಪರಿಹಾರ ವಿತರಿಸಿದ ಸಿಎಂ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಜೈಲಿನಲ್ಲಿರುವ ಹೋರಾಟಗಾರ ಸೋನಮ್ ವಾಂಗ್‌ಚುಕ್‌ಗೆ ಅನಾರೋಗ್ಯ : ಜೋಧ್‌ಪುರದ ಏಮ್ಸ್‌ನಲ್ಲಿ ವೈದ್ಯಕೀಯ ಪರೀಕ್ಷೆ

ನ್ಯಾಯಾಂಗ ಬಂಧನದಲ್ಲಿರುವ ಲಡಾಖ್‌ನ ಹೋರಾಟಗಾರ ಹಾಗೂ ವಿಜ್ಞಾನಿ ಸೋನಮ್ ವಾಂಗ್‌ಚುಕ್ ಅವರ ಆರೋಗ್ಯ ಹದೆಗೆಟ್ಟಿದ್ದು, ಸುಪ್ರೀಂ ಕೋರ್ಟ್ ನಿರ್ದೇಶನ ಅನುಸಾರ ಜೋಧ್‌ಪುರದ ಏಮ್ಸ್‌ನಲ್ಲಿ ಅವರಿಗೆ ವೈದ್ಯಕೀಯ ಪರೀಕ್ಷೆ ನಡೆಸಲಾಗಿದೆ. ಪೊಲೀಸರು ವಾಂಗ್‌ಚುಕ್ ಅವರನ್ನು ಜೋಧ್‌ಪುರ...

ಉತ್ತರಾಖಂಡ ಏಕರೂಪ ನಾಗರಿಕ ಸಂಹಿತೆ ತಿದ್ದುಪಡಿ : ಬಲವಂತದ ವಿವಾಹ, ಲಿವ್‌ಇನ್ ಸಂಬಂಧಕ್ಕೆ 7 ವರ್ಷ ಜೈಲು

ಉತ್ತರಾಖಂಡ ಏಕರೂಪ ನಾಗರಿಕ ಸಂಹಿತೆ (ತಿದ್ದುಪಡಿ) ಸುಗ್ರೀವಾಜ್ಞೆಗೆ ರಾಜ್ಯಪಾಲ ಹಾಗೂ ನಿವೃತ್ತ ಲೆಫ್ಟಿನೆಂಟ್ ಜನರಲ್ ಗುರ್ಮೀತ್ ಸಿಂಗ್ ಅವರು ಅಂಕಿತ ಹಾಕಿದ್ದಾರೆ. ಈ ತಿದ್ದುಪಡಿಯ ಪರಿಣಾಮ, ರಾಜ್ಯದಲ್ಲಿ ವಿವಾಹ ಹಾಗೂ ಲಿವ್‌ಇನ್ ಸಂಬಂಧಗಳಿಗೆ...

ಮಹಾರಾಷ್ಟ್ರದ ಡಿಸಿಎಂ ಆಗಿ ಅಜಿತ್ ಪವಾರ್ ಪತ್ನಿ ಸುನೇತ್ರಾ ಪವಾರ್ ಆಯ್ಕೆ : ಇಂದು ಸಂಜೆ ಪ್ರಮಾಣ ವಚನ ಸ್ವೀಕಾರ; ವರದಿ

ಅಜಿತ್ ಪವಾರ್ ಅವರ ಅಕಾಲಿಕ ಸಾವಿನಿಂದ ತೆರವಾದ ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಸ್ಥಾನಕ್ಕೆ ಅಜಿತ್ ಪವಾರ್ ಅವರ ಪತ್ನಿ ಸುನೇತ್ರಾ ಪವಾರ್ ಅವರನ್ನು ನೇಮಿಸಲು ನ್ಯಾಷನಲಿಸ್ಟ್ ಕಾಂಗ್ರೆಸ್ ಪಾರ್ಟಿ (ಎನ್‌ಸಿಪಿ) ನಿರ್ಧರಿಸಿದೆ ಎಂದು ವರದಿಯಾಗಿದೆ....

ಶೂಟ್ ಮಾಡಿಕೊಂಡು ಪ್ರಾಣ ಬಿಟ್ಟ ಕಾನ್ಫಿಡೆಂಟ್ ಗ್ರೂಪ್ ಸಂಸ್ಥಾಪಕ ಸಿ.ಜೆ. ರಾಯ್: ಐಟಿ ದಾಳಿ ಒತ್ತಡದಿಂದ ಆತ್ಮಹತ್ಯೆ ಶಂಕೆ

ಬೆಂಗಳೂರು: ಖ್ಯಾತ ರಿಯಲ್ ಎಸ್ಟೇಟ್ ಉದ್ಯಮಿ, ಕಾನ್ಫಿಡೆಂಟ್ ಗ್ರೂಪ್ (Confident Group) ಅಧ್ಯಕ್ಷ ಡಾ. ಸಿ.ಜೆ. ರಾಯ್ ಅವರು ಶುಕ್ರವಾರ ಬೆಂಗಳೂರಿನ ತಮ್ಮ ಕಚೇರಿಯಲ್ಲಿ ಗನ್ ನಿಂದ ಶೂಟ್ ಮಾಡಿಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ.  ಕೇರಳ...

ಕಾಂಗ್ರೆಸ್ ಆಳ್ವಿಕೆಯಲ್ಲಿ ನುಸುಳಲುಕೋರರು ಬಹುಸಂಖ್ಯಾತರಾದರು; ನುಸುಳುಕೋರರಿಂದ ಅಸ್ಸಾಂ ರಕ್ಷಿಸಲು ಬಿಜೆಪಿಗೆ ಮತ ಹಾಕಿ: ಅಮಿತ್ ಶಾ

ಧೇಮಾಜಿ (ಅಸ್ಸಾಂ): ಕಾಂಗ್ರೆಸ್ ಆಳ್ವಿಕೆಯಲ್ಲಿ ಅಸ್ಸಾಂನ ಜನಸಂಖ್ಯಾಶಾಸ್ತ್ರ ಬದಲಾಗಿದೆ ಎಂದು ಹೇಳಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ , ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ನೇತೃತ್ವದ ಸರ್ಕಾರ ಈ ಪ್ರವೃತ್ತಿಯನ್ನು...

ಕೊಲ್ಕತ್ತಾ ಅಗ್ನಿ ಅವಘಡ| ಈವರೆಗೆ ವಾವ್ ಮೊಮೋ ಕಂಪನಿ ಗೋದಾಮು ಸೇರಿದಂತೆ ಇತರೆಡೆ 21 ಜನರು ಸಾವನ್ನಪ್ಪಿರುವ ಮಾಹಿತಿ ಲಭ್ಯ  

ಜನವರಿ 26 ರ ಮುಂಜಾನೆ ಕೋಲ್ಕತ್ತಾದ ಆನಂದಪುರ ಪ್ರದೇಶದಲ್ಲಿ ಸಂಭವಿಸಿದ ಭೀಕರ ಬೆಂಕಿ ಅಪಘಾತದಲ್ಲಿ ಸಾವನ್ನಪ್ಪಿದವರ ಸಂಖ್ಯೆ ಗುರುವಾರ 21 ಕ್ಕೆ ಏರಿದ್ದು, 28 ಜನರು ಇನ್ನೂ ನಾಪತ್ತೆಯಾಗಿದ್ದಾರೆ.  ಬೆಂಕಿಯ ಅವಘಡದಲ್ಲಿ ಎರಡು ಗೋದಾಮುಗಳು...

ಮುಟ್ಟಿನ ಆರೋಗ್ಯ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ : ಸುಪ್ರೀಂ ಕೋರ್ಟ್

ಮುಟ್ಟಿನ ಆರೋಗ್ಯ ಸಂವಿಧಾನದ 21ನೇ ವಿಧಿಯಡಿ ಖಾತ್ರಿಪಡಿಸಿದ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ ಎಂದು ಸುಪ್ರೀಂ ಕೋರ್ಟ್ ಶುಕ್ರವಾರ (ಜ.30) ಮಹತ್ವದ ತೀರ್ಪು ನೀಡಿದೆ. ಎಲ್ಲಾ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ ಸರ್ಕಾರಿ,...

ಅತ್ಯಾಚಾರ ಪ್ರಕರಣದಲ್ಲಿ ಎಸ್‌ಪಿ ನಾಯಕ ಮೊಯಿದ್ ಖಾನ್ ಖುಲಾಸೆ: ಬಂಧನದ ಎರಡು ವರ್ಷಗಳ ನಂತರ ಬುಲ್ಡೋಜರ್ ನಿಂದ ಮನೆ ಕೆಡವಿದ್ದ ಯೋಗಿ ಸರ್ಕಾರ

2024 ರಲ್ಲಿ ಅಪ್ರಾಪ್ತ ಬಾಲಕಿಯ ಮೇಲೆ ನಡೆದ ಸಾಮೂಹಿಕ ಅತ್ಯಾಚಾರ ಪ್ರಕರಣದಲ್ಲಿ ಸಮಾಜವಾದಿ ಪಕ್ಷದ ನಾಯಕ ಮೊಯಿದ್ ಖಾನ್ ಅವರನ್ನು ಉತ್ತರ ಪ್ರದೇಶದ ಅಯೋಧ್ಯೆಯ ಪೋಕ್ಸೋ ನ್ಯಾಯಾಲಯವು ಖುಲಾಸೆಗೊಳಿಸಿದೆ.  ಅಪ್ರಾಪ್ತ ಬಾಲಕಿಯ ಮೇಲೆ ನಡೆದ...

ಸಿಎಂ ಸಿದ್ದರಾಮಯ್ಯ, ಡಿಕೆಶಿ ವಿರುದ್ಧ ‘ಸ್ಕ್ಯಾಮ್ ಲಾರ್ಡ್’ ಪೋಸ್ಟ್: ಕರ್ನಾಟಕ ಬಿಜೆಪಿ ಎಕ್ಸ್ ಹ್ಯಾಂಡಲ್ ವಿರುದ್ಧ ಪ್ರಕರಣ ದಾಖಲು

ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಮತ್ತು ಇತರ ಸಚಿವರನ್ನು ಗುರಿಯಾಗಿಸಿಕೊಂಡು "ಮಾನಹಾನಿಕರ" ಪೋಸ್ಟ್ ಪೋಸ್ಟ್ ಮಾಡಿದ್ದಕ್ಕಾಗಿ ಮತ್ತು ರಾಜ್ಯವನ್ನು "ಲೂಟಿ" ಮಾಡುವಲ್ಲಿ ಅವರು ಭಾಗಿಯಾಗಿದ್ದಾರೆ ಎಂದು ಆರೋಪಿಸಿ ಬಿಜೆಪಿಯ 'ಎಕ್ಸ್'...

‘ನೀವು ಮುಂದೆ ಬರಲು ಸಿದ್ಧರಿದ್ದೀರಾ, ಅಥವಾ ಟ್ವೀಟ್ ಮಾಡುತ್ತಲೇ ಇರುತ್ತೀರಾ?’; ಮೋಹನ್ ದಾಸ್ ಪೈಗೆ ರಾಮಲಿಂಗಾರೆಡ್ಡಿ ಓಪನ್ ಚಾಲೆಂಜ್..!

ಬೆಂಗಳೂರಿನಲ್ಲಿ ಬಿಎಂಟಿಸಿ (BMTC) ಬಸ್‌ಗಳ ಕೊರತೆಯನ್ನು ಎತ್ತಿ, ಖಾಸಗಿ ಕಂಪನಿಗಳಿಗೆ ನಗರ ಬಸ್ ಸೇವೆಗೆ ಅವಕಾಶ ನೀಡಬೇಕು ಎಂದು ಸಲಹೆ ನೀಡಿದ್ದ, ಮೋಹನ್ ದಾಸ್ ಪೈ ಹೇಳಿಕೆಗೆ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ...