Homeಮುಖಪುಟಉತ್ತರಾಖಂಡ ಸಿಎಂ ಇಂದು ಘೋಷಣೆ ಸಾಧ್ಯತೆ; ಗೋವಾ ಕುರಿತು ಸುಳಿವು ನೀಡದ BJP!

ಉತ್ತರಾಖಂಡ ಸಿಎಂ ಇಂದು ಘೋಷಣೆ ಸಾಧ್ಯತೆ; ಗೋವಾ ಕುರಿತು ಸುಳಿವು ನೀಡದ BJP!

- Advertisement -
- Advertisement -

ಬಿಜೆಪಿ ಉತ್ತರಾಖಂಡಕ್ಕೆ ತನ್ನ ಮುಖ್ಯಮಂತ್ರಿ ಆಯ್ಕೆಯನ್ನು ಸೋಮವಾರ ಪ್ರಕಟಿಸುವ ಸಾಧ್ಯತೆಯಿದೆ. ಬೆಳಗ್ಗೆ 11 ಗಂಟೆಗೆ ಶಾಸಕರು ಪ್ರಮಾಣ ವಚನ ಸ್ವೀಕರಿಸಲಿದ್ದಾರೆ. ರಾಜ್ಯದಲ್ಲಿ ಪಕ್ಷದ ವೀಕ್ಷಕರಾಗಿರುವ ಒಕ್ಕೂಟ ಸರ್ಕಾರದ ಸಚಿವ ರಾಜನಾಥ್ ಸಿಂಗ್ ಮತ್ತು ಮೀನಾಕ್ಷಿ ಲೇಖಿ ಅವರು ಮುಖ್ಯಮಂತ್ರಿ ಹೆಸರು ಘೋಷಣೆಯ ಮೇಲ್ವಿಚಾರಣೆ ನಡೆಸಲಿದ್ದಾರೆ. ಆದರೆ ಗೋವಾ ಮುಖ್ಯಮಂತ್ರಿಯ ಬಗ್ಗೆ ಬಿಜೆಪಿ ಇನ್ನೂ ಸಂದಿಗ್ಧ ಪರಿಸ್ಥಿತಿಯಲ್ಲಿದೆ ಎನ್ನಲಾಗಿದೆ.

ನಿನ್ನೆಯಷ್ಟೆ ಗೃಹ ಸಚಿವ ಅಮಿತ್ ಶಾ ಅವರು ಉತ್ತರಾಖಂಡದ ಹಂಗಾಮಿ ಮುಖ್ಯಮಂತ್ರಿ ಪುಷ್ಕರ್ ಸಿಂಗ್ ಧಾಮಿ ಮತ್ತು ಪಕ್ಷದ ಮುಖ್ಯಸ್ಥ ಜೆಪಿ ನಡ್ಡಾ ಸೇರಿದಂತೆ ಬಿಜೆಪಿಯ ಹಿರಿಯ ನಾಯಕರನ್ನು ದೆಹಲಿಯಲ್ಲಿ ಭೇಟಿಯಾಗಿ ರಾಜ್ಯದಲ್ಲಿ ಸರ್ಕಾರ ರಚನೆಯ ಕುರಿತು ಚರ್ಚಿಸಿದರು.

70 ಸದಸ್ಯ ಬಲದ ಉತ್ತರಾಖಂಡ ವಿಧಾನಸಭೆಯಲ್ಲಿ ಬಿಜೆಪಿ 47 ಸ್ಥಾನಗಳನ್ನು ಗೆದ್ದು ರಾಜ್ಯದಲ್ಲಿ ತನ್ನ ಸತತ ಎರಡನೇ ಅವಧಿಯನ್ನು ಭದ್ರಪಡಿಸಿಕೊಂಡಿದೆ. ಆದಾಗ್ಯೂ, ಧಾಮಿ ಅವರು ಖತಿಮಾ ಕ್ಷೇತ್ರದಿಂದ ಚುನಾವಣೆಯಲ್ಲಿ ಸೋತಿದ್ದಾರೆ.

ಇದನ್ನೂ ಓದಿ: ಕಾಂಗ್ರೆಸ್ ವೈಫಲ್ಯಗಳ ಮೇಲಿನ ಕೋಪ; ಪಂಜಾಬ್‌ಅನ್ನು ಸುಲಭವಾಗಿ ಒಲಿಸಿಕೊಂಡ ಆಪ್

ಉತ್ತರಾಖಂಡದ ಮುಖ್ಯಮಂತ್ರಿ ಹುದ್ದೆಗೆ ಹಾಲಿ ಮುಖ್ಯಮಂತ್ರಿ ಧಾಮಿ, ಬಿಜೆಪಿಯ ಉತ್ತರಾಖಂಡದ ಪ್ರಧಾನ ಕಾರ್ಯದರ್ಶಿ ಸುರೇಶ್ ಭಟ್, ಪಕ್ಷದ ಸಂಸದ ಅನಿಲ್ ಬಲುನಿ; ಶಾಸಕರಾದ ಧನ್ ಸಿಂಗ್ ರಾವತ್, ಸತ್ಪಾಲ್ ಮಹಾರಾಜ್ ಮತ್ತು ರಿತು ಖಂಡೂರಿ ಮತ್ತು ಪಕ್ಷದ ಸಂಸದ ರಮೇಶ್ ಪೋಖ್ರಿಯಾಲ್ ನಿಶಾಂಕ್ ಆಕಾಂಕ್ಷಿಗಳಾಗಿದ್ದಾರೆ.

ಈ ಮಧ್ಯೆ, ಗೋವಾದಲ್ಲಿ ಪ್ರಮೋದ್ ಸಾವಂತ್ ಮತ್ತು ವಿಶ್ವಜಿತ್ ರಾಣೆ ನಡುವೆ ಪೈಪೋಟಿ ನಡೆಯುತ್ತಿದೆ. ಆದರೆ ಆಯ್ಕೆಯ ಬಗ್ಗೆ ಬಿಜೆಪಿ ಇನ್ನೂ ಸಂದಿಗ್ಧ ಪರಿಸ್ಥಿತಿಯಲ್ಲಿದೆ ಎನ್ನಲಾಗಿದೆ. ಹಾಲಿ ಮುಖ್ಯಮಂತ್ರಿ ಪ್ರಮೋದ್‌ ಸಾವಂತ್ ಅವರು ಮುಖ್ಯಮಂತ್ರಿಯಾಗಿ ಎರಡನೇ ಅವಧಿಗೆ ಅಧಿಕಾರ ಪಡೆಯಲಿದ್ದಾರೆ ಎಂದು ಮೂಲಗಳನ್ನು ಉಲ್ಲೇಖಿಸಿ ಎನ್‌ಡಿಟಿವಿ ವರದಿ ಮಾಡಿದೆ. ಸರ್ಕಾರ ರಚನೆಗೆ ಹಕ್ಕು ಮಂಡಿಸಲು ಬಿಜೆಪಿ ರಾಜ್ಯಪಾಲರನ್ನು ಭೇಟಿ ಮಾಡುವ ಮುನ್ನಾ ದಿನವಾದ ಇಂದು ನಿರ್ಧಾರ ಕೈಗೊಳ್ಳುವ ಸಾಧ್ಯತೆ ಇದೆ.

ಉತ್ತರ ಪ್ರದೇಶದಲ್ಲಿ ಮುಖ್ಯಮಂತ್ರಿ ಆದಿತ್ಯನಾಥ್ ಶುಕ್ರವಾರ ಎರಡನೇ ಅವಧಿಗೆ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ ಎಂದು ಬಿಜೆಪಿ ಕಳೆದ ವಾರದ ಆರಂಭದಲ್ಲಿ ಹೇಳಿತ್ತು. ಆದರೆ ಅವರ ಸಂಪುಟದ ಗಾತ್ರ ಅಥವಾ ವಿವಿಧ ಸಚಿವಾಲಯಗಳಿಗೆ ಹೆಸರುಗಳನ್ನು ಅಂತಿಮಗೊಳಿಸಲಾಗಿಲ್ಲ.

ಇದನ್ನೂ ಓದಿ: ದೋರನಹಳ್ಳಿ ಸಿಲಿಂಡರ್ ಸ್ಪೋಟ ಪ್ರಕರಣ: ಸಂತ್ರಸ್ತರಿಗೆ ತಲಾ 5 ಲಕ್ಷ ರೂ.ಪರಿಹಾರ ವಿತರಿಸಿದ ಸಿಎಂ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮುಖ್ಯಮಂತ್ರಿ ಸುವೇಂದು ಅಧಿಕಾರಿಗೆ ನೋಟಿಸ್ ಜಾರಿ ಮಾಡಿದ ಕಲ್ಕತ್ತಾ ಹೈಕೋರ್ಟ್

ಭವಾನಿಪುರ ವಿಧಾನಸಭಾ ಕ್ಷೇತ್ರದ ಇತ್ತೀಚಿನ ಚುನಾವಣೆಯಲ್ಲಿ ಸುವೇಂದು ಅಧಿಕಾರಿ ಅವರ ಆಯ್ಕೆಯನ್ನು ಪ್ರಶ್ನಿಸಿ ಮಾಜಿ ಮುಖ್ಯಮಂತ್ರಿ ಹಾಗೂ ಟಿಎಂಸಿ (TMC) ನಾಯಕಿ ಮಮತಾ ಬ್ಯಾನರ್ಜಿ ಸಲ್ಲಿಕೆ ಮಾಡಿರುವ ಚುನಾವಣಾ ಅರ್ಜಿಗೆ ಸಂಬಂಧಿಸಿದಂತೆ ಕಲ್ಕತ್ತಾ...

TMC ಅಧ್ಯಕ್ಷ ಸ್ಥಾನದಿಂದ ಮಮತಾ ಬ್ಯಾನರ್ಜಿಯನ್ನು ಉಚ್ಚಾಟಿಸಿದ ತೃಣಮೂಲ ಬಂಡಾಯ ಶಾಸಕರು

ಪಶ್ಚಿಮ ಬಂಗಾಳದ ವಿಧಾನಸಭಾ ಚುನಾವಣಾ ಸೋಲಿನ ಬೆನ್ನಲ್ಲೇ ತೃಣಮೂಲ ಕಾಂಗ್ರೆಸ್ ಪಕ್ಷವು ಇತಿಹಾಸದಲ್ಲೇ ಕಾಣದ ಅತ್ಯಂತ ದೊಡ್ಡ ಬಂಡಾಯಕ್ಕೆ ಸಾಕ್ಷಿಯಾಗಿದೆ. ಬಂಡಾಯ ಶಾಸಕರ ನೇತೃತ್ವ ವಹಿಸಿರುವ ಋತಬ್ರತಾ ಬ್ಯಾನರ್ಜಿ ಸೋಮವಾರ ಮಮತಾ ಬ್ಯಾನರ್ಜಿ...

ಯುಪಿ: ಮೊಹರಂ ಮೆರವಣಿಗೆಯಲ್ಲಿ ಪಿತೂರಿ: ಪಾಕ್ ಪರ ಘೋಷಣೆಯ ಸುಳ್ಳು ವಿಡಿಯೋ ಹರಿಬಿಟ್ಟ ಇಬ್ಬರು ಹಿಂದುತ್ವವಾದಿಗಳ ಬಂಧನ 

ಬರೇಲಿ (ಉತ್ತರ ಪ್ರದೇಶ): ಮೊಹರಂ ಮೆರವಣಿಗೆಯೊಂದರಲ್ಲಿ "ಪಾಕಿಸ್ತಾನ್ ಜಿಂದಾಬಾದ್" ಎಂದು ದೇಶವಿರೋಧಿ ಘೋಷಣೆ ಕೂಗಲಾಗಿದೆ ಎಂಬ ನಕಲಿ ವೀಡಿಯೋ ಸೃಷ್ಟಿಸಿ, ಮುಸ್ಲಿಂ ಸಮುದಾಯದ ಮೇಲೆ ಸುಳ್ಳು ಆರೋಪ ಹೊರಿಸಲು ಯತ್ನಿಸಿದ ಇಬ್ಬರು ಹಿಂದುತ್ವವಾದಿ...

ಮಕ್ಕಳಿಗೆ ಆರ್‌ಎಸ್‌ಎಸ್‌ ತರಬೇತಿ ನೀಡುವುದನ್ನು ಟೀಕಿಸಿ ವಿಡಿಯೋ ಹಂಚಿಕೆ : ಯುವಕನನ್ನು ವಶಕ್ಕೆ ಪಡೆದ ಪೊಲೀಸರು!

ರಾಜಸ್ಥಾನದ ಜುಂಜುನು ಜಿಲ್ಲೆಯ ನವೀನ್ ಚೌಧರಿ ಎಂಬ 25 ವರ್ಷದ ಯುವಕ, ರಾಷ್ಟ್ರೀಯ ಸ್ವಯಂಸೇವಕ ಸಂಘ (ಆರ್‌ಎಸ್‌ಎಸ್‌) ಕುರಿತು ಸಾಮಾಜಿಕ ಜಾಲತಾಣ ಇನ್‌ಸ್ಟಾಗ್ರಾಮ್‌ನಲ್ಲಿ ವಿಡಿಯೋವೊಂದನ್ನು ಹಂಚಿಕೊಂಡಿದ್ದರು. 'ಜುಂಜುನು ಎಕ್ಸ್‌ಪ್ರೆಸ್' ಎಂಬ ಇನ್‌ಸ್ಟಾಗ್ರಾಮ್ ಪೇಜ್‌ನಲ್ಲಿ...

ಮುಂಗಾರು ಮಳೆ ಕೊರತೆ: ಇಡೀ ದೇಶದಲ್ಲಿ ಆತಂಕದ ಕಾರ್ಮೋಡ

ಭಾರತದ ಆಕಾಶದಲ್ಲಿ ಸದ್ಯ ಮೂಡುತ್ತಿರುವ ಉಪಗ್ರಹ ಚಿತ್ರಗಳು ಮತ್ತು ಹವಾಮಾನ ಇಲಾಖೆಯ ದತ್ತಾಂಶಗಳು ದೇಶಕ್ಕೆ ದೊಡ್ಡ ಗಂಡಾಂತರದ ಮುನ್ಸೂಚನೆ ನೀಡುತ್ತಿವೆ. ಕೃಷಿ ಚಟುವಟಿಕೆಗಳ ಅತ್ಯಂತ ನಿರ್ಣಾಯಕ ಅವಧಿಯಾದ ಜೂನ್ ತಿಂಗಳಲ್ಲೇ ಮುಂಗಾರು ಮಳೆ...

ನೀಟ್ ಪರೀಕ್ಷೆ ಪದೇ ಪದೇ ಬರೆಯುವಂತೆ ಮಾಡಿದ್ದು ಯಾರು? : ಬಿ.ಕೆ ಹರಿಪ್ರಸಾದ್

ನೀಟ್ ಪರೀಕ್ಷೆ ಪದೇ ಪದೇ ಬರೆಯುವಂತೆ ಮಾಡಿದ್ದು ಯಾರು? ಬಿಜೆಪಿ ನಾಯಕರ ಆರೋಪಗಳನ್ನು ನೋಡಿದರೆ, ತಪ್ಪು ಮಾಡಿದವರೇ ಉಪದೇಶ ಮಾಡುವ ಸ್ಥಿತಿಗೆ ಬಂದಂತಿದೆ ಎಂದು ಕೆಪಿಸಿಸಿ ನೂತನ ಅಧ್ಯಕ್ಷ ಬಿ.ಕೆ ಹರಿಪ್ರಸಾದ್ ಹೇಳಿದರು....

ಎಸ್‌ಐಆರ್‌ನಲ್ಲಿ ಕೈಬಿಟ್ಟ ವ್ಯಕ್ತಿ ಕುರಿತು ಮಹತ್ವದ ಹೇಳಿಕೆ ನೀಡಿದ ಸುಪ್ರೀಂ ಕೋರ್ಟ್

ವಿಶೇಷ ತೀವ್ರ ಪರಿಷ್ಕರಣೆಯ (Special Intensive Revision) ಸಂದರ್ಭದಲ್ಲಿ ಮತದಾರರ ಪಟ್ಟಿಯಿಂದ ಹೆಸರು ಕೈಬಿಟ್ಟಿರುವ ಅಥವಾ ಹೊರಗಿಟ್ಟಿರುವ ಬಂಗಾಳದ ಮುರ್ಷಿದಾಬಾದ್‌ನ 75 ವರ್ಷದ ವಕೀಲರೊಬ್ಬರು "ಪಶ್ಚಿಮ ಬಂಗಾಳದ ನಿಜವಾದ ಮತ್ತು ವಿಶ್ವಾಸಾರ್ಹ ನಾಗರಿಕ" ನಂತೆ...

ನೀಟ್ ಅಕ್ರಮ, ವ್ಯವಸ್ಥೆಯ ವೈಫಲ್ಯಕ್ಕೆ ಮತ್ತೊಂದು ಬಲಿ: ಮರು ಪರೀಕ್ಷೆ ಹಿಂದಿನ ದಿನವೇ ಆತ್ಮಹತ್ಯೆಗೆ ಶರಣಾದ ಪ್ರತಿಭಾವಂತ ವಿದ್ಯಾರ್ಥಿನಿ 

ಹೈದರಾಬಾದ್: ದೇಶದಲ್ಲಿ ವೈದ್ಯಕೀಯ ಶಿಕ್ಷಣದ ಪ್ರವೇಶಾತಿಗಾಗಿ ನಡೆಯುವ ರಾಷ್ಟ್ರೀಯ ಅರ್ಹತಾ ಮತ್ತು ಪ್ರವೇಶ ಪರೀಕ್ಷೆಯ (NEET) ಸುತ್ತ ಹಬ್ಬಿರುವ ಅಕ್ರಮಗಳ ಜಾಲ ಮತ್ತು ವ್ಯವಸ್ಥೆಯ ನಿರಂತರ ಗೊಂದಲಗಳು ಮತ್ತೊಂದು ಯುವ ಜೀವವನ್ನು ಬಲಿಪಡೆದಿವೆ.  ಜೂನ್...

ಸತತ ಮೂರನೇ ದಿನವೂ ಜಂತರ್ ಮಂತರ್‌ನಲ್ಲಿ ಮುಂದುವರೆದ ಸಿಜೆಪಿ ಪ್ರತಿಭಟನೆ; ಪ್ರಧಾನ್ ರಾಜೀನಾಮೆಗೆ ಪಟ್ಟು

ಪರೀಕ್ಷಾ ಅಕ್ರಮಗಳು ಮತ್ತು ಮೇ 3 ರ ನೀಟ್ ಪತ್ರಿಕೆ ಸೋರಿಕೆಯ ವಿರುದ್ಧ ತಮ್ಮ ಪ್ರತಿಭಟನೆಯನ್ನು ಮುಂದುವರಿಸಿರುವ ಜಿರಳೆ ಜನತಾ ಪಕ್ಷ (ಸಿಜೆಪಿ) ಸೋಮವಾರ ಸತತ ಮೂರನೇ ದಿನವೂ ಜಂತರ್ ಮಂತರ್‌ನಲ್ಲಿಯೇ ಕುಳಿತಿದ್ದಾರೆ. ಶನಿವಾರ...

ಸಂವಿಧಾನದ ಬುಡಕ್ಕೆ ಕೊಡಲಿ ಏಟು: ಆರ್‌ಎಸ್‌ಎಸ್-ಬಿಜೆಪಿಯ ಷಡ್ಯಂತ್ರ ಸೋಲಿಸಲು ಎರಡನೇ ಸ್ವಾತಂತ್ರ್ಯ ಸಂಗ್ರಾಮ ಅನಿವಾರ್ಯ – ಬಿ.ಕೆ. ಹರಿಪ್ರಸಾದ್

ಎಸ್‌ಐಆರ್ (SIR) ವಿರೋಧಿ ಹೋರಾಟದಲ್ಲಿ ನಮ್ಮ ಪಕ್ಷ ನಿಮ್ಮ ಜೊತೆಗಿದೆ ಎಂದು ಹೇಳಲು ಸರ್ಕಾರದ ಪ್ರತಿನಿಧಿಯಾಗಿ ನಾನು ಇಲ್ಲಿ ಬಂದಿದ್ದೇನೆ. ನೀವು ಮಂಡಿಸಿರುವ ಹಕ್ಕೊತ್ತಾಯಗಳ ಕುರಿತು ನೂತನ ಮುಖ್ಯಮಂತ್ರಿಗಳು, ಸಿದ್ದರಾಮಯ್ಯ ಸೇರಿದಂತೆ ಪಕ್ಷದ...