Homeಮುಖಪುಟಉತ್ತರಾಖಂಡ ಸಿಎಂ ಇಂದು ಘೋಷಣೆ ಸಾಧ್ಯತೆ; ಗೋವಾ ಕುರಿತು ಸುಳಿವು ನೀಡದ BJP!

ಉತ್ತರಾಖಂಡ ಸಿಎಂ ಇಂದು ಘೋಷಣೆ ಸಾಧ್ಯತೆ; ಗೋವಾ ಕುರಿತು ಸುಳಿವು ನೀಡದ BJP!

- Advertisement -
- Advertisement -

ಬಿಜೆಪಿ ಉತ್ತರಾಖಂಡಕ್ಕೆ ತನ್ನ ಮುಖ್ಯಮಂತ್ರಿ ಆಯ್ಕೆಯನ್ನು ಸೋಮವಾರ ಪ್ರಕಟಿಸುವ ಸಾಧ್ಯತೆಯಿದೆ. ಬೆಳಗ್ಗೆ 11 ಗಂಟೆಗೆ ಶಾಸಕರು ಪ್ರಮಾಣ ವಚನ ಸ್ವೀಕರಿಸಲಿದ್ದಾರೆ. ರಾಜ್ಯದಲ್ಲಿ ಪಕ್ಷದ ವೀಕ್ಷಕರಾಗಿರುವ ಒಕ್ಕೂಟ ಸರ್ಕಾರದ ಸಚಿವ ರಾಜನಾಥ್ ಸಿಂಗ್ ಮತ್ತು ಮೀನಾಕ್ಷಿ ಲೇಖಿ ಅವರು ಮುಖ್ಯಮಂತ್ರಿ ಹೆಸರು ಘೋಷಣೆಯ ಮೇಲ್ವಿಚಾರಣೆ ನಡೆಸಲಿದ್ದಾರೆ. ಆದರೆ ಗೋವಾ ಮುಖ್ಯಮಂತ್ರಿಯ ಬಗ್ಗೆ ಬಿಜೆಪಿ ಇನ್ನೂ ಸಂದಿಗ್ಧ ಪರಿಸ್ಥಿತಿಯಲ್ಲಿದೆ ಎನ್ನಲಾಗಿದೆ.

ನಿನ್ನೆಯಷ್ಟೆ ಗೃಹ ಸಚಿವ ಅಮಿತ್ ಶಾ ಅವರು ಉತ್ತರಾಖಂಡದ ಹಂಗಾಮಿ ಮುಖ್ಯಮಂತ್ರಿ ಪುಷ್ಕರ್ ಸಿಂಗ್ ಧಾಮಿ ಮತ್ತು ಪಕ್ಷದ ಮುಖ್ಯಸ್ಥ ಜೆಪಿ ನಡ್ಡಾ ಸೇರಿದಂತೆ ಬಿಜೆಪಿಯ ಹಿರಿಯ ನಾಯಕರನ್ನು ದೆಹಲಿಯಲ್ಲಿ ಭೇಟಿಯಾಗಿ ರಾಜ್ಯದಲ್ಲಿ ಸರ್ಕಾರ ರಚನೆಯ ಕುರಿತು ಚರ್ಚಿಸಿದರು.

70 ಸದಸ್ಯ ಬಲದ ಉತ್ತರಾಖಂಡ ವಿಧಾನಸಭೆಯಲ್ಲಿ ಬಿಜೆಪಿ 47 ಸ್ಥಾನಗಳನ್ನು ಗೆದ್ದು ರಾಜ್ಯದಲ್ಲಿ ತನ್ನ ಸತತ ಎರಡನೇ ಅವಧಿಯನ್ನು ಭದ್ರಪಡಿಸಿಕೊಂಡಿದೆ. ಆದಾಗ್ಯೂ, ಧಾಮಿ ಅವರು ಖತಿಮಾ ಕ್ಷೇತ್ರದಿಂದ ಚುನಾವಣೆಯಲ್ಲಿ ಸೋತಿದ್ದಾರೆ.

ಇದನ್ನೂ ಓದಿ: ಕಾಂಗ್ರೆಸ್ ವೈಫಲ್ಯಗಳ ಮೇಲಿನ ಕೋಪ; ಪಂಜಾಬ್‌ಅನ್ನು ಸುಲಭವಾಗಿ ಒಲಿಸಿಕೊಂಡ ಆಪ್

ಉತ್ತರಾಖಂಡದ ಮುಖ್ಯಮಂತ್ರಿ ಹುದ್ದೆಗೆ ಹಾಲಿ ಮುಖ್ಯಮಂತ್ರಿ ಧಾಮಿ, ಬಿಜೆಪಿಯ ಉತ್ತರಾಖಂಡದ ಪ್ರಧಾನ ಕಾರ್ಯದರ್ಶಿ ಸುರೇಶ್ ಭಟ್, ಪಕ್ಷದ ಸಂಸದ ಅನಿಲ್ ಬಲುನಿ; ಶಾಸಕರಾದ ಧನ್ ಸಿಂಗ್ ರಾವತ್, ಸತ್ಪಾಲ್ ಮಹಾರಾಜ್ ಮತ್ತು ರಿತು ಖಂಡೂರಿ ಮತ್ತು ಪಕ್ಷದ ಸಂಸದ ರಮೇಶ್ ಪೋಖ್ರಿಯಾಲ್ ನಿಶಾಂಕ್ ಆಕಾಂಕ್ಷಿಗಳಾಗಿದ್ದಾರೆ.

ಈ ಮಧ್ಯೆ, ಗೋವಾದಲ್ಲಿ ಪ್ರಮೋದ್ ಸಾವಂತ್ ಮತ್ತು ವಿಶ್ವಜಿತ್ ರಾಣೆ ನಡುವೆ ಪೈಪೋಟಿ ನಡೆಯುತ್ತಿದೆ. ಆದರೆ ಆಯ್ಕೆಯ ಬಗ್ಗೆ ಬಿಜೆಪಿ ಇನ್ನೂ ಸಂದಿಗ್ಧ ಪರಿಸ್ಥಿತಿಯಲ್ಲಿದೆ ಎನ್ನಲಾಗಿದೆ. ಹಾಲಿ ಮುಖ್ಯಮಂತ್ರಿ ಪ್ರಮೋದ್‌ ಸಾವಂತ್ ಅವರು ಮುಖ್ಯಮಂತ್ರಿಯಾಗಿ ಎರಡನೇ ಅವಧಿಗೆ ಅಧಿಕಾರ ಪಡೆಯಲಿದ್ದಾರೆ ಎಂದು ಮೂಲಗಳನ್ನು ಉಲ್ಲೇಖಿಸಿ ಎನ್‌ಡಿಟಿವಿ ವರದಿ ಮಾಡಿದೆ. ಸರ್ಕಾರ ರಚನೆಗೆ ಹಕ್ಕು ಮಂಡಿಸಲು ಬಿಜೆಪಿ ರಾಜ್ಯಪಾಲರನ್ನು ಭೇಟಿ ಮಾಡುವ ಮುನ್ನಾ ದಿನವಾದ ಇಂದು ನಿರ್ಧಾರ ಕೈಗೊಳ್ಳುವ ಸಾಧ್ಯತೆ ಇದೆ.

ಉತ್ತರ ಪ್ರದೇಶದಲ್ಲಿ ಮುಖ್ಯಮಂತ್ರಿ ಆದಿತ್ಯನಾಥ್ ಶುಕ್ರವಾರ ಎರಡನೇ ಅವಧಿಗೆ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ ಎಂದು ಬಿಜೆಪಿ ಕಳೆದ ವಾರದ ಆರಂಭದಲ್ಲಿ ಹೇಳಿತ್ತು. ಆದರೆ ಅವರ ಸಂಪುಟದ ಗಾತ್ರ ಅಥವಾ ವಿವಿಧ ಸಚಿವಾಲಯಗಳಿಗೆ ಹೆಸರುಗಳನ್ನು ಅಂತಿಮಗೊಳಿಸಲಾಗಿಲ್ಲ.

ಇದನ್ನೂ ಓದಿ: ದೋರನಹಳ್ಳಿ ಸಿಲಿಂಡರ್ ಸ್ಪೋಟ ಪ್ರಕರಣ: ಸಂತ್ರಸ್ತರಿಗೆ ತಲಾ 5 ಲಕ್ಷ ರೂ.ಪರಿಹಾರ ವಿತರಿಸಿದ ಸಿಎಂ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಉಪಚುನಾವಣೆ : ಬಿಹಾರದ ಬಂಕಿಪುರದಲ್ಲಿ ಪ್ರಶಾಂತ್ ಕಿಶೋರ್‌ಗೆ ಐತಿಹಾಸಿಕ ಗೆಲುವು; ಇನ್ನೆರಡು ಕ್ಷೇತ್ರಗಳು ಕಾಂಗ್ರೆಸ್-ಬಿಜೆಪಿ ಪಾಲು

ಬಿಹಾರದ ಬಂಕಿಪುರ, ಗುಜರಾತ್‌ನ ಮಂಜಲ್‌ಪುರ ಮತ್ತು ಮಧ್ಯಪ್ರದೇಶದ ದಾಟಿಯಾ ವಿಧಾನಸಭಾ ಕ್ಷೇತ್ರಗಳಿಗೆ ಜುಲೈ 30ರಂದು ನಡೆದ ಉಪಚುನಾವಣೆಯ ಫಲಿತಾಂಶ ಸೋಮವಾರ (ಆ.3) ಹೊರಬಿದ್ದಿದ್ದಿದೆ. ಬಿಜೆಪಿಯ ಭದ್ರಕೋಟೆ ಎನಿಸಿಕೊಂಡಿದ್ದ, ಕಳೆದ 31 ವರ್ಷಗಳಿಂದ ಬಿಜೆಪಿಯೇ...

‘ಪಂಕ್ಚರ್-ತಲಾ ಬನಾನೆ ವಾಲೆಗಳೇ ಹೆಚ್ಚು’: ನೀಟ್ ಅಕ್ರಮಗಳ ವಿರುದ್ಧ ಪ್ರತಿಭಟಿಸಿದವರ ವಿರುದ್ಧ ನಾಲಿಗೆ ಹರಿಬಿಟ್ಟ ಬಿಜೆಪಿ ನಾಯಕ ರಮೇಶ್ ಬಿಧು

ದೆಹಲಿಯ ಜಂತರ್ ಮಂತರ್‌ನಲ್ಲಿ ‘ನೀಟ್’ (NEET) ಪರೀಕ್ಷೆಯ ಅಕ್ರಮಗಳ ವಿರುದ್ಧ ಧ್ವನಿಯೆತ್ತಿದ ಯುವಜನತೆ ಮತ್ತು ವಿದ್ಯಾರ್ಥಿಗಳ ಹೋರಾಟವನ್ನು ದಮನ ಮಾಡಲು ಯತ್ನಿಸುತ್ತಿರುವ ಬಿಜೆಪಿ, ಈಗ ಅವರ ವಿರುದ್ಧವೇ ಅತ್ಯಂತ ಕೀಳುಮಟ್ಟದ ಇಸ್ಲಾಮೋಫೋಬಿಕ್ ಮತ್ತು...

ಲೈಂಗಿಕ ಕಿರುಕುಳ ಪ್ರಕರಣದಲ್ಲಿ ಖುಲಾಸೆ : ಇಡೀ ವ್ಯವಸ್ಥೆಯೇ ಬ್ರಿಜ್ ಭೂಷಣ್‌ರನ್ನು ರಕ್ಷಿಸಿತು ಎಂದ ವಿನೇಶ್ ಫೋಗಟ್; ಮೇಲ್ಮನವಿ ಸಲ್ಲಿಸಲು ಮಹಿಳಾ ಕುಸ್ತಿಪಟುಗಳ ನಿರ್ಧಾರ

ಮಹಿಳಾ ಕುಸ್ತಿಪಟುಗಳಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪ ಎದುರಿಸುತ್ತಿದ್ದ ಭಾರತೀಯ ಕುಸ್ತಿ ಫೆಡರೇಶನ್ (WFI) ಮಾಜಿ ಅಧ್ಯಕ್ಷ ಹಾಗೂ ಬಿಜೆಪಿ ಮಾಜಿ ಸಂಸದ ಬ್ರಿಜ್ ಭೂಷಣ್ ಶರಣ್ ಸಿಂಗ್ ಅವರನ್ನು ದೆಹಲಿಯ ರೋಸ್...

ಕರ್ನಾಟಕದಲ್ಲಿ SIR ಬಿಹಾರ-ಬಂಗಾಳಕ್ಕಿಂತ ಭೀಕರ: ಆಗಸ್ಟ್ 4 ರಂದು ಜನಪರ ಸಂಘಟನೆಗಳಿಂದ ಮಹತ್ವದ ಮಾಧ್ಯಮಗೋಷ್ಠಿ

ಬೆಂಗಳೂರು: ಕರ್ನಾಟಕದಲ್ಲಿ ನಡೆಯುತ್ತಿರುವ ಎಸ್‌ಐಆರ್ (SIR) ಪ್ರಕ್ರಿಯೆಯು ಬಿಹಾರ ಮತ್ತು ಪಶ್ಚಿಮ ಬಂಗಾಳ ರಾಜ್ಯಗಳಿಗಿಂತಲೂ ಅತ್ಯಂತ ಭೀಕರ ರೂಪ ಪಡೆದುಕೊಳ್ಳುತ್ತಿದೆ ಎಂದು 'SIR ವಿರೋಧಿ ಜಾತ್ಯತೀತ ಪಕ್ಷಗಳು ಮತ್ತು ಜನಪರ ಸಂಘಟನೆಗಳ ಒಕ್ಕೂಟ'...

“ನೈರ್ಮಲ್ಯ ಕಾರ್ಮಿಕರು ಕೆಲಸ ಬಿಡಲು ಸಾಧ್ಯವಿಲ್ಲ”: ದೇಶಾದ್ಯಂತ ಪ್ರತಿಭಟನೆಗೆ DASAM ಬೆಂಬಲ, ಉದ್ಯೋಗ ಖಾಯಂಗೊಳಿಸಲು ತೀವ್ರ ಒತ್ತಾಯ

ನವದೆಹಲಿ: ಉದ್ಯೋಗ ಕ್ರಮಬದ್ಧಗೊಳಿಸುವಿಕೆ (ಖಾಯಂಗೊಳಿಸುವುದು), ನ್ಯಾಯಯುತ ವೇತನ, ಸಾಮಾಜಿಕ ಭದ್ರತೆ, ಸುರಕ್ಷಿತ ಕೆಲಸದ ವಾತಾವರಣ ಮತ್ತು ಕೆಲಸದ ಸ್ಥಳದಲ್ಲಿ ಮಾನವ ಘನತೆಯನ್ನು ಎತ್ತಿಹಿಡಿಯುವಂತೆ ಒತ್ತಾಯಿಸಿ ದೇಶದ ನಾನಾ ಭಾಗಗಳಲ್ಲಿ ನೈರ್ಮಲ್ಯ ಕಾರ್ಮಿಕರು ನಡೆಸುತ್ತಿರುವ...

ದ್ವೇಷ ಭಾಷಣ ಪ್ರಕರಣ: ಬಿಜೆಪಿ ನಾಯಕರಾದ ಅನುರಾಗ್‌ ಠಾಕೂರ್‌, ಪರ್ವೇಶ್‌ ವರ್ಮಾಗೆ ಕ್ಲೀನ್ ಚೀಟ್: ಪುನರ್ ಪರಿಶೀಲನಾ ಅರ್ಜಿ ವಜಾಗೊಳಿಸಿದ ಸುಪ್ರೀಂ

ನವದೆಹಲಿ: 2020ರ ದೆಹಲಿಯಲ್ಲಿ ನಡೆದ ಪೌರತ್ವ ತಿದ್ದುಪಡಿ ಕಾಯ್ದೆ (ಸಿಎಎ) ವಿರೋಧಿ ಪ್ರತಿಭಟನೆಗಳ ಸಂದರ್ಭದಲ್ಲಿ ಉದ್ರೇಕಕಾರಿ ಹಾಗೂ ದ್ವೇಷಪೂರಿತ ಭಾಷಣ ಮಾಡಿದ ಆರೋಪ ಹೊತ್ತಿದ್ದ ಬಿಜೆಪಿ ನಾಯಕರಾದ ಅನುರಾಗ್ ಠಾಕೂರ್ ಮತ್ತು ಪರ್ವೇಶ್‌...

ಕರ್ನಾಟಕ ಸಚಿವ ಸಂಪುಟ ವಿಸ್ತರಣೆ: ನೂತನ ಸಚಿವರ ಪಟ್ಟಿಗೆ ವರಿಷ್ಠರ ಅನುಮೋದನೆ: ಇಂದು ಸಂಜೆ 4:05 ಕ್ಕೆ ಪ್ರಮಾಣ ವಚನ

ಬಹುನಿರೀಕ್ಷಿತ ಕರ್ನಾಟಕ ರಾಜ್ಯ ಸಚಿವ ಸಂಪುಟ ವಿಸ್ತರಣೆಗೆ ಕೊನೆಗೂ ಮುಹೂರ್ತ ನಿಗದಿಯಾಗಿದ್ದು, ಕಾಂಗ್ರೆಸ್ ಹೈಕಮಾಂಡ್ ನೂತನ ಸಚಿವರ ಪಟ್ಟಿಗೆ ಅಧಿಕೃತ ಅನುಮೋದನೆ ನೀಡಿದೆ. ಇದರೊಂದಿಗೆ ಕಳೆದ ಕೆಲವು ದಿನಗಳಿಂದ ರಾಜ್ಯ ರಾಜಕಾರಣದಲ್ಲಿ ತೀವ್ರ...

ಮಹಿಳಾ ಕುಸ್ತಿಪಟುಗಳಿಗೆ ಲೈಂಗಿಕ ಕಿರುಕುಳ ಪ್ರಕರಣ : WFI ಮಾಜಿ ಅಧ್ಯಕ್ಷ ಬ್ರಿಜ್ ಭೂಷಣ್‌ ಸಿಂಗ್‌ ಖುಲಾಸೆ

ದೆಹಲಿ ನ್ಯಾಯಾಲಯವು ಸೋಮವಾರ (ಆ.3) ಭಾರತೀಯ ಕುಸ್ತಿ ಫೆಡರೇಶನ್ (WFI) ಮಾಜಿ ಅಧ್ಯಕ್ಷ ಮತ್ತು ಬಿಜೆಪಿ ನಾಯಕ ಬ್ರಿಜ್ ಭೂಷಣ್ ಸಿಂಗ್ ಅವರನ್ನು ಮಹಿಳಾ ಕುಸ್ತಿಪಟುಗಳಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದ ಪ್ರಕರಣದಿಂದ...

ಪ್ರಶ್ನೆ ಪತ್ರಿಕೆ ಸೋರಿಕೆ : ಫಾಸ್ಟ್‌ ಟ್ರ್ಯಾಕ್ ಕೋರ್ಟ್ ನ್ಯಾಯಾಧೀಶೆ ಒಂದೇ ವಾರದಲ್ಲಿ ವರ್ಗಾವಣೆ

ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣಗಳ ವಿಚಾರಣೆಗಾಗಿ ಸ್ಥಾಪಿಸಲಾದ ತ್ವರಿತಗತಿ (ಫಾಸ್ಟ್‌ ಟ್ರ್ಯಾಕ್) ನ್ಯಾಯಾಲಯದ ನೇತೃತ್ವ ವಹಿಸಲು ನೇಮಕಗೊಂಡ ಕೇವಲ ಒಂದು ವಾರದ ನಂತರ, ದೆಹಲಿ ಹೈಕೋರ್ಟ್ ಶನಿವಾರ (ಆಗಸ್ಟ್ 1) ವಿಶೇಷ ನ್ಯಾಯಾಧೀಶರಾದ...

ಶ್ರೀಲಂಕಾ | 2019ರ ಈಸ್ಟರ್ ಬಾಂಬ್ ಸ್ಫೋಟ ಪ್ರಕರಣ: ಇಬ್ಬರು ಮಾಜಿ ಅಧಿಕಾರಿಗಳಿಗೆ ಮರಣದಂಡನೆ ವಿಧಿಸಿದ ಕೋರ್ಟ್

ಬರೋಬ್ಬರಿ 260ಕ್ಕೂ ಹೆಚ್ಚು ಜನರ ಸಾವಿಗೆ ಕಾರಣವಾಗಿದ್ದ 2019ರ ಶ್ರೀಲಂಕಾದ 'ಈಸ್ಟರ್ ಸಂಡೇ' ಬಾಂಬ್ ಸ್ಫೋಟ ಪ್ರಕರಣದಲ್ಲಿ ಕ್ರಿಮಿನಲ್ ನಿರ್ಲಕ್ಷ್ಯ ಆರೋಪ ಸಾಬೀತಾದ ಹಿನ್ನೆಲೆ, ಪೊಲೀಸ್ ಮಾಜಿ ಮುಖ್ಯಸ್ಥ ಮತ್ತು ರಕ್ಷಣಾ ಸಚಿವಾಲಯದ...